Tag: ಹಳೆ ವಿದ್ಯಾರ್ಥಿಗಳು

  • ಹಳೆಯ ವಿದ್ಯಾರ್ಥಿಗಳಿಂದ ಸದ್ದಿಲ್ಲದೇ ನಡೆಯುತ್ತಿದೆ ಸರ್ಕಾರಿ ಶಾಲೆಗೆ ಬಣ್ಣ, ಶೌಚಾಲಯ ನಿರ್ಮಾಣ ಕೆಲಸ

    ಹಳೆಯ ವಿದ್ಯಾರ್ಥಿಗಳಿಂದ ಸದ್ದಿಲ್ಲದೇ ನಡೆಯುತ್ತಿದೆ ಸರ್ಕಾರಿ ಶಾಲೆಗೆ ಬಣ್ಣ, ಶೌಚಾಲಯ ನಿರ್ಮಾಣ ಕೆಲಸ

    ಬಾಗಲಕೋಟೆ: ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ತಾನು ಕಲಿತ ಶಾಲೆ, ಹಾಗೂ ಬಾಲ್ಯದ ದಿನಗಳನ್ನು ಮರೆಯಲು ಸಾಧ್ಯವೇ ಇಲ್ಲ. ಅದೇ ರೀತಿ ಅವರೆಲ್ಲ ದೊಡ್ಡವರಾಗಿ ಒಂದು ಕೆಲಸಕ್ಕೆ ಹತ್ತಿದಾಗ, ತಾವು ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಬೇಕು, ಅದು ಮುಂದಿನ ನಮ್ಮ ವಿದ್ಯಾರ್ಥಿ ಪೀಳಿಗೆಗೆ ಸಹಕಾರಿ ಆಗಬೇಕು ಎಂಬ ಹಂಬಲ ಇರುತ್ತದೆ.

    ಅದೇ ರೀತಿ ಬಾಗಲಕೋಟೆ (Bagalkot) ಜಿಲ್ಲೆಯ ಇಳಕಲ್ ನಗರದ ಒಂದಿಷ್ಟು ಹಳೆಯ ವಿದ್ಯಾರ್ಥಿಗಳು (Alumni) ತಾವು ಕಲಿತ ಪ್ರೌಢಶಾಲೆಗೆ ಎನಾದರೂ ಕೊಡುಗೆ ನಿಡಬೇಕೆಂಬ ಹಂಬಲದಿಂದ, ತಾವು ಕಲಿತ ಶಾಲೆಗೆ ಒಂದು ವಿಭಿನ್ನ ಕೊಡುಗೆ ನೀಡುತ್ತಿದ್ದಾರೆ.

    ಇಳಕಲ್ ನಗರದ ಸರ್ಕಾರಿ ಕಿರಿಯ ಪದವಿ ಪೂರ್ವ ಕಾಲೇಜು (Government Junior PU College) ಆವರಣದಲ್ಲಿರುವ ಸರ್ಕಾರಿ ಪ್ರೌಢಶಾಲೆಯ, 2007-2008ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಳಗದವರು ಸದ್ದಿಲ್ಲದೇ ತಾವು ಕಲಿತ ಶಾಲೆಗೆ ಸುಣ್ಣ ಬಣ್ಣ ಹಚ್ಚುವ ಮೂಲಕ ಶಾಲೆಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವ ಹೊಣೆಹೊತ್ತಿದ್ದಾರೆ.

    ಗೆಳೆಯರೆಲ್ಲ ಸೇರಿ ತಮ್ಮ ಕೈಲಾದಷ್ಟು ದುಡ್ಡು ಹಾಕಿ, ತಾವೇ ತಮ್ಮ ಸ್ವಂತ ಖರ್ಚಿನಲ್ಲಿ ಶಾಲೆಗೆ ಬಣ್ಣ ಬಳಿಯುವ ಕಾರ್ಯ ಮಾಡುತ್ತಿದ್ದಾರೆ. ಅಲ್ಲದೇ ಹಳೆಯದಾದ ಶಾಲೆಯ ಬೋರ್ಡ್‌ಗೆ ಹೊಸ ರೂಪ ಕೊಟ್ಟಿದ್ದಾರೆ. ಇನ್ನು ಮಕ್ಕಳಿಗೆ ಮೂಲ ಭೂತವಾಗಿರಬೇಕಾದ ಶೌಚಾಲಯವನ್ನು ಸುಸಜ್ಜಿತವಾಗಿ ರಿಪೇರಿ ಮಾಡಿಸುತ್ತಿದ್ದಾರೆ.

    ಇನ್ನು ಶಾಲಾ ಆವರಣದ ಕ್ಲೀನಿಂಗ್, ಪ್ರಾರ್ಥನೆ ಹಾಗೂ ಕಾರ್ಯಕ್ರಮ ಮಾಡಲು ಬೇಕಾದ ಪ್ರಾರ್ಥನಾ ಕಟ್ಟೆ (ಪ್ರೇಯರ್ ಸ್ಟೇಜ್) ಮರು ನಿರ್ಮಾಣ ಮಾಡಿಕೊಡಲು, ಪ್ರಾರ್ಥನಾ ಕಟ್ಟೆಗೆ ಕಲ್ಲು, ಸಿಮೆಂಟ್ ಹಾಕುವ ಮೂಲಕ ಪ್ರಾರ್ಥನಾ ಕಟ್ಟೆಯನ್ನು ರೆಡಿ ಮಾಡಿಸಿ ಕೊಡುವ ವಿಶಿಷ್ಟ ಕಾರ್ಯಕ್ಕೆ ಕೈ ಹಾಕಿದ್ದಾರೆ. ಹಳೆಯ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಸದ್ಯ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಟೊಮೆಟೋ ಬಳಿಕ ಬಾಳೆಹಣ್ಣಿಗೆ ಬಂಗಾರದ ಬೆಲೆ- 1 ಕೆಜಿ ಏಲಕ್ಕಿ ಬಾಳೆ 80 ರೂ.ಗೆ ಮಾರಾಟ

    ಈ ಸರ್ಕಾರಿ ಪ್ರೌಢಶಾಲೆಯ ಬಗ್ಗೆ ಹೇಳುವುದಾದರೇ, ಇದು 1936ರಲ್ಲಿ ಒಂದು ಸಣ್ಣ ಕೋಣೆಯಲ್ಲಿ ಆರಂಭವಾಗಿತ್ತು. ನಂತರ 1948ರಲ್ಲಿ ಮುಂಬೈ ಸರ್ಕಾರದಲ್ಲಿ ಗೃಹ ಮಂತ್ರಿಗಳಾಗಿದ್ದ ಮುರಾರ್ಜಿ ದೇಸಾಯಿ ಅವರು ಈ ಶಾಲೆಗೆ ಅಡಿಗಲ್ಲು ಹಾಕಿದರು. ಅವಸಾನದ ಹಂತ ತಲುಪುತ್ತಿರುವ ಈ ಶತಮಾನದಂಚಿನಲ್ಲಿರುವ ಶಾಲೆಯನ್ನು ನೋಡಿದ ಹಳೆಯ ವಿದ್ಯಾರ್ಥಿಗಳು, ತಮ್ಮ ಸ್ವಂತ ಖರ್ಚಿನಲ್ಲಿ ಶಾಲೆಯ ಅಂದ ಚೆಂದ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಹಳೆಯ ವಿದ್ಯಾರ್ಥಿಗಳ ಈ ಸಮಾಜಿಕ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ- ಮೃತಪಟ್ಟವರ ಆಸೆ ಈಡೇರಿಸೋ ವಿಶಿಷ್ಠ ಆಚರಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಳೆ ವಿದ್ಯಾರ್ಥಿಗಳಿಂದ 1 ಸಾವಿರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

    ಹಳೆ ವಿದ್ಯಾರ್ಥಿಗಳಿಂದ 1 ಸಾವಿರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

    – ವಿದ್ಯಾರ್ಥಿಗಳ ಕಾರ್ಯಕ್ಕೆ ಗ್ರಾಮಸ್ಥರಿಂದ ಶ್ಲಾಘನೆ

    ನೆಲಮಂಗಲ: ಮಹಾಮಾರಿ ಕೊರೊನಾ ರೋಗದ ಹಿನ್ನೆಲೆ, ಹಲವೆಡೆ ಹಲವಾರು ರೀತಿ ಸಂಘ ಸಂಸ್ಥೆಗಳು ನೆರವನ್ನು ನೀಡುತ್ತಿದೆ. ಇದೇ ಹಾದಿಯಲ್ಲಿ ಗ್ರಾಮದ ಶಾಲೆಯ ಹಳೆ ವಿದ್ಯಾರ್ಥಿಗಳು ಆಹಾರ ಕಿಟ್ ವಿತರಣೆ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ವಿಶೇಷ ಪ್ರಯತ್ನ ಮಾಡಿ ಯಶಸ್ವಿಯಾಗಿ ಒಂದು ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

    ಹಳೆ ವಿದ್ಯಾರ್ಥಿಗಳ ಜೊತೆ ಕೈಜೋಡಿಸಿದ ಎಸ್.ಎಮ್ ಟ್ರೇಡರ್ಸ್ ಹಾಗೂ ಕುಮುದ್ವತಿ ವಿಷನ್ ಪ್ರೈ.ಲಿ ಸಹಕಾರ ಹೆಚ್ಚಿನದಾಗಿ ನೀಡಿದೆ. ಸಕ್ಕರೆ, ಸಾಂಬರ್ ಪದಾರ್ಥ, ದಿನಬಳಕೆ ವಸ್ತುಗಳ ವಿತರಣೆ ಮಾಡಿದ್ದು, ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ, ಭಟ್ಟರಹಳ್ಳಿ, ವನ್ನಸಂದ್ರ, ಗಾಂಧಿ ಗ್ರಾಮ, ದೊಡ್ಡಕರೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ವಿತರಣೆ ಮಾಡಿದ ಹಳೆ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಈ ವೇಳೆ ಮಾತನಾಡಿದ ಹಳೆಯ ವಿಧ್ಯಾರ್ಥಿ ಮುನಿರಾಜು, ನಾವು ನಮ್ಮ ಗ್ರಾಮ ನಮ್ಮ ಜನರ ಕ್ಷೇಮ ಎಂಬ ನಿಟ್ಟಿನಲ್ಲಿ ಪ್ರತಿ ಮನೆ ಮನೆ ಬಾಗಿಲಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಹಾಗೂ ಹಳ್ಳಿಯ ಜನರಲ್ಲಿ ಅರಿವು ಮೂಡಿಸುವ ಹೊಸ ಪ್ರಯತ್ನ ಯಶಸ್ವಿಯಾಗಿದೆ. ಜೀವನದಲ್ಲಿ ಮನುಷ್ಯ-ಮನುಷ್ಯನ ಸ್ನೇಹ ಮುಖ್ಯವಾದ ಜೀವನ ಅವಶ್ಯಕತೆ ಎಂದು ಈ ಕಾರ್ಯಕ್ಕೆ ನಮ್ಮ ತಂಡ ಸಿದ್ಧವಾಗಿದೆ ಎಂದರು. ಈ ವೇಳೆ ಚಿಕ್ಕಹನುಮೇಗೌಡ, ಹನುಮಂತರಾಜು, ಮಹೇಶ್, ಹನುಮಯ್ಯ, ನಾಗರಾಜು, ರುದ್ರೇಶ್, ಮತ್ತಿತರ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.

  • ವಿದ್ಯೆ ಕಲಿಸಿದ ಗುರುವಿಗೆ ಕಾರ್ ಗಿಫ್ಟ್ ನೀಡಿದ ಹಳೆ ವಿದ್ಯಾರ್ಥಿಗಳು

    ವಿದ್ಯೆ ಕಲಿಸಿದ ಗುರುವಿಗೆ ಕಾರ್ ಗಿಫ್ಟ್ ನೀಡಿದ ಹಳೆ ವಿದ್ಯಾರ್ಥಿಗಳು

    ಮಂಗಳೂರು: ಶಾಲೆಯ ಹಳೆ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಗಳಿಗೆ ಕಾರ್ ಗಿಫ್ಟ್ ನೀಡುವ ಮೂಲಕ ಗುರುಗಳೂ ಶಿಷ್ಯರನ್ನು ಮರೆಯಲಾಗದಂತೆ ಮಾಡಿದ್ದಾರೆ.

    ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರಿನ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಗಳನ್ನು ಮರೆಯದೆ ಕಾರ್ ಗಿಫ್ಟ್ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ತಮಗೆ ಅಕ್ಷರಾಭ್ಯಾಸ ನೀಡಿದ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಬಿ.ಕೆ.ಫಕ್ರುದ್ದೀನ್ ಅವರು ನಿವೃತ್ತಗೊಂಡ ಸಂದರ್ಭದಲ್ಲಿ ಕಾರನ್ನು ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರಿಗೆ ನಿವೃತ್ತಿಯಾಗುತ್ತಿದೆ ಎಂದು ತಿಳಿದ ಹಳೆ ವಿದ್ಯಾರ್ಥಿಗಳು ಏನಾದರೂ ವಿಭಿನ್ನ ಉಡುಗೊರೆ ಕೊಡಬೇಕೆಂದು ನಿರ್ಧರಿಸಿದರು. ಅದರಂತೆ ನಿವೃತ್ತ ಶಿಕ್ಷಕರಿಗೆ ಶಾಲಾ ಮಂಡಳಿ, ಹಳೆ ವಿದ್ಯಾರ್ಥಿಗಳು, ಊರ ನಾಗರಿಕರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದರು.

    ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಫಕ್ರುದ್ದೀನ್ ಅವರಿಗೆ ಹಳೆ ವಿದ್ಯಾರ್ಥಿಗಳು ಸೇರಿ ಖರೀದಿಸಿದ ಹೊಸ ಆಲ್ಟೋ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಸನ್ಮಾನ ಹಾಗೂ ಕಾರನ್ನು ಉಡುಗೊರೆಯಾಗಿ ಸ್ವೀಕರಿಸಿದ ಫಕ್ರುದ್ದೀನ್ ಅವರು ಮಾತನಾಡಿ, ಹಳೆ ವಿದ್ಯಾರ್ಥಿಗಳು ಇನ್ನೂ ನನ್ನನ್ನು ನೆನಪು ಇಟ್ಟುಕೊಂಡಿರೋದೇ ನನಗೆ ದೊಡ್ಡ ಉಡುಗೊರೆ. ಅಲ್ಲದೆ ಈ ಶಾಲೆಯಲ್ಲಿ ಕಲಿತ ಹಾಗೂ ತನ್ನಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇಂದು ದೊಡ್ಡ ಹುದ್ದೆಗಳಲ್ಲಿರುವುದು ನನಗೆ ದೊಡ್ಡ ಉಡುಗೊರೆ. ಇಂತಹ ಅಪರೂಪದ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

  • 33 ವರ್ಷದ ನಂತರ ಶಾಲೆಗೆ ಬಂದು ಭಾವುಕರಾದ ಹಳೆ ವಿದ್ಯಾರ್ಥಿಗಳು

    33 ವರ್ಷದ ನಂತರ ಶಾಲೆಗೆ ಬಂದು ಭಾವುಕರಾದ ಹಳೆ ವಿದ್ಯಾರ್ಥಿಗಳು

    ಬೆಂಗಳೂರು: ಮೂವತ್ತುಮೂರು ವರ್ಷಗಳ ನಂತರ ಶಾಲೆಯ ವಾತಾವರಣಕ್ಕೆ ಆಗಮಿಸಿದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ನೋಡಿ ಭಾವುಕರಾಗಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರೈಲ್ವೆಗೊಲ್ಲಹಳ್ಳಿ ಬಳಿಯ ಶ್ರೀ ಬೈಲಾಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ಹಳೆಯ ಹಾಗೂ ಹೊಸ ವಿದ್ಯಾರ್ಥಿಗಳು ಒಂದಾಗಿದ್ದಾರೆ. 1986 ಮತ್ತು 87ನೇ ಸಾಲಿನಲ್ಲಿ ಎಸ್‍ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು, ಗುರುವಂದನಾ ಎಂಬ ವೇದಿಕೆಯಿಂದ ಹಳೆಯ ನೆನಪುಗಳನ್ನು ಮತ್ತೆ ಮೆಲುಕು ಹಾಕಿದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮಿಜೀಗಳು, ರಸ ಪ್ರಶ್ನೆ ಮಾಡುವ ಮೂಲಕ 33 ವರ್ಷದ ಹಳೆಯ ನೆನಪುಗಳನ್ನು ಮತ್ತೆ ಮರುಕಳಿಸುವಂತೆ ಮಾಡಿದರು. ಎಲ್ಲಾ ಹಳೆಯ ವಿದ್ಯಾರ್ಥಿಗಳು ತಮ್ಮ ಹಿಂದಿನ ಶಾಲೆಯನ್ನು ನೆನಪಿಸಿಕೊಳ್ಳುವಂತೆ, ವಿದ್ಯಾರ್ಥಿಗಳ ಜಾಗದಲ್ಲಿ ಕುಳಿತು ತಮ್ಮ ಹಳೆಯ ಶಿಕ್ಷಕರ ನೀತಿ ಮಾತುಗಳನ್ನು ಕೇಳಿದರು.

    ತಮ್ಮ ಶಾಲೆಯನ್ನು ಮದುಮಗಳಂತೆ ತಳಿರು ತೋರಣಗಳಿಂದ ಹಳೆಯ ವಿದ್ಯಾರ್ಥಿಗಳು ಸಿಂಗರಿಸಿದರು. ಇನ್ನೂ ಹಳೆಯ 55 ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ತಮ್ಮ ನೆನಪನ್ನು ಹಂಚಿಕೊಂಡರು.