Tag: ಹಾರ

  • ಚಳಿಗಾಲಕ್ಕೆ ಬಿಸಿ ಬಿಸಿಯಾದ ಮಟನ್ ಸೂಪ್ ಮಾಡಿ

    ಚಳಿಗಾಲಕ್ಕೆ ಬಿಸಿ ಬಿಸಿಯಾದ ಮಟನ್ ಸೂಪ್ ಮಾಡಿ

    ಳಿಗಾಲ ಬಂತೆಂದರೆ ಸಾಕು ಮಾಂಸಾಹಾರ ಪ್ರಿಯರಿಗಂತೂ ತಮ್ಮ ನಾಲಿಗೆ ಹಸಿವನ್ನು ತಣಿಸುವ ವಿವಿಧ ಖಾದ್ಯಗಳನ್ನು ಸವಿಯಲು ನಾಲಿಗೆ ಬಯಸುತ್ತದೆ. ಚಳಿಗಾಲಕ್ಕೆ ಎಂದೇ ಹೆಸರುವಾಸಿಯಾಗಿರುವ ಕೆಲವೊಂದು ರುಚಿಕರ ಮತ್ತು ಸ್ವಾದಿಷ್ಟವಾದ ಕೆಲವು ಸೂಪ್‍ಗಳಿವೆ. ಬಿಸಿ ಬಿಸಿ, ಖಾರ ಖಾರದ ವಿಭಿನ್ನ ರುಚಿಯನ್ನು ಹೊಂದಿರುವ ಮಟನ್ ಸೂಪ್ ಎಂದಾದರೂ ಸೇವಿಸಿದ್ದೀರಾ..? ಈ ಸೂಪ್‌ ಮಾಡೋ ಸರಳ ವಿಧಾನ ನಿಮಗೆ ಗೊತ್ತಾ..?

    ಬೇಕಾಗುವ ಸಾಮಗ್ರಿಗಳು:
    * ಮಟನ್- 1 ಕೆಜಿ
    * ಟೊಮೆಟೋ- 1
    * ಕರಿಬೇವಿನ ಎಲೆಗಳು- ಸ್ವಲ್ಪ
    * ಎಳ್ಳಿನ ಎಣ್ಣೆ- 1 ಚಮಚ
    * ರುಚಿಗೆ ತಕ್ಕಷ್ಟು ಉಪ್ಪು
    * ಕೊತ್ತಂಬರಿ ಸೊಪ್ಪು- ಸ್ವಲ್ಪ
    * ಆಲೂಗಡ್ಡೆ- 1
    * ಕಾಳುಮೆಣಸು- 1 ಟೀಸ್ಪೂನ್
    * ಜೀರಿಗೆ- 2 ಟೀಸ್ಪೂನ್
    * ಶುಂಠಿ ಸ್ವಲ್ಪ
    * ಬೆಳ್ಳುಳ್ಳಿ – 2
    * ಅರಿಶಿಣ ಪುಡಿ- 1 ಚಮಚ
    * ಅಡುಗೆ ಎಣ್ಣೆ- ಅರ್ಧ ಕಪ್

    ಮಾಡುವ ವಿಧಾನ:
    * ಮೊದಲಿಗೆ ಮಟನ್ ಸ್ವಚ್ಛ ಮಾಡಿಕೊಳ್ಳಬೇಕು.
    * ಟೊಮೆಟೋ, ಆಲೂಗಡ್ಡೆ, ಕಾಳುಮೆಣಸು, ಜೀರಿಗೆ, ಶುಂಠಿ, ಬೆಳ್ಳುಳ್ಳಿ, ಈರುಳ್ಳಿ ಮತ್ತು ಅರಿಶಿಣವನ್ನು ಸೇರಿಸಿ ರುಬ್ಬಿ ಇಟ್ಟುಕೊಳ್ಳಿ.  ಇದನ್ನೂ ಓದಿ:  ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ

    * ಕುಕ್ಕರಲ್ಲಿ ಅಡುಗೆ ಎಣ್ಣೆ, ಮಟನ್ ತುಂಡುಗಳು ಹಾಗೂ ರುಬ್ಬಿದ ಮಸಾಲೆಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
    * ನಂತರ ಕರಿಬೇವಿನ ಎಲೆ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ನಂತರ ನೀರು ಮತ್ತು ಎಣ್ಣೆಯನ್ನು ಅದಕ್ಕೆ ಸೇರಿಸಿ ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ ಬೇಯಿಸಿಕೊಳ್ಳಬೇಕು.


    * ಮಟ್ಟನ್ ಬೇಯಿಸಿದ ನಂತರ ಎಳ್ಳಿನ ಎಣ್ಣೆ, ಕೊತ್ತಂಬರಿ ಸೊಪ್ಪು ಸೇರಿಸಿದರೆ ರುಚಿ ರುಚಿಯಾದ ಮಟ್ಟನ್ ಸೂಪ್ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ:  ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ

  • ಬಿಗ್ ಮನೆಯಲ್ಲಿಯೇ ಹಾರ ಬದ್ಲಾಯಿಸಿಕೊಂಡ್ರು ಕವಿತಾ-ರಾಕೇಶ್!

    ಬಿಗ್ ಮನೆಯಲ್ಲಿಯೇ ಹಾರ ಬದ್ಲಾಯಿಸಿಕೊಂಡ್ರು ಕವಿತಾ-ರಾಕೇಶ್!

    ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಯಾವಾಗಲೂ ಒಂದು ಜೋಡಿ ಮಧ್ಯೆ ಗಾಸಿಪ್ ಹರಿದಾಡುತ್ತಿದೆ. ಅದೇ ರೀತಿ ಬಿಗ್‍ಬಾಸ್ ಸೀನಸ್ 6ರಲ್ಲಿ ರಾಕೇಶ್ ಮತ್ತು ಅಕ್ಷತಾ ಯಾವಾಗಲೂ ಜೊತೆಯಲ್ಲಿರುತ್ತಾರೆ. ಆದ್ದರಿಂದ ಇವರಿಬ್ಬರ ಬಗ್ಗೆ ಗಾಸಿಪ್ ಇದೆ. ಆದರೆ ಈಗ ಸ್ಪರ್ಧಿ ಕವಿತಾ ಮತ್ತು ರಾಕೇಶ್ ಪರಸ್ಪರ ಹಾರ ಬದಲಾಯಿಸಿಕೊಂಡಿದ್ದಾರೆ.

    ಬಿಗ್‍ಬಾಸ್ ಮನೆಯ ಎಲ್ಲ ಸ್ಪರ್ಧಿಗಳಿಗೂ ಒಂದು ಟಾಸ್ಕ್ ನೀಡಿತ್ತು. ಅದೆನೆಂದರೆ ‘ಇಷ್ಟ ಕಷ್ಟ’. ಈ ಟಾಸ್ಕ್ ನ ಪ್ರಕಾರ ತಮಗೆ ಇಷ್ಟ ಆಗುವ ಒಬ್ಬರಿಗೆ ಸ್ಪರ್ಧಿಗಳು ಹಾರ ಹಾಕಬೇಕಿತ್ತು. ಇಷ್ಟ ಪಡದ ಇಬ್ಬರು ಸದಸ್ಯರ ಮುಖಕ್ಕೆ ಸ್ಪರ್ಧಿಗಳು ಮಸಿ ಬಳಿಯಬೇಕಿತ್ತು.

    ಕಳೆದ ವಾರ ಆಂಡ್ರ್ಯೂ ಮತ್ತು ಕವಿತಾ ಮಧ್ಯೆ ಜಗಳವಾಗಿತ್ತು. ಇದರಿಂದ ಮನೆಯಲ್ಲಿ ಎಲ್ಲರಿಗೂ ಬೇಸರವಾಗಿತ್ತು. ಕೊನೆಗೆ ಕವಿತಾ ಅವರು ಆಂಡ್ರ್ಯೂ ಬಳಿ ಕ್ಷಮೆ ಕೇಳಿದ್ದರು. ಇದರಿಂದ ರಾಕೇಶ್ ಕವಿತಾ ಗುಣವನ್ನು ಅಭಿನಂದಿಸಿ ಹಾರ ಹಾಕಿದರು. ಇತ್ತ ಬೇಸರದಿಂದ ಇದ್ದ ಕವಿತಾ ಜೊತೆ ಸಂತೋಷದಿಂದ ಮಾತನಾಡಿದ್ದಕ್ಕೆ ಕವಿತಾ ಕೂಡ ರಾಕೇಶ್‍ಗೆ ಹಾರ ಹಾಕಿದರು. ಹೀಗಾಗಿ ‘ಇಷ್ಟ ಕಷ್ಟ’ ಟಾಸ್ಕ್ ನಲ್ಲಿ ಕವಿತಾ-ರಾಕೇಶ್ ಪರಸ್ಪರ ಹಾರ ಬದಲಾಯಿಸಿಕೊಂಡಿದ್ದಾರೆ.

    ‘ಇಷ್ಟ ಕಷ್ಟ’ ಟಾಸ್ಕ್ ನಲ್ಲಿ ಬರೀ ಕವಿತಾ-ರಾಕೇಶ್ ಮಾತ್ರ ಹಾರ ಹಾಕಿಲ್ಲ. ಶಶಿ-ಧನರಾಜ್ ಹಾಗೂ ರಶ್ಮಿ-ಮುರಳಿ ಕೂಡ ಪರಸ್ಪರ ಹಾರ ಹಾಕಿಕೊಂಡಿದ್ದಾರೆ.

    ರಾಕೇಶ್ ಮತ್ತು ಅಕ್ಷತಾ ಇಬ್ಬರ ನಡುವೆ ಗಾಸಿಪ್ ಇದೆ ಎಂದು ಮಾತನಾಡಿಕೊಳ್ಳುತ್ತಿದಾಗ, ‘ನಾವಿಬ್ಬರು ಒಳ್ಳೆಯ ಗೆಳೆಯರು’ ಎಂದು ರಾಕೇಶ್ ಎಲ್ಲರ ಮುಂದೆ ಸ್ಪಷ್ಟಪಡಿಸಿದ್ದರು. ಆಗ ಕೂಡಲೇ ಅಕ್ಷತಾ ‘ಐ ಲವ್ ಯು ರಾಕಿ” ಅಂತ ಬಹಿರಂಗವಾಗಿ ಹೇಳಿದ್ದರು. ಇದರಿಂದ ಸ್ಪರ್ಧಿಗಳು ಗೊಂದಲಕ್ಕೀಡಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ! ವೈರಲ್ ವಿಡಿಯೋ

    ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ! ವೈರಲ್ ವಿಡಿಯೋ

    ನಗಾಡಾ: ವಿಧಾನಸಭಾ ಚುಣಾವಣೆಯಲ್ಲಿ ಜನರ ಬಳಿ ಮತ ಕೇಳಲು ಬಂದಿದ್ದ ಶಾಸಕರೊಬ್ಬರಿಗೆ ಸಾರ್ವಜನಿಕವಾಗಿ ಚಪ್ಪಲಿ ಹಾರ ಹಾಕಿರುವ ಘಟನೆ ಮಧ್ಯಪ್ರದೇಶದ ನಗಾಡಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

    ನಗಾಡಾ ಕ್ಷೇತ್ರದ ಬಿಜೆಪಿ ಪಕ್ಷದ ಹಾಲಿ ಶಾಸಕ ದಿಲೀಪ್ ಶೇಖಾವತ್ ಅವರಿಗೆ ಚಪ್ಪಲಿ ಹಾರ ಹಾಕಲಾಗಿದ್ದು, ಭಾನುವಾರ ಸಂಜೆ ವೇಳೆ ಕ್ಷೇತ್ರದ ಹಳ್ಳಿಯೊಂದರಲ್ಲಿ ಮತ ಕೇಳಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಚಪ್ಪಲಿ ಹಾರ ಹಾಕಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿದ್ದ ಶಾಸಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಜನರ ಮಧ್ಯೆ ಬಂದ ಅವರಿಗೆ ಹಲವು ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸುತ್ತಿದ್ದರು. ಆದರೆ ಈ ನಡುವೆ ಜನರ ಮಧ್ಯದಿಂದ ಬಂದ ವ್ಯಕ್ತಿಯೊಬ್ಬ ಶಾಸಕನಿಗೆ ಚಪ್ಪಲಿ ಹಾರ ಹಾಕಿದ. ಕೂಡಲೇ ಎಚ್ಚೆತ್ತಾ ಶಾಸಕ ಹಾರ ಕಿತ್ತುಹಾಕಿ ಆತನ ಮೇಲೆ ಕೋಪದಿಂದ ಹಲ್ಲೆ ನಡೆಸಲು ಮುನ್ನಡೆದಿದ್ದು ವಿಡಿಯೋದಲ್ಲಿ ಕಾರಣಬಹುದಾಗಿದೆ.

    ವಿಡಿಯೋದಲ್ಲಿ ಇರುವ ವ್ಯಕ್ತಿ ಬಿಜೆಪಿ ಪಕ್ಷದ ಟೋಪಿ, ಶಾಲು ಧರಿಸಿ ಜನರ ಮಧ್ಯೆ ಆಗಮಿಸಿದ್ದ. ಪ್ರಚಾರದ ಭಾಗವಾಗಿ ಜನರ ನಡುವೆ ಆಗಮಿಸಿದ್ದ ಶಾಸಕರು ಹತ್ತಿರ ಆಗಮಿಸುತ್ತಿದಂತೆ ಏಕಾಏಕಿ ಚಪ್ಪಲಿ ಹಾರ ಹಾಕಿದ್ದಾನೆ. ವರ್ಷದ ಆರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುಣಾವಣೆ ವೇಳೆಯೂ ಬಿಜೆಪಿ ನಾಯಕರೊಬ್ಬರಿಗೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಮತದಾನ ನ.28 ರಂದು ನಡೆಯಲಿದ್ದು, ಡಿ. 11 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕುತ್ತಿಗೆಗೆ ಹಾರ ಹಾಕಲು ಹೋಗಿ ವಧುವಿನ ಸೊಂಟಕ್ಕೆ ಹಾಕ್ದ – ವಿಡಿಯೋ ನೋಡಿ

    ಕುತ್ತಿಗೆಗೆ ಹಾರ ಹಾಕಲು ಹೋಗಿ ವಧುವಿನ ಸೊಂಟಕ್ಕೆ ಹಾಕ್ದ – ವಿಡಿಯೋ ನೋಡಿ

    ನವದೆಹಲಿ: ವಧುವಿಗೆ ಹಾರ ಹಾಕುವ ಸಂದರ್ಭದಲ್ಲಿ ವರನೊಬ್ಬ ಆಕೆಯ ಕುತ್ತಿಗೆಗೆ ಹಾರ ಹಾಕುವ ಬದಲು ಆಕೆಯ ಸೊಂಟಕ್ಕೆ ಹಾರ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವಿಡಿಯೋದಲ್ಲಿ ಏನಿದೆ?
    ವಧು- ವರರಿಬ್ಬರು ವೇದಿಕೆ ಮೇಲೆ ನಿಂತಿದ್ದು, ವೇದಿಕೆ ಕೆಳಗೆ ನಿಂತಿದ್ದವರು ಅವರಿಗೆ ಹಾರ ಕೊಟ್ಟಿದ್ದಾರೆ. ಬಳಿಕ ಒಬ್ಬರಿಗೊಬ್ಬರು ಹಾರ ಬದಲಾಯಿಸುವಂತೆ ಹೇಳಿದ್ದಾರೆ. ಮೊದಲು ವಧು ನಾಚಿಕೆಯಿಂದ ನಿಧಾನವಾಗಿ ಒಂದು ಹೆಜ್ಜೆ ಮುಂದೆ ಹೋಗಿ ಹಾರ ಹಾಕಿದ್ದಾಳೆ.

    ನಂತರ ವರ ಹಾರವನ್ನು ಹಿಡಿದುಕೊಂಡಿದ್ದಾನೆ. ಈ ವೇಳೆ ಅಲ್ಲಿದ್ದರು ಏನೋ ಸೂಚನೆ ನೀಡಿ ಹಾರ ಹಾಕುವಂತೆ ಹೇಳಿದ್ದಾರೆ. ಸೂಚನೆ ಸಿಕ್ಕಿದ ಕೂಡಲೇ ವರ ವಧುವಿನ ಕುತ್ತಿಗೆಗೆ ಹಾರವನ್ನು ಎಸೆದಿದ್ದಾನೆ. ಎಸೆದ ಹಾರ ಸೊಂಟಕ್ಕೆ ಹೋಗಿ ಬಿದ್ದಿದೆ. ಹಾರ ಬಿದ್ದ ಕೂಡಲೇ ಅಲ್ಲಿದ್ದವರು ನಕ್ಕಿದ್ದಾರೆ. ಎಡವಟ್ಟಾದ ವಿಚಾರ ತಿಳಿದು ವರ ಸೊಂಟದಲ್ಲಿದ್ದ ಹಾರವನ್ನು ಎತ್ತಿ ನಂತರ ವಧುವಿನ ಕುತ್ತಿಗೆಗೆ ಹಾಕಿದ್ದಾನೆ.

    ಈ ವಿಡಿಯೋವನ್ನು ““5-Minute Awesomeness”” ಫೇಸ್ ಬುಕ್ ಪೇಜ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಫುಲ್ ವೈರಲ್ ಆಗಿದೆ. ಇಲ್ಲಿಯವರೆಗೆ ಈ ವಿಡಿಯೋವನ್ನು ಸುಮಾರು 1 ಲಕ್ಷಕ್ಕಿಂತ ಅಧಿಕ ವೀಕ್ಷಣೆಯಾಗಿದೆ.

    https://www.facebook.com/5MinuteAwesomeness/videos/536531943411296/

  • ಬೇಕಾದ್ರೆ ನನಗೊಂದು ಕಲ್ಲಿನ ಹಾರ ಹಾಕಿ, ಸುಗಂಧರಾಜ ಹಾರ ಬೇಡ : ಡಿಕೆಶಿ

    ಬೇಕಾದ್ರೆ ನನಗೊಂದು ಕಲ್ಲಿನ ಹಾರ ಹಾಕಿ, ಸುಗಂಧರಾಜ ಹಾರ ಬೇಡ : ಡಿಕೆಶಿ

    ವಿಜಯಪುರ: ಸುಗಂಧರಾಜ ಹೂವಿಗೂ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಎಣ್ಣೆ ಶೀಗೆಕಾಯಿ ಸಂಬಂಧನಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಮೇಲೆ ಡಿಕೆಶಿ ಮೊದಲ ಬಾರಿಗೆ ಐತಿಹಾಸಿಕ ವಿಜಯಪುರ ಜಿಲ್ಲೆಗಿಂದು ಭೇಟಿ ನೀಡಿದರು. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಏತ ನೀರಾವರಿ ಯೋಜನೆಯ ಬಳೂತಿ ಜಾಕ್ ವೆಲ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಸುಗಂಧರಾಜ ಹೂವಿನ ಹಾರ ಹಾಕಿ ಸ್ವಾಗತಿಸಲು ಮುಂದಾಗಿದ್ದರು. ಆದರೆ ಡಿಕೆಶಿ ಹಾರ ಹಾಕಿಸಿಕೊಳ್ಳಲು ನಿರಾಕರಣೆ ಮಾಡಿದರು.

    ಅಷ್ಟೇ ಅಲ್ಲದೇ ಸುಗಂಧ ಹಾರ ಬಿಟ್ಟು ಯಾವ ಹಾರ ಬೇಕಾದರೂ ಹಾಕಿ ಅಥವಾ ಕಲ್ಲಿನಿಂದ ಹಾರ ಮಾಡಿ ತಂದು ಹಾಕಿ. ಆದರೆ ಸುಗಂಧರಾಜ ಹೂವಿನ ಹಾರ ಬೇಡ ಎಂದರು. ಹೀಗಾಗಿ ಸುಗಂಧರಾಜ ಹೂವು ಕಂಡರೆ ಡಿಕೆಶಿಗೆ ಯಾಕೆ ಇಷ್ಟವಿಲ್ಲ ಎನ್ನುವ ಚರ್ಚೆ ಸ್ಥಳೀಯರಲ್ಲಿ ಹುಟ್ಟುಕೊಂಡಿದೆ.

    ಮುಳವಾಡ ಏತ ನೀರಾವರಿ ಹಂತ-3ರ ಯೋಜನೆ ವ್ಯಾಪ್ತಿಯಲ್ಲಿ ಬರುವ ಬಳೂತಿ, ಹಣಮಾಪುರ ಹಾಗೂ ಮಸೂತಿ ಜಾಕವೆಲ್‍ಗಳ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಈ ಭಾಗದ ಜನರು ಭಾಗ್ಯವಂತರು. ಇಲ್ಲಿ ಸರ್ಕಾರ ಸಾವಿರಾರು ಕೋಟಿ ಖರ್ಚು ಮಾಡಿ ಯೋಜನೆ ಮಾಡಿದೆ. ಅಲ್ಲದೆ 62 ಟಿಎಂಸಿ ನೀರಿನ ಯೋಜನೆ ಮುಳವಾಡ ಏತ ನೀರಾವರಿ ಯೋಜನೆ, 5 ಲಕ್ಷ ಎಕರೆ ನೀರಾವರಿಗೆ ಜಮೀನು ಒಳ ಪಡುತ್ತದೆ.

    ಈ ಹಿಂದಿನ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಉತ್ತಮ ಕೆಲಸ ಮಾಡಿದ್ದಾರೆ. ರೈತರು ನೀರಿನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು. ಇನ್ನು ಆರೋಗ್ಯಕರವಾಗಿ ನೀರಿನ ಬಳಕೆಯಾಗಬೇಕು. ಕೆಲ ರೈತರ ಇದಕ್ಕಾಗಿ ತ್ಯಾಗ ಮಾಡಿದ್ದಾರೆ. ಅವರ ತ್ಯಾಗದಿಂದ ಯೋಜನೆಗಳು ಜಾರಿಯಾಗಿವೆ ಎಂದು ಅವರನ್ನು ಸ್ಮರಿಸಿದರು. ಇನ್ನು ಯೋಜನೆಗೆ ಒಳಪಟ್ಟ ಪುನರ್ವಸತಿ ಸರಿಯಾಗಿ ಆಗಿಲ್ಲ. ಒಂದು ಟೀಂ ನಿಯೋಜಿಸಿ ಪುನರ್ವಸತಿ ಕೇಂದ್ರಗಳ ಅಧ್ಯಯನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

    ಕೆಲ ಪುನರ್ವಸತಿ ಪ್ರದೇಶಗಳಲ್ಲಿ ಯಾವುದೇ ಸೌಕರ್ಯವಿಲ್ಲದ್ದು ಕಂಡು ನಾಚಿಕೆಯಾಯಿತು. ಈ ಸಮಸ್ಯೆ ಬಗೆ ಹರಿಸಲಾಗುತ್ತದೆ. ಇನ್ನು ರೈತರ ಸಾಲ ಮನ್ನಾ ಮಾಡುವ ಡಿಮ್ಯಾಂಡ್ ಇದೆ. ಆರ್ಥಿಕತೆಯನ್ನು ತಿಳಿದುಕೊಂಡು ಜಲ ಸಂಪನ್ಮೂಲ ಇಲಾಖೆಗೆ ಒದಗಿಸುವ ಬಜೆಟ್ ನಿಗದಿ ಮಾಡಲಾಗುತ್ತದೆ. ನೀರಾವರಿ ಯೋಜನೆ ಸಂತ್ರಸ್ಥರಿಗೆ ಏಕರೂಪ ಪರಿಹಾರ ನೀಡಬೇಕೆಂಬ ಬೇಡಿಕೆ ಇದೆ. ಕಾರಣ ಈ ನಿಟ್ಟಿನಲ್ಲಿ ಯೋಚನೆ ಮಾಡಲಾಗುತ್ತದೆ. ಇನ್ನು ಬಜೆಟ್ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಸಿಎಂ ಕುಮಾರಸ್ವಾಮಿ ಅವರಿಗೆ ಕೆಲ ಸಲಹೆಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.

  • ಬಹಿರಂಗವಾಗಿ ಸೇಬಿನ ಹಾರ ಹರಾಜು: ಸಂಗ್ರಹವಾದ ಹಣವನ್ನು ಅಭ್ಯರ್ಥಿಗೆ ನೀಡಿದ ಎಚ್‍ಡಿಡಿ

    ಬಹಿರಂಗವಾಗಿ ಸೇಬಿನ ಹಾರ ಹರಾಜು: ಸಂಗ್ರಹವಾದ ಹಣವನ್ನು ಅಭ್ಯರ್ಥಿಗೆ ನೀಡಿದ ಎಚ್‍ಡಿಡಿ

    ಮಂಡ್ಯ: ತಮಗೆ ಹಾಕಿದ ಸೇಬಿನ ಹಾರವನ್ನು ಹರಾಜು ಹಾಕಿ ಆ ಹಣವನ್ನು ತಮ್ಮ ಪಕ್ಷದ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಸುರೇಶ್‍ಗೌಡ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ನೀಡಿದ್ದಾರೆ.

    ನಾಗಮಂಗಲ ಕ್ಷೇತ್ರ ವ್ಯಾಪ್ತಿಗೆ ಬರುವ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಪಕ್ಷದ ಅಭ್ಯರ್ಥಿ ಸುರೇಶ್‍ಗೌಡ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದರು. ಈ ವೇಳೆ ದೇವೇಗೌಡರಿಗೆ ಅಭಿಮಾನಿಗಳು ಸುಮಾರು 200ಕೆಜಿ ತೂಕದ ಸೇಬಿನ ಹಾರ ಹಾಕಿದ್ದರು.

    ಸೇಬಿನ ಹಾರವನ್ನು ವೇದಿಕೆಯ ಮೇಲೆ ಹರಾಜು ಹಾಕಲಾಯಿತ್ತು. ಮೊದಲು ಮಾಜಿ ಶಾಸಕ ಶಿವರಾಮೇಗೌಡ ಸೇಬಿನ ಹಾರಕ್ಕೆ ಒಂದು ಲಕ್ಷ ಬೆಲೆ ಕಟ್ಟಿದ್ದರು. ನಂತರ ಬೆಟ್ಟೇಗೌಡ ಸೇಬಿನ ಹಾರಕ್ಕೆ ಮೂರು ಲಕ್ಷ ಬೆಲೆ ಕಟ್ಟಿದ್ದರು. ಅವರನ್ನೂ ಮೀರಿಸಿ ಬೆಂಗಳೂರಿನ ಜೆಡಿಎಸ್ ಮುಖಂಡರೊಬ್ಬರು ಸೇಬಿನ ಹಾರಕ್ಕೆ ಮೂರೂವರೆ ಲಕ್ಷ ಬೆಲೆ ಕಟ್ಟಿದ್ದರು.

    ನಂತರ ಐದು ಲಕ್ಷಕ್ಕೆ ಹರಾಜು ಕೂಗಲಾಯಿತ್ತು. ಅಂತಿಮವಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನಸ್ವಾಮಿ ಸೇಬಿನ ಹಾರವನ್ನು ಆರು ಲಕ್ಷಕ್ಕೆ ಹರಾಜಿನಲ್ಲಿ ಕೊಂಡುಕೊಂಡರು. ಹರಾಜಿನ ನಂತರ ವೇದಿಕೆಯಲ್ಲೇ ಜೆಡಿಎಸ್ ಮುಖಂಡರು ಒಂದೊಂದು ಸೇಬನ್ನು ತಿಂದು ರುಚಿ ನೋಡಿದ್ದು ವಿಶೇಷವಾಗಿತ್ತು.

  • ವರ ವಧುವಿಗೆ ಹಾರ ಹಾಕ್ತಿದ್ದಂತೆ, ಓಡೋಡಿ ಬಂದು ಸಿಂಧೂರವಿಟ್ಟ ಪ್ರಿಯತಮ

    ವರ ವಧುವಿಗೆ ಹಾರ ಹಾಕ್ತಿದ್ದಂತೆ, ಓಡೋಡಿ ಬಂದು ಸಿಂಧೂರವಿಟ್ಟ ಪ್ರಿಯತಮ

    ಪಾಟ್ನಾ: ಮದುವೆಯಲ್ಲಿ ವಧುವಿಗೆ ವರ ಹಾರ ಹಾಕಿದ ಬೆನ್ನೆಲ್ಲೆ ಪ್ರಿಯಕರ ಸಿಂಧೂರ ಹಚ್ಚಿದ (ಬೈತಲೆಗೆ ಕುಂಕುಮ) ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

    ವೇದಿಕೆ ಮೇಲೆ ವಧು ಹಾಗೂ ವರ ಹಾರ ಬದಲಾಯಿಸಿಕೊಳ್ಳಲು ನಿಂತಿದ್ದರು. ಆಗ ತಕ್ಷಣ ವಧುವಿನ ಪ್ರಿಯಕರ ತನ್ನ ನಾಲ್ಕೈದು ಸ್ನೇಹಿತರ ಜೊತೆ ವೇದಿಕೆ ಹತ್ತಿ ಸಿಂಧೂರ ಹಾಕಿದ್ದಾನೆ. ಇದನ್ನು ನೋಡಿದ ಅಲ್ಲಿದ್ದ ಜನರು ಒಂದು ಕ್ಷಣ ದಂಗಾದರು.

    ಪ್ರಿಯಕರ ವಧುವಿನ ಹಣೆಗೆ ಸಿಂಧೂರ ಹಾಕಿದ ನಂತರ ಮದುವೆ ಮನೆಯಲ್ಲಿ ದೊಡ್ಡ ಗಲಾಟೆ ನಡೆದಿತ್ತು. ನಂತರ ಗ್ರಾಮದ ಹಿರಿಯರು ಬಂದು ವಿಚಾರಿಸಿದಾಗ ಇಬ್ಬರೂ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂಬುದು ತಿಳಿದು ಬಂದಿದೆ. ನಂತರ ವಧುವನ್ನು ತನ್ನ ಪ್ರಿಯಕರನ ಜೊತೆ ಗ್ರಾಮಸ್ಥರು ಕಳುಹಿಸಿಕೊಟ್ಟಿದ್ದಾರೆ ಅಂತಾ ವರದಿಯಾಗಿದೆ.

    ವಧುವಿನ ಕುಟುಂಬದವರು ಮದುವೆಯನ್ನು ಬೇರೆ ಕಡೆ ನಿಶ್ಚಯ ಮಾಡಿದ್ದು, ಮದುವೆಯ ಶಾಸ್ತ್ರ ಸಂಪ್ರದಾಯಗಳೆಲ್ಲ ನೆರವೇರಿತ್ತು. ವರ ಮೆರವಣಿಗೆಯಿಂದ ನೇರವಾಗಿ ಹಾರ ಬದಲಾಯಿಸಿಕೊಳ್ಳಲು ವೇದಿಕೆ ಮೇಲೆ ಬಂದರು. ವರ ವಧುವಿಗೆ ಹಾರ ಹಾಕುವ ಸಮಯದಲ್ಲೇ ಆಕೆಯ ಪ್ರಿಯಕರ ವೇದಿಕೆ ಮೇಲೆ ಹತ್ತಿ ಯುವತಿಗೆ ಸಿಂಧೂರ ಹಚ್ಚಿದ್ದಾನೆ.

    ಈ ಘಟನೆ ನಡೆದ ನಂತರ ಮದುವೆ ಮನೆ ಗಲಾಟೆಗಳು ಆರಂಭವಾಗಿದೆ. ವಧುವಿನ ಕುಟುಂಬಸ್ಥರು ಎಲ್ಲರೂ ಸೇರಿ ಪ್ರಿಯಕರ ಹಾಗೂ ಆತನ ಸ್ನೇಹಿತರಿಗೆ ಥಳಿಸಿದ್ದಾರೆ. ಘಟನೆಯಲ್ಲಿ ಪ್ರಿಯಕರ ಹಾಗೂ ಆತನ ಸ್ನೇಹಿತರು ಗಂಭೀರವಾಗಿ ಗಾಯಗೊಂಡರು. ಇದನ್ನು ನೋಡಿದ ವಧು ತನ್ನ ಪ್ರಿಯಕರನನ್ನು ಬಿಟ್ಟುಬಿಡಿ ಎಂದು ಜೋರಾಗಿ ಕಿರುಚಲು ಶುರು ಮಾಡಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ.

    ವಧು ಹಾಗೂ ಆಕೆಯ ಪ್ರಿಯಕರನ ಬಗ್ಗೆ ವಿಚಾರಿಸಿದ್ದಾಗ ನಾವು ಮೂರು ವರ್ಷದಿಂದ ಪ್ರೀತಿಸುತ್ತಿದ್ದೇವೆ. ಈ ವಿಚಾರ ನನ್ನ ತಂದೆ- ತಾಯಿಗೂ ಗೊತ್ತಿತ್ತು. ಆದರೆ ಅವರು ಬಲವಂತವಾಗಿ ನನ್ನ ಮದುವೆಯನ್ನು ಮಾಡಲು ನಿರ್ಧರಿಸಿದ್ದರು. ನಂತರ ನನಗೆ ಹೆದರಿಸಿ ನನ್ನ ಮದುವೆಯನ್ನು ಬೇರೊಬ್ಬ ಜೊತೆ ನಿಶ್ಚಯಿಸಿದ್ದರು ಎಂದು ವಧು ಗ್ರಾಮಸ್ಥರ ಮುಂದೆ ಹೇಳಿಕೆ ನೀಡಿದ್ದಾಳೆ.

    ವಧು ಹಾಗೂ ಆಕೆಯ ಪ್ರಿಯಕರ ಫೋಟೋವನ್ನು ನೋಡಿದ ವರ ಮತ್ತೊಮ್ಮೆ ವಧುವಿನ ನಿರ್ಧಾರವನ್ನು ಕೇಳಿದ್ದನು. ಆಗ ವಧು ತನ್ನ ಪ್ರಿಯಕರನ ಜೊತೆ ಹೋಗುವುದಾಗಿ ಹಠ ಮಾಡುತ್ತಿದ್ದಳು. ಆಗ ವರ ಮೆರವಣಿಗೆ ಮೂಲಕ ಹಿಂದಿರುಗಲು ನಿರ್ಧರಿಸಿದ್ದರು. ನಂತರ ಗ್ರಾಮಸ್ಥರು ಹಾಗೂ ಪೋಷಕರು ವಧುವನ್ನು ತನ್ನ ಪ್ರಿಯಕರನ ಜೊತೆ ಮದುವೆ ಮಾಡಿ ಕಳುಹಿಸಿಕೊಟ್ಟರು ಎಂದು ವರದಿಯಾಗಿದೆ.

  • ದೂರದಿಂದ್ಲೇ ಗುರಿಯಿಟ್ಟು ರಾಹುಲ್ ಕೊರಳಿಗೆ ಹಾರ ಎಸೆದ ಅಭಿಮಾನಿ- ವಿಡಿಯೋ ಫುಲ್ ವೈರಲ್

    ದೂರದಿಂದ್ಲೇ ಗುರಿಯಿಟ್ಟು ರಾಹುಲ್ ಕೊರಳಿಗೆ ಹಾರ ಎಸೆದ ಅಭಿಮಾನಿ- ವಿಡಿಯೋ ಫುಲ್ ವೈರಲ್

    ತುಮಕೂರು: ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಭಿಮಾನಿಯೋರ್ವ ದೂರದಿಂದಲೇ ಗುರಿಯಿಟ್ಟು ಕೊರಳಿಗೆ ಹೂವಿನ ಹಾರ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ.

    ಬುಧವಾರ ತುಮಕೂರಿನ ಬಿಎಚ್ ರಸ್ತೆಯ ರೋಡ್ ಶೋ ವೇಳೆ ಈ ಘಟನೆ ನಡೆದಿದೆ. ಅಭಿಮಾನಿ ಹಾರ ಎಸೆದ ದೃಶ್ಯವನ್ನು ಆತನ ಹಿಂದುಗಡೆಯಿದ್ದ ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ರಾಹುಲ್ ಗಾಂಧಿಯವರು ವಾಹನದ ಮೇಲೇರಿ ಜನಸಾಮಾನ್ಯರತ್ತ ಕೈ ಬೀಸಿ ಬರುತ್ತಿದ್ದಂತೆಯೇ ರಸ್ತೆಬದಿ ನಿಂತಿದ್ದ ಅಭಿಮಾನಿ ರಾಹಲ್ ನತ್ತ ಹೂವಿನ ಹಾರ ಎಸೆದಿದ್ದಾರೆ. ಈ ಹಾರ ನೇರವಾಗಿ ರಾಹುಲ್ ಅವರ ಕೊರಳಿಗೆ ಬಿದ್ದಿದೆ. ಕೂಡಲೇ ಅವರು ಕೊರಳಿಂದ ಹಾರ ತೆಗೆದು ತನ್ನ ಭದ್ರತಾ ಸಿಬ್ಬಂದಿ ಕೈಗೆ ನೀಡಿದ್ದಾರೆ.

    ಭದ್ರತೆಯ ದೃಷ್ಟಿಯಿಂದ ಎಸ್‍ಪಿಇಜಿಯವರು ರಾಹುಲ್ ಗಾಂಧಿಯವರಿಗೆ ಹಾರ ಹಾಕಲು ಗಣ್ಯರಿಗೂ ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಭಿಮಾನಿ ಕಾರ್ಯಕರ್ತನೋರ್ವ ದೂರದಿಂದಲೇ ರಾಹುಲ್ ಕೊರಳಿಗೆ ಹಾರ ಎಸೆಯುವ ಮೂಲಕ ತನ್ನ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

  • ಹೆಚ್‍ ಡಿಕೆಗೆ ಕ್ರೇನ್ ಮೂಲಕ 12 ಅಡಿ ಉದ್ದ, 250 ಕೆ.ಜಿ ತೂಕದ ರಾಗಿ ತೆನೆ ಹಾರ ಅರ್ಪಿಸಿದ ಅಭಿಮಾನಿ

    ಹೆಚ್‍ ಡಿಕೆಗೆ ಕ್ರೇನ್ ಮೂಲಕ 12 ಅಡಿ ಉದ್ದ, 250 ಕೆ.ಜಿ ತೂಕದ ರಾಗಿ ತೆನೆ ಹಾರ ಅರ್ಪಿಸಿದ ಅಭಿಮಾನಿ

    ಮೈಸೂರು: ನೆಚ್ಚಿನ ಜನನಾಯಕನನ್ನು ಮೆಚ್ಚಿಸೋಕ್ಕೆ ಅಭಿಮಾನಿಗಳು ಹೊಸ ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇಬು ಹಣ್ಣುಗಳ ಹಾರ ಹಾಕಿ ಸ್ವಾಗತ ಮಾಡಲಾಗಿತ್ತು.

    ಈಗ ಅಭಿಮಾನಿಯೊಬ್ಬರು ಎಚ್‍ಡಿ ಕುಮಾರಸ್ವಾಮಿ ಅವರಿಗೆ ರಾಗಿ ತೆನೆ ಹಾರ ಅರ್ಪಿಸಿ ಅಭಿಮಾನ ಮೆರೆದಿದ್ದಾರೆ. ಜಿಲ್ಲೆಯ ಟಿ.ನರಸೀಪುರದಲ್ಲಿ ಇಂತಹದ್ದೊಂದು ಅಭಿಮಾನ ಕಂಡು ಬಂದಿದ್ದು, ಅಭಿಮಾನಿಯೊಬ್ಬ ತೆನೆ ಹೊತ್ತ ಮಹಿಳೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಅಭಿಮಾನಿಯೊಬ್ಬ ಬೃಹತ್ ಆಕಾರದ ರಾಗಿ ತೆನೆ ಹಾರ ಅರ್ಪಿಸಿ ಖುಷಿ ಪಟ್ಟಿದ್ದಾರೆ. ಇದನ್ನು ಓದಿ: ಕ್ರೇನ್ ಮೂಲಕ ಸಚಿವ ಶಿವಕುಮಾರ್ ಗೆ 300 ಕೆ.ಜಿ ತೂಕದ ಸೇಬಿನ ಹಾರ ಹಾಕಿ ಸನ್ಮಾನ!

    ಇದು ಅಂತಿಂತಾ ಹಾರ ಅಲ್ಲ 12 ಅಡಿ ಉದ್ದ, 250 ಕೆ.ಜಿ. ತೂಕವಿದ್ದು, ಹಾರವನ್ನು ಅರ್ಪಿಸುವುದಕ್ಕೆ ಕ್ರೇನ್ ಬಳಸಿರುವುದು ವಿಶೇಷವಾಗಿದೆ. ಬುಧವಾರ ಟಿ.ನರಸೀಪುರದಲ್ಲಿ ರೋಡ್ ಶೋ ಇತ್ತು. ಇದಕ್ಕಾಗಿ ಕುಮಾರಸ್ವಾಮಿ ತೆರೆದ ಬಸ್ ನಲ್ಲಿ ಆಗಮಿಸಿದಾಗ ಕ್ರೇನ್ ಮೂಲಕ ಬೃಹತ್ ಆಕಾರದ ರಾಗಿ ತೆನೆ ಹಾರ ಅರ್ಪಿಸಲಾಗಿದೆ.

  • ವಧುಗೆ ಹಾರ ಹಾಕುವ ಬದ್ಲು ಆಕೆಯ ಸ್ನೇಹಿತೆಗೆ ಹಾರ ಹಾಕಿದ ವರ!: ವಿಡಿಯೋ ವೈರಲ್

    ವಧುಗೆ ಹಾರ ಹಾಕುವ ಬದ್ಲು ಆಕೆಯ ಸ್ನೇಹಿತೆಗೆ ಹಾರ ಹಾಕಿದ ವರ!: ವಿಡಿಯೋ ವೈರಲ್

    ನವದೆಹಲಿ: ವರನೊಬ್ಬ ತನ್ನ ಮದುವೆಯಲ್ಲಿ ವಧುವಿಗೆ ಹಾರ ಹಾಕುವ ಬದಲು ಆಕೆಯ ಸ್ನೇಹಿತೆಗೆ ಹಾರ ಹಾಕಿ ಎಡವಟ್ಟು ಮಾಡಿಕೊಂಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

    ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ವರದಿಯಾಗಿಲ್ಲ. ಆದ್ರೆ ಸಂಪ್ರದಾಯವನ್ನು ಗಮನಿಸಿದ್ರೆ ಭಾರತೀಯ ಮದುವೆಯಲ್ಲಿ ಈ ಎಡವಟ್ಟಾಗಿದೆ ಎಂಬುದಾಗಿ ವರದಿಯಾಗಿದೆ.

    ವಿಡಿಯೋದಲ್ಲೇನಿದೆ?: ವಿಡಿಯೋದಲ್ಲಿ ವಧು ಮೊದಲು ವರನಿಗೆ ಹಾರ ಹಾಕುತ್ತಾಳೆ. ನಂತರ ವರ ತನ್ನ ಕೈಯಲಿದ್ದ ಹಾರವನ್ನು ವಧುವಿನ ಪಕ್ಕದಲ್ಲೇ ನಿಂತಿದ್ದ ಆಕೆಯ ಸ್ನೇಹಿತೆಗೆ ಕೊರಳಿಗೆ ಹಾಕಿದ್ದಾನೆ. ವರನ ಈ ಎಡವಟ್ಟು ಕಂಡ ಮದುವೆಗೆ ಬಂದವರು ದಂಗಾಗಿ ಹೋಗಿದ್ದಾರೆ.

    ವರ ಹಾಗೂ ವಧು ತಮ್ಮ ಮದುವೆಗೆ ಹಾರ ಬದಲಾಯಿಸಿಕೊಳ್ಳಲು ಸ್ಟೇಜ್ ಮೇಲೆ ಬಂದರು. ಆಗ ವಧು ಪಕ್ಕದಲ್ಲಿ ಆಕೆಯ ಸ್ನೇಹಿತೆ ನಿಂತಿದ್ದು, ಆಕೆಯ ಮೇಲೆ ವರನಿಗೆ ಪ್ರೀತಿಯಾಗಿದೆ. ಹೀಗಾಗಿ ಆತ ಮಧುವಿನ ಕೊರಳಿಗೆ ಹಾರ ಹಾಕುವ ಬದಲು ಆಕೆಯ ಸ್ನೇಹಿತೆಯ ಕೊರಳಿಗೆ ಹಾಕಿದ್ದಾನೆ ಅಂತ ನೆರೆದವರು ಮಾತನಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ಘಟನೆಯಿಂದ ಅಲ್ಲಿದ್ದ ವಧು ಹಾಗೂ ಜನರು ದಂಗಾಗಿ ಹೋದ್ರೂ, ವರ ಮಾತ್ರ ತನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ನಗುತ್ತ ನಿಂತಿದ್ದನು ಎಂದು ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ವರದಿಯಾಗಿದೆ.

    ಮಾರ್ಚ್ 26, 2018ರಂದು `ಬೇಟೋ ಸೇ ಪ್ಯಾರಿ ಬೇಟಿ ಹೋತೆಯೇ’ ಎಂಬ ಫೇಸ್‍ಬುಕ್ ಪೇಜ್ ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಸದ್ಯ ಈ ವಿಡಿಯೋವನ್ನು 3,000ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ ಎಂದು ಹೇಳಲಾಗಿದೆ.