Tag: ಹಾಲಿನ ದರ

  • ಹಾಲಿನ ದರ ಪ್ರತಿ ಲೀಟರ್‌ಗೆ 5 ರೂ. ಹೆಚ್ಚಳಕ್ಕೆ ಬೇಡಿಕೆ

    ಹಾಲಿನ ದರ ಪ್ರತಿ ಲೀಟರ್‌ಗೆ 5 ರೂ. ಹೆಚ್ಚಳಕ್ಕೆ ಬೇಡಿಕೆ

    ಬೆಂಗಳೂರು: ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಿ ವಿರೋಧಕ್ಕೆ ಕಾರಣವಾಗಿದ್ದ ಹಾಲು ಒಕ್ಕೂಟ ಸಿಎಂ ಸೂಚನೆ ಮೇರೆಗೆ ಇದೀಗ ಹಾಲಿನ ಪ್ರೋತ್ಸಾಹ ಧನ ನೀಡೋದಕ್ಕೆ ಮುಂದಾಗಿದೆ. ಆದರೆ ಈಗ ಹಾಲು ಒಕ್ಕೂಟ ಸರ್ಕಾರಕ್ಕೊಂದು ಕಂಡಿಷನ್ ಕೂಡ ಹಾಕಿದೆ. ಗ್ರಾಹಕರಿಗೆ ಬಿಗ್ ಶಾಕ್ ಕೊಡುವ ರೀತಿಯಲ್ಲಿ ಕಾಣಿಸ್ತಾ ಇದೆ.

    ಬೆಲೆಯೇರಿಕೆ ಬಿಸಿ ಜನರನ್ನು ನಿರಂತರವಾಗಿ ಸುಡುತ್ತಿದೆ. ಇದರ ಮಧ್ಯೆ ಈಗ ಹಾಲಿನ ದರ (Milk Price) ಏರಿಕೆಯ ಭೀತಿ ಜನರಿಗೆ ಕಾಡುತ್ತಿದೆ. ಯಾಕೆಂದ್ರೆ ಹಾಲು ಒಕ್ಕೂಟಗಳು ನಷ್ಟದ ಕಾರಣಕ್ಕೆ ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸೋಕೆ ತಯಾರಾಗಿದ್ದವು. ಇದಕ್ಕೆ ದೊಡ್ಡ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಿಎಂ (Siddaramaiah) ಸೂಚನೆಯ ಮೇರೆಗೆ ಕಡಿತಗೊಳಿಸಿದ ದರವನ್ನು ಮತ್ತೆ ನೀಡಲು ಒಕ್ಕೂಟಗಳು ಮುಂದಾಗಿದೆ. ಆದರೆ ಸರ್ಕಾರದ ಮುಂದೆ ಈಗ ದರ ಏರಿಕೆಯ ಪ್ರಸ್ತಾವನೆ ಇಡಲು ತಯಾರಾಗಿದೆ. ನಿತ್ಯವೂ 16 ಲಕ್ಷ ನಷ್ಟದಲ್ಲಿ ನಡೆಯುತ್ತಿದೆ. ಇದು ಕೆಎಂಎಫ್‍ (KMF) ನ ಹಾದಿಗೆ ಕಷ್ಟವಾಗಲಿದೆ. ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಲು ನಿರ್ಧಾರ ಮಾಡಲು ನಿರ್ಧರಿಸಿದೆ.

    ಹಾಲಿನ ದರ ಏರಿಕೆ ಅನಿವಾರ್ಯತೆ ಅನ್ನೋದು ಹಾಲು ಒಕ್ಕೂಟದ ಮಾತು. ಆದರೆ ಗ್ರಾಹಕರು ಮಾತ್ರ ಇದಕ್ಕೆ ತಯಾರಾಗಿಲ್ಲ. ಅತ್ತ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸರ್ಕಾರ ದರ ಏರಿಕೆಯತ್ತ ಮನಸು ಮಾಡೋದು ಅನುಮಾನ. ಇದನ್ನೂ ಓದಿ: ವಿಧಾನಸಭೆ ಗೆದ್ದ ಕಾಂಗ್ರೆಸ್‍ಗೆ ಲೋಕಸಭೆಯೇ ಟಾರ್ಗೆಟ್- ವಿವಾದ ಸೃಷ್ಠಿಸದಂತೆ ಹೈಕಮಾಂಡ್ ಸೂಚನೆ

    ರೈತರ ಏಳಿಗೆ ಹಾಗೂ ಕನ್ನಡಿಗರ ಮನೆಮಾತಾಗಿರುವ ನಂದಿನಿ ನಷ್ಟದ ಹಾದಿಯಲ್ಲಿದೆ ಅನ್ನೋದು ಕೊಂಚ ಶಾಕಿಂಗ್. ರೈತರ ಸಂಸ್ಥೆ ಕನ್ಮಡಿಗರ ಅಸ್ಮಿತೆಯ ಸಂಕೇತವಾಗಿರುವ ಕೆಎಂಎಫ್ ಅನ್ನು ಉದ್ಧಾರ ಮಾಡೋಕೆ ಕೈ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತೆ ಅನ್ನೋದು ನೋಡಬೇಕು.

     

  • ಮಂಡ್ಯ ರೈತರಿಗೆ ಶಾಕ್ ಕೊಟ್ಟ ಮನ್ಮುಲ್ – ಹಾಲಿನ ದರದಲ್ಲಿ ಲೀಟರ್‌ಗೆ 1 ರೂ. ಕಡಿತ

    ಮಂಡ್ಯ ರೈತರಿಗೆ ಶಾಕ್ ಕೊಟ್ಟ ಮನ್ಮುಲ್ – ಹಾಲಿನ ದರದಲ್ಲಿ ಲೀಟರ್‌ಗೆ 1 ರೂ. ಕಡಿತ

    ಮಂಡ್ಯ: ರೈತರ ಖರೀದಿ ಹಾಲಿನ (Milk) ದರದಲ್ಲಿ ಲೀಟರಿಗೆ 1 ರೂ. ಕಡಿತ ಮಾಡಿ ಮನ್ಮುಲ್ (MANMUL) ಆದೇಶ ಹೊರಡಿಸಿದ್ದು, ಮಂಡ್ಯ (Mandya) ರೈತರಿಗೆ ಬಿಗ್ ಶಾಕ್ ನೀಡಿದೆ.

    ಜೂನ್ ತಿಂಗಳಲ್ಲೇ ಮನ್ಮುಲ್ ಪರಿಷ್ಕೃತ ದರ ಆದೇಶ ಜಾರಿ ಮಾಡಿದ್ದು, ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರೆಯಲಿದೆ. ಮನ್ಮುಲ್ ಪ್ರತೀ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡುತ್ತಿತ್ತು. ಇದೀಗ ಖರೀದಿ ಹಾಲಿನ ದರದಲ್ಲಿ ಲೀಟರ್‌ಗೆ 1 ರೂ. ಕಡಿತಗೊಳಿಸಿ ರೈತರಿಗೆ ಶಾಕ್ ನೀಡಿದೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ಮುಂಗಾರು ಮಳೆಯಾಗಿ ಹಸಿರು ಮೇವು ಲಭ್ಯತೆಗೆ ದರ ಕಡಿತಗೊಳಿಸಲಾಗಿದೆ ಎಂದು ಮನ್ಮುಲ್ ಸಮರ್ಥನೆ ನೀಡಿದೆ. ಸದ್ಯ ಹಾಲು ಉತ್ಪಾದಕರಿಗೆ 32.25 ರೂ. ಬದಲು 31.25 ರೂ. ಕೊಡುವುದಾಗಿ ನಿಗದಿಯಾಗಿದೆ. ಇದನ್ನೂ ಓದಿ: ಮಾದಪ್ಪನ ಕ್ಷೇತ್ರದ ಆನೆ ಉಮಾಮಹೇಶ್ವರಿಗೆ 5 ಲಕ್ಷ ರೂ. ಆರೋಗ್ಯ ವಿಮೆ

  • ಚಾಮುಲ್ ಹಾಲು ಉತ್ಪಾದಕರಿಗೆ ಗುಡ್‌ನ್ಯೂಸ್ – 2 ರೂ. ಹೆಚ್ಚಳ

    ಚಾಮುಲ್ ಹಾಲು ಉತ್ಪಾದಕರಿಗೆ ಗುಡ್‌ನ್ಯೂಸ್ – 2 ರೂ. ಹೆಚ್ಚಳ

    ಚಾಮರಾಜನಗರ: ಜಿಲ್ಲಾ ಹಾಲು ಒಕ್ಕೂಟವು (CHAMUL) ಉತ್ಪಾದಕರಿಗೆ ಗುಡ್ ನ್ಯೂಸ್ ನೀಡಿದೆ.

    ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಿಂದ (CHAMUL) ಪರಿಷ್ಕೃತ ದರ ಪ್ರಕಟವಾಗಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚಳ (Milk Price) ಮಾಡಿದೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಪ್ರಸ್ತುತ 1 ಲೀಟರ್ ಹಾಲಿಗೆ 28.85 ರೂ. ಸಿಗುತ್ತಿತ್ತು. ಇನ್ನು ಮುಂದೆ ಚಾಮುಲ್ (CHAMUL) ರೈತರಿಂದ 30.85 ರೂ.ಗೆ ಪ್ರತಿ ಲೀಟರ್ ಹಾಲನ್ನು ಖರೀದಿಸಲಿದೆ. ಇದನ್ನೂ ಓದಿ: ಬೆಳಗಾವಿ–ಹುನಗುಂದ–ರಾಯಚೂರು ಹೈವೇ ನಿರ್ಮಾಣಕ್ಕೆ ಅನುಮೋದನೆ: ಮೋದಿಗೆ ಜೋಶಿ ಅಭಿನಂದನೆ

    ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಾಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಸಾವಿರಾರು ಹಸುಗಳು ರೋಗಕ್ಕೆ ತುತ್ತಾಗಿವೆ. ಈ ನಡುವೆ ಚಾಮುಲ್ ಹಾಲಿನ ದರ ಹೆಚ್ಚಿಸಿರುವ ಮೂಲಕ ಸಂಕಷ್ಟದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತೆ ಮಾಡಿದೆ.

    ಲಂಪಿ ವೈರಸ್ ಹೇಗೆ ಹರಡುತ್ತೆ?
    ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Virus) ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ಹಸು, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ಸೊಳ್ಳೆ, ನೊಣ, ಉಣ್ಣೆ ಅಂತಹ ಕೀಟಗಳಿಂದ ಹಸುಗಳಿಗೆ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಇಲಾಖೆ ಸಲಹೆ ನೀಡಿದೆ.

    ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಸೂಚಿಸಿದೆ. ಜೊತೆಗೆ ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು ಅನುದಾನ ನೀಡಿದೆ. ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ನೇ ತಾರೀಖಿನಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ 20,000 ರೂ. ಮತ್ತು ಎತ್ತುಗಳಿಗೆ 30,000 ರೂ. ಹಾಗೂ ಪ್ರತಿ ಕರುವಿಗೆ 5,000 ರೂ. ಪರಿಹಾರ ನೀಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಡಿ.1 ರಿಂದ ಮಿಲ್ಮಾ ಹಾಲಿನ ದರ ಲೀಟರ್‌ಗೆ 6 ರೂ. ಏರಿಕೆ

    ಡಿ.1 ರಿಂದ ಮಿಲ್ಮಾ ಹಾಲಿನ ದರ ಲೀಟರ್‌ಗೆ 6 ರೂ. ಏರಿಕೆ

    ತಿರುವನಂತಪುರಂ: ಕರ್ನಾಟಕದಲ್ಲಿ (Karnataka) ಹಾಲಿನ (Milk) ದರ ಹೆಚ್ಚಳಗೊಂಡ ಬೆನ್ನಲ್ಲೇ ಕೇರಳದ (Kerala) ಹಾಲು ಒಕ್ಕೂಟ ಮಿಲ್ಮಾ (Milma)  ಹಾಲಿನ ದರ ಹೆಚ್ಚಳಕ್ಕೆ ಮುಂದಾಗಿದೆ.

    ಮಿಲ್ಮಾ ಹಾಲಿನ ದರವನ್ನು ಡಿ.1 ರಿಂದ ಲೀಟರ್‌ಗೆ 6 ರೂ. ಏರಿಕೆಗೆ ನಿರ್ಧರಿಸಿದೆ. ಈ ಹಿಂದೆ 2019ರಲ್ಲಿ ಲೀ.4 ರೂ. ಏರಿಸಲಾಗಿತ್ತು. ಇದೀಗ 3 ವರ್ಷಗಳ ನಂತರ ಲೀ.6 ರೂ. ಏರಿಕೆ ಮಾಡಲು ಮಿಲ್ಮಾ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತ

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಿಲ್ಮಾ ಫೆಡರೇಶನ್ ಅಧ್ಯಕ್ಷ ಕೆ.ಎಸ್. ಮಣಿ, ಈ ಹಿಂದೆ ಹಾಲಿನ ದರ ಏರಿಕೆ ಮಾಡಿದಾಗ ರೈತರಿಗೆ 3.35 ರೂ. ಸಿಗುತ್ತಿತ್ತು. ಇದೀಗ 6 ರೂ. ಏರಿಕೆ ಮಾಡಿದಾಗ 5.25 ರೈತರಿಗೆ ಸಿಗಲಿದೆ. ಈ ಬಗ್ಗೆ ಮಿಲ್ಮಾ ಹಾಲು ಒಕ್ಕೂಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

    ಮಿಲ್ಮಾ ಹಾಲು ದರ ಏರಿಕೆಗೂ ಮುನ್ನ ಪಶುವೈದ್ಯಕೀಯ ಮತ್ತು ಕೃಷಿ ವಿಶ್ವವಿದ್ಯಾನಿಲಯಗಳು ಹೈನುಗಾರರಿಗೆ ತಗಲುವ ವೆಚ್ಚಗಳ ಕುರಿತು ಅಧ್ಯಯನ ನಡೆಸಿತ್ತು. ಈ ಅಧ್ಯಯನದ ವರದಿಯನ್ನು ಆಧಾರಿಸಿದಾಗ ರೈತರಿಗೆ ಒಂದು ಲೀ.ಗೆ 8.57 ರೂ. ನಷ್ಟವಾಗುತ್ತಿರುವ ಬಗ್ಗೆ ಸ್ಪಷ್ಟವಾಗಿತ್ತು. ಹಾಗಾಗಿ ಮಿಲ್ಮಾ ಹಾಲಿನ ದರ 6 ರೂ. ಏರಿಕೆಗೆ ನಿರ್ಧರಿಸಿದೆ. ಇದನ್ನೂ ಓದಿ: ಐಫೋನ್ ಫ್ಯಾಕ್ಟರಿಯ ಘರ್ಷಣೆ – ಲಾಕ್‌ಡೌನ್ ವಿಸ್ತರಿಸಿದ ಚೀನಾ

    Live Tv
    [brid partner=56869869 player=32851 video=960834 autoplay=true]

  • ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ

    ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ

    ಬೆಂಗಳೂರು: ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.

    ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿಲಾಗಿದೆ ಹೀಗಿದ್ದರೂ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ರೈತರು ಹಾಗೂ ಕೆಎಂಎಫ್‍ನ ಜಿಲ್ಲಾ ಹಾಲು ಒಕ್ಕೂಡಗಳಿಂದ ಹಾಲಿನ ದರ ಹೆಚ್ಚಳಕ್ಕೆ ಒತ್ತಡ ಹೆಚ್ಚಾಗಿದೆ. ಹೀಗಾಗಿ ಕೆಎಂಎಫ್ ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ತಾನೇ ಹಾಲಿನ ದರವನ್ನು ಏರಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬ್ರಿಟನ್ ರಾಣಿಯ ಕಿರೀಟದಲ್ಲಿದ್ದ ಕೊಹಿನೂರು ವಜ್ರದ ಮೂಲ ಯಾದಗಿರಿ!

    ಈ ಕುರಿತಂತೆ ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ನೀಡಿದೆ. ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಿದ್ದು, ಇದನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ. ಇದನ್ನೂ ಓದಿ: ನಾನೂ ಸಿದ್ದರಾಮಯ್ಯರನ್ನ ಕಚ್ಚೆ ಹರುಕ ಅನ್ನಬಹುದಲ್ವಾ?: ಸಿಟಿ ರವಿ

    Live Tv
    [brid partner=56869869 player=32851 video=960834 autoplay=true]

  • ಹಾಲಿನ ದರ ಏರಿಸದೇ ಇದ್ದರೆ ಪಂಜಾಬ್ ರೈತರ ರೀತಿ ಹೋರಾಟ: ಜಿ.ಆರ್. ಭಾಸ್ಕರ್

    ಹಾಲಿನ ದರ ಏರಿಸದೇ ಇದ್ದರೆ ಪಂಜಾಬ್ ರೈತರ ರೀತಿ ಹೋರಾಟ: ಜಿ.ಆರ್. ಭಾಸ್ಕರ್

    ನೆಲಮಂಗಲ: ಹಾಲಿನ ದರ ಏರಿಕೆಗೆ ಪಟ್ಟು ಇಲ್ಲದಿದ್ದಲ್ಲಿ ಪಂಜಾಬ್ ರೀತಿ ಹೋರಾಟದ ಹಾದಿ ತುಳಿಯುವ ದಿನ ಹತ್ತಿರಲ್ಲೆ ಇದೇ ಎಂದು ಬಮೂಲ್ ಶಿಬಿರದ ನಿದೇರ್ಶಕ ಜಿ.ಆರ್. ಭಾಸ್ಕರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಕಾಸರಘಟ್ಟದಲ್ಲಿ 183ನೇ ತಾಲೂಕಿನ ನೂತನ ಸಂಘಕ್ಕೆ ಚಾಲನೆ ನೀಡಿ ವೇದಿಕೆಯಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ಅವಲಂಬಿಸಿರುವ ರೈತಾಪಿ ವರ್ಗದವರ ದೈನಂದಿನ ಜೀವನ ಇಂದು ಬಹಳ ಕಷ್ಟವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಹಾಲಿನ ದರ ಹೆಚ್ಚಳವಾಗಿಲ್ಲ. ಇಂದು ಬೇರೆ-ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಿದೆ. ನಮ್ಮ ರಾಜ್ಯದಲ್ಲಿ ಮೂರು ವರ್ಷಗಳಿಂದ ದರ ಏರಿಕೆಯಾಗಿಲ್ಲ. ಸರ್ಕಾರ ಕೂಡಲೇ ದರ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.  ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ

    ಹಾಲು ಉತ್ಪಾದಕರಿಗೆ ಯಾವುದೇ ಲಾಭಾಂಶ ಉಳಿಯುತ್ತಿಲ್ಲ. ಕಳೆದ ವರ್ಷ 56 ಕೋಟಿ ನಷ್ಟ ಸರಿದೂಗಿಸಿದ್ದೇವೆ. ಕೂಡಲೇ ದರ ಏರಿಕೆ ಮಾಡದಿದ್ದರೆ. ನಮ್ಮ ರಾಜ್ಯದ ರೈತರು ಪಂಜಾಬ್ ರೀತಿ ಹೋರಾಟದ ಹಾದಿ ತುಳಿಯುವ ದಿನ ಹತ್ತಿರದಲ್ಲೇ ಇದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,033 ಪಾಸಿಟಿವ್, 43 ಸಾವು

  • ಹಾಲಿನ ದರ ಏರಿಕೆ ಆಲೋಚನೆ ಸರ್ಕಾರದ ಮುಂದಿಲ್ಲ – ಪಶುಸಂಗೋಪನ ಸಚಿವರ ಸ್ಪಷ್ಟನೆ

    ಹಾಲಿನ ದರ ಏರಿಕೆ ಆಲೋಚನೆ ಸರ್ಕಾರದ ಮುಂದಿಲ್ಲ – ಪಶುಸಂಗೋಪನ ಸಚಿವರ ಸ್ಪಷ್ಟನೆ

    ಬೆಂಗಳೂರು: ರಾಜ್ಯ ಸರ್ಕಾರವು ಹಾಲಿನ ದರ ಹೆಚ್ಚಳ ಮಾಡುವ ಯಾವುದೇ ಚಿಂತನೆಯನ್ನು ನಡೆಸಿಲ್ಲ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಸರ್ಕಾರ ನೀಡುತ್ತಿರುವ 5 ರೂ. ಸಹಾಯ ಧನ ಸರಿಯಾದ ಸಮಯಕ್ಕೆ ತಲುಪುತ್ತಿದೆ. ಹಾಲಿನ ದರ ಏರಿಕೆ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ. ದರ ಹೆಚ್ಚಳ ಹಾಗೂ ಕಡಿಮೆ ಮಾಡುವ ಕುರಿತು ಯಾವುದೇ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಮೈಕ್ರೋ ಚಿಪ್: ಪಶು ಭಾಗ್ಯ ಯೋಜನೆ ಅಡಿ ನೀಡುವ ಹಸುಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಹಾಲು ಕರೆಯುವ ಹಸುಗಳಿಗೆ ಮಾತ್ರ ಚಿಪ್ ಆಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಚಿಪ್ ಮೂಲಕ ಹಸುವಿನ ಸಂಪೂರ್ಣ ಮಾಹಿತಿ ಟ್ರಾಕ್ ಮಾಡಲಾಗುತ್ತಿದೆ. ಇದರಿಂದ ಹಸುವಿನ ಆರೋಗ್ಯ ಬಗ್ಗೆ ಮಾಹಿತಿ ಪಡೆಯಲು ಸಹಾಯಕವಾಗುತ್ತದೆ. ಚಿಪ್ ಅಳವಡಿಸುವ ಕಾರ್ಯ ಶೇ.60 ರಷ್ಟು ಕಾರ್ಯ ಪೂರ್ಣಗೊಂಡಿದ್ದು, ಇದುವರೆಗೂ 1.8 ಲಕ್ಷ ಹಸುಗಳಿಗೆ ಚಿಪ್ ಆಳವಡಿಕೆ ಮಾಡಲಾಗಿದೆ. ಒಂದು ಚಿಪ್ಪಿನ ಬೆಲೆ 6 ರೂ. 20 ಪೈಸೆ ಎಂದು ವಿವರಿಸಿದರು.

    ರೇವಣ್ಣ ಹಸ್ತಕ್ಷೇಪವಿಲ್ಲ: ಕೆಎಂಎಫ್ ಹೆಚ್ಚಿನ ಅಭಿವೃದ್ಧಿ ಆಗುತ್ತಿಲ್ಲ ಎಂವ ಸಚಿವ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರಕ್ರಿಯೆ ನೀಡಿದ ಅವರು, ಲೋಕೋಪಯೋಗಿ ಇಲಾಖೆ ಸಚಿವ ರೇವಣ್ಣ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಆದರೆ ಕೆಎಂಎಫ್ ಅಭಿವೃದ್ಧಿಗೆ ರೇವಣ್ಣ ಅವರ ಕೊಡುಗೆ ಅಪಾರ. ಯಾರೇ ಆದ್ರು ಕಟ್ಟಿದ ಸಂಸ್ಥೆಗೆ ಸಮಸ್ಯೆ ಮಾಡಿದರೆ ಎಲ್ಲರಿಗೂ ನೋವಾಗುತ್ತೆ. ಆ ವೇಳೆ ಹೇಳಿಕೆ ನೀಡಿರಬಹುದು ಅಷ್ಟೇ ಎಂದರು.

    ಇದೇ ವೇಳೆ ಟಿಪ್ಪು ಕಾರ್ಯಕ್ರಮಕ್ಕೆ ಆಗಮಿಸದ ಕುರಿತು ಸ್ಪಷ್ಟನೆ ನೀಡಿದ ನಾಡಗೌಡ ಅವರು, ಟಿಪ್ಪು ಜಯಂತಿಗೆ ಕಾರ್ಯಕ್ರಮಕ್ಕೆ ಆಗಮಿಸಲು ನಾನು ಟಿಕೆಟ್ ಬುಕ್ ಮಾಡಿದ್ದೆ, ಆದರೆ ಸಚಿವ ರೇವಣ್ಣ ನಾನು ಹೋಗುತ್ತೆನೆ ಎಂದು ಹೇಳಿದ್ದರು. ಅದ್ದರಿಂದ ನಾನು ಆಗಮಿಸಲಿಲ್ಲ ಎಂದರು.

    ರಾಜ್ಯದಿಂದ ತೆಲಂಗಾಣ ಹಾಗೂ ಆಂಧ್ರಪ್ರದೇಶಕ್ಕೆ ಸರಬರಾಜು ಆಗುತ್ತಿದ್ದ ಮೇವು ತಡೆಯಲು ಆದೇಶ ಮಾಡಲಾಗಿದೆ. ಬೇಸಿಗೆ ವೇಳೆ ಮೇವಿನ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ದೊರೆಯುವ ಮೇವನ್ನು ವೈಜ್ಞಾನಿಕವಾಗಿ ಸಂರಕ್ಷಣೆ ಮಾಡಲಾಗುವುದು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಕ್ಟೋಬರ್ ನಿಂದ  ನಂದಿನಿ ಹಾಲಿನ ದರ ಹೆಚ್ಚಳ?

    ಅಕ್ಟೋಬರ್ ನಿಂದ ನಂದಿನಿ ಹಾಲಿನ ದರ ಹೆಚ್ಚಳ?

    ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಆಗುತ್ತಿರುವ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಹಾಲಿನ ದರವನ್ನು ಹೆಚ್ಚಳ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ.

    ಈ ಕುರಿತು ಇಂದು ನಗರದಲ್ಲಿ ಕೆಎಂಎಫ್ ಬೋರ್ಡ್ ಮೀಟಿಂಗ್ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಅಂತ ಮ್ಯಾನೇಜಿಂಗ್ ಡೈರೆಕ್ಟರ್ ರಾಕೇಶ್ ಸಿಂಗ್ ಪಬ್ಲಿಕ್ ಟಿವಿಗೆ ಮಾಹಿತಿ ನಿಡಿದ್ದಾರೆ.

    ಒಂದು ವೇಳೆ ರಾಜ್ಯ ಸರ್ಕಾರದಿಂದ ಅಂಕಿತ ಸಿಕ್ಕಿದರೆ ದರ ಏರಿಕೆ ಆಗುತ್ತೆ. ಅಕ್ಟೋಬರ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ಬೆಲೆಯಲ್ಲಿ 2 ರೂ. ಹೆಚ್ಚಳವಾಗಲಿದೆ. ಇದರಲ್ಲಿ 1 ರೂಪಾಯಿ ಕೆಎಂಎಫ್ ಗೆ, ಇನ್ನು 1 ರೂಪಾಯಿ ರೈತರಿಗೆ ನೀಡಲು ಕೆಎಂಎಫ್ ಚಿಂತನೆ ನಡೆಸಿದೆ. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಕೆಎಂಎಫ್ ನಷ್ಟದಲ್ಲಿ ನಡೀತಾ ಇದೆ ಅಂತ ಒಂದು ಕಾರಣವಾದ್ರೆ ಇನ್ನೊಂದು ಹಾಲಿನ ಪೂರೈಕೆ ಹೆಚ್ಚಾಗುತ್ತಿದ್ದು ಬೇಡಿಕೆ ಹೆಚ್ಚಾಗುತ್ತಿಲ್ಲ. ಹೀಗಾಗಿ ರೈತರಿಗೆ ಸಿಗುವ ಪ್ರೋತ್ಸಾಹ ಧನದಲ್ಲಿ 2 ರೂ.ಕಡಿತ ಮಾಡಲಾಗಿದೆ. ದರವನ್ನು ಕಡಿತಗೊಳಿಸಿದ್ದಕ್ಕೆ ಕಳೆದ ತಿಂಗಳು ರೈತರು ಪ್ರತಿಭಟನೆ ನಡೆದಿದ್ದರು. ಈ ನಿಟ್ಟಿನಲ್ಲಿ ಕೆಎಂಎಫ್ ಈ ನಿರ್ಧಾರಕ್ಕೆ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=3lQkr1fwB0I