Tag: ಹಲ್ಲೆ

  • ಮತ್ತೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ

    ಮತ್ತೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ

    ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.

    ಪಟ್ಟಣದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆ ಮನೆ ಆರೋಗ್ಯ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಇದೇ ಕೆಲಸ ನಿಮಿತ್ತವಾಗಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ ವಾರ್ಡ್ ಗಳಿಗೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ವಾರ್ಡ್ ನಂಬರ್ 3 ಹಾಗೂ 6ರಲ್ಲಿ ಮಾಹಿತಿ ಕಲೆ ಹಾಕಲು ಹೋದಾಗ ಕಿಡಿಗೇಡಿಗಳು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

    ಹಲ್ಲೆ ನಡೆಯುತ್ತಿದ್ದಂತೆ ಆಶಾ ಕಾರ್ಯಕರ್ತೆಯರು ಕುಡಚಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ತಮಗೆ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾರೆ. ಸ್ಥಳಕ್ಕೆ ರಾಯಬಾಗ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸಾಧಿಕ್ ನಗರದಲ್ಲಿ ಮಾಹಿತಿ ಕಲೆಹಾಕಲು ಹೋದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲಾಗಿತ್ತು.

    ಈ ಬಗ್ಗೆ ಚಿಕ್ಕೋಡಿಯಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಆಶಾ ಕಾರ್ಯಕರ್ತೆಯರಿಗೆ ಸಹಕಾರ ಕೊಡುವ ಕೆಲಸ ಪ್ರತಿಯೊಬ್ಬ ನಾಗರಿಕರು ಮಾಡಬೇಕು. ಕುಡಚಿ ಪಟ್ಟಣದಲ್ಲಿ ಮಾಹಿತಿ ಕೇಳಿದ್ದಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಿರುವುದು ಗಮನಕ್ಕೆ ಬಂದಿದೆ. ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸರ್ಕಾರದ ನಿರ್ದೇಶನ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ತೊಂದರೆ ಕೊಟ್ಟರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

  • ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡ ಜಮೀರ್

    ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡ ಜಮೀರ್

    ಬೆಂಗಳೂರು: ಬುಧವಾರ ಬೆಂಗಳೂರಿನ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆಯನ್ನು ಶಾಸಕ ಜಮೀರ್ ಅಹಮದ್ ಅವರು ಸಮರ್ಥಿಸಿಕೊಂಡಿದ್ದಾರೆ.

    ಇಂದು ಸಿಎಂ ಅವರ ಜೊತೆ ಸಭೆಯಲ್ಲಿ ಭಾಗಿಯಾಗಿದ್ದ ಜಮೀರ್ ಅಹಮದ್, ಬಳಿಕ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಯಾರು ಅನುಮತಿ ಕೊಟ್ಟಿರುವುದು. ಸರ್ಕಾರದ ಅನುಮತಿ ಪಡೆದುಕೊಂಡು ಅವರು ಅಲ್ಲಿಗೆ ಹೋಗಿಲ್ಲ. ಅದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗಿ ಬಂದಿದ್ದೇನೆ. ಆಶಾ ಕಾರ್ಯಕರ್ತೆಯರು ಆರೋಗ್ಯ ತಪಾಸಣೆ ಮಾಡಬೇಕು ಎಂದರೆ ಸರ್ಕಾರದ ಅನುಮತಿ ಪಡೆಯಬೇಕು. ಆದರೆ ಅವರು ಅಲ್ಲಿಗೆ ಹೆಲ್ತ್ ಚೆಕಪ್ ಮಾಡಲು ಹೋಗಿರಲಿಲ್ಲ. ಮನೆ ಮನೆಗೆ ಹೋಗಿ ಎಷ್ಟು ಜನ ಇದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಇವರು ಎನ್.ಆರ್.ಸಿ ವಿಚಾರವಾಗಿ ಬಂದಿದ್ದಾರೆ ಎಂದು ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಜಮೀರ್ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನು ಓದಿ: ಬೆಂಗ್ಳೂರಿನಲ್ಲಿ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಗ್ಯಾಂಗ್ ದಾಳಿ

    ಇಂದು ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರು ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡುವಂತೆ ಕೇಳಿ ಸಿಎಂ ಸಭೆ ಕರೆದಿದ್ದರು. ಅದಕ್ಕೆ ನಾವೆಲ್ಲ ಬಂದು ಬೆಂಬಲ ನೀಡಿದ್ದೇವೆ. ಪರೀಕ್ಷೆ ಮಾಡಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅದರಿಂದ ನಮಗೆ ಒಳ್ಳೆಯದು. ನಮ್ಮ ಕ್ಷೇತ್ರದಿಂದಲೂ 11 ಜನ ನಿಜಾಮುದ್ದೀನ್‍ಗೆ ಹೋಗಿ ಬಂದಿದ್ದರು. ಅವರನ್ನು ನಾನೇ ಪರೀಕ್ಷೆ ಮಾಡಿಸಿದ್ದೆ. ಅವರಿಗೆ ನೆಗೆಟಿವ್ ಬಂದಿದೆ. ಹಾಗಾಗಿ ಅಲ್ಲಿಗೇ ಹೋಗಿ ಬಂದವರು ಸ್ವತಃ ತಾವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಇದೇ ವೇಳೆ ಜಮೀರ್ ಮನವಿ ಮಾಡಿದರು.

    ಸಿಎಂ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪನವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಡಿಸಿಎಂ ಅಶ್ವಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ಸಿ.ಎಂ ಇಬ್ರಾಹಿಂ, ಜಮೀರ್ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಹ್ಯಾರಿಸ್ ಮತ್ತು ರಿಜ್ವಾನ್ ಅರ್ಷಾದ್ ಭಾಗಿಯಾಗಿದ್ದರು. ಈ ವೇಳೆ ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಪತ್ತೆ ಕಾರ್ಯಕ್ಕೆ ಸಹಕಾರಿಸುವಂತೆ ಸಿಎಂ ಮುಸ್ಲಿಂ ನಾಯಕರಲ್ಲಿ ಸಿಎಂ ಮನವಿ ಮಾಡಿಕೊಂಡರು.

  • ಕಾಮಣ್ಣ ದಹನದ ವೇಳೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆಯೇ ಹಲ್ಲೆ

    ಕಾಮಣ್ಣ ದಹನದ ವೇಳೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆಯೇ ಹಲ್ಲೆ

    ಗದಗ: ಕಾಮಣ್ಣ ದಹನದ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಗರದ ಟ್ಯಾಗೋರ್ ರಸ್ತೆನಲ್ಲಿ ನಡೆದಿದೆ.

    ರಂಗಪಂಚಮಿ ಅಂಗವಾಗಿ ಬೆಳಗಿನ ಜಾವ ಕಾಮಣ್ಣ ದಹನ ನೋಡಲು ಆಕಾಶ ಹಬೀಬ್ ಎಂಬಾತ ಟ್ಯಾಗೋರ್ ರಸ್ತೆಗೆ ಬಂದಿದ್ದನು. ಆಗ ಕ್ಷುಲ್ಲಕ ಕಾರಣಕ್ಕೆ ಆಕಾಶ್ ಮೇಲೆ ಸ್ಥಳೀಯ ರಾಜೇಶ್ ಕಟ್ಟಿಮನಿ, ರೋಹಿತ್ ಹಾಗೂ ನಿಖಿಲ್ ಕಟ್ಟಿಮನಿ ಒಟ್ಟಾಗಿ ಹಲ್ಲೆ ಮಾಡಲು ಮುಂದಾಗಿದ್ದರು. ಈ ವೇಳೆ ಗಲಾಟೆ ಬಿಡಿಸಲು ಆಕಾಶ್‍ನ ಚಿಕ್ಕಪ್ಪ ಗೋವಿಂದ್ ಹಬೀಬ್ ಮಧ್ಯೆ ಬಂದಿದ್ದರು. ಈ ವೇಳೆ ಜಗಳ ಬಿಡಿಸಲು ಬಂದ ಗೋವಿಂದ್ ಮೇಲೆಯೇ ಮೂವರು ಪುಂಡರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

    ಕಾಮಣ್ಣ ಸುಡುವ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದರಿಂದ ಗೋವಿಂದ್ ಅವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನ ಸಧ್ಯ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ ರಾಜೇಶ್, ರೋಹಿತ್ ಹಾಗೂ ನಿಖಿಲ್ ಪರಾರಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೌಟುಂಬಿಕ ಕಲಹಕ್ಕೆ ಗಂಡನಿಗೆ ನಡುಬೀದಿಯಲ್ಲಿ ಬಾರಿಸಿದ ಪತ್ನಿ

    ಕೌಟುಂಬಿಕ ಕಲಹಕ್ಕೆ ಗಂಡನಿಗೆ ನಡುಬೀದಿಯಲ್ಲಿ ಬಾರಿಸಿದ ಪತ್ನಿ

    ಬೆಂಗಳೂರು: ಕೌಟುಂಬಿಕ ಕಲಹದಿಂದ ಗಂಡನಿಗೆ ಹೆಂಡತಿಯೇ ನಡು ಬೀದಿಯಲ್ಲಿ ಹೊಡೆದ ಘಟನೆ ಬೆಂಗಳೂರಿನ ಬಾಣಸವಾಡಿಯ ಮಾರುತಿ ಸೇವಾ ನಗರದಲ್ಲಿ ನಡೆದಿದೆ. ಮಾರುತಿ ಸೇವಾನಗರದ ವಿನೋದ್ ಮತ್ತು ದಿವ್ಯಾ ಇಬ್ಬರು ನಾಲ್ಕು ವರ್ಷದ ಹಿಂದೆ ಮದುವೆ ಆಗಿದ್ದರು. ಆದರೆ ಗಂಡ ಹೆಂಡತಿಯ ನಡುವೆ ಸಾಮರಸ್ಯ ಇರಲಿಲ್ಲ.

    ನಾಲ್ಕು ವರ್ಷದಿಂದ ಇಬ್ಬರಿಗೂ ಸಾಮರಸ್ಯ ಇಲ್ಲದ ಹಿನ್ನೆಲೆಯಲ್ಲಿ ಪತ್ನಿ ದಿವ್ಯಾ ತನ್ನ ತಾಯಿಯ ಮನೆಗೆ ಬಂದು ಸೇರಿಕೊಂಡಿದ್ದರು. ಹೆಂಡತಿಯ ಕಾಟವೇ ಬೇಡ ಎಂದು ಗಂಡ ಕೂಡ ತಾನಾಯ್ತು ತನ್ನ ಪಾಡಾಯ್ತು ಅಂತ ಸುಮ್ಮನೆ ಇದ್ದ. ಆದರೆ ಹೆಂಡತಿಯ ಮನೆಯವರು ಮಾತ್ರ ಸುಮ್ಮನೇ ಇರಲಿಲ್ಲ. ವಿನೋದ್‍ನ ಅಸಾಹಯಕತೆಯನ್ನು ಲಾಭ ಪಡೆದು ಪದೇ ಪದೇ ಕ್ಯಾತೆ ತೆಗೆದಿದ್ದರು. ಕ್ಯಾತೆಯಿಂದ ದೂರ ಇದ್ರು ಗಂಡನನ್ನು ಮಾತ್ರ ಹೆಂಡತಿ ಬಿಡುತ್ತಿರಲಿಲ್ಲ.

    ಕೊನೆಗೆ ಮೂರು ದಿನಗಳ ಹಿಂದೆ ವಿನೋದ್‍ನ ಹೆಂಡತಿ ದಿವ್ಯಾ ತನ್ನ ಸಂಬಂಧಿಕರೊಂದಿಗೆ ಬಂದು ನಡುರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಿವ್ಯಾ ಸಂಬಂಧಿ ಅಣ್ಣಯ್ಯಪ್ಪ ಹಲಸೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆ ಆಗಿದ್ದರು ಕೂಡ ವಿನೋದ್‍ಗೆ ಹಲ್ಲೆ ಮಾಡಿದ್ದಾನೆ. ಇದರಿಂದ ಬೇಸತ್ತ ವಿನೋದ್ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದು, ಆರೋಪಿಗಳಿಗಾಗಿ ಬಾಣಸವಾಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

  • ದೂರು ಕೊಡಲು ಬಂದು ತಾನೇ ಜೈಲು ಪಾಲಾದ

    ದೂರು ಕೊಡಲು ಬಂದು ತಾನೇ ಜೈಲು ಪಾಲಾದ

    ರಾಮನಗರ: ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ರಾಮನಗರ ತಾಲೂಕಿನ ವಿಭೂತಿಕೆರೆ ನಿವಾಸಿ ರಾಮು (35) ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾದ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು ಬಂದವ ಕುಡಿದ ಅಮಲಿನಲ್ಲಿ ತಾನೇ ಜೈಲು ಸೇರಿರುವುದು ರಾಜ್ಯದಲ್ಲಿ ಮೊದಲ ಪ್ರಕರಣ ಎನ್ನಲಾಗಿದೆ.

    ರಾಮು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಲು ಕಂಠಪೂರ್ತಿ ಮದ್ಯ ಸೇವಿಸಿ ಬಂದಿದ್ದನು. ಈ ವೇಳೆ ಗ್ರಾಮಾಂತರ ಠಾಣೆಯ ಸೆಂಟ್ರಿ ಪ್ರವೀಣ್ ಸ್ವಲ್ಪ ಹೊತ್ತು ಕಾಯಿರಿ ದೂರು ಪಡೆಯುತ್ತೇವೆ ಎಂದಿದ್ದಾರೆ. ತಕ್ಷಣವೇ ಆಕ್ರೋಶಗೊಂಡ ರಾಮು ಕರ್ತವ್ಯನಿರತ ಪೊಲೀಸರಿಗೆ ಕಪಾಳಮೋಕ್ಷ ನಡೆಸಿ ಗಲಾಟೆ ಮಾಡಿದ್ದಾನೆ.

    ಠಾಣೆಯ ಮುಖ್ಯಪೇದೆ ಮುತ್ತುರಾಜು, ಹೊರಗಡೆ ಮಾತನಾಡಿ, ಇದು ಠಾಣೆ, ಇಲ್ಲಿ ನಿಶ್ಯಬ್ದ ಕಾಪಾಡಬೇಕು ಎಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಆರೋಪಿ ರಾಮು ಪೇದೆಯ ಮುಖಕ್ಕೆ ಹೊಡೆದಿದ್ದಾನೆ. ಪೇದೆಯ ತುಟಿ ಸೇರಿದಂತೆ ಕೆನ್ನೆ ಕೂಡ ಗಾಯಗೊಂಡಿವೆ.

    ಈ ಘಟನೆ ಸಂಬಂಧ ನಗರ ಠಾಣೆಯಲ್ಲಿ ಮುಖ್ಯಪೇದೆ ಮುತ್ತುರಾಜು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

  • ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ

    ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ

    ಚಿಕ್ಕಬಳ್ಳಾಪುರ: ತಮಿಳುನಾಡಿನ ಮೇಲ್ ಮರವತ್ತೂರಿನಲ್ಲಿ ಕನ್ನಡಿಗರ ಮೇಲೆ ತಮಿಳಿಗರು ಮನಸ್ಸೋ ಇಚ್ಛೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

    ಚಿಕ್ಕಬಳ್ಳಾಪುರ ನಗರ ಹಾಗೂ ಯಲಹಂಕ ಬಳಿಯ ಸಿಂಗನಾಯಕನಹಳ್ಳಿಯಿಂದ ಖಾಸಗಿ ಬಸ್ ಮೂಲಕ 53 ಮಂದಿ ಭಕ್ತರು ಮೇಲ್ ಮರವತ್ತೂರಿನ ಆದಿ ಪರಾಶಕ್ತಿ ಶ್ರೀ ಓಂ ಶಕ್ತಿ ದೇವಸ್ಥಾನಕ್ಕೆ ಗುರುವಾರ ತೆರಳಿದ್ದರು. ಶುಕ್ರವಾರ ಬೆಳಗ್ಗೆ ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಪಾರ್ಕಿಂಗ್ ಜಾಗದ ಬಳಿ ತಮಿಳಿಗರು ಕಿರಿಕ್ ಮಾಡಿ, ಕನ್ನಡಿಗರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿದ್ದಾರೆ.

    ಪಾರ್ಕಿಂಗ್ ಜಾಗದಲ್ಲಿ ಬಸ್ ಹಾಕಿಲ್ಲ ಎಂದು ಕಿರಿಕ್ ತೆಗೆದ ತಮಿಳಿಗರು, ಮೊದಲು ಚಾಲಕನ ಜೊತೆ ಕಿರಿಕ್ ಮಾಡಿದ್ದಾರೆ. ನಂತರ ಅಲ್ಲಿಂದ ಬಸ್ ತೆಗೆಯಲು ಹೋದಾಗ ಟ್ರಾಫಿಕ್ ಜಾಮ್ ಉಂಟಾಗಿ ಸಮಸ್ಯೆ ಆಗಿದೆ. ಈ ವೇಳೆ ‘ಏನು ಮದ್ಯಪಾನ ಮಾಡಿ ಗಾಡಿ ಒಡಿಸ್ತೀದಿಯಾ’ ಎಂದು ಗಲಾಟೆ ಶುರು ಮಾಡಿದ್ದಾರೆ. ಈ ವಿಚಾರಕ್ಕೆ ಚಾಲಕ ಹಾಗೂ ತಮಿಳಿಗರ ನಡುವೆ ದೊಡ್ಡ ವಾಗ್ವಾದ ನಡೆದಿದೆ ಎನ್ನಲಾಗಿದೆ.

    ಚಾಲಕನ ಪರ ಹೋದ ಕನ್ನಡಿಗ ಭಕ್ತರ ಮೇಲೂ 10-15 ಮಂದಿಯ ಗುಂಪು ದೌರ್ಜನ್ಯ ಮಾಡಿ ಬಸ್ ಹತ್ತಿಸಿರೋ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಚಾಲಕ ಹಾಗೂ ಕ್ಲೀನರ್ ಗೆ ಮನಸ್ಸೋ ಇಚ್ಛೆ ಕೋಲಿನಿಂದ ಥಳಿಸಿದ್ದಾರೆ. ಅಲ್ಲದೇ ಅವರಿಗೆ ಎದುರು ಮಾತನಾಡಿದ ಭಕ್ತರ ಮೇಲೆಯೂ ಹಲ್ಲೆ ಮಾಡಲಾಗಿದೆ. ಹಲ್ಲೆಯ ದೃಶ್ಯ ಸೆರೆ ಹಿಡಿದವರ ಮೊಬೈಲ್‍ಗಳನ್ನು ಸಹ ಕಸಿದುಕೊಳ್ಳಲಾಗಿದೆ. ಕೊನೆಗೆ ಕನ್ನಡಿಗರು ಸುಮ್ಮನಾಗಿ ವಾಪಸ್ ಬಂದಿದ್ದಾರೆ.

    ಸದ್ಯಕ್ಕೆ ಹಲ್ಲೆ ವಿಚಾರ ಕಸ್ತೂರಿ ಕನ್ನಡಪರ ಸಂಘಟನೆ ಪದಾಧಿಕಾರಿಗಳ ಗಮನಕ್ಕೆ ಬಂದಿದ್ದು, ಇಂದು ದೂರು ಕೊಡಲು ಮುಂದಾಗಿದ್ದಾರೆ. ಇದೆಲ್ಲಾ ಬಸ್‍ನ ಹಿಂಭಾಗ ಕನ್ನಡದ ಧ್ವಜ ಕಟ್ಟಿಕೊಂಡು ಹೋಗಿದ್ದಕ್ಕೆ ಕಿರಿಕ್ ಮಾಡಿ ತಮಿಳಿಗರು ಈ ರೀತಿ ಹಲ್ಲೆ ನಡೆಸಿದ್ದಾರೆ ಎಂಬುದು ಕನ್ನಡಪರ ಸಂಘಟನೆಯ ಆರೋಪವಾಗಿದೆ.

  • ಕಪ್ಪು ವಸ್ತ್ರಧರಿಸಿ ಜೆಎನ್‍ಯುಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ

    ಕಪ್ಪು ವಸ್ತ್ರಧರಿಸಿ ಜೆಎನ್‍ಯುಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ

    ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಶಿಕ್ಷಕರ ಮೇಲೆ ದಾಳಿಯಾದ ನಂತರ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್‍ಯುಗೆ ಭೇಟಿ ನೀಡಿದ್ದಾರೆ.

    ಬಿಡುಗಡೆಗೆ ಸಿದ್ಧವಾಗಿರುವ ತಮ್ಮ ಛಪಾಕ್ ಸಿನಿಮಾದ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ್ದ ದೀಪಿಕಾ ಪಡುಕೋಣೆಯವರು, ಇಂದು ಸಂಜೆ ಸುಮಾರು 7.45 ಕ್ಕೆ ಜೆಎನ್‍ಯು ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದರು. 10 ನಿಮಿಷಗಳ ಕಾಲ ಯೂನಿವರ್ಸಿಟಿಯಲ್ಲಿ ಇದ್ದ ದೀಪಿಕಾ, ಬಳಿಕ ಏನೂ ಪ್ರತಿಕ್ರಿಯೇ ನೀಡದೆ ವಾಪಸ್ ಆಗಿದ್ದಾರೆ.

    https://twitter.com/filmesthete/status/1214556983786786817

    ಕಳೆದ ಬಾನುವಾರ ಜೆಎನ್‍ಯು ವಿಶ್ವವಿದ್ಯಾಲಯದ ಕ್ಯಾಂಪಸ್‍ಗೆ ನುಗಿದ್ದ ಮುಸುಕು ದಾರಿಗಳು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶಿ ಘೋಷ್, ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಸೇರಿದಂತೆ ಹಲವು ವಿದ್ಯಾರ್ಥಿಗಳು ಗಾಯಾಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

    ಈ ಘಟನೆಯಾದ ಬಳಿಕ ಬಹಳಷ್ಟು ಮಂದಿ ಬಾಲಿವುಡ್ ನಟ ನಟಿಯರು ಸಾಮಾಜಿಕ ಜಾಲತಾಣದ ಮೂಲಕ ಹಲ್ಲೆಯನ್ನು ಖಂಡಿಸಿ, ವಿದ್ಯಾರ್ಥಿಗಳ ಪರ ನಿಂತಿದ್ದರು. ಈಗ ಛಪಾಕ್ ಸಿನಿಮಾದ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ್ದ ದೀಪಿಕಾ, ವಿದ್ಯಾರ್ಥಿಗಳ ಒಗ್ಗಟ್ಟಿನ ಸಂಕೇತವಾದ ಕಪ್ಪು ಬಣ್ಣದ ಬಟ್ಟೆತೊಟ್ಟು ಯುನಿವರ್ಸಿಟಿಗೆ ಭೇಟಿ ನೀಡಿದ್ದಾರೆ. ತಮ್ಮ ಬೆಂಬಲಿಕ್ಕೆ ಬಂದ ಪದ್ಮಾವತಿಯನ್ನು ವಿದ್ಯಾರ್ಥಿಗಳು ಅಜಾದಿ ಎಂಬ ಘೋಷಣೆ ಕೂಗುವ ಮೂಲಕ ಬರಮಾಡಿಕೊಂಡಿದ್ದಾರೆ. ಜೆಎನ್‍ಯು ಗೆ ದೀಪಿಕಾ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

    ಜೆಎನ್‍ಯುನಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ಖಂಡಿಸಿ ಸೋಮವಾರ ಮುಂಬೈನ ಗೇಟ್ ವೇ ಆಫ್ ಇಂಡಿಯಾದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಾಲಿವುಡ್ ತಾರೆಗಳಾದ ತಾಪ್ಸಿ ಪನ್ನು, ಅನುರಾಗ್ ಕಶ್ಯಪ್, ಜೋಯಾ ಅಖ್ತರ್, ವಿಶಾಲ್ ಭರದ್ವಾಜ್, ಅನುಭವ್ ಸಿನ್ಹಾ, ರಿಚಾ ಚಾಧಾ ಮತ್ತು ಅಲಿ ಫಜಲ್ ಸೇರಿದಂತೆ ಬಾಲಿವುಡ್ ಗಣ್ಯರು ಭಾಗವಹಿಸಿದ್ದರು.

    ಹಲ್ಲೆಗೊಳಗಾದ ಐಶಿ ಘೋಷ್ ಅವರು ಘಟನೆಯ ಬಗ್ಗೆ ಮಾತನಾಡಿ, ಮಾಸ್ಕ್ ಧರಿಸಿಕೊಂಡ ಬಂದಿದ್ದ ಗುಂಪು ನಮ್ಮ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದರು. ಫೀ ಹೆಚ್ಚಳ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಾದಿ ತಪ್ಪಿಸಲು ವಿಶ್ವವಿದ್ಯಾಲಯ ಆಡಳಿತ ಮಂಡಳಿ ಪ್ರಯತ್ನಿಸುತ್ತಿದ್ದು, ಘಟನೆ ಹಿಂದೆ ಎಬಿವಿಪಿ ಕೈವಾಡವಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಇದಕ್ಕೆ ಪ್ರತ್ಯಾರೋಪ ಮಾಡಿದ್ದ ಎಬಿವಿಪಿ, ಘಟನೆಯಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ದಾಳಿ ಆಗಿದ್ದು, 25 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. 11 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಘಟನೆ ಹಿಂದೆ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಕೈವಾಡ ಇದೆ ಎಂದು ಟ್ವೀಟ್ ಮಾಡಿತ್ತು.

    ಆದರೆ ಇಂದು ಬೆಳಗ್ಗೆ ಜೆಎನ್‍ಯು ಕ್ಯಾಂಪಸ್ ನಲ್ಲಿ ನಡೆದ ಹಿಂಸಾಚಾರದ ಜವಾಬ್ದಾರಿಯನ್ನು `ಹಿಂದೂ ರಕ್ಷಾ ದಳ’ ಸಂಘಟನೆ ಹೊತ್ತುಕೊಂಡಿದೆ. ಸಂಘಟನೆಯ ಅಧ್ಯಕ್ಷ ಪಿಂಕಿ ಚೌಧರಿ ಸ್ವತಃ ಘಟನೆಯು ಜವಾಬ್ದಾರಿ ಹೊತ್ತುಕೊಂಡಿದ್ದು ಕ್ಯಾಂಪಸ್ ನಲ್ಲಿ ರಾಷ್ಟ್ರ ವಿರೋಧಿ ಚಟುವಟಿಗಳು ನಡೆಯುತ್ತಿದ್ದು ಅದನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ.

    ಸೋಮವಾರ ರಾತ್ರಿ ಘಟನೆಯ ಸಂಬಂಧ ಸೋಷಿಯಲ್ ಮಿಡಿಯಾಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಮಾತನಾಡಿರುವ ಪಿಂಕಿ ಚೌಧರಿ ಕ್ಯಾಂಪಸ್‍ನಲ್ಲಿ ನಡೆದ ಹಿಂಸಾಚಾರದ ಹಿಂದೆ ನಮ್ಮ ಸಂಘಟನೆಯ ಪಾತ್ರವಿದೆ. ನಮ್ಮ ಸಂಘಟನೆಯ ಸದಸ್ಯರು ಈ ಘಟನೆಯಲ್ಲಿ ಭಾಗಿಯಾಗಿದ್ದು ನಾವು ಈ ದಾಳಿಯನ್ನು ಒಪ್ಪಿಕೊಳುತ್ತೇವೆ ಎಂದು ಹೇಳಿದ್ದಾರೆ.

  • ಹವಾ ತೋರಿಸಲು ಹೋಗಿ ಆಸ್ಪತ್ರೆ ಪಾಲಾದ ರೌಡಿಶೀಟರ್

    ಹವಾ ತೋರಿಸಲು ಹೋಗಿ ಆಸ್ಪತ್ರೆ ಪಾಲಾದ ರೌಡಿಶೀಟರ್

    ಚಿಕ್ಕಬಳ್ಳಾಪುರ: ತನ್ನ ಹೆಂಡತಿ ಜೊತೆ ಅಸಭ್ಯವಾಗಿ ಮಾತನಾಡಿದ ಅಂತ ಕುಡಗೋಲಿನಿಂದ ಕೊಚ್ಚಿ ರೌಡಿಶೀಟರ್ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

    ಉಪ್ಪಾರಹಳ್ಳಿ ಗ್ರಾಮದ ರೌಡಿಶೀಟರ್ ರಮೇಶ್ ಹಲ್ಲೆಗೊಳಗಾದ ವ್ಯಕ್ತಿ. ಮುದುಗೆರೆ ಗ್ರಾಮದ ವಿಶ್ವ ರಮೇಶ್ ಮೇಲೆ ಹಲ್ಲೆ ಮಾಡಿದ್ದಾನೆ. ತಡರಾತ್ರಿ ಕೋಟಾಲದಿನ್ನೆ ಬಾರ್ ಬಳಿ ಗುಂಪುಕಟ್ಟಿಕೊಂಡು ಮದ್ಯಪಾನ ಮಾಡುತ್ತಿದ್ದ ರೌಡಿಶೀಟರ್ ರಮೇಶ್ ಹಾಗೂ ಆತನ ತಂಡ ಚಿಕನ್ ಖರೀದಿಗೆ ಅಂತ ಬಂದಿದ್ದ ವಿಶ್ವನನ್ನ ಕರೆದಿದ್ದಾರೆ. ಈ ವೇಳೆ ಅವರ ಬಳಿಗೆ ಬರಲು ವಿಶ್ವ ನಿರಾಕರಿಸಿದಾಗ ರಮೇಶ್ ಆತನ ಬಳಿ ಬಂದು ಮೊಬೈಲ್ ಕಸಿದುಕೊಂಡು ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ಇಲ್ಲ ಮೊಬೈಲ್ ಹೋದರೆ ಹೋಗಲಿ ಜಗಳ ಯಾಕೆ ಅಂತ ವಿಶ್ವ ಸುಮ್ಮನೆ ಮನೆಗೆ ಹೋಗಿದ್ದಾನೆ.

    ರಾತ್ರಿಯಾದರೂ ವಿಶ್ವ ಮನೆಗೆ ಬಾರದೇ ಇರುವುದನ್ನು ನೋಡಿ ಆತನ ಪತ್ನಿ ಪತಿ ಮೊಬೈಲ್‍ಗೆ ಕಾಲ್ ಮಾಡಿದ್ದಾಳೆ. ಆದರೆ ಮೊಬೈಲ್ ರಮೇಶ್‍ನ ಬಳಿ ಇದ್ದ ಕಾರಣ ಆತನೇ ಕಾಲ್ ರಿಸೀವ್ ಮಾಡಿದ್ದು, ವಿಶ್ವನ ಪತ್ನಿ ಜೊತೆ ಅಸಭ್ಯವಾಗಿ ಮಾತನಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಮನೆಗೆ ಹೋದ ವಿಶ್ವನ ಬಳಿ ರಮೇಶ್ ಮಾತನಾಡಿದ್ದನ್ನು ಪತ್ನಿ ಹೇಳಿದ್ದಾಳೆ. ಇದರಿಂದ ರೊಚ್ಚಿಗೆದ್ದ ವಿಶ್ವ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ರಮೇಶ್‍ನ ಬಳಿ ಹೋಗುತ್ತಿದ್ದ. ಮಾರ್ಗ ಮಧ್ಯದಲ್ಲಿ ರಮೇಶ್ ಅಡ್ಡಬಂದ ಪರಿಣಾಮ ಆತನ ತಲೆಗೆ ಕುಡುಗೋಲಿನಿಂದ ಹೊಡೆದಿದ್ದಾನೆ. ಪರಿಣಾಮ ರೌಡಿಶೀಟರ್ ರಮೇಶ್ ತಲೆಯ ಕೆಳಭಾಗ ಹಾಗೂ ಕತ್ತಿಗೆ ಗಂಭೀರವಾದ ಗಾಯವಾಗಿದೆ.

    ಸದ್ಯ ಗಾಯಾಳು ರಮೇಶ್ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ. ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದಾರೆ. ಇತ್ತ ಘಟನೆ ನಂತರ ಪರಾರಿಯಾಗಿದ್ದ ವಿಶ್ವನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದು, ವಿಶ್ವನಿಗೆ ಸಾಥ್ ನೀಡಿ ಬೈಕ್ ಚಲಾಯಿಸಿದ ಆನಂದ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ರೌಡಿಶೀಟರ್ ರಮೇಶ್ ಕಳೆದ ವಿಧಾನಸಭಾ ಚುನಾವಣೆ ವೇಳೆ ಕೋಟಾಲದಿನ್ನೆ ಬಾರ್ ಬಳಿ ನಡೆದಿದ್ದ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ ಕೊಲೆ ಪ್ರಕರಣದ ಎ1 ಆರೋಪಿಯಾಗಿದ್ದಾನೆ. ಪ್ರಕರಣದಲ್ಲಿ ಒಂದು ವರ್ಷ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಬಂದಿದ್ದನು. ಹೊರ ಬಂದ ಮೇಲೆ ಹಲವರ ಬಳಿ ಇದೇ ರೀತಿ ದುಡ್ಡಿಗಾಗಿ ಪಿಡಿಸಿಕೊಂಡು, ಕಿರಿಕ್ ಮಾಡಿಕೊಂಡು ಜಗಳ ಮಾಡಿಕೊಂಡು ಓಡಾಡುತ್ತಿದ್ದನು ಎಂದು ಗ್ರಾಮಸ್ಥರು ತಿಳಿಸಿದರು.

  • ಮೈದುನನ ಜೊತೆ ಅತ್ತಿಗೆ ಸೆಕ್ಸ್- ನಿಲ್ಲಿಸಿದ್ದಕ್ಕೆ ಚಾಕುವಿನಿಂದ ಹಲ್ಲೆ

    ಮೈದುನನ ಜೊತೆ ಅತ್ತಿಗೆ ಸೆಕ್ಸ್- ನಿಲ್ಲಿಸಿದ್ದಕ್ಕೆ ಚಾಕುವಿನಿಂದ ಹಲ್ಲೆ

    – ಪತಿ ಮಲಗಿದ ನಂತ್ರ ಪತ್ನಿಯ ನೀಚ ಕೃತ್ಯ

    ಲಕ್ನೋ: ಮಹಿಳೆಯೊಬ್ಬಳು ಪತಿಯ ಸಹೋದರ ಸೆಕ್ಸ್ ಮಾಡುವುದನ್ನು ನಿಲ್ಲಿಸಿದ್ದಕ್ಕೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಯ್‍ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯೊಬ್ಬಳು ತನ್ನ ಪತಿ ಮತ್ತು ಮೈದುನ ಜೊತೆ ವಾಸಿಸುತ್ತಿದ್ದಳು. ಆದರೆ ಪತಿ ಕೆಲಸಕ್ಕೆ ಮನೆಯಿಂದ ಹೊರಗೆ ಹೋದಾಗ ಪತ್ನಿ ಮನೆಯಲ್ಲಿದ್ದ ಮೈದುನನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇವರಿಬ್ಬರ ಸಂಬಂಧ ಪತಿಗೆ ಗೊತ್ತಿರಲಿಲ್ಲ. ಹೀಗಾಗಿ ಪತಿ ಮಲಗಿ ನಿದ್ದೆ ಮಾಡಿದ ನಂತರ ಪ್ರತಿ ರಾತ್ರಿಯೂ ಮಹಿಳೆ ತನ್ನ ಮೈದುನ ಜೊತೆ ಸೆಕ್ಸ್ ಮಾಡುತ್ತಿದ್ದಳು.

    ಇತ್ತೀಚೆಗೆ ಒಂದು ರಾತ್ರಿ ಮಹಿಳೆ ತನ್ನ ಮೈದುನನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಳು. ಆದರೆ ಮೈದುನ ಸೆಕ್ಸ್ ಮಾಡುವುದನ್ನು ನಿಲ್ಲಿಸಿದ್ದಾನೆ. ಆಗ ಮಹಿಳೆ, ಮೈದುನನ ಬಳಿ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾಳೆ. ಇದಕ್ಕೆ ಮೈದುನ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಅಡುಗೆ ಮನೆಯಲ್ಲಿದ್ದ ಚಾಕುವನ್ನು ತಂದು ಮೈದುನ ಮೇಲೆ ಹಲ್ಲೆ ಮಾಡಿದ್ದಾಳೆ.

    ತಕ್ಷಣ ಸಹೋದರರನ್ನು ಮಹಿಳೆಯ ಪತಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ ಮೈದುನನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

  • ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಬೆಂಗಳೂರು: ಹಾಡಹಗಲೇ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿ ಆಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಕಳೆದ ಡಿಸೆಂಬರ್ 9 ರಂದು ಉಪಚುನಾವಣೆ ಫಲಿತಾಂಶ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಕೈ ಮುಖಂಡ ಸಯ್ಯದ್ ರಿಯಾಜ್ ಮೇಲೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಸಯ್ಯದ್ ರಿಯಾಜ್ ಹಾಲಿ ಶಿವಾಜಿ ನಗರ ಕ್ಷೇತ್ರದ ಶಾಸಕರಾಗಿರುವ ರಿಜ್ವಾನ್ ಆರ್ಷದ್ ಉಪಚುನಾಣೆಯಲ್ಲಿ ಜಯಗಳಿಸಿದ್ದರಿಂದ ಸಿದ್ದಾಪುರದಲ್ಲಿ ಬೆಂಬಲಿಗರಿಗೆ ಪಾರ್ಟಿ ಆರೆಂಜ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.

    ಅಷ್ಟರಲ್ಲಿ ದುಷ್ಕರ್ಮಿಗಳು ಬೈಕಿನಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದರು. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಕಾರ್ಯಕ್ಕಾಗಿ ಸಿದ್ದಾಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡ ರಚನೆ ಮಾಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.