Tag: ಹಾವು ಕಡಿತ

  • ಅಂಗನವಾಡಿಗೆ ತೆರಳಿದ್ದ 3ರ ಬಾಲಕಿಗೆ ಹಾವು ಕಚ್ಚಿ ಸಾವು

    ಅಂಗನವಾಡಿಗೆ ತೆರಳಿದ್ದ 3ರ ಬಾಲಕಿಗೆ ಹಾವು ಕಚ್ಚಿ ಸಾವು

    ಹುಬ್ಬಳ್ಳಿ: ಅಂಗನವಾಡಿಗೆ ತೆರಳಿದ್ದ ಮೂರು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಕಾರವಾರ (Karwar) ಜಿಲ್ಲೆಯ ಮುಂಡಗೋಡು (Mundagodu) ಅಳೂರು ಓಣಿಯಲ್ಲಿ ನಡೆದಿದೆ.ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು

    ಮೃತ ಬಾಲಕಿಯನ್ನು ಮಯೂರಿ(3) ಎಂದು ಗುರುತಿಸಲಾಗಿದೆ.

    ಸ್ಥಳೀಯ ಮಾರಿಕಾಂಬ ಅಂಗನವಾಡಿಗೆ ಬಾಲಕಿ ತೆರಳಿದ್ದಳು. ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಕಾಲಿಗೆ ಹಾವು ಕಚ್ಚಿದೆ. ಬಳಿಕ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.ಇದನ್ನೂ ಓದಿ: ಅಮಿತ್ ಶಾ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ.. ಸಚಿವ ಸಂಪುಟದಿಂದ ಕೈಬಿಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ

  • ಹಾವು ಕಡಿತಕ್ಕೆ ಮುಕ್ತಿ ನೀಡಲು ಸರ್ಕಾರ ಬದ್ಧ – ಚಿಕಿತ್ಸಾ ವ್ಯವಸ್ಥೆ ಸಮರ್ಪಕ ಜಾರಿಗೆ ರಾಜ್ಯಗಳಿಗೆ ಸೂಚನೆ!

    ಹಾವು ಕಡಿತಕ್ಕೆ ಮುಕ್ತಿ ನೀಡಲು ಸರ್ಕಾರ ಬದ್ಧ – ಚಿಕಿತ್ಸಾ ವ್ಯವಸ್ಥೆ ಸಮರ್ಪಕ ಜಾರಿಗೆ ರಾಜ್ಯಗಳಿಗೆ ಸೂಚನೆ!

    ದೇಶದಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳಷ್ಟೇ ಪ್ರತಿ ವರ್ಷವೂ ಹೆಚ್ಚು ಸಾವಿಗೆ ಕಾರಣವಾಗುತ್ತಿರುವುದು ಹಾವು ಕಡಿತ. ಗ್ರಾಮೀಣ ಪ್ರದೇಶದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದರು. ಆದ್ರೆ ಇದರ ಬಗ್ಗೆ ಸರ್ಕಾರ ಅಷ್ಟಾಗಿ ಕ್ರಮ ವಹಿಸುತ್ತಿರಲಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 81,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪುತ್ತಿದ್ದಂತೆ ಇದರ ಮೂರರಷ್ಟು ಮಂದಿ ಅಂಗಾಗ ವೈಫಲ್ಯಗಳೂ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇದೆಲ್ಲದಕ್ಕೂ ಮುಕ್ತಿ ಕೊಡಬೇಕು ಎಂಬ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡಿದೆ.

    ಇತ್ತೀಚೆಗಷ್ಟೇ ಹಾವು ಕಡಿತ ಪ್ರಕರಣಗಳನ್ನು ಕೇಂದ್ರ ಸರ್ಕಾರ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದ ಬಳಿಕ ರಾಜ್ಯಗಳು ಇದನ್ನು ಸಮರ್ಪಕವಾಗಿ ಜಾರಿಗೆ ತರುವಂತೆ ಸೂಚನೆ ನೀಡಿದೆ. 2030ರ ವೇಳೆಗೆ ಸಾವು ಪ್ರಕರಣಗಳನ್ನು ಶೇ.50 ರಷ್ಟು ಕಡಿಮೆ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಅದಕ್ಕಾಗಿ ಹಾವು ಕಡಿತವನ್ನು ಅಧಿಸೂಚಿತ ರೋಗಗಳಾಗಿ ಘೋಷಿಸಿ, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಹಾವು ಕಡಿತವನ್ನು ವರದಿ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

    ಹಾವು ಕಡಿತ ಪ್ರಕರಣಗಳ ವರದಿಯನ್ನು ಆರೋಗ್ಯ ಇಲಾಖೆ ಕಡ್ಡಾಯಗೊಳಿಸಿದೆ. ಈ ವರ್ಷ 9 ತಿಂಗಳ ಅವಧಿಯಲ್ಲಿಯೇ 9,529 ಹಾವು ಕಡಿತ ಪ್ರಕರಣಗಳು ವರದಿಯಾದರೆ, ಕಡಿತದಿಂದ 69 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿಯೂ ಹಾವು ಕಡಿತಕ್ಕೆ ಒಳಗಾದವರ ಹಾಗೂ ಈ ಕಡಿತದಿಂದ ಮೃತಪಟ್ಟವರ ಸಮಗ್ರ ಮಾಹಿತಿ ದೊರೆಯದೇ ಇದ್ದುದರಿಂದಾಗಿ ಆರೋಗ್ಯ ಇಲಾಖೆಯು ಫೆಬ್ರವರಿಯಲ್ಲಿ ಹಾವು ಕಡಿತವನ್ನು ಘೋಷಿತ ಕಾಯಿಲೆಯೆಂದು ಗುರುತಿಸಿತ್ತು. ಇದರಿಂದಾಗಿ ಹಾವು ಕಡಿತಕ್ಕೆ ಒಳಗಾಗಿ ಒಳರೋಗಿ ಹಾಗೂ ಹೊರರೋಗಿಗಳಾಗಿ ಆಸ್ಪತ್ರೆಗೆ ಭೇಟಿ ನೀಡಿದವರು, ಮರಣ ಹೊಂದಿದವರ ವಿವರವನ್ನು ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಕಡ್ಡಾಯವಾಗಿ ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಡಿ ದಾಖಲಿಸುತ್ತಿವೆ. ಈ ಕ್ರಮವನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಸೂಚಿಸಿದೆ.

    ಹಾವು ಕಡಿತವನ್ನು ಘೋಷಿತ ಕಾಯಿಲೆಯೆಂದು ಗುರುತಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈ ಕ್ರಮದಿಂದ ಹಾವು ಕಡಿತ ಪ್ರಕರಣಗಳ ಮೇಲೆ ನಿಗಾ ಮತ್ತು ನಿರ್ವಹಣೆ ಇಲಾಖೆಗೆ ಸಾಧ್ಯವಾಗಿದ್ದು, ಮಾರ್ಚ್ ಬಳಿಕ ಅಧಿಕ ಸಂಖ್ಯೆಯಲ್ಲಿ ಹಾವು ಕಡಿತ ಹಾಗೂ ಮರಣ ಪ್ರಕರಣಗಳು ವರದಿಯಾಗುತ್ತಿವೆ. 2022ರಲ್ಲಿ ರಾಜ್ಯದಲ್ಲಿ 3,425 ಹಾವು ಕಡಿತ ಪ್ರಕರಣಗಳು ವರದಿಯಾದರೆ, 17 ಮಂದಿ ಕಡಿತದಿಂದ ಮೃತಪಟ್ಟಿದ್ದರು. ಕಳೆದ ವರ್ಷ 6,596 ಪ್ರಕರಣಗಳು ವರದಿಯಾಗಿವೆ. ಕಡಿತಕ್ಕೆ ಒಳಗಾದವರಲ್ಲಿ 19 ಮಂದಿ ಮೃತಪಟ್ಟಿದ್ದರು. ಕೃಷಿ ಕೆಲಸದಲ್ಲಿ ತೊಡಗಿರುವಾಗ ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯಿಂದ 1 ಲಕ್ಷ ಪರಿಹಾರ ನೀಡುವ ಯೋಜನೆ ಜಾರಿಯಲ್ಲಿದೆ. ಇತರರಿಗೂ ಪರಿಹಾರ ಒದಗಿಸುವ ಬಗ್ಗೆ ಆರೋಗ್ಯ ಇಲಾಖೆಯಿಂದ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ.

    ಹಾವು ಕಡಿತವನ್ನು ಏಕೆ ʻಅಧಿಸೂಚಿತ ಕಾಯಿಲೆʼ ಎಂದು ಪರಿಗಣಿಸಲಾಗುತ್ತದೆ? ಹಾವು ಕಡಿತಕ್ಕೆ ತಕ್ಷಣದ ಹಾರೈಕೆ ಅಗತ್ಯವಿದ್ದು, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರೆ ರಕ್ತಸ್ರಾವ, ಪಾರ್ಶ್ವವಾಯು, ಅಂಗಾಗ ವೈಫಲ್ಯ ಮಾತ್ರವಲ್ಲದೇ ಸಾವೂ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿಯೇ ಇರುತ್ತದೆ. ಸಾವು ಮತ್ತು ತೀವ್ರತರವಾದ ಅಪಾಯಗಳಿಂದ ರಕ್ಷಣೆ ಮಾಡಲು ಆಂಟಿ ವೆನಮ್‌ ಬಳಸುವ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಅದಕ್ಕಾಗಿ ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.

    ಭಾರತದಲ್ಲಿ 310ಕ್ಕೂ ಹೆಚ್ಚು ಜಾತಿಯ ಹಾವುಗಳಿದ್ದು, ಅವುಗಳಲ್ಲಿ 66 ವಿಷಕಾರಿ ಮತ್ತು 42 ಸೌಮ್ಯ ವಿಷಕಾರಿ, 23 ಪ್ರಭೇದದ ಹಾವುಗಳು ವಿಷಕಾರಿ ಎಂದು ಗುರುತಿಸಲಾಗಿದೆ. ಅದರಲ್ಲೂ ದೇಶದಲ್ಲಿ ನಾಗರಹಾವು, ಸಾಮಾನ್ಯ ಕ್ರೈಟ್, ರಸೆಲ್ಸ್ ವೈಪರ್ ಮತ್ತು ಗರಗಸ-ಸ್ಕೇಲ್ಡ್ ವೈಪರ್‌ ಹಾವುಗಳನ್ನು ಹೆಚ್ಚು ಅಪಾಯಕಾರಿ ಹಾವುಗಳೆಂದು ಗುರುತಿಸಲಾಗಿದೆ. ಸದ್ಯ ವಾಣಿಜ್ಯವಾಗಿ ಲಭ್ಯವಿರುವ ಆಂಟಿ ವೆನಮ್‌, ಶೇ.80 ರಷ್ಟು ಹಾವು ಕಡಿತದಿಂದ ಮರಣ ಪ್ರಮಾಣವನ್ನು ತಪ್ಪಿಸುತ್ತದೆ ಎಂದು ವರದಿಗಳು ಹೇಳಿವೆ.

    ಚಿಕಿತ್ಸಾ ವ್ಯವಸ್ಥೆ ಹೇಗೆ?
    ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಹಾವಿನ ನಂಜಿನ ಲಕ್ಷಣಗಳು ವ್ಯಕ್ತಿಗೆ ಕಂಡುಬಂದಲ್ಲಿ ತಕ್ಷಣ ರೋಗಿಯ ಅಥವಾ ಸಂಬಂಧಿಕರ ಒಪ್ಪಿಗೆ ಪತ್ರ ಪಡೆದು, ‘ಆ್ಯಂಟಿ ಸ್ನೇಕ್ ವೆನಮ್’ ಒದಗಿಸಲಾಗುತ್ತಿದೆ. 2030ರ ವೇಳೆಗೆ ಹಾವು ಕಡಿತ ಪ್ರಕರಣ ಹಾಗೂ ಮರಣವನ್ನು ಅರ್ಧದಷ್ಟು ಇಳಿಸುವ ಗುರಿಯನ್ನು ಇಲಾಖೆ ಹಾಕಿಕೊಂಡಿದೆ. ಇದಕ್ಕೆ ಪೂರಕವಾಗಿ ಹಾವು ಕಡಿತಕ್ಕೆ ಒಳಗಾದವರಿಗೆ ಅಂಬುಲೆನ್ಸ್‌ ಸೇವೆ ಹಾಗೂ ಚಿಕಿತ್ಸೆಗೆ ಆದ್ಯತೆ ನೀಡಲಾಗಿದೆ.

    SNAKE
    ಸಾಂದರ್ಭಿಕ ಚಿತ್ರ

    ʻಕೃಷಿ ಕೆಲಸ ಸೇರಿ ವಿವಿಧ ಸಂದರ್ಭದಲ್ಲಿ ಹಾವು ಕಡಿತಕ್ಕೆ ಒಳಗಾದವರು ಚಿಕಿತ್ಸೆ ಪಡೆಯುವುದು ವಿಳಂಬವಾದಲ್ಲಿ ಜೀವಕ್ಕೆ ತೊಂದರೆಯಾಗುತ್ತದೆ. ಘೋಷಿತ ರೋಗವೆಂದು ಗುರುತಿಸಿದ್ದರಿಂದ ಹಾವು ಕಡಿತದಿಂದ ಉಂಟಾಗುತ್ತಿದ್ದ ಪ್ರಾಣ ಹಾನಿ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಹಾವು ಕಡಿತದಿಂದ ವ್ಯಕ್ತಿ ಮರಣ ಹೊಂದಿದಲ್ಲಿ ‘ಸಾವಿನ ಲೆಕ್ಕಗಳ ವರದಿ’ (ಡೆತ್ ಆಡಿಟ್) ಮಾಡಿಸಲಾಗುತ್ತಿದೆ. ಇದರಿಂದಾಗಿ ಹಾವು ಕಡಿತದ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತಿದೆ’ ಎಂದು ಇಲಾಖೆ ತಿಳಿಸಿದೆ.

    ಹಾವು ಕಡಿತವನ್ನು ಏಕೆ ವರದಿ ಮಾಡಬೇಕು?
    ಹಾವು ಕಡಿತ ಪ್ರಕರಣಗಳನ್ನು ವರದಿ ಮಾಡುವುದರಿಂದ ನಿಖರ ಸಂಖ್ಯೆ ನಿರ್ಧರಿಸಲು, ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ ಸರ್ಕಾರಕ್ಕೆ ಮಾಹಿತಿ ನೆರವು ಪಡೆಯಲು ಅನುಕೂಲವಾಗುತ್ತದೆ. ಇದರಿಂದ ಯಾವ ಪ್ರದೇಶಗಳಲ್ಲಿ ಹಾವು ಕಡಿತ ಹೆಚ್ಚಾಗುತ್ತದೆ ಎಂಬುದನ್ನು ಕಂಡುಕೊಂಡು ʻಆಂಟಿ ವೆನಮ್‌ʼ ಒದಗಿಸಲು ಸಹಾಯಕವಾಗುತ್ತದೆ.

    ಕರ್ನಾಟಕದಲ್ಲಿ ಹಾವು ಕಡಿತ ಪ್ರಕರಣಗಳು
    2022 – 17
    2023 – 19
    2024 – 69

    ಕರ್ನಾಟಕದಲ್ಲಿ ಹಾವು ಕಡಿತದಿಂದ ಆದ ಸಾವುಗಳು
    2022 – 3,425
    2023 – 6,596
    2024 – 9,529

    ಭಾರತದಲ್ಲಿ ಆಂಟಿ ಸ್ನೇಕ್ ವೆನಮ್ (ವಿಷ ನಿರೋಧಕ) ಅನ್ನು ಪ್ರಮುಖ ನಾಲ್ಕು ಜಾತಿಯ ಹಾವುಗಳ ಕಡಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ. ದೇಶದಲ್ಲಿ ಒಟ್ಟು 290ಕ್ಕೂ ಹೆಚ್ಚು ಹಾವಿನ ಪ್ರಭೇದಗಳಿದ್ದು, ಅವುಗಳಲ್ಲಿ ಸಮಾರು 40 ವಿಷಪೂರಿತ ಹಾವುಗಳಿವೆ. ಆದರೆ, ಆಂಟಿ ಸ್ನೇಕ್‌ ವೆನಮ್ ತಯಾರಿಸುವಾಗ ಪ್ರಮುಖ ನಾಲ್ಕು ಹಾವುಗಳ ವಿಷವನ್ನು ಮಾತ್ರ ಬಳಸಲಾಗುತ್ತಿದೆ. ಈಶಾನ್ಯ ರಾಜ್ಯಗಳೂ ಸೇರಿದಂತೆ ದೇಶದ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಹಾವು ಪ್ರಭೇದ ಇವೆ. ಈ ನಾಲ್ಕು ಜಾತಿಗೆ ಸೇರದ ಹಾವುಗಳಿಂದ ಕಡಿತಕ್ಕೊಳಗಾದವರಿಗೆ ಈಗ ಬಳಸುತ್ತಿರುವ ಆ್ಯಂಟಿ ಸ್ನೇಕ್‌ ವೆನಮ್ ಅಷ್ಟು ಉಪಯುಕ್ತವಾಗುವುದಿಲ್ಲ. ಭಾರತದಂಥ ವಿಸ್ತಾರವಾದ, ವೈವಿಧ್ಯಮಯ ದೇಶದಲ್ಲಿ ಇಲ್ಲಿನ ಪ್ರಾದೇಶಿಕ ಭಿನ್ನತೆ, ಹಾವುಗಳ ವೈವಿಧ್ಯಕ್ಕೆ ತಕ್ಕಂತೆ ಆಂಟಿ ಸ್ನೇಕ್ ವೆನಮ್ ತಯಾರಿಸುವ ದಿಸೆಯಲ್ಲಿ ಅಧ್ಯಯನಗಳು ನಡೆಯಬೇಕಿದೆ ಎನ್ನುವುದು ತಜ್ಞರ ನಿಲುವು. ಹಾವುಗಳ ವಿಷದ ಸಾಮರ್ಥ್ಯವು ಅವುಗಳ ವಯಸ್ಸಿನೊಂದಿಗೆ ಮತ್ತು ವಾತಾವರಣಕ್ಕೆ ತಕ್ಕಂತೆ ಬದಲಾಗಿರುತ್ತದೆ ಎಂದು 2020ರಲ್ಲಿ ಪ್ರಕಟವಾದ ಇಂಡಿಯನ್‌ ಜರ್ನಲ್‌ ಆಫ್‌ ಮೆಡಿಕಲ್‌ ಹೇಳಿದೆ.

    ಕೇರಳದಲ್ಲಿ ʻಸರ್ಪ’ ಸಾಧನೆ
    2019ರಲ್ಲಿ ಕೇರಳದ ವಯನಾಡ್‌ನಲ್ಲಿ 5ನೇ ತರಗತಿಯ ಬಾಲಕಿಯೊಬ್ಬಳಿಗೆ ಶಾಲಾ ಕೊಠಡಿಯಲ್ಲಿಯೇ ಹಾವು ಕಚ್ಚಿ, ಆಕೆ ಮೃತಪಟ್ಟಿದ್ದಳು. 2019ರಲ್ಲಿ ರಾಜ್ಯದಲ್ಲಿ ಹಾವು ಕಚ್ಚಿ 130 ಮಂದಿ ಮೃತಪಟ್ಟಿದ್ದರು. 2030ರಲ್ಲಿ ಉತ್ತರಾ ಎನ್ನುವ ಮಹಿಳೆಗೆ ನಿದ್ರೆ ಮಾತ್ರ ನೀಡಿ, ಬೆಡ್ ರೂಮ್‌ ನಲ್ಲಿ ಮಲಗಿದ್ದಾಗ ಅವರ ಮೇಲೆ ಗಂಡನೇ ನಾಗರ ಹಾವನ್ನು ಎಸೆದಿದ್ದ ಹಾವು ಕಚ್ಚಿ ಉತ್ತರಾ ಅವರು ಮೃತಪಟ್ಟರು. ಆ ವರ್ಷ (2020) ಕೇರಳದಲ್ಲಿ ಹಾವು ಕಚ್ಚಿ ಸತ್ತವರ ಸಂಖ್ಯೆ 80. ಈ ಎರಡು ಪ್ರಕರಣಗಳು ಹಾವು ಕಡಿತದ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರವನ್ನು ಪ್ರೇರೇಪಿಸಿತು.

    ಇನ್ನೂ 2023ರಲ್ಲಿ ಕೇರಳದಲ್ಲಿ ಹಾವು ಕಚ್ಚಿ ಸತ್ತವರ ಸಂಖ್ಯೆ 40. 2024ರ ಆರಂಭದ ತಿಂಗಳಲ್ಲಿ ಹಾವು ಕಚ್ಚಿ ಸತ್ತವರ ಸಂಖ್ಯೆ 7. ಕೇರಳ ಕ್ರಮೇಣ ಹಾವು ಕಡಿತದ ಶೂನ್ಯ ಸಾವಿನ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ಕೇರಳದ ಈ ಸಾಧನೆಗೆ ಕಾರಣ, ಹಾವಿನ ಬಗ್ಗೆ ಅರಿವು ಮೂಡಿಸುವ ಮತ್ತು ಅವುಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ರೂಪಿಸಿರುವ ‘ಸರ್ಪ’ (ಸ್ನೇಕ್ ಅವೇರ್‌ನೆಸ್‌ ರನ್ನೂ ಮತ್ತು ಪ್ರೊಟೆಕ್ಷನ್) ಆ್ಯಪ್. ಇದರ ಮೂಲಕ ಸಂತ್ರಸ್ತರು ವೈಜ್ಞಾನಿಕವಾಗಿ ಹಾವನ್ನು ಹಿಡಿಯುವ ತರಬೇತಿ ಪಡೆದವರನ್ನು ಸಂಪರ್ಕಿಸಿ, ಶೀಘ್ರ ಚಿಕಿತ್ಸೆ ಪಡೆಯಬಹುದಾಗಿದೆ.

    ಹಾವು ಕಚ್ಚಿದಾಗ ಏನು ಮಾಡಬೇಕು?
    * ವಿಚಲಿತಗೊಳ್ಳದೆ ಶಾಂತವಾಗಿರಿ. ಕಡಿತಕೊಳ್ಳಗಾದ ವ್ಯಕ್ತಿಯನ್ನು ಸಮಾಧಾನ ಪಡಿಸಿ
    * ಕಚ್ಚಿದ ಜಾಗ ಅಥವಾ ಗಾಯವನ್ನು ಹಾಗೆಯೇ ಬಿಡಿ
    * ಕಡಿತದ ಜಾಗದಿಂದ ಬಿಗಿ ಬಟ್ಟೆ/ಆಭರಣ/ಗಡಿಯಾರ/ಉಂಗುರ/ಬೆಲ್ಫ್ ಪಾದರಕ್ಷೆಗಳನ್ನು ತೆಗೆಯಿರಿ
    * ಕಡಿತಕ್ಕೆ ಒಳಗಾದ ವೃತ್ತಿಯು ಎಡ ಮಗ್ಗುಲಿಗೆ ಮಲಗುವಂತೆ ಮಾಡಿ. ಬಲಗಾಲು ಬಾಗಿರಲಿ, ಕೈಗಳು ತಲೆಯ ಕೆಳಭಾಗದಲ್ಲಿರಲಿ
    * ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿರಿ

    ಏನು ಮಾಡಬಾರದು?
    * ಕಡಿತಕ್ಕೊಳಗಾದ ವ್ಯಕ್ತಿ ಗಾಬರಿಯಾಗುವುದಕ್ಕೆ ಅವಕಾಶ ನೀಡಬೇಡಿ
    * ಕಚ್ಚಿದ ಹಾವನ್ನು ಹೊಡೆಯಬೇಡಿ ಅಥವಾ ಕೊಳ್ಳಬೇಡಿ. ಹೊಡೆದರೆ ಅದು ಮತ್ತೆ ದಾಳಿ ಮಾಡುವ ಸಾಧ್ಯತೆ ಇರುತ್ತದೆ
    * ಕಡಿತದ ಗಾಯಕ್ಕೆ ವಿಷ ನಿರೋಧಕ ಔಷಧ ಹಾಕಬೇಡಿ
    * ರಕ್ತ ಪರಿಚಲನೆ ತಡೆಯುವುದಕ್ಕಾಗಿ ಕಚ್ಚಿರುವ ಸ್ಥಳವನ್ನು ದಾರ, ಬಟ್ಟೆಯಿಂದ ಕಟ್ಟಬೇಡಿ ಗಾಯನಾಗಿರುವ ಭಾಗವನ್ನು ಕತ್ತರಿಸಬೇಡಿ
    * ಕಡಿತಕ್ಕೊಳಗಾದ ವ್ಯಕ್ತಿಯನ್ನು ಅಂಗಾತವಾಗಿ ಮಲಗಿಸಬೇಡಿ. ದೇಹದಲ್ಲಿ ಗಾಳಿಯ ಸಂಚಾರವನ್ನು ಇದು ತಡೆಯಬಹುದು
    * ಸಾಂಪ್ರದಾಯಿಕ ಅಥವಾ ಅಸುರಕ್ಷಿತವಾದ ಚಿಕಿತ್ಸೆಯನ್ನು ಪಡೆಯಬೇಡಿ ಎಂಬುದು ತಜ್ಞರ ಸಲಹೆ.

  • ಗೌರಿ ಹಬ್ಬಕ್ಕೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು

    ಗೌರಿ ಹಬ್ಬಕ್ಕೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು

    ತುಮಕೂರು: ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ (Girl) ಹಾವು ಕಡಿತದಿಂದ (Snake Bite) ಮೃತಪಟ್ಟ ಧಾರುಣ ಘಟನೆ ಕುಣಿಗಲ್ (Kunigal) ಪಟ್ಟಣದ 22ನೇ ವಾರ್ಡ್‌ನಲ್ಲಿ ಶುಕ್ರವಾರ ನಡೆದಿದೆ.

    ಸ್ಪಂದನ (13) ಮೃತಪಟ್ಟ ಬಾಲಕಿ. ಈಕೆ 22ನೇ ವಾರ್ಡ್‌ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮ್ಯಾನ್ ಕುಮಾರ್ ಎಂಬುವರ ಮಗಳು.

    ಶುಕ್ರವಾರ ಮನೆಯವರೊಂದಿಗೆ ಗೌರಿ ಹಬ್ಬದ ನಿಮಿತ್ತ ಪಟ್ಟಣದ ವೈಕೆ ಆರ್ ಪಾರ್ಕ್ ಬಳಿ ಇರುವ ಮುಳ್ಳುಕಟ್ಟಮ್ಮ ದೇವಾಲಯಕ್ಕೆ ಪೂಜೆಗೆ ತೆರಳಿದ್ದಳು. ಬಾಲಕಿ ದೇವಾಲಯ ಸಮೀಪದಲ್ಲಿದ್ದ ಬೆಂಚ್ ಮೇಲೆ ಕುಳಿತ್ತಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದಾಳೆ. ಇದನ್ನೂ ಓದಿ: 2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ವಿಶ್ವಾಸ: ಸಿದ್ದರಾಮಯ್ಯ

     

    ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದಾಳೆ. ನಂತರ ತೀವ್ರ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾಳೆ. ಮನೆಯವರು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    ಮತ್ತಷ್ಟು ಚಿಕಿತ್ಸೆಗೆ ಚಿಕಿತ್ಸೆಗೆ ಬೆಳ್ಳೂರ್ ಕ್ರಾಸ್ ಬಳಿ ಇರುವ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

  • ತಂದೆಗೆ ರಾತ್ರಿ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದಾಗ ಹಾವು ಕಡಿದು ಬಾಲಕ ಸಾವು

    ತಂದೆಗೆ ರಾತ್ರಿ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದಾಗ ಹಾವು ಕಡಿದು ಬಾಲಕ ಸಾವು

    ರಾಯಚೂರು: ತಂದೆಗೆ ಊಟ ಕೊಡಲು ಜಮೀನಿಗೆ (Farm) ತೆರಳಿದ್ದ ಸಂದರ್ಭ ಹಾವು ಕಡಿದು (Snake Bite) ಬಾಲಕ ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಕ್ಯಾದಿಗೇರಾದ ಎ.ಜಿ.ಕಾಲೋನಿಯಲ್ಲಿ ಘಟನೆ ನಡೆದಿದ್ದು, ಆಂಜನೇಯ (15) ಹಾವು ಕಡಿತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಜಮೀನಿನಲ್ಲಿದ್ದ ಕುರಿದೊಡ್ಡಿ ಬಳಿ ವಾಸವಿದ್ದ ತಂದೆ-ತಾಯಿಗೆ ರಾತ್ರಿ ಊಟ ಕೊಡಲು ಹೋದಾಗ ಘಟನೆ ನಡೆದಿದೆ. ಬಾಲಕ 10ನೇ ತರಗತಿ ಓದುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಒಬ್ಬಂಟಿಯಾಗಿ ಸಾಗುವವರನ್ನು ಟಾರ್ಗೆಟ್ ಮಾಡುತ್ತಿದ್ದ ಕುಖ್ಯಾತ ಡಕಾಯಿತಿ ಗ್ಯಾಂಗ್ ಅರೆಸ್ಟ್

    ಹಾವು ಕಡಿದ ಕೂಡಲೇ ಬಾಲಕನನ್ನು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಸಮರ್ಪಕ ಚಿಕಿತ್ಸೆ ಸಿಗದ ಹಿನ್ನೆಲೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ. ಘಟನೆ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಬಿಸಿನೀರು ಎರಚಿ ಬಿಯರ್ ಬಾಟ್ಲಿಯಿಂದ ಹಲ್ಲೆಗೈದ ಆಂಟಿ!

  • ಹಾವು ಕಚ್ಚಿ ಬಾಲಕಿ ಸಾವು

    ಹಾವು ಕಚ್ಚಿ ಬಾಲಕಿ ಸಾವು

    ಕಲಬುರಗಿ: ಕಟ್ಟಿಗೆ ತರಲು ಹೊಲಕ್ಕೆ ಹೋದಾಗ ಹಾವು ಕಚ್ಚಿ (Snakebite) ಬಾಲಕಿ (Girl) ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.

    ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ (16) ವಿಷ ಜಂತು ಕಡಿತಕ್ಕೆ ಪ್ರಾಣ ಕಳೆದುಕೊಂಡ ಬಾಲಕಿ.

    ಪೂಜಾ ಗ್ರಾಮದಲ್ಲಿ ಕಟ್ಟಿಗೆ ತರಲೆಂದು ಹೊಲಕ್ಕೆ ತೆರಳಿದ್ದಾಗ ಹಾವು ಕಚ್ಚಿದೆ. ದುರ್ಘಟನೆಯಿಂದ ಪೂಜಾ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಖಾಸಗಿ ಬಸ್, ಇನ್ನೋವಾ ಭೀಕರ ಅಪಘಾತ- 10 ಮಂದಿ ದುರ್ಮರಣ

  • ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

    ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಪಾನ್ವೆಲ್ ಫಾರ್ಮ್ ಹೌಸ್‍ನಲ್ಲಿ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದೆ. ಈ ಹಾವು ವಿಷಕಾರಿ ಆಗಿರಲಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ನಟನನ್ನು ಚಿಕಿತ್ಸೆಗಾಗಿ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ನಂತರ ಬೆಳಗ್ಗೆ 9 ಗಂಟೆಗೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಈಗ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.  ಸಲ್ಮಾನ್ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ನಾಳೆ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬ ಇರುವುರಿಂದ (ಡಿಸೆಂಬರ್ 27ಕ್ಕೆ) ಫಾರ್ಮ್‍ಹೌಸ್‍ಗೆ ತೆರಳಿದ್ದರು. ಸಲ್ಮಾನ್ ತನ್ನ ವಿಶೇಷ ದಿನವನ್ನು ಪನ್ವೆಲ್ ಫಾರ್ಮ್‍ಹೌಸ್‍ನಲ್ಲಿ ಕುಟುಂಬ ಸದಸ್ಯರು ಮತ್ತು ಕೆಲವು ಸ್ನೇಹಿತರೊಂದಿಗೆ ಆಚರಿಸಲಿದ್ದಾರೆ. ಸಲ್ಮಾನ್ ಅವರ ಫಾರ್ಮ್‍ಹೌಸ್ ಸಾಕಷ್ಟೂ ದೊಡ್ಡದಾಗಿದೆ. ಹಲವು ಪ್ರಭೇದದ ಪಕ್ಷಿಗಳು ಮತ್ತು ಪ್ರಾಣಿ, ಸಸ್ಯಗಳು ಫಾರ್ಮ್‍ಹೌಸ್‍ನಲ್ಲಿದೆ.

  • ಕಳೆದ 7 ತಿಂಗಳಲ್ಲಿ ಕರ್ನಾಟಕದಲ್ಲಿ 7,619 ಜನರಿಗೆ ಹಾವು ಕಡಿತ

    ಕಳೆದ 7 ತಿಂಗಳಲ್ಲಿ ಕರ್ನಾಟಕದಲ್ಲಿ 7,619 ಜನರಿಗೆ ಹಾವು ಕಡಿತ

    – ಭಾರತದಲ್ಲಿ 1.14 ಲಕ್ಷ ಜನರಿಗೆ ಕಚ್ಚಿದ ಹಾವು
    – ಅಗ್ರಸ್ಥಾನದಲ್ಲಿ ಮಹಾರಾಷ್ಟ್ರ-24437 ಜನರಿಗೆ ಹಾವು ಕಡಿತ

    ನವದೆಹಲಿ: ಕಳೆದ 7 ತಿಂಗಳಲ್ಲಿ ಭಾರತದಲ್ಲಿ 1.14 ಲಕ್ಷ ಜನರಿಗೆ ಹಾವು ಕಚ್ಚಿದೆ. ಇದರಲ್ಲಿ 49 ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ಹಾವು ಕಡಿತಕ್ಕೆ ಸಂಬಂಧಿಸಿದ ವರದಿಯನ್ನು ಬಿಡುಗಡೆ ಮಾಡಿದ್ದು ಈ ವರದಿಯ ಅಂಶ ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದೆ. ಒಟ್ಟು 1.14 ಲಕ್ಷ ಜನರಲ್ಲಿ 94,874 ಮಂದಿ ಗ್ರಾಮೀಣ ಭಾಗದವರು ಎನ್ನುವುದು ವಿಶೇಷ. ಈ ವರ್ಷ ಏಪ್ರಿಲ್ 1ರಿಂದ ಅಕ್ಟೋಬರ್ 31ರವರೆಗಿನ ಅವಧಿಯ ಲೆಕ್ಕಾಚಾರದಂತೆ ಕರ್ನಾಟಕದಲ್ಲಿ ಒಟ್ಟು 7,619 ಮಂದಿಗೆ ಹಾವು ಕಚ್ಚಿದೆ.

    ಹಾವು ಕಡಿತಕ್ಕೊಳಗಾದವರ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ. ಕರ್ನಾಟಕ 5ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ ಒಟ್ಟು 24,437, ಪಶ್ಚಿಮ ಬಂಗಾಳ 23,666, ಆಂಧ್ರಪ್ರದೇಶ 10,735, ಒಡಿಶಾ 7,657, ಕರ್ನಾಟಕ 7,619, ಉತ್ತರ ಪ್ರದೇಶ 6,976, ತಮಿಳುನಾಡು 4,567, ತೆಲಂಗಾಣದಲ್ಲಿ 4,079 ಮಂದಿಗೆ ಹಾವು ಕಚ್ಚಿದೆ.

    ಮಹಾರಾಷ್ಟ್ರದಲ್ಲಿ 19,012 ಪ್ರಕರಣ ಗ್ರಾಮೀಣ ಪ್ರದೇಶ ಹಾಗೂ 5,425 ಪ್ರಕರಣ ನಗರ ಪ್ರದೇಶದಲ್ಲಿ ವರದಿಯಾಗಿವೆ. ನಾಸಿಕ್ ನಲ್ಲಿ 2,696 ಜನರಿಗೆ ಕಚ್ಚಿದರೆ, ಮುಂಬೈನಲ್ಲಿ 133 ಪ್ರಕರಣಗಳು ಮಾತ್ರ ದಾಖಲಾಗಿವೆ.

    ಬಯಲಲ್ಲೇ ಮಲಮೂತ್ರ ವಿಸರ್ಜನೆ, ರಾತ್ರಿ ವೇಳೆಯಲ್ಲಿ ಮನೆಯ ಹೊರಗಡೆ ನಿದ್ದೆ, ಶುಚಿತ್ವದ ಕೊರತೆ, ಹಾವು ಕಚ್ಚಿದರೆ ಏನು ಮಾಡಬೇಕು ಎಂಬ ಮಾಹಿತಿಯ ಕೊರತೆಗಳೇ ಸಾವಿನ ಸಂಖ್ಯೆ ಹಾಗೂ ಹಾವು ಕಡಿತ ಹೆಚ್ಚಲು ಪ್ರಮುಖ ಕಾರಣ ಎನ್ನಲಾಗಿದೆ. ಹಿಂದೆ ಪೋಲಿಯೋ, ಏಡ್ಸ್ ಬಗ್ಗೆ ಜಾಗೃತಿ ಮೂಡಿಸಿದಂತೆಯೇ ಹಾವು ಕಡಿತದ ಬಗ್ಗೆಯೂ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ತಜ್ಞ ವೈದ್ಯರು ಹೇಳುತ್ತಾರೆ.

    ಹಾವು ಕಡಿತದ ಬಗ್ಗೆ ಹೆಚ್ಚಿನ ಸಂದರ್ಭಗಳಲ್ಲಿ ವರದಿಯಾಗದೇ ಇರುವುದರಿಂದ ಹಾವು ಕಡಿತದ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ವಿಶ್ವಾದ್ಯಂತ ಒಂದು ವರ್ಷದಲ್ಲಿ 81,000ದಿಂದ 1.38 ಲಕ್ಷ ಜನರು ಹಾವು ಕಚ್ಚಿ ಸಾವನ್ನಪ್ಪುತ್ತಿದ್ದಾರೆ. ಆಫ್ರಿಕಾ, ಏಷ್ಯಾ ಹಾಗೂ ಲ್ಯಾಟಿನ್ ಅಮೆರಿಕದಲ್ಲಿ ಹಾವು ಕಡಿತ ಪ್ರಕರಣಗಳು ಹೆಚ್ಚಾಗಿ ನಡೆಯುತ್ತವೆ.

     

     

  • 24 ಗಂಟೆಯೊಳಗೆ ಒಂದೇ ಕುಟುಂಬದ ಮೂವರು ಸಾವು- ಮೊದಲು ಮಗು, ಬಳಿಕ ತಾಯಿ, ಕೊನೆಗೆ ತಾತ ಹಾವಿಗೆ ಬಲಿ

    24 ಗಂಟೆಯೊಳಗೆ ಒಂದೇ ಕುಟುಂಬದ ಮೂವರು ಸಾವು- ಮೊದಲು ಮಗು, ಬಳಿಕ ತಾಯಿ, ಕೊನೆಗೆ ತಾತ ಹಾವಿಗೆ ಬಲಿ

    ಚಿತ್ರದುರ್ಗ: 24 ಗಂಟೆಯೊಳಗೆ ಒಂದೇ ಮನೆಯ ಮೂವರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಪಾಳ್ಯದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ 3 ವರ್ಷದ ಮಗು ಕೀರ್ತನಾ ಅಸ್ವಸ್ಥಗೊಂಡಿದ್ದಳು. ಹಾವು ಕಡಿದು ಮಗು ಅಸ್ವಸ್ಥಳಾಗಿದ್ದು ಅಂತ ಮನೆ ಮಂದಿಗೆ ತಿಳಿದಿರಲಿಲ್ಲ. ಹೀಗಾಗಿ ಅವರು ಅನಾರೋಗ್ಯ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ತಾಯಿಯೂ ಅಸ್ವಸ್ಥರಾಗಿದ್ದರು. ಮಾರ್ಗ ಮಧ್ಯೆ ಮಗು ಮೃತಪಟ್ಟಿದ್ದು, ಸ್ವಲ್ಪ ಸಮಯದಲ್ಲಿ ತಾಯಿಯೂ ಮೃತಪಟ್ಟಿದ್ದಾರೆ.

    ಮಗುವಿನ ಸಾವಿನ ಆಘಾತಗೊಂಡ ತಾಯಿ ಮೃತಪಟ್ಟಿದ್ದಾರೆ ಅಂತ ಹೇಳಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ತಾಯಿ ರಂಜಿತಾ ಬಾಯಲ್ಲಿ ನೊರೆ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ಮಗು ಮತ್ತು ತಾಯಿಯ ಶವ ಪರೀಕ್ಷೆ ನಡೆಸಿದ ನಂತರ ಹಾವು ಕಚ್ಚಿ ಮೃತಪಟ್ಟಿದ್ದಾರೆ ಅಂತ ವೈದ್ಯರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

    ಇವರಿಬ್ಬರ ಶವಸಂಸ್ಕಾರ ಮಾಡಿ ಮನೆಗೆ ಬಂದು ರೋಧಿಸುತ್ತಿದ್ದ ರಂಜಿತಾ ಮಾವ ಮಡ್ನಪ್ಪ (65) ಅವರಿಗೂ ಹಾವು ಕಚ್ಚಿದ್ದು, ಅವರನ್ನು ಕೂಡಲೇ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಮಡ್ನಪ್ಪ ಅವರಿಗೆ ಹಾವು ಕಚ್ಚಿ ಅವರು ಕಿರುಚಿಕೊಂಡಾಗ ಮಗಳು ಲಕ್ಷ್ಮಮ್ಮ ಸ್ಥಳಕ್ಕೆ ಬಂದಿದ್ದು, ಹಾವನ್ನು ನೋಡಿ ಓಡಿಹೋಗಿದ್ದಾರೆ. ಘಟನೆಯ ಬಳಿಕ ಗ್ರಾಮಸ್ಥರು ಹಾವನ್ನು ಹಿಡಿದು ಸಾಯಿಸಿದ್ದಾರೆ.

    ಹಿರಿಯೂರು ತಾಲೂಕು ಹಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಮಲಗಿದ್ದಲ್ಲೇ ಕಡಿದ ಹಾವು- ಬೆಳಗಾವಿಯಲ್ಲಿ ಇಬ್ಬರ ಸಾವು

    ಮಲಗಿದ್ದಲ್ಲೇ ಕಡಿದ ಹಾವು- ಬೆಳಗಾವಿಯಲ್ಲಿ ಇಬ್ಬರ ಸಾವು

    ಬೆಳಗಾವಿ: ಜಿಲ್ಲೆಯ ಪ್ರತ್ಯೇಕ ಗ್ರಾಮದಲ್ಲಿ ಹಾವು ಕಡಿತದಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಸವದತ್ತಿ ತಾಲೂಕಿನ ಓಬಲದಿನ್ನಿ ಗ್ರಾಮದಲ್ಲಿ 50 ವರ್ಷದ ಲಕ್ಷ್ಮಣ ಲಿಂಬನ್ನವರ ಅವರಿಗೆ ವಿಷಕಾರಿ ಹಾವು ಕಡಿದಿತ್ತು. ಚಿಕಿತ್ಸೆಗೆ ಸಹಾಯವಾಗಲೆಂದು ಕಡಿದ ಹಾವನ್ನು ಒಂದು ಚೀಲದಲ್ಲಿ ತೆಗೆದುಕೊಂಡು ಆಸ್ಪತ್ರೆಗೆ ಹೋಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಲಕ್ಷ್ಮಣ್ ಸಾವನ್ನಪ್ಪಿದ್ದಾರೆ. ಚೀಲದಲ್ಲಿ ತೆಗೆದುಕೊಂಡು ಹೋಗಿದ್ದ ಹಾವು ಕೂಡ ಸತ್ತು ಹೋಗಿದೆ.

    ಬೈಲಹೊಂಗಲ ತಾಲೂಕಿನ ಹೊಸಕೋಟೆ ಗ್ರಾಮದ 29 ವರ್ಷದ ರಾಮಪ್ಪ ಕೆಳಗಿನಮನಿ ಅವರಿಗೆ ಹಾವು ಕಡಿದಿತ್ತು. ಅವರೂ ಕೂಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.