Tag: ಹಾರ್ದಿಕ್ ಪಾಂಡ್ಯ

  • ಡಿವೋರ್ಸ್ ಬಳಿಕ ಇನ್ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡ ನಟಿ ನತಾಶಾ

    ಡಿವೋರ್ಸ್ ಬಳಿಕ ಇನ್ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡ ನಟಿ ನತಾಶಾ

    ಟಿ ನತಾಶಾ ಸ್ಟಾಂಕೋವಿಕ್ (Natasa Stankovic) ಜು.18ರಂದು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardika Pandya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಖಚಿತಪಡಿಸಿದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌

    ಕಳೆದ ಎರಡು ದಿನಗಳ ಹಿಂದೆಯೇ ನತಾಶಾ ಸರ್ಬಿಯಾಗೆ ತೆರಳಿದ್ದಾರೆ. ಪ್ರೈವೆಸಿಗಾಗಿ ತಮ್ಮ ಹುಟ್ಟೂರು ಸೆರ್ಬಿಯಾದಲ್ಲಿ ಪೋಷಕರ ಜೊತೆ ಕಾಲ ಕಳೆಯುತ್ತಿದ್ದಾರೆ. ಸದ್ಯ ಪುತ್ರ ಅಗಸ್ತ್ಯ ಆಟವಾಡುತ್ತಿರುವ ವಿಡಿಯೋ ಮತ್ತು ತಮ್ಮ ವರ್ಕೌಟ್ ಫೋಟೋವನ್ನು ನತಾಶಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಡಿವೋರ್ಸ್‌ ನಂತರ ಮೊದಲ ಪೋಸ್ಟ್‌ ಇದಾಗಿದೆ.

    ಅಂದಹಾಗೆ, 4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಜೊತೆಯಾಗಿ ಇರಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಕೊನೆಗೆ ಭಿನ್ನಾಭಿಪ್ರಾಯ ಮಿತಿ ಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ ಎಂದು ನತಾಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಅವನಿಗೆ ಎಲ್ಲಾ ರೀತಿಯಲ್ಲೂ ಬೆಂಬಲವಾಗಿ ನಾವು ನಿಲ್ಲುತ್ತೇವೆ. ಈ ಕಷ್ಟಕರ ಮತ್ತು ಸೂಕ್ಷ್ಮ ಸಮಯದಲ್ಲಿ ನಮ್ಮ ಗೌಪ್ಯತೆ ಕಾಪಾಡಲು ನಾವು ಕಳಕಳಿಯಿಂದ ವಿನಂತಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಅಂದಹಾಗೆ, ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. 2023ರ ಫೆಬ್ರವರಿಯಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಪದ್ಧತಿ ಪ್ರಕಾರ ಮತ್ತೊಮ್ಮೆ ಮದುವೆಯಾದರು.

  • ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ: ಡಿವೋರ್ಸ್‌ ಖಚಿತಪಡಿಸಿದ ನತಾಶಾ

    ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ: ಡಿವೋರ್ಸ್‌ ಖಚಿತಪಡಿಸಿದ ನತಾಶಾ

    ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರೋದಾಗಿ ನಟಿ ನತಾಶಾ ಸ್ಟಾಂಕೋವಿಕ್ (Natasa Stankovic) ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಮ್ಮ ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ ಎಂದು ನಟಿ ತಿಳಿಸಿದ್ದಾರೆ. ಇದನ್ನೂ ಓದಿ:ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲಾದ ನಟಿ

    4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಜೊತೆಯಾಗಿ ಇರಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಕೊನೆಗೆ ಭಿನ್ನಾಭಿಪ್ರಾಯ ಮಿತಿ ಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ ಎಂದು ನತಾಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

     

    View this post on Instagram

     

    A post shared by @natasastankovic__

    ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಅವನಿಗೆ ಎಲ್ಲಾ ರೀತಿಯಲ್ಲೂ ಬೆಂಬಲವಾಗಿ ನಾವು ನಿಲ್ಲುತ್ತೇವೆ. ಈ ಕಷ್ಟಕರ ಮತ್ತು ಸೂಕ್ಷ್ಮ ಸಮಯದಲ್ಲಿ ನಮ್ಮ ಗೌಪ್ಯತೆ ಕಾಪಾಡಲು ನಾವು ಕಳಕಳಿಯಿಂದ ವಿನಂತಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಮೇನಲ್ಲಿ ಪಾಂಡ್ಯಾ ಹೆಸರನ್ನು ನಟಿ ತಮ್ಮ ಖಾತೆಯಿಂದ ತೆಗೆದು ಹಾಕಿದ್ದರು. ಅಲ್ಲಿಂದ ಇಬ್ಬರ ಡಿವೋರ್ಸ್ ಬಗ್ಗೆ ವದಂತಿ ಹಬ್ಬಿತ್ತು. ಆದರೆ ಈಗ ಇಬ್ಬರ ಕಡೆಯಿಂದಲೂ ದಿವೋರ್ಸ್  (Divorce) ಕುರಿತು ಅಧಿಕೃತ ಘೋಷಣೆ ಆಗಿದೆ.

    ಅಂದಹಾಗೆ, ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. 2023ರ ಫೆಬ್ರವರಿಯಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಪದ್ಧತಿ ಪ್ರಕಾರ ಮತ್ತೊಮ್ಮೆ ಮದುವೆಯಾದರು.

  • ಲಂಕಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಬಲಿಷ್ಠ ತಂಡ ಪ್ರಕಟ – ಸೂರ್ಯನಿಗೆ T20 ನಾಯಕನ ಪಟ್ಟ!

    ಲಂಕಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಬಲಿಷ್ಠ ತಂಡ ಪ್ರಕಟ – ಸೂರ್ಯನಿಗೆ T20 ನಾಯಕನ ಪಟ್ಟ!

    – ಟೀಂ ಇಂಡಿಯಾ ಏಕದಿನ ತಂಡಕ್ಕೆ ಕನ್ನಡಿಗ ಕೆ.ಎಲ್‌ ರಾಹುಲ್‌ ಕಂಬ್ಯಾಕ್‌
    – 2024ರ ಟಿ20 ವಿಶ್ವಕಪ್‌ ವಿಜೇತ ತಂಡದ ಉಪನಾಯಕ ಪಾಂಡ್ಯಗಿಲ್ಲ ಪಟ್ಟ!

    ಮುಂಬೈ: ಇದೇ ಜುಲೈ 27ರಿಂದ ಶ್ರೀಲಂಕಾ (Sri Lanka) ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಈ ಪ್ರವಾಸವು ಮೂರು ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯೂ ಆಯೋಜನೆಗೊಂಡಿದೆ.

    ಟಿ20 ತಂಡಕ್ಕೆ ಸೂರ್ಯಕುಮಾರ್​ ಯಾದವ್​​, ಏಕದಿನ ಪಂದ್ಯಕ್ಕೆ ರೋಹಿತ್‌ ಶರ್ಮಾ ನಾಯಕನಾಗಿ ಮುಂದುವರಿಸಿದ್ದಾರೆ. ಟಿ20 ವಿಶ್ವಕಪ್‌ ವಿಜೇತ ತಂಡದಲ್ಲಿ ಉಪನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ಬಿಸಿಸಿಐ ಪಟ್ಟಕಟ್ಟಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಮುಂಬರುವ ಪ್ರವಾಸವು ನೂತನ ಮುಖ್ಯಕೋಚ್‌ ಕೋಚ್​ ಗೌತಮ್ ಗಂಭೀರ್ ಅವರಿಗೆ ಮೊದಲ ಸವಾಲಾಗಿದೆ. ಈ ಸರಣಿಯೊಂದಿಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಟಿ20 ತಂಡಕ್ಕೆ ಶುಭಮನ್‌ ಗಿಲ್ ಉಪನಾಯಕರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಸರಣಿಗೆ ಲಭ್ಯರಾಗಿದ್ದಾರೆ. ಇದರೊಂದಿಗೆ ವಾಷಿಂಗ್ಟನ್ ಸುಂದರ್​, ಖಲೀಲ್​ ಅಹ್ಮದ್‌ ಸೇರಿದಂತೆ ಅನೇಕ ಯುವ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಏಕದಿನ ಸರಣಿಯಲ್ಲಿ ಕೆ.ಎಲ್‌ ರಾಹುಲ್‌ ಸೇರಿದಂತೆ ರಿಷಭ್ ಪಂತ್ ಜೊತೆಗೆ ಸಂಜು ಸ್ಯಾಮ್ಸನ್ ವಿಕೆಟ್​ ಕೀಪರ್ ಆಗಿ ಅವಕಾಶ ಪಡೆದಿದ್ದಾರೆ.

    ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ ಮರಳಿದ್ದಾರೆ. ಕೆ.ಎಲ್ ರಾಹುಲ್ ಇಲ್ಲಿ ವಿಕೆಟ್ ಕೀಪರ್ ಕೋಟಾದಲ್ಲಿ ಅವಕಾಶ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್​, ಖಲೀಲ್ ಅಹಮದ್​​ , ಹರ್ಷಿತ್​ ರಾಣಾ ಬೌಲಿಂಗ್​​ನಲ್ಲಿ ಅವಕಾಶ ಪಡೆದಿದ್ದಾರೆ. ರಿಯಾನ್ ಪರಾಗ್​ ಏಕದಿನ ಮಾದರಿಯಲ್ಲಿ ತಂಡ ಸೇರಿದ್ದಾರೆ. ಎರಡೂ ತಂಡಗಳಿಗೆ ಜಸ್‌ಪ್ರೀತ್‌ ಬುಮ್ರಾ ಅಲಭ್ಯರಾಗಿದ್ದಾರೆ. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

    ಭಾರತ ಟಿ20 ತಂಡ:
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅರ್ಷ್‌ದೀಪ್‌ ಸಿಂಗ್‌, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್.

    ಏಕದಿನ ತಂಡ:
    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್‌ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್‌ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

  • ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಮುಂಬೈ: ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ನಡೆದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಭಾರತೀಯ ಆಟಗಾರರ ಪರ ಅಭಿಮಾನಿಗಳು ಜೈಕಾರ ಕೂಗಿದರು. ಇದರಲ್ಲಿ ವಿಶೇಷ ಅನಿಸಿದ್ದು ಹಾರ್ದಿಕ್‌ ಪಾಂಡ್ಯ. ಏಕೆಂದರೆ 2024ರ ಐಪಿಎಲ್‌ ಟೂರ್ನಿ ವೇಳೆ ಇದೇ ಮೈದಾನದಲ್ಲಿ ಪಾಂಡ್ಯ ಪ್ರೇಕ್ಷಕರು ಹಾಗೂ ರೋಹಿತ್‌ ಅಭಿಮಾನಿಗಳಿಂದ ಭಾರೀ ಟೀಕೆಗೆ ಗುರಿಯಾಗಿದ್ದರು. ಅಂದು ಅವಮಾನಿಸಿದ್ದ ಜಾಗದಲ್ಲೇ ಇಂದು ಸನ್ಮಾನ ದೊರೆಯಿತು. ಟೀಕಿಸಿದ್ದ ಅಭಿಮಾನಿಗಳೇ ಜೈಕಾರ ಕೂಗಿದ್ದನ್ನು ಕಂಡು ಹಾರ್ದಿಕ್‌ ಭಾವುಕರಾದರು.

    ಹೌದು. 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಫ್ರಾಂಚೈಸಿ ಹೊಸ ನಾಯಕತ್ವ ತರಲು ಬಯಸಿತ್ತು. ಅದಕ್ಕಾಯೇ ಗುಜರಾತ್‌ ಟೈಟಾನ್ಸ್‌ ತಂಡದಿಂದ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತವರು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಟಿ20 ವಿಶ್ವಕಪ್‌ ಒತ್ತಡವನ್ನೂ ನಿಭಾಯಿಸಬೇಕಿದ್ದ ಕಾರಣ,‌ 5 ಬಾರಿ ಚಾಂಪಿಯನ್‌ ಪಟ್ಟ ಗೆದ್ದುಕೊಟ್ಟ ರೋಹಿತ್‌ ಶರ್ಮಾರನ್ನು ಬಿಟ್ಟು ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ನೀಡಲಾಯಿತು. ಆದ್ರೆ ನಾಯಕತ್ವದ ಹೊಣೆ ಹೊತ್ತ ಭರದಲ್ಲಿ ಹಾರ್ದಿಕ್‌ ಪಾಂಡ್ಯ ಅವರು ಫೀಲ್ಡ್‌ನಲ್ಲಿ ರೋಹಿತ್‌ರನ್ನು ನಡೆಸಿಕೊಂಡ ರೀತಿ ಭಾರೀ ಟೀಕೆಗೆ ಗುರಿಯಾಗುವಂತೆ ಮಾಡಿತ್ತು.

    ಒಂದೊಮ್ಮೆ ಪಂದ್ಯದ ಮಧ್ಯದಲ್ಲೇ ನಾಯಿಯೊಂದು ಮೈದಾನ ಪ್ರವೇಶಿಸಿತ್ತು, ಈ ವೇಳೆ ಪ್ರೇಕ್ಷಕರು ಅದನ್ನು ಹಾರ್ದಿಕ್‌, ಹಾರ್ದಿಕ್‌ ಎಂದು ಕೂಗಿ ಅವಮಾನಿಸಿದ್ದರು. ಇದ್ಯಾ‌ವುದಕ್ಕೂ ಕುಗ್ಗದ ಪಾಂಡ್ಯ ತಮ್ಮ ಪ್ರದರ್ಶನ ಮುಂದುವರಿಸಿದರು. ಆದ್ರೆ ಸತತ ಸೋಲುಗಳಿಂದಾಗಿ ಮುಂಬೈ ತಂಡ ಲೀಗ್‌ ಸುತ್ತಿನಲ್ಲಿ ಹೊರಬಿದ್ದಿತು. ಇದರಿಂದ ಪಾಂಡ್ಯ ನಾಯಕತ್ವದ ಬಗ್ಗೆಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಇಂದು ಅದೇ ಮೈದಾನದಲ್ಲಿ ಪಾಂಡ್ಯ ಸನ್ಮಾನ ಸ್ವೀಕರಿಸಿದ್ದಾರೆ.

    ಟಿ20 ವಿಶ್ವಕಪ್‌ ಟೂರ್ನಿಯ ಅಂತಿಮ ಓವರ್‌ನಲ್ಲಿ ಪಾಂಡ್ಯ ಅವರ ಚಾಣಾಕ್ಷ ಬೌಲಿಂಗ್‌ ಭಾರತಕ್ಕೆ ಗೆಲುವು ತಂದುಕೊಟ್ಟಿತು. ನಿರ್ಣಾಯಕ ಸಮಯದಲ್ಲಿ ಹೆನ್ರಿಕ್‌ ಕ್ಲಾಸೆನ್‌, ಡೇವಿಡ್‌ ಮಿಲ್ಲರ್‌ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ಹೀಗಾಗಿ ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಪಾಂಡ್ಯ ಅವರ ಜೀವನವು ಅನೇಕ ರೀತಿಯಲ್ಲಿ ಬದಲಾವಣೆ ಕಂಡಿತು.

    ಕಠಿಣ ದಿನಗಳನ್ನು ನೆನಪಿಸಿಕೊಂಡ ಪಾಂಡ್ಯ
    ಪಂದ್ಯದ ಬಳಿಕ ಮಾತನಾಡಿದ್ದ ಪಾಂಡ್ಯ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದರು. ಇದು ತುಂಬಾ ಭಾವನಾತ್ಮಕ ಕ್ಷಣ. ನಾವು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಇಂದು ಇಡೀ ರಾಷ್ಟ್ರವು ಬಯಸಿದ್ದನ್ನ ನಾವು ಪೂರೈಸಿದ್ದೇವೆ. ಇದು ನನಗೆ ಹೆಚ್ಚು ವಿಶೇಷವಾಗಿದೆ. ಏಕೆಂದರೆ ನನ್ನ ಕೊನೆಯ 6 ತಿಂಗಳು ಕಷ್ಟಕರವಾಗಿದ್ದವು ಎಂದು ನೆನಪಿಸಿಕೊಂಡು ಕಣ್ಣೀರಿಟ್ಟಿದ್ದರು.

  • ಪಾಂಡ್ಯ ಪರಾಕ್ರಮ, ಹಿಟ್‌ಮ್ಯಾನ್‌ ಪವರ್‌ ಫುಲ್‌ ಬ್ಯಾಟಿಂಗ್‌ – T20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ!

    ಪಾಂಡ್ಯ ಪರಾಕ್ರಮ, ಹಿಟ್‌ಮ್ಯಾನ್‌ ಪವರ್‌ ಫುಲ್‌ ಬ್ಯಾಟಿಂಗ್‌ – T20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ!

    ನ್ಯೂಯಾರ್ಕ್‌: ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಭಾರತ (Team India) ಶುಭಾರಂಭ ಕಂಡಿದೆ. ಐರ್ಲೆಂಡ್‌ ವಿರುದ್ಧ ನಡೆದ ಆರಂಭಿಕ ಪಂದ್ಯದಲ್ಲೇ ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಬೌಲಿಂಗ್‌ ಕಮಾಲ್‌, ರೋಹಿತ್‌ ಶರ್ಮಾ ಅವರ ಬ್ಯಾಟಿಂಗ್‌ ನೆರವಿನಿಂದ ಐರ್ಲೆಂಡ್‌ ವಿರುದ್ಧ ಟೀಂ ಇಂಡಿಯಾ 8 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್‌ ತಂಡ 20 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಟೀಂ ಇಂಡಿಯಾ 12.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿ ಗೆದ್ದು ಬೀಗಿತು.

    ಚೇಸಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಹಾಗೂ ವಿರಾಟ್‌ ಕೊಹ್ಲಿ ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ವಿರಾಟ್‌ ಕೇವಲ 1 ರನ್‌ ಗಳಿಸಿ ಔಟಾದರು. ಬಳಿಕ ಜೊತೆಗೂಡಿದ ರಿಷಭ್‌ ಪಂತ್‌ ಹಾಗೂ ಸೂರ್ಯಕುಮಾರ್‌ ಜೋಡಿ ತಾಳ್ಮೆಯ ಆಟವಾಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ನಾಯಕ ರೋಹಿತ್‌ ಶರ್ಮಾ 52 ರನ್‌ (37 ಎಸೆತ, 3 ಸಿಕ್ಸರ್‌, 4 ಬೌಂಡರಿ) ಚಚ್ಚಿದರೆ, ರಿಷಭ್‌ ಪಂತ್‌ 36 ರನ್‌, ಸೂರ್ಯಕುಮಾರ್‌ ಯಾದವ್‌ 2 ರನ್‌ ಗಳಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಐರ್ಲೆಂಡ್‌ ತಂಡ ಟೀಂ ಇಂಡಿಯಾ, ಬೌಲರ್‌ಗಳ ದಾಳಿಗೆ ರನ್‌ ಕಲೆಹಾಕಲು ತಿಣುಕಾಡಿತ್ತು. ಮಾರಕ ದಾಳಿಗೆ ತತ್ತರಿಸಿದ ಐರ್ಲೆಂಡ್‌ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಆರಂಭದಿಂದಲೇ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನೂ ಓದಿ: T20 World Cup: ಸ್ಕಾಟ್‌ಲೆಂಡ್‌ ಬಳಿಕ ಐರ್ಲೆಂಡ್‌ ಜೆರ್ಸಿಯಲ್ಲಿ ಮಿಂಚಿದ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌!

    ಗರೆಥ್ ಡೆಲಾನಿ 26 ರನ್‌, ಜೋಶ್ ಲಿಟಲ್ 14 ರನ್‌, ಕರ್ಟಿಸ್ ಕ್ಯಾಂಫರ್ 12 ರನ್‌, ಲೋರ್ಕನ್ ಟಕರ್ 10 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಎರಡಂಕಿಯ ಮೊತ್ತವನ್ನೂ ಗಳಿಸರ ಪರಿಣಾಮ ಐರ್ಲೆಂಡ್‌ ಅಲ್ಪ ಮೊತ್ತಕ್ಕೆ ಆಲೌಟ್‌ ಆಗಿ ಸೋಲು ಎದುರಿಸಬೇಕಾಯಿತು. ಇದನ್ನೂ ಓದಿ: ವಿಶ್ವದ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್‌ಗೆ ಸೋಲುಣಿಸಿದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ!

    ಪಾಂಡ್ಯ ಭರ್ಜರಿ ಕಂಬ್ಯಾಕ್‌:
    2024ರ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಬೌಲಿಂಗ್‌ ಪ್ರದರ್ಶನದಿಂದ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್‌ ಪಾಂಡ್ಯ ಟಿ20 ವಿಶ್ವಕಪ್‌ ಆರಂಭಿಕ ಪಂದ್ಯದಲ್ಲೇ ಭರ್ಜರಿ ಕಂಬ್ಯಾಕ್‌ ಮಾಡಿದ್ದಾರೆ. 4 ಓವರ್‌ಗಳಲ್ಲಿ 27 ರನ್‌ ಬಿಟ್ಟುಕೊಟ್ಟ ಪಾಂಡ್ಯ 3 ಪ್ರಮುಖ ವಿಕೆಟ್‌ ಪಡೆದಿದ್ದಾರೆ. ಇನ್ನೂ ಜಸ್ಪ್ರೀತ್‌ ಬುಮ್ರಾ, ಹರ್ಷ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಸಿರಾಜ್‌ ಮತ್ತು ಅಕ್ಷರ್‌ ಪಟೇಲ್‌ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

  • ಪಾಂಡ್ಯ ಜೊತೆ ಏನಿಲ್ಲ, ಏನೇನಿಲ್ಲ: ಡಿವೋರ್ಸ್ ವಿಚಾರ ವಾಪಸ್ಸು ಪಡೆದ ಪಾಂಡ್ಯ ಪತ್ನಿ

    ಪಾಂಡ್ಯ ಜೊತೆ ಏನಿಲ್ಲ, ಏನೇನಿಲ್ಲ: ಡಿವೋರ್ಸ್ ವಿಚಾರ ವಾಪಸ್ಸು ಪಡೆದ ಪಾಂಡ್ಯ ಪತ್ನಿ

    ತ್ತೀಚೆಗೆ ಕ್ರಿಕೆಟ್ (Cricket) ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಸುದ್ದಿ ಅಂದ್ರೆ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ (Hardik Pandya) ದಾಂಪತ್ಯ ಜೀವನ ಮುರಿದ ಬೀಳುವ ಹಂತದಲ್ಲಿದ್ದ ಸಂಗತಿ. ಈ ಬಗ್ಗೆ ಹಾರ್ದಿಕ್ ಆಗಲಿ ಪತ್ನಿ ನತಾಶಾ (Natasha) ಆಗಲಿ ಯಾವ ವಿಚಾರವನ್ನೂ ಬಾಯ್ಬಿಟ್ಟು ಹೇಳದಿದ್ದರೂ ದಂಪತಿ ನಡವಳಿಕೆ, ಇನ್ಸ್ಟಾದಲ್ಲಿ ಹಾಕುತ್ತಿದ್ದ ಸ್ಟೋರಿಸ್ ಈ ಬಗ್ಗೆ ಸುಳಿವು ನೀಡಿತ್ತು. ಇದರಲ್ಲೂ ವಿಚ್ಛೇದನದ ಪರಿಹಾರವಾಗಿ ನತಾಶಾ, ಪತಿ ಹಾರ್ದಿಕ್ ಪಾಂಡ್ಯ ಆಸ್ತಿಯ ಶೇಕಡಾ 70ರಷ್ಟು ಭಾಗ ಕೇಳಿದ್ದಾರೆ ಅನ್ನೋ ವದಂತಿಯಂತೂ ಪಾಂಡ್ಯ ಅಭಿಮಾನಿಗಳನ್ನ ರೊಚ್ಚಿಗೇಳುವಂತೆ ಮಾಡಿತ್ತು. ಆದರೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಪಾಂಡ್ಯ ಫ್ಯಾನ್ಸ್ ನಿಟ್ಟುಸಿರು ಬಿಡುವಂತಹ ಬೆಳವಣಿಗೆಯಾಗಿದೆ.

    ಇನ್ನೇನು ಹಾರ್ದಿಕ್ ಪಾಂಡ್ಯ- ನತಾಶಾ ದೂರಾಗೇಬಿಟ್ಟರು ಎನ್ನುವ ವೇಳೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದಂಪತಿ ಮುನಿಸು ಮರೆತು ಒಂದಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಹೌದು ಎನ್ನುವಂತೆ ನತಾಶಾ ಸೋಷಿಯಲ್ ಮೀಡಿಯಾ ಖಾತೆಯಿಂದ ಡಿಲೀಟ್ ಮಾಡಿದ್ದ ಮದುವೆ ಫೋಟೋಗಳನ್ನ ಹಿಂಪಡೆದಿದ್ದಾರೆ. ಇತ್ತೀಚೆಗೆ ಮಾಧ್ಯಮದ ಮುಂದೆ ನತಾಶಾ ಕಾಣಿಸ್ಕೊಂಡಾಗ ಡಿವೋರ್ಸ್ ಬಗ್ಗೆ ಪ್ರಶ್ನೆ ಎದುರಾಗಿದ್ದರೂ ಏನನ್ನೂ ಹೇಳದೆ ಮುಂದೆ ಸಾಗಿದ್ದರು. ಅವರೊಟ್ಟಿಗೆ ಜಿಮ್ ಟ್ರೈನರ್ ಕೂಡ ಇದ್ರು. ಅವರನ್ನೇ ನತಾಶಾಳ ಹೊಸ ಬಾಯ್‌ಫ್ರೆಂಡ್ ಎಂದು ಅನುಮಾನಪಡಲಾಗಿತ್ತು. ಆದರೆ ನತಾಶಾ ನಡೆಗೆ ತೀವ್ರ ವಿರೋಧ ಬಂದ ಹಿನ್ನೆಲೆ ಹಾಗೂ ಮಗುವಿನ ಭವಿಷ್ಯಕ್ಕಾಗಿ ವಿಚ್ಛೇದನ ನಿರ್ಧಾರ ಹಿಂದಪಡೆದಿದ್ದಾರೆ ದಂಪತಿ ಎನ್ನಲಾಗುತ್ತಿದೆ.

    ಸೆರ್ಬಿಯನ್ ಮೂಲದ ಡಾನ್ಸರ್ ಕಂ ಮಾಡೆಲ್ ಆಗಿದ್ದ ನತಾಶಾ ಬಾಲಿವುಡ್‌ನಲ್ಲಿ ಗುರುತಿಸಿಕೊಂಡಿದ್ದರು. ಕನ್ನಡದ ದನಕಾಯೋನು ಚಿತ್ರದ ಹಾಡೊಂದಕ್ಕೂ ಹೆಜ್ಜೆ ಹಾಕಿದ್ದರು. ಹೀಗೆ ಸಿನಿಮಾರಂಗದಲ್ಲಿದ್ದಾಗಲೇ ಹಾರ್ದಿಕ್ ಪಾಂಡ್ಯ ಜೊತೆ ಪರಿಚಯ ಪ್ರೀತಿ ಬೆಳದಿತ್ತು. ಇಬ್ಬರೂ ಸಹಜೀವನ ನಡೆಸಿ ಮಗುವನ್ನೂ ಪಡೆದುಕೊಂಡ್ರು. ಈ ದಂಪತಿಗೆ ಅಗಸ್ತ್ಯ  ಹೆಸರಿನ ನಾಲ್ಕು ವರ್ಷದ ಗಂಡು ಮಗುವಿದೆ. ಮಗನಿಗೆ ಎರಡು ವರ್ಷವಿದ್ದಾಗ ಮಗುವಿನ ಮುಂದೇ ಈ ದಂಪತಿ ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರ್ತಾರೆ. ನಟ ಯಶ್ ಸೇರಿ ಹಲವು ಬಾಲಿವುಡ್ ನಟ ನಟಿಯರು ಕ್ರಿಕೆಟ್ ತಾರೆಯರೂ ಅದ್ದೂರಿ ಮದುವೆಗೆ ಸಾಕ್ಷಿಯಾಗಿರ್ತಾರೆ. ಹೀಗೆ ವೈಯಕ್ತಿಕ ಜೀವನದಿಂದ ಈ ಜೋಡಿ ಬಹಳವೇ ಚರ್ಚೆಯಲ್ಲಿರುತ್ತೆ. ಹಾರ್ದಿಕ್ ಕುಟುಂಬದ ಜೊತೆ ನತಾಶಾ ಹೊಂದಿಕೊಂಡು ಕೂಡಿ ಬಾಳುವ ವಿಚಾರವನ್ನು ಇನ್ಸ್ಟಾದಲ್ಲಿ ದಂಪತಿ ಅಪ್‌ಲೋಡ್ ಮಾಡುತ್ತಿದ್ದ ಫೋಟೋಗಳು ಸಾಕ್ಷಿ ಹೇಳುತ್ತಿದ್ದವು. ಈ ನಡುವೆಯೇ ದಿಢೀರ್ ಎಂದು ವಿಚ್ಛೇದನದ ಸುದ್ದಿ ತೂರಿಬಂತು. ಇದೀಗ ವಿಚ್ಛೇದನ ಕೈಬಿಟ್ಟಿರುವ ವಿಚಾರವೂ ಚರ್ಚೆಯಾಗುತ್ತಿದೆ..

  • ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಮುಂಬೈ: ಟೀಂ ಇಂಡಿಯಾದ (Team India) ಖ್ಯಾತ ಆಲ್‌ರೌಂಡರ್‌, ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಎಲ್ಲಿದ್ದಾರೆ ಎಂಬ ಪ್ರಶ್ನೆ ಈಗ ಜೋರಾಗಿ ಚರ್ಚೆ ಆಗುತ್ತಿದೆ.

    ಟೀಂ ಇಂಡಿಯಾದ ಮೊದಲ ಬ್ಯಾಚ್‌ ಈಗಾಗಲೇ ಅಮೆರಿಕದ ವಿಮಾನವನ್ನು ಹತ್ತಿದೆ. ಈ ವಿಮಾನವನ್ನು ಹಾರ್ದಿಕ್‌ ಪಾಂಡ್ಯ ಹತ್ತಬೇಕಿತ್ತು. ಆದರೆ ಈ ಬ್ಯಾಚ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಕಾಣಿಸದ ಕಾರಣ ಎಲ್ಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.

    ಸರ್ಬಿಯಾ ಮೂಲದ ಮಾಡೆಲ್‌, ನಟಿ ನತಾಶಾ ಸ್ಟಾಂಕೋವಿಕ್‌ (Natasa Stankovic) ಡೈವೋರ್ಸ್‌ ವರದಿ ಬೆನ್ನಲ್ಲೇ ಹಾರ್ದಿಕ್‌ ಪಾಂಡ್ಯ ಎಲ್ಲಿಯೂ ಕಾಣಿಸುತ್ತಿಲ್ಲ.

    ಮುಂಬೈ ಇಂಡಿಯನ್ಸ್‌ (Mumbai Indians) ತಂಡ ಲೀಗ್‌ನಲ್ಲೇ ಐಪಿಎಲ್‌ನಿಂದ (IPL) ಹೊರ ಬಿದ್ದ ಕಾರಣ ಬಿಸಿಸಿಐ (BCCI) ನಿಯಮದ ಪ್ರಕಾರ ಮೊದಲ ಬ್ಯಾಚ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಅಮೆರಿಕದ ನ್ಯೂಯಾರ್ಕ್‌ಗೆ ತೆರಳಬೇಕಿತ್ತು. ಮಂಬೈ ಇಂಡಿಯನ್ಸ್‌ ಆಟಗಾರರಾರದ ರೋಹಿತ್‌ ಶರ್ಮಾ (Rohit Sharma), ಜಸ್‌ಪ್ರೀತ್‌ ಬುಮ್ರಾ, ಸೂರ್ಯಕುಮಾರ್‌ ಯಾದವ್‌ ಅವರು ಈಗಾಗಲೇ ತೆರಳಿದ್ದಾರೆ.

    ಪಾಂಡ್ಯ ಗೈರು ಹಾಜರಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೊದಲನೇಯದಾಗಿ ಪಾಂಡ್ಯ ಕೇವಲ ಆಟಗಾರ ಮಾತ್ರವಲ್ಲ ಅವರು ಉಪನಾಯಕನಾಗಿದ್ದಾರೆ. ಹೀಗಾಗಿ ನಾಯಕ ರೋಹಿತ್‌ ಶರ್ಮಾ, ಕೋಚ್‌ ದ್ರಾವಿಡ್‌, ಬ್ಯಾಟಿಂಗ್‌ ಕೋಚ್‌ ವಿಕ್ರಂ ರಾಥೋರ್‌ ಜೊತೆ ಪ್ರಯಾಣ ಬೆಳೆಸಬೇಕಿತ್ತು. ಇದನ್ನೂ ಓದಿ: Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

    ಎರಡನೇಯದ್ದಾಗಿ ನತಾಶಾ ಸ್ಟಾಂಕೋವಿಕ್‌ ಡೈವೋರ್ಸ್‌ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗುತ್ತಿದೆ. ಈ ಪೈಕಿ ಪಾಂಡ್ಯ ಅವರ ಆಸ್ತಿಯ 70% ಪಾಲನ್ನು ನತಾಶಾಗೆ ನೀಡಬೇಕು ಎಂಬ ವಿಚಾರ ಹರಿದಾಡುತ್ತಿದೆ. ಈ ಮಧ್ಯೆ ನತಾಶಾ ಅವರು ಇನ್‌ಸ್ಟಾದಲ್ಲಿ “ಯಾರೋ ಒಬ್ಬರು ಬೀದಿಗೆ ಬರಲಿದ್ದಾರೆ” ಎಂದು ಸ್ಟೋರಿ ಪೋಸ್ಟ್‌ ಮಾಡಿದ್ದಾರೆ. ಈ ಕಾರಣಕ್ಕೆ ಪಾಂಡ್ಯ ಗೈರು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

    ಹಾರ್ದಿಕ್‌ ಪಾಂಡ್ಯ ಗೈರಿನ ಬಗ್ಗೆ ಬಿಸಿಸಿಐ ಆಗಲಿ ಅಥವಾ ಹಾರ್ದಿಕ್‌ ಪಾಂಡ್ಯ ಇಲ್ಲಿಯವರೆಗೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

     

  • Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

    Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

    ಮುಂಬೈ: 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಅವರು ಇಡೀ ತಂಡದ ಕಳಪೆ ಪ್ರದರ್ಶನದಿಂದ ಸೋಲಿನೊಂದಿಗೆ ಆವೃತ್ತಿಗೆ ವಿದಾಯ ಹೇಳಿದ್ದರು. ಇದೀಗ ವೈಯಕ್ತಿಕ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಹಾರ್ದಿಕ್‌ ಪಾಂಡ್ಯ ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್‌ಗೆ ವಿಚ್ಛೇದನ ನೀಡುವುದು ಬಹುತೇಕ ಖಚಿತವಾಗಿದೆ. ಅಧಿಕೃತ ಘೊಷಣೆಯೊಂದೇ ಬಾಕಿಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾರ್ದಿಕ್‌ ಪಾಂಡ್ಯ ಅವರು ಪತ್ನಿಗೆ ವಿಚ್ಛೇದನ (Divorce) ನೀಡಿದ್ದೇ ಆದಲ್ಲಿ ಅವರ 70% ಆಸ್ತಿ ಪತ್ನಿ ನತಾಶಾಗೆ ಸೇರಲಿದೆ ಎಂದು ವರದಿಯಾಗಿದೆ.

    ಪಾಂಡ್ಯ ಮತ್ತು ನತಾಶಾ ದೀರ್ಘಕಾಲದಿಂದ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇಬ್ಬರೂ ಕೊನೆಯದ್ದಾಗಿ ಫೆ.14ರಂದು ಇನ್‌ಸ್ಟಾದಲ್ಲಿ ಫೋಟೋವೊಂದನ್ನ ಹಂಚಿಕೊಂಡಿದ್ದರು. ಇದಾದ ನಂತರ ಇಬ್ಬರೂ ಅಂತರ ಕಾಯ್ದುಕೊಂಡಿದ್ದರು. ಕಳೆದ ಮಾರ್ಚ್‌ 4 ರಂದು ನತಾಶಾ ಅವರ ಹುಟ್ಟುಹಬ್ಬದ ದಿನವೂ ಪಾಂಡ್ಯ ಒಂದು ಸ್ಟೇಟಸ್‌ ಸಹ ಹಂಚಿಕೊಂಡಿರಲಿಲ್ಲ. ಜೊತೆಗೆ ಪಾಂಡ್ಯ ಅವರ ನಾಯಕತ್ವದಲ್ಲಿ ನಡೆದ ಯಾವುದೇ ಪಂದ್ಯ ನೋಡುವುದಕ್ಕೂ ನತಾಶಾ (Natasa Stankovic) ಸ್ಟೇಡಿಯಂಗಳಿಗೆ ಬರಲಿಲ್ಲ. ಸರ್ಬಿಯಾದ ಮಾಡೆಲ್‌ ಸಹ ಆಗಿದ್ದ ಸ್ಟಾಂಕೋವಿಕ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ʻಪಾಂಡ್ಯʼ ಉಮನಾಮ ತೆಗೆದುಹಾಕಿ ನತಾಶಾ ಸ್ಟಾಂಕೋವಿಕ್ ಎಂದು ಬದಲಾಯಿಸಿಕೊಂಡಿದ್ದಾರೆ. ಹೀಗಾಗಿ ಇವರಿಬ್ಬರ ವಿಚ್ಛೇದನ ಖಚಿತವಾಗಿದೆ ಎಂಬ ವದಂತಿಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

    70% ಆಸ್ತಿ ನತಾಶಾ ಪಾಲು:
    ವದಂತಿಗಳ ಪ್ರಕಾರ ಪಾಂಡ್ಯ ಅವರು ಪತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶ ಕಾರಣದಿಂದ 70% ಆಸ್ತಿಯನ್ನು ನತಾಶಾಗೆ ನೀಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾರ್ದಿಕ್‌ ಪಾಂಡ್ಯ ಒಟ್ಟಾರೆ 165 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಮುಂಬೈನಲ್ಲಿ 30 ಕೋಟಿ ರೂ.ಗೆ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದರೊಂದಿಗೆ ಅವರು ವಡೋದರಾದಲ್ಲಿ ದುಬಾರಿ ಬೆಲೆಯ ವಿಲ್ಲಾ ಹೊಂದಿದ್ದಾರೆ. ವಿಚ್ಛೇದನ ಪಡೆದರೆ ಅವರು 70% ಆಸ್ತಿಯನ್ನು (70% Property) ಪತ್ನಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ ಈ ಬಗ್ಗೆ ಹಾರ್ದಿಕ್ ಅಥವಾ ಅವರ ಪತ್ನಿ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

    ಸೋಷಿಯಲ್‌ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ:
    ಹಾರ್ದಿಕ್‌ ಪಾಂಡ್ಯ ಅವರ ವಿಚ್ಛೇದಿತ ವಿಷಯ ಬೆಳಕಿಗೆ ಬರುತ್ತಿದ್ದಂತೆ ಎಕ್ಸ್‌ ಜಾಲತಾಣದಲ್ಲಿ ಪರ ವಿರೋಧಗಳು ಚರ್ಚೆಯಾಗುತ್ತಿವೆ. ಕೆಲವರು ಹಾರ್ದಿಕ್‌ ಪಾಂಡ್ಯ ಪರ ಬ್ಯಾಟ್‌ ಬೀಸಿದ್ದು, ಪುರುಷರಿಗಾಗಿ ನಮ್ಮ ಸಮಾಜದ ನಿಯಮಗಳು ಯಾವಾಗಲೂ ಕಠಿಣವಾಗಿರುತ್ತವೆ ಎಂದು ಹೇಳಿದ್ದಾರೆ. ಮತ್ತೊಬ್ಬರು ʻಹಾರ್ದಿಕ್‌ ಬ್ರೋ ನೀವು ಈಗಲೇ ಎಲ್ಲಾ ಆಸ್ತಿಯನ್ನು ನಿಮ್ಮ ತಾಯಿ ಹೆಸರಿಗೆ ವರ್ಗಾವಣೆ ಮಾಡಿಬಿಡಿʼ ಎಂಬ ಸಲಹೆಯನ್ನೂ ನೀಡಿದ್ದಾರೆ.

    ಹಾರ್ದಿಕ್ ಪಾಂಡ್ಯ ಅವರು 2020ರ ಜನವರಿ 20 ರಂದು ತಮ್ಮ ವಿಹಾರ ನೌಕೆಯಲ್ಲಿ ನತಾಶಾಗೆ ಪ್ರಪೋಸ್‌ ಮಾಡಿದ್ದರು. ಮೊದಲ ಮಗುವಿನ ನಂತರ ಪ್ರೇಮಿಗಳ ದಿನದಂದು ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

  • ಸನ್‌ ರೈಸರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಮುಂಬೈ; ತನ್ನನ್ನೇ ಹೊಗಳಿಕೊಂಡ ಪಾಂಡ್ಯ!

    ಸನ್‌ ರೈಸರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಮುಂಬೈ; ತನ್ನನ್ನೇ ಹೊಗಳಿಕೊಂಡ ಪಾಂಡ್ಯ!

    ಮುಂಬೈ: ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸುವ ಮೂಲಕ ತನ್ನ ಸೇಡು ತೀರಿಸಿಕೊಂಡಿತು. ಆದ್ರೆ ಪಂದ್ಯದ ಬಳಿಕ ಮಾತನಾಡಿದ ಹಾರ್ದಿಕ್‌ ಪಾಂಡ್ಯ (Hardik Pandya) ತಮ್ಮ ಬೌಲಿಂಗ್‌ ಪ್ರದರ್ಶನದ ಬಗ್ಗೆ ಹೊಗಳಿಕೊಂಡಿದ್ದಾರೆ.

    ಪಂದ್ಯದ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಪಾಂಡ್ಯ, ನಾವು ಉತ್ತಮ ಕ್ರಿಕೆಟ್‌ ಆಡುವತ್ತ ಗಮನ ಹರಿಸಲು ಬಯಸುತ್ತೇವೆ. ಈ ಪಂದ್ಯದಲ್ಲಿ 10-15 ರನ್‌ ಹೆಚ್ಚುವರಿ ನೀಡಿದ್ದೇವೆ ಅನ್ನಿಸುತ್ತೆ. ಆದ್ರೆ ಅದಕ್ಕೆ ಪ್ರತಿಯಾಗಿ ನಮ್ಮ ಬ್ಯಾಟರ್ಸ್‌ಗಳು ಅಬ್ಬರಿಸಿದ ರೀತಿ ಅತ್ಯುತ್ತಮವಾಗಿತ್ತು. ನನ್ನ ಬೌಲಿಂಗ್‌ (Bowling) ಕೂಡ ಉತ್ತಮವಾಗಿತ್ತು. ಪರಿಸ್ಥಿತಿಗೆ ತಕ್ಕಂತೆ ಬೌಲಿಂಗ್‌ ಮಾಡಿದೆ, ಇದು ತಂಡಕ್ಕೆ ಅನುಕೂಲವಾಯಿತು. ಇದೇ ವೇಳೆ ಮತ್ತೊಂದು ಹಾದಿಯಿಂದ ಪಿಯೂಷ್‌ ಚಾವ್ಲಾ (Piyush Chawla), ಸ್ಪಿನ್‌ ದಾಳಿಗೆ ಮುಂದಾದರು. ಅವರ ಬೌಲಿಂಗ್‌ ಸಹ ನಿಖರವಾಗಿತ್ತು ಎಂದು ಹೇಳಿದ್ದಾರೆ. ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ 4 ಓವರ್‌ಗಳಲ್ಲಿ 31 ರನ್‌ ಬಿಟ್ಟುಕೊಟ್ಟ ಹಾರ್ದಿಕ್‌ ಪಾಂಡ್ಯ 3 ವಿಕೆಟ್‌ ಕಿತ್ತರು.

    ನಂತರ ಸೂರ್ಯಕುಮಾರ್‌ ಯಾದವ್‌ (Suryakumar Yadav) ಶತಕದ ಕುರಿತು ಮಾತನಾಡಿದ ಪಾಂಡ್ಯ, ನಿಜಕ್ಕೂ ಸೂರ್ಯ ಅವರ ಬ್ಯಾಟಿಂಗ್‌ ನಂಬಲು ಅಸಾಧ್ಯವಾಗಿತ್ತು. ಎದುರಾಳಿ ಬೌಲರ್‌ಗಳ ಮೇಲೆ ಹೆಚ್ಚು ಒತ್ತಡ ಹೇರಿದ್ದರು. ವಿಭಿನ್ನ ರೀತಿಯಲ್ಲಿ ಆಡುವ ಅವರ ಆಟದಿಂದ ತಂಡಕ್ಕೆ ಹೆಚ್ಚು ಅನುಕೂಲವಾಗಿದೆ. ಅವರು ನಮ್ಮ ತಂಡದಲ್ಲಿರೋದು ನಮ್ಮ ಅದೃಷ್ಟ ಎಂದು ಹಾಡಿಹೊಗಳಿದ್ದಾರೆ.

    ಸೇಡು ತೀರಿಸಿಕೊಂಡ ಪಾಂಡ್ಯ ಪಡೆ:
    ಇದೇ ಐಪಿಎಲ್‌ ಆವೃತ್ತಿಯ 8ನೇ ಪಂದ್ಯದಲ್ಲಿ ಹೈದರಾಬಾದ್‌ ತಂಡ ಮುಂಬೈ ವಿರುದ್ಧ ದಾಖಲೆಯ 277 ರನ್‌ ಚಚ್ಚಿತ್ತು. ಈ ಪಂದ್ಯದಲ್ಲಿ 246 ರನ್‌ಗಳನ್ನು ಸಿಡಿಸಿದ್ದ ಮುಂಬೈ 31 ರನ್‌ಗಳ ಅಂತರದಿಂದ ಸೋತಿತ್ತು. ಅಂದು ಹೈದರಾಬಾದ್‌ ತವರಿನಲ್ಲಿ ಸೋತಿದ್ದ ಮುಂಬೈ, ತನ್ನ ತವರು ಕ್ರೀಡಾಂಗಣದಲ್ಲಿ ಗೆದ್ದು ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

    ಸೋಮವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 8 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳಲ್ಲಿ 173 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಮುಂಬೈ 17.2 ಓವರ್‌ಗಳಲ್ಲೇ 174 ರನ್‌ ಸಿಡಿಸಿ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ಶತಕ ವೀರ ಸೂರ್ಯ:
    ಹೈದರಾಬಾದ್‌ ತಂಡದ ವಿರುದ್ಧ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದ ಸೂರ್ಯಕುಮಾರ್‌ ಯಾದವ್‌, ಸನ್‌ರೈಸರ್ಸ್‌ ಬೌಲರ್‌ಗಳನ್ನು ಚಚ್ಚಿ ಚಿಂದಿ ಮಾಡಿದರು. ಮೊದಲ 30 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಸ್ಕೈ, ಮುಂದಿನ 21 ಎಸೆತಗಳಲ್ಲಿ 50 ರನ್‌ ಸಿಡಿಸುವ ಮೂಲಕ ಸ್ಫೋಟಕ ಶತಕ ದಾಖಲಿಸಿದರು. ಇದು ಸೂರ್ಯಕುಮಾರ್‌ ಅವರ 2ನೇ ಐಪಿಎಲ್‌ ಶತಕವೂ ಆಗಿದೆ. 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ ಒಟ್ಟು 51 ಎಸೆತಗಳಲ್ಲಿ 102 ರನ್‌ ಚಚ್ಚಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು.

  • ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ನವದೆಹಲಿ: ಕೊನೆಯವರೆಗೂ ಜಿದ್ದಾ-ಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ವಾಂಖೆಡೆ ಮೈದಾನದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 257 ರನ್‌ ಬಾರಿಸಿತ್ತು. 258 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿ 10 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಗಿದೆ.

    ಕೊನೇ ಓವರ್‌ನಲ್ಲಿ ಕೈತಪ್ಪಿದ ಗೆಲುವು:
    ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 25 ರನ್‌ಗಳ ಅಗತ್ಯವಿತ್ತು. ಮುಕೇಶ್‌ ಕುಮಾರ್‌ ಬೌಲಿಂಗ್‌ ವೇಳೆ ತಿಲಕ್‌ ವರ್ಮಾ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲಿ 2 ರನ್‌ ಕದಿಯಲು ಯತ್ನಿಸಿ ತಿಲಕ್‌ ರನೌಟ್‌ಗೆ ತುತ್ತಾದರು. ಇದರೊಂದಿಗೆ ಮುಂಬೈ ತಂಡದ ಗೆಲುವಿನ ಕನಸೂ ಭಗ್ನವಾಯಿತು. ಕೊನೆಯವರೆಗೂ ಹೋರಾಡಿದ ಮುಂಬೈ 247 ರನ್‌ ಗಳಿಸಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಮಾಜಿ ನಾಯಕ ರೋಹಿತ್‌ ಶರ್ಮಾ 8 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿದರು, ಈ ಬೆನ್ನಲ್ಲೇ 20 ರನ್‌ ಗಳಿಸಿ ಇಶಾನ್‌ ಕಿಶನ್‌ ಸಹ ಪೆವಿಲಿಯನ್‌ಗೆ ಮರಳಿದರು. ನಂತರ ಸ್ಪೋಟಕ ಬ್ಯಾಟಿಂಗ್‌ ಆರಂಭಿಸಿದ್ದ ಸೂರ್ಯಕುಮಾರ್‌ ಯಾದವ್‌ 13 ಎಸೆತಗಳಲ್ಲಿ 26 ರನ್‌ ಬಾರಿಸಿ ಔಟಾದರು. ಇದು ಮುಂಬೈ ತಂಡಕ್ಕೆ ಸೋಲಿನ ಭೀತಿ ಉಂಟುಮಾಡಿತ್ತು.

    ಮುಂಬೈ ಪರ ತಿಲಕ್‌ ವರ್ಮಾ 63 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಹಾರ್ದಿಕ್‌ ಪಾಂಡ್ಯ 46 ರನ್‌ (24 ಎಸೆತ, 3 ಸಿಕ್ಸರ್‌, 4 ಬೌಂಡರಿ), ಟಿಮ್‌ ಡೇವಿಡ್‌ 37 ರನ್‌ (17 ಎಸೆತ, 3 ಸಿಕ್ಸರ್‌, 4 ಬೌಂಡರಿ), ಸೂರ್ಯಕುಮಾರ್‌ 26 ರನ್‌, ಇಶಾನ್‌ ಕಿಶನ್‌ 20 ರನ್‌, ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಮುಂಬೈ ವಿರೋಚಿತ ಸೋಲಿಗೆ ತುತ್ತಾಯಿತು. ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌, ರಸಿಖ್‌ ಸಲಾಮ್‌ ತಲಾ 3 ವಿಕೆಟ್‌ ಕಿತ್ತರೆ, ಖಲೀಲ್‌ ಅಹ್ಮದ್‌ 2 ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆರಂಭಿಕರಾದ ಫ್ರೇಸರ್‌ ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಪೋರೆಲ್ ಆರಂಭದಿಂದಲೇ ಸ್ಪೋಟಕ ಇನ್ನಿಂಗ್ಸ್‌ ಕಟ್ಟಲು ಶುರು ಮಾಡಿದರು. ಮೊದಲ 2.4 ಓವರ್‌ಗಳಲ್ಲೇ ಡೆಲ್ಲಿ ತಂಡ 50 ರನ್‌ ಬಾರಿಸಿತ್ತು. ಆಸ್ಟ್ರೇಲಿಯಾ ಮೂಲದ ಯುವ ಸ್ಪೋಟಕ ಬ್ಯಾಟರ್ ಫ್ರೇಸರ್‌ ಮೆಗಾರ್ಕ್‌ ಮುಟ್ಟಿದ್ದೆಲ್ಲ ಚಿನ್ನ ಎನ್ನುವಂತಾಗಿದ್ದು. ಒಂದಾದಮೇಲೊಂದು ಎಸೆತಗಳು ಸಿಕ್ಸರ್‌, ಬೌಂಡರಿಯ ಹಾದಿಯನ್ನೇ ಹಿಡಿಯುತ್ತಿದ್ದವು. ಇದರೊಂದಿಗೆ ಮೆಕ್‌ಗಾರ್ಕ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಡೆಲ್ಲಿ ಪವರ್‌ ಪ್ಲೇ ನಲ್ಲಿ 92 ರನ್ ಕಲೆಹಾಕಿತ್ತು. ಇದು ಐಪಿಎಲ್‌ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪವರ್‌ ಪ್ಲೇನಲ್ಲಿ ಸಿಡಿಸಿದ ಗರಿಷ್ಠ ಸ್ಕೋರರ್‌ ಆಗಿತ್ತು.

    ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಮೊದಲ ವಿಕೆಟ್‌ಗೆ 7.3 ಓವರ್‌ಗಳಲ್ಲಿ ಬರೋಬ್ಬರಿ 114 ರನ್‌ ಸಿಡಿಸಿತ್ತು. ಮೆಕ್‌ಗಾರ್ಕ್‌ ಬಳಿಕ ಶಾಯ್‌ ಹೋಪ್‌, ರಿಷಭ್‌ ಪಂತ್‌, ಟ್ರಿಸ್ಟನ್‌ ಸ್ಟಬ್ಸ್‌ ಸಹ ಮುಂಬೈ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಜಾಡಿಸಿದರು. ಅಂತಿಮವಾಗಿ ಡೆಲ್ಲಿ ತಂಡ 20 ಓವರ್‌ಗಳಲ್ಲಿ 257 ರನ್‌ ಸಿಡಿಸಿತ್ತು.

    ಡೆಲ್ಲಿ ಪರ ಮೆಕ್‌ಗಾರ್ಕ್‌ 84 ರನ್‌ (27 ಎಸೆತ, 11 ಬೌಂಡರಿ, 6 ಸಿಕ್ಸರ್‌), ಟ್ರಿಸ್ಟನ್‌ ಸ್ಟಬ್ಸ್‌ 48 ರನ್‌ (25 ಎಸೆತ, 6 ಬೌಂಡರಿ, 2 ಸಿಕ್ಸರ್‌), ಶಾಯ್‌ಹೋಪ್‌ 41 ರನ್‌ (17 ಎಸೆತ, 5 ಸಿಕ್ಸರ್‌), ರಿಷಭ್‌ ಪಂತ್‌ 29 ರನ್‌, ಅಕ್ಷರ್‌ ಪಟೇಲ್‌ 11 ರನ್‌ ಗಳಿಸಿದರು.

    ಮುಂಬೈ ಇಂಡಿಯನ್ಸ್‌ ಪರ ಲ್ಯೂಕ್ ವುಡ್, ಜಸ್ಪ್ರೀತ್‌ ಬುಮ್ರಾ, ಪಿಯೂಷ್‌ ಚಾವ್ಲಾ, ಮೊಹಮ್ಮದ್‌ ನಬಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ರನ್‌ ಏರಿದ್ದು ಹೇಗೆ?
    17 ಎಸೆತ – 50 ರನ್‌
    41 ಎಸೆತ – 100 ರನ್‌
    73 ಎಸೆತ – 150 ರನ್‌
    98 ಎಸೆತ – 200 ರನ್‌
    120 ಎಸೆತ – 257 ರನ್‌