Tag: ಹಿಂದುಳಿದ ವರ್ಗ

  • ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಬಂಪರ್‌ – 3 ಲಕ್ಷ ರೂ. ವರೆಗೆ ಸಹಾಯಧನ

    ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಬಂಪರ್‌ – 3 ಲಕ್ಷ ರೂ. ವರೆಗೆ ಸಹಾಯಧನ

    ಬೆಂಗಳೂರು: ದಾಖಲೆಯ 16ನೇ ಬಜೆಟ್‌ನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತುಕೊಟ್ಟಿರುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಿದ್ದಾರೆ.

    ಹೌದು. ಹಿಂದುಳಿದ ವರ್ಗಗಳ (Backward class) ನಿರುದ್ಯೋಗಿಗಳಿಗೆ ವಿದ್ಯುತ್‌ ಚಾಲಿತ ನಾಲ್ಕು ಚಕ್ರದ ವಾಹನ ಖರೀದಿಸಿ, ಆಹಾರ ಕಿಯೋಸ್ಕ್‌ (ಆಹಾರ ಮಳಿಗೆ) ಆರಂಭಿಸಲು ಗರಿಷ್ಠ 3 ಲಕ್ಷ ರೂ. ಸಹಾಯಧನವನ್ನ ನಿಗಮಗಳ ಮೂಲಕ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025: ಯಾವ ಇಲಾಖೆಗೆ ಎಷ್ಟು ಹಣ ಹಂಚಿಕೆ?

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26ನೇ ಸಾಲಿನಲ್ಲಿ 422 ಕೋಟಿ ರೂ. ಅನುದಾನ ಒದಗಿಸಲಾಗುವುದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025 | ಕೊಡಗು ಜಿಲ್ಲೆಯ ಆಸ್ಪತ್ರೆಗಳ ಅಭಿವೃದ್ಧಿಗೆ ಸಿಎಂ ಆದ್ಯತೆ

    ಮುಂದುವರಿದು.. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿ ಮಾಡಲು 25 ಕೋಟಿ ರೂ. ಒದಗಿಸಲಾಗುವುದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಢಲು ಬೆಂಗಳೂರು ನಗರದಲ್ಲಿ ಎರಡು ಸುಸಜ್ಜಿತ ವಸತಿ ನಿಲಯಗಳನ್ನು ಪ್ರಾರಂಬಿಸಲಾಗವುದು ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಮಡಾ ಕೇಸ್‌| ಸಿಎಂ ಪತ್ನಿ, ಬೈರತಿಗೆ ಸುರೇಶ್‌ಗೆ ಬಿಗ್‌ ರಿಲೀಫ್‌ – ಇಡಿ ತನಿಖೆಯೇ ರದ್ದು

  • ಹಿಂದುಳಿದ ವರ್ಗದ ಯುವಕರು ಮೃತಪಟ್ಟಾಗ ಸಿಎಂ ಆಗಿದ್ದ ಸಿದ್ದರಾಮಯ್ಯ ಬರಲೇ ಇಲ್ಲ: ಸುನೀಲ್ ಕುಮಾರ್

    ಹಿಂದುಳಿದ ವರ್ಗದ ಯುವಕರು ಮೃತಪಟ್ಟಾಗ ಸಿಎಂ ಆಗಿದ್ದ ಸಿದ್ದರಾಮಯ್ಯ ಬರಲೇ ಇಲ್ಲ: ಸುನೀಲ್ ಕುಮಾರ್

    ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾನೇ ಹಿಂದುಳಿದ ವರ್ಗಗಳ ಚಾಂಪಿಯನ್ ಅಂತಾರೆ. ಆದರೆ ಸಿದ್ದರಾಮಯ್ಯ ಹಿಂದುಳಿದ ವರ್ಗದ ಮುಖವಾಡ ಹಾಕಿಕೊಂಡು ಮುಸ್ಲಿಮರು, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಾರೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಕಿಡಿಕಾರಿದರು.

    ತೀರ್ಥಹಳ್ಳಿಯ ಗೋಪಾಲಗೌಡ ಸಭಾ ಭವನದಲ್ಲಿ ನಡೆಸಿದ ಬಿಜೆಪಿ, ಒಬಿಸಿ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಪರಿಕಲ್ಪನೆಯೇ ಇರಲಿಲ್ಲ. ಬಿಜೆಪಿಯಿಂದ ಮಾತ್ರ ಹಿಂದುಳಿದ ವರ್ಗದ ಅಭಿವೃದ್ಧಿ ಸಾಧ್ಯ ಎಂದರು. ಇದನ್ನೂ ಓದಿ:  253 ಕೊರೊನಾ ಪ್ರಕರಣ – 611 ಮಂದಿ ಡಿಸ್ಚಾರ್ಜ್

    Siddaramaiah

    ಸಿದ್ದರಾಮಯ್ಯ ತಾನೊಬ್ಬ ಕುರುಬ ಸಮಾಜದ ನಾಯಕ ಎಂದು ಬಿಂಬಿಸಿಕೊಂಡರು. ಆದರೆ ಕನಕದಾಸ, ಓಬವ್ವ, ಕೈವಾರ ತಾತಯ್ಯ ಜಯಂತಿ ಮಾಡಲು, ನಾರಾಯಣ ಗುರು ಹೆಸರಿನಲ್ಲಿ ವಸತಿ ಶಾಲೆ ಸ್ಥಾಪಿಸಲು ಬಿಜೆಪಿ ಸರ್ಕಾರವೇ ಬರಬೇಕಾಯಿತು. ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ ಎಂಬ ಸೋಗು ಹಾಕಿಕೊಂಡು ಟಿಪ್ಪು ಜಯಂತಿ ಆಚರಣೆ ಮಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

    ಮಂಗಳೂರಿನಲ್ಲಿ ಹಿಂದುಳಿದ ವರ್ಗದ ಯುವಕರು ಮೃತಪಟ್ಟಾಗ ಸಿಎಂ ಆಗಿದ್ದ ಸಿದ್ದರಾಮಯ್ಯ ಬರಲೇ ಇಲ್ಲ. ಅವರ ಕುಟುಂಬಗಳ ಜೊತೆ ಕಣ್ಣೀರು ಸುರಿಸುವ ಕಾರ್ಯ ಮಾಡಲೇ ಇಲ್ಲ. ಅವರದ್ದೇ ಪಕ್ಷದ ಎಸ್‍ಸಿ ಸಮುದಾಯದ ನಾಯಕನ ಮನೆಗೆ ಬೆಂಕಿ ಹಚ್ಚಿದರೂ ಹೋಗಲಿಲ್ಲ ಎಂದರು. ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಿಂದಲೇ ಎಳೆ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ: ರಮೇಶ್ ಕುಮಾರ್

    ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಕ್ಕಾಗಿ ಹಲವಾರು ಯೋಜನೆ ತಂದಿದೆ. ಸರ್ಕಾರಗಳ ಯೋಜನೆಗಳು ಎಲ್ಲ ಜನರಿಗೆ ಮುಟ್ಟಬೇಕು ಎಂಬುದು ಸಮಾವೇಶದ ಆಶಯ. ಆ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಕೆಲಸ ಒಬಿಸಿ ಮೋರ್ಚಾದಿಂದ ನಡೆಯುತ್ತಿದೆ. ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತು ಸಿಗಬೇಕು ಎಂದು ತಿಳಿಸಿದರು.

    Live Tv

  • ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ: ಬೊಮ್ಮಾಯಿ

    ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ: ಬೊಮ್ಮಾಯಿ

    ಬೆಂಗಳೂರು: ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು, ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್‍ನ ಎರಡು ತೀರ್ಪುಗಳ ಸಂಪೂರ್ಣ ವಿಶ್ಲೇಷಣೆ ಮಾಡಲಾಗುತ್ತಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಯೋಗವನ್ನು ರಚಿಸಲಾಗಿದೆ. ವಿರೋಧಪಕ್ಷದ ನಾಯಕರು ಈ ಬಗ್ಗೆ ಪತ್ರ ಬರೆದಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಇದನ್ನೂ ಓದಿ: ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ

    court order law

    ಮೀಸಲಾತಿ ವಿಚಾರದಲ್ಲಿ ತೆಗೆದುಕೊಳ್ಳಬೇಕಾದ ನಿಲುವು ಹಾಗೂ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಇದುವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನಾತ್ಮಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನು ರೀತ್ಯ ಪ್ರಾತಿನಿಧ್ಯ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯ ನೀಡಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡಬೇಕೆಂಬುದು ಸರ್ಕಾರ ಹಾಗೂ ಎಲ್ಲ ಪಕ್ಷಗಳ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ಓಬಿಸಿಯನ್ನು ಪರಿಗಣಿಸುವ ಪ್ರಕ್ರಿಯೆ ಸಮಯ ತೆಗೆದುಕೊಳ್ಳಲಿದೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮಧ್ಯಪ್ರದೇಶ ರಾಜ್ಯದವರು ಒಂದು ಆಯೋಗವನ್ನು ರಚಿಸಿ ವರದಿ ತರಿಸಿ ಸುಪ್ರೀಂ ಕೋರ್ಟ್‍ಗೆ ನೀಡಿತ್ತು. ಈ ಸಂದರ್ಭದಲ್ಲಿ ಬಂದ ತೀರ್ಪಿನ ಬಗ್ಗೆ ರೀವ್ಯೂ ಪಿಟಿಷನ್ ಹಾಕಿಕೊಂಡಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಹಲವಾರು ವರದಿಗಳಿದ್ದು, ಅವುಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.

    ಸುಪ್ರೀಂ ಕೋರ್ಟ್‍ನ ಸೂಚನೆಯಂತೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ಬಗ್ಗೆ ನಿಖರವಾದ ಅಂಕಿಅಂಶಗಳುಳ್ಳ ವರದಿಯನ್ನು ಸಿದ್ಧಪಡಿಸಲು ಆಯೋಗವನ್ನು ರಚಿಸಲಾಗಿದೆ. ಯಾವೆಲ್ಲ ಸಮುದಾಯಗಳಿಗೆ ಎಷ್ಟು ರಾಜಕೀಯ ಪ್ರಾತಿನಿಧ್ಯ ದೊರಕುತ್ತಿದೆ ಎಂಬ ನಿಖರ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದ ವರ್ಗಗಳ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುತ್ತದೆ. ಹಿಂದಿನ ಸುಪ್ರೀಂ ಕೋರ್ಟ್ ಆದೇಶವನ್ನು ಈಗಾಗಲೇ ಪಾಲಿಸಲಾಗುತ್ತಿದೆ. ಪ್ರಸ್ತುತ ಇನ್ನೊಂದು ಆದೇಶ ಬಂದಿದೆ. ಇದರ ಪರಿಣಾಮಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.

  • ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಪ್ರತ್ಯೇಕ ಆಯೋಗ ರಚನೆ: ಸಿಎಂ

    ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಪ್ರತ್ಯೇಕ ಆಯೋಗ ರಚನೆ: ಸಿಎಂ

    ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಲು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಆಯೋಗ ರಚಿಸಲಾಗಿದೆ. ಈ ಮೂಲಕ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    CM Basavaraj Bommai

    ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ದಯಾನಂದಪುರಿ ಸ್ವಾಮೀಜಿ ಅವರ 33ನೇ ಪೀಠಾರೋಹಣ ವಾರ್ಷಿಕೋತ್ಸವ ಹಾಗೂ ಜನಜಾಗೃತಿ ಸಮಾವೇಶವನ್ನುದ್ದೇಶಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಪ್ರತ್ಯೇಕ ಆಯೋಗ ರಚಿಸಲಾಗಿದೆ. ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಅಂಶಗಳ ಆಧಾರದ ಮೇಲೆ ಸಮುದಾಯದ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಿ.ಟಿ.ರವಿಯ ಹಿಂದುತ್ವಕ್ಕೆ ಮನುಷ್ಯ ಧರ್ಮದ ಪ್ರತಿಪಾದನೆ‌ ಮೂಲಕ‌ ಸಿದ್ದರಾಮಯ್ಯ ಟಕ್ಕರ್ – ಕಾರ್ಯಕ್ರಮದಲ್ಲಿ ಏಟು ಎದಿರೇಟು

    basavaraj bommai (1)

    ಸಮುದಾಯ ವಿಕಾಸಕ್ಕಾಗಿ ಹಲವು ಕಾರ್ಯಕ್ರಮ: ಸಮಾಜದ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಯಾದಾಗ ಮಾತ್ರ ಆ ಸಮುದಾಯ ವಿಕಾಸಗೊಳ್ಳುತ್ತದೆ. ಅದಕ್ಕಾಗಿಯೇ ನೇಕಾರ ಸಮ್ಮಾನ ಯೋಜನೆಯಡಿ ನೀಡಲಾಗುವ ಆರ್ಥಿಕ ನೆರವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಸಹಕಾರ ಬ್ಯಾಂಕ್ ಹಾಗೂ ಶೆಡ್ಯೂಲ್ ಬ್ಯಾಂಕಿನಲ್ಲಿ ಪಡೆಯುವ ಸಾಲದ ಬಡ್ಡಿದರವನ್ನು ಶೇ.8 ರಿಂದ ಶೇ.2-3ಕ್ಕೆ ಇಳಿಸಿ ಸಾಲ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

    ಸಮುದಾಯದ ಮಕ್ಕಳಿಗೆ ಪಿಯುಸಿಯಿಂದ ಪದವಿ ಶಿಕ್ಷಣ ಹಂತದವರೆಗೂ ಶಿಷ್ಯ ವೇತನ ನೀಡುವ ಕಾರ್ಯಕ್ರಮ ರೂಪಿಸಲಾಗಿದೆ. ನೇಕಾರಿಕೆಯಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆಗೆ ಸರ್ಕಾರ ಸಹಕರಿಸುತ್ತದೆ. ಸಮುದಾಯದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಲಿದೆ. ಮಠಗಳಿಗೆ ಎಲ್ಲ ಸಹಾಯ ನೀಡಲಾಗುತ್ತದೆ. ಗಾಯತ್ರಿಪೀಠ ಮಹಾಸಂಸ್ಥಾನಕ್ಕೆ 1 ಕೋಟಿ ರೂ. ನೀಡಲಾಗಿದ್ದು, ಹೆಚ್ಚುವರಿ 4 ಕೋಟಿ ರೂ.ಗಳನ್ನು ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    BASAVARJ BOMMAI (1)

    ಕಾಯಕ ನಿಷ್ಠೆ ಸಮುದಾಯದ ಗುಣಧರ್ಮ: ಪ್ರಾಮಾಣಿಕತೆ, ಕಠಿಣ ಪರಿಶ್ರಮ, ಕಾಯಕ ನಿಷ್ಠೆ, ಶ್ರದ್ಧೆ ದೇವಾಂಗ ಸಮಾಜದ ಗುಣಧರ್ಮಗಳು. ಸಮುದಾಯವರು ನೇಕಾರಿಕೆ ದೈವದತ್ತವಾದ ಕಲೆ. ಈ ಕ್ಷೇತ್ರದಲ್ಲಿ ಸಾಕಷ್ಟು ಆಧುನೀಕರಣ ಬಂದಿದ್ದು, ಅದರ ನಡುವೆಯೂ ಸಮಾಜ ತನ್ನ ಕಸುಬನ್ನು ಉಳಿಸಿಕೊಂಡಿದೆ. ಜಾಗತೀಕರಣ, ಆಧುನೀಕರಣ, ಖಾಸಗೀಕರಣದ ನಡುವೆ ಅಂತ:ಕರಣವಿರಬೇಕು. ಈ ಸಮಾಜವನ್ನು ಮುನ್ನಡೆಸಲು ದಕ್ಷವಾದ ಸ್ವಾಮೀಜಿಗಳಿದ್ದಾರೆ ಎಂದು ಶ್ಲಾಘಿಸಿದ ಅವರು, ಸಮುದಾಯದ ಏಳಿಗೆಗೆ ಸಹಕರಿಸಲು ಸರ್ಕಾರ ಬದ್ಧವಾಗಿದೆ ಎಂದು ನುಡಿದರು.

  • ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

    ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

    ಬೆಂಗಳೂರು: ಬಂಟರು ಅಂದ್ರೆ ಶ್ರೀಮಂತರಲ್ಲ. ಬಂಟ ಸಮುದಾಯದಲ್ಲೂ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಮನವಿ ಮಾಡಿಕೊಂಡರು.

    ಬೆಂಗಳೂರು ಬಂಟರ ಸಂಘದಿಂದ ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕøತಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಣಿ ರಮಾನಾಥ್ ರೈ ಅವರಿಗೆ ದಿ.ಡಾ.ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಿದರು. ಇದನ್ನೂ ಓದಿ: ಆಸ್ಕರ್ 2022 ರೆಡ್ ಕಾರ್ಪೆಟ್‍ನಲ್ಲಿ ಮಿಂಚಿದ ತಾರೆಯರು: ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

    ಈ ಸಂದರ್ಭದಲ್ಲಿ ಮಾತನಾಡಿದ ರಮಾನಾಥ್ ರೈ, ಬಂಟ ಸಮುದಾಯ ಎಲ್ಲ ಕ್ಷೇತ್ರದಲ್ಲೂ ಗುರುತಿಸಿಕೊಂಡಿದೆ. ಜೊತೆಗೆ ಎಲ್ಲ ಸಮಾಜದ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಆದ್ರೂ ಕೂಡ ಬಂಟ ಸಮುದಾಯದಲ್ಲಿ ಸಾಕಷ್ಟು ಮಂದಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆದ್ರಿಂದ ಬೆಂಗಳೂರು ಬಂಟರ ಸಂಘದ ಮೂಲಕ ಬಂಟ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮನವಿ ಮಾಡಿದರು.

    ಕರ್ನಾಟಕ ರಾಜ್ಯದಲ್ಲಿ ಬಂಟ ಸಮಾಜ 3-ಬಿ ಪ್ರವರ್ಗದಲ್ಲಿದೆ. ಆದ್ರೆ ಕೇಂದ್ರದಲ್ಲಿ ಸಾಮಾನ್ಯ ವರ್ಗದಲ್ಲಿದೆ. ಹೀಗಾಗಿ ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು. ಸರ್ಕಾರದ ಸೌಲಭ್ಯಗಳು ಬಂಟ ಸಮುದಾಯಕ್ಕೂ ಸಿಗಬೇಕು ಎಂಬುದು ಈ ಬೇಡಿಕೆಯ ಉದ್ದೇಶವಾಗಿದೆ.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಂದಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣ್ ಸ್ವಾಮಿ ಅವರು ಮಾತನಾಡಿದ್ದು, ಬೆಂಗಳೂರು ಬಂಟರ ಸಂಘದ ಮನವಿಗೆ ಸಕಾರತ್ಮಕವಾಗಿ ಸ್ಪಂದಿಸಿದರು.

    ಬೆಂಗಳೂರು ಬಂಟರ ಸಂಘದ ಬೇಡಿಕೆಯನ್ನು ಸೂಕ್ತ ರೀತಿಯಲ್ಲಿ ಈಡೇರಿಸುವ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಕೇಂದ್ರ ಸಚಿವ ವಿ.ನಾರಾಯಣ್ ಸ್ವಾಮಿ ಭರವಸೆ ನೀಡಿದ್ರು. ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರ ಜೊತೆ ಭೇಟಿ ಮಾಡಿ ಚರ್ಚೆ ಮಾಡೋಣ. ನಿಮ್ಮ ಜೊತೆ ನಾನು ಇರುತ್ತೇನೆ. ಬಂಟ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.

    ಇದೇ ವೇಳೆ ಉದ್ಯಮಿ ಸರ್ವೋತ್ತಮ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ.ಚೌಟ ಸ್ಮಾರಕ ಸಾಂಸ್ಕøತಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು. ಇನ್ನುಳಿದಂತೆ ಬೆಂಗಳೂರು ಬಂಟರ ಸಂಘದ ವತಿಯಿಂದ ನಡೆದ ವಿವಿಧ ಸಾಂಸ್ಕøತಿಕ ಸ್ಪರ್ಧಾ ವಿಜೇತರಿಗೆ, ಕ್ರೀಡಾ ಸಾಧನಾ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡಲಾಯಿತ್ತು. ಈ ವೇಳೆ ಸುಮಾರು 170 ಮಂದಿಗೆ ಪ್ರಶಸ್ತಿ ನೀಡಲಾಯ್ತು.  ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ

    ಕಾರ್ಯಕ್ರಮದಲ್ಲಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಯ ಅಧ್ಯಕ್ಷರಾದ ಕೆ.ಸಿ.ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷರಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಮ್.ಮಧುಕರ ಶೆಟ್ಟಿ, ಕ್ರೀಡಾ ಸಮಿತಿಯ ಚೇರ್ ಪರ್ಸನ್ ರಾಧಾಕೃಷ್ಣ ಶೆಟ್ಟಿ, ಸಾಂಸ್ಕøತಿಕ ಸಮಿತಿಯ ಚೇರ್ ಪರ್ಸನ್ ವಿಜಯ್ ಜೆ.ಶೆಟ್ಟಿ ಹಾಲಾಡಿ ಮೊದಲಾದವರು ಉಪಸ್ಥಿತರಿದ್ದರು.

  • ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ: ಸಿಎಂ

    ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ: ಸಿಎಂ

    ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂಬುದು ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸರ್ವಪಕ್ಷಗಳ ನಾಯಕರ ಸಭೆಯ ನಂತರ ಮಾಧ್ಯಮದವರೊಂದಿಗೆ ಬೊಮ್ಮಾಯಿ ಅವರು  ಮಾತನಾಡಿದರು. ಈ ವೇಳೆ ಅವರು, ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ `ರೋಬೋ’ 

    ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

    ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ತಂದೆ ಸಾವು – ಮಗಳ ಸ್ಥಿತಿ ಗಂಭೀರ

    ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

  • ಅತಿ ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ನೀಡಲು ಆಯೋಗ ರಚಿಸಬೇಕು – ರಾಜ್ಯಪಾಲರಿಗೆ ಮನವಿ

    ಅತಿ ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ನೀಡಲು ಆಯೋಗ ರಚಿಸಬೇಕು – ರಾಜ್ಯಪಾಲರಿಗೆ ಮನವಿ

    ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸಿಕೊಡಬೇಕು ಮತ್ತು ಕಾಂತರಾಜು ವರದಿಯನ್ನು ತಕ್ಷಣ ಸರ್ಕಾರ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷರಾದ ಎಮ್.ಸಿ.ವೇಣುಗೋಪಾಲ್ ನೇತೃತ್ವದ ನಿಯೋಗ ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

    ಮನವಿ ಸಲ್ಲಿಸಿದ ನಂತರ ಈ ಕುರಿತು ಎಮ್.ಸಿ.ವೇಣುಗೋಪಾಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ರಾಜ್ಯಪಾಲರು ನಮ್ಮ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕುರಿತಾಗಿ ಘನತೆವೆತ್ತ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಛ ನ್ಯಾಯಾಲಯ ಅನೇಕ ಬಾರಿ ಉಲ್ಲೇಖಿಸಿದೆ. ಆದರೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ಶಾಸನಸಭೆ ಮತ್ತು ಸಂಸತ್ತಿನಲ್ಲಿ ಅತಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ:  ನಮ್ಮ ಮನೆಯ ಮಕ್ಕಳು ಅಮಾಯಕರು – ಬಂಧಿತರ ಕುಟುಂಬದವರ ಅಳಲು

    thawar chand gehlot

    ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂಬಂಧ ಕರ್ನಾಟಕ ಸರ್ಕಾರ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮಾಡಿರುವ ಪಟ್ಟಿಯಲ್ಲಿರುವ ಜಾತಿ ಮತ್ತು ಉಪಜಾತಿಗಳನ್ನು ಸ್ಥಳೀಯ ಸಂಸ್ಥೆಗಳಿಗೂ ಸಹ ಅಳವಡಿಸಿಕೊಂಡಿರುವುದು ಸರಿಯಲ್ಲ. ಸರ್ಕಾರ ಆಯೋಗವೊಂದನ್ನು ರಚಿಸಿ ರಾಜಕೀಯವಾಗಿ ಹಿಂದುಳಿದ ಜಾತಿಗಳನ್ನು ಗುರುತಿಸಿ, ಅಂತಹವುಗಳನ್ನು ಪಟ್ಟಿಮಾಡಿ ರಾಜಕೀಯ ಮೀಸಲಾತಿ ನೀಡಬೇಕು. ಸ್ಥಳೀಯ ಸಂಸ್ಥೆಗಳ ಮೀಸಲಾತಿಯಂತೆಯೇ ಶಾಸನಸಭೆ ಮತ್ತು ಸಂಸತ್ತಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ಹೆಚ್.ಕಾಂತರಾಜು ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.

    ಕರ್ನಾಟಕ ಸರ್ಕಾರ 2015ರಲ್ಲಿ ಅಂದಾಜು 162 ಕೋಟಿ ರೂಪಾಯಿ ಖರ್ಚು ಮಾಡಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದೆ. ಆಯೋಗವು ವಿಷಯ ತಜ್ಞರ ಸಲಹೆ ಮತ್ತು ಬಿಇಎಲ್ ಸಂಸ್ಥೆಯ ಸಹಯೋಗದೊಂದಿಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಅಸ್ಥಿತ್ವದಲ್ಲಿರುವ ಎಲ್ಲ ಜಾತಿ ಸಮುದಾಯಗಳ ದತ್ತಾಂಶಗಳನ್ನು ಸಂಗ್ರಹಿಸಲಾಗಿದೆ ಎಂದು ವಿವರಿಸಿದರು.

    ಆಯೋಗ ಸಂಗ್ರಹಿಸಿರುವ ದತ್ತಾಂಶಗಳನ್ನು ಪಡೆದು ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಸಮೀಕ್ಷೆ ದತ್ತಾಂಶವನ್ನು ಸರ್ಕಾರ ಕೂಡಲೇ ಸ್ವೀಕರಿಸಿ ಸಾರ್ವಜನಿಕರ ಅವಗಾಹನೆಗೆ ತರಬೇಕು. ಈಗಾಗಲೇ ಸಮೀಕ್ಷೆ ವರದಿ ಸ್ವೀಕರಿಸಿ ಬಹಿರಂಗಪಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಉಚ್ಚ ನ್ಯಾಯಾಲಯ ರಿಟ್ ಅರ್ಜಿ ಸ್ವೀಕರಿಸಿ ವಿಚಾರಣೆ ಇಟ್ಟುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

    ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರಿಸಬಾರದು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ರಾಜ್ಯದ ಸುಮಾರು 73 ಜಾತಿ-ಉಪಜಾತಿಗಳನ್ನು ಸೇರಿಸಬೇಕು. ನ್ಯಾ. ಸುಭಾಷ್ ಆಡಿ ಸಮಿತಿಯನ್ನು ರದ್ದುಗೊಳಿಸಬೇಕು ಎಂಬುದರ ಬಗ್ಗೆ ಈಗಾಗಲೇ ಸಿಎಂ ಸೇರಿದಂತೆ ಸಂಬಂಧ ಪಟ್ಟ ಇಲಾಖೆಯವರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

    ಇದೇ ವೇಳೆ ಕರ್ನಾಟಕ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಕಾರ್ಯದರ್ಶಿ ನಾಗರಾಜ್, ಖಜಾಂಚಿ ಮಂಜುನಾಥ್ ಸೇರಿದಂತೆ ನಿವೃತ್ತ ಅಧಿಕಾರಿಗಳು ಹಾಜರಿದ್ದರು.

  • ಆಯುರ್ವೇದ ವಿದ್ಯಾರ್ಥಿಗಳ 24 ಲಕ್ಷ ರೂ. ವಿದ್ಯಾರ್ಥಿ ವೇತನ ನಕಲಿ ಖಾತೆಗೆ ಜಮೆ

    ಆಯುರ್ವೇದ ವಿದ್ಯಾರ್ಥಿಗಳ 24 ಲಕ್ಷ ರೂ. ವಿದ್ಯಾರ್ಥಿ ವೇತನ ನಕಲಿ ಖಾತೆಗೆ ಜಮೆ

    ಹುಬ್ಬಳ್ಳಿ: ಹೆಗ್ಗೇರಿ ಆಯುರ್ವೇದ ಕಾಲೇಜಿನ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದ ಹಿಂದುಳಿದ ವರ್ಗ ಇಲಾಖೆಯ ಸಿಬ್ಬಂದಿಯೊಬ್ಬ ಬರೋಬ್ಬರಿ 24 ಲಕ್ಷ ರೂ. ಹಿಂದುಳಿದ ವರ್ಗದ ವಿದ್ಯಾರ್ಥಿ ವೇತನವನ್ನು ಆ ಖಾತೆಗೆ ಜಮಾ ಮಾಡಿಸಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಎ.ಎಸ್.ಅವರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನಕಲಿ ಖಾತೆ ತೆರೆದು ಸಿಎಂ ವಿರುದ್ಧ ಪೋಸ್ಟ್ ಹಾಕಿದ್ದ ಮಂಡ್ಯದ ಟೆಕ್ಕಿಯ ಬಂಧನ

    ದೂರಿನಲ್ಲಿ ಏನಿದೆ?
    ಹಿಂದುಳಿದ ವರ್ಗದ ವಿದ್ಯಾರ್ಥಿ ವೇತನವನ್ನು ಕಾಲೇಜಿನ ಪ್ರಾಚಾರ್ಯರ ಖಾತೆಗೆ ಜಮೆ ಮಾಡುತ್ತಾರೆ. ಹೀಗಿರುವಾಗ ಇಲಾಖೆಯ ಸಿಬ್ಬಂದಿ ಹುಬ್ಬಳ್ಳಿ ಪ್ರವಾಸಿ ಮಂದಿರ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್‍ನಲ್ಲಿ ಆಯುರ್ವೇದ ಕಾಲೇಜಿನ ಹೆಸರಿನಲ್ಲಿ ಖಾತೆ ತೆರೆದ್ದಿದ್ದಾನೆ. ಖಾತೆಗೆ 2017ರ ಏ.1ರಿಂದ 2018ರ ಮಾ. 31ರವರೆಗಿನ ಅವಧಿಯಲ್ಲಿ 24,04,090 ರೂ. ವಿದ್ಯಾರ್ಥಿ ವೇತನವನ್ನು ಪ್ರಾಚಾರ್ಯರ ಖಾತೆ ಬದಲಾಗಿ ನಕಲಿ ಖಾತೆಗೆ ಜಮಾ ಮಾಡಿಸಿಕೊಂಡು ಕಾಲೇಜು, ವಿದ್ಯಾರ್ಥಿಗಳಿಗೆ ವಂಚಿಸಿ ಸ್ವಂತಕ್ಕೆ ಬಳಸಲಾಗಿದೆ ಎಂದು ದೂರು ದಾಖಲಾಗಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    ಕಳೆದ ಆಡಿಟ್ ವೇಳೆ ವಂಚನೆ ಆಗಿರುವುದು ಪತ್ತೆಯಾಗಿದೆ. ಹಿಂದುಳಿದ ವರ್ಗ ಇಲಾಖೆಯಿಂದ ಕಾಲೇಜಿನ ಖಾತೆಗೆ ಆಗಬೇಕಿದ್ದ ಹಣ ಎಲ್ಲಿ ಜಮಾ ಆಗಿದೆ ಎಂದು ಪತ್ತೆಗೆ ಮುಂದಾದಾಗ ವಿಷಯ ಬೆಳಕಿಗೆ ಬಂದಿದೆ. ಸುಮಾರು 100 ವಿದ್ಯಾರ್ಥಿಗಳಿಗೆ ಬರಬೇಕಾದ ವಿದ್ಯಾರ್ಥಿವೇತನ ಇದು. ಯಾವ ಸಿಬ್ಬಂದಿ ವಂಚನೆ ಎಸಗಿದ್ದಾನೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ ಎಂದು ಪ್ರಾಚಾರ್ಯ ಪ್ರಶಾಂತ್ ಎ.ಎಸ್. ತಿಳಿಸಿದ್ದಾರೆ.

  • ಕರ್ನಾಟಕದಲ್ಲೂ EWS ಕೋಟಾ ಜಾರಿ?

    ಕರ್ನಾಟಕದಲ್ಲೂ EWS ಕೋಟಾ ಜಾರಿ?

    ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಜನರಿಗೆ ಶೇ.10 ರಷ್ಟು ಮೀಸಲಾತಿ ಕೊಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಹೊಸ ಇತಿಹಾಸ ಸೃಷ್ಟಿ ಮಾಡಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗದ ಜನರಂತೆ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಮೀಸಲಾತಿ ಕೊಡುವುದೇ ಈ ಕಾಯ್ದೆಯ ಉದ್ದೇಶವಾಗಿದೆ.

    ಕೇಂದ್ರ ಸರ್ಕಾರದ ಶಿಕ್ಷಣ, ಉದ್ಯೋಗ, ಇನ್ನಿತರ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ಈಗಾಗಲೇ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರೋ ಈ ಮಹತ್ವದ ಕಾಯ್ದೆ ಕರ್ನಾಟಕ ರಾಜ್ಯದಲ್ಲೂ ಜಾರಿಗೆ ಬರುವುದಕ್ಕೆ ಕಾಲ ಸನ್ನಿಹಿತವಾಗಿದೆ.

    ಹೌದು. ಆರ್ಥಿಕವಾಗಿ ಹಿಂದುಳಿದ ವರ್ಗವು (ಇಡಬ್ಲ್ಯೂಎಸ್)ಕೋಟಾ ರಾಜ್ಯದಲ್ಲೂ ಜಾರಿಗೆ ತನ್ನಿ ಅಂತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಮತ್ತು ಕಾರ್ಮಿಕ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಈ ಕಾಯ್ದೆಯಿಂದ ಅನುಕೂಲವಾಗಲಿದೆ. ಹೀಗಾಗಿ ಈ ಕಾಯ್ದೆಯನ್ನ ರಾಜ್ಯದಲ್ಲೂ ಜಾರಿಗೆ ತರಬೇಕು ಅಂತ ಸಿಎಂಗೆ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಮುಂಬರುವ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ಸಂಬಂಧ ಮಸೂದೆ ಮಂಡಿಸಬೇಕು ಅಂತ ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರೋದರಿಂದ ರಾಜ್ಯದಲ್ಲೂ ಕಾಯ್ದೆ ಜಾರಿಯಾಗೋ ಲಕ್ಷಣ ಇದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಮುಂದಿನ ಅಧಿವೇಶನಲ್ಲಿ ಮಸೂದೆ ಮಂಡನೆ ಆದರೂ ಅಚ್ಚರಿಯಿಲ್ಲ. ಒಂದು ವೇಳೆ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ರಾಜ್ಯದಲ್ಲೂ ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದ ಜನರಿಗೂ ಅನುಕೂಲವಾಗಲಿದೆ.

  • ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ಬೆಂಗಳೂರು: ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿಬಂದಿದೆ. ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿಸುತ್ತಿರುವ ಬೆನ್ನಲ್ಲೇ ನಿಗಮಕ್ಕೆ ಲಿಂಗಾಯತ ಎಂಬ ಹೆಸರನ್ನು ಮಾತ್ರ ಬಳಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

    ಬಸವ ಸಮಿತಿಯ ಅರಿವಿನ ಮನೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಲಿಂಗಾಯತ ಸ್ವಾಮೀಜಿಗಳು, ಸರ್ಕಾರದ ನಿರ್ಧಾರವನ್ನು ಜಾಗತಿಕ ಲಿಂಗಾಯತ ಮಹಾಸಭಾದ ಸ್ವಾಗತಿಸುತ್ತದೆ. ಆದರೆ, ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ. ಅಲ್ಲದೆ, ಪ್ರತ್ಯೇಕ ಧರ್ಮ ಮತ್ತು ಹಿಂದುಳಿದ ವರ್ಗದ ವಿಚಾರ ಬೇರೆ. ಹೀಗಾಗಿ ಧರ್ಮದ ಹೋರಾಟ ನಿರಂತರವಾಗಿ ನಡೆಯುತ್ತದೆ. ಲಿಂಗಾಯತ ಅಸ್ಮಿತೆಗಾಗಿ ಹಾಗೂ ಸ್ವಾತಂತ್ರ್ಯ ಧರ್ಮಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‍ಗೆ ಹೋಗಲು ಸಿದ್ಧರಿದ್ದೇವೆ ಎಂದು ಒಕ್ಕೂರಲಿನಿಂದ ತಿಳಿಸಿದ್ದಾರೆ.


    ಸುದ್ದಿಗೋಷ್ಠಿಯಲ್ಲಿ ಗದಗನ ಡಂಬಳ ಮಠದ ಶ್ರೀ ಸಿದ್ದರಾಮ ಸಾಮೀಜಿ, ಬಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ ದೇವರು, ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಮುಂಡರಗಿ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಮಾತೋಶ್ರಿ ಗಂಗಾಮಾತೆ, ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿ ಕಾಂಗ್ರಸ್‍ನ ಕೆಲ ಲಿಂಗಾಯತ ನಾಯಕರ ನಿಲುವನ್ನು ಖಂಡಿಸಿದ್ದಾರೆ.

    ಗದಗ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿರಶೈವ ಲಿಂಗಾಯತ ನಿಗಮ ಮಂಡಳಿ ಸ್ಥಾಪಿಸುವ ಕುರಿತು ಕಾಂಗ್ರೆಸ್ ನಾಯಕರು ಸಭೆ ಮಾಡಿದ್ದು, ಇದಕ್ಕೆ ನಮ್ಮ ತಕರಾರಿಲ್ಲ. ಅದರೆ, ವೀರಶೈವ ಲಿಂಗಾಯತ ಎಂದು ಎಲ್ಲೂ ಇಲ್ಲ ಹೀಗಾಗಿ ಹೆಸರನ್ನು ಲಿಂಗಾಯತ ಎಂದು ಬದಲಿಸಬೇಕು. ವೀರಶೈವ ಎನ್ನುವುದೇ ಇಲ್ಲದಿದ್ದಾಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಎಂಬ ಹೆಸರನ್ನೇಕೆ ಇಡಬೇಕು ಎಂದು ಪ್ರಶ್ನಿಸಿದ್ದಾರೆ.

    ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮುಗಿದ ಅಧ್ಯಾಯ ಎಂದು ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಸುಳ್ಳು ಲಿಂಗಾಯತರ ಹೋರಾಟ ನಿರಂತರವಾಗಿರುತ್ತದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಲಿಂಗಾಯತ ಹೋರಾಟ ಮುಗಿದ ಅಧ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ಹೇಳಿಕೆ ಅಗಿರಬಹುದು. ಅದರೆ, ಸ್ವತಂತ್ರ ಧರ್ಮದ ಹೋರಾಟ ನಮ್ಮ ಅಸ್ಮಿತೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿದ್ದರಾಮ ಸ್ವಾಮೀಜಿ ತಿಳಿಸಿದರು.

    ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಿಗಮ ಮಂಡಳಿ ಸ್ಥಾಪನೆ ಮಾಡಿ ಲಿಂಗಾಯತ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಮುಂದಾಗಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದೆ. ಆದರೆ ಸ್ವತಂತ್ರ ಧರ್ಮದ ಹೋರಾಟಕ್ಕೂ ನಿಗಮ ಮಂಡಳಿ ಸ್ಥಾಪನೆಗೂ ಸಂಬಂಧವಿಲ್ಲ. ಕಾಂಗ್ರಸ್ ಪಕ್ಷದ ಕೆಲ ಲಿಂಗಾಯತ ನಾಯಕರು ಈ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿರುತ್ತದೆ. ನಿಗಮ ಮಂಡಳಿಗೂ ಸಹ ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ ಎಂದು ಸಲಹೆ ನೀಡಿದ್ದಾರೆ.

    ಎಲ್ಲೂ ಉಲ್ಲೇಖವಾಗಿಲ್ಲ
    ಮಂಡಲ್ ವರದಿಯಲ್ಲಿ ಲಿಂಗಾಯತದ ಕುರಿತು ಪ್ರಸ್ತಾಪವಾಗಿಲ್ಲ. 30 ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಕ್ಕೆ ಸೇರಿಸಲಾಗಿತ್ತು. ಉಳಿದ 90 ಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಒತ್ತಡ ನಮ್ಮದಾಗಿದೆ. ಲಿಂಗಾಯತ ಗಾಣಿಗ, ನೇಕಾರ ಲಿಂಗಾಯತ, ಬಡಿಗ ಲಿಂಗಾಯತ ಸೇರಿದಂತೆ 30 ಪಂಗಡಗಳಿಗೆ ಲಿಂಗಾಯತ ಎಂದೇ ಸೇರಿಸಿದ್ದಾರೆ. ಯಾವ ಜಾತಿಯಲ್ಲೂ ವೀರಶೈವ ಲಿಂಗಾಯತ ಎಂದು ಉಲ್ಲೇಖವಾಗಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಸ್ಪಷ್ಟಪಡಿಸಿದ್ದಾರೆ.

    ವೀರಶೈವವನ್ನು ಉಪಪಂಗಡವಾಗಿ ನಾವು ಗೌರವಿಸುತ್ತೇವೆ. ಆದರೆ, ತಾವೇ ಜಾತಿ ಹುಟ್ಟುಹಾಕಿದವರು, ಬಸವಣ್ಣ ಶಿಷ್ಯ ಎಂದರೆ ನಾವು ಒಪ್ಪುವುದಿಲ್ಲ. ಈ ಕುರಿತು ಬಹುತೇಕ ಜನರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದೀಗ ಮತ್ತೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿ ಎಂದರೆ, ಅವರೇನು ಹುಚ್ಚರಾ? 2002ರ ಗೆಜೆಟ್ ನೋಟಿಫಿಕೇಷನ್ ಸರ್ಕಾರ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ಧ. ಈ ಕುರಿತು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ ಎಂದು ಜಾಮದಾರ್ ಮನವಿ ಮಾಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]