Tag: ಹಾವು

  • ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ

    ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ

    ಜೈಪುರ್: ಹಳ್ಳಿಯೊಂದಕ್ಕೆ ಕೋವಿಡ್ 19 ಲಸಿಕೆ ಹಿಡಿದು ಬಂದ ಆರೋಗ್ಯ ಸಿಬ್ಬಂದಿಯನ್ನು ಹಿರಿಯ ಮಹಿಳೆಯೊಬ್ಬರು ಹಾವು ತೋರಿಸಿ ಹೆದರಿಸಿರುವ ಘಟನೆ ರಾಜಸ್ಥಾನದ ಅಜ್ಮೇರ್​​ನಲ್ಲಿ ನಡೆದಿದೆ.

    ಅಜ್ಮೇರ್ ಜಿಲ್ಲೆಯ ಪಿಸಂಗನ್‍ನ ನಾಗೇಲಾವ್ ಗ್ರಾಮಕ್ಕೆ ಆರೋಗ್ಯ ಸಿಬ್ಬಂದಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿದ್ದಾರೆ. ಅದರಂತೆ ಒಂದು ಮನೆಯ ಬಾಗಿಲಲ್ಲಿ ನಿಂತ ಅವರಿಗೆ ಅಕ್ಷರಶಃ ಶಾಕ್ ಕಾದಿತ್ತು. ಆ ಮನೆಯ ಮಹಿಳೆ ಕಮಲಾ ದೇವಿ ಕೈಯಲ್ಲೊಂದು ಚಿಕ್ಕ ಬುಟ್ಟಿ ಹಿಡಿದಿದ್ದರು. ಅದರಲ್ಲಿ ನಾಗರಹಾವು ಹೆಡೆಬಿಚ್ಚಿ ಕುಳಿತಿತ್ತು.  ಇದನ್ನೂ ಓದಿ: ಬೊಮ್ಮಾಯಿ ಆರ್‌ಎಸ್‍ಎಸ್‍ನವರು ಅಲ್ಲ: ಸಿದ್ದರಾಮಯ್ಯ

    ಕಮಲಾದೇವಿ ಕಲ್ಬೇಲಿಯಾ ಸಮುದಾಯಕ್ಕೆ ಸೇರಿದವರಾಗಿದ್ದು, ಹಾವು ಹಿಡಿಯುವುದು, ಅದನ್ನು ನಿಯಂತ್ರಿಸಿ, ಆಟ ಆಡಿಸುವುದು ಇವರ ಕಸುಬಾಗಿದೆ. ಆದರೆ ಆ ಹಾವನ್ನು ಲಸಿಕೆ ನೀಡಲು ಬಂದ ಆರೋಗ್ಯ ಕಾರ್ಯಕರ್ತರ ವಿರುದ್ಧ ಶಸ್ತ್ರವಾಗಿ ಆಕೆ ಬಳಸಿದ್ದಾಳೆ. ನನಗೆ ಲಸಿಕೆ ಬೇಡ. ಲಸಿಕೆ ಹಾಕಲು ಮುಂದೆ ಬಂದರೆ ನಿಮ್ಮ ಮೇಲೆ ಹಾವನ್ನು ಬಿಡುತ್ತೇನೆ ಎಂದು ಅವರು ಹೆದರಿಸುತ್ತಿದ್ದರು. ಇದನ್ನೂ ಓದಿ:  ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್

    ವೈದ್ಯಕೀಯ ಸಿಬ್ಬಂದಿ, ಅದರಿಂದ ಏನೂ ಅಪಾಯವಿಲ್ಲ ಎಂದು ಹೇಳಿ ಆಕೆಯನ್ನು ಮನವೊಲಿಸಲು ಪ್ರಯತ್ನ ಮಾಡಿದರೂ ಆಕೆ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಹಾವನ್ನು ತೋರಿಸಿದಾಗ ಹೆದರಿದ ವೈದ್ಯಕೀಯ ಸಿಬ್ಬಂದಿ ತಮಗೆ ಸಹಾಯ ಮಾಡುವಂತೆ ಸ್ಥಳೀಯರನ್ನು ಕೇಳಿಕೊಂಡಿದ್ದಾರೆ. ನಂತರ ಇನ್ನೂ ಕೆಲವರು ಬಂದು ಎಲ್ಲರೂ ಸೇರಿ ಕಮಲಾ ದೇವಿಯಲ್ಲಿ ತಿಳಿವಳಿಕೆ ಮೂಡಿಸಿದರು. ಬಳಿಕ ಅವರು ಕೊವಿಡ್ 19 ಲಸಿಕೆ ಪಡೆದಿದ್ದಾರೆ. ಕಮಲಾ ದೇವಿ ಜತೆ ಇನ್ನೂ 20 ಮಂದಿ ತಮಗೆ ಲಸಿಕೆ ಬೇಡ ಎನ್ನುತ್ತಿದ್ದರು. ಆದರೆ ಈಕೆ ವ್ಯಾಕ್ಸಿನ್ ಪಡೆಯುತ್ತಿದ್ದಂತೆ ಅವರೂ ಕೂಡ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:  ಭಯ ಹುಟ್ಟಿಸಲು ಉಗ್ರರು ಹತ್ಯೆಯನ್ನು ಗುರಿಯಾಗಿಸಿಕೊಂಡಿದ್ದಾರೆ: ಮೋಹನ್ ಭಾಗವತ್

  • ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವು ರಕ್ಷಣೆ – ಕಾಡಿಗೆ ಬಿಟ್ಟ ಸ್ನೇಕ್ ರಾಘವೇಂದ್ರ

    ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವು ರಕ್ಷಣೆ – ಕಾಡಿಗೆ ಬಿಟ್ಟ ಸ್ನೇಕ್ ರಾಘವೇಂದ್ರ

    ಕೊಪ್ಪಳ: ಜಿಲ್ಲೆಯ ಗಂಗಾವತಿಯ ದೇವಘಾಟ್ ಬಳಿ ರೈತನ ಹೊಲದಲ್ಲಿ ಕಾಣಿಸಿಕೊಂಡ ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವೊಂದನ್ನು ಸ್ನೇಕ್ ಪುಟ್ಟು ಅಲಿಯಾಸ್ ಸಿರಿಗೇರಿ ರಾಘವೇಂದ್ರ ರಕ್ಷಣೆ ಮಾಡಿ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

    Snake

    ಗಂಗಾವತಿಯ ಲಯನ್ಸ್ ಕ್ಲಬ್ ಅಧ್ಯಕ್ಷ ಡಿ.ಎಂ ಅಭಿಷೇಕ್ ಎಂಬವರ ಹೊಲದಲ್ಲಿ ಈ ಹಾವು ಕಾಣಿಸಿಕೊಂಡಿತ್ತು. ಸ್ಥಳೀಯರೊಬ್ಬರು ಹಾವಿನ ಚಿತ್ರ ಸೆರೆ ಹಿಡಿದು ಸಿರಿಗೇರಿ ರಾಘವೇಂದ್ರ ಅವರಿಗೆ ಕಳುಹಿಸಿದ್ದರು.  ಇದನ್ನೂ ಓದಿ: ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

    Snake

    ಕೂಡಲೇ ಸ್ಥಳಕ್ಕೆ ತೆರಳಿದ ಸ್ನೇಕ್ ಪುಟ್ಟು, ರೋಚಕ ಕಾರ್ಯಾಚರಣೆ ನಡೆಸಿ ಭತ್ತದ ಗದ್ದೆಯಲ್ಲಿ ನುಸುಳಿಕೊಂಡು ಹೋಗುತ್ತಿದ್ದ ಹೆಬ್ಬಾವನ್ನು ಸೆರೆ ಹಿಡಿದಿದ್ದಾರೆ ಮತ್ತು ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ಸಂರಕ್ಷಿತ ಪ್ರದೇಶಕ್ಕೆ ಹಾವನ್ನು ಬಿಟ್ಟು ಬರಲಾಯಿತು.

    Snake

    ಸ್ನೇಕ್ ಪುಟ್ಟು ಅವರು ಈವರೆಗೆ ಸುಮಾರು ಮೂರು ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಿಸಿದ್ದಾರೆ. ಯಾರಿಂದಲೂ ಹಣ ಪಡೆಯದೇ ಕೇವಲ ವನ್ಯಜೀವಿಗಳ ರಕ್ಷಣೆಗೆ ಮುಂದಾಗಿರುವ ಇವರ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ.  ಇದನ್ನೂ ಓದಿ: ಪ್ರತಿ ವಲಯದಲ್ಲೂ ಸಂಶೋಧನೆ ಅಭಿವೃದ್ಧಿಗೆ ಆದ್ಯತೆ: ಬೊಮ್ಮಾಯಿ

  • ರೋಡಿಗೆ ಬಂದ ನಾಗರಹಾವು- ಅರ್ಧ ಗಂಟೆ ಸಂಚಾರ ಬಂದ್

    ರೋಡಿಗೆ ಬಂದ ನಾಗರಹಾವು- ಅರ್ಧ ಗಂಟೆ ಸಂಚಾರ ಬಂದ್

    ಚಿಕ್ಕೋಡಿ: ನಾಗರಹಾವು ರಸ್ತೆಗೆ ಬಂದು ಅರ್ಧ ಗಂಟೆಗಳ ಕಾಲ ಸಂಚಾರ ಬಂದ್ ಮಾಡಿರಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಸಂಭವಿಸಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಈ ದೃಶ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಇಂದು ಸಂಜೆ ನಾಗರಹಾವು ಕಾಣಿಸಿಕೊಂಡು, ರೋಡಿನ ಮೇಲೆ ಹೆಡೆ ಎತ್ತಿ ಕೆಲಕಾಲ ಆಟ ಆಡಿದೆ. ಇದನ್ನೂ ಓದಿ: ಥಿಯೇಟರ್‌ನಲ್ಲಿ ಫುಲ್ ಹೌಸ್ – ಶೀಘ್ರವೇ ಸರ್ಕಾರದ ನಿರ್ಧಾರ ಪ್ರಕಟ

    ಅರ್ಧ ಗಂಟೆಗಳ ಕಾಲ ರೋಡಿನ ಮೇಲೆ ಆಟ ಆಡಿದ ನಂತರ ಪಕ್ಕದ ಹುಲ್ಲು ಗಾಡಿಗೆ ಸೇರಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತು. ವಾಹನ ಸವಾರರು ಮಾತ್ರ ಹಾವು ನೋಡುತ್ತ ಮೂಕ ಪ್ರೇಕ್ಷಕರಂತೆ ನಿಂತಿದ್ದರು.

  • ಮನೆಯಂಗಳಕ್ಕೆ ಬಂದ ಹಾವು ಹಿಡಿದು ರಕ್ಷಿಸಿದ ಆರರ ಪೋರಿ

    ಮನೆಯಂಗಳಕ್ಕೆ ಬಂದ ಹಾವು ಹಿಡಿದು ರಕ್ಷಿಸಿದ ಆರರ ಪೋರಿ

    ಮಡಿಕೇರಿ: ಮನೆಯಂಗಳಕ್ಕೆ ಬಂದ ಹಾವನ್ನು ಆರು ವರ್ಷದ ಬಾಲಕಿಯೊಬ್ಬಳು ಹಿಡಿದು ಗ್ರಾಮಸ್ಥರಿಗೆ ಅಚ್ಚರಿ ಮೂಡಿಸಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದಲ್ಲಿ ನಡೆದಿದೆ.

    ವೀರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ರೋಷನ್ ಎಂಬವರ ಆರು ವರ್ಷದ ಮಗಳು ತನುಷಾ(6) ಹಾವನ್ನು ಹಿಡಿದು ರಕ್ಷಿಸಿದ ಪೋರಿ. ತನ್ನ ಎರಡು ವರ್ಷದ ತಂಗಿಯೊಂದಿಗೆ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಹಾವೊಂದು ಬಂದಿದೆ. ಅದು ಮನೆಯ ಸಮೀಪದಲ್ಲೇ ಇರುವ ಪೊದೆಯೊಳಕ್ಕೆ ಹೋಗುತ್ತಿದ್ದನ್ನು ತನುಷಾ ನೋಡಿದ್ದಾಳೆ. ಕೂಡಲೇ ಮನೆಯೊಳಗಿದ್ದ ಅಮ್ಮನನ್ನು ಕೂಗಿ ಕರೆದು ಅಮ್ಮ ಹಾವು ಬಂದಿದೆ ಎಂದು ಹೇಳಿದ್ದಾಳೆ. ತಾಯಿ ಪವಿತ್ರಾ, ಮನೆಯಿಂದ ಹೊರ ಬರುವಷ್ಟರಲ್ಲಿ ಆ ಬಾಲಕಿ ಪೊದೆಯೊಳಕ್ಕೆ ಹೋಗುತ್ತಿದ್ದ ಹಾವನ್ನು ಹಿಡಿದು ಮನೆ ಮುಂದಿರುವ ಕಾಫಿ ಕಣಕ್ಕೆ ತಂದಿದ್ದಾಳೆ. ತನುಷಾ ಹಾವು ಹಿಡಿದು ತಂದಿರುವುದನ್ನು ಪವಿತ್ರಾ ಮತ್ತು ಅಕ್ಕಪಕ್ಕದ ಮನೆಯವರೆಲ್ಲರೂ ನೋಡಿ ಹೌಹಾರಿದ್ದಾರೆ. ಆದರೆ ಬಾಲಕಿ ತನುಷಾ ಮಾತ್ರ ಯಾವ ಅಂಜಿಕೆಯೂ ಇಲ್ಲದೆ ಹಾವು ಹಿಡಿದು ತನಗೆ ಇಷ್ಟ ಬಂದಂತೆ ಹಾವನ್ನು ಎರಡೂ ಕೈಗಳಲ್ಲಿ ಎತ್ತಿ ಆಟವಾಡಿಸಿದ್ದಾಳೆ. ಇದನ್ನೂ ಓದಿ: ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು: ಶಾಮನೂರು

    ಈ ಬಾಲಕಿಯ ತಂದೆ ರೋಷನ್ ಎಂಬವರು ಹಾವುಗಳ ರಕ್ಷಣೆ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ತಂದೆ ಹಾವನ್ನು ಹಿಡಿಯುವುದನ್ನು ಕಂಡಿರುವ ತನುಷಾ ಕೂಡ ಹಾವನ್ನು ಹಿಡಿದಿದ್ದಾಳೆ ಎನ್ನುತ್ತಾರೆ ಮನೆಯ ಅಕ್ಕ ಪಕ್ಕದವರು. ತನುಷಾಳ ತಾಯಿ ಮನೆಯಿಂದ ಹೊರ ಹೋಗಿದ್ದ ರೋಷನ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಬಂದ ರೋಷನ್ ಮಗುವಿನ ಕೈಯಿಂದ ಹಾವನ್ನು ಪಡೆದು ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 983 ಮಂದಿಗೆ ಕೊರೊನಾ – 21 ಜನ ಸಾವು

  • ಹಾವುಗಳಿಗೆ ಸೋದರಿಯರಿಂದ ರಾಖಿ ಕಟ್ಟಿಸಲು ಹೋಗಿ ಪ್ರಾಣ ಬಿಟ್ಟ ಯುವಕ

    ಹಾವುಗಳಿಗೆ ಸೋದರಿಯರಿಂದ ರಾಖಿ ಕಟ್ಟಿಸಲು ಹೋಗಿ ಪ್ರಾಣ ಬಿಟ್ಟ ಯುವಕ

    ಪಾಟ್ನಾ: ಸೋದರಿಯರಿಂದ ವಿಷಕಾರಿ ಹಾವುಗಳಿಗೆ ರಾಖಿ ಕಟ್ಟಿಸಲು ಮುಂದಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ.

    25 ವರ್ಷದ ಮನಮೋಹನ್ ಉರ್ಫ್ ಬವುರಾ ಸಾವನ್ನಪ್ಪಿದ ಯುವಕ. ಈತ 10 ವರ್ಷಗಳಿಂದ ಹಾವುಗಳ ರಕ್ಷಣೆಯಲ್ಲಿ ತೊಡಗಿಕೊಂಡಿದ್ದನು. ಭಾನುವಾರ ಎರಡು ನಾಗರಹಾವು ಹಿಡಿದಿದ್ದ ಮನಮೋಹನ್ ತನ್ನ ಇಬ್ಬರು ಸೋದರಿಯರಿಂದ ರಾಖಿ ಕಟ್ಟಿಸಲು ಮುಂದಾಗಿದ್ದನು. ಈ ವೇಳೆ ಬಾಲ ಹಿಡಿದುಕೊಂಡಿದ್ದಾಗ ಒಂದು ಹಾವು ಮನಮೋಹನ್ ಹೆಬ್ಬರಳು ಕಚ್ಚಿದೆ.

    ಹಾವು ಕಚ್ಚಿದ ಕೂಡಲೇ ಸ್ಥಳೀಯರು ಗಿಡಮೂಲಿಕೆ ಔಷಧಿ ಕೊಟ್ಟು ಚಿಕಿತ್ಸೆ ನೀಡಿದ್ದಾರೆ. ಆದ್ರೆ ಮನಮೋಹನ್ ರೋಗ್ಯ ಏರುಪೇರಾಗಿದ್ದರಿಂದ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಆದ್ರೆ ಅಲ್ಲಿ ಆ್ಯಂಟಿ ವೆನಮ್ ಇಂಜೆಕ್ಷನ್ ಸಿಗದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮನಮೋಹನ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬಾಲಕಿಗೆ ಸೆಕ್ಸ್ ವೀಡಿಯೋ ಕಳಿಸ್ತಿದ್ದ ಆಂಟಿ ವಿರುದ್ಧ ಎಫ್‍ಐಆರ್

    ಸ್ನೇಕ್ ಬವುರಾ ಎಂದೇ ಫೇಮಸ್: ಮೃತ ಮನಮೋಹನ್ ಸ್ಥಳೀಯವಾಗಿ ಸ್ನೇಕ್ ಬವುರಾ ಎಂದೇ ಫೇಮಸ್ ಆಗಿದ್ದನು. ಸುತ್ತಮುತ್ತದ ಗ್ರಾಮಗಳಲ್ಲಿ ಎಲ್ಲೇ ಹಾವು ಕಾಣಿಸಿಕೊಂಡರೂ ಅಲ್ಲಿ ಮನಮೋಹನ್ ಪ್ರತ್ಯಕ್ಷನಾಗಿ ರಕ್ಷಣೆ ಮಾಡುತ್ತಿದ್ದನು. ಹಾಗೆ ಹಾವುಗಳನ್ನು ಕೊಲ್ಲದಂತೆ ಜಾಗೃತಿ ಸಹ ಮೂಡಿಸುತ್ತಿದ್ದನು. ಹಾವು ಕಚ್ಚಿದ ಕೂಡಲೇ ಕುಟುಂಬಸ್ಥರು ಗಿಡಮೂಲಿಕೆ ಪ್ರಯೋಗಕ್ಕೆ ಮುಂದಾಗದೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರೆ ಆತ ಬದುಕುಳಿಯುತ್ತಿದ್ದ ಎಂದು ಮನಮೋಹನ್ ಗೆಳೆಯರು ಹೇಳಿ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಆಕ್ಟೀವ್ ಆಗಿದೆಯಾ ಓಜಿಕುಪ್ಪಂ ಗ್ಯಾಂಗ್? ಒಂಟಿ ಮಹಿಳೆಯರೇ ಇವರ ಟಾರ್ಗೆಟ್!

  • ಹಾವನ್ನು ಕಚ್ಚಿ ಸಾಯಿಸಿದ ವ್ಯಕ್ತಿ ಪ್ರಾಣಾಪಾಯದಿಂದ ಪಾರು

    ಹಾವನ್ನು ಕಚ್ಚಿ ಸಾಯಿಸಿದ ವ್ಯಕ್ತಿ ಪ್ರಾಣಾಪಾಯದಿಂದ ಪಾರು

    ಭುವನೇಶ್ವರ: ತನಗೆ ಕಡಿದ ಹಾವನ್ನು ವ್ಯಕ್ತಿ ಸಿಟ್ಟಿನಿಂದ ಹಾವನ್ನು ಹಿಡಿದು ಕಚ್ಚಿ ಕೊಂದಿರುವ ಘಟನೆ ಒಡಿಶಾದ ಜೈಪುರ ಜಿಲ್ಲೆಯಲ್ಲಿ ನಡೆದಿದೆ.

    ಆದಿವಾಸಿ ವ್ಯಕ್ತಿ ಕಿಶೋರ್ ಬಾದ್ರಾ ವಿಷಕಾರಿ ಹಾವನ್ನು ಬಾಯಿಯಿಂದಲೇ ಕಚ್ಚಿ ಸಾಯಿಸಿದ್ದಾನೆ. ಗಂಭರೀಪಟಿಯಾ ಹಳ್ಳಿಯ ಸಲಿಜಂಗಾ ಪಂಚಾಯತಿ ವ್ಯಾಪ್ತಿಯ ದಂಗಡಿ ಎಂಬಲ್ಲಿ ಘಟನೆ ನಡೆದಿದ್ದು, ಹೊಲದಲ್ಲಿ ಕೆಲಸ ಮಾಡಿ ಬರುತ್ತಿದ್ದಾಗ ಹಾವು ಕಡಿಯಿತೆಂದು ಈ ವ್ಯಕ್ತಿ ಅದನ್ನು ಹಿಡಿದು ಸೇಡು ತೀರಿಸಿಕೊಂಡಿದ್ದಾನೆ. ಕಡಿದ ಹಾವು ಅತ್ಯಂತ ವಿಷಕಾರಿಯಾಗಿದ್ದು, ಈತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಹಾವನ್ನು ಕೊಂದಿದ್ದು ಹೇಗೆ ಎನ್ನುವ ಬಗ್ಗೆ ಸ್ವತಃ ಕಿಶೋರ್ ಬಾದ್ರಾ ವಿವರಣೆ ನೀಡಿದ್ದಾನೆ. ನಾನು ಹೊಲದಿಂದ ಕೆಲಸ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾಲಿನ ಮೇಲೆ ಏನೋ ಹರಿದಾಡಿ ಕಡಿದ ಅನುಭವ ಆಯಿತು. ಆಗ ಕತ್ತಲಾಗಿತ್ತಾದ್ದರಿಂದ ಸೂಕ್ಷ್ಮವಾಗಿ ಗಮನಿಸಿದೆ. ತಕ್ಷಣ ಮೊಬೈಲ್ ಬೆಳಕಿನ ಸಹಾಯದಲ್ಲಿ ನೋಡಿದಾಗ ಅದೊಂದು ವಿಷಪೂರಿತ ಹಾವು ಎನ್ನುವುದು ಗಮನಕ್ಕೆ ಬಂತು ಎಂದಿದ್ದಾನೆ. ಇದನ್ನೂ ಓದಿ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

    ವಿಷಕಾರಿ ಹಾವು ಎಂದು ಗೊತ್ತಾದ ತಕ್ಷಣವೇ ಅದನ್ನು ಕೈಯಲ್ಲಿ ಹಿಡಿದುಕೊಂಡು ಮನಸೋ ಇಚ್ಛೆ ಕಡಿಯಲಾರಂಭಿಸಿದೆ. ಅದರ ಮೇಲೆ ಸೇಡು ತೀರಿಸಿಕೊಳ್ಳಲೆಂದು ಹಾಗೆ ಮಾಡಿದೆ. ಕೊನೆಗೆ ಅದು ಸತ್ತು ಹೋಯಿತು. ಬಳಿಕ ಸತ್ತ ಹಾವನ್ನು ಕೈಯಲ್ಲಿ ಹಿಡಿದುಕೊಂಡೇ ಮನೆಗೆ ಬಂದು ಹೆಂಡತಿಗೆ ನಡೆದಿರುವ ಘಟನೆಯನ್ನು ಹೇಳಿದೆ ಎಂದಿದ್ದಾನೆ. ಇದನ್ನೂ ಓದಿ: ಕನ್ನಡಿಗರು ಎಂಬುದನ್ನು ಸಿ.ಟಿ.ರವಿ ಮರೆತು ಭಾರತೀಯರಾಗಿದ್ದಾರೆ: ಹೆಚ್‍ಡಿಕೆ

    ಸುತ್ತಮುತ್ತಲಿನವರು ಕೆಲವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ. ಆದರೆ ಕಿಶೋರ್ ಬಾದ್ರಾ ಮಾತ್ರ ಅವರ ಮಾತಿಗೆ ಕಿವಿಗಡದೇ ನಾಟಿ ಔಷಧಿ ನೀಡುವವರ ಬಳಿ ಹೋಗಿದ್ದಾನೆ. ಅದೃಷ್ಟವಶಾತ್ ಹಾವು ಕಡಿದಾಗಲೂ, ಹಾವಿಗೆ ಈತ ತಿರುಗಿ ಕಡಿದಾಗಲೂ ವಿಷದ ಪ್ರಮಾಣ ದೇಹಕ್ಕೆ ಸೇರಿಲ್ಲವಾದ್ದರಿಂದ ಸಾವಿನ ದವಡೆಯಿಂದ ಆತ ಪಾರಾಗಿದ್ದಾನೆ.

  • ಅಂಗನವಾಡಿ ಕೇಂದ್ರಕ್ಕೆ ಹಾವುಗಳ ಕಾಟ – ಅಧಿಕಾರಿಗಳ ವಿರುದ್ಧ ಆಕ್ರೋಶ

    ಅಂಗನವಾಡಿ ಕೇಂದ್ರಕ್ಕೆ ಹಾವುಗಳ ಕಾಟ – ಅಧಿಕಾರಿಗಳ ವಿರುದ್ಧ ಆಕ್ರೋಶ

    ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಕಡಬೂರಿನ ಅಂಗನವಾಡಿ ಸಂಖ್ಯೆ 1 ಕ್ಕೆ ಹಾವುಗಳ ಕಾಟ ಹೆಚ್ಚಾಗಿದ್ದು, ಸಿಬ್ಬಂದಿ ಅಂಗನವಾಡಿಗೆ ಹೋಗಲು ಹೆದರುತ್ತಿದ್ದಾರೆ. ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟೆಗಳು ಹೆಚ್ಚಾಗಿ ಬೆಳೆದಿರುವುದರಿಂದ ಪ್ರತೀದಿನ ಹಾವುಗಳು ಪ್ರತ್ಯಕ್ಷವಾಗುತ್ತಿವೆ.

    ವಿಷಪೂರಿತ ಜಂತುಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಸಹ ಆತಂಕಗೊಂಡಿದ್ದಾರೆ. ಇಂದು ಮಕ್ಕಳು ಹಾಗೂ ಗರ್ಭಿಣಿ, ಬಾಣಂತಿಯರಿಗೆ ವಿತರಿಸಬೇಕಿದ್ದ ಆಹಾರ ಸಾಮಗ್ರಿ ಇರಿಸಿದ್ದ ಸ್ಥಳದಲ್ಲೇ ಹಾವು ಪ್ರತ್ಯಕ್ಷವಾಗಿದೆ. ಆಹಾರ ಸಾಮಗ್ರಿಗಳನ್ನ ತೆಗದು ಗ್ರಾಮಸ್ಥರು ಹಾವನ್ನು ಕೊಂದಿದ್ದಾರೆ.

    ಅಂಗನವಾಡಿ ಕೇಂದ್ರದ ಸುತ್ತಲಿನ ವಾತಾವರಣ ಸರಿಯಿಲ್ಲದ ಕಾರಣ ಹಾವು, ಚೇಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ವಿಷ ಜಂತುಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ

  • ಮೂರೇ ದಿನದಲ್ಲಿ 67 ಹಾವುಗಳ ರಕ್ಷಣೆ ಮಾಡಿದ ರಾಯಚೂರಿನ ಉರಗ ತಜ್ಞರು

    ಮೂರೇ ದಿನದಲ್ಲಿ 67 ಹಾವುಗಳ ರಕ್ಷಣೆ ಮಾಡಿದ ರಾಯಚೂರಿನ ಉರಗ ತಜ್ಞರು

    ರಾಯಚೂರು: ಮೂರು ದಿನದಲ್ಲಿ 67 ಹಾವುಗಳ ರಕ್ಷಣೆಮಾಡಿ ರಾಯಚೂರಿನ ಉರಗ ತಜ್ಞರಿಂದ ಜನಜಾಗೃತಿಯನ್ನೂ ಮೂಡಿಸಿದ್ದಾರೆ.

    ಸಾರ್ವಜನಿಕರ ಮಾಹಿತಿ ಮೇರೆಗೆ ಜಿಲ್ಲೆಯಾದ್ಯಂತ 8 ಜನ ಉರಗ ತಜ್ಞರು ಮೂರು ದಿನಗಳಲ್ಲಿ 67 ಹಾವುಗಳನ್ನ ಹಿಡಿದು ಸುರಕ್ಷಿತವಾಗಿ ನಗರದ ಹೊರವಲಯದ ಮಲಿಯಾಬಾದ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಹಾವುಗಳನ್ನು ಕಾಡಿಗೆ ಬಿಡುವ ಮೂಲಕ ಜನ ಜಾಗೃತಿಯನ್ನೂ ಉರಗ ತಜ್ಞರು ಮಾಡಿದ್ದಾರೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಫ್ರೆಂಡ್ಸ್ ವೈಲ್ಡ್ ಲೈಫ್ ಸೊಸೈಟಿಯ ಉರಗ ತಜ್ಞ ಅಫ್ಸರ್ ಹುಸೇನ್ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಹಾವುಗಳನ್ನ ಹಿಡಿದು ಕಾಡಿಗೆ ಬಿಡಲಾಗಿದೆ. ಉರಗತಜ್ಞರಾದ ಸೋಹೆಲ್, ಉದಯ್, ಮುಕ್ತಿಯಾರ್ ಸೇರಿ 8 ಜನ 67 ಹಾವುಗಳನ್ನ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಉರಗ ತಜ್ಞ ಅಫ್ಸರ್ ಹುಸೇನ್ ಸೇರಿ ಒಟ್ಟು 28 ಜನರ ತಂಡ ಕಳೆದ 31 ವರ್ಷಗಳಿಂದ ಜಿಲ್ಲೆಯಲ್ಲಿ ಹಾವುಗಳ ರಕ್ಷಣೆ ಹಾಗೂ ಜಾಗೃತಿ ಕಾರ್ಯ ಮಾಡಿಕೊಂಡು ಬರುತ್ತಿದೆ.

    ರಾಯಚೂರು ನಗರದಲ್ಲಿ ಹಾವಿನ ಉದ್ಯಾನವನ ನಿರ್ಮಿಸಿ, ಹಾವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ,ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಗುರಿಯನ್ನು ಫ್ರೆಂಡ್ಸ್ ವೈಲ್ಡ್ ಲೈಫ್ ಸೊಸೈಟಿ ಹೊಂದಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಹೀಗಾಗಿ ಹಾವುಗಳನ್ನ ಕೊಲ್ಲದೆ ರಕ್ಷಿಸಿ ಅರಣ್ಯಕ್ಕೆ ಬಿಡಬೇಕು. ಈ ಉದ್ದೇಶದಿಂದಲೇ ಕೆಲಸ ಮಾಡುತ್ತಿದ್ದೇವೆ ಅಂತ ಉರಗ ತಜ್ಞ ಅಫ್ಸರ್ ಹುಸೇನ್ ಹೇಳಿದ್ದಾರೆ.

  • ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

    ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

    ಬಾಗಲಕೋಟೆ: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ಹಿಡಿದಿದ್ದ ಉರಗ ರಕ್ಷರೊಬ್ಬರು ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.

    30 ವರ್ಷ ಪ್ರಾಯದ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿ. ಬುಧವಾರ ರಾತ್ರಿ ಗ್ರಾಮದಲ್ಲಿ ಹಾವು ಕಾಣಿಸಿಕೊಂಡಿತ್ತು, ನಂತರ ವಿಷಯ ತಿಳಿದ ಸದಾಶಿವ ಕರಣಿ, ಅಲ್ಲಿಗೆ ತೆರಳಿ ಹಾವನ್ನು ಹಿಡಿದಿದ್ದರು. ಹಾವನ್ನು ಹಿಡಿಯುವ ವೇಳೆ ಸದಾಶಿವ ಅವರಿಗೆ ಕಚ್ಚಿತ್ತು. ಬಳಿಕ ಸದಾಶಿವ ಅವರು ಮನೆಯಲ್ಲಿಯೇ ಗಿಡಮೂಲಿಕೆಗಳ ಔಷಧಿ ತೆಗೆದುಕೊಂಡಿದ್ದರು. ಆದರೆ ನಿನ್ನೆ ತಡರಾತ್ರಿ ಹಾವಿನ ವಿಷ ಹೆಚ್ಚಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಟ್ಟಿಗೆಯಲ್ಲಿ ಅವಿತುಕೊಂಡಿದ್ದ ವಿಷ ಸರ್ಪ – ಉರಗ ಕಂಡು ಆತಂಕಗೊಂಡ ಜನ

    ಸದಾಶಿವ ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಕೆಲಸದಲ್ಲಿ ಭಾರೀ ಪ್ರಸಿದ್ಧಿಯನ್ನು ಪಡೆದಿದ್ದರು. ಸದಾಶಿವ ಅವರ ತಂದೆಯೂ ಹಾವು ಹಿಡಿಯುದರಲ್ಲಿ ನಿಸ್ಸಿಮರಾಗಿದ್ದರು. ಹೀಗಾಗಿ ತಂದೆಯಂತೆ ಮಗ ಸದಾಶಿವ ಅವರು ಕೂಡ ಊರಿಗೆ, ಕೆಲ ಮನೆಗಳಿಗೆ ಆಗಮಿಸುತ್ತಿದ್ದ ನಾನಾ ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಆದರೆ ನಿನ್ನೆ ತಡರಾತ್ರಿ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿದ್ದಾರೆ. ಈ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪೊಲೀಸ್ ಠಾಣೆಗೆ ಬಂದು ಸೆಲ್‍ನಲ್ಲಿ ಕುಳಿತ ಹಾವು ಸೆರೆ

    ಪೊಲೀಸ್ ಠಾಣೆಗೆ ಬಂದು ಸೆಲ್‍ನಲ್ಲಿ ಕುಳಿತ ಹಾವು ಸೆರೆ

    ಗದಗ: ವಿಷಕಾರಿ ಹಾವೊಂದು ಠಾಣೆಯನ್ನು ಒಳಪ್ರವೇಶಿಸಿ ಆರೋಪಿಗಳನ್ನು ಇರಿಸುವ ಸೆಲ್‍ನಲ್ಲಿ ಅವಿತು ಕೂತ ಘಟನೆ ನಗರದ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ಠಾಣೆಯಲ್ಲಿ ಆರೋಪಿಗಳನ್ನು ಇರಿಸುವ ಸೆಲ್ ಪಕ್ಕದಲ್ಲಿ ‘ಹುರುಪಂಜರ್’ ಎಂಬ ಜಾತಿಯ ವಿಷಕಾರಿ ಹಾವು ಕಂಡಿದೆ. ಇದನ್ನು ಪೇದೆಯೊಬ್ಬರು ನೋಡಿ ಗಾಬರಿಗೊಂಡಿದ್ದಾರೆ. ಕೂಡಲೇ ಸ್ನೇಕ್ ರೆಹಮಾನ್ ಗೆ ಕರೆ ಮಾಡಿದ್ದಾರೆ. ಸ್ನೇಕ್ ರೆಹಮಾನ್ ಹಾಗೂ ಮಗ ತೌಶೀಫ್ ಇಬ್ಬರು ಕಾರ್ಯಚರಣೆ ನಡೆಸಿ ಹಾವನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ. ಇದನ್ನೂ ಓದಿ: ಸಚಿವೆ, ಶಾಸಕರ ಸಭೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ – 1 ಗಂಟೆಯಲ್ಲಿ 4 ಬಾರಿ ಕೈಕೊಟ್ಟ ಕರೆಂಟ್

    ಹಾವನ್ನು ಹಿಡಿಯುವ ವೇಳೆ ಸುಮಾರು ಅರ್ಧ ಗಂಟೆ ಸಿಗದೇ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಳ್ಳಲು ಯತ್ನಿಸಿದೆ. ಅರ್ಧ ಗಂಟೆಗಳ ನಂತರ ಕೊನೆಗೂ ಸೆಲ್‍ನಲ್ಲಿ ಸ್ನೇಕ್ ಸೆರೆ ಸಿಕ್ಕಿದೆ. ಹಾವು ಸಿಕ್ಕ ನಂತರ ಪೊಲೀಸ್ ಸಿಬ್ಬಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು 5 ಸಅಡಿ ಉದ್ದವಿದ್ದ ಹಾವು ಪೊಲೀಸರಲ್ಲಿ ಆತಂಕ ಮೂಡಿಸಿತ್ತು. ನಂತರ ಸ್ನೇಕ್ ರೆಹಮಾನ್ ಅವರು ಹಿಡಿದು ಸುರಕ್ಷಿತವಾಗಿ ನಾರಾಯಣಪುರ ರಸ್ತೆಯ ಗದ್ದಿಹಳ್ಳದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.