Tag: ಹಾಸ್ಟೆಲ್ ವಾರ್ಡನ್

  • ಕೊಪ್ಪಳದ ಲಾಡ್ಜ್‌ನಲ್ಲಿ ನೇಣು ಬಿಗಿದು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ

    ಕೊಪ್ಪಳದ ಲಾಡ್ಜ್‌ನಲ್ಲಿ ನೇಣು ಬಿಗಿದು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ

    ಕೊಪ್ಪಳ: ಜಿಲ್ಲೆಯ ಲಾಡ್ಜ್‌ವೊಂದರಲ್ಲಿ ಹಾಸ್ಟೆಲ್ ವಾರ್ಡನ್ (Hostel Warden) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೃತರನ್ನು ಗದಗ ಜಿಲ್ಲೆಯ ನಿವಾಸಿಯಾಗಿರುವ ಹಾಮೇಶ್ ಲಮಾಣಿ (39) ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಇದನ್ನೂ ಓದಿ: ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಭಾನುವಾರ (ಅ.20) ಕೊಪ್ಪಳದ ಲಾಡ್ಜ್ವೊಂದಕ್ಕೆ ಹಾಮೇಶ್ ಬಂದಿದ್ದರು. ಈ ವೇಳೆ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರಗೆ ರವಾನಿಸಲಾಗಿದೆ.ಇದನ್ನೂ ಓದಿ: ಶಿವಮೊಗ್ಗ | ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ

  • ಹಾಸನ|  ಮಾದಕ ವಸ್ತು ಸೇವನೆ ಪ್ರಕರಣ: ಹಾಸ್ಟೆಲ್‌ ವಾರ್ಡನ್ ಅಮಾನತು

    ಹಾಸನ| ಮಾದಕ ವಸ್ತು ಸೇವನೆ ಪ್ರಕರಣ: ಹಾಸ್ಟೆಲ್‌ ವಾರ್ಡನ್ ಅಮಾನತು

    ಹಾಸನ: ಹಾಸ್ಟೆಲೊಂದರಲ್ಲಿ (Hostel) ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿರುವ ಪ್ರಕರಣದ ಹಿನ್ನೆಲೆ ಹಾಸ್ಟೆಲ್ ವಾರ್ಡನ್ (Hostel Warden) ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಲಾಗಿದೆ.ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಶತಕದ ಗಡಿ ದಾಟಿದ ಸರಾಸರಿ ಮಳೆ – ಕಳೆದ ಬಾರಿ ಎಷ್ಟಿತ್ತು? ಈ ಬಾರಿ ಎಷ್ಟಾಗಿದೆ?

    ಹಾಸ್ಟೆಲೊಂದರಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿರುವ ಪ್ರಕರಣವೊಂದು ಇತ್ತೀಚಿಗೆ ಕೇಳಿ ಬಂದಿತ್ತು. ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಮಾನತು ಮಾಡುವಂತೆ ಶಿಫಾರಸ್ಸು ಮಾಡಿ ವರದಿ ನೀಡಿದ್ದರು.

    ವರದಿ ಆಧರಿಸಿ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ವಾರ್ಡನ್ ಚಂದ್ರಶೇಖರ್ ಅವರನ್ನು ಅಮಾನತು ಮಾಡುವಂತೆ ಜಿ.ಪಂಚಾಯತ್ ಸಿಇಓ ಪೂರ್ಣಿಮಾ (CEO Poornima) ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಾರ್ಡನ್ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.ಇದನ್ನೂ ಓದಿ: ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ ಕೆಲಸ ಮಾಡಲ್ಲ: ಅಭಿಮಾನಿಗಳ ಬಗ್ಗೆ ಕಿಚ್ಚನ ಅಕ್ಕರೆಯ ಮಾತು

  • ವೀಡಿಯೋ ಚಿತ್ರೀಕರಣ ತಡೆದಿದ್ದಕ್ಕೆ ಹಾಸ್ಟೆಲ್ ವಾರ್ಡನ್ ಮೇಲೆ ಹಲ್ಲೆ: ಆರೋಪಿ ಯುವಕನ ಬಂಧನ

    ವೀಡಿಯೋ ಚಿತ್ರೀಕರಣ ತಡೆದಿದ್ದಕ್ಕೆ ಹಾಸ್ಟೆಲ್ ವಾರ್ಡನ್ ಮೇಲೆ ಹಲ್ಲೆ: ಆರೋಪಿ ಯುವಕನ ಬಂಧನ

    ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಈಚನಾಳದಲ್ಲಿ ಹಾಸ್ಟೆಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ.‌

    ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಪರಿಶೀಲನೆಗೆ ಅಧಿಕಾರಿಗಳ ಜೊತೆ ಬಂದಿದ್ದ ಕರಡಕಲ್ ಬಾಲಕರ ವಸತಿನಿಲಯದ ಕಿರಿಯ ವಾರ್ಡನ್ ಶರಣಪ್ಪ ಜೊತೆ ಖ್ಯಾತೆ ತೆಗೆದು ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಹಲ್ಲೆ ಮಾಡಿದ್ದ. ವೀಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ಹಲ್ಲೆ ಮಾಡಿದ್ದ ಯುವಕ, ವಾರ್ಡನ್‌ನ ಗಾಯಗೊಳಿಸಿದ್ದ. ಘಟನೆ ಹಿನ್ನೆಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳ ‘ಶಿವಶಕ್ತಿ’: ಹೆಸರಿಟ್ಟ ಮೋದಿ

    ಎರಡು ದಿನ ಬಳಿಕ ಆರೋಪಿಯನ್ನ ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪಿಯನ್ನ ಕೂಡಲೇ ಬಂಧಿಸುವಂತೆ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ, ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತ್ತು. ಆರೋಪಿ ಮಲ್ಲರೆಡ್ಡಪ್ಪ ಸಹ ಲಿಂಗಸುಗೂರು ಠಾಣೆಯಲ್ಲಿ ಕಿರಿಯ ವಾರ್ಡನ್ ಶರಣಪ್ಪ ವಿರುದ್ಧ ಪ್ರತಿದೂರು ದಾಖಲಿಸಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮನೆಗೆ ವಿದ್ಯಾರ್ಥಿನಿಯರನ್ನು ಕರೆದ ವಾರ್ಡನ್ – ಪತಿ, ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ

    ಮನೆಗೆ ವಿದ್ಯಾರ್ಥಿನಿಯರನ್ನು ಕರೆದ ವಾರ್ಡನ್ – ಪತಿ, ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ

    ಜೈಪುರ: ಸರ್ಕಾರಿ ಹಾಸ್ಟೆಲ್‍ನ ಇಬ್ಬರು ವಿದ್ಯಾರ್ಥಿನಿಯರಿಗೆ ವಾರ್ಡನ್, ಆಕೆಯ ಪತಿ ಮತ್ತು ಆತನ ಸ್ನೇಹಿತರು ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

    ಹಾಸ್ಟೆಲ್ ವಾರ್ಡನ್ ಹಾಸ್ಟೆಲ್‍ನಲ್ಲಿದ್ದ 12ನೇ ತರಗತಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಅಲ್ಲಿ ಆಕೆಯ ಪತಿ ಮತ್ತು ಆತನ ಸ್ನೇಹಿತರು ಸೇರಿಕೊಂಡು ಕೆಲವು ದಿನಗಳವರೆಗೂ ಹುಡುಗಿಯರ ಮೇಲೆ ಅತ್ಯಾಚಾರ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಎಸ್‍ಪಿ ಮಹೇಶ್ ತ್ರಿಪಾಠಿ ಹೇಳಿದ್ದಾರೆ.

    ಮಿಗ್ ಕಮಾಂಡರ್ ಅಭಿನಂದನ್ ಅವರು ಪಾಕಿಸ್ತಾನದಿಂದ ಭಾರತಕ್ಕೆ ವಾಪಸ್ ಬಂದಿದ್ದರಿಂದ ಮಕ್ಕಳಿಗೆ ಸಿಹಿ ಹಂಚಲು ಶಾಲೆಯ ಪ್ರಿನ್ಸಿಪಾಲ್ ಸುಖಿ ರಾಮ್ ಹೋಗಿದ್ದರು. ಈ ವೇಳೆ ತಮಗೆ ಹಾಸ್ಟೆಲ್ ವಾರ್ಡನ್, ಪತಿ ಮತ್ತು ಇತರರು ಕೆಲವು ದಿನಗಳವರೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪತ್ರ ಬರೆದು ಕೊಟ್ಟಿದ್ದಾರೆ. ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.

    ಪ್ರಿನ್ಸಿಪಾಲ್ ಸಹಾಯದಿಂದ ಹುಡುಗಿಯರು ಶನಿವಾರ ಕಿಶನ್‍ಗಢ ಬಾಸ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಪತಿ ನೀಲ್ ಕಮಲ್ ಮತ್ತು ಇನ್ನೊಬ್ಬನನ್ನು ರಮೇಶ್ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಪ್ರಕರಣ ಕುರಿತು ತನಿಖೆ ನಡೆಸಲು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪೊಲೀಸರು ಸಂತ್ರಸ್ತೆಯರ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ. ಇತ್ತ ಶಾಲಾ ಅಧಿಕಾರಿಗಳು ಹಾಸ್ಟೆಲ್ ವಾರ್ಡನ್ ಅನ್ನು ಅಮಾನತುಗೊಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಯಾನಿಟರಿ ಪ್ಯಾಡ್ ಗಾಗಿ 40 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಹಾಸ್ಟೆಲ್ ವಾರ್ಡನ್!

    ಸ್ಯಾನಿಟರಿ ಪ್ಯಾಡ್ ಗಾಗಿ 40 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಹಾಸ್ಟೆಲ್ ವಾರ್ಡನ್!

    ಭೋಪಾಲ್: ಹಾಸ್ಟೆಲ್ ಕಾರಿಡಾರ್ ನಲ್ಲಿ ಬಳಸಿ ಬಿಸಾಡಿದ ಸ್ಯಾನಿಟರಿ ನ್ಯಾಪ್ಕಿನ್ ಪತ್ತೆಯಾಗಿದ್ದಕ್ಕೆ ಮಹಿಳಾ ವಾರ್ಡನ್ ಹಾಸ್ಟೆಲ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

    ಸಾಗರ್ ನಲ್ಲಿರುವ ಡಾ.ಎಚ್.ಎಸ್.ಗೌರ್ ಸೆಂಟ್ರಲ್ ಯೂನಿವರ್ಸಿಟಿ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಉಪಕುಲಪತಿ ಪ್ರೊಫೆಸರ್ ಆರ್.ಪಿ ತಿವಾರಿ ಅವರಲ್ಲಿ ವಾರ್ಡನ್ ವಿರುದ್ಧ ದೂರು ನೀಡಿದ್ದಾರೆ. ಈಗ ವಿವಿ ಘಟನೆ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದೆ.

    ಭಾನುವಾರ ಹಾಸ್ಟೆಲ್ ನ ಕಾರಿಡಾರ್ ನ ವಾಶ್‍ರೂಮ್ ಬಳಿ ನ್ಯಾಪ್ಕಿನ್ ಸಿಕ್ಕಿದೆ. ಇದರಿಂದ ಅಲ್ಲಿ ಯಾರು ನ್ಯಾಪ್ಕಿನ್ ಎಸೆದವರು ಎಂದು ಪತ್ತೆ ಮಾಡಲು ಮಹಿಳಾ ವಾರ್ಡನ್ ಮುಂದಾಗಿದ್ದಾರೆ. ಆಗ ಯಾರಿಗೆ ಋತುಸ್ರಾವ ಆಗಿದೆ ಎಂದು ಪರಿಶೀಲಿಸಲು ವಿದ್ಯಾರ್ಥಿನಿಯರನ್ನು ಒಬ್ಬೊರಂತೆ ಕರೆದು ವಿವಸ್ತ್ರಗೊಳಿಸಿದ್ದಾರೆ.

    ಈ ಘಟನೆ ನಡೆದ ನಂತರ ಸುಮಾರು 40 ವಿದ್ಯಾರ್ಥಿನಿಯರು ಈ ಬಗ್ಗೆ ವಿಸಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವಾರ್ಡನ್ ಜೊತೆ ಮಾತನಾಡಿದ್ದೇವೆ. ಆದರೆ ವಾರ್ಡನ್ ಈ ಆರೋಪವನ್ನು ನಿರಾಕರಿಸುತ್ತಿದ್ದು, ತನಗೆ ಈ ಬಗ್ಗೆ ಮಾಹಿತಿಯೇ ತಿಳಿದಿಲ್ಲ ಅಂತಾ ಹೇಳಿದ್ದಾರೆ. ಇನ್ನು ಮೂರು ದಿನದೊಳಗೆ ಸಮಿತಿಯು ವಿಚಾರಣೆ ನಡೆಸಿ ವರದಿ ಸಲ್ಲಿಸುತ್ತದೆ. ನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪ್ರೊ. ತಿವಾರಿ ಹೇಳಿದ್ದಾರೆ.

    ಹಾಸ್ಟೆಲ್ ನ ಉಸ್ತುವಾರಿ ಸಂಧ್ಯಾ ಪಟೇಲ್, ಯಾವುದೇ ವಿದ್ಯಾರ್ಥಿಯನ್ನೂ ಪರಿಶೀಲನೆ ಮಾಡಿಲ್ಲ ಎಂದು ಹೇಳಿದ್ದಾರೆ. ಹಾಸ್ಟೆಲ್ ವಾರ್ಡನ್ ಚಂಡಾ ಬೈನ್ ಕೂಡ ನನಗೆ ಈ ಘಟನೆ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಆದರೆ ಪರಿಶೀಲನೆಯ ನಂತರ 40 ವಿದ್ಯಾರ್ಥಿನಿಯರು ದೂರು ನೀಡಲು ವಿಸಿ ಮನೆಗೆ ಹೋಗಿದ್ದರು.