Tag: ಹಾಸನಾಂಬೆ

  • ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

    ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Temple) ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ.

    ಈಗಾಗಲೇ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ ಅಂತ್ಯಗೊಂಡಿದ್ದು, ಪೂಜೆಗಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಕಡೆಗಳಿಗೆಯಲ್ಲೂ ಭಕ್ತಗಣ ಹಾಸನಾಂಬ ದೇವಿಯನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್‌ ಪ್ರತಿಭಟನೆ

    ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಬಾಗಿಲು ಮುಚ್ಚುವ ಮುನ್ನ ಅರ್ಚಕರು ದೀಪ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಡಲಿದ್ದಾರೆ. ಅನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇದನ್ನೂ ಓದಿ: ವಿರೂಪಗೊಳಿಸಿದ ಮಹಾಕಾಳಿ ಮೂರ್ತಿಯನ್ನೇ ವಶಕ್ಕೆ ಪಡೆದ ಪೊಲೀಸ್‌ – ಬಂಗಾಳದಲ್ಲಿ ರಾಜಕೀಯ ಬಿರುಗಾಳಿ

    ಅ.9ರಂದು ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲು ತೆರೆಯಲಾಗಿತ್ತು. ಇಲ್ಲಿಯವರೆಗೂ 27 ಲಕ್ಷಕ್ಕಿಂತ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದಾರೆ. 1,000 ರೂ, 300 ರೂ, ಲಾಡು ಪ್ರಸಾದ ಹಾಗೂ ದೇವಿಯ ಸೀರೆ ಮಾರಾಟದಿಂದ 23 ಕೋಟಿಗೂ ಅಧಿಕ ಆದಾಯ ಬಂದಿದ್ದು, ಈ ಬಾರಿಯ ಜಾತ್ರಾ ಮಹೋತ್ಸವ ಇತಿಹಾಸ ಬರೆದಿದೆ. ರಾತ್ರಿಯಿಡೀ ಭಾರೀ ಮಳೆ ಸುರಿದ ಪರಿಣಾಮ ಸಿದ್ದೇಶ್ವರಸ್ವಾಮಿ ಕೆಂಡೋತ್ಸವ ತಡವಾಗಿದೆ. ಕೆಂಡ ಹಾಯಲು ಸಾವಿರಾರು ಮಂದಿ ಭಕ್ತರು ಕಾದು ನಿಂತಿದ್ದರು. ಇದನ್ನೂ ಓದಿ: ಹಾವೇರಿ | ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

  • ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

    ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

    – ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ
    – ನಾಳೆ ಗರ್ಭಗುಡಿ ಬಾಗಿಲು ಬಂದ್

    ಹಾಸನ: ಗೋಲ್ಡನ್ ಪಾಸ್ (Golden Pass) ಪಡೆದು, ಸರತಿ ಸಾಲಿನಲ್ಲಿ ನಿಂತು ನಟ ಧ್ರುವ ಸರ್ಜಾ (Dhruva Sarja) ಹಾಸನಾಂಬೆ ದರ್ಶನ ಪಡೆದಿದ್ದಾರೆ.

    ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ (Hasanamba Temple) ಆಗಮಿಸಿದ ಧ್ರುವ ಸರ್ಜಾ, ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು ನಂತರ ಮುಖ್ಯದ್ವಾರದ ಮೂಲಕ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ದೀಪಾವಳಿಯಂದು ಮೋದಿ ಜೊತೆ ಮಾತನಾಡಿದ್ದೇನೆ: ಟ್ರಂಪ್‌

    ಇನ್ನು ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಹದಿಮೂರು ಹಾಗೂ ಕಡೆಯ ದಿನವಾಗಿದ್ದು, ಹಿಂದೆಂದೂ ಕಾಣದಷ್ಟು ಭಕ್ತಗಣ ಆಗಮಿಸಿದೆ. ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಆರಂಭವಾಗಿದ್ದು, ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ಹಾಗೂ ವಿಶೇಷ ದರ್ಶನದ ಸರತಿ ಸಾಲುಗಳಲ್ಲಿ ಜನಜಂಗುಳಿ ಉಂಟಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಇಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ನಿರಂತರವಾಗಿ ದೇವಿಯ ದರ್ಶನ ಪಡೆದಿದ್ದಾರೆ. ಇಂದು ರಾತ್ರಿ 7ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಗರ್ಭಗುಡಿಯ ಬಾಗಿಲು ಬಂದ್ ಆಗಿರಲಿದೆ. ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಿ ದರ್ಶನ ಇರುವುದಿಲ್ಲ. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಹಾಗೂ ಸಾರ್ವಜನಿಕರಿಗೆ ದರ್ಶನವಿರಲಿದೆ. ನಾಳೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ

  • ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ

    ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ

    ಹಾಸನ: ಹಾಸನಾಂಬ ದೇವಿಯ (Hasanamba Temple) ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ (Bike) ಇನ್ನೋವಾ ಕಾರು (Innova Car0 ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ, ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.

    ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ. ಇದನ್ನೂ ಓದಿ: ನಾಡಿನಾದ್ಯಂತ ದೀಪಾವಳಿ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಊರಿಗೆ ತೆರಳಿದ ಜನ – ಮೆಜೆಸ್ಟಿಕ್‌ ಬಸ್‌ನಿಲ್ದಾಣ ಖಾಲಿ ಖಾಲಿ

  • ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    – ಈಗಾಗಲೇ 50 ಸಾವಿರ ಟಿಕೆಟ್‌ ಬುಕ್; ಜನ ನಿಯಂತ್ರಿಸಲು ಬುಕಿಂಗ್‌ ಕೂಡ ಬಂದ್
    – ಬೆಂಗಳೂರಿಂದ ಗಂಟೆಗೆ ಕೇವಲ‌ 2 ಬಸ್‌ ‌

    ಬೆಂಗಳೂರು: ಹಾಸನಾಂಬೆ (Hasanamba) ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಟಿಕೆಟ್‌ ಬುಕಿಂಗ್‌ (Bus Ticket Booking) ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ
    ಹಾಸನಾಂಬೆ ದೇಗುಲ ಹಾಗೂ ಸುತ್ತ ಮುತ್ತ ಬಾರಿ ಜನಸ್ತೋಮ ನೆರೆದಿದೆ. ಭಕ್ತರು ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇತ್ತ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರನ್ನು ನಿಯಂತ್ರಸಲು ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ತಾತ್ಕಾಲಿಕವಾಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.

    ಬುಕಿಂಗ್‌ ಕೂಡ ಸ್ಥಗಿತ
    ಇನ್ನೂ ಈಗಾಗಲೇ ಸಹಸ್ತ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್‌ ಬುಕಿಂಗ್‌ ಕೂಡ ಸ್ಥಗಿತಗೊಳಿಸಲಾಗಿದೆ.

    ಕೀಲೋಮೀಟರ್ ಉದ್ದದ ಸಾಲು
    ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್‌ಗಟ್ಟಲೇ ಸಾಲು ದೊಡ್ಡದಾಗಿದೆ. 1,000 ರೂ. ಹಾಗೂ 300 ರೂ. ಟಿಕೆಟ್‌ ಪಡೆದ ಭಕ್ತರು ಪ್ರತ್ಯೇಕ ಸಾಲುಗಳಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ಎರಡೂ ಸಾಲುಗಳು ಕಿಲೋಮೀಟರ್‌ಗೂ ಅಧಿಕವಾಗಿದೆ.

  • ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

    ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

    – ಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲ ಸ್ತೋತ್ರ ಪಠಿಸಿದ ಡಿಕೆಶಿ
    – ಡಿಕೆಶಿ ಭೇಟಿ ಬೆನ್ನೇ ಇಂದು ಸಿದ್ದರಾಮಯ್ಯರಿಂದ ಹಾಸನಾಂಬೆ ದರ್ಶನ

    ಹಾಸನ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ.

    ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ (Hassanamba Temple) ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ. ಸಲ್ಲಿಸಲಾಯಿತು. ಸುಮಾರು ಐದು ನಿಮಿಷ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದ ನಾರಾಯಣಿ ನಮಸ್ಕಾರ ಮಂತ್ರ ಹೇಳಿ ಅರ್ಚಕರು ಪೂಜೆ ನೆರವೇರಿಸಿದರು.

    ಪೂಜೆ ನೇರವೇರಿಸುವ ವೇಳೆ ಡಿಕೆಶಿ ʻಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲ ಸ್ತೋತ್ರʼ ಪಠಿಸಿದರು. ಇದೇ ಶುಭ ಸಮಯದಲ್ಲಿ ದೇವಿಯ ಬಲಗಡೆಯಿಂದ ಹೂವು ವರದವಾಗಿ ಬಿದ್ದಿತು. 2 ಬಾರಿ ದೇವಿಯ ಬಲಭಾಗದ ಹೂವು ಬಿದ್ದಿತು.

    ಪೂಜೆ ಬಳಿಕ ಮಾತನಾಡಿದ ಡಿಕೆಶಿ, ನಾನುಂಟು.. ಆ ತಾಯಿ ಉಂಟು ನಮಗೆ, ನಿಮಗೆ, ಎಲ್ಲರಿಗೂ ಭಗವಂತ ಶಾಂತಿ, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದ್ರು.

    ಇಂದು ಸಿಎಂ ಭೇಟಿ
    ಮಂಗಳವಾರ ರಾತ್ರಿ ಡಿಸಿಎಂ ಭೇಟಿ ನೀಡಿದ ಪೂಜೆ ಸಲ್ಲಿಸಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಹಾಸನಾಂಬ ಸನ್ನಿಧಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಅಲ್ಲಿಂದ ಹಾಸನಾಂಬೆ ದರ್ಶನಕ್ಕೆ ತೆರಳಲಿದ್ದಾರೆ. ದರ್ಶನ ಪಡೆದು ಮಧ್ಯಾಹ್ನ 12 ಗಂಟೆಗೆ ವಾಪಸ್ ಆಗಲಿದ್ದಾರೆ. ಕಳೆದ 2 ವರ್ಷಗಳಿಂದ ಸಿಎಂ ಹಾಸನಾಂಬೆ ದರ್ಶನ ಪಡೆಯುತ್ತಿರುವುದು ಗಮನಾರ್ಹ.

  • ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

    ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

    ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ (Hasanamba Temple) ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಮಧ್ಯಾಹ್ನ 12:21ಕ್ಕೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ದೇವರ ಮುಂದೆ ಇಟ್ಟಿದ್ದ ನೈವೇದ್ಯ ಹಳಸಿರಲಿಲ್ಲ ಮತ್ತು ಹೂವು ಬಾಡಿರಲಿಲ್ಲ.

    ಅರಸು ವಂಶಸ್ಥ ನಂಜರಾಜೇಅರಸ್ ಗೊನೆಯುಳ್ಳ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಹಾಸನ ಮಠದ ಪೀಠಾಧ್ಯಕ್ಷ ಶ್ರೀ ಶಂಭುನಾಥ ಸ್ಬಾಮೀಜಿ, ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್

    ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ. ಇದನ್ನೂ ಓದಿ: ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ – ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು

    ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

  • ಹಾಸನಾಂಬೆ ಹುಂಡಿ ಎಣಿಕೆ – 9 ದಿನದಲ್ಲಿ 12.63 ಕೋಟಿ ಹಣ ಸಂಗ್ರಹ

    ಹಾಸನಾಂಬೆ ಹುಂಡಿ ಎಣಿಕೆ – 9 ದಿನದಲ್ಲಿ 12.63 ಕೋಟಿ ಹಣ ಸಂಗ್ರಹ

    ಹಾಸನ: ಅ.24 ರಿಂದ ನ.3 ರವರೆಗೆ ನಡೆದ ಈ ಬಾರಿಯ ಹಾಸನಾಂಬೆ (Hasanamba) ದರ್ಶನೋತ್ಸವದಲ್ಲಿ ಕಾಣಿಕೆ ರೂಪದಲ್ಲಿ ಒಟ್ಟು 12,63,83,808 ರೂ. ದಾಖಲೆಯ ಆದಾಯ ಸಂಗ್ರಹವಾಗಿದೆ.

    ಹಾಸನಾಂಬಾ ಜಾತ್ರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ. ಬೆಳಿಗ್ಗೆ 10:00 ಗಂಟೆಯಿಂದ ಆರಂಭವಾದ ಹುಂಡಿ ಹಣ ಎಣಿಕೆ ಕಾರ್ಯ ಸಂಜೆ 4:00 ಗಂಟೆಗೆ ಮುಗಿಯಿತು. ನಿರಂತರ 6 ಗಂಟೆಗಳ ಕಾಲ ಸುಮಾರು 500ಕ್ಕೂ ಹೆಚ್ಚು ಮಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು. 25 ಕ್ಕೂ ಹೆಚ್ಚು ಬ್ಯಾಂಕ್‍ನ ಸಿಬ್ಬಂದಿ ಹುಂಡಿ ಹಣ ಎಣಿಕೆ ಸ್ಥಳದಲ್ಲಿದ್ದು, ಎಣಿಕೆಯಾದ ಹಣವನ್ನು ಬ್ಯಾಂಕ್‍ಗೆ ಕೊಂಡೊಯ್ದರು. ಅಲ್ಲದೇ ಕಾಣಿಕೆ ರೂಪದಲ್ಲಿ 51 ಗ್ರಾಂ ಚಿನ್ನ, 913 ಗ್ರಾಂ ಬೆಳ್ಳಿ, 500 ಗ್ರಾಂ ತಾಮ್ರವನ್ನು ಭಕ್ತರು ನೀಡಿದ್ದಾರೆ.

    ಈ ಬಾರಿ ವಿಶೇಷ ದರ್ಶನದ 1,000 ರೂ., 300 ರೂ., ಟಿಕೆಟ್ ಮತ್ತು ಲಾಡು ಮಾರಾಟದಿಂದ 9,67,37,567 ರೂ., ಹುಂಡಿಯಲ್ಲಿ 2,55,97,567 ರೂ., ಜಾಹಿರಾತಿನಿಂದ 5,50,000, ರೂ., ಸೀರೆ ಮಾರಾಟದಿಂದ 2,00,305 ರೂ., ದೇಣಿಗೆ 40,908 ರೂ., ತುಲಾಭಾರದಿಂದ 21,540 ರೂ., ಇ ಹುಂಡಿಯಿಂದ 3,98,859 ರೂ., ಒಟ್ಟು 12,63,83,808 ರೂ. ಹಣ ಸಂಗ್ರಹವಾಗಿದೆ.

    ದೇವರ ಹುಂಡಿಯಲ್ಲಿ ಬ್ಯಾನ್ ಆಗಿರುವ ಹಳೆಯ ನೋಟುಗಳು, ಚಲಾವಣೆಯಲ್ಲಿ ಇಲ್ಲದ ಕಾಯಿನ್‍ಗಳು, ಕರಿಮಣಿ ಸರ ಸೇರಿ ಅನೇಕ ವಸ್ತುಗಳನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ. ಭಕ್ತರು ನೂರಾರು ಬೇಡಿಕೆ ಪತ್ರಗಳನ್ನು ಹುಂಡಿಯಲ್ಲಿ ಹಾಕಿದ್ದು, ಯಾರೂ ಕೂಡ ಪತ್ರಗಳನ್ನು ತೆರೆದು ನೋಡದಂತೆ ಆದೇಶ ಹೊರಡಿಸಲಾಗಿತ್ತು. ಆದ್ದರಿಂದ ಭಕ್ತರ ಹರಕೆಗಳು, ಬೇಡಿಕೆಗಳು ಬಹಿರಂಗವಾಗಲಿಲ್ಲ.

    ಪ್ರತಿ ವರ್ಷವೂ ಹಾಸನಾಂಬೆ ದೇವಾಲಯಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ನೂಕುನುಗ್ಗಲು ಉಂಟಾಗಿ, ದೇವಿ ದರ್ಶನ ವಿಳಂಬವಾಗುತ್ತಿದೆ. ಇದರ ಜೊತೆ ಆದಾಯವೂ ಏರಿಕೆಯಾಗುತ್ತಿದ್ದು ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ದೇವಾಲಯಕ್ಕೆ 2013 ರಲ್ಲಿ 1.21 ಕೋಟಿ ರೂ., 2014 ರಲ್ಲಿ 1.27 ಕೋಟಿ ರೂ., 2015 ರಲ್ಲಿ 1.46 ಕೋಟಿ ರೂ., 2016 ರಲ್ಲಿ 2.67 ಕೋಟಿ ರೂ., ಮತ್ತು 2017 ರಲ್ಲಿ 4.14 ಕೋಟಿ ರೂ., 2018 ರಲ್ಲಿ 2.64 ಕೋಟಿ ರೂ., 2019 ರಲ್ಲಿ 3.06 ಕೋಟಿ ರೂ., 2020 ರಲ್ಲಿ 21.34 ಲಕ್ಷ ರೂ., 2021 ರಲ್ಲಿ 1.54 ಕೋಟಿ ರೂ., 2022 ರಲ್ಲಿ 3.69 ಕೋಟಿ ರೂ., 2023 ರಲ್ಲಿ 8,72,41,531 ರೂ. ಆದಾಯ ಬಂದಿತ್ತು.

  • ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್

    ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್

    – ಪ್ರಸಾದ, ವಿಶೇಷ ದರ್ಶನದ ಟಿಕೆಟ್‌ನಿಂದ 9 ಕೋಟಿ ರೂ. ಸಂಗ್ರಹ

    ಬೆಂಗಳೂರು: ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡು ಪ್ರಸಾದ ಮತ್ತು ಟಿಕೆಟ್‌ನಿಂದ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದುಬಂದಿರುವುದು ‘ಶಕ್ತಿ ಯೋಜನೆ’ಯ ಪರಿಣಾಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

    ಪತ್ರಿಕಾ ಹೇಳಿಕೆ ನೀಡಿರುವ ಅವರು, 24 ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್‌ನಿಂದ ಚಾಮರಾಜನಗರದ ವರೆಗೆ ಬಳ್ಳಾರಿಯಿಂದ ಕೋಲಾರದ ವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, ಬೇರೆ ದೇಶಗಳ ಭಕ್ತರೂ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದರು. ಉಚಿತ ಬಸ್ ಪ್ರಯಾಣ ಇರುವುದರಿಂದ ಇಷ್ಟು ಭಕ್ತರು ಬರಲು ಸಾಧ್ಯವಾಗಿದೆ. ಇದನ್ನು ನೋಡಿ ಸರ್ಕಾರಕ್ಕೆ ಹೆಮ್ಮೆಯಾಗುತ್ತಿದೆ. ಸಾರ್ಥಕ ಭಾವ ಮೂಡುತ್ತಿದೆ ಎಂದು ತಿಳಿಸಿದರು.

    ಶಕ್ತಿ ಯೋಜನೆ ಮಹಿಳೆಯರ ಶಕ್ತಿ ವೃದ್ಧಿ ಮಾಡಿರುವುದರ ಜತೆಗೆ ನಮ್ಮ ಧಾರ್ಮಿಕ ಶಕ್ತಿಯನ್ನೂ ಹೆಚ್ಚಿಸಿದೆ ಎಂಬುದು ಸಾಕ್ಷಿ. ಜೊತೆಗೆ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ಅಷ್ಟು ಸಮರ್ಪಕ ವ್ಯವಸ್ಥೆ ಮಾಡಿದೆ. 9 ದಿನಗಳಲ್ಲಿ 19 ರಿಂದ 20 ಲಕ್ಷ ಜನ ದೇವಿಯ ದರ್ಶನ ಪಡೆದಿದ್ದಾರೆ ಎಂಬುದು ಸಣ್ಣ ವಿಚಾರವಲ್ಲ ಎಂದರು.

    ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ, ಬಹುತೇಕ ಉತ್ಸವ ಯಶಸ್ವಿಯಾಗಿದೆ‌. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಹಾಗೂ ಶ್ರಮಿಸಿದ ಪೌರ ಕಾರ್ಮಿಕರು,‌ ಪೊಲೀಸರು, ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು, ಹಾಸನದ ನಾಗರಿಕರು, ಎಲ್ಲ ಭಕ್ತರಿಗೂ ಕೃತಜ್ಞರಾಗಿದ್ದೇವೆ ಎಂದು ತಿಳಿಸಿದರು.

    ಇಷ್ಟು ದೊಡ್ಡ ಸಂಖ್ಯೆಯ ಭಕ್ತರ ಭೇಟಿ ಐತಿಹಾಸಿಕ ದಾಖಲೆ. ಎಲ್ಲರಿಗೂ ನಾವು ವೈಯಕ್ತಿಕವಾಗಿ, ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳೂ ನಡೆಯದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕ ಕೈಗೊಳ್ಳಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

  • ಹಾಸನಾಂಬೆ ದರ್ಶನಕ್ಕೆ ಜಟಾಪಟಿ – 1,000, 300 ರೂ. ಪಾಸ್‌ ಮಾರಾಟಕ್ಕೆ ಮರುಚಾಲನೆ

    ಹಾಸನಾಂಬೆ ದರ್ಶನಕ್ಕೆ ಜಟಾಪಟಿ – 1,000, 300 ರೂ. ಪಾಸ್‌ ಮಾರಾಟಕ್ಕೆ ಮರುಚಾಲನೆ

    ಹಾಸನ: ಹಾಸನಾಂಬೆ (Hasanamba) ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದು, ಜನರ ನಿಯಂತ್ರಣಕ್ಕೆ ಪರದಾಡುವಂತಾಗಿದೆ. ಜನರನ್ನು ನಿಯಂತ್ರಿಸಲು ಒಂದು ದಿನದ ಹಿಂದೆಯಷ್ಟೇ ರದ್ದು ಮಾಡಿದ್ದ ಪಾಸ್‌ ಮಾರಾಟ ಪ್ರಕ್ರಿಯೆಗೆ ಶುಕ್ರವಾರ ಮರುಚಾಲನೆ ನೀಡಲಾಗಿದೆ. 1,000 ರೂ. ಹಾಗೂ 300 ರೂ. ಪಾಸ್‌ ಮಾರಾಟಕ್ಕೆ ಮರುಚಾಲನೆ ನೀಡಲಾಗಿದೆ.

    ಈ ಮೊದಲು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕಿಂಗ್‌ ಮಾಡುವವರಿಗೆ ಮಾತ್ರ ಅವಕಾಶ ಎಂದಿದ್ದ ಆಡಳಿತಾಧಿಕಾರಿ ಯೂಟರ್ನ್‌ ಹೊಡೆದಿದ್ದಾರೆ. ಆದೇಶ ರದ್ದು ಮಾಡಿದ ಮರುದಿನವೇ ಆಫ್‌ಲೈನ್ ಟಿಕೆಟ್ ಕೌಂಟರ್‌ಗೆ ಚಾಲನೆ ನೀಡಿದ್ದಾರೆ. ಗುರುವಾರ ತಡರಾತ್ರಿಯಿಂದಲೇ ಟಿಕೆಟ್ ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ಟಿಕೆಟ್‌ ಮಾರಾಟದಿಂದಲೇ 7 ಕೋಟಿಗೂ ಅಧಿಕ ಆದಾಯ ಗಳಿಸಿರುವ ಜಿಲ್ಲಾಡಳಿತ, ದಾಖಲೆ ಮಟ್ಟದ ಹಣ ಕ್ರೂಢೀಕರಣಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು

    ಹಾಸನಾಂಬೆ ಸನ್ನಿಧಿಯಲ್ಲೇ ಬಡಿದಾಟ:
    ಹಾಸನಾಂಬ ದೇವಸ್ಥಾನ ಇವತ್ತು ಅಕ್ಷರಶಃ ರಣಾಂಗಣವಾಗಿತ್ತು. ದೇಗುಲದ ಬಳಿ ಮತ್ತೆ ಮಾರಾಮಾರಿಯಾಗಿತ್ತು. ಕುಟುಂಬದವರನ್ನು ದೇವಾಲಯಕ್ಕೆ ಕರೆದೊಯ್ಯುವ ವಿಚಾರಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಜಟಾಪಟಿ ಸಹ ನಡೆದಿದೆ. ಕುಟುಂಬದವರನ್ನು ಕರೆತಂದಿದ್ದಕ್ಕೆ ಮತ್ತೋರ್ವ ಸಿಬ್ಬಂದಿ ತಡೆದಿದ್ರು, ಇದರಿಂದ ಸಿಟ್ಟಿಗೆದ್ದು ಇಬ್ಬರು ಫ್ಯಾಮಿಲಿ ಎದುರೇ ಬಡಿದಾಡಿಕೊಂಡ್ರು. ಜಗಳ ಬಿಡಿಸಲು ಪೊಲೀಸರು ಪತರುಗುಟ್ಟಿ ಹೋಗಿದ್ದಾರೆ.

    ಇನ್ನೂ, ಈ ಫೈಟ್ ನಡೆದ ಕೆಲವೇ ಗಂಟೆಗಳಲ್ಲಿ ಎಲ್ಲಾ ರೀತಿಯಾ ಪಾಸ್‌ಗಳನ್ನು ರದ್ದು ಮಾಡಲಾಗಿದೆ ಅಂದಿದ್ದಾರೆ. ಅದ್ಯಾವಾಗ ಈ ಪಾಸ್ ಕ್ಯಾನ್ಸಲ್ ಅಂದ್ರೋ ಇಡೀ ಭಕ್ತಗಣವೇ ನಿಗಿನಿಗಿ ಕೆಂಡವಾಗಿದ್ರು. ದೇವಾಲಯದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ರು. ಈ ಬಾರಿ ಆಗಿರುವ ಅವ್ಯವಸ್ಥೆ ನಿಜಕ್ಕೂ ಸಮಸ್ಯೆ ತಂದಿದೆ. ಅಧಿಕಾರಿಗಳು ಎಲ್ಲಿದ್ದಾರೋ ಎಂದು ಮಹಿಳೆಯರು ಕಿಡಿಕಾರಿದ್ರು. ಇತ್ತ ಕೆನಾಡದಿಂದ ದೇವಿ ದರ್ಶನಕ್ಕೆ ಬಂದಿದ್ದ ಯುವತಿ ಕೂಡ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಬಂದ ಲಕ್ಷಾಂತರ ಭಕ್ತರು – ಜನರ ನಿಯಂತ್ರಣಕ್ಕೆ ಪಾಸ್‌ ಮಾರಾಟ ರದ್ದು

    ಹಾಸನಾಂಬೆ ದರ್ಶನ ಅವ್ಯವಸ್ಥೆಗೆ ರೇವಣ್ಣ ಕೆಂಡ:
    ಪಾಸ್ ರದ್ದು ಸಂಬಂಧ ಮಾಜಿ ಸಚಿವ ರೇವಣ್ಣ ಕೂಡ ಕೆಂಡಾಮಂಡಲರಾಗಿದ್ದರು. ಎರಡೂವರೆ ಲಕ್ಷ ವಿಐಪಿ ಪಾಸ್ ಯಾಕೆ ಕೊಟ್ರಿ? ನಾವ್ಯಾರು ಪಾಸ್ ಕೊಡಿಸಿ ಅಂತ ಕೇಳಿಲ್ಲ. ನಂದು ದೇವಸ್ಥಾನ ಅಂತ ಡಿಸಿ ಹೇಳಿದ್ರೆ ನಾನ್ಯಾಕೆ ಬರಲಿ? ಡಿಸಿ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ ಅಂತೇಳಿ ಡಿಸಿ ಸತ್ಯಭಾಮಾ ವಿರುದ್ಧ ರೇವಣ್ಣ ಸಿಟ್ಟು ಹೊರ ಹಾಕಿದ್ರು.

    ಕ್ಷಣಕ್ಷಣಕ್ಕೂ ಹಾಸನಾಂಬೆ ದೇವಸ್ಥಾನದ ಆವರಣದಲ್ಲಿ ಭಕ್ತರ ಕಿಚ್ಚು ಜೋರಾಗಿತ್ತು ಈ ಬೆನ್ನಲ್ಲೇ ಪಾಸ್‌ ವ್ಯವಸ್ಥೆಗೆ ಮರುಚಾಲನೆ ನೀಡಲಾಯಿತು.

  • ಹಾಸನಾಂಬೆ ದರ್ಶನಕ್ಕೆ ಬಂದ ಲಕ್ಷಾಂತರ ಭಕ್ತರು – ಜನರ ನಿಯಂತ್ರಣಕ್ಕೆ ಪಾಸ್‌ ಮಾರಾಟ ರದ್ದು

    ಹಾಸನಾಂಬೆ ದರ್ಶನಕ್ಕೆ ಬಂದ ಲಕ್ಷಾಂತರ ಭಕ್ತರು – ಜನರ ನಿಯಂತ್ರಣಕ್ಕೆ ಪಾಸ್‌ ಮಾರಾಟ ರದ್ದು

    ಹಾಸನ: ಹಾಸನಾಂಬೆ (Hasanamba) ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದು, ಜನರ ನಿಯಂತ್ರಣಕ್ಕೆ ಪರದಾಡುವಂತಾಗಿದೆ. ಜನರನ್ನು ನಿಯಂತ್ರಿಸಲು 1,000 ರೂ.ನ ನೇರ ದರ್ಶನದ ಟಿಕೆಟ್ ಮಾರಾಟ ರದ್ದು ಮಾಡಲಾಗಿದೆ.

    ಹಾಸನಾಂಬೆ ದೇವಾಲಯದ ಬಳಿ ಹಾಸನ (Hassan) ಎಸ್‌ಪಿ ಮಹಮ್ಮದ್ ಸುಜೀತಾ, ಕೊಡಗು ಎಸ್‌ಪಿ ರಾಮರಾಜ ಹಾಗೂ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ್ ಮಾಲದಂಡಿಯವರನ್ನು ಜನರ ನಿಯಂತ್ರಣಕ್ಕೆ ನಿಯೋಜಿಸಲಾಗಿದೆ. ಆದರೂ ಹಾಸನಾಂಬೆ ದೇವಿ ದರ್ಶನಕ್ಕೆ ಲಕ್ಷಾಂತರ ಜನ ಭಕ್ತರು ಆಗಮಿಸಿದ್ದು ನಿಯಂತ್ರಣಕ್ಕೆ ಮೂವರು ಎಸ್‌ಪಿಗಳು ಪರದಾಡುವಂತಾಗಿದೆ.

    ಹಾಸನಾಂಬೆ ದೇವಾಲಯ ಆಡಳಿತ ಮಂಡಳಿ ಬೇಕಾಬಿಟ್ಟಿಯಾಗಿ ವಿವಿಐಪಿ ಪಾಸ್ ಹಂಚಿದ್ದರಿಂದ ಈ ಯಡವಟ್ಟಾಗಿದೆ. ರಾಜ್ಯದ ಹಲವು ಜಿಲ್ಲೆಗಳ ಲಕ್ಷಾಂತರ ಪಾಸ್ ಹಂಚಿಕೆ ಮಾಡಿದ್ದರಿಂದ ಈ ಸಮಸ್ಯೆ ಎದುರಾಗಿದೆ. ವಿವಿಐಪಿ ಪಾಸ್ ಪಡೆದು ನೇರ ದರ್ಶನದ ಆಸೆಯಲ್ಲಿ ಲಕ್ಷಾಂತರ ಜನ ಬಂದಿದ್ದಾರೆ. ಆದಾಯದ ಆಸೆಗೆ ಬೇಕಾಬಿಟ್ಟಿ ಪಾಸ್ ಹಂಚಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ದರ್ಶನಕ್ಕೆ ಬಂದ ಜನ ಪಾಸ್ ಇದೆ, ಬಿಡಿ ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಸಿಬ್ಬಂದಿ ಜೊತೆ ಗಲಾಟೆಗೂ ಮುಂದಾಗಿದ್ದಾರೆ. ಒಂದು ಭಾಗದಿಂದ ಜನರು ಹೋಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ.