Tag: ಹಾರ್ದಿಕ್ ಪಾಂಡ್ಯ

  • ಅಚ್ಚರಿ ಬೆಳವಣಿಗೆಯಲ್ಲಿ ಮುಂಬೈ ಸಾರಥಿಯಾದ ಪಾಂಡ್ಯ – ಹಿಟ್‌ಮ್ಯಾನ್‌ ಸ್ಥಾನ ಏನು?

    ಅಚ್ಚರಿ ಬೆಳವಣಿಗೆಯಲ್ಲಿ ಮುಂಬೈ ಸಾರಥಿಯಾದ ಪಾಂಡ್ಯ – ಹಿಟ್‌ಮ್ಯಾನ್‌ ಸ್ಥಾನ ಏನು?

    ಮುಂಬೈ: ಅಚ್ಚರಿಯ ಬೆಳವಣಿಗೆಯಲ್ಲಿ ಮುಂಬೈ ಇಂಡಿಯನ್ಸ್ ಐಪಿಎಲ್ 2024ರ ಆವೃತ್ತಿಗೆ ಮತ್ತೆ ಮುಂಬೈ ತಂಡಕ್ಕೆ ಕಂಬ್ಯಾಕ್‌ ಮಾಡಿರುವ ಹಾರ್ದಿಕ್‌ ಪಾಂಡ್ಯ (Hardik Pandya) ಅವರನ್ನು ನಾಯಕನನ್ನಾಗಿ ನೇಮಿಸಿದೆ.

    ಈ ಬಗೆಗಿನ ಮಾಹಿತಿಯನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಯು (Mumbai Indians) ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ರೋಹಿತ್ ಶರ್ಮಾ (Rohit Sharma) ಅವರ 10 ವರ್ಷಗಳ ನಾಯಕತ್ವದ ನಂತರ ಹಾರ್ದಿಕ್​ ತಂಡದ ಸಾರಥ್ಯ ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಟೆಕ್ವಾಂಡೋ: ರಾಷ್ಟ್ರಮಟ್ಟಕ್ಕೆ ಕಾಸರಗೋಡಿನ ಗಣ್ಯ – ಕೇರಳದಲ್ಲಿ ಅಗ್ರʻಗಣ್ಯʼಚಿನ್ನದ ಪದಕ..!

    2022ರಲ್ಲಿ ಗುಜರಾತ್‌ ಟೈಟಾನ್ಸ್‌ ತಂಡ ಸೇರಿದ್ದ ಹಾರ್ದಿಕ್‌ ಪಾಂಡ್ಯ ನಾಯಕನಾಗಿ ತಂಡದ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆಲ್ಲುವಂತೆ ಮಾಡಿದ್ದರು. 2023ರ ಐಪಿಎಲ್‌ನಲ್ಲಿ ರನ್ನರ್‌ ಅಪ್‌ ಪ್ರಶಸ್ತಿ ತಂದುಕೊಟ್ಟಿದ್ದರು. ಎರಡು ವರ್ಷಗಳ ನಂತರ ಮುಂಬೈ ಇಂಡಿಯನ್ಸ್​ ತಂಡಕ್ಕೆ ಮರಳಿರುವ ಇದೀಗ 5 ಬಾರಿ ಚಾಂಪಿಯನ್‌ ಆಗಿರುವ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಲು ತಯಾರಿ ಶುರು ಮಾಡಿದ್ದಾರೆ. ಫ್ರಾಂಚೈಸಿಯನ್ನು 10 ವರ್ಷ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮಾಹಿತಿ ಲಭ್ಯವಿಲ್ಲ. ಅವರು ನಾಯಕತ್ವದ ಹೊರತಾಗಿಯೂ ತಂಡದಲ್ಲಿ ಮುಂದುವರಿಯುವರೇ ಎಂದು ಕಾದು ನೋಡಬೇಕಾಗಿದೆ.

    ಹಾರ್ದಿಕ್‌ ಪಾಂಡ್ಯ ಆಯ್ಕೆಯನ್ನು ಫ್ರಾಂಚೈಸಿಯ ಗ್ಲೋಬಲ್‌ ಮುಖ್ಯಸ್ಥ ಮಹೇಲಾ ಜಯವರ್ಧನೆ (Mahela Jayawardene) ಶ್ಲಾಘಿಸಿದ್ದಾರೆ. ಇದು ಪರಂಪರೆ ನಿರ್ಮಿಸುವ ಭಾಗವಾಗಿದೆ ಮತ್ತು ಭವಿಷ್ಯದ ನಿರ್ಧಾರವಾಗಿದೆ. ಈ ತತ್ವಕ್ಕೆ ಅನುಗುಣವಾಗಿ ಹಾರ್ದಿಕ್ ಪಾಂಡ್ಯ ಐಪಿಎಲ್ 2024 ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: RCB ಖರೀದಿಸಿದ ದುಬಾರಿ ಆಟಗಾರನಿಗೆ ದೀರ್ಘಕಾಲದ ಕಿಡ್ನಿ ಕಾಯಿಲೆ – ಸತ್ಯ ಬಹಿರಂಗಪಡಿಸಿದ ಗ್ರೀನ್‌

    ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವಕ್ಕಾಗಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ. 2013 ರಿಂದ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಅವರ ಅಧಿಕಾರಾವಧಿ ಅಸಮಾನ್ಯವಾಗಿದೆ. ಅವರ ನಾಯಕತ್ವವು ತಂಡಕ್ಕೆ ಸಾಟಿಯಿಲ್ಲದ ಯಶಸ್ಸನ್ನು ತಂದುಕೊಟ್ಟಿದೆ ಮಾತ್ರವಲ್ಲ, ಐಪಿಎಲ್ ಇತಿಹಾಸದಲ್ಲಿ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿ ಅವರ ಸ್ಥಾನವನ್ನು ಭದ್ರಪಡಿಸಿದೆ ಎಂದು ಹೇಳಿದ್ದಾರೆ.

    ರೋಹಿತ್‌ ಶರ್ಮಾ ಅವರ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು 2013, 2015, 2017, 2019 ಹಾಗೂ 2020ರ ಆವೃತ್ತಿಗಳಲ್ಲಿ ಮುಂಬೈ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2024ರ ಆವೃತ್ತಿಯಲ್ಲಿ ಪಾಂಡ್ಯ ನಾಯಕತ್ವದಲ್ಲಿ ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದೆ. ಇದನ್ನೂ ಓದಿ: ಮತ್ತೆ ಅದೇ ತಪ್ಪು – DRS ತೆಗೆದುಕೊಳ್ಳದೇ ಹರಿಣರ ಎದುರು ಮಕ್ಕರ್‌ ಆದ ಗಿಲ್‌!

  • ಗುಜರಾತ್‌ ಟೈಟಾನ್ಸ್‌ಗೆ ನೂತನ ಸಾರಥಿ – ಕ್ಯಾಪ್ಟನ್‌ ಗಿಲ್‌ ಫಸ್ಟ್‌ ರಿಯಾಕ್ಷನ್‌ ಏನು?

    ಗುಜರಾತ್‌ ಟೈಟಾನ್ಸ್‌ಗೆ ನೂತನ ಸಾರಥಿ – ಕ್ಯಾಪ್ಟನ್‌ ಗಿಲ್‌ ಫಸ್ಟ್‌ ರಿಯಾಕ್ಷನ್‌ ಏನು?

    ಮುಂಬೈ: ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ (Hardik Pandya) ಮತ್ತೆ ತವರು ಮುಂಬೈ ಇಂಡಿಯನ್ಸ್‌ (Mumbai Indians) ಸೇರ್ಪಡೆಗೊಂಡ ಬಳಿಕ ಗುಜರಾತ್‌ ಟೈಟಾನ್ಸ್‌ ‌ಯುವ ಆರಂಭಿಕ ಆಟಗಾರ ಶುಭಮನ್‌ ಗಿಲ್‌ (Shubman Gill) ಹೆಗಲಿಗೆ ನಾಯಕತ್ವದ ಹೊಣೆ ನೀಡಲಾಗಿದೆ.

    ಈ ಬಗ್ಗೆ ಗುಜರಾತ್‌ ಟೈಟಾನ್ಸ್‌ (GujaratTaitans) ತನ್ನ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಶುಭಮನ್‌ ಗಿಲ್‌ ಸಹ ನಾಯಕತ್ವದ ಹೊಣೆ ನೀಡಿದ ಫ್ರಾಂಚೈಸಿಗೆ ಧನ್ಯವಾದ ತಿಳಿಸಿದ್ದಾರೆ. ಗುಜರಾತ್ ಟೈಟಾನ್ಸ್‌ನ ನಾಯಕತ್ವ ವಹಿಸಿಕೊಳ್ಳಲು ನಾನು ಹೆಮ್ಮೆಪಡುತ್ತೇನೆ. ಇಂತಹ ಉತ್ತಮ ತಂಡವನ್ನು ಮುನ್ನಡೆಸಲು ಫ್ರಾಂಚೈಸಿ ನನ್ನ ಮೇಲೆ ನಂಬಿಕೆಯಿಟ್ಟು ನಾಯಕತ್ವದ ಹೊಣೆ ನೀಡಿದೆ. ಇದನ್ನು ಕೇವಲ ಧನ್ಯವಾದ ಹೇಳಿ ಮುಗಿಸಲಾರೆ. ಈ ಟೂರ್ನಿಯನ್ನು ಸ್ಮರಣೀಯವಾಗಿಸೋಣ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL 2024 Retention: ಭಾರೀ ಹೈಡ್ರಾಮಾ ಬಳಿಕ ಪಾಂಡ್ಯ ಮುಂಬೈಗೆ

    ಶುಭಮನ್‌ ಗಿಲ್‌ ಗುಜರಾತ್‌ ಟೈಟಾನ್ಸ್‌ ಪರ ಆಡಿರುವ 2 ಆವೃತ್ತಿಯ 33 ಇನ್ನಿಂಗ್ಸ್‌ಗಳಲ್ಲಿ, 47.34 ಸರಾಸರಿಯಲ್ಲಿ 1,373 ರನ್‌ ಬಾರಿಸಿದ್ದಾರೆ. ಅದರಲ್ಲೂ 2023ರ 16ನೇ ಆವೃತ್ತಿಯ ಐಪಿಎಲ್‌ನಲ್ಲಿ 17 ಪಂದ್ಯಗಳಿಂದ 59.33 ಸರಾಸರಿಯಲ್ಲಿ ಒಟ್ಟು 890 ರನ್‌ ಬಾರಿಸಿದ್ದರು. ಇದರಲ್ಲಿ 3 ಶತಕ, 4 ಅರ್ಧ ಶತಕಗಳೂ ಸೇರಿತ್ತು. ಈ ಆವೃತ್ತಿಯಲ್ಲಿ ಒಟ್ಟು 890 ರನ್‌ ಗಳಿಸುವ ಮೂಲಕ ಆರೆಂಜ್‌ ಕ್ಯಾಪ್‌ ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ಅತಿಹೆಚ್ಚು ರನ್‌ ಗಳಿಸಿದ್ದಕ್ಕಾಗಿ 10 ಲಕ್ಷ ರೂ. ಬಹುಮಾನವನ್ನೂ ಗಿಟ್ಟಿಸಿಕೊಂಡರು. ಅದರಲ್ಲೂ ಸೆಮಿಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಅಬ್ಬರಿಸಿದ್ದ ಗಿಲ್‌ 60 ಎಸೆತಗಳಲ್ಲೇ 129 ರನ್‌ ಬಾರಿಸಿದ್ದರು. ಇದರಿಂದ ತಂಡವು ಅಧಿಕ ರನ್‌ಗಳ ಜಯ ಸಾಧಿಸಿತ್ತು.

    2 ಆವೃತ್ತಿಗಳಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಮುನ್ನಡೆಸಿದ್ದ ಪಾಂಡ್ಯ ಪ್ರವೇಶಿಸಿದ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಸ್ಥಾನ ತಂದುಕೊಟ್ಟಿದ್ದರು. ಇದನ್ನೂ ಓದಿ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಾಕ್‌ನಲ್ಲಿ ನಡೆಯುವುದು ಅನುಮಾನ

  • ಮುಂಬೈಗೆ ಮರಳಿರುವುದು ಖುಷಿಯಾಗಿದೆ: ಹಾರ್ದಿಕ್ ಪಾಂಡ್ಯ

    ಮುಂಬೈಗೆ ಮರಳಿರುವುದು ಖುಷಿಯಾಗಿದೆ: ಹಾರ್ದಿಕ್ ಪಾಂಡ್ಯ

    ಮುಂಬೈ: ಐಪಿಎಲ್ 2024ರ ಆವೃತ್ತಿಗೆ (IPL) ಮುಂಬೈ ಇಂಡಿಯನ್ಸ್ (Mumbai Indians) ತಂಡದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಕಳೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕನಾಗಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಇದೀಗ ಮತ್ತೆ ಹಳೆಯ ತಂಡ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದಾರೆ. ಮಿನಿ ಹರಾಜಿಗೂ ಮುನ್ನವೇ ಗುಜರಾತ್ ಟೈಟಾನ್ಸ್ (Gujarat Titans) ತೊರೆದು ಅವರು ಮುಂಬೈ ಸೇರಿದ್ದಾರೆ. ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಪಾಂಡ್ಯ ಅನೇಕ ನೆನಪುಗಳು ಕಣ್ಗಳ ಮುಂದೆ ಹಾದು ಹೋದವು, ನನಗೆ ಮರಳಿ ಮುಂಬೈ ಸೇರಿರುವುದಕ್ಕೆ ಖುಷಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.

    ಐಪಿಎಲ್‍ನ ನೂತನ ಆವೃತ್ತಿಗೂ ಮುನ್ನ ಪಾಂಡ್ಯ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಸಂಬಂಧ ಅಷ್ಟೊಂದು ಚೆನ್ನಾಗಿರಲಿಲ್ಲ. ಹೀಗಾಗಿ ಹಾರ್ದಿಕ್ ಐಪಿಎಲ್ 2024ಕ್ಕೂ ಮುನ್ನ ಮುಂಬೈ ಫ್ರಾಂಚೈಸಿ ಸೇರಲು ಅವರು ಚರ್ಚೆ ನಡೆಸಿದ್ದರು ಎಂದು ಹಿಂದೆ ವರದಿಯಾಗಿತ್ತು. ಪಾಂಡ್ಯ ಅವರನ್ನು 2022ರ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ರಿಲೀಸ್ ಮಾಡಿತ್ತು. ಬಳಿಕ ಹಾರ್ದಿಕ್ ಪಾಂಡ್ಯ ಅವರನ್ನು 2022ರ ಮೆಗಾ ಹರಾಜಿನ ಡ್ರಾಫ್ಟ್‌ನಲ್ಲಿ ಟೈಟಾನ್ಸ್ ಆಯ್ಕೆ ಮಾಡಿತ್ತು.

    ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಸೇರುವುದಕ್ಕೂ ಮುನ್ನ 7 ಆವೃತ್ತಿಗಳಲ್ಲಿ ಮುಂಬೈ ಪರ ಆಡಿದ್ದರು. 2022ರಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಬಾರಿಗೆ ಪ್ರತಿನಿಧಿಸಿತ್ತು. ಟೈಟಾನ್ಸ್ ಪರ ನಾಯಕನಾಗಿ ಪ್ರತಿನಿಧಿಸಿದ್ದ ಪಾಂಡ್ಯ ತನ್ನ ಚೊಚ್ಚಲ ಆವೃತ್ತಿಯಲ್ಲೇ ತಂಡವನ್ನು ಚಾಂಪಿಯನ್ ಆಗುವಂತೆ ಮಾಡಿದರು. ಅಲ್ಲದೇ 2023ರಲ್ಲಿ ಗುಜರಾತ್ ದ್ವಿತೀಯ ಸ್ಥಾನ ಪಡೆದಿತ್ತು.

    ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ಗೆ ವಾಪಸಾಗಿದ್ದಕ್ಕೆ ನೀತಾ ಅಂಬಾನಿ ವಿಶೇಷ ಪ್ರತಿಕ್ರಿಯೆ ನೀಡಿದ್ದಾರೆ. ಅವರನ್ನು ಮನೆಗೆ ಮರಳಿ ಸ್ವಾಗತಿಸಲು ನಾವು ಕಾತುರದಿಂದಿದ್ದೇವೆ. ಇದು ಮುಂಬೈ ಇಂಡಿಯನ್ಸ್ ಕುಟುಂಬದೊಂದಿಗೆ ಸಂಭ್ರಮದ ಪುನರ್ಮಿಲನವಾಗಿದೆ. ಮುಂಬೈ ಇಂಡಿಯನ್ಸ್‌ಗೆ ಭವಿಷ್ಯದ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೊಂಡಿದ್ದಾರೆ.

  • IPL 2024 Retention: ಭಾರೀ ಹೈಡ್ರಾಮಾ ಬಳಿಕ ಪಾಂಡ್ಯ ಮುಂಬೈಗೆ

    IPL 2024 Retention: ಭಾರೀ ಹೈಡ್ರಾಮಾ ಬಳಿಕ ಪಾಂಡ್ಯ ಮುಂಬೈಗೆ

    ಮುಂಬೈ: ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ (Hardik Pandya) ಅಧಿಕೃತವಾಗಿ ಮುಂಬೈ ಇಂಡಿಯನ್ಸ್‌ (Mumbai Indians) ಬಳಗ ಸೇರಿದ್ದಾರೆ. ನಾಯಕನಾಗಿ 2 ವರ್ಷಗಳ ಕಾಲ ಗುಜರಾತ್‌ ಟೈಟಾನ್ಸ್‌ ತಂಡವನ್ನು ಮುನ್ನಡೆಸಿದ್ದ ಪಾಂಡ್ಯ ತಂಡ ಪ್ರವೇಶಿಸಿದ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಸ್ಥಾನ ತಂದುಕೊಟ್ಟಿದ್ದರು.

    ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್‌ ಟೈಟಾನ್ಸ್‌ (GujaratTaitans) ತಂಡ ಐಪಿಎಲ್ 2024 ಟೂರ್ನಿಗೆ ಪ್ರಕಟ ಮಾಡಿದ ಉಳಿಸಿಕೊಂಡ ಆಟಗಾರರ ಪಟ್ಟಿಯಲ್ಲಿ ಸೇರಿಸಿತ್ತು. ಆದ್ರೆ, ಇದಾದ ಕೆಲವೇ ಗಂಟೆಗಳಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಟ್ರೇಡಿಂಗ್ ವಿಂಡೋ ಮೂಲಕ ಮುಂಬೈ ಇಂಡಿಯನ್ಸ್‌ ಸೇರಿದ್ದಾರೆ. ಹಾರ್ದಿಕ್ ಸಲುವಾಗಿ ಟೈಟಾನ್ಸ್‌ ತಂಡಕ್ಕೆ ಮುಂಬೈ ಇಂಡಿಯನ್ಸ್‌ 15 ಕೋಟಿ ರೂ. ನೀಡಲಿದೆ ಎಂದು ವರದಿಯಾಗಿದೆ.

    ಗುಜರಾತ್‌ ಟೈಟಾನ್ಸ್‌ ತಂಡದಿಂದ ಹಾರ್ದಿಕ್ ಪಾಂಡ್ಯ ಹೊರಬಂದಿರುವ ಕಾರಣ ಯುವ ಆರಂಭಿಕ ಬ್ಯಾಟರ್‌ ಶುಭಮನ್ ಗಿಲ್‌ (Shubhman Gill) ತಂಡದ ಕ್ಯಾಪ್ಟನ್‌ ಆಗುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂಬೈ ಇಂಡಿಯನ್ಸ್‌ ತಾನು ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಿದ ಬಳಿಕ ತನ್ನ ಖಾತೆಯಲ್ಲಿ 15.25 ಕೋಟಿ ರೂ. ಮಾತ್ರವೇ ಹೊಂದಿತ್ತು. ಈಗ ಹಾರ್ದಿಕ್‌ ಪಾಂಡ್ಯ ಖರೀದಿ ಸಲುವಾಗಿ ತನ್ನ ಸ್ಟಾರ್‌ ಆಲ್‌ರೌಂಡರ್‌ ಕ್ಯಾಮರೂನ್‌ ಅವರನ್ನು ಆರ್‌ಸಿಬಿಗೆ (RCB) ಬಿಟ್ಟುಕೊಡುವ ಮೂಲಕ ಪರ್ಸ್‌ ಮೊತ್ತ ಹೆಚ್ಚಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

    ಐಪಿಎಲ್‌ ಆಟಗಾರರ ಹರಾಜು ಪ್ರಕ್ರಿಯೆ ಡಿಸೆಂಬರ್‌ 19ರಂದು ದುಬೈನಲ್ಲಿ ನಡೆಯಲಿದೆ. ಈ ಸಲುವಾಗಿ ಉಳಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಲು ನವೆಂಬರ್‌ 26 ಅಂತಿಮ ದಿನವಾಗಿತ್ತು. ಆದರೂ, ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ಇರುವ ಟ್ರೇಡಿಂಗ್‌ ವಿಂಡೋ ಡಿಸೆಂಬರ್‌ 12ರ ವರೆಗೆ ತೆರೆದಿರಲಿದೆ. ಹೀಗಾಗಿ ಉಳಿಸಿಕೊಂಡ ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸುವ ಡೀಲ್‌ ಮುಗಿಸಲಾಗಿದೆ.

    ಐಪಿಎಲ್‌ 2014 ಟೂರ್ನಿಯಿಂದ 2021ರ ಆವೃತ್ತಿವರಗೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಆಡಿ 5 ಬಾರಿ ಟ್ರೋಫಿ ಗೆದ್ದಿದ್ದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಬಳಿಕ ಹೊಸ ಫ್ರಾಂಚೈಸಿ ಗುಜರಾತ್‌ ಟೈಟಾನ್ಸ್‌ ಸೇರಿದ್ದರು. ಐಪಿಎಲ್ 2022 ಟೂರ್ನಿಯಲ್ಲಿ ಮೊದಲ ಪ್ರಯತ್ನದಲ್ಲೇ ಟೈಟಾನ್ಸ್‌ಗೆ ಟ್ರೋಫಿ ಗೆದ್ದುಕೊಟ್ಟರು. ಐಪಿಎಲ್ 2023 ಟೂರ್ನಿಯಲ್ಲೂ ಫೈನಲ್‌ಗೆ ಮುನ್ನಡೆಸಿದರಾದರೂ, ಸಿಎಸ್‌ಕೆ ಎದುರು ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿದ್ದರು.

    ಹಾರ್ದಿಕ್ ಪಾಂಡ್ಯ ಈ ಮೂಲಕ ಐಪಿಎಲ್‌ ಟ್ರೇಡಿಂಗ್ ವಿಂಡೋ ಮೂಲಕ ಬೇರೆ ತಂಡ ಸೇರಿದ 3ನೇ ಕ್ಯಾಪ್ಟನ್‌ ಆಗಿದ್ದಾರೆ. ಐಪಿಎಲ್ 2020 ಟೂರ್ನಿ ವೇಳೆ ರವಿಚಂದ್ರನ್ ಅಶ್ವಿನ್ ಮತ್ತು ಅಜಿಂಕ್ಯ ರಹಾನೆ ಬೇರೆ ತಂಡಗಳನ್ನು ಸೇರಿದ ಕ್ಯಾಪ್ಟನ್‌ಗಳಾಗಿದ್ದರು.

    ಏನಿದು ಟ್ರೇಡ್‌ ವಿಂಡೋ ನಿಯಮ?
    ಫ್ರಾಂಚೈಸಿಗಳು ಪರಸ್ಪರ ಆಟಗಾರರನ್ನ ವಿನಿಮಯ ಮಾಡಿಕೊಳ್ಳಬಹುದು ಅಥವಾ ನಗದು ವ್ಯವಹಾರಗಳಲ್ಲಿ ಆಟಗಾರರನ್ನು ಖರೀದಿಸಬಹುದು. ಈ ಸಂಪೂರ್ಣ ವಿಷಯದಲ್ಲಿ ಐಪಿಎಲ್ ಆಡಳಿತ ಮಂಡಳಿಯು ಅಂತಿಮ ಅಧಿಕಾರ ನೀಡಿದೆ. ಹೆಚ್ಚಿನ ಫ್ರಾಂಚೈಸಿಗಳು ಒಂದೇ ಆಟಗಾರನನ್ನು ಖರೀದಿಸಲು ಬಯಸಿದರೆ. ಈ ಸಂದರ್ಭದಲ್ಲಿ ಫ್ರಾಂಚೈಸಿ ತನ್ನ ಆಟಗಾರ ಯಾವ ತಂಡಕ್ಕೆ ಹೋಗಬೇಕೆಂದು ನಿರ್ಧರಿಸುವ ಅಧಿಕಾರವನ್ನು ಹೊಂದಿರುತ್ತದೆ. ಆದರೆ ಆಟಗಾರನ ವ್ಯಾಪಾರ ಅಥವಾ ವರ್ಗಾವಣೆಯ ಮೊದಲು ಆಟಗಾರನ ಒಪ್ಪಿಗೆ ಕೂಡ ಅಗತ್ಯ. ಆಟಗಾರನು ನಿರಾಕರಿಸಿದರೆ, ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸಲಾಗುತ್ತದೆ.

  • IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ

    IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ

    ಮುಂಬೈ: ಊಹಾಪೋಹಗಳ ನಡುವೆ ಕೊನೆಗೂ ಮಾಜಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ (Gujarat Titans) ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ತನ್ನಲ್ಲೇ ಉಳಿಸಿಕೊಂಡಿದ್ದು, ಮುಂಬೈ ತಂಡದ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದೆ.

    ಕಳೆದ ಎರಡು ಮೂರು ದಿನಗಳಿಂದಲೂ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ಸೇರುವುದು ಖಚಿತವಾಗಿದೆ ಎಂದು ಹೇಳಲಾಗಿತ್ತು. ಗುಜರಾತ್ ತಂಡವು ಸಹ ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿತ್ತು. ಪಾಂಡ್ಯ ಅವರು ಮುಂಬೈ ಇಂಡಿಯನ್ಸ್‌ಗೆ ಬಂದ್ರೆ ಅವರೇ ಮುಂದಿನ ನಾಯಕನಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿತ್ತು. ಆದ್ರೆ ಗುಜರಾತ್ ಹಾರ್ದಿಕ್ ಪಾಂಡ್ಯ ಅವರನ್ನು 15 ಕೋಟಿ ರೂ.ಗಳಿಗೆ ತನ್ನಲ್ಲೇ ಉಳಿಸಿಕೊಂಡಿದೆ. ಇದನ್ನೂ ಓದಿ: IPL Retention 2024: 8 ಆಟಗಾರರಿಗೆ CSKಯಿಂದ ಗೇಟ್‌ಪಾಸ್‌ – ರಾಜಸ್ಥಾನ್ ರಾಯಲ್ಸ್‌ನಲ್ಲಿ ಕನ್ನಡಿಗನಿಗೆ ಸ್ಥಾನ

    ಟೈಟಾನ್ಸ್ ತಂಡವು ಡಿಸೆಂಬರ್ 19ರಂದು ನಡೆಯಲಿರುವ ಹರಾಜಿಗೆ ಮುನ್ನ ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಮತ್ತು ದಸುನ್ ಶನಾಕ ಸೇರಿದಂತೆ ಮೂರು ವಿದೇಶಿ ಆಟಗಾರರು ಸೇರಿದಂತೆ ಒಟ್ಟು 8 ಆಟಗಾರರಿಗೆ ಗೇಟ್‍ಪಾಸ್ ಕೊಟ್ಟಿದೆ.

    ಹಾರ್ದಿಕ್ ಪಾಂಡ್ಯ ಅವರನ್ನು 2022ರ ಮೆಗಾ ಹರಾಜಿನ ಡ್ರಾಫ್ಟ್‌ನಲ್ಲಿ ಗುಜರಾತ್ ಟೈಟಾನ್ಸ್ ಆಯ್ಕೆ ಮಾಡಿತ್ತು. ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಸೇರುವುದಕ್ಕೂ ಮುನ್ನ 7 ಆವೃತ್ತಿಗಳಲ್ಲಿ ಮುಂಬೈ ಪರ ಆಡಿದ್ದರು. 2022ರಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಬಾರಿಗೆ ಪ್ರತಿನಿಧಿಸಿತ್ತು. ಟೈಟಾನ್ಸ್ ಪರ ನಾಯಕನಾಗಿ ಪ್ರತಿನಿಧಿಸಿದ ಪಾಂಡ್ಯ ತನ್ನ ಚೊಚ್ಚಲ ಆವೃತ್ತಿಯಲ್ಲೇ ತಂಡವನ್ನು ಚಾಂಪಿಯನ್ ಆಗುವಂತೆ ಮಾಡಿದರು. ಅಲ್ಲದೇ 2023ರ ಆವೃತ್ತಿಯಲ್ಲಿ ರನ್ನರ್ ಅಪ್ ದಕ್ಕುವಂತೆ ಮಾಡಿದ್ದರು.

    ಜಿಟಿ ಉಳಿಸಿಕೊಂಡ ಆಟಗಾರರು:
    ಹಾರ್ದಿಕ್ ಪಾಂಡ್ಯ, ಅಭಿನವ್ ಮನೋಹರ್, ಮೊಹಮ್ಮದ್ ಶಮಿ, ಸಾಯಿ ಸುದರ್ಶನ್, ಮೋಹಿತ್ ಶರ್ಮಾ, ಶುಭಮನ್ ಗಿಲ್, ಕೇನ್ ವಿಲಿಯಮ್ಸನ್, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ಜೋಶುವಾ ಲಿಟಲ್, ರಶೀದ್ ಖಾನ್.

    ಬಿಡುಗಡೆಯಾದ ಆಟಗಾರರು:
    ಕೆಎಸ್ ಭರತ್, ಶಿವಂ ಮಾವಿ, ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ದಾಸುನ್ ಶನಕ, ಯಶ್ ದಯಾಳ್, ಉರ್ವಿಲ್ ಪಟೇಲ್, ಪ್ರದೀಪ್ ಸಾಂಗ್ವಾನ್. ಇದನ್ನೂ ಓದಿ: IPL 2024 Auction: ಹ್ಯಾಜಲ್‌ವುಡ್, ಹಸರಂಗ ಸೇರಿ 11 ಆಟಗಾರರಿಗೆ RCB ಕೊಕ್‌

  • IPL 2024 Auction: ಮತ್ತೆ ಮುಂಬೈ ಸೇರಲಿದ್ದಾರೆ ಪಾಂಡ್ಯ?

    IPL 2024 Auction: ಮತ್ತೆ ಮುಂಬೈ ಸೇರಲಿದ್ದಾರೆ ಪಾಂಡ್ಯ?

    – ಕ್ಯಾಪ್ಟನ್‌ ರೇಸ್‌ನಲ್ಲಿ ಗಿಲ್‌, ರಶೀದ್‌ ಖಾನ್‌, ಕಮ್ಮಿನ್ಸ್‌, ವಿಲಿಯಮ್ಸನ್‌, ಮಿಲ್ಲರ್‌

    ಮುಂಬೈ: ವಿಶ್ವಕಪ್‌ ಟೂರ್ನಿ ಮುಗಿಯುತ್ತಿದ್ದಂತೆ ಇದೀಗ ಐಪಿಎಲ್‌ ಕ್ರೇಜ್‌ ಹೆಚ್ಚಾಗುತ್ತಿದೆ. ಅದರಲ್ಲೂ 2024ರ ಐಪಿಎಲ್‌ (IPL 2024) ಟೂರ್ನಿಗಳ ಬಗ್ಗೆ ಸಾಕಷ್ಟು ಕುತೂಹಲಕಾರಿ ಸಂಗತಿಗಳು ಹೊರಬೀಳುತ್ತಿವೆ. ಫ್ರಾಂಚೈಸಿಗಳಲ್ಲಿ ಬೆಳವಣಿಗೆಗಳು ನಡೆಯುತ್ತಿವೆ. ಹಾಲಿ – ಮಾಜಿ ಜಾಂಪಿಯನ್ಸ್‌ಗಳು ಸ್ಟಾರ್‌ ಪ್ಲೇಯರ್‌ಗಳಿಗೆ ಗಾಳಹಾಕಿವೆ. ಪ್ರಮುಖ ಫ್ರಾಂಚೈಸಿಗಳು ಮತ್ತೆ ಹಳೆಯ ಆಟಗಾರರನ್ನು ಮರಳಿ ತಂದು ಟ್ರೋಫಿ ಗೆಲಲ್ಲು ಕಸರತ್ತು ನಡೆಸುತ್ತಿವೆ.

    ಈ ನಡುವೆ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಹರಾಜಿಗೆ ಮುಂಚಿತವಾಗಿ ಭಾರತದ ಟಿ20I ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಸುದ್ದಿಯಲ್ಲಿದ್ದಾರೆ. ಗುಜರಾತ್ ಟೈಟಾನ್ಸ್ ನಾಯಕನಾಗಿರುವ ಪಾಂಡ್ಯ ಮತ್ತೆ ಮುಂಬೈ ಇಂಡಿಯನ್ಸ್​ಗೆ ಮರಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಗುಜರಾತ್ ತಂಡ ಅವರನ್ನು ಬಿಡುಗಡೆ ಮಾಡಲಿದ್ದು, ಮಿನಿ ಹರಾಜಿನಲ್ಲಿ ಮುಂಬೈ ತಂಡ ಪಾಂಡ್ಯ ಅವರನ್ನು ಖರೀದಿಸಲಿದೆ ಎನ್ನಲಾಗಿದೆ. ಆದ್ರೆ ಈ ಬಗ್ಗೆ ಮುಂಬೈ ಇಂಡಿಯನ್ಸ್‌ ತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

    ಹಾರ್ದಿಕ್‌ ಪಾಂಡ್ಯ ಗುಜರಾತ್‌ ಟೈಟಾನ್ಸ್‌ ಸೇರುವುದಕ್ಕೂ ಮುನ್ನ 7 ಆವೃತ್ತಿಗಳಲ್ಲಿ ಮುಂಬೈ ಪರ ಆಡಿದ್ದರು. 2022ರಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Taitans) ಮೊದಲ ಬಾರಿಗೆ ಪ್ರತಿನಿಧಿಸಿತು. ಟೈಟಾನ್ಸ್‌ ಪರ ನಾಯಕನಾಗಿ ಪ್ರತಿನಿಧಿಸಿದ ಪಾಂಡ್ಯ ತನ್ನ ಚೊಚ್ಚಲ ಆವೃತ್ತಿಯಲ್ಲೇ ತಂಡವನ್ನು ಚಾಂಪಿಯನ್‌ ಆಗುವಂತೆ ಮಾಡಿದರು. ಅಲ್ಲದೇ 2023ರ ಆವೃತ್ತಿಯಲ್ಲಿ ರನ್ನರ್‌ ಪ್ರಶಸ್ತಿ ದಕ್ಕುವಂತೆ ಮಾಡಿದರು. ಇದನ್ನೂ ಓದಿ: ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ತೆರಳಿ ಸಂತೈಸಿದ ಮೋದಿ ನಡೆಗೆ ರವಿಶಾಸ್ತ್ರಿ ಮೆಚ್ಚುಗೆ

    ಸದ್ಯ ಹಾರ್ದಿಕ್ ಮತ್ತೆ ಮುಂಬೈ ಇಂಡಿಯನ್ಸ್​ (Mumbai Indians) ತಂಡಕ್ಕೆ ಹೋಗುವ ಬಗ್ಗೆ ಮಾತುಕತೆಗಳು ನಡೆದಿವೆ. ಆದರೆ ಈ ಸಮಯದಲ್ಲಿ, ಒಪ್ಪಂದಕ್ಕೆ ಇನ್ನೂ ಸಹಿ ಹಾಕದ ಕಾರಣ ಹೆಚ್ಚಿನ ಮಾಹಿತಿ ಖಚಿತಪಡಿಸಲಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

    ಮುಂಬೈನಲ್ಲಿ ಎಷ್ಟಿದೆ ದುಡ್ಡು?
    ಕಳೆದ 2 ಋತುಗಳಲ್ಲಿ ಗಾಯಗೊಂಡಿರುವ ಜೋಫ್ರಾ ಆರ್ಚರ್ ಅವರನ್ನು 8 ಕೋಟಿ ರೂ.ಗೆ ಖರೀದಿಸಲು ಮುಂಬೈ ಇಂಡಿಯನ್ಸ್ ನಿರ್ಧರಿಸಿದೆಯೇ ಎಂಬ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ. ಐಪಿಎಲ್ ಆಡಳಿತ ಮಂಡಳಿಯು ಹೆಚ್ಚುವರಿಯಾಗಿ 5 ಕೋಟಿ ರೂ.ಗಳನ್ನು ಹೆಚ್ಚಿಸಿದೆ. ಹೀಗಾಗಿ ಹಣದ ಮೀಸಲು ಹೆಚ್ಚಿಸಲು ತಮ್ಮ ಕೆಲವು ದೊಡ್ಡ ಖರೀದಿಗಳನ್ನು ಬಿಡುಗಡೆ ಮಾಡಬೇಕಾಗುತ್ತದೆ. ಹೊರತುಪಡಿಸಿದರೆ ಮುಂಬೈ ತಂಡ ಒಟ್ಟು 5.50 ಕೋಟಿ ರೂ.ಗಳೊಂದಿಗೆ (ಉಳಿಕೆ ಇರುವ 50 ಲಕ್ಷ ರೂ.ಸೇರಿ) ಮಿನಿ ಹರಾಜಿಗೆ ಹೋಗಬೇಕಾಗುತ್ತದೆ. ಹಾರ್ದಿಕ್‌ ಪಾಂಡ್ಯ ಅವರ ಮೂಲ ಬೆಲೆ ಮುಂಬೈ ಇಂಡಿಯನ್ಸ್‌ನಲ್ಲಿದ್ದಾಗ 11 ಕೋಟಿ ರೂ. ಇತ್ತು. ಗುಜರಾತ್‌ ಅವರನ್ನು 15 ಕೋಟಿ ರೂ.ಗೆ ಖರೀದಿಸಿತ್ತು. ಮುಂಬೈ ಇಂಡಿಯನ್ಸ್‌ ಅಷ್ಟೇ ಹಣವನ್ನು ನೀಡಿ ಖರೀದಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

    ಪಾಂಡ್ಯ ಅಂತಿಮವಾಗಿ ಮುಂಬೈ ಇಂಡಿಯನ್ಸ್ ಪರ ಆಡಿದರೆ, ತಂಡವನ್ನು 5 ಟ್ರೋಫಿಗಳಿಗೆ ಮುನ್ನಡೆಸಿದ ಮತ್ತು ಉತ್ತಮ ಫಾರ್ಮ್‌ನಲ್ಲಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಲಿದ್ದಾರೆ. ಇದನ್ನೂ ಓದಿ: ಲೆಕ್ಕಕ್ಕಿಲ್ಲ ರಿಂಕು ಸಿಕ್ಸರ್‌ – ಕೊನೇ ಎಸೆತದಲ್ಲಿ 7 ರನ್‌ ಗಳಿಸಿದ್ರೂ ಭಾರತಕ್ಕೆ ಸಿಕ್ಕಿದ್ದು 1 ರನ್‌, ಏಕೆ ಗೊತ್ತೇ?

    ಇನ್ನೂ ಟ್ರೇಡಿಂಗ್​ ಆಟಗಾರರನ್ನು ಬದಲಾಯಿಸುವುದಕ್ಕೆ ಸೀಮಿತವಾಗಿರುವ ಕಾರಣ ಪಾಂಡ್ಯ ಎಂಐ ತಂಡಕ್ಕೆ ಮರಳಿದರೆ, ಯಾರು ಟೈಟಾನ್ಸ್​​ ನಾಯಕರಾಗಬಹುದು ಎಂಬ ಕೌತುಕ ಹೆಚ್ಚಾಗಿದೆ. ಸದ್ಯ ನಾಯಕನ ರೇಸ್‌ ಪಟ್ಟಿಯಲ್ಲಿ ಯುವ ಆರಂಭಿಕ ಶುಭಮನ್‌ ಗಿಲ್‌, ಅಫ್ಘಾನ್‌ ಸ್ಪಿನ್ನರ್‌ ರಶೀದ್‌ ಖಾನ್‌, ಡೇವಿಡ್‌ ಮಿಲ್ಲರ್‌, ಕೇನ್‌ ವಿಲಿಯಮ್ಸನ್‌ ಹಾಗೂ ಆಸೀಸ್‌ನ ಪ್ಯಾಟ್‌ ಕಮ್ಮಿನ್ಸ್‌ ಇದ್ದಾರೆ ಎಂದು ತಿಳಿದುಬಂದಿದೆ.

  • ವಿಶ್ವಕಪ್‌ನಿಂದ ಹೊರಗುಳಿದ ಪಾಂಡ್ಯ – ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ

    ವಿಶ್ವಕಪ್‌ನಿಂದ ಹೊರಗುಳಿದ ಪಾಂಡ್ಯ – ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ

    ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ (World Cup 2023) ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ (Hardik Pandya) ಹೊರಗುಳಿದಿದ್ದು, ಈ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (BCCI) ಕೆಎಲ್ ರಾಹುಲ್ (KL Rahul) ಅವರನ್ನು ಉಪನಾಯಕನನ್ನಾಗಿ (Vice Captain) ನೇಮಿಸಿದೆ.

    ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಗುಳಿದಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಬೆಳಗ್ಗೆ ಖಚಿತಪಡಿಸಿದೆ. ಪಾದದ ಗಾಯದಿಂದಾಗಿ ಪಾಂಡ್ಯ ಇನ್ನು ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಅವರ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ತಂಡದ ಉಳಿದ ಪಂದ್ಯಗಳಿಗೆ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಐಸಿಸಿ ಹೇಳಿದೆ. ಇದನ್ನೂ ಓದಿ: ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ, ನೆದರ್ಲೆಂಡ್ಸ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದರು. ಆದರೀಗ ಪಾಂಡ್ಯ ವಿಶ್ವಕಪ್‌ನಿಂದಲೇ ಹೊರಗುಳಿದಿರುವುದು ಬೇಸರದ ಸಂಗತಿ. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

    ಆರಂಭದಲ್ಲಿ ಕಾಲು ಉಳುಕು ಹೊರತಾಗಿ ಬೇರೇನೂ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗಿತ್ತು. ಆ ಬಳಿಕ ಪಾದದ ಅಸ್ಥಿರಜ್ಜು ಸಮಸ್ಯೆ ಎದುರಾದ ಕಾರಣ ಗಾಯವು ಗಂಭೀರ ತಿರುವು ಪಡೆಯಿತು. ಇದು ಗ್ರೇಡ್-1 ಗಾಯವಾಗಿರುವುದರಿಂದ, ಚೇತರಿಕೆಗೆ 10-15 ದಿನಗಳ ಸಮಯ ಬೇಕಾಗುತ್ತದೆ. ಹೀಗಾಗಿ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಬಿಸಿಸಿಐ ಹಾಗೂ ಐಸಿಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿಯಿಂದಲೇ ಪಾಂಡ್ಯ ಔಟ್‌ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ

    ಪಾಂಡ್ಯಗೆ ಏನಾಗಿತ್ತು..?
    ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು. ಇದನ್ನೂ ಓದಿ: ನೆದರ್ಲ್ಯಾಂಡ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – ಅಫ್ಘಾನ್‌ ಸೆಮಿಗೆ ಪ್ರವೇಶಿಸುತ್ತಾ? ಲೆಕ್ಕಾಚಾರ ಏನು?

  • ವಿಶ್ವಕಪ್‌ ಟೂರ್ನಿಯಿಂದಲೇ ಪಾಂಡ್ಯ ಔಟ್‌ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ

    ವಿಶ್ವಕಪ್‌ ಟೂರ್ನಿಯಿಂದಲೇ ಪಾಂಡ್ಯ ಔಟ್‌ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ

    ಮುಂಬೈ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್‌ (World Cup 2023) ಟೂರ್ನಿಯಿಂದಲೇ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ (Hardik Pandya) ಹೊರಗುಳಿದಿದ್ದು, ಟೀಂ ಇಂಡಿಯಾಕ್ಕೆ ದೊಡ್ಡ ಆಘಾತವಾಗಿದೆ.

    ಪಾಂಡ್ಯ ಟೂರ್ನಿಯಿಂದ ಹೊರಬಿದ್ದ ಹಿನ್ನೆಲೆ ಅವರ ಸ್ಥಾನಕ್ಕೆ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಅವರನ್ನ ಆಯ್ಕೆ ಮಾಡಲಾಗಿದೆ. ಕಳೆದ ಅಕ್ಟೋಬರ್‌ 19 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಹಾರ್ದಿಕ್‌ ಪಾಂಡ್ಯ (Injured Hardik Pandya) ನೆದರ್ಲೆಂಡ್ಸ್‌ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ರೋಹಿತ್‌ ಶರ್ಮಾ ಹೇಳಿದ್ದರು. ಆದರೀಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. 2019ರ ವಿಶ್ವಕಪ್‌ ಟೂರ್ನಿಯಲ್ಲೂ ಶಿಖರ್‌ ಧವನ್‌ ಸಹ ಗಾಯದ ಸಮಸ್ಯೆಗೆ ತುತ್ತಾಗಿ ಅರ್ಧದಲ್ಲೇ ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಬೌಲರ್‌ಗಳಿಗೆ ಸ್ಪೆಷಲ್‌ ಬಾಲ್‌ ಕೊಡ್ತಿದ್ದಾರೆ – ಗೆಲುವಿನ ಬಗ್ಗೆ ಪಾಕ್‌ ಮಾಜಿ ಕ್ರಿಕೆಟಿಗ ಟೀಕೆ

    ಬೆಂಗಳೂರಿನ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ಚಿಕಿತ್ಸೆ ಮತ್ತು ಪುನರ್ವಸತಿಗೆ ಒಳಗಾಗಿರುವ ಹಾರ್ದಿಕ್, ಸೆಮಿಫೈನಲ್‌ ವೇಳೆಗೆ ಚೇತರಿಕೊಳ್ಳುತ್ತಾರೆ ಎಂಬ ನಿರೀಕ್ಷೆಯಿತ್ತು. ಆದ್ರೆ ಸೂಕ್ತ ಸಮಯಕ್ಕೆ ಪಾಂಡ್ಯ ಚೇತರಿಕೆ ಕಾಣದ ಕಾರಣ, ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದೇ ವೇಳೆ ತಂಡಕ್ಕೆ ಕನ್ನಡಿಗ ಪ್ರಸಿದ್ಧ್‌ ಕೃಷ್ಣರನ್ನು ಆಯ್ಕೆ ಮಾಡಲಾಗಿದೆ. ಆರಂಭದಲ್ಲಿ ಕಾಲು ಉಳುಕು ಹೊರತಾಗಿ ಬೇರೇನೂ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗಿತ್ತು. ಆ ಬಳಿಕ ಪಾದದ ಅಸ್ಥಿರಜ್ಜು ಸಮಸ್ಯೆ ಎದುರಾದ ಕಾರಣ ಗಾಯವು ಗಂಭೀರ ತಿರುವು ಪಡೆಯಿತು. ಇದು ಗ್ರೇಡ್-1 ಗಾಯವಾಗಿರುವುದರಿಂದ, ಚೇತರಿಕೆಗೆ 10-15 ದಿನಗಳ ಸಮಯ ಬೇಕಾಗುತ್ತದೆ. ಹೀಗಾಗಿ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಬಿಸಿಸಿಐ ಹಾಗೂ ಐಸಿಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: World Cup 2023: ಟೀಂ ಇಂಡಿಯಾಕ್ಕೆ ಮತ್ತೆ ಆಘಾತ – ನ್ಯೂಜಿಲೆಂಡ್‌ ವಿರುದ್ಧದ ಪಂದ್ಯಕ್ಕೆ ಪಾಂಡ್ಯ ಔಟ್‌

    ಹಾರ್ದಿಕ್‌ ಅಲಭ್ಯತೆಯಲ್ಲಿ ಸೂರ್ಯಕುಮಾರ್‌ ಯಾದವ್‌ ಮತ್ತು ಮೊಹಮ್ಮದ್‌ ಶಮಿ ಭಾರತ ತಂಡದ ಪ್ಲೇಯಿಂಗ್‌-11 ನಲ್ಲಿ ಸ್ಥಾನ ಪಡೆಯುತ್ತಿದ್ದಾರೆ. ಅದರಲ್ಲೂ ಶಮಿ ಆಡಿದ 3 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಎರಡು ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು 14 ವಿಕೆಟ್‌ಗಳನ್ನು ಪಡೆಯುವುದರೊಂದಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಿದ್ದಾರೆ. ಆದ್ರೆ ಪ್ರಸಿದ್ಧ್‌ ಕೃಷ್ಣ ಅವರನ್ನು ಸೆಮಿಸ್‌ಗೆ ಕಣಕ್ಕಿಳಿಸಲಾಗುತ್ತದೆಯೇ ಅಥವಾ ಈಗಾಗಲೇ ಭಾರತ ಸೆಮಿಸ್‌ಗೆ ಎಂಟ್ರಿ ಕೊಟ್ಟಿರುವುದರಿಂದ ಪ್ರಮುಖ ಬೌಲರ್‌ಗಳಿಗೆ ರೆಸ್ಟ್‌ ನೀಡಿ ದಕ್ಷಿಣ ಆಫ್ರಿಕಾ ಮತ್ತು ನದೆರ್ಲೆಂಡ್ಸ್‌ ವಿರುದ್ಧ ಪಂದ್ಯಗಳಿಗೆ ಕಣಕ್ಕಿಳಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಇಂಗ್ಲೆಂಡ್‌ ಪಂದ್ಯದಿಂದಲೂ ಔಟ್‌ – ಪಾಂಡ್ಯಗೆ ಗಾಯ ಗಂಭೀರ ಸ್ವರೂಪದ್ದು

    ಪಾಂಡ್ಯಗೆ ಏನಾಗಿತ್ತು..?
    ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್‌ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕಿಂದು ಸಿಂಹಳಿಯರ ಸವಾಲ್‌ – ಸೆಮೀಸ್‌ಗೆ ಲಗ್ಗೆಯಿಡಲು ತವಕ; ಲಂಕಾ ಪಂದ್ಯಕ್ಕೂ ಪಾಂಡ್ಯ ಔಟ್‌? 

    ಭಾರತಕ್ಕಿಂದು ಸಿಂಹಳಿಯರ ಸವಾಲ್‌ – ಸೆಮೀಸ್‌ಗೆ ಲಗ್ಗೆಯಿಡಲು ತವಕ; ಲಂಕಾ ಪಂದ್ಯಕ್ಕೂ ಪಾಂಡ್ಯ ಔಟ್‌? 

    ಮುಂಬೈ: ವಿಶ್ವಕಪ್‌ ಕ್ರಿಕೆಟ್‌ (World Cup Cricket) ಪಂದ್ಯದಲ್ಲಿಂದು ಭಾರತ-ಶ್ರೀಲಂಕಾ (Ind vs SL) ಮುಖಾಮುಖಿಯಾಗುತ್ತಿದ್ದು, 12 ವರ್ಷಗಳ ಬಳಿಕ ಅದೇ ವಾಂಖೆಡೆ ಸ್ಟೇಡಿಯಂನಲ್ಲಿ ಸೆಣಸಲಿವೆ. 2011ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಇದೇ ಕ್ರೀಡಾಂಗಣದಲ್ಲಿ ಲಂಕಾ ತಂಡವನ್ನು ಮಣಿಸಿ ವಿಶ್ವಕಪ್‌ ಕಿರೀಟ ಮುಡಿಗೇರಿಸಿಕೊಂಡಿತ್ತು.

    2023ರ ಟೂರ್ನಿಯಲ್ಲಿ ಈಗಾಗಲೇ 6 ಪಂದ್ಯಗಳನ್ನು ಗೆದ್ದಿರುವ ಭಾರತ ಸತತ 7ನೇ ಗೆಲುವಿನೊಂದಿಗೆ ಸೆಮೀಸ್‌ ಪ್ರವೇಶಿಸುವ ತವಕದಲ್ಲಿದೆ. ಆದ್ರೆ ಮಾಡು ಇಲ್ಲವೇ ಮಡಿ ಹಂತದಲ್ಲಿರುವ ಲಂಕಾ (Sri Lanka) ತಂಡ ಗೆದ್ದು ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯುವ ಕನಸು ಕಂಡಿದೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ವಿಶೇಷ ಸಾಧನೆ ಮಾಡಿದ ಡಿ ಕಾಕ್‌ – ಸಚಿನ್‌ ವಿಶ್ವ ದಾಖಲೆ ಮುರಿಯಲು ಬೇಕಿದೆ 129 ರನ್‌

    ಭಾರತದ್ದೇ ಮೇಲುಗೈ: ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 167 ಪಂದ್ಯಗಳು ನಡೆದಿದ್ದು, ಭಾರತ 98ರಲ್ಲಿ ಗೆಲುವು ಸಾಧಿಸಿದ್ದರೆ, ಲಂಕಾ 57ರಲ್ಲಿ ಗೆಲುವು ಸಾಧಿಸಿದೆ. ಇನ್ನೂ ಪ್ರಸಕ್ತ ವರ್ಷದಲ್ಲೇ ಲಂಕಾ ವಿರುದ್ಧ ಭಾರತ 5 ಪಂದ್ಯಗಳನ್ನಾಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. ಕಳೆದ 10 ಏಕದಿನ ಪಂದ್ಯಗಳಲ್ಲಿ ಇತ್ತಂಡಗಳ ಮುಖಾಮುಖಿ ನೋಡಿದರೇ ಶ್ರೀಲಂಕಾ ಕೇವಲ 1 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಉಳಿದ 9 ಪಂದ್ಯಗಳಲ್ಲಿ ಭಾರತವೇ ಜಯಭೇರಿ ಬಾರಿಸಿದೆ. ಇದನ್ನೂ ಓದಿ: ನ್ಯೂಜಿಲೆಂಡ್‌ ವಿರುದ್ಧ ಆಫ್ರಿಕಾಗೆ 190 ರನ್‌ಗಳ ಭರ್ಜರಿ ಜಯ – ಸೆಮಿಗೆ ಹೋಗುತ್ತಾ ಪಾಕ್‌?

    ಉತ್ತಮ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾಕ್ಕೆ ಲಂಕಾ ವಿರುದ್ಧವೂ ಗೆಲ್ಲುವ ವಿಶ್ವಾಸ ಹೊಂದಿದೆ. ಆದ್ರೆ ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲಿ ಟಾಪ್‌ ಸ್ಕೋರರ್‌ ಆಗಿ ಹೊರಹೊಮ್ಮಿದ್ದ ಶುಭಮನ್‌ ಗಿಲ್‌ ಡೆಂಗ್ಯೂ ಜ್ವರಕ್ಕೆ ತುತ್ತಾದ ಬಳಿಕ ಫಾರ್ಮ್‌ಗೆ ಮರಳುವುದು ಕಷ್ಟವಾಗಿದೆ. ಬೇಗನೆ ವಿಕೆಟ್‌ ಒಪ್ಪಿಸುತ್ತಿರುವ ಗಿಲ್‌ ಈ ಟೂರ್ನಿಯಲ್ಲಿ 4 ಪಂದ್ಯಗಳಲ್ಲಿ ಕೇವಲ 104 ರನ್‌ ಗಳಿಸಿದ್ದಾರೆ. ಇನ್ನೂ ಒಂದೇ ಒಂದು ಅರ್ಧಶತಕ ಗಳಿಸಿರುವ ಮಧ್ಯಮ ಕ್ರಮಾಂಕದ ಶ್ರೇಯಸ್‌ ಅಯ್ಯರ್‌ ಕೂಡ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿದ್ದು, ಚೇತರಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಿದೆ.

    ಪಾಂಡ್ಯ ಔಟ್‌: ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮೊಣಕಾಲು ಗಾಯಕ್ಕೆ ತುತ್ತಾಗಿ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್‌ ಪಾಂಡ್ಯ ಶ್ರೀಲಂಕಾ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ನಾಯಕ ರೋಹಿತ್‌ ಶರ್ಮಾ ತಿಳಿಸಿದ್ದಾರೆ. ಸದ್ಯ ಅವರಿಗೆ ಇನ್ನೂ ವಿಶ್ರಾಂತಿ ಬೇಕಿದೆ. ಸೆಮೀಸ್‌ ವೇಳೆಗೆ ಫಿಟ್‌ ಆಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಅಂದು ರೋಹಿತ್‌ ಶರ್ಮಾ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದು ಇದೇ ಕಾರಣಕ್ಕೆ

    World Cup 2023: ಅಂದು ರೋಹಿತ್‌ ಶರ್ಮಾ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದು ಇದೇ ಕಾರಣಕ್ಕೆ

    ಮುಂಬೈ: ಕಳೆದ ವರ್ಷ T20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ (Team Inaid) ಹೀನಾಯ ಸೋಲನುಭವಿಸಿತ್ತು. ಇದು ರೋಹಿತ್‌ ಶರ್ಮಾ (Rohit Sharma) ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡ ಬಳಿಕ ಐಸಿಸಿ ಟೂರ್ನಿಯ ಮೊದಲ ಸೋಲು ಕೂಡ ಆಗಿತ್ತು. ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದ ನಂತರ ರೋಹಿತ್‌ ಶರ್ಮಾ ಡಗೌಟ್‌ನಲ್ಲಿ ಕುಳಿತು ಕಣ್ಣೀರಿಟ್ಟಿದ್ದರು. ಅದಕ್ಕೆಲ್ಲ ತಕ್ಕ ಉತ್ತರ ಕೊಡುವ ಸಂದರ್ಭಕ್ಕಾಗಿ ಟೀಂ ಇಂಡಿಯಾ ಕಾದು ಕುಳಿತಿದೆ.

    ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ (KL Rahul) ಅವರ ಫ್ಲಾಪ್ ಶೋ, ವಿರಾಟ್ ಕೊಹ್ಲಿ ಅವರ ನಿಧಾನಗತಿಯ ಬ್ಯಾಟಿಂಗ್, ಇಂತಹ ಈ ತಪ್ಪುಗಳಿಂದಾಗಿ ಭಾರತ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಹೀನಾಯ ಸೋಲು ಅನುಭವಿಸಬೇಕಾಗಿತ್ತು. ಇಂಗ್ಲೆಂಡ್‌ ತಂಡವು 10 ವಿಕೆಟ್‌ಗಳ ಜಯ ಸಾಧಿಸಿ ಬೀಗಿತ್ತು. ಇದು ಟೀಂ ಇಂಡಿಯಾ ಆಟಗಾರರ ಸಾಮರ್ಥ್ಯಕ್ಕೂ ಕಪ್ಪು ಚುಕ್ಕೆಯಂತಾಗಿತ್ತು. ಈ ಸೋಲಿನ ನಂತರ ರೋಹಿತ್ ಶರ್ಮಾ ಡಗೌಟ್‌ನಲ್ಲಿ ಕುಳಿತು ಕಣ್ಣೀರಿಟ್ಟಿದ್ದರು. ಅಲ್ಲದೇ ರೋಹಿತ್‌ ಶರ್ಮಾ ನಾಯಕತ್ವದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: 20 ವರ್ಷಗಳಿಂದ ಆಂಗ್ಲರ ವಿರುದ್ಧ ಗೆದ್ದೇ ಇಲ್ಲ ಭಾರತ – ಸೇಡು ತೀರಿಸಿಕೊಳ್ಳಲು ಸಮರಾಭ್ಯಾಸ?

    ಅಂದು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ ಆರಂಭದಲ್ಲೇ ರಾಹುಲ್‌ ವಿಕೆಟ್‌ ಕಳೆದುಕೊಂಡರೂ ನಂತರ ರೋಹಿತ್‌ ಮತ್ತು ಕೊಹ್ಲಿ ನಿಧಾನವಾಗಿ ಆಡಿ ಇನ್ನಿಂಗ್ಸ್‌ ಕಟ್ಟಿದ್ದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ಬಿರುಸಿನ ಆಟವಾಡಿದ್ದರಿಂದ ತಂಡದ ಮೊತ್ತ 160ರ ಗಡಿ ದಾಟಿತ್ತು. ಅಂತಿಮವಾಗಿ ಭಾರತ 6 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿತ್ತು. ಇದು ಸವಾಲಿನ ಮೊತ್ತವೇ ಆಗಿದ್ದರೂ ಭಾರತದ ಬೌಲರ್‌ಗಳಿಂದ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಜೋಸ್‌ ಬಟ್ಲರ್‌ ಮತ್ತು ಅಲೆಕ್ಸ್‌ ಹೇಲ್ಸ್‌ ಬೌಂಡರಿ, ಸಿಕ್ಸರ್‌ ಸಿಡಿಸಿ ತಂಡವನ್ನು ಫೈನಲಿಗೆ ಕೊಂಡೊಯ್ದಿದ್ದರು. ಜೋಸ್‌ ಬಟ್ಲರ್‌ 80 ರನ್‌ (49 ಎಸೆತ, 9 ಬೌಂಡರಿ, 3 ಸಿಕ್ಸರ್‌) ಅಲೆಕ್ಸ್‌ ಹೇಲ್ಸ್‌ 86 ರನ್‌ (47 ಎಸೆತ, 4 ಬೌಂಡರಿ, 7 ಸಿಕ್ಸರ್‌) ಚಚ್ಚಿ ಇಂಗ್ಲೆಂಡ್‌ಗೆ 10 ವಿಕೆಟ್‌ಗಳ ಜಯ ತಂದುಕೊಟ್ಟಿದ್ದರು. ಈ ವಿರೋಚಿತ ಸೋಲು ಅಭಿಮಾನಿಗಳಲ್ಲಿ ಆರದ ಗಾಯವಾಗಿ ಉಳಿದಿದೆ. ಇದನ್ನೂ ಓದಿ: 23 ವರ್ಷಗಳ ಬಳಿಕ ಗೆದ್ದು ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡ ಆಫ್ರಿಕಾ – ಸೆಮಿಫೈನಲ್‌ ರೇಸ್‌ನಿಂದ ಪಾಕ್‌ ಔಟ್‌

    ಸದ್ಯ ಕಳೆದ 5 ದಿನಗಳಿಂದಲೂ ಟೀಂ ಇಂಡಿಯಾ ಲಕ್ನೋ ಮೈದಾನದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದೆ. ಅಭ್ಯಾಸವೇಳೆ ನಡೆಸುತ್ತಿದ್ದ ವೇಳೆ ಕೊಹ್ಲಿ, ಟೀಂ ಇಂಡಿಯಾ ಆರಂಭಿಕ ಶುಭಮನ್‌ ಗಿಲ್‌ (Shubman Gill) ಅವರೂ ಸಹ ಬೌಲಿಂಗ್‌ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಅಲ್ಲದೇ ಅಭ್ಯಾಸದ ವೇಳೆ ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್‌ ಮೊದಲಾದವರೂ ಬೌಲಿಂಗ್‌ ಅಭ್ಯಾಸ ಮಾಡಿದ್ದಾರೆ. ಒಂದು ವೇಳೆ ಕೊನೇ ಕ್ಷಣದಲ್ಲಿ ಪ್ಲೇಯಿಂಗ್‌-11 ನಲ್ಲಿ ಬದಲಾವಣೆಯಾದರೆ ಕೊಹ್ಲಿ 6ನೇ ಬೌಲರ್‌ ಆಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದಾಖಲೆ ಶತಕ ಸಿಡಿಸಲು ಕೊಹ್ಲಿ ವೇಯ್ಟಿಂಗ್‌ – ಮತ್ತೆ ಆ ತಪ್ಪು ಮಾಡದಿರಲಿ ಅಂದ್ರು ಫ್ಯಾನ್ಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]