Tag: ಹಿಂದುತ್ವ

  • ಗಾಂಧಿ ಕೊಂದ ವಿಚಾರ ಬಿಟ್ಟರೆ ಗೋಡ್ಸೆಯ ಹಿಂದುತ್ವದ ಆಲೋಚನೆಯನ್ನು ಸಂಭ್ರಮಿಸಬಹುದು: ಸೂಲಿಬೆಲೆ

    ಗಾಂಧಿ ಕೊಂದ ವಿಚಾರ ಬಿಟ್ಟರೆ ಗೋಡ್ಸೆಯ ಹಿಂದುತ್ವದ ಆಲೋಚನೆಯನ್ನು ಸಂಭ್ರಮಿಸಬಹುದು: ಸೂಲಿಬೆಲೆ

    ಹುಬ್ಬಳ್ಳಿ:ಗೋಡ್ಸೆಯ ಹಿಂದೂ ಧರ್ಮದ ಬಗೆಗಿನ ಆಲೋಚನೆಗಳನ್ನು ಸಂಭ್ರಮಿಸಬಹುದು ಎಂದು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarty Sulibele) ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು ಔರಂಗಜೇಬನ ಅಖಂಡ ಭಾರತ ಹಾಗೂ ಟಿಪ್ಪು ಸುಲ್ತಾನ್ ಖಡ್ಗ ಹಿಡಿದು ಸಂಭ್ರಮಿಸುವವರನ್ನು ಸರ್ಕಾರ ಓಲೈಸುವುದು ಅತ್ಯಂತ ನೀಚ ಕೃತ್ಯ. ಗೋಡ್ಸೆ ಗಾಂಧಿ ಕೊಂದ ವಿಚಾರ ಬಿಟ್ಟರೆ ಎಲ್ಲಾ ವಿಚಾರಗಳನ್ನು ಸಂಭ್ರಮಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ಯುಜಿಆಯುಷ್-2023: ಕೊನೆ ಸುತ್ತಿನ ಸೀಟು ಹಂಚಿಕೆ ಅ.13ಕ್ಕೆ ದಾಖಲೆ ಪರಿಶೀಲನೆ

    ಪ್ಯಾಲೆಸ್ಟೈನ್ ಮಾಡಿದ ಹೇಯ ಕೃತ್ಯ ಜಗತ್ತಿಗೆ ತಿಳಿದಿದೆ. ಇದು ಮನುಷ್ಯರು ಮಾಡುವ ಕೃತ್ಯ ಅಲ್ಲ, ರಾಕ್ಷಸರು ಮಾಡುವ ಕೃತ್ಯವಾಗಿದೆ. ಇದಕ್ಕೆ ಕಾಂಗ್ರೆಸ್ (Congress) ಬೆಂಬಲ ನೀಡುತ್ತಿದೆ. ಇದು ಭಾರತದ ಇತಿಹಾಸದ ಪಾಲಿಗೆ ಕಪ್ಪು ಚುಕ್ಕಿಯಾಗಿದೆ. ಗಲಭೆಕೋರರು ಕಾಂಗ್ರೆಸ್ ಬ್ರದರ್ಸ್ ಎನ್ನುವುದು ಅವರ ನೀತಿ. ಅದು ಮಹಿಷ ಆಗಿರಲಿ ಇಲ್ಲವೇ ಹಮಾಸ್ ಉಗ್ರರಾಗಿರಲಿ ಅವರ ಪರ ನಿಲ್ಲುತ್ತದೆ. ಕಾಂಗ್ರೆಸ್‍ಗೆ ಅವಕಾಶ ಸಿಕ್ಕರೆ ಹಮಾಸ್ ಪರವಾಗಿ ಜಯಂತಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಪುನೀತ್ ಕೆರಹಳ್ಳಿ ಮೇಲೆ ಆತ್ಮಹತ್ಯೆ ಯತ್ನ ಕೇಸ್ ದಾಖಲು ವಿಚಾರವಾಗಿ, ಯಾವ ಕಾಂಗ್ರೆಸ್ ಗಾಂಧಿ ಪರಿವಾರದಿಂದ ಆಡಳಿತ ನಡೆಸುತ್ತಿದೆಯೋ ಅದೇ ಕಾಂಗ್ರೆಸ್ ಇಂದು ಕೇಸ್ ಹಾಕಿದೆ. ಬ್ರಿಟಿಷರ ವಿರುದ್ಧ ಎಷ್ಟು ಬಾರಿ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಅಷ್ಟು ಬಾರಿ ಕೇಸ್ ಹಾಕಬೇಕಿತ್ತು ಎಂದು ಅವರು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ: ಬಿ.ಸಿ.ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ಹಿಂದುತ್ವ ಹೇರಿಕೆಯಾಗಿದೆ : ಲೇಖಕ ಮುರುಗವೇಲು ಆರೋಪ

    ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ಹಿಂದುತ್ವ ಹೇರಿಕೆಯಾಗಿದೆ : ಲೇಖಕ ಮುರುಗವೇಲು ಆರೋಪ

    ಣಿರತ್ನಂ (Mani Ratnam) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan) ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು, ತುಂಬಿದ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ಚಿತ್ರಕ್ಕೆ ಅತ್ಯದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಮಣಿರತ್ನಂ ಅವರ ಅತ್ಯುತ್ತಮ ಸಿನಿಮಾಗಳಲ್ಲಿ ಇದು ಒಂದು ಎಂದು ಬಣ್ಣಿಸಲಾಗುತ್ತಿದೆ. ಆದರೆ, ತಮಿಳಿನ ಖ್ಯಾತ ಲೇಖಕ ಮುರುಗವೇಲು (Murugavelu) ನಿರ್ದೇಶಕ ಮಣಿರತ್ನಂ ವಿರುದ್ಧ ಕಿಡಿಕಾರಿದ್ದಾರೆ.

    ಪೊನ್ನಿಯಿನ್ ಸೆಲ್ವನ್ ಸುಳ್ಳು ಕಥೆಯನ್ನು ಹೇಳುವ ಸಿನಿಮಾ. ಇತಿಹಾಸವನ್ನು ತಿರುಚಲಾಗಿದೆ. ಅಲ್ಲದೇ ಮಣಿರತ್ನಂ ಈ ಸಿನಿಮಾದಲ್ಲಿ ಹಿಂದುತ್ವವನ್ನು (Hindutva) ಹೇರಿಕೆ ಮಾಡಿದ್ದಾರೆ. ಪೊನ್ನಿಯಿನ್ ಸೆಲ್ವನ್ ಕಾದಂಬರಿಯಲ್ಲಿ ಕಲ್ಕಿ ಬರೆದಿದ್ದೇ ಬೇರೆ, ಸಿನಿಮಾದಲ್ಲಿ ತೋರಿಸಿದ್ದೇ ಬೇರೆ. ಮಂದಾಕಿನಿ ಸ್ವಾತಂತ್ರ್ಯವನ್ನು ನಿರ್ದೇಶಕರಿಗೆ ಸಹಿಸಿಕೊಳ್ಳಲು ಆಗಿಲ್ಲ. ಮಹಿಳೆಯರು ಬೇರೆ ಪುರುಷನ ಬಗ್ಗೆ ಯೋಚಿಸಬಾರದು ಎನ್ನುವ ಕೆಟ್ಟ ಸಂದೇಶವನ್ನು ಸಾರಿದ್ದಾರೆ ಎಂದಿದ್ದಾರೆ ಲೇಖಕ ಮುರುಗವೇಲು.

    ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾಬಳಗವಿರುವ ಸಿನಿಮಾ ‘ಪೊನ್ನಿಯಿನ್ ಸೆಲ್ವನ್ -2’. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಇದನ್ನೂ ಓದಿ:ಹೊಸ ಪ್ರಾಜೆಕ್ಟ್‌ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಸಮಂತಾ- ಅನುಷ್ಕಾ ಶರ್ಮಾ

    ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿತ್ತು. ನಿರೀಕ್ಷೆಯನ್ನು ನಿರ್ದೇಶಕರು ತುಂಬಿಕೊಟ್ಟಿದ್ದಾರೆ.

  • ಪುತ್ತಿಲ ಕಾಂಗ್ರೆಸ್, ಭಯೋತ್ಪಾದನೆ, ಲವ್ ಜಿಹಾದ್ ವಿರುದ್ಧ ಮಾತನಾಡಿಲ್ಲ: ಕಲ್ಲಡ್ಕ ಪ್ರಭಾಕರ ಭಟ್‌

    ಪುತ್ತಿಲ ಕಾಂಗ್ರೆಸ್, ಭಯೋತ್ಪಾದನೆ, ಲವ್ ಜಿಹಾದ್ ವಿರುದ್ಧ ಮಾತನಾಡಿಲ್ಲ: ಕಲ್ಲಡ್ಕ ಪ್ರಭಾಕರ ಭಟ್‌

    ಮಂಗಳೂರು: ಅರುಣ್ ಕುಮಾರ್ ಪುತ್ತಿಲ (Arun Kumar Puthila) ಕಾಂಗ್ರೆಸ್ (Congress) ವಿರುದ್ಧ, ಭಯೋತ್ಪಾದನೆ ಹಾಗೂ ಲವ್ ಜಿಹಾದ್ ವಿರುದ್ಧ ಮಾತನಾಡಿಲ್ಲ. ಆದರೆ ಹಿಂದುತ್ವಕ್ಕೋಸ್ಕರ ಕೆಲಸ ಮಾಡುವ ಬಿಜೆಪಿ ವಿರುದ್ಧ ಮಾತನಾಡುವುದು ಎಂತಹ ಹಿಂದುತ್ವ (Hindutva) ಎಂದು ಆರ್‌ಎಸ್‌ಎಸ್ (RSS) ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಪುತ್ತೂರು ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪುತ್ತೂರಿನಲ್ಲಿ (Puttur) ಅರುಣ್ ಕುಮಾರ್ ಪುತ್ತಿಲ ಹಿಂದುತ್ವದ ರಕ್ಷಣೆ ಮಾಡುವುದಾಗಿ ಪಕ್ಷೇತರರಾಗಿ ಅಖಾಡಕ್ಕಿಳಿದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗಿಂತ (BJP) ದೊಡ್ಡ ಹಿಂದುತ್ವ ಯಾವುದು? ಬಿಜೆಪಿಯ ಗೆಲುವೇ ಹಿಂದುತ್ವದ ಗೆಲುವು. ಬಿಜೆಪಿಯ ಗೆಲುವಿಗಾಗಿ ಆರ್‌ಎಸ್‌ಎಸ್ ಕಾರ್ಯಕರ್ತರು ಎಲ್ಲಾ ಕಡೆಯಿಂದ ಬಂದಿದ್ದಾರೆ. ಹಾಗಾಗಿ ನಾವು ಶೇ.100ರಷ್ಟು ಬಿಜೆಪಿಗೋಸ್ಕರ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮೋದಿ ನಾಗರಹಾವು ಆದ್ರೆ ಸೋನಿಯಾ ಗಾಂಧಿ ವಿಷಕನ್ಯೆನಾ – ಯತ್ನಾಳ್ ಪ್ರಶ್ನೆ

    2008ರಲ್ಲಿ ಶಕುಂತಲಾ ಶೆಟ್ಟಿ (Shakunthala Shetty) ಸಹ ಇದೇ ರೀತಿ ನಿಂತಿದ್ದರು. ಪುತ್ತೂರಿನಲ್ಲಿ ಬಿಜೆಪಿ ಬೆಳೆಸಿದ ರಾಮ್ ಭಟ್ ಜೊತೆಗಿದ್ದರು. ಆಗಲೂ ಏನೂ ಆಗಿಲ್ಲ. ಈಗಿನದ್ದು ಭ್ರಮೆ. ಇಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ನಾನು ಬಿಜೆಪಿ ಸದಸ್ಯ ಅಲ್ಲ. ಆದರೆ ಎಲ್ಲರಿಗೂ ಜವಾಬ್ದಾರಿಯಿದೆ. ಚುನಾವಣೆ (Election) ಹೊತ್ತಲ್ಲಿ ರಾಷ್ಟ್ರದ ಹಿತಕ್ಕಾಗಿ ಕೆಲಸ ಮಾಡುತ್ತೇವೆ. ನಾವು ನಿಷ್ಕ್ರಿಯರಾದರೆ ಭಯೋತ್ಪಾದಕರು ಬೆಳೆದುಬಿಡುತ್ತಾರೆ. ಪುತ್ತಿಲ ಅಫಿಡವಿಟ್‌ನಲ್ಲಿ ದೇವಸ್ಥಾನದ ಹಣದ ಅವ್ಯವಹಾರ ಕೇಸ್ ಇದೆ. ಒಬ್ಬರಿಗೆ ಹೊಡೆದ ಕೇಸ್ ಹಾಗೂ ಒಬ್ಬ ಹೆಣ್ಣು ಮಗಳಿಗೆ ಅಪಘಾತ ಮಾಡಿ ಮಾನವೀಯತೆ ಇಲ್ಲದೆ ಓಡಿಹೋದ ಕೇಸ್ ಇವರ ಮೇಲಿದೆ. ಇವರ ಮೇಲೆ 307ರಂತಹ ಸೆಕ್ಷನ್ ಇದೆ. ಇವರದ್ದು ಹಿಂದುತ್ವನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮೋದಿ ರೋಡ್ ಶೋಗೆ ಸಿದ್ಧವಾಗಿದೆ ಸ್ಪೆಷಲ್‌ ಬುಲೆಟ್ ಪ್ರೂಫ್ ವಾಹನ

  • ವೀಸಾ ರದ್ದು: ಬೆಂಬಲಕ್ಕೆ ನಿಂತ ಕಿಶೋರ್ ಗೆ ಥ್ಯಾಂಕ್ಸ್ ಹೇಳಿದ ಚೇತನ್

    ವೀಸಾ ರದ್ದು: ಬೆಂಬಲಕ್ಕೆ ನಿಂತ ಕಿಶೋರ್ ಗೆ ಥ್ಯಾಂಕ್ಸ್ ಹೇಳಿದ ಚೇತನ್

    ಟ ಚೇತನ್ (Chetan Ahimsa)  ವೀಸಾ ರದ್ದು (Visa Cancellation) ಮಾಡಿರುವ ನಡೆಯನ್ನು ನಟ ಕಿಶೋರ್ (Kishore) ವಿಭಿನ್ನವಾಗಿ ಪ್ರಶ್ನಿಸಿದ್ದರು. ಇದು ಅತಿರೇಕದ ನಡೆ ಎಂದು ಅದನ್ನು ಬಣ್ಣಿಸಿದ್ದರು. ವೀಸಾ ರದ್ದು ಕುರಿತಂತೆ ಚೇತನ್ ಅವರಿಗೆ ಈವರೆಗೂ ಯಾರು ಬೆಂಬಲ ಸೂಚಿಸಿರಲಿಲ್ಲ. ಮೊದಲ ಬಾರಿಗೆ ಕಿಶೋರ್ ಈ ನಡೆಯನ್ನು ಪ್ರಶ್ನಿಸಿದ್ದರು. ಹೀಗಾಗಿ ಚೇತನ್ ಧನ್ಯವಾದಗಳನ್ನು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದನ್ನು ಸ್ಮರಿಸಿದ್ದಾರೆ.

    ಇನ್ಸ್ಟಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದಿರುವ ಕಿಶೋರ್, ‘ಹಿಂದುತ್ವ (Hindutva) ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ’ ಎಂದಿದ್ದಾರೆ. ಇದನ್ನೂ ಓದಿ: ಸಲಿಂಗ ವಿವಾಹ ವಿಚಾರದಲ್ಲಿ ಸುಪ್ರೀಂ ಮಧ್ಯಪ್ರವೇಶ ಮಾಡಬಾರದು – ಕೇಂದ್ರದ ಪರ ವಾದ

    ಮುಂದುವರೆದು, ‘ಹಿಂದುತ್ವ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ.ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ’ ಎಂದು ಪ್ರಶ್ನೆ ಮಾಡಿದ್ದಾರೆ.

    ‘ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು’ ಎಂದು ಬರೆದಿದ್ದಾರೆ ಕಿಶೋರ್.

  • ಚೇತನ್ ವೀಸಾ ರದ್ದು: ಸರ್ಕಾರದ ಅತಿರೇಕದ ನಡೆ ಎಂದ ನಟ ಕಿಶೋರ್

    ಚೇತನ್ ವೀಸಾ ರದ್ದು: ಸರ್ಕಾರದ ಅತಿರೇಕದ ನಡೆ ಎಂದ ನಟ ಕಿಶೋರ್

    ಸಾಮಾಜಿಕ ಹೋರಾಟಗಾರ, ನಟ ಚೇತನ್ (Chetan Ahimsa) ಅವರ ವೀಸಾ ರದ್ದು (visa cancellation) ಮಾಡಿರುವ ಸರಕಾರದ ನಡೆಯನ್ನು ವಿಭಿನ್ನವಾಗಿ ಪ್ರಶ್ನಿಸಿದ್ದಾರೆ ನಟ ಕಿಶೋರ್‌. ಇದುಸರಕಾರದ ಅತಿರೇಕದ ನಡೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಶೋರ್‌ (Kishor)  ಬರೆದುಕೊಂಡಿದ್ದಾರೆ. ಅಲ್ಲದೇ, ಹಿಂದುತ್ವವವನ್ನು ಗುತ್ತಿಗೆ ಪಡೆದವರ ವಿರುದ್ಧವೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇನ್ಸ್ಟಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದಿರುವ ಕಿಶೋರ್, ‘ಹಿಂದುತ್ವ (Hindutva) ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ’ ಎಂದಿದ್ದಾರೆ. ಇದನ್ನೂ ಓದಿ:ನಟಿ ಸಮಂತಾ ಭಗವದ್ಗೀತೆ ಪಾಠ ಮಾಡಿದ್ದು ಯಾರಿಗೆ?

    ಮುಂದುವರೆದು, “ಹಿಂದುತ್ವ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿದೆಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ” ಎಂದು ಪ್ರಶ್ನೆ ಮಾಡಿದ್ದಾರೆ.

    “ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು” ಎಂದು ಬರೆದಿದ್ದಾರೆ ಕಿಶೋರ್.

  • ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ – ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ: ಸಿದ್ದು ವಿರುದ್ಧ ಅನಂತ್ ಕುಮಾರ್ ಹೆಗಡೆ ಕಿಡಿ

    ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ – ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ: ಸಿದ್ದು ವಿರುದ್ಧ ಅನಂತ್ ಕುಮಾರ್ ಹೆಗಡೆ ಕಿಡಿ

    ಮಂಗಳೂರು: ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ (Hindu), ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ವಾಗ್ದಾಳಿ ನಡೆಸಿದ್ದಾರೆ.

    ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ. ನಿನಗೆ ಬೇಕೋ ಬೇಡ್ವೋ, ಯಾರಿಗ್ ಬೇಕು, ನಿನಗೆ ಬೇಡ ಅಂತ ನಾವು ಪರಿಗಣನೆ ಮಾಡಿ ಆಗಿದೆ.
    ಅವನು ಹಿಂದೂ ಅಲ್ಲ ಅಂತ ನಾವು ತೆಗೆದಿಟ್ಟಾಗಿದೆ. ಹಿಂದೂ ಅಂತ ಹೇಳಿಸಿಕೊಳ್ಳಲು ಕೆಲವು ಯೋಗ್ಯತೆಗಳಿವೆ. ಆಡಂಬರದ ಬದುಕು ಒಪ್ಪದಿರೋದು ಮತ್ತು ಸತ್ಯದ ಬದುಕು ಹಿಂದುತ್ವ. ಈ ಹಿಂದುತ್ವದ ಬಗ್ಗೆ ಇಂತಹ ಕಮಂಗಿಗಳಿಗೆ ಏನ್ರೀ ಅರ್ಥ ಆಗಬೇಕು ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಪ್ರತಿಯೊಬ್ಬ ಹಿಂದೂ ತನ್ನ ಮನೆಯಲ್ಲಿ ತಲ್ವಾರ್ ಇಡ್ಬೇಕು- ಮುತಾಲಿಕ್ ಪ್ರಚೋದನಕಾರಿ ಹೇಳಿಕೆ

    ಜಾತಿಯ ಗೂಡು ಬಿಟ್ಟು ಹೊರಗೆ ಬರಲು ಸಾಧ್ಯವಿಲ್ಲದವ್ರೆಲ್ಲ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ಪುಸ್ತಕ ಓದಲು ಯೋಗ್ಯತೆ ಇಲ್ಲದವ್ರೆಲ್ಲಾ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ದೇವಸ್ಥಾನಕ್ಕೆ ಹೋಗುವಾಗ ಹೇಗೆ ಹೋಗಬೇಕು ಅಂತ ಗೊತ್ತಿಲ್ಲದವರೆಲ್ಲಾ ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ಕುತ್ತಿಗೆಗೆ ಹಾಕುವ ಶಾಲಿನಲ್ಲಿ ಹಿಂದುತ್ವ ಕಾಣ ಬಾರದು. ಹಣೆಗೆ ಇಟ್ಟಿರೋ ತಿಲಕದಲ್ಲಿ ಹಿಂದುತ್ವ ಕಾಣಬಾರದು, ನಮ್ಮ ಬದುಕಿನಲ್ಲಿ ಕಾಣಬೇಕು. ನನ್ನ ನಾಲಗೆ, ನನ್ನ ಬದುಕು, ನನ್ನ ವಿಚಾರದಲ್ಲಿ ಕಾಣುವುದು ನಿಜವಾದ ಹಿಂದುತ್ವ. ಒಳಗಡೆ ಒಂದು, ಹೊರಗಡೆ ಒಂದು ಇರೋದನ್ನು ಹಿಂದುತ್ವ ಎನ್ನಲು ಸಾಧ್ಯವಿಲ್ಲ. ಸುಳ್ಳು ಹೇಳುವುದು, ಅಸತ್ಯದ ಮಾತು ಹಿಂದುತ್ವ ಅಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗುಜರಾತ್ ಸಕ್ಸಸ್: ಹುಬ್ಬಳ್ಳಿಯಲ್ಲಿ ಮೋದಿ ಶೋ ಸ್ಯಾಂಪಲ್ ಅಷ್ಟೇ – ಕರ್ನಾಟಕದಲ್ಲಿ ಮುಂದಿದೆ ಮೆಗಾ ಹವಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಡ್ಯ ಗೆಲ್ಲಲು ಬಿಜೆಪಿಯಿಂದ ಹಿಂದುತ್ವದ ಅಜೆಂಡಾ

    ಮಂಡ್ಯ ಗೆಲ್ಲಲು ಬಿಜೆಪಿಯಿಂದ ಹಿಂದುತ್ವದ ಅಜೆಂಡಾ

    ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆ (Vidhanasabha Election) ಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಅಧಿಕ ಕ್ಷೇತ್ರಗಳಲ್ಲಿ ಶತಾಯಗತಾಯ ಗೆಲುವು ಸಾಧಿಸಬೇಕೆಂದು ಪ್ಲಾನ್ ಹಾಕಿಕೊಂಡಿರುವ ಬಿಜೆಪಿ (BJP) ಮಂಡ್ಯ ಗೆಲ್ಲಲು ಹಿಂದುತ್ವದ ಅಜೆಂಡಾ ಹಿಡಿದು ಹೊರಟಿದೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ ಮೂಲಕ ಚುನಾವಣೆಯ ರಂಗು ಹೆಚ್ಚಿಸಲು ಮುಂದಾಗಿದೆ.

    ಹೌದು. ಇಷ್ಟು ದಿನಗಳ ಕಾಲ ಜಾಮಿಯಾ ಮಸೀದಿಯಲ್ಲ ಅದು ಹನುಮನ ಮಂದಿರ ಎಂದು ಹಿಂದೂಪರ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಈ ವೇಳೆ ರಾಜ್ಯ ಬಿಜೆಪಿ ಈ ಬಗ್ಗೆ ತುಟಿ ಬಿಚ್ಚದೆ ಮೌನ ವಹಿಸಿತ್ತು. ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರು ಮಂಡ್ಯದ ಎಲ್ಲಾ ಬಿಜೆಪಿ ಕಾರ್ಯಕ್ರಮಗಳಲ್ಲೂ ಜಾಮಿಯಾ ಮಸೀದಿಯ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ (Sacchidananda) ಪರ ಇಂಡುವಾಳುನಲ್ಲಿ ನಡೆದ ಸಭೆಯಲ್ಲಿ ಜಾಮಿಯಾ ಮಸೀದಿ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ರಂಗನಾಥಸ್ವಾಮಿ ಹಾಗೂ ಆಂಜನೇಯಸ್ವಾಮಿಯ ಕಾಲ ಬರುತ್ತಿದೆ. ಇದನ್ನೂ ಓದಿ: ಕಳೆದ‌ ಬಾರಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿತ್ತಾ?

    ಜಾಮಿಯಾ ಮಸೀದಿ ಅದು ಹನುಮಂತನ ಮಂದಿರ, ಇಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇಗುಲ ಕಟ್ಟುವುದು ನಮ್ಮ ಕಮಿಟ್ಮೆಂಟ್ ಆಗಿದೆ. ಮುಸ್ಲಿಮರಿಗೆ ನಾವೇನು ಬರೆದು ಕೊಟ್ಟಿಲ್ಲ ಮಸೀದಿ ಮಾಡಿಕೊಳ್ಳಿ ಅಂತಾ. ನಮ್ಮದನ್ನ ಕಿತ್ತುಕೊಂಡಿರುವುದನ್ನು ನಮಗೆ ಕೊಡಲೇ ಬೇಕು. ನಿಮಗೆ ಒಂದಕ್ಕೆ ಎರಡು ಮಸೀದಿಯನ್ನು ಕಟ್ಟಿಕೊಡುತ್ತೇವೆ. ನಮ್ಮ ಆಂಜನೇಯಸ್ವಾಮಿ ದೇವಸ್ಥಾನದ ತಂಟೆಗೆ ಯಾರೂ ಬರಬೇಡಿ ಎಂದು ಹೇಳುವ ಮೂಲಕ ಸಿ.ಟಿ.ರವಿ ಚುನಾವಣೆಯಲ್ಲಿ ಮಂದಿರ ಮತ್ತು ಮಸೀದಿ ಫೈಟ್‍ನ್ನು ಶುರು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿ

    ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿ

    ಬೆಳಗಾವಿ: ನಾವು ಹಿಂದೂಗಳೇ (Hindu), ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ. ಬಿಜೆಪಿಯವರದ್ದು ನಾಟಕ. ಒಳಗಿನಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹಿಂದುತ್ವದ ಜಪ ಮಾಡಿದ್ದಾರೆ.

    ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Karnataka Assembly Winter Session) ಸಾವರ್ಕರ್ ಬಿಸಿ ಜೋರಾಗಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಇಂದಿನಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿ ಸುವರ್ಣಸೌಧದಲ್ಲಿ (Suvarna Soudha) ಮೊದಲ ದಿನದಿಂದಲೇ ಹಿಂದುತ್ವ ವಿಚಾರವೇ ಹೆಚ್ಚು ಪ್ರತಿಧ್ವನಿಸುವ ಮುನ್ಸೂಚನೆ ಸಿಕ್ಕಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ

    ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸ್ಪೀಕರ್ ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನಿಯರ ಫೋಟೋ ಹಾಕ್ತೀವಿ ಅಂತ ಹೇಳಿದ್ದರು. ಆದರೆ ಇಲ್ಲಿಗೆ ಬಂದ ಮೇಲೆ ಮಾಧ್ಯಮ ಮೂಲಕ ಸಾವರ್ಕರ್ (Savarkar) ಫೋಟೋ ಹಾಕೋದು ಗೊತ್ತಾಯಿತು. ಸಾವರ್ಕರ್‌ಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ? ಸಾವರ್ಕರ್ ವಿವಾದಾತ್ಮಕ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು. ಇದೀಗ ಬಿಜೆಪಿ ಅಧಿವೇಶನಕ್ಕೆ ಅಡ್ಡಿ ತರಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳಾವ್‌ಗೆ ಬ್ರೇಕ್

    ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ. ಸ್ವಾತಂತ್ರಕ್ಕೆ ಸಾವರ್ಕರ್ ಕೊಡುಗೆ ಇಲ್ಲ. ಅವರು ತಪ್ಪು ಒಪ್ಪಿಕೊಂಡು ಪತ್ರ ಬರೆದು ಕೊಟ್ಟಿದ್ದರು. ಅವರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದರು. ಕಮೀಷನ್, ಮತದಾರರ ಪಟ್ಟಿ ಹಗರಣ ಯಾವುದೂ ಚರ್ಚೆ ಆಗಬಾರದು ಅಂತ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದು ವಿರುದ್ಧ ಈ ಬಾರಿಯೂ ಬಿಜೆಪಿಯಿಂದ ಹಿಂದೂ ಚಕ್ರವ್ಯೂಹ

    ಸಿದ್ದು ವಿರುದ್ಧ ಈ ಬಾರಿಯೂ ಬಿಜೆಪಿಯಿಂದ ಹಿಂದೂ ಚಕ್ರವ್ಯೂಹ

    ಬೆಂಗಳೂರು: ಗುಜರಾತ್ ಚುನಾವಣೆಯ(Gujarat Election) ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಸೋಮವಾರ 2ನೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ಕ್ಕೆ ಫಲಿತಾಂಶ ಹೊರಬರಲಿದೆ. ಬಳಿಕ ಕರ್ನಾಟಕದ ಎಲೆಕ್ಷನ್(Karnataka Election) ಆಟ ರಂಗೇರಲಿದೆ. ಈ ಬೆನ್ನಲ್ಲೇ ಹಳೇ ಆಟ ಹೊಸ ಖೆಡ್ಡಾ ರಾಜಕೀಯ ಶುರುವಾಗಿದೆ.

    ಈ ಸಲದ ಎಲೆಕ್ಷನ್‍ನಲ್ಲೂ ಹಿಂದುತ್ವದ(Hindutva) ಅಜೆಂಡಾ ಜೋರಾಗಿ ಸದ್ದು ಮಾಡುವ ಸಾಧ್ಯತೆ ಇದೆ. ಬಿಜೆಪಿಯಿಂದ ಹಿಂದೂವಾದಿ ಅಸ್ತ್ರ ಆರಂಭವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಖೆಡ್ಡಾಕ್ಕೆ ಬೀಳಿಸುವ ತಂತ್ರ ಶುರುವಾಗಿದೆ ಎಂಬ ಚರ್ಚೆಗಳು ನಡೆದಿವೆ.

    ಮೈಸೂರಿನಲ್ಲಿ ಸಿದ್ದರಾಮಯ್ಯ(Siddaramaiah) ಮಾತನಾಡಿ ಆರ್‍ಎಸ್‍ಎಸ್(RSS) ಕಮ್ಯುನಲ್ ಅಂದಿದ್ದರು. ಈ ಹೇಳಿಕೆಗೆ ಸಿ.ಟಿ.ರವಿ, ಕಮ್ಯೂನಲ್ ಯಾರು, ಸೆಕ್ಯುಲರ್ ಯಾರು? ಸಿದ್ದರಾಮಯ್ಯ ದೃಷ್ಟಿಯಲ್ಲಿ ಆರ್‍ಎಸ್‍ಎಸ್ ಕಮ್ಯೂನಲ್. ಬಾಂಬ್ ಹಾಕುವವರು ಸೆಕ್ಯುಲರ್. ಹಿಂದೂವಾದವೇ ಕಮ್ಯೂನಲ್ ಅಂದರೆ ನಾನೊಬ್ಬ ಹಿಂದೂವಾದಿ. ಆ ವಿಚಾರದ ಪ್ರತಿಪಾದಕ ನಾನು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮೈಸೂರು ರಿಂಗ್ ರಸ್ತೆ – ಬೀದಿ ದೀಪಗಳ MCBಯನ್ನೇ ಕದ್ದ ಕಳ್ಳರು

    ಸಿದ್ದರಾಮಯ್ಯ ಜಾತ್ಯಾತೀತತೆ ಹಣೆಬರಹ ಎಲ್ಲರಿಗೂ ಗೊತ್ತಾಗಿದೆ. ತಾವು ಸಮಾಜವಾದಿ, ಜಾತ್ಯಾತೀತವಾದಿ ಅಂತಾರೆ. ಆದರೆ ಸಿದ್ದರಾಮಯ್ಯ ವಾಸ್ತವವಾಗಿ ಮಜಾವಾದಿ. ಬೇರೆಯವರನ್ನು ಮುಗಿಸಲು ಸಿದ್ದರಾಮಯ್ಯ ಜಾತಿ ಗುರಾಣಿ ಬಳಸಿಕೊಳ್ಳುತ್ತಾರೆ ಎಂದು ಸಿಟಿ ರವಿ(CT Ravi) ಆರೋಪಿಸಿದ್ದಾರೆ.

     
    ಬಿಜೆಪಿ `ಹಿಂದೂವಾದಿ’ ಖೆಡ್ಡಾ?
    2018ರ ಎಲೆಕ್ಷನ್‍ನಲ್ಲಿ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಜೆಪಿ ಬಿಂಬಿಸಿತ್ತು. ಸಿದ್ದರಾಮಯ್ಯ ಕೆಂಪು, ಕೇಸರಿ, ನಾಮದ ವಿಚಾರವಾಗಿ ಮಾತನಾಡಿದ್ದನ್ನೇ ಟಾರ್ಗೆಟ್ ಮಾಡಿತ್ತು.

    ಸಿದ್ದರಾಮಯ್ಯ ಹೇಳಿಕೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ಪ್ರಚಾರ ಮಾಡಿತ್ತು. ಈಗಲೂ ಸಿದ್ದರಾಮಯ್ಯರನ್ನು ಖೆಡ್ಡಾಕ್ಕೆ ಕೆಡವಲು ಬಿಜೆಪಿ ಕಾದು ಕುಳಿತಿದ್ಯಾ ಎಂಬ ಚರ್ಚೆ ಆರಂಭವಾಗಿದೆ. ಸಿ.ಟಿ.ರವಿಯಿಂದ ಈಗ ಕಮ್ಯುನಲ್ ವರ್ಸಸ್ ಸೆಕ್ಯುಲರ್ ಅಸ್ತ್ರಕ್ಕೆ ಸಿದ್ದರಾಮಯ್ಯ ಹೆಜ್ಜೆ ಏನು ಎಂಬ ಪ್ರಶ್ನೆ ಎದ್ದಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

    ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

    ಶಿವಮೊಗ್ಗ: ಹಿಂದೂಗಳು (Hindu Community) ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ (VD Savarkar) ಅವರ ಕನಸಾಗಿತ್ತು ಎಂದು ವಿ.ಡಿ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಅಶೋಕ್‌ ಸಾವರ್ಕರ್ (Satyaki Ashok Savarkar) ಹೇಳಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) `ಸಾವರ್ಕರ್ ಸಾಮ್ರಾಜ್ಯ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಾವರ್ಕರ್ ಅವರಿಗೆ ಆಗಸ್ಟ್ 13 ರಂದು ಅಪಮಾನಿಸಲಾಗಿತ್ತು. ಶಿವಮೊಗ್ಗದ ಯುವ ದೇಶಪ್ರೇಮಿಗಳು ಇದನ್ನು ಮರೆಯಲಿಲ್ಲ. ಆದರೆ ಹಿಂದೂಗಳು ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ ಅವರ ಕನಸಾಗಿತ್ತು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬುದ್ಧಿವಂತರು ಯಾವಾಗಲು ಏಕಾಂಗಿಯಾಗಿಯೇ ಕೆಲಸ ಮಾಡ್ತಾರೆ.. ಯಾಕೆ ಗೊತ್ತಾ?

    ಸಾವರ್ಕರ್ ಅವರ ಹಿಂದುತ್ವದ (Hinduism) ಮಂತ್ರ ವಾಕ್ಯ ಎಲ್ಲರೂ ಜ್ಞಾಪಕವಿಟ್ಟುಕೊಳ್ಳಬೇಕು. ಭಾರತದ ಮೇಲೆ ಅನೇಕ ಆಕ್ರಮಣಗಳಾಗಿವೆ. ಆದರೆ ಅನೇಕ ಮಹನೀಯರು, ಯೋಧರು, ಶಿವಾಜಿ ಮಹರಾಜ್, ರಾಣಪ್ರತಾಪ್ ಸಿಂಗ್‌ರಂತಹ ಪರಾಕ್ರಮಿಗಳು ಹಿಂದೂಸ್ಥಾನವನ್ನು ಉಳಿಸಲು ತ್ಯಾಗ, ಬಲಿದಾನ ಮಾಡಿದ್ದಾರೆ. ಇಂದಿನ ಈ ದೀಪ ಬೆಳಗಿಸಿರುವುದು, ಇಡೀ ವಿಶ್ವವೇ ನೋಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆ – ಕೈ-ಕೈ ಹಿಡಿದು ಹೆಜ್ಜೆ ಹಾಕಿದ ರಾಹುಲ್, ರಮ್ಯಾ

    ಈ ಕಾರ್ಯಕ್ರಮದ ಮೂಲಕ ದೇಶಭಕ್ತರನ್ನು ಎಚ್ಚರಿಸುವ ಕೆಲಸವಾಗಬೇಕು. ಸಾವರ್ಕರ್ ಅವರು ಹೊಂದಿದ್ದ ಧೇಯೋದ್ದೇಶಗಳನ್ನು ನಾಡಿನೆಲ್ಲೆಡೆ ಮತ್ತೆ ಪಸರಿಸಬೇಕು. ಅನೇಕ ದುಷ್ಟಶಕ್ತಿಗಳು ದೇಶದ ಮೇಲೆ ಆಕ್ರಮಣ ಮಾಡಲು ಹೊಂಚು ಹಾಕುತ್ತಿದ್ದು, ಇದನ್ನು ಮೆಟ್ಟಿ ನಿಲ್ಲುವ ಯೋಜನೆ ನಾವೆಲ್ಲರೂ ರೂಪಿಸಬೇಕು ಎಂದು ಕರೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]