Tag: ಹಾವೇರಿ ಅಪಘಾತ

  • ಹಾವೇರಿ ಅಪಘಾತ: ಮೃತರ ಕುಟುಂಬಸ್ಥರಿಗೆ ಶಿವಣ್ಣ ದಂಪತಿ ಧನ ಸಹಾಯ

    ಹಾವೇರಿ ಅಪಘಾತ: ಮೃತರ ಕುಟುಂಬಸ್ಥರಿಗೆ ಶಿವಣ್ಣ ದಂಪತಿ ಧನ ಸಹಾಯ

    ತ್ತೀಚೆಗೆ ಹಾವೇರಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ (Haveri Accident Case) ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು. ಈಗ ಮೃತರ ಕುಟುಂಬಸ್ಥರ ಎಮ್ಮಿಹಟ್ಟಿ ಗ್ರಾಮಕ್ಕೆ ಶಿವರಾಜ್‌ಕುಮಾರ್ (Shivarajkumar) ದಂಪತಿ ಭೇಟಿ ನೀಡಿ ಸಾಂತ್ವಾನ ಹೇಳಿ ಹಣ ಸಹಾಯ ಮಾಡಿದ್ದಾರೆ.

    ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ 13 ಮಂದಿ ಹಾವೇರಿ ಬಳಿ ಮೃತಪಟ್ಟಿದ್ದರು. ಮೃತರ ಕುಟುಂಬಸ್ಥರು ನೋವಿನಲ್ಲಿ ಸಂಕಷ್ಟದಲ್ಲಿದ್ದು, ಈಗ ಎಮ್ಮಿಹಟ್ಟಿಗೆ ಗೀತಾ (Geetha) ಮತ್ತು ನಟ ಶಿವರಾಜ್‌ಕುಮಾರ್ ದಂಪತಿ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಸಾಂತ್ವಾನ ಹೇಳಿದ್ದಾರೆ. ಅದಷ್ಟೇ ಅಲ್ಲ, ಅವರ ಕಷ್ಟಕ್ಕೆ ಶಿವಣ್ಣ ಜೋಡಿ ಹಣ ಸಹಾಯ ಮಾಡುವ ಮೂಲಕ ನೆರವಾಗಿದ್ದಾರೆ.

    ಇದೀಗ ಮೃತರ ಕುಟುಂಬಸ್ಥರಿಗೆ ನೆರವಾಗಿದ್ದಕ್ಕೆ ಶಿವಣ್ಣ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

  • ಭೀಕರ ಅಪಘಾತ: ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗಾಗಿ ರಾಜ್ಯ ಸರ್ಕಾರಕ್ಕೆ ಪ್ರಹ್ಲಾದ್‌ ಜೋಶಿ ಒತ್ತಾಯ

    ಭೀಕರ ಅಪಘಾತ: ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗಾಗಿ ರಾಜ್ಯ ಸರ್ಕಾರಕ್ಕೆ ಪ್ರಹ್ಲಾದ್‌ ಜೋಶಿ ಒತ್ತಾಯ

    ಹುಬ್ಬಳ್ಳಿ: ಹಾವೇರಿ (Haveri) ಜಿಲ್ಲೆ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಒತ್ತಾಯಿಸಿದ್ದಾರೆ.

    ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ಸಚಿವ ಜೋಶಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣ

    ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗೆ ಮನವಿ: ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು. ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಒತ್ತಾಯಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.