Tag: ಹಾಲು ಒಕ್ಕೂಟ

  • ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಬೆಂಗಳೂರು: ರಾಜ್ಯ ಸರ್ಕಾರ ಉಚಿತ ಗ್ಯಾರಂಟಿಗಳನ್ನ ಘೋಷಿಸಿ ಅದರಲ್ಲಿ ಕೆಲವೊಂದನ್ನ ನೀಡುತ್ತಲೂ ಇದೆ. ಆದ್ರೆ ಯಾವಾಗ ಗ್ಯಾರಂಟಿ ಅನುಷ್ಠಾನಕ್ಕೆ ಬಂತೋ ಆಗಿನಿಂದ ಜನರ ಮೇಲೆ ದರ ಏರಿಕೆಯ ಬರೆ ಹಾಕುತ್ತಲೇ ಇದೆ. ಇದೀಗ ಹಾಲಿನ ದರ ಹೆಚ್ಚಳ (Milk Price Hike) ಮಾಡಲು ಸರ್ಕಾರ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಕರೆದಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಿದ್ದು, ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಮೇವು, ಆಹಾರ, ಕೂಲಿ ಸೇರಿ ಇತರೇ ಖರ್ಚುಗಳು ಹೆಚ್ಚಾಗಿರುವುದರಿಂದ ಪ್ರತಿ ಲೀ. ಹಾಲಿಗೆ 5 ರೂ. ನಂತೆ ದರ ಹೆಚ್ಚಳ ಮಾಡಲು ವಿವಿಧ ಹಾಲು ಒಕ್ಕೂಟಗಳು ಪಶುಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆ ದರ ಹೆಚ್ಚಳ ಪ್ರಸ್ತಾಪವಾಗಿದ್ದು, ಸರ್ಕಾರದ ಅನುಮತಿ ಬಾಕಿಯಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್‌, ರಚಿನ್‌ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ

  • ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಹೈಕೋರ್ಟ್ ಆಸ್ತು – ಸತ್ಯಕ್ಕೆ ಸಂದ ಜಯ ಎಂದ ಸಂಸದ ಸುಧಾಕರ್

    ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಹೈಕೋರ್ಟ್ ಆಸ್ತು – ಸತ್ಯಕ್ಕೆ ಸಂದ ಜಯ ಎಂದ ಸಂಸದ ಸುಧಾಕರ್

    ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ ಸಚಿವರಾಗಿದ್ದಾಗ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಚಿಮುಲ್ (Kochimul) ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಿದ್ದ ಆದೇಶವನ್ನ ಮರುಸ್ಥಾಪನೆ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಇದು ಕೋಲಾರ ಮತ್ತು ಚಿಕ್ಕಳ್ಳಾಪುರ ಜಿಲ್ಲೆಯ ರೈತರ (Chikkaballapura Farmers) ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಸದ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಶಿಗ್ಗಾಂವಿ ಟಿಕೆಟ್‌ ನೀಡಿದ ಕಾಂಗ್ರೆಸ್‌

    ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಸುಧಾಕರ್ (Dr. K Sudhakar), ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ದ್ವೇಷದ ರಾಜಕಾರಣಕ್ಕಾಗಿ, ನನ್ನ ಮೇಲಿನ ಸೇಡಿಗಾಗಿ ಬಿಜೆಪಿ ಸರ್ಕಾರದ (BJP Government) ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸ ಮಾಡಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ 16.17 ಕೋಟಿ ಆಸ್ತಿ ಒಡೆಯ; ಆದ್ರೂ ಸ್ವಂತ ಕಾರು ಇಲ್ಲ!

    ‘ಬೆಟ್ಟ ಅಗೆದು ಇಲಿ ಹಿಡಿದರು’ ಎನ್ನುವ ಹಾಗೆ ರಾಜಕೀಯ ಸ್ವಾರ್ಥಕ್ಕಾಗಿ, ದ್ವೇಷ ರಾಜಕಾರಣಕ್ಕಾಗಿ 17 ತಿಂಗಳ ಹಿಂದೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಯ ಅದೇಶವನ್ನ ರದ್ದು ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ನ್ಯಾಯಾಲಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೋಚಿಮುಲ್ ಹಾಲು ಒಕ್ಕೂಟವನ್ನು ವಿಭಜನೆ ಮಾಡಿದ್ದ ಆದೇಶವೇ ಸರಿ ಇದೆ ಎಂದು ಒಪ್ಪಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಈ ದ್ವಂದ್ವ ನೀತಿಯಿಂದ, ಎಡಬಿಡಂಗಿ ನಡೆಯಿಂದ 17 ತಿಂಗಳು ಅನಗತ್ಯವಾಗಿ ವ್ಯರ್ಥವಾಗಿದೆ. ಕೆಲವೇ ಕೆಲವು ನಾಯಕರ ಸ್ವಾರ್ಥ ರಾಜಕಾರಣಕ್ಕೆ 17 ತಿಂಗಳ ಕಾಲ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಇಂಡಿಗೋ, ಏರ್‌ ಇಂಡಿಯಾ, ಸ್ಪೈಸ್‌ಜೆಟ್‌ ಸೇರಿ ಮತ್ತೆ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ

    ರೈತರಿಗಾದ ಈ ನಷ್ಟಕ್ಕೆ ಯಾರು ಹೊಣೆ? ಇಂದಿನ ಕೋರ್ಟ್ ತೀರ್ಪು ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷ ಮಾಡಿದ್ದು, ಇನ್ನು ಮುಂದಾದರೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡದೆ ಜನಪರವಾಗಿ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ, ನೀತಿ ಪಾಠ ಹೇಳುವ ಕಾಂಗ್ರೆಸ್ ನಾಯಕರು ಕೋಚಿಮುಲ್ ಆಡಳಿತ ಮಂಡಳಿಯ ಅವಧಿಯು 2024ರ ಮೇ 12ಕ್ಕೆ ಮುಕ್ತಾಯವಾಗಿದ್ದರೂ ಇನ್ನೂ ಚುನಾವಣೆ ನಡೆಸಿಲ್ಲ. ಈ ಬಗ್ಗೆ ಹೈಕೋರ್ಟ್‍ನಲ್ಲಿ ಹೂಡಲಾಗಿದ್ದ ದಾವೆಗೆ ಕೋರ್ಟ್ ತೀರ್ಪು ನೀಡಿದ್ದು, ಆಡಳಿತ ಮಂಡಳಿ ರಚನೆಗಾಗಿ 90 ದಿನಗಳ ಒಳಗಾಗಿ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳಿಸಬೇಕೆಂದು ಜುಲೈ 17ರಂದು ಹೈಕೋರ್ಟ್ ಆದೇಶಿಸಿತ್ತು. ಅಕ್ರಮ ನೇಮಕಾತಿ, ಭ್ರಷ್ಟಾಚಾರದ ಮೂಲಕ ರೈತರ ಹಣ ಲೂಟಿ ಮಾಡಲು ಚುನಾವಣೆ ನಡೆಸದೇ ಅಧಿಕಾರಕ್ಕೆ ಅಂಟಿಕೊಂಡಿರುವ ಕಾಂಗ್ರೆಸ್ ನಾಯಕರು, ಈ ಕೂಡಲೇ ಹಾಲು ಒಕ್ಕೂಟದ ವಿಭಜನೆಯ ಪ್ರಕ್ರಿಯೆ ಆರಂಭಿಸಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

  • ಶಿವಮೊಗ್ಗ ಡೈರಿಯಿಂದ ಇಂದು ಸಂಜೆ, ನಾಳೆ ರೈತರಿಂದ ಹಾಲು ಖರೀದಿ ಇಲ್ಲ

    ಶಿವಮೊಗ್ಗ ಡೈರಿಯಿಂದ ಇಂದು ಸಂಜೆ, ನಾಳೆ ರೈತರಿಂದ ಹಾಲು ಖರೀದಿ ಇಲ್ಲ

    ಶಿವಮೊಗ್ಗ: ಭಾರತ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಸಂಜೆ ಮತ್ತು ನಾಳೆ ರೈತರಿಂದ ಹಾಲು ಖರೀದಿಸದಿರಲು ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಹಾಲು ಒಕ್ಕೂಟದಿಂದ ನಿರ್ಧರಿಸಿದೆ.

    ಡೈರಿಯಲ್ಲಿಯೆ ಹೆಚ್ಚಿನ ಪ್ರಮಾಣದ ಹಾಲು ಶೇಖರಣೆ ಆಗಿರುವ ಕಾರಣ ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಪ್ರತಿನಿತ್ಯ ಮೂರು ಜಿಲ್ಲೆಗಳಿಂದ ಶಿಮುಲ್ ಒಕ್ಕೂಟ 5.20 ಲಕ್ಷ ಲೀಟರ್ ಹಾಲು ಸಂಗ್ರಹ ಮಾಡುತ್ತಿದೆ. ಇದರಲ್ಲಿ 2.50 ಲಕ್ಷ ಲೀಟರ್ ಹಾಲು ದಿನನಿತ್ಯ ಮಾರಾಟ ಮಾಡಲಾಗುತ್ತದೆ. ಉಳಿದ ಹಾಲನ್ನು ಪೌಡರ್ ಮತ್ತಿತರ ಉತ್ಪನಗಳ ತಯಾರಿಕೆಗೆ ಶಿಮುಲ್ ಪೂರೈಕೆ ಮಾಡುತ್ತಿತ್ತು. ಅಂತರಾಜ್ಯ ಗಡಿ ಬಂದ್ ಹಿನ್ನೆಲೆಯಲ್ಲಿ ಹಾಲು ಉಳಿದುಕೊಳ್ಳುತ್ತಿದೆ. ಲಾಕ್ ಡೌನ್ ಬಳಿಕ 1.90 ಲಕ್ಷ ಲೀಟರ್ ಗೆ ಹಾಲಿನ ಮಾರಾಟ ಕುಸಿದಿದೆ. ಶಿಮುಲ್ ಉಳಿದ ಹಾಲನ್ನು ಬೇರೆ ಒಕ್ಕೂಟಗಳಿಗೆ ಮಾರಾಟ ಮಾಡಿದ್ರೂ, ದಿನನಿತ್ಯ 60 ಸಾವಿರ ಲೀಟರ್ ಶಿಮುಲ್ ನಲ್ಲೇ ಉಳಿಯುತ್ತಿರುವ ಹಿನ್ನೆಲೆಯಲ್ಲಿ ರೈತರಿಂದ ಹಾಲ ಖರೀದಿಸದೇ ಇರಲು ಶಿಮುಲ್ ನಿರ್ಧರಿಸಿದೆ.

  • ಸಕ್ಕರೆ ನಾಡಿನ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ- ಖರೀದಿ ದರ ಏರಿಕೆ

    ಸಕ್ಕರೆ ನಾಡಿನ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ- ಖರೀದಿ ದರ ಏರಿಕೆ

    ಮಂಡ್ಯ: ಹಾಲಿನ ಖರೀದಿ ದರವನ್ನು 3.50 ರೂಪಾಯಿ ಹೆಚ್ಚಳ ಮಾಡುವ ಮೂಲಕ ಹಾಲು ಉತ್ಪಾದಕರಿಗೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹೊಸ ವರ್ಷದ ಕೊಡುಗೆ ನೀಡಿದೆ.

    ಒಕ್ಕೂಟದ 394ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಹಾಲು ಉತ್ಪಾದಕರಿಗೆ ಪ್ರಸ್ತುತ ಪ್ರತೀ ಲೀಟರ್‍ಗೆ 25 ರೂಪಾಯಿ ದೊರಕುತ್ತಿದೆ. ಆದರೆ ಈ ದರ ಜ. 1ರಿಂದ 28.50 ರೂಪಾಯಿಗೆ ಹೆಚ್ಚಳವಾಗಲಿದೆ. ಅಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪ್ರತಿ ಲೀಟರ್ ಹಾಲಿಗೆ 29.40 ರೂ. ದೊರೆಯಲಿದೆ.

    ಈ ಹೆಚ್ಚುವರಿ ದರವು ಮಾರ್ಚ್ ತಿಂಗಳ ಅಂತ್ಯದವರೆಗೂ ಉತ್ಪಾದಕರಿಗೆ ನೀಡಲಾಗುವುದು. ಜೊತೆಗೆ ಒಕ್ಕೂಟದ ಪ್ರಗತಿಯ ದೃಷ್ಟಿಯಿಂದ ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವಂತೆ ಒಕ್ಕೂಟ ಮನವಿ ಮಾಡಿದೆ.

  • ಚುನಾವಣೆ ರಾಜಕೀಯ – ನೋಡನೋಡುತ್ತಿದ್ದಂತೆ ಹಾಲು ಒಕ್ಕೂಟದ ಮಹಿಳಾ ಕಾರ್ಯದರ್ಶಿ ಕಿಡ್ನಾಪ್!

    ಚುನಾವಣೆ ರಾಜಕೀಯ – ನೋಡನೋಡುತ್ತಿದ್ದಂತೆ ಹಾಲು ಒಕ್ಕೂಟದ ಮಹಿಳಾ ಕಾರ್ಯದರ್ಶಿ ಕಿಡ್ನಾಪ್!

    ತುಮಕೂರು: ಹಾಲು ಒಕ್ಕೂಟದ ಚುನಾವಣಾ ಕಣದ ಗಲಾಟೆಯಲ್ಲಿ ದುಷ್ಕರ್ಮಿಗಳು ಹಾಲು ಉತ್ಪಾದಕ ಸಂಘದ ಮಹಿಳಾ ಕಾರ್ಯದರ್ಶಿಯನ್ನೇ ಕಿಡ್ನಾಪ್ ಮಾಡಿರುವ ಘಟನೆ ಶಿರಾ ತಾಲೂಕಿನ ಯಲದಬಾಗಿಯಲ್ಲಿ ಘಟನೆ ನಡೆದಿದೆ.

    ಬೆಳಗ್ಗೆ 9 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಾಲು ಉತ್ಪಾದಕರ ಸಂಘದ ಚುನಾವಣೆ ವಿಚಾರವಾಗಿ ನಡೆದ ಗಲಾಟೆಯಿಂದಾಗಿ ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಅನ್ನಪೂರ್ಣಮ್ಮ ಅವರನ್ನು ಪುಂಡರು ಎಳೆದೊಯ್ದಿದ್ದಾರೆ.

    ಇಂದೇ ತಿಂಗಳು 30 ರಂದು ಯಲದಬಾಗಿ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಚುನಾವಣೆ ಘೋಷಣೆಯಾಗಿದೆ. ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಅನ್ನಪೂರ್ಣಮ್ಮ ಅವರು ಜೆಡಿಎಸ್ ಮುಖಂಡರಿಗೆ ಬೆಂಬಲ ನೀಡಿದ್ದರು ಎನ್ನುವ ಆರೋಪ ಕೇಳಿಬಂದಿದೆ. ಬಹಿರಂಗವಾಗಿಯೇ ಬೆಂಬಲ ನೀಡುತ್ತಿರುವುದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿಗರು ಆಕ್ರೋಶಗೊಂಡಿದ್ದರು.

    ಹಾವಿನಾಳು ಹಾಗೂ ಯಲದಬಾಗಿ ಗ್ರಾಮದ ರಂಗನಾಥ್, ನವೀನ್, ಆನಂದ್, ಗುರುಪ್ರಸಾದ್ ಕಿಡ್ನಾಪ್ ಮಾಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ. ಕಿಡ್ನಾಪ್ ಆಗುತ್ತಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv