Tag: ಹಾಸನಾಂಬ ಜಾತ್ರೆ

  • ಎರಡೇ ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಕೋಟಿ ಕೋಟಿ ಆದಾಯ

    ಎರಡೇ ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಕೋಟಿ ಕೋಟಿ ಆದಾಯ

    ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಶುರುವಾರ ಎರಡೇ ದಿನದಲ್ಲಿ ದೇವಾಲಯಕ್ಕೆ ಕೋಟಿ ಕೋಟಿ ಆದಾಯ ಹರಿದುಬಂದಿದೆ.

    ಗುರುವಾರ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭಗೊಂಡಿದೆ. ಶುಕ್ರವಾರದಿಂದ ಸಾರ್ವಜನಿಕ ದರ್ಶನ ಪ್ರಾರಂಭವಾಗಿದೆ. ಕೇವಲ ಎರಡು ದಿನಗಳಲ್ಲಿ 2.25 ಕೋಟಿ ರೂ. ಆದಾಯ ಹರಿದು ಬಂದಿದೆ. ಭಾನುವಾರ ಬೆಳಗ್ಗೆ 8 ಗಂಟೆಯ ವರೆಗೆ 300 ರೂ. ವಿಶೇಷ ದರ್ಶನದಲ್ಲಿ ಒಟ್ಟು 27,759 ಟಿಕೆಟ್‌ಗಳು ಮಾರಾಟವಾಗಿವೆ. ಇದನ್ನೂ ಓದಿ: ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ – ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು

    ಅದರಲ್ಲಿ ಆನ್‌ಲೈನ್‌ನಲ್ಲಿ 4,499 ಹಾಗೂ ನೇರ ಖರೀದಿಯಲ್ಲಿ 23,260 ಟಿಕೆಟ್‌ಗಳು ಮಾರಾಟವಾಗಿವೆ. ಅದೇ ರೀತಿ 1000 ರೂ. ವಿಶೇಷ ದರ್ಶನದಲ್ಲಿ ಒಟ್ಟು 12,396 ಮಾರಾಟವಾಗಿವೆ. ಇದರಲ್ಲಿ ಆನ್‌ಲೈನ್ ಬುಕಿಂಗ್‌ಗಳು 3,912 ಹಾಗೂ ನೇರ ಖರೀದಿಗಳು 8,484 ಆಗಿವೆ. ಇದೇ ವೇಳೆ, ಲಾಡು ಪ್ರಸಾದ ಮಾರಾಟದ ಸಂಖ್ಯೆ 17,337 ಆಗಿದ್ದು, ಮೂರು ದಿನಗಳಲ್ಲಿ ಭಾರಿ ಆದಾಯ ಲಭಿಸಿದೆ.

    300 ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ ಒಟ್ಟು 83,27,700 ರೂ. ಹಾಗೂ 1000 ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ 1,23,96,000 ರೂ. ಹಾಗೂ ಲಾಡು ಪ್ರಸಾದ ಮಾರಾಟದಿಂದ 17,33,700 ರೂ. ಸೇರಿ ಒಟ್ಟು 2 ಕೋಟಿ 24 ಲಕ್ಷ 57 ಸಾವಿರ 400 ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ – ಒಂದೇ ದಿನಕ್ಕೆ 1 ಕೋಟಿ ಆದಾಯ

  • ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ಓಪನ್

    ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ಓಪನ್

    ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸುತ್ತಿರುವ ಹಾಸನದ ಅಧಿದೇವತೆ ಹಾಸನಾಂಬೆ (Hasanamba Temple) ದೇವಿಯ ಗರ್ಭಗುಡಿ ಬಾಗಿಲು ಓಪನ್ ಆಗಿದೆ.

    ಆಶ್ವೀಜ ಮಾಸದ ಮೊದಲ ಗುರುವಾರ (ಇಂದು) ಮಧ್ಯಾಹ್ನ 12.24ಕ್ಕೆ ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ಈ ಬಾರಿಯ ಜಾತ್ರಾ ಮಹೋತ್ಸವ ಇಂದಿನಿಂದ ನವೆಂಬರ್‌ 15 ರವರೆಗೆ ನಡೆಯಲಿದೆ.

    ಗರ್ಭಗುಡಿಯ ಬಾಗಿಲು ತೆರೆದ ಇಂದು ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. 15 ದಿನಗಳಲ್ಲಿ 13 ದಿನಗಳು ಮಾತ್ರ 24*7 ಭಕ್ತರಿಗೆ ತಾಯಿ ಹಾಸನಾಂಬೆ ದರ್ಶನ ಕರುಣಿಸಲಿದ್ದಾಳೆ. ಈ ಬಾರಿ ಜಾತ್ರಾ ಮಹೋತ್ಸವ ವಿಶೇಷತೆಯಿಂದ ಕೂಡಿದ್ದು ಹೆಲಿಟೂರಿಸಂ, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್‍ನಲ್ಲಿ ಹಾರಾಟ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

    ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ದೇವಿ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಪ್ರತಿವರ್ಷ ಗರ್ಭಗುಡಿ ಬಾಗಿಲು ಹಾಕುವ ಸಂದರ್ಭದಲ್ಲಿ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಜೊತೆಗೆ ಅಧಿದೇವತೆ ಬೇಡಿಕೊಂಡು ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ಅಚಲ ವಿಶ್ವಾಸ ಇರುವುದರಿಂದ ಜಿಲ್ಲೆ, ರಾಜ್ಯ ಮಾತ್ರವಲ್ಲದೆ ಅನೇಕ ಕಡೆಗಳಿಂದ ಲಕ್ಷಾಂತರ ಭಕ್ತರಿದ್ದಾರೆ.

    ಈ ಬಾರಿ ಒಟ್ಟು ಹದಿನೈದು ದಿನಗಳಲ್ಲಿ 13 ದಿನ ಮಾತ್ರ ಸಾರ್ವಜನಿಕ ದರ್ಶನ ಹಾಗೂ ಶಕ್ತಿ ಯೋಜನೆ ಜಾರಿ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಮಳೆ ಬಂದರೆ ಭಕ್ತರು ನೆನೆಯದಂತೆ ಜರ್ಮನ್ ಟೆಂಟ್, ಫ್ಯಾನ್, ಎಸಿ ಸೇರಿ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಈ ಬಾರಿ ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಮೂರು ಹೊತ್ತು ಕೂಡ ಪ್ರಸಾದ ವಿತರಣೆ ವ್ಯವಸ್ಥೆ ಕಲ್ಪಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸಲಿರುವ ಹಾಸನದ ಅಧಿದೇವತೆ ಹಾಸನಾಂಬೆಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಜಾತ್ರಾ ಮಹೋತ್ಸವ ಇಂದಿನಿಂದ ನ.15 ರವರೆಗೆ ನಡೆಯಲಿದೆ. ಆಶ್ವೀಜ ಮಾಸದ ಮೊದಲ ಗುರುವಾರ (ಇಂದು) ಮಧ್ಯಾಹ್ನ 12.30 ರ ನಂತರ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದೆ. ಗರ್ಭಗುಡಿಯ ಬಾಗಿಲು ತೆರೆದ ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಹದಿನೈದು ದಿನಗಳಲ್ಲಿ ಹದಿಮೂರು ದಿನಗಳು ಮಾತ್ರ 24*7 ಭಕ್ತರಿಗೆ ತಾಯಿ ಹಾಸನಾಂಬೆ ದರ್ಶನ ಕರುಣಿಸಲಿದ್ದಾಳೆ. ಈ ಬಾರಿ ಜಾತ್ರಾ ಮಹೋತ್ಸವ ವಿಶೇಷತೆಯಿಂದ ಕೂಡಿದ್ದು ಹೆಲಿಟೂರಿಸಂ, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್ ನಲ್ಲಿ ಹಾರಾಟ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

    ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ದೇವಿ (Hasanamba) ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಪ್ರತಿವರ್ಷ ಗರ್ಭಗುಡಿ ಬಾಗಿಲು ಹಾಕುವ ಸಂದರ್ಭದಲ್ಲಿ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಜೊತೆಗೆ ಅಧಿದೇವತೆ ಬೇಡಿಕೊಂಡು ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ಅಚಲ ವಿಶ್ವಾಸ ಇರುವುದರಿಂದ ಜಿಲ್ಲೆ, ರಾಜ್ಯ ಮಾತ್ರವಲ್ಲದೆ ಅನೇಕ ಕಡೆಗಳಿಂದ ಲಕ್ಷಾಂತರ ಭಕ್ತರಿದ್ದಾರೆ. ವರ್ಷಕ್ಕೊಮ್ಮೆಯಷ್ಟೇ ಬಾಗಿಲು ತೆರೆಯುವ ಮೂಲಕ ರಾಜ್ಯದಲ್ಲೇ ವಿಶೇಷ ದೇವಾಲಯ ಎನಿಸಿರುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಒಂದು ದಿನ ಮಾತ್ರ ಬಾಕಿಯಿದೆ.

    ಈ ಸಲದ ಉತ್ಸವಕ್ಕೆ ಇಂದು ಚಾಲನೆ ದೊರೆಯಲಿದ್ದು, ಆಶ್ವೀಜ ಮಾಸದ ಮೊದಲ ಗುರುವಾರ, ದೇವಾಲಯದ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದೆ. ಮೈಸೂರು ಅರಸು ವಂಶಸ್ಥರು ಗೊನೆ ಇರುವ ಬಾಳೆಕಂಬ ಕಡಿದ ಬಳಿಕ ಕಳೆದ ಒಂದು ವರ್ಷದಿಂದ ಮುಚ್ಚಿದ್ದ ದೇವಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸ್ಥಳೀಯ ಶಾಸಕ ಎಚ್.ಪಿ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವು ಗಣ್ಯರು ಗರ್ಭಗುಡಿ ಬಾಗಿಲು ತೆರೆಯುವ ವೇಳೆ ಹಾಜರಿರಲಿದ್ದಾರೆ. ಬಲಿಪಾಡ್ಯಮಿ ಮಾರನೇ ದಿನ ಶಾಸ್ತ್ರೋಕ್ತವಾಗಿ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

    ಈ ಸಲ 24*7 ಮಾದರಿಯಲ್ಲಿ ದೇವಿ ದರ್ಶನಕ್ಕೆ ಭಕ್ತರಿಗೆ ವ್ಯವಸ್ಥೆ ಮಾಡಲಾಗಿದೆ. ನೇರ ದರ್ಶನ ಹಾಗೂ ಶೀಘ್ರ ದರ್ಶನಕ್ಕೆ ಸಾವಿರ, ಮುನ್ನೂರು ರೂಪಾಯಿ ಟಿಕೆಟ್ ವ್ಯವಸ್ಥೆ ಮುಂದುವರಿಸಲಾಗಿದೆ. ಈಗಾಗಲೇ ಇಡಿ ಹಾಸನ ನಗರ ದೀಪಾಲಂಕಾರದಿಂದ ಸಿಂಗಾರಗೊಂಡಿದೆ. ದೇವಾಲಯದ ಮುಂಭಾಗ ಹಾಗೂ ಇಡೀ ದೇವಾಲಯವನ್ನು ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಆಗಸದಿಂದ ಹಾಸನ ಚಾಪರ್‍ನಲ್ಲಿ ಒಂದು ಸುತ್ತು ಹಾಸನವನ್ನು ವೀಕ್ಷಿಸುವ ವ್ಯವಸ್ಥೆ ಕಲ್ಪಿಸಿದ್ದು ಏಳು ನಿಮಿಷಕ್ಕೆ ಒಬ್ಬರಿಗೆ 4300 ರೂ. ಹಣ ನಿಗದಿ ಮಾಡಲಾಗಿದೆ. ಅಲ್ಲದೇ ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ನಾಲ್ಕು ಟೂರ್ ಪ್ಯಾಕೇಜ್, ಸ್ವಂತ ವಾಹನಗಳಲ್ಲಿ ತೆರಳುವವರಿಗೆ ಚಾರಣ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿವೆ. ದೇವಿ ದರ್ಶನದ ವೇಳೆ ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಬಂದೋಬಸ್ತ್ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಮೂರು ಪಾಳೆಯದಲ್ಲಿ 1200 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ನಿರ್ವಹಿಸಲಿದ್ದಾರೆ. ಈ ಬಾರಿ ಹೊಸದಾಗಿ ತುಲಾಭಾರ, ಸ್ಕಾನಿಂಗ್ ಮೂಲಕ ದೇವರಿಗೆ ಕಾಣಿಕೆ ಅರ್ಪಿಸುವುದು, ಹಾಲು ಉಣಿಸುವ ಕೇಂದ್ರ, ಸರತಿ ಸಾಲಿನಲ್ಲಿ ಬರುವವರಿಗೆ ಮನರಂಜನೆಗಾಗಿ ಟಿವಿಗಳ ಮೂಲಕ ಮಹಾಭಾರತ ಪ್ರಸಾರ, ಕುಡಿಯುವ ನೀರು, ಐವತ್ತು ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಹಾಸನದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

    ಈ ಬಾರಿ ಒಟ್ಟು ಹದಿನೈದು ದಿನಗಳಲ್ಲಿ ಹದಿಮೂರು ದಿನ ಮಾತ್ರ ಸಾರ್ವಜನಿಕ ದರ್ಶನ ಹಾಗೂ ಶಕ್ತಿ ಯೋಜನೆ ಜಾರಿ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಮಳೆ ಬಂದರೆ ಭಕ್ತರು ನೆನೆಯದಂತೆ ಜರ್ಮನ್ ಟೆಂಟ್, ಫ್ಯಾನ್, ಎಸಿ ಸೇರಿ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಈ ಭಾರಿ ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಮೂರು ಹೊತ್ತು ಪ್ರಸಾದ ವಿತರಣೆ ವ್ಯವಸ್ಥೆ ಕಲ್ಪಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸನಾಂಬ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ

    ಹಾಸನಾಂಬ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ

    ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇಂದು (ಗುರುವಾರ) ವಿದ್ಯುಕ್ತ ಚಾಲನೆ ದೊರೆಯಿತು. ಜಯಘೋಷದ ನಡುವೆ ಹಾಸನಾಂಬ ದೇವಿಯು ವಿಶ್ವರೂಪ ದರ್ಶನ ಕರುಣಿಸಿದರು.

    ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕೋವಿಡ್‌ ಲಸಿಕೆ ಎರಡು ಡೋಸ್ ಪಡೆದ ಭಕ್ತರಿಗೆ ಮಾತ್ರ ಷರತ್ತುಬದ್ಧ ಅನುಮತಿ ನೀಡಿರುವ ಜಿಲ್ಲಾಡಳಿತ ಹಾಸನಾಂಬ ದೇವಿ ದರ್ಶನಕ್ಕೆ ಇಂದಿನಿಂದ ಅವಕಾಶ ಕಲ್ಪಿಸಿದೆ. ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ‌‌ ಮೂಲಕ ಮಧ್ಯಾಹ್ನ 12:16ಕ್ಕೆ ದೇಗುಲದ ಬಾಗಿಲು ತೆರೆಯಲಾಯಿತು.

    HASANAMBA JATHRE

    ಅಕ್ಟೋಬರ್ 26 ರಿಂದ ನ.6 ರವರೆಗೆ  ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ ಬಾರಿ 9 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಲಂಗು ಲಗಾಮು ಇಲ್ಲದೆ ಮಾತನಾಡಿ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮೆ: ರಂಭಾಪುರಿ ಶ್ರೀ

    ಇಂದು ಮಧ್ಯಾಹ್ನ 12:16ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತಸಾಗರ ಹರಿದು ಬರಲಿದೆ.

    ಅರ್ಚಕರು ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ‌ ಪ್ರೀತಂ ಗೌಡ , ಜಿಲ್ಲಾಧಿಕಾರಿ ಆರ್.ಗಿರೀಶ್, ಹಾಸನಾಂಬ ದೇವಸ್ಥಾನ ಆಡಳಿತಾಧಿಕಾರಿ ಬಿ.ಎ.ಜಗದೀಶ್ ,ಎಸ್‌ಪಿ ಆರ್.ಶ್ರೀನಿವಾಸಗೌಡ , ಡಿವೈಎಸ್‌ಪಿ ಪುಟ್ಟಸ್ವಾಮಿ ಗೌಡ, ಎಎಸ್‌ಪಿ ನಂದಿನಿ, ಜಿಪಂ ಸಿಇಒ ಬಿ.ಎ ಪರಮೇಶ್ ಸೇರಿದಂತೆ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲದ ಗರ್ಭಗುಡಿ ಬಾಗಿಲ ಬೀಗ ಮುದ್ರೆ ತೆರೆಯಲಾಯಿತು. ಇದನ್ನೂ ಓದಿ: ‘ಪುಷ್ಪ’ ಸಾಂಗ್ ನಲ್ಲಿ ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ ರಶ್ಮಿಕಾ

    ಬೆಳಿಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಪ್ರದಾಯದಂತೆ ತಳವಾರ ವಂಶದ ನರಸಿಂಹರಾಜ್ ಅರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅನುವು ಮಾಡಿಕೊಟ್ಟರು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪ ಗಳಿಂದ ಅಲಂಕರಿಸಲಾಗಿತ್ತು. ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಉಳಿದ ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

    HASANAMBA

    ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕಾಗಿ 300 ಹಾಗೂ 1,000 ರೂ. ಗಳ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ.

    ಜಿಲ್ಲಾಡಳಿತ ಭಕ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯದ ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ದೇವಾಲಯದ ಒಳಗೆ ಹಾಗೂ ಸುತ್ತಮುತ್ತ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ದೇವಿಯ ಸುಗಮ ದರ್ಶನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ಕೊರೊನಾ ಕಾರಣ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡ ಪ್ರಮಾಣಪತ್ರ ಅಥವಾ ಮೆಸೇಜ್‌ನೊಂದಿಗೆ ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ ತೋರಿಸಬೇಕು.

    ವರ್ಷಪೂರ್ತಿ ಬೆಳಗುತ್ತಂತೆ ದೀಪ?

    ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟ ದೀಪ ವರ್ಷ ಪೂರ್ತಿ ಬೆಳಗುತ್ತದೆ. ಮುಂದಿನ ವರ್ಷ ಬಾಗಿಲು ತೆರೆದಾಗ ದೀಪ ಬೆಳಗುತ್ತಲೇ ಇರುತ್ತದೆ. ದೇವರಿಗೆ ಇಟ್ಟ ನೈವೇದ್ಯ ಒಂದು ವರ್ಷದ ನಂತರವೂ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇವಿಯ ಪವಾಡ ನೋಡಲು ಪ್ರತಿವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸುತ್ತಾರೆ.