Tag: ಹಲ್ಲೆ

  • ಏರಿಯಾ ಆಂಟಿಗಳಿಗೆ ಮೆಸೇಜ್‌ ಮಾಡ್ತೀಯಾ ಎಂದು ಬೆಂಗಳೂರಲ್ಲಿ ವ್ಯಕ್ತಿ ಮೇಲೆ ಹಲ್ಲೆ

    ಏರಿಯಾ ಆಂಟಿಗಳಿಗೆ ಮೆಸೇಜ್‌ ಮಾಡ್ತೀಯಾ ಎಂದು ಬೆಂಗಳೂರಲ್ಲಿ ವ್ಯಕ್ತಿ ಮೇಲೆ ಹಲ್ಲೆ

    ಬೆಂಗಳೂರು: ಆಂಟಿಗಳಿಗೆ ಮೆಸೇಜ್ ಮಾಡ್ತೀಯಾ ಎಂದು ವ್ಯಕ್ತಿಯೊಬ್ಬನನನ್ನು ಇಬ್ಬರು ಅಪರಿಚಿತರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

    ನಾಗಮೋಹನ್‌ ಎಂಬ ವ್ಯಕ್ತಿಯ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಯಲಹಂಕ ನ್ಯೂಟೌನ್ ಬಳಿ ಇರುವ ಆಂಜನೇಯ ದೇವಸ್ಥಾನದ ಮುಂದೆ ಘಟನೆ ನಡೆದಿದೆ. ದೇವಸ್ಥಾನದಿಂದ ಹೊರ ಬರುತ್ತಿದ್ದಂತೆ ಮುಖಾಮೂತಿ ನೋಡದೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ರೇಡ್

    ನಾಗಮೋಹನ್‌ ಅವರು ತನ್ನ ಪುತ್ರನೊಂದಿಗೆ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಇಬ್ಬರು ಅಪರಿಚಿತರು, ಆಂಟಿಗಳಿಗೆ ಮೆಸೇಜ್‌ ಮಾಡ್ತೀಯಾ ಎಂದು ನಾಗಮೋಹನ್‌ ಅವರನ್ನು ಪ್ರಶ್ನಿಸಿದ್ದಾರೆ. ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ. ದೃಶ್ಯವನ್ನು ಕಂಡು ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಇಬ್ಬರೂ ಎಸ್ಕೇಪ್‌ ಆಗಿದ್ದಾರೆ.

    ಹಲ್ಲೆಗೊಳಗಾದ ನಾಗಮೋಹನ್‌ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ 341, 504,323,324 ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕ ಚುನಾವಣೆ – ಏ.26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

  • ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಆರೋಪ

    ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಆರೋಪ

    ಬೀದರ್: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರಚಾರ ಮಾಡುತ್ತಿದ್ದ ವೇಳೆ ಕಾಂಗ್ರೆಸ್ (Congress) ಪಕ್ಷದ ಕಾರ್ಯಕರ್ತನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

    ಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮೇಲೆ ಬಿಜೆಪಿ ಕಾರ್ಯಕರ್ತರು (BJP Workers) ಚಾಕುವಿನಿಂದ ಹಲ್ಲೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ (Eshwara Khandre) ಆರೋಪ ಮಾಡಿದ್ದಾರೆ. ಆದರೆ ಪ್ರಾಥಮಿಕ ಹಂತವಾಗಿ ಮೂರು ಜನ ಸ್ನೇಹಿತರು ವೈಯಕ್ತಿಕ ದ್ವೇಷದಿಂದ ಹಲ್ಲೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಭಾಲ್ಕಿ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ನಿಂದ ಈಶ್ವರ್ ಖಂಡ್ರೆ ಸ್ಪರ್ಧೆ ಮಾಡಿದರೆ ಬಿಜೆಪಿಯಿಂದ ಪ್ರಕಾಶ್ ಖಂಡ್ರೆ ಕಣಕ್ಕೆ ಇಳಿದಿದ್ದಾರೆ. ಇದು ಖಂಡ್ರೆ ವರ್ಸಸ್ ಖಂಡ್ರೆ ಬಿಗ್ ಪೈಟ್‌ಗೆ ಭಾಲ್ಕಿ ಕ್ಷೇತ್ರ ಸಾಕ್ಷಿಯಾಗಿದೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

    ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಖಂಡ್ರೆ ಬಿಜೆಪಿಯವರು ಸೋಲಿನ ಭಯದಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಭಾಲ್ಕಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಇದನ್ನೂ ಓದಿ: ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

  • ಖ್ಯಾತ ಗಾಯಕ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಕೇಸ್ ದಾಖಲು

    ಖ್ಯಾತ ಗಾಯಕ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಕೇಸ್ ದಾಖಲು

    ಬಾಲಿವುಡ್ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಯೋ ಯೋ ಹನಿ ಸಿಂಗ್ (Yo Yo Honey Singh) ವಿರುದ್ಧ ಪ್ರತಿಷ್ಠಿತ ಇವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಯ ಮಾಲೀಕರು ಹಲ್ಲೆ (Assault) ಹಾಗೂ ಅಪಹರಣ (Kidnapping) ಪ್ರಕರಣಗಳನ್ನು (Case) ದಾಖಲಿಸಿದ್ದಾರೆ. ತಮ್ಮನ್ನು ಹನಿ ಸಿಂಗ್ ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಹನಿ ಸಿಂಗ್ ಇದೇ ತಿಂಗಳು ಒಂದನೇ ತಾರೀಖಿನಂದು ಹೊಸ ಆಲ್ಬಂನ ಸಿಂಗಲ್ ಹಾಡೊಂದು ರಿಲೀಸ್ ಮಾಡಿದ್ದರು. ಎರಡನೇ ಹಾಡು ಏಪ್ರಿಲ್ 15ರಂದು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದಕ್ಕಾಗಿ ಪ್ರಚಾರ ಕೂಡ ಮಾಡಿದ್ದರು. ಹಣಕಾಸು ವ್ಯವಹಾರದಲ್ಲಿ ಗೊಂದಲವಾದ ಕಾರಣದಿಂದಾಗಿ ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿ ಮಾಲೀಕ ವಿವೇಕ್ ರಾಮನ್ (Vivek Raman) ಮತ್ತು ಹನಿಸಿಂಗ್ ನಡುವೆ ಗಲಾಟೆ ಆಗಿತ್ತು. ಇದೇ ವಿಚಾರವಾಗಿ ವಿವೇಕ್ ಅವರನ್ನು ಅಪಹರಣ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ವಿವೇಕ್ ರಾಮನ್ ಕೊಟ್ಟಿರುವ ದೂರಿನ ಅನ್ವಯ ಮುಂಬೈನ ಬಿಕೆಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಹನಿ ಸಿಂಗ್ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ದೂರು ದಾಖಲಾದ ಬೆನ್ನಲ್ಲೇ ಹನಿ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ವಿವೇಕ್ ರಾಮನ್ ಬಗ್ಗೆ ಸಲ್ಲದ ಆರೋಪಗಳನ್ನು ಮಾಡಿದ್ದಾರಂತೆ. ಅದೆಲ್ಲವೂ ಸುಳ್ಳು ಎಂದಿದ್ದಾರೆ ವಿವೇಕ್. ಇದನ್ನೂ ಓದಿ:ಐಟಂ ಸಾಂಗ್‌ಗೆ ಸೊಂಟ ಬಳುಕಿಸಲು ದುಬಾರಿ ಸಂಭಾವನೆ ಬೇಡಿಕೆಯಿಟ್ಟ ‘ಕಬ್ಜ’ ಸುಂದರಿ

    ತಮ್ಮ ಮೇಲೆ ಆರೋಪ ಮಾಡಿರುವ ಹನಿ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ವಿವೇಕ್ ತಯಾರಿ ನಡೆಸುತ್ತಿದ್ದಾರೆ. ಅದಕ್ಕಾಗಿ ಅವರು ಕಾನೂನು ಸಲಹೆಯನ್ನೂ ಪಡೆಯುತ್ತಿದ್ದಾರಂತೆ. ಬಾಲಿವುಡ್ ನಲ್ಲಿ ವಿಶೇಷ ಗಾಯಕ ಎಂದೇ ಪ್ರಸಿದ್ಧಿಯಾಗಿರುವ ಯೋ ಯೋ ಹನಿ ಸಿಂಗ್, ಸಲ್ಲದ ಕಾರಣಕ್ಕಾಗಿ ಸುದ್ದಿಯಾಗಿದ್ದಾರೆ.

  • ಜೈ ಶ್ರೀರಾಮ್ ಎನ್ನದ್ದಕ್ಕೆ ಥಳಿಸಿ, ಗಡ್ಡ ಕತ್ತರಿಸಿದ್ರು

    ಜೈ ಶ್ರೀರಾಮ್ ಎನ್ನದ್ದಕ್ಕೆ ಥಳಿಸಿ, ಗಡ್ಡ ಕತ್ತರಿಸಿದ್ರು

    ಮುಂಬೈ: ಜೈ ಶ್ರೀರಾಮ್ (Jai Shri Ram) ಎಂದು ಕೂಗಲು ನಿರಾಕರಿಸಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಮಸೀದಿಯೊಂದರ (Mosque) ಇಮಾಮ್‌ನನ್ನು (Imam) ಥಳಿಸಿ, ಅವರ ಗಡ್ಡ ಕತ್ತರಿಸಿರುವ ಅಮಾನುಷ ಕೃತ್ಯ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

    ಮಹಾರಾಷ್ಟ್ರದ ಅನ್ವಾ ಗ್ರಾಮದ ಮಸೀದಿಯಲ್ಲಿ ಇಮಾಮ್ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ಭಾನುವಾರ ಸಂಜೆ 7:30ರ ವೇಳೆಗೆ ಮಸೀದಿಯೊಳಗೆ ಕುರಾನ್ ಓದುತ್ತಿದ್ದ ವೇಳೆ ಬಂದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಇಮಾಮ್ ಜಾಕಿರ್ ಸೈಯದ್ ಖಾಜಾ ತಿಳಿಸಿದ್ದಾರೆ.

    CRIME

    ಅಪರಿಚಿತ ವ್ಯಕ್ತಿಗಳು ಮುಖಕ್ಕೆ ಬಟ್ಟೆ ಸುತ್ತಿಕೊಂಡು, ಮಸೀದಿಯನ್ನು ಪ್ರವೇಶಿಸಿದ್ದಾರೆ. ಇಮಾಮ್ ಕುರಾನ್ ಓದುತ್ತಿದ್ದ ವೇಳೆ ಅಪರಿಚಿತರು ಜೈ ಶ್ರೀರಾಮ್ ಎನ್ನಲು ಒತ್ತಾಯಿಸಿದ್ದಾರೆ. ಇಮಾಮ್ ಜೈ ಶ್ರೀರಾಮ್ ಎನ್ನಲು ನಿರಾಕರಿಸಿದಾಗ ಮೂವರು ವ್ಯಕ್ತಿಗಳು ಅವರನ್ನು ಮಸೀದಿಯ ಹೊರಗೆ ಎಳೆದುಕೊಂಡು ಹೋಗಿ, ಥಳಿಸಿದ್ದಾರೆ. ರಾಸಾಯನಿಕ ಲೇಪಿತ ಬಟ್ಟೆಯನ್ನು ಬಳಸಿ ಅವರನ್ನು ಪ್ರಜ್ಞಾಹೀನರನ್ನಾಗಿ ಮಾಡಿದ್ದಾರೆ. ತಮಗೆ ಪ್ರಜ್ಞೆ ಬಂದಾಗ ಕಿಡಿಗೇಡಿಗಳು ಗಡ್ಡ ಕತ್ತರಿಸಿರುವುದು ತಿಳಿದುಬಂದಿರುವುದಾಗಿ ಅವರು ಹೇಳಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ: ರಾಗಾಗೆ ಸಾವರ್ಕರ್ ಮೊಮ್ಮಗ ಸವಾಲು

    ರಾತ್ರಿ 8 ಗಂಟೆ ವೇಳೆಗೆ ಜನರು ಪ್ರಾರ್ಥನೆಗೆ ಮಸೀದಿಗೆ ಬಂದಾಗ ಇಮಾಮ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ನೋಡಿದ್ದಾರೆ. ಬಳಿಕ ಅವರನ್ನು ಸಿಲ್ಲೋಡ್‌ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಅವರನ್ನು ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರು ಈಗ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನೆ ಬಳಕಿಗೆ ಬಂದ ಬಳಿಕ ಪೊಲೀಸರು ಮಸೀದಿ ಇರುವ ಅನ್ವರ್ ಗ್ರಾಮಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಭೋಕರ್ದನ್ ಪರಧ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 452 (ಯೋಜಿತ ಹಲ್ಲೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ), ಮತ್ತು 34 (ಸಾಮಾನ್ಯ ಉದ್ದೇಶಕ್ಕೆ ಹಲವು ವ್ಯಕ್ತಿಗಳಿಂದ ಅಪರಾಧ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಘಟನೆ ಹಿನ್ನೆಲೆ ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಸ್ಥಳದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಯುಟ್ಯೂಬ್ ಇಲ್ಲ, ಯೋಗ ಶಿಕ್ಷಕರಿಲ್ಲ, ಆದ್ರೂ ಸೂರ್ಯ ನಮಸ್ಕಾರ ಮಾಡಿದ ಚಿರತೆ

  • ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

    ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

    ಕೋಲಾರ: ಯುವತಿಗೆ ಬಣ್ಣ ಹಚ್ಚಿದ ಹಿನ್ನೆಲೆ, ಕಾನೂನು ವಿದ್ಯಾರ್ಥಿಯನ್ನು ಕಿಡ್ನಾಪ್ (Kidnap) ಮಾಡಿ ಹಲ್ಲೆ (Attack) ಮಾಡಿರುವ ಘಟನೆ ಕೋಲಾರದ (Kolar) ಬೆಳಮಾರನಹಳ್ಳಿಯಲ್ಲಿ ನಡೆದಿದೆ.

    ಅಂತಿಮ ಕಾನೂನು (Law) ವಿದ್ಯಾರ್ಥಿ ಬಿ.ಸಿ.ಮಧು ಹಲ್ಲೆಗೊಳಗಾದ ಯುವಕ. ಹೋಳಿ ಹಬ್ಬದ ದಿನದಂದು ತನ್ನದೇ ಗ್ರಾಮದ ಎಂಜಿನಿಯರ್ (Engineer) ವಿದ್ಯಾರ್ಥಿನಿ ಅನುಪ್ರಿಯಾಗೆ ಮಧು ಬಣ್ಣ ಹಚ್ಚಿದ್ದ. ಇದರಿಂದ ಕೋಪಗೊಂಡ ಅನುಪ್ರಿಯಾ ಆತನ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಇದನ್ನೂ ಓದಿ: 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

    ಅನುಪ್ರಿಯಾ ಅದೇ ಗ್ರಾಮದವಳಾಗಿದ್ದು ಮಧುವಿನ ಪಕ್ಕದ ಮನೆಯಲ್ಲಿ ವಾಸವಿದ್ದಳು. ಈ ಸಲುಗೆಯಿಂದ ಮಧು ಹೋಳಿ ಹಬ್ಬದ ದಿನದಂದು ಕಾಲೇಜಿಗೆ ಬಸ್‌ನಲ್ಲಿ ಹೋಗುವ ಸಂದರ್ಭ ಆಕೆಗೆ ಬಣ್ಣ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅನುಪ್ರಿಯಾ ಪಕ್ಕದ ದಾನಹಳ್ಳಿ ಗ್ರಾಮದ ಡಿಎನ್‌ಡಿ ಮಧು ಮತ್ತು ಆತನ ಸಹಚರರಿಗೆ ಸುಪಾರಿ ಕೊಟ್ಟು ಮಧುವಿಗೆ ಹೊಡೆಯುವಂತೆ ತಿಳಿಸಿದ್ದಾಳೆ. ಸುಪಾರಿ ಪಡೆದ ಡಿಎನ್‌ಡಿ ಮಧು ಅದೇ ಗ್ರಾಮದ ಪ್ರಮೋದ್, ಶಿವರಾಜ್, ಸುದರ್ಶನ್ ಅವರ ಸಹಾಯದಿಂದ ಮಧುಗೆ ದೂರವಾಣಿ ಮುಖಾಂತರ ಕರೆ ಮಾಡಿದ್ದಾರೆ.

    ಮಾ.17 ರಂದು ಮನೆಯಲ್ಲಿದ್ದ ಬಿ.ಸಿ.ಮಧು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಳಿಕ ಬೇಕರಿ ಬಳಿ ಕರೆಸಿಕೊಂಡ ಡಿಎನ್‌ಡಿ ಮಧು, ತನ್ನ ಸಹಚರರೊಂದಿಗೆ ಮಧುವನ್ನು ಕಾರಿನಲ್ಲಿ ಕೂರಿಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿದ್ದಾರೆ. ನಂತರ ದಾನಹಳ್ಳಿ ಮತ್ತು ವಿಶ್ವನಾಥಪುರ ಗ್ರಾಮದ ಮಧ್ಯೆ ಇರುವ ನೀಲಗಿರಿ ತೋಪಿನಲ್ಲಿ ಇಳಿಸಿ ಅಲ್ಲಿಯೇ ಇದ್ದ ನೀಲಗಿರಿ ರೆಂಬೆಗಳಿಂದ ಚೆನ್ನಾಗಿ ಥಳಿಸಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಹಾಕಿಕೊಂಡು ಬಂದಿದ್ದಾರೆ. ಬಳಿಕ ಶೆಡ್‌ವೊಂದರಲ್ಲಿ ಮಧುವನ್ನು ಕೂಡಿ ಹಾಕಿ ಅರೆಬೆತ್ತಲೆಗೊಳಿಸಿ ಮರದ ತುಂಡುಗಳಿಂದ ಮತ್ತು ಟ್ಯೂಬ್‌ಗಳಿಂದ ಹೊಡೆದು ಅಮಾನವೀಯ ಕೃತ್ಯವೆಸಗಿದ್ದಾರೆ. ಸುಮಾರು ಎರಡು ದಿನಗಳವರೆಗೆ ಮಧು ಅವರನ್ನು ಚೆನ್ನಾಗಿ ಥಳಿಸಿದ್ದಾರೆ. ಅಲ್ಲದೇ ಮಧು ಕೈಯಾರೆ ಅವರ ಮನೆಗೆ ಪೋನ್ ಮಾಡಿಸಿ ನಾನು ಧರ್ಮಸ್ಥಳ (Dharmasthala) ಹೋಗುತ್ತಿದ್ದು, ಎರಡು ದಿನಗಳ ಕಾಲ ಮನೆಗೆ ಬರುವುದಿಲ್ಲವೆಂದು ಹೇಳಿಸಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ! 

    ಹಲ್ಲೆಯಿಂದಾಗಿ ಮಾರಣಾಂತಿಕವಾಗಿ ಗಾಯಗೊಂಡ ಮಧುವನ್ನು ಇದೇ ಕಿರಾತಕರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದು ಪೊಲೀಸ್ ಕೇಸ್ ಮಾಡಬೇಕು ಎಂದು ವೈದ್ಯರು ಹೇಳಿದಾಗ ಆತನಿಗೆ ಚಿಕಿತ್ಸೆ ಕೊಡಿಸಿ ಮಾ.19 ರಂದು ಗ್ರಾಮದ ಹೊರವಲಯದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ಕುಟುಂಬದವರನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ತೀವ್ರ ಗಾಯಗೊಂಡ ಮಧು ಮನೆಗೆ ಬಂದಾಗ ಅವರ ಪೋಷಕರು ಕೂಡಲೇ ಆತನನು ಆಸ್ಪತ್ರೆಗೆ ದಾಖಲಿಸಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮಧು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

    ವೇಮಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಸಿದ್ದಾರೆ. ಈ ಕೃತ್ಯಕ್ಕೆ ಕಾರಣರಾದ ಅನುಪ್ರಿಯಾ ಮತ್ತು ಮತ್ತಿಬ್ಬರನ್ನು ಪೊಲೀಸರು ಬಂದಿಸಿದ್ದು, ಪ್ರಮುಖ ಆರೋಪಿ ಡಿಎನ್‌ಡಿ ಮಧು ಪರಾರಿಯಾಗಿದ್ದಾನೆ. ಒಟ್ಟು 15ಕ್ಕೂ ಹೆಚ್ಚು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ: ಆ ಕಳ್ಳಿ ಕೋಟಿ ರೂಪಾಯಿ ಮನೆಯ ಒಡತಿ

  • ಅಪ್ರಾಪ್ತ ಸ್ನೇಹಿತರ ನಡುವೆ ಜಗಳ- ದವಡೆಗೆ ಚಾಕು ಹಾಕಿ ಹಲ್ಲೆ

    ಅಪ್ರಾಪ್ತ ಸ್ನೇಹಿತರ ನಡುವೆ ಜಗಳ- ದವಡೆಗೆ ಚಾಕು ಹಾಕಿ ಹಲ್ಲೆ

    ರಾಯಚೂರು: ನಗರದ ಜಹಿರಾಬಾದ್‍ನಲ್ಲಿ ಇಬ್ಬರು ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಚಾಕು ಹಾಕುವ ಹಂತಕ್ಕೆ ತಿರುಗಿದ ಘಟನೆ ನಡೆದಿದೆ.

    ಮಾತಿಗೆ ಮಾತು ಬೆಳೆದು ಸ್ನೇಹಿತ ಎನ್ನುವುದನ್ನೇ ಮರೆತು ದವಡೆಗೆ ಚಾಕು ಹಾಕಿದ್ದಾನೆ. ರಾತ್ರಿ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಚಾಕು ಹಾಕುವ ಹಂತಕ್ಕೆ ತಿರುಗಿದೆ. ಹಲ್ಲೆಗೊಳಗಾದ 17 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆ (RIIMS Hospital) ಗೆ ದಾಖಲಾಗಿದ್ದಾನೆ.

    ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಚಾಕು ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ. ಘಟನೆ ಹಿನ್ನೆಲೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

     

  • ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ – ಬೆಚ್ಚಿಬಿದ್ದ ಸವಾರರು

    ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ – ಬೆಚ್ಚಿಬಿದ್ದ ಸವಾರರು

    ಕೊಪ್ಪಳ: ಇಸ್ಪೀಟ್ (Playing Cards) ಆಟ ಆಡಿಸುವ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳ (Koppala) ಜಿಲ್ಲೆಯ ಗಂಗಾವತಿ (Gangavathi) ನಗರದ ಸಿಂಧನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಕೊಲೆ ಯತ್ನಕ್ಕೆ ಒಳಗಾದ ಯುವಕ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿಯ (Hubballi) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

    crime

    ಭಾನುವಾರ ಸಂಜೆ ಐದು ಗಂಟೆಗೆ ಸುಮಾರು 10ಕ್ಕೂ ಹೆಚ್ಚು ಯುವಕರ ಗುಂಪೊಂದು ಸ್ಕೂಟಿ ಮೇಲೆ ಹೊರಟಿದ್ದ ಯುವಕನನ್ನು ತಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆ ನಂತರ ಯುವಕ ರಸ್ತೆ ಮೇಲೆ ಬಿದ್ದಿದ್ದ. ಆದರೂ ಬಿಡದ ಆರೋಪಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಬಸ್, ಕಾರು ಮತ್ತು ಬೈಕ್ ಮೇಲಿದ್ದ ಜನ ಘಟನೆಯನ್ನು ಮೂಕ ಪ್ರೇಕ್ಷಕರಂತೆ ನೋಡಿಕೊಂಡು ನಿಂತಿದ್ದರು. ಈ ಭಯಾನಕ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ತಲೆ ಮೇಲೆ ಕಲ್ಲು ಎತ್ತಿ ಹಾಕುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

    ಇಂತಹ ಪ್ರಕರಣಗಳು ಗಂಗಾವತಿಯಲ್ಲಿ ಸರ್ವೇ ಸಾಮಾನ್ಯವಾಗಿದೆ. ಕಳೆದ ತಿಂಗಳು ಹೋಳಿ ಹುಣ್ಣಿಮೆ ದಿನದಂದು ಎಪಿಎಂಸಿ ಗಂಜದಲ್ಲಿ ಇದೇ ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ರೀತಿಯಾದ ಘಟನೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗಲಾಟೆ ನಡೆದು ಸಾಕಷ್ಟು ಬಾರಿ ಯುವಕರು ಗಂಭೀರ ಗಾಯಗೊಂಡಿದ್ದರೂ ಪ್ರಕರಣ ಮಾತ್ರ ದಾಖಲಾಗಿರಲಿಲ್ಲ. ಸದ್ಯ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಮೋದಿಯ ಅತಿದೊಡ್ಡ TRP: ಮಮತಾ ಬ್ಯಾನರ್ಜಿ

  • ಮಾಜಿ ಪ್ರಿಯಕರನಿಂದ ನಟಿ ಮೇಲೆ ಮಾರಣಾಂತಿಕ ಹಲ್ಲೆ: ಫೋಟೋ ಶೇರ್ ಮಾಡಿದ ಅನಿಕಾ

    ಮಾಜಿ ಪ್ರಿಯಕರನಿಂದ ನಟಿ ಮೇಲೆ ಮಾರಣಾಂತಿಕ ಹಲ್ಲೆ: ಫೋಟೋ ಶೇರ್ ಮಾಡಿದ ಅನಿಕಾ

    ಟಿ ಅನಿಕಾ ವಿಜಯ್ ವಿಕ್ರಮನ್ (Anika Vijay Vikraman) ಮೇಲೆ ಮಾಜಿ ಪ್ರಿಯಕರ ಅನೂಪ್ ಪಿಳ್ಳೈ (Anoop Pillai) ಮಾರಣಾಂತಿಕ ಹಲ್ಲೆ (Assault) ಮಾಡಿದ್ದಾರೆ. ಮುಖ, ಕಣ್ಣುಗಳಿಗೆ ಗುದ್ದಿ ಗಾಯಗೊಳಿಸಿದ್ದಾನೆ. ರಕ್ತಸಿಕ್ತ ಮುಖದ ಫೋಟೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕ್ರೂರ ಪ್ರಿಯಕರನ ಬಗ್ಗೆ ಬರೆದುಕೊಂಡಿದ್ದಾರೆ. ಅನುಭವಿಸಿದ ಯಾತನೆಯನ್ನು ಇಂಚಿಂಚಾಗಿ ಹೇಳಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಕ್ರೂರವಾಗಿ ಥಳಿಸಿರುವ ಮಾಜಿ ಪ್ರಿಯಕರನ ಬಗ್ಗೆ ಬರೆದುಕೊಂಡಿದ್ದು, ‘ನಾನು ಅವನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಅವನು ಹಲವು ತಿಂಗಳಿಂದ ದೈಹಿಕ ಮತ್ತು ಮಾನಸಿಕವಾಗಿ ಸಾಕಷ್ಟು ತೊಂದರೆ ಕೊಡುತ್ತಲೇ ಬಂದ. ಈಗಾಗಲೇ ಎರಡು ಬಾರಿ ಥಳಿಸಿದ್ದಾನೆ. ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಜೀವನದಲ್ಲಿ ಇಂಥದ್ದೊಂದು ಘಟನೆ ನಡೆಯುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪೊಲೀಸರು ಕೂಡ ಅವನಿಗೆ ಸಹಕರಿಸುತ್ತಿದ್ದಾರೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಸಿಹಿಸುದ್ದಿ ಹಂಚಿಕೊಂಡ ಜಾನ್ವಿ ಕಪೂರ್

    ಈ ಕುರಿತು ಬೆಂಗಳೂರು (Bangalore) ಪೊಲೀಸರಿಗೆ ದೂರು (Complaint)  ನೀಡಿರುವ ಅವರು, ‘ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ, ಅವನಿಂದ ದೂರ ಇರು ಎಂದು ನನಗೆ ಸಲಹೆ ನೀಡಿದರು. ಅವನು ಪೊಲೀಸರಿಗೂ ಹಣ ಕೊಟ್ಟಿದ್ದಾನೆ. ಹಾಗಾಗಿ ಮತ್ತೆ ಮತ್ತೆ ಅವನು ನನ್ನ ಮೇಲೆ ಹಲ್ಲೆ ಮಾಡುತ್ತಿದ್ದಾನೆ’ ಎಂದು ಬೆಂಗಳೂರು ಪೊಲೀಸರ ಮೇಲೂ ಅನಿಕಾ ದೂರಿದ್ದಾರೆ. ಈ ಅನಿಕಾ ಒಂದಷ್ಟು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಪ್ರಿಯಕರನ ವಿರುದ್ಧದ ಕ್ರಮಕ್ಕೆ ಅನೇಕರು ಆಗ್ರಹಿಸಿದ್ದಾರೆ.

    ಅವನಿಂದ ಮೋಸವಾಗುತ್ತಿದೆ ಎಂದು ಗೊತ್ತಾದಾಗ ಪ್ರಿಯಕರನಿಂದ ದೂರವಾದರಂತೆ ಅನಿಕಾ. ಆದರೂ, ಅವನು ಮಾತ್ರ ದೂರವಾಗಲಿಲ್ಲವಂತೆ. ಅನುಮಾನ ಪಡುವುದು, ವಾಟ್ಸಪ್ ಪರಿಶೀಲಿಸುವುದು, ಅನುಮಾನ ಪಡುವ ರೀತಿಯಲ್ಲಿ ಪ್ರಶ್ನೆ ಮಾಡುವುದು ಹೀಗೆ ನಿರಂತರವಾಗಿ ಕಿರುಕುಳ ಕೊಡುತ್ತಾ ಬಂದಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ.

  • ಪೂಜೆ ವಿಷಯಕ್ಕೆ ಗಲಾಟೆ – ದೇವಾಲಯದಲ್ಲೇ ಗ್ರಾಮಸ್ಥರಿಂದ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

    ಪೂಜೆ ವಿಷಯಕ್ಕೆ ಗಲಾಟೆ – ದೇವಾಲಯದಲ್ಲೇ ಗ್ರಾಮಸ್ಥರಿಂದ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

    ಹುಬ್ಬಳ್ಳಿ: ಪೂಜೆ ವಿಷಯಕ್ಕೆ ಗಲಾಟೆ ನಡೆದು ದೇವಸ್ಥಾನದಲ್ಲಿಯೇ (Temple) ಗ್ರಾಮಸ್ಥರು (Villagers) ಅರ್ಚಕನನ್ನು (Priest) ಥಳಿಸಿದ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

    ಹುಬ್ಬಳ್ಳಿ (Hubballi) ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಮತ್ತು ಗ್ರಾಮಸ್ಥರ ನಡುವೆ ಪೂಜೆಯ ವಿಚಾರವಾಗಿ ಗಲಾಟೆ ನಡೆದಿದೆ. ಗ್ರಾಮದ ಪ್ರಕಾಶ್ ಕುಂದಗೋಳಮಠ ಬಸವಣ್ಣ ದೇವಸ್ಥಾನದ ಅರ್ಚಕರಾಗಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಅರ್ಚಕನ ನಡವಳಿಕೆಯಲ್ಲಿ ಬದಲಾವಣೆಯಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟು ಹೊಸ ಅರ್ಚಕರ ನೇಮಕಕ್ಕೆ ಚಿಂತನೆ ನಡೆಸಿದ್ದರು.

    ಗ್ರಾಮಸ್ಥರ ಈ ನಿರ್ಧಾರಕ್ಕೆ ಪ್ರಕಾಶ್ ಒಪ್ಪಿಗೆ ನೀಡಿರಲಿಲ್ಲ. ಈ ವಿಚಾರಕ್ಕೆ ದೇವಸ್ಥಾನ ಆವರಣದಲ್ಲಿ ಗಲಾಟೆ ಆರಂಭವಾಗಿ, ಜಗಳ ತಾರಕಕ್ಕೇರಿ ಅರ್ಚಕ ಪ್ರಕಾಶ್‌ಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತಮ್ಮ ತಂದೆಯನ್ನು ಬಿಡಿಸಲು ಮುಂದಾದ ಅರ್ಚಕನ ಮಗನಿಗೂ ಗ್ರಾಮಸ್ಥರು ಥಳಿಸಿದ್ದಾರೆ. ಇದನ್ನೂ ಓದಿ: 10 ವರ್ಷದ ಫೀಸ್ ಕಟ್ಟೋಕೆ ಶಾಲೆಗಳಿಂದ ಆಫರ್ – ನಯಾ ಪ್ಲ್ಯಾನ್‍ಗೆ ಪೋಷಕರು ಕಂಗಾಲು

    ಗ್ರಾಮಸ್ಥರು ಅರ್ಚಕನ ಮೇಲೆ ನಡೆಸಿರುವ ಹಲ್ಲೆಯನ್ನು ನೆರೆದಿದ್ದವರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಆಸ್ತಿ ವಿಷಯಕ್ಕೆ ರೈತನ ಮೇಲೆ ಮಾರಣಾಂತಿಕ ಹಲ್ಲೆ – ಸ್ವಾಮೀಜಿ, ಬೆಂಬಲಿಗರ ಮೇಲೆ ಎಫ್‌ಐಆರ್

    ಬೀದರ್: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ರೈತನ (Farmer) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬಸವತೀರ್ಥ ಮಠದ ಸ್ವಾಮೀಜಿ ಹಾಗೂ ಬೆಂಬಲಿಗರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

    ಜಮೀನು ಆಸ್ತಿ ವಿಷಯಕ್ಕೆ ಬಸವತೀರ್ಥ ಮಠದ ಸ್ವಾಮೀಜಿ ಬೆಂಬಲಿಗರು ಹಾಗೂ ತಾಂಡ ಜನರ ನಡುವೆ ಗಲಾಟೆಯಾಗಿತ್ತು. ಸ್ವಾಮೀಜಿ ಬೆಂಬಲಿಗರು ತಾಂಡ ಜನರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದೀಗ ಸಿದ್ದಲಿಂಗ ಸ್ವಾಮೀಜಿ (Siddalinga Swamiji) ಹಾಗೂ ಇಬ್ಬರು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಬಸ್ ನಿಲ್ದಾಣ ಜಾಗದ ವಿಚಾರಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ – ಚಾಕು ಇರಿತದಿಂದ ಯುವಕ ಗಂಭೀರ

    ಬೀದರ್ (Bidar) ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಕಲ್ಲೂರು ತಾಂಡದ ಸೋಮಲು ಎಂಬ ರೈತನ 4 ಎಕರೆ ಜಮೀನು ಮಠಕ್ಕೆ ಸೇರಬೇಕು ಎಂದು ಸ್ವಾಮೀಜಿ ಬೆಂಬಲಿಗರು ರೈತ ಸೋಮಲು, ಪತ್ನಿ ಹಾಗೂ ತಾಂಡದ ಜನರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಬಳಿಕ ರೈತ ಸೋಮಲು ಚಿಟಗುಪ್ಪಾ ಠಾಣೆಗೆ ದೂರು ನೀಡಿದ್ದು, ಈ ಹಿನ್ನೆಲೆ ಸ್ವಾಮೀಜಿ ಬೆಂಬಲಿಗರ ವಿರುದ್ಧ ಮಾರಣಾಂತಿಕ ಹಲ್ಲೆ ಹಾಗೂ ಜೀವ ಬೆದರಿಕೆ ಕೇಸ್ ದಾಖಲಾಗಿದೆ.

    ಬಸವತೀರ್ಥ ಮಠದ ಜಾತ್ರಾಮಹೋತ್ಸವಕ್ಕೆ ಚಾಲನೆ ನೀಡುವ ವೇಳೆ ಬಸವತೀರ್ಥ ಮಠದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು ಗಾಳಿಯಲ್ಲಿ ಗುಂಡು ಕೂಡಾ ಹಾರಿಸಿದ್ದಾರೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಿದ್ದಲಿಂಗ ಸ್ವಾಮೀಜಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಭಿನ್ನಮತ ಸ್ಫೋಟ – ಬಿಜೆಪಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಗುಡ್‌ಬೈ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k