Tag: ಹಿಂದೂಪರ ಸಂಘಟನೆ

  • ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ – ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ

    ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ – ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ

    ಬೆಳಗಾವಿ: ನಗರದ ಚಿತ್ರಮಂದಿರದಲ್ಲಿ ಶಾರುಖ್ ಖಾನ್ (Shahrukh Khan) ಅಭಿನಯದ ಪಠಾಣ್ (Pathan) ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು (Pro Hindu Organizations) ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದರು.

    ಬೆಳಗಾವಿಯ (Belagavi) ಸ್ವರೂಪ ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ ಮಾಡಿದ್ದು, ಸ್ವರೂಪ ಚಿತ್ರಮಂದಿರ ಬಳಿ ಹಾಕಿದ್ದ ಶಾರುಖ್ ಖಾನ್ ನಟನೆಯ ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು (Police) ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: Oscars 2023: `ಆರ್‌ಆರ್‌ಆರ್’ ಸಿನಿಮಾದ `ನಾಟು ನಾಟು’ ಸಾಂಗ್ ನಾಮಿನೇಟ್

    ಬೆಳಗಾವಿಯ ಸ್ವರೂಪ ಚಿತ್ರಮಂದಿರ ಬಳಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿತ್ರಮಂದಿರದ ಎದುರು ಬಿಗಿ ಭದ್ರತೆ ಒದಗಿಸಲಾಗಿದೆ. ಓರ್ವ ಸಿಪಿಐ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಚಿತ್ರಮಂದಿರ ಬಳಿ ಒಂದು ಕೆಎಸ್‍ಆರ್‌ಪಿ ತುಕಡಿ ಇರಿಸಲಾಗಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್‌ ಖಾನ್‌ ಫೋನ್‌ ಕಾಲ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್

    ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್

    ಬೆಳಗಾವಿ: ಹಿಂದೂಪರ ಸಂಘಟನೆ ಮುಖಂಡನ (Hindu Organisation Leader) ಮೇಲೆ ಫೈರಿಂಗ್ (Firing) ಆಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ.

    ತಾಲೂಕಿನ ಹಿಂಡಲಗಾ ಗ್ರಾಮದ ಶ್ರೀರಾಮಸೇನೆ (Sriram Sena) ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಆಗಿದ್ದು, ಅದೃಷ್ಟವಶಾತ್ ರವಿ ಮತ್ತು ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಇದನ್ನೂ ಓದಿ: ಅಸಲಿ ಚಿನ್ನವನ್ನು ನಕಲಿ ಎಂದು ಭಾವಿಸಿ ಕಸದ ರಾಶಿಗೆ ಎಸೆದ ಕಳ್ಳರು

    ಶನಿವಾರ ಸಂಜೆ ವಾಹನದಲ್ಲಿ ಚಲಿಸುತ್ತಿದ್ದ ಅಪರಿಚಿತರಿಂದ, ರವಿ ವಾಹನದ ಮೇಲೆ ಫೈರಿಂಗ್ ಮಾಡಲಾಗಿದೆ. ರವಿ ಕೋಕಿತಕರ್ ಗಡ್ಡಕ್ಕೆ ಬುಲೆಟ್ ತಗುಲಿ ಚಾಲಕನ ಕೈಗೆ ತಗುಲಿದೆ. ಚಾಲಕನ ಕೈಯಲ್ಲಿ ಬುಲೆಟ್ ಸಿಕ್ಕಿದ್ದು ಸದ್ಯ ಗಾಯಾಳುಗಳನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

    ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹಿಂದೂಪರ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ‌ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಸಹೋದರನ ಮೇಲೆ ಗುಂಡಿನ ದಾಳಿ

    ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಮಾಡಿದ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದೆ ‌ಎಂದು ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸದ ಅಡುಗೆ – ಹಿಂದೂಪರ ಸಂಘಟನೆ ಆಕ್ರೋಶ

    ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸದ ಅಡುಗೆ – ಹಿಂದೂಪರ ಸಂಘಟನೆ ಆಕ್ರೋಶ

    ಚಿಕ್ಕಮಗಳೂರು: ತಾಲೂಕಿನಲ್ಲಿ ಹಿಂದೂ – ಮುಸ್ಲಿಮರ (Hindu Muslims) ಧಾರ್ಮಿಕ ಭಾವೈಕ್ಯದ ಕೇಂದ್ರವಾಗಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ (Shri Guru Dattatreya Swamy Dattapita) ಪ್ರವಾಸಿಗರು ಮತ್ತೆ ಮಾಂಸ (Meat) ಬೇಯಿಸಿರುವ ವೀಡಿಯೋ ವೈರಲ್ ಆಗಿದ್ದು, ಹಿಂದೂಪರ ಸಂಘಟನೆ (Hindu Organizations) ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಕಳೆದ ನಾಲ್ಕೈದು ತಿಂಗಳ ಹಿಂದೆಯೂ ದತ್ತಪೀಠದಲ್ಲಿ (Dattapita) ಬಿರಿಯಾನಿ (Biriyani) ತಯಾರಿಸಿ ಸೇವಿಸಿದ್ದರು. ಆಗಲೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಆಗ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿತ್ತು. ಇದೀಗ ದತ್ತಪೀಠಕ್ಕೆ ಬರುವ ಪ್ರವಾಸಿಗರು ದತ್ತ ಮಾಲಾಧಾರಣೆ ಹಾಗೂ ದತ್ತ ಜಯಂತಿಯ ವೇಳೆ ಹಿಂದೂ ಸಂಘಟನೆಗಳು ಹೋಮ-ಹವನ ನಡೆಸಲು ಸರ್ಕಾರವೇ ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಪುನಃ ಮಾಂಸವನ್ನ ಬೇಯಿಸಿದ್ದಾರೆ. ಇದೇ ಕೊನೆಯಾಗಬೇಕು. ಇನ್ಮುಂದೆ ಇಂತಹ ಘಟನೆ ನಡೆಯದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವೇ ಸೂಕ್ತ ತಕ್ಕ ಪಾಠ ಕಲಿಸುತ್ತೇವೆ ಎಂದು ಯುವ ಬ್ರಿಗೇಡ್ (Yuva Brigade) ಸಂಚಾಲಕ ಪ್ರವೀಣ್ ಖಾಂಡ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ 3ನೇ ಸಾಕಾನೆ ಶಿಬಿರ ಲೋಕಾರ್ಪಣೆ – ಹಾರಂಗಿ ವಿಶೇಷತೆ ಏನು?

    ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿರುವ ಹಿಂದೂ ಬ್ರಿಗೇಡ್ ಕಾರ್ಯಕರ್ತರು, ಸರ್ಕಾರ ಕೊಟ್ಟ ಮಾತನ್ನ ಉಳಿಸಿಕೊಂಡಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದಲೇ ಪ್ರವಾಸಿಗರು ಪುಣ್ಯಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಮಾಂಸ ಕಡಿದು, ಬೇಯಿಸುತ್ತಿದ್ದಾರೆ. ದತ್ತಪೀಠ ಪ್ರವಾಸಿಗರ ತಾಣವಲ್ಲ. ಪ್ರವಾಸಿ ತಾಣಗಳು ಬೇಕು ಅಂದ್ರೆ ಗಿರಿಶ್ರೇಣಿಯಲ್ಲಿ ಬೇರೆ ಸ್ಥಳಗಳಿವೆ. ಎರಡು ಕೋಮುಗಳು ಕೂಡ ದತ್ತಪೀಠವನ್ನ ಧಾರ್ಮಿಕ ಕ್ಷೇತ್ರ ಎಂದು ನಂಬಿವೆ. ಹೋಮ-ಹವನಕ್ಕೆ ಸರ್ಕಾರವೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟಿದೆ. ಅಲ್ಲಿ ಈ ರೀತಿ ಮಾಂಸ ಬೇಯಿಸಿದರೆ ಅದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಿದೆ. ಎಲ್ಲಿಂದಲೋ ಬರುವ ಪ್ರವಾಸಿಗರು ಯಾವುದ್ಯಾವುದೋ ಮಾಂಸವನ್ನ ತಂದು ಅಡಿಗೆ ಮಾಡಿ ಬಿಸಾಡಿ ಹೋಗುತ್ತಾರೆ. ಆದರೆ ಅಲ್ಲೇ ಇರುವ ಪೊಲೀಸರು ಏನ್ ಮಾಡುತ್ತಾರೋ ಗೊತ್ತಿಲ್ಲ ಎಂದು ಪೊಲಿಸರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ

    ಮುಸ್ಲಿಮರು (Muslims) ನಮಾಜ್ ಮಾಡುವ 200 ಮೀಟರ್ ದೂರದಲ್ಲಿ ಬಹುಸಂಖ್ಯಾತ ಹಿಂದೂಗಳು ತಿನ್ನುವ ಪದಾರ್ಥವನ್ನ ತಿನ್ನುವುದಕ್ಕೆ ಬಿಡುತ್ತಾರಾ ಹಿಂದೂ ಬ್ರಿಗೇಡ್ ಪ್ರಶ್ನಿಸಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಡಳಿತ ಅಲ್ಲಿ ಬ್ಯಾರಿಕೇಡ್ ಹಾಕಿ, ಶೆಡ್‌ಗೆ ಬಂದೋಬಸ್ತ್ ಮಾಡಿದೆ. ಆದರೆ ಇದು ಕಣ್ಣೋರೆಸುವ ತಂತ್ರ. ಇನ್ಮುಂದೆ ಹೀಗಾದರೆ ಉತ್ತರ ಕೊಡೋದಕ್ಕೆ ನಾವು ಸಿದ್ಧ ಎಂದು ಎಚ್ಚರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನ ವಕ್ಫ್‌ ಬೋರ್ಡ್‍ನ ಆಸ್ತಿ- ದಾಖಲೆ ಬಿಡುಗಡೆ ಮಾಡಿದ ಶಫಿ ಸಅದಿ

    ಈದ್ಗಾ ಮೈದಾನ ವಕ್ಫ್‌ ಬೋರ್ಡ್‍ನ ಆಸ್ತಿ- ದಾಖಲೆ ಬಿಡುಗಡೆ ಮಾಡಿದ ಶಫಿ ಸಅದಿ

    ಬೆಂಗಳೂರು: ಈದ್ಗಾ ಮೈದಾನ ವಿವಾದ ಇನ್ನೇನು ಅಂತ್ಯ ಕಂಡಿದೆ ಎನ್ನುವಷ್ಟರಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ವಕ್ಫ್ ಬೋರ್ಡ್‍ದ್ದೇ ಆಸ್ತಿ ಎಂದು ದಾಖಲೆಯಲ್ಲಿ ಉಲ್ಲೇಖವಾಗಿರುವುದರ ಬಗ್ಗೆ ವಕ್ಫ್ ಬೋರ್ಡ್ ಅಧ್ಯಕ್ಷ ದಾಖಲೆ ಬಿಡುಗಡೆ ಮಾಡಿದ್ದಾರೆ.

    ವಿವಾದಿತ ಈದ್ಗಾ ಮೈದಾನವು ವಕ್ಫ್ ಬೋರ್ಡ್‍ದ್ದೇ ಆಸ್ತಿ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇದರ ಜೊತೆಗೆ ಬಿಬಿಎಂಪಿ ಅವರು ಕಳೆದುಹೋದ ಆಟದ ಮೈದಾನವನ್ನು ಹುಡುಕಲಿ. ಅದು ಬಿಟ್ಟು ನಮ್ಮ ವಕ್ಫ್ ಆಸ್ತಿಯನ್ನು ಆಟದ ಮೈದಾನ ಎನ್ನುವುದು ಬೇಡ ಎಂದಿದ್ದಾರೆ.

    ಮೈಸೂರು ಸಂಸ್ಥಾನದ ಆಡಳಿತ ಕಾಲದಲ್ಲಿ ಈ ಸ್ವತ್ತಿನ ಮಾಲೀಕರು ಕಾರ್ಪೋರೇಷನ್ ಎಂದು ಉಲ್ಲೇಖವಾಗಿದೆ. ಇನ್ನೊಂದಡೆ ಬಿಬಿಎಂಪಿ ದಾಖಲೆಯಲ್ಲಿ ಬಿಬಿಎಂಪಿ ಆಟದ ಮೈದಾನ ಅಂತ ಉಲ್ಲೇಖವಾಗಿದೆ. ವಕ್ಫ್ ಬೋರ್ಡ್ ದಾಖಲೆಯಲ್ಲೂ ವಕ್ಫ್‌ಗೆ ಸೇರಿದ್ದು ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಭಾರಿ ಗೊಂದಲ ಸೃಷ್ಟಿಯಾಗಿದ್ದು, ಮತ್ತೊಂದು ಆಯಾಮಕ್ಕೆ ಈ ವಿವಾದ ತಲುಪುವ ಲಕ್ಷಣಗಳು ಕಾಣಿಸುತ್ತಿವೆ. ಇದನ್ನೂ ಓದಿ: ಈದ್ಗಾ ಮೈದಾನ ಆಟದ ಮೈದಾನ, ಬಿಬಿಎಂಪಿ ಆಸ್ತಿ: ಹರೀಶ್ ಕುಮಾರ್

    ಈಗಾಗಲೇ ಈದ್ಗಾ ಮೈದಾನ ವಿವಾದ ವಿಚಾರವಾಗಿ ಸಾಲು ಸಾಲು ಸಂಘಟನೆಗಳಿಂದ ಅರ್ಜಿ ಹಾಕಲು ಸಿದ್ಧತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳಿಂದ ಆಗಸ್ಟ್ 15ರಂದು ಕಾರ್ಯಕ್ರಮಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿತ್ತು.

    ಅಷ್ಟೇ ಅಲ್ಲದೇ ಸೋಮವಾರ ಈ ವಿಚಾರ ದೊಡ್ಡದಾಗುತ್ತಿದ್ದಂತೆ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್, ಚಾಮರಾಜಪೇಟೆ ಈದ್ಗಾ ಮೈದಾನವು ಆಟದ ಮೈದಾನವಾಗಿದ್ದು, ಬಿಬಿಎಂಪಿ ಆಸ್ತಿ ಆಗಿದೆ. ಕೋರ್ಟ್ ನಿರ್ದೇಶನದ ಪ್ರಕಾರ ವರ್ಷದಲ್ಲಿ 2 ಬಾರಿ ಪ್ರಾರ್ಥನೆಗೆ ಅವಕಾಶ ಕೊಡಲಾಗುತ್ತಿದೆ. ಕೋರ್ಟ್ ನೀಡಿರುವ 2 ಅವಧಿ ಬಿಟ್ಟು ಅವಕಾಶ ಕೇಳಿದ್ದರೆ ಬೇರೆ ಚಟುವಟಿಕೆಗೆ ಅವಕಾಶ ಕೊಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    BBMP

    ಆದರೆ ಇದೀಗ ಈದ್ಗಾ ವಿವಾದದಲ್ಲಿ ಬಿಬಿಎಂಪಿ ಯೂಟರ್ನ್ ಹೊಡೆದಿದೆ. ಈ ಬಗ್ಗೆ ಜಂಟಿ ಆಯುಕ್ತ ಶಿವಸ್ವಾಮಿ ಮಾತನಾಡಿ, ಕಾರ್ಯಕ್ರಮ ನಡೆಸಬಾರದೆಂದು ಸುಪ್ರೀಂ ಆದೇಶ ಇದೆ. ವಕ್ಫ್ ಬೋರ್ಡ್ ಏನ್ ಹೇಳ್ತಾರೆ ಪೇಪರ್ ಕೊಡಲಿ ಪರಿಶೀಲನೆ ಮಾಡಲಾಗುತ್ತದೆ. ಇದಾದ ಮೇಲೆ ಮತ್ತೆ ಬಿಬಿಎಂಪಿ ಅಂತಿಮ ನಿರ್ಧಾರ ಮಾಡಲಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು, ಇದು ಆಟದ ಮೈದಾನ ಅಂತ ಬಿಬಿಎಂಪಿಯೇ ಹೇಳಿದ ಮೇಲೆ ಮತ್ತೆ ಪರಿಶೀಲನೆ ಮಾಡುವುದು ಏನಿದೆ. ವಕ್ಪ್ ಬೋರ್ಡ್ ಜೊತೆ ಯಾಕೆ ಪರಿಶೀಲನೆ ನಡೆಸಬೇಕು ಎಂದು ಬಿಬಿಎಂಪಿ ವಿರುದ್ಧ ಕಿಡಿಕಾರಿದೆ. ಇದನ್ನೂ ಓದಿ: ಮಸೀದಿ ಆಯ್ತು ಈಗ ಈದ್ಗಾ ಮೈದಾನ – ಏನಿದು ವಿವಾದ? ಹಿಂದೂಗಳ ವಾದವೇನು? ಬಿಬಿಎಂಪಿ ದಾಖಲೆಯಲ್ಲಿ ಏನಿದೆ?

  • ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    ಬೆಂಗಳೂರು: ಈದ್ಗಾ ಮೈದಾನ ವಿವಾದ ವಿಚಾರವಾಗಿ ಸಾಲು ಸಾಲು ಸಂಘಟನೆಗಳಿಂದ ಇಂದು ಅರ್ಜಿ ಹಾಕಲು ಸಿದ್ಧತೆ ಮಾಡಿಕೊಂಡಿದೆ. ಇದರಿಂದಾಗಿ ಚಾಮರಾಜಪೇಟೆ ಪೊಲೀಸರು ಇಕ್ಕಟ್ಟಿಗೆ ಸಿಲುಕಿದಂತೆ ಆಗಿದೆ.

    ಈಗಾಗಲೇ ಈದ್ಗಾ ಮೈದಾನ ಬಿಬಿಎಂಪಿಯ ಆಟದ ಮೈದಾನವಾಗಿದೆ. ಆದರೆ ಇಲ್ಲಿ ಸಾರ್ವಜನಿಕ ಚಟುವಟಿಕೆಗೆ ನಿಷೇಧ ಹೇರಿ, ಒಂದು ಸಮೂದಾಯಕ್ಕೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ಕೆಲ ಹಿಂದೂಪರ ಸಂಘಟನೆಗಳು ಧ್ವನಿ ಎತ್ತಿದ್ದವು.

    ಈ ವಿಚಾರ ದೊಡ್ಡದಾಗುತ್ತಿದ್ದಂತೆ ಸೋಮವಾರ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್, ಚಾಮರಾಜಪೇಟೆ ಈದ್ಗಾ ಮೈದಾನವು ಆಟದ ಮೈದಾನವಾಗಿದ್ದು, ಬಿಬಿಎಂಪಿ ಆಸ್ತಿ ಆಗಿದೆ. ಕೋರ್ಟ್ ನಿರ್ದೇಶನದ ಪ್ರಕಾರ ವರ್ಷದಲ್ಲಿ 2 ಬಾರಿ ಪ್ರಾರ್ಥನೆಗೆ ಅವಕಾಶ ಕೊಡಲಾಗುತ್ತಿದೆ. ಕೋರ್ಟ್ ನೀಡಿರುವ 2 ಅವಧಿ ಬಿಟ್ಟು ಅವಕಾಶ ಕೇಳಿದ್ದರೆ ಬೇರೆ ಚಟುವಟಿಕೆಗೆ ಅವಕಾಶ ಕೊಡಲಾಗುತ್ತದೆ. ಆದರೆ ಕೋಮು ಸೌಹರ್ದತೆ ಹಾಳಾಗುವ ವಿಚಾರ ಹಾಗೂ ಕಾನೂನು ವಿಚಾರ ತೊಂದರೆ ಆದರೆ ಕೂಡಲೇ ಪೊಲೀಸ್ ಮೊರೆ ಹೋಗುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು.

    ಬಿಬಿಎಂಪಿಯಿಂದ ಈ ಹೇಳಿಕೆ ಬರುತ್ತಿದ್ದಂತೆ ಧಾರ್ಮಿಕ, ರಾಷ್ಟ್ರೀಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಹಲವು ಹಿಂದೂ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಅರ್ಜಿ ಸಲ್ಲಿಸಲಿದೆ.

    ಇಕ್ಕಟ್ಟಿನಲ್ಲಿ ಪೊಲೀಸರು: ಬಿಬಿಎಂಪಿಯಿಂದ ಅನುಮತಿ ಕೊಟ್ಟರೆ, ಪೊಲೀಸ್ ಠಾಣೆಯಿಂದ ಅನುಮತಿ ಕೊಡುವುದಾ ಬೇಡ್ವಾ ಎಂಬುದರ ಬಗ್ಗೆ ಗೊಂದಲ ಇದೀಗ ಉಂಟಾಗಿದ್ದು, ಇದರಿಂದಾಗಿ ಚಾಮರಾಜಪೇಟೆ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಬಗ್ಗೆ ಅಲ್ಲಿನ ಪೊಲೀಸರು ವಲಯದ ಡಿಸಿಪಿ ಹಾಗೂ ಪೊಲೀಸ್ ಕಮಿಷನರ್ ಜೊತೆ ಚರ್ಚೆ ಮಾಡಲಿದ್ದಾರೆ.

    ವಿವಾದದ ಬೆನ್ನಲ್ಲೇ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಮೈದಾನದ ಸುತ್ತಮುತ್ತ ಪೊಲೀಸ್ ವಾಹನಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನ ಆಟದ ಮೈದಾನ, ಬಿಬಿಎಂಪಿ ಆಸ್ತಿ: ಹರೀಶ್ ಕುಮಾರ್

    ಈಗಾಗಲೇ ಈದ್ಗಾ ಮೈದಾನದಲ್ಲಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡದಿದ್ದರೆ, ಈದ್ಗಾ ಮೈದಾನವನ್ನು ನೆಲಸಮ ಮಾಡುತ್ತೇವೆ ಎಂದು ವಿಶ್ವ ಸನಾತನ ಪರಿಷತ್ ಸಂಘದ ಅಧ್ಯಕ್ಷ ಎಸ್. ಭಾಸ್ಕರನ್ ಎಚ್ಚರಿಸಿದ್ದರು. ಕೋರ್ಟ್ ಆದೇಶವಿದ್ದರೂ ಧಾರ್ಮಿಕ ಆಚರಣೆಗೆ ಪೊಲೀಸರು ಅವಕಾಶ ಕೊಡುತ್ತಿಲ್ಲ. ಮುಸ್ಲಿಂ ಸಮುದಾಯದವರು ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧಿಸುತ್ತಿಲ್ಲ. ಆದರೆ, ಕ್ಷೇತ್ರದ ಶಾಸಕರು ಪೊಲೀಸರ ಮೂಲಕ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಜಮೀರ್ ವಿರುದ್ಧ ಕಿಡಿಕಾರಿದ್ದರು. ಇದನ್ನೂ ಓದಿ: ಮಸೀದಿ ಆಯ್ತು ಈಗ ಈದ್ಗಾ ಮೈದಾನ – ಏನಿದು ವಿವಾದ? ಹಿಂದೂಗಳ ವಾದವೇನು? ಬಿಬಿಎಂಪಿ ದಾಖಲೆಯಲ್ಲಿ ಏನಿದೆ?

    ಜೊತೆಗೆ ಕೋರ್ಟ್‍ನಿಂದ ಆದೇಶ ಬಂದರೂ, ಈ ಜಾಗದಲ್ಲಿ ರಾಷ್ಟ್ರಧ್ವಜವನ್ನಾಗಲಿ, ನಾಡಧ್ವಜವನ್ನಾಗಿ ಹಾರಿಸಲು ಪೆÇಲೀಸರು ಬಿಟ್ಟಿಲ್ಲ. ಮುಸ್ಲಿಂ ಸಮುದಾಯಕ್ಕೆ ಹಾಗೂ ಈ ಮೈದಾನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಲಯ ಹೇಳಿದರೂ, ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಪಾಲಿಕೆಯ ಕಂದಾಯ ಅಧಿಕಾರಿಗಳನ್ನು ಹೆದರಿಸಿ, ಈದ್ಗಾ ಮೈದಾನವನ್ನು ಖಾತೆ ಮಾಡಿಸಿದ್ದಾರೆ ಅಂತ ಹಿಂದೂ ಸಂಘಟನೆಯ ಕೆಲವರು ಆರೋಪಿಸಿದ್ದರು.

  • ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    ಬೆಂಗಳೂರು: ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಜ್ಜಾಗಿದೆ.

    ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವೆಸಬೇಕು ಎಂದು ಅಭಿಯಾನ ನಡೆಸಿದ್ದರು. ಅದರಂತೆ ಬುಧವಾರ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.

    ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ. ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಹಿಂದೂ ಪರ ಸಂಘಟನೆ ತಯಾರಿ ನಡೆಸಿದೆ. ಇದನ್ನೂ ಓದಿ: ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ: ರಾಜ್ ಠಾಕ್ರೆ

    ಎಂಎನ್‍ಎಸ್ ಹೋರಾಟ
    ಮಸೀದಿಗಳ ಮುಂದೆ ಧ್ವನಿ ವರ್ಧಕಗಳನ್ನು ತೆಗೆಸದಿದ್ದರೆ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರದ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಶನಿವಾರ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಭಾನುವಾರ ಮುಂಬೈನ ಘಾಟ್‍ಕೋಪರ್‍ನಲ್ಲಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಚೇರಿಯಲ್ಲಿ ಧ್ವನಿವರ್ಧಕದಿಂದ ಹನುಮಾನ್ ಚಾಲೀಸ್ ನುಡಿಸಲಾಗಿದೆ.

    ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಠಾಕ್ರೆ ಧ್ವನಿವರ್ಧಕಗಳನ್ನು ಬಳಸುವ ಮಸೀದಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಧ್ವನಿವರ್ಧಕಗಳನ್ನು ತೆಗೆದು ಹಾಕಿ. ಇಲ್ಲದಿದ್ದರೆ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾ ಕಟ್ ಎಂದರೇನು?

    ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲೇ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಗಳಲ್ಲಿ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ, ಮಕ್ಕಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.

  • ಹಿಜಬ್-ಕೇಸರಿ ವಿವಾದ ಬೆನ್ನಲ್ಲೇ ಶುರುವಾಯ್ತು ಸಿಂಧೂರ ಚಳವಳಿ

    ಹಿಜಬ್-ಕೇಸರಿ ವಿವಾದ ಬೆನ್ನಲ್ಲೇ ಶುರುವಾಯ್ತು ಸಿಂಧೂರ ಚಳವಳಿ

    ಕಲಬುರಗಿ: ಹಿಜಬ್, ಕೇಸರಿ ವಿವಾದದ ಜೊತೆಗೆ ಇದೀಗ ಬಿಂದಿ ಚರ್ಚೆ ಪ್ರಾರಂಭವಾಗಿದೆ. ಬಿಂದಿ ಹಾಕಿಕೊಂಡು ಶಾಲೆಗೆ ಬರುತ್ತಾರೆ ಎಂಬ ಮುಸ್ಲಿಂ ವಿದ್ಯಾರ್ಥಿನಿಯರ ಪ್ರಶ್ನೆಗೆ ಆಕ್ರೋಶ ವ್ಯಕ್ತಪಡಿಸಿ ಕಲಬುರಗಿಯಲ್ಲಿ ಸಿಂಧೂರ ಚಳವಳಿ ಪ್ರಾರಂಭವಾಗಿದೆ.

    ನಗರದ ಐತಿಹಾಸಿಕ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹಿಂದೂಪರ ಸಂಘಟನೆಯ ಮಹಿಳೆಯರಿಂದ ಸಿಂಧೂರ ಚಳವಳಿ ಆರಂಭವಾಗಿದೆ. ಬಿಜೆಪಿ ಮುಖಂಡರಾದ ಹಿಂದೂ ಪರ ಸಂಘಟನೆಯ ಕಾರ್ಯಕರ್ತೆ ದಿವ್ಯಾ ಹಾಗರಗಿ ನೇತೃತ್ವದಲ್ಲಿ ಸಿಂಧೂರ ಚಳವಳಿ ಆರಂಭವಾಗಿದ್ದು, ಹಿಂದೂ ಸಂಸ್ಕೃತಿಯ ಪ್ರಕಾರ ಮಹಿಳೆಯರಿಗೆ ಕೇಸರಿ ಶಾಲು ಹಾಕಿ, ಅರಿಸಿಣ-ಕುಂಕುಮ ಹಚ್ಚಿ, ಬಳೆ ಕೊಟ್ಟು, ಹೂವು ನೀಡಿ ಸಿಂಧೂರ ಚಳವಳಿಗೆ ಚಾಲನೆ ನೀಡಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತೆ ದಿವ್ಯಾ ಹಾಗರಗಿ, ಸಿಂಧೂರ ಹಚ್ಚಿಕೊಳ್ಳುವುದು ನಮ್ಮ ಧರ್ಮದ ಸಂಸ್ಕೃತಿ ಆಗಿದೆ. ಹಿಂದೂ ಧರ್ಮದ ಸಂಸ್ಕೃತಿ-ಪರಂಪರೆಯಂತೆ ನಾವು ನಡೆಯುತ್ತೇವೆ ಎಂದ ಅವರು, ಹಿಜಬ್ ಪ್ರಕರಣವು ನ್ಯಾಯಲಯದ ಅಂಗಳದಲ್ಲಿ ಇರುವುದರಿಂದ ಮಧ್ಯಂತರ ಆದೇಶವನ್ನು ಪಾಲನೆ ಮಾಡುತ್ತಿದ್ದು, ಎಲ್ಲರೂ ತೀರ್ಪು ಪಾಲನೆ ಮಾಡಬೇಕು ಎಂದು ನುಡಿದರು. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್

    ಮುಂಬರುವ ದಿನಗಳಲ್ಲಿ ಸಿಂಧೂರ ಚಳವಳಿಯೂ ಸಿಂದಗಿ ಅಂಬಾಬಾಯಿ ದೇವಸ್ಥಾನ, ಕೋರಂಟಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಸಿಣ, ಕುಂಕುಮ ಕೊಡುವ ಮೂಲಕ ನಡೆಯಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದಾವುದ್ ಅಲ್ಲ, ದಾವುದ್ ಅಪ್ಪ ಬಂದ್ರು ಕೂಡ ಏನು ಮಾಡಲು ಆಗಲ್ಲ: ಪ್ರಮೋದ್ ಮುತಾಲಿಕ್

    ಈ ಸಂದರ್ಭದಲ್ಲಿ ಭಾಗೀರಥಿ ಗುನ್ನಾಪುರ, ಸವಿತಾ ಪಾಟೀಲ್, ಸಿದ್ದಮ್ಮಾ, ಇಂದಿರಾ ಸೇರಿದಂತೆ ಅನೇಕ ಹಿಂದೂ ಪರ ಸಂಘಟನೆಯ ಮುಖಂಡರು, ಬಿಜೆಪಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

  • ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ- ಚೀನಾ ವಸ್ತುಗಳನ್ನ ಸುಟ್ಟ ಹಿಂದೂಪರ ಸಂಘಟನೆ

    ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ- ಚೀನಾ ವಸ್ತುಗಳನ್ನ ಸುಟ್ಟ ಹಿಂದೂಪರ ಸಂಘಟನೆ

    ಮಡಿಕೇರಿ: ಇಂಡೋ-ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂಪರ ಸಂಘಟನೆ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

    ನಗರದ ಜನರಲ್ ತಿಮ್ಮಯ್ಯ ಸರ್ಕಲ್‍ನಲ್ಲಿ ದೇಶ ಅಭಿಮಾನಿಗಳು ಪ್ರತಿಭಟನೆ ಮಾಡಿದರು. ವಿನಃ ಕಾರಣ ಗಡಿಯಲ್ಲಿ ತಗಾದೆ ತೆಗೆದು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ ಎಂದು ಚೀನಾ ವಸ್ತುಗಳನ್ನು ಸುಟ್ಟು ಕುತಂತ್ರಿ ಚೀನಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಜನರಲ್ ತಿಮ್ಮಯ್ಯ ವೃತ್ತದಿಂದ ಯುದ್ಧ ಸ್ಮಾರಕದ ಬಳಿ ಮೆರವಣಿಗೆಯಲ್ಲಿ ಹೊರಟ ಸಂಘಟನೆಯ ಪ್ರಮುಖರು ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

    ಚೀನಾ, ನೇಪಾಳ ಹಾಗೂ ಪಾಕಿಸ್ತಾನ ಮೊದಲಿನಿಂದಲೂ ಗಡಿ ವಿಚಾರಕ್ಕೆ ತಕರಾರು ತೆಗೆಯುತ್ತಿವೆ. ಪರಿಸ್ಥಿತಿಯ ಲಾಭ ಪಡೆದುಕೊಂಡು ದೇಶದ ಮೇಲೆ ಯುದ್ಧ ಸಾರಲು ಅವಣಿಸುತ್ತಿವೆ. ದೇಶದ ಭದ್ರತೆಯ ವಿಷಯಕ್ಕೆ ಬಂದಾಗ ಭಾರತೀಯರು ಸಂಘಟಿತ ಹೋರಾಟ ಮಾಡುತ್ತೇವೆ. ಭಾರತದ ಸಾರ್ವಭೌಮತೆ ಹಾಗೂ ಸೈನಿಕ ಸಾಮರ್ಥ್ಯ ಹಿಂದಿನಂತೆ ಇಲ್ಲ. 1964ರ ಭಾರತ ಬಹಳ ಬದಲಾಗಿದೆ. ದೇಶದ ಭದ್ರತೆಗೆ ಧಕ್ಕೆ ಎದುರಾದರೆ ಎಂದಿಗೂ ಸಹಿಸುವುದಿಲ್ಲ ಎಂದು ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

  • ಅಮೂಲ್ಯ ದೇಶದ್ರೋಹಿ ಹೇಳಿಕೆಗೆ ರೊಚ್ಚಿಗೆದ್ದ ಹಿಂದೂಪರ ಸಂಘಟನೆಗಳು – ಮನೆ ಮೇಲೆ ಕಲ್ಲು ತೂರಾಟ

    ಅಮೂಲ್ಯ ದೇಶದ್ರೋಹಿ ಹೇಳಿಕೆಗೆ ರೊಚ್ಚಿಗೆದ್ದ ಹಿಂದೂಪರ ಸಂಘಟನೆಗಳು – ಮನೆ ಮೇಲೆ ಕಲ್ಲು ತೂರಾಟ

    – ಅಮೂಲ್ಯ ತಂದೆ, ಮನೆಗೆ ಪೊಲೀಸ್ ಭದ್ರತೆ

    ಚಿಕ್ಕಮಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದ ಅಮೂಲ್ಯ ಘೋಷಣೆ ಹಿಂದೂಪರ ಸಂಘಟನೆಗಳನ್ನ ಕೆರಳಿಸಿದೆ. ಚಿಕ್ಕಮಗಳೂರಿನ ಕೊಪ್ಪದ ಶಿವಪುರದಲ್ಲಿರುವ ಅಮೂಲ್ಯ ನಿವಾಸಕ್ಕೆ ಹಿಂದೂಪರ ಸಂಘಟನೆಗಳು ಮುತ್ತಿಗೆ ಹಾಕಿ, ಮನೆ ಮೇಲೆ ಕಲ್ಲು, ಇಟ್ಟಿಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಗಳು ಮಾಡಿದ್ದು ತಪ್ಪು, ಅವಳ ಕೈ-ಕಾಲು ಮುರಿಯಲಿ: ಅಮೂಲ್ಯ ತಂದೆ

    ಇತ್ತ ಹಿಂದೂ ಪರ ಸಂಘಟನೆಗಳು ಮನೆ ಮೇಲೆ ಕಲ್ಲು ತೂರಾಟ ಮಾಡುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದು, ಅಮೂಲ್ಯ ತಂದೆ ವಾಜಿ ಹಾಗೂ ಮನೆಗೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. 25ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ದೇಶದ್ರೋಹ ಘೋಷಣೆ ಪ್ರಕರಣ- ಪರಪ್ಪನ ಅಗ್ರಹಾರಕ್ಕೆ ಅಮೂಲ್ಯ ಶಿಫ್ಟ್

    ಅಷ್ಟೇ ಅಲ್ಲದೇ ಅಮೂಲ್ಯ ಹೇಳಿಕೆ ಖಂಡಿಸಿ ಇಂದು ಚಿಕ್ಕಮಗಳೂರಿನ ಜಯಪುರ, ಬಾಳೆಹೊನ್ನೂರಿನಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ಪ್ರತಿಭಟನೆಗೆ ಕರೆ ನೀಡಿದೆ. ಹಾಗೆಯೇ ಈಕೆ ವಿರುದ್ಧ ಸಚಿವ ಸಿ.ಟಿ ರವಿ ಅವರು ಕೂಡ ಆಕ್ರೋಶ ಹೊರಹಾಕಿ ಅವಳು ಯಾವ ಸಂಘಟನೆಗೆ ಸೇರಿದವಳು, ಎಲ್ಲಿ ತರಭೇತಿ ಪಡೆದಿದ್ದಾಳೆಂದು ತನಿಖೆಯಾಗಬೇಕೆಂದು ಎಂದು ಆಗ್ರಹಿಸಿದ್ದಾರೆ. ಮಗಳ ದೇಶದ್ರೋಹಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅಮೂಲ್ಯ ತಂದೆ, ಅವಳು ಮಾಡಿದ್ದು ತಪ್ಪು, ಆಕೆಯ ಕೈಕಾಲು ಮುರೀರಿ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಮುಂದೇನು ಮಾತನಾಡುತ್ತಿದ್ದಳು ಎಂದು ಕಾದು ನೋಡಬೇಕಿತ್ತು: ಅಮೂಲ್ಯ ತಾಯಿ

    ಬೆಂಗಳೂರು, ಮಂಗಳೂರು, ಬಳ್ಳಾರಿಗಳಲ್ಲಿ ಎವಿವಿಪಿ ಕಾರ್ಯಕರ್ತರು ಅಮೂಲ್ಯ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅತ್ತ ಯಾದಗಿರಿಯ ಯೋಧ ದೇವೇಂದ್ರ ಅವರು ಪ್ರತಿಕ್ರಿಯಿಸಿ, ನಾವು ಗಡಿಯಲ್ಲಿ ನಿಂತು ಭಾರತಾಂಬೆಯ ಸೇವೆ ಮಾಡುತ್ತೇವೆ. ಆದರೆ ದೇಶದ ಒಳಗಡೆ ಅಮೂಲ್ಯನಂತ ವಿಕೃತ ಮನಸ್ಸಿನವರು ಇದ್ದಾರೆ ಅಂತ ಕಿಡಿಕಾರಿದ್ದಾರೆ.

  • ಬಾವುಟ ತೆರವುಗೊಳಿಸಿ ತ್ರಿವರ್ಣ ಧ್ವಜ ಕಟ್ಟಿಸಿದ ಹಿಂದೂಪರ ಸಂಘಟನೆ ಕಾರ್ಯಕರ್ತರು

    ಬಾವುಟ ತೆರವುಗೊಳಿಸಿ ತ್ರಿವರ್ಣ ಧ್ವಜ ಕಟ್ಟಿಸಿದ ಹಿಂದೂಪರ ಸಂಘಟನೆ ಕಾರ್ಯಕರ್ತರು

    ರಾಮನಗರ: ಸೋಷಿಯಲ್ ಮೀಡಿಯಾದಲ್ಲಿ ಕೋಮು ಸೌಹಾರ್ದ ಕದಡುವ ಪೋಸ್ಟ್ ಮಾಡಿದ್ದಾನೆಂದು ವ್ಯಕ್ತಿಯೊಬ್ಬನ ವಿರುದ್ಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಂಗಡಿಗಳನ್ನು ಮುಚ್ಚಿಸಿ ಪಟ್ಟಣಾದ್ಯಂತ ಸಿಎಎ ಪರ ಜನಜಾಗೃತಿ ಜಾಥಾ ನಡೆಸಿದ ಘಟನೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ.

    ಕೇರಳ ಮೂಲದ ಮಹಮದ್ ಅಬ್ಜಲ್ ತನ್ನ ಫೇಸ್‍ಬುಕ್ ಪೇಜಿನಲ್ಲಿ ಕೆಲವು ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ್ದಲ್ಲದೇ, ಪಾಕಿಸ್ತಾನದ ಧ್ವಜವನ್ನ ಹೋಲುವ ಬಾವುಟವೊಂದನ್ನು ಸಹ ಪೋಸ್ಟ್ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಆರ್‌ಎಸ್ಎಸ್ ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಬ್ಜಲ್‍ನ ಅಂಗಡಿಯ ಮುಂದೆ ಜಮಾಯಿಸಿ ದಬಾಯಿಸಿದ್ದಾರೆ. ಆಗ ಭಯಬೀತನಾದ ಅಬ್ಜಲ್ ನೇರವಾಗಿ ಬಿಡದಿ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆಯ ಮನವಿ ಮಾಡಿದ್ದಾರೆ.

    ಕೇರಳ ಮೂಲದ ಮಹಮದ್ ಅಬ್ಜಲ್ ಇಂಡಿಯನ್ ಮುಸ್ಲಿಂ ಲೀಗ್ ಪಕ್ಷದ ಮುಖಂಡನಾಗಿ ಗುರುತಿಸಿಕೊಂಡಿದ್ದರು. ವ್ಯಾಪಾರದ ಹಿನ್ನೆಲೆಯಲ್ಲಿ ರಾಮನಗರದ ಬಿಡದಿಗೆ ಕಳೆದ ಹಲವು ವರ್ಷಗಳ ಹಿಂದೆಯೇ ಬಂದಿರುವ ಅಬ್ಜಲ್ ಐದಾರು ಅಂಗಡಿಗಳನ್ನು ನಡೆಸುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಂಗಡಿ ಮೇಲೆ ಕಟ್ಟಿದ್ದ ಮುಸ್ಲಿಂ ಸಂಘಟನೆಯ  ಬಾವುಟ ತೆರವುಗೊಳಿಸಿದ್ದಾರೆ. ಅಲ್ಲದೇ ತಮ್ಮ ಬಳಿಯಿದ್ದ ತ್ರಿವರ್ಣ ಧ್ವಜವನ್ನು ಅಂಗಡಿ ಮೇಲೆ ಕಟ್ಟುವಂತೆ ಹೇಳಿ ಕಟ್ಟಿಸಿದ್ದಾರೆ.

    ಬಿಡದಿ ಪಟ್ಟಣದಾದ್ಯಂತ ಬೀದಿ ಬೀದಿಗಳಲ್ಲಿ ತೆರಳಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಕೂಡ ನಡೆಸಿದ್ದಾರೆ. ಸಿಎಎ, ಸಿಎಬಿ, ಎನ್‌ಆರ್‌ಸಿ ದೇಶದ ಮುಸ್ಲಿಮರ ವಿರುದ್ಧವಾಗಿಲ್ಲ, ಮೂರು ದೇಶಗಳಿಂದ ಬಂದ ಅಲ್ಪಸಂಖ್ಯಾತರಿಗೆ ಪೌರತ್ವ ಕೊಡುವುದಾಗಿದೆ ಎಂದು ಜಾಗೃತಿ ಜಾಥಾದಲ್ಲಿ ಸಾರ್ವಜನಿಕರಲ್ಲಿ ತಿಳಿಸಿದರು.

    ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ಹೆದರಿ ಪೊಲೀಸ್ ಠಾಣೆಗೆ ತೆರಳಿದ್ದ ಅಬ್ಜಲ್ ವಿರುದ್ಧ ಬಿಡದಿ ಠಾಣೆಯಲ್ಲಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್ ಬುಕ್‍ನಲ್ಲಿ ಪೋಸ್ಟ್‌ಗಳು ಮಲೆಯಾಳಂ, ಉರ್ದು ಭಾಷೆಯಲ್ಲಿದ್ದು, ಕನ್ನಡಕ್ಕೆ ಅನುವಾದ ಮಾಡಿಸುವ ಕೆಲಸವನ್ನ ಈಗ ಪೊಲೀಸರು ಮಾಡುತ್ತಿದ್ದಾರೆ. ಅಲ್ಲದೇ ಮಹಮದ್ ಅಬ್ಜಲ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.