Tag: ಹಿಂದೂ ದೇವಸ್ಥಾನ

  • ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

    ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

    ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲಿನ ದಾಳಿ ಮುಂದುವರಿದಿದೆ. ಕಳೆದ 2 ದಿನಗಳಲ್ಲಿ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, 8 ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ
    ಎಂದು ವರದಿಯಾಗಿದೆ‌.

    ಮೈಮೆನ್‌ಸಿಂಗ್‌ನ ಹಲುಘಾಟ್ ಉಪಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರದಂದು ಪ್ರತ್ಯೇಕ ಘಟನೆಗಳಲ್ಲಿ ಎರಡು ದೇವಾಲಯಗಳಲ್ಲಿನ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಶುಕ್ರವಾರ ಮುಂಜಾನೆ ಶಕುವಾಯ್ ಯೂನಿಯನ್‌ನಲ್ಲಿರುವ ಬೋಂಡರ್‌ಪಾರಾ ದೇವಾಲಯದಲ್ಲಿ ಎರಡು ವಿಗ್ರಹಗಳನ್ನು ಹಾನಿಗೊಳಿಸಲಾಗಿದೆ ಎಂದು ಹಲುಘಾಟ್ ಪೊಲೀಸ್ ಠಾಣೆಯ ಅಧಿಕಾರಿ ಅಬುಲ್ ಖಯೇರ್ ಹೇಳಿದ್ದಾರೆ. ಈವರೆಗೂ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಮತ್ತು ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಖಯೇರ್ ತಿಳಿಸಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ ಗುರುವಾರ ಮುಂಜಾನೆ ಬೀಳ್‌ದೊರ ಒಕ್ಕೂಟದ ಪೊಲಾಶ್‌ಕಂಡ ಕಾಳಿ ದೇವಸ್ಥಾನದ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ಪೋಲಷ್ಕಂಡ ಗ್ರಾಮದ ನಿವಾಸಿ 27 ವರ್ಷದ ಅಲಾಲ್ ಉದ್ದೀನ್ ಎಂಬಾತನನ್ನು ಪೊಲೀಸರು ನಂತರ ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಶಂಕಿತ ಅಪರಾಧ ಒಪ್ಪಿಕೊಂಡಿದ್ದಾನೆ ಎಂದು ಖಯೇರ್ ಹೇಳಿದರು. ಶಂಕಿತನನ್ನು ಶುಕ್ರವಾರ ಮೈಮೆನ್‌ಸಿಂಗ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ಜೈಲಿಗೆ ಕಳುಹಿಸಲಾಗಿದೆ.

    ದಿನಾಜ್‌ಪುರದ ಬಿರ್‌ಗಂಜ್ ಉಪಜಿಲ್ಲೆಯಲ್ಲಿ ಮಂಗಳವಾರ ಜರ್ಬರಿ ಶಶನ್ ಕಾಳಿ ದೇವಸ್ಥಾನದಲ್ಲಿ ಐದು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿತ್ತು, ಘಟನೆಯು ಗುರುವಾರ ಬೆಳಕಿಗೆ ಬಂದಿತು. ಇಂತಹ ಕೃತ್ಯವನ್ನು ನಾವು ಇಲ್ಲಿ ನೋಡಿಲ್ಲ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಜನಾರ್ದನ್ ರಾಯ್ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪ್ರಭಾರಿ ಅಧಿಕಾರಿ ಅಬ್ದುಲ್ ಗಫೂರ್ ತಿಳಿಸಿದ್ದಾರೆ.

    ಆಗಸ್ಟ್‌ನಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಮತ್ತು ಆಸ್ತಿಗಳ ಮೇಲೆ ದಾಳಿಗಳು ಹೆಚ್ಚಾಗುತ್ತಿರುವ ಮಧ್ಯೆ ಇತ್ತೀಚಿನ ಘಟನೆಗಳು ಬೆಳಕಿಗೆ ಬಂದಿವೆ. ಕಳೆದ ವಾರ ಸುನಮ್‌ಗಂಜ್ ಜಿಲ್ಲೆಯಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಮತ್ತು ಹಿಂದೂ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡಿದ ನಾಲ್ವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

  • ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್‌ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ

    ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್‌ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ

    ಮಂಡ್ಯ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಕ್ಫ್‌ ಆಸ್ತಿ ವಿವಾದ (Waqf Property Controversy) ಇದೀಗ ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಗೂ ಕಾಲಿಟ್ಟಿದೆ.

    ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಎಂಬ ಗ್ರಾಮದಲ್ಲಿ 6 ಗುಂಟೆ ವ್ಯಾಪ್ತಿಯಲ್ಲಿ ಚಿಕ್ಕಮ್ಮ ದೇವಿ ಎಂಬ ದೇವಸ್ಥಾನ ಇದೆ. ಹಲವು ವರ್ಷಗಳ ಹಿಂದೆಯೇ ಈ ದೇವಸ್ಥಾನ ಕಟ್ಟಿಸಿ ಈ ಗ್ರಾಮದ ಜನರು ಚಿಕ್ಕಮ್ಮ ದೇವಿಯನ್ನು ಪೂಜಿಸುತ್ತಾ ಬರುತ್ತಿದ್ದಾರೆ. 2023 ಜುಲೈ 17ರ ವರೆಗೆ ಈ‌ ದೇವಸ್ಥಾನದ 6 ಗುಂಟೆ ಜಾಗದ ಆರ್‌ಟಿಸಿಯಲ್ಲಿ ಬಂಜರು ಎಂದು ಉಲ್ಲೇಖವಾಗಿದೆ, ಅಂದರೆ ಇದು ಸರ್ಕಾರಿ ಜಮೀನು ಎಂದರ್ಥ. ಇನ್ನೊಂದೆಡೆ ಸಾಗುವಳಿ ಕಾಲಂನಲ್ಲಿ ಚಿಕ್ಕಮ್ಮನ ದೇವಸ್ಥಾನ ಎಂದು ಹೆಸರಿತ್ತು. ಆದರೆ ಇದೀಗ ಈ ದೇವಸ್ಥಾನ ಹಾಗೂ ಜಾಗವನ್ನು ವಕ್ಫ್ ಆಸ್ತಿ ಎಂದು ಮಾಡಲಾಗಿದೆ.

    2023 ಜುಲೈ 17ರಲ್ಲಿ ಕೋರ್ಟ್ ಆದೇಶ ಎಂದು ಪಾಂಡವಪುರ ಉಪವಿಭಾಗ ಅಧಿಕಾರಿ ದೇವಸ್ಥಾನದ ಜಾಗವನ್ನು ವಕ್ಛ್ ಆಸ್ತಿ ಎಂದು ಮ್ಯುಟೇಶನ್ ಮಾಡಿದ್ದಾರೆ. ಇದೀಗ ಈ ಗ್ರಾಮಸ್ಥರು ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿಯ ವಿವಾದದ ನಂತರ ದೇವಸ್ಥಾನದ ಸರ್ವೇ ನಂಬರ್‌ನಲ್ಲಿ ಆರ್‌ಟಿಸಿ ನೋಡಿದಾಗ ಇದು ಬೆಳಕಿಗೆ ಬಂದಿದೆ. ಗ್ರಾಮಸ್ಥರ ಗಮನಕ್ಕೆ ಬಾರದೇ ಹಿಂದೂ ದೇವಸ್ಥಾನವನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿರೋದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು!

    ಹಿಂದೂ ದೇವಸ್ಥಾನವನ್ನು ವಕ್ಫ್ ಆಸ್ತಿ ಎಂದು ಮಾಡುವ ಮೂಲಕ ಅಧಿಕಾರಿಗಳು ಬಹುದೊಡ್ಡ ವಂಚನೆ ಮಾಡಿದ್ದಾರೆ. ಇದೀಗ ಮಂಡ್ಯ ಜಿಲ್ಲಾಡಳಿತ ಇದನ್ನು ಹೇಗೆ ಸರಿಪಡಿಸುತ್ತೆ? ಜನರ ಆಕ್ರೋಶವನ್ನು ಹೇಗೆ ಕಡಿಮೆ ಮಾಡುತ್ತೆ ಅನ್ನೋದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ ಮುಗಿಸಿ ಹಿಂತಿರುಗುವ ವೇಳೆ ಕಾರು ಡಿಕ್ಕಿ- ತಂದೆ, ಮಗಳು ಸಾವು

  • ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್‌ಗೆ ಪರಿಷತ್‌ನಲ್ಲಿ ಸೋಲು; ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ

    ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್‌ಗೆ ಪರಿಷತ್‌ನಲ್ಲಿ ಸೋಲು; ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ

    – ಮೇಲ್ಮನೆಯಲ್ಲಿ ದೋಸ್ತಿಗಳಿಂದ ಜೈಶ್ರೀರಾಮ್ ಘೋಷಣೆ
    – ಕಾಂಗ್ರೆಸ್ ಶಾಸಕರು, ಸಚಿವರಿಂದ ಜೈಭೀಮ್, ಭಾರತ್ ಮಾತಾಕಿ ಜೈ ಘೋಷಣೆ

    ಬೆಂಗಳೂರು: ಬಿಜೆಪಿ-ಕಾಂಗ್ರೆಸ್ (BJP – Congress) ನಡುವೆ ಸಂಘರ್ಷಕ್ಕೆ ಕಾರಣವಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್‌ನಲ್ಲಿ (Legislative Council) ತಿರಸ್ಕೃತಗೊಂಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.

    ಸರ್ಕಾರದ ತಿದ್ದುಪಡಿ ಮಸೂದೆ ತಿರಸ್ಕೃತಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈಶ್ರೀರಾಮ್ (Jai Sriram) ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಅಲ್ಲಿದ್ದ ಬೆರಳೆಣಿಕೆಯಷ್ಟು ಕಾಂಗ್ರೆಸ್ ಸದಸ್ಯರು ಜೈಭೀಮ್, ಭಾರತ್ ಮಾತಾಕಿ ಜೈ ಎಂಬ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

    ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಈ ಮಸೂದೆಯನ್ನು ಮಂಡಿಸುತ್ತಲೇ ನಿರೀಕ್ಷೆಯಂತೆಯೇ ಬಿಜೆಪಿ-ಜೆಡಿಎಸ್ ಶಾಸಕರು ತೀವ್ರವಾಗಿ ವಿರೋಧಿಸಿದ್ರು. ಒಂದು ಕೋಟಿ ರೂ.ಗಿಂತಲೂ ಅಧಿಕ ಆದಾಯ ಬರುವ ದೇವಾಲಯಗಳಲ್ಲಿ 10% ಹಣ ಪಡೆಯೋ ಸರ್ಕಾರದ ನಿಲುವು ಸರಿಯಲ್ಲ. ಅಸಲಿಗೆ ದೇವಾಲಯದ ಹಣ ಯಾಕೆ ಪಡೆದುಕೊಳ್ತೀರಾ? ಸರ್ಕಾರವೇ 100 ಕೋಟಿ ಹಣ ಬಿಡುಗಡೆ ಮಾಡಲಿ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ

    ಜೆಡಿಎಸ್ ಸದಸ್ಯ ಶರವಣ, ಈ ಸರ್ಕಾರ ದೇವರ ಹಣದಲ್ಲೂ ಪರ್ಸೆಂಟೇಜ್ ಪಡೆಯೋಕೆ ಹೋಗ್ತಿದೆ ಎಂದು ಆರೋಪಿಸಿದರು. ಇದಕ್ಕೆ ಆಡಳಿತ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತವಾಯ್ತು. ಆದ್ರೂ ತಗ್ಗದ ವಿಪಕ್ಷಗಳು ಈ ಮಸೂದೆಯನ್ನ ವಾಪಸ್ ಪಡೆಯಬೇಕು, ಇಲ್ಲವೇ ಮತಕ್ಕೆ ಹಾಕಬೇಕು ಎಂದು ಪಟ್ಟು ಹಿಡಿದು ಕುಳಿತವು. ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ತಣ್ಣಗಾದರು. ಕೆಲ ತಿದ್ದುಪಡಿಗಳೊಂದಿಗೆ ಸೋಮವಾರ ಮತ್ತೆ ಮಂಡಿಸುತ್ತೇವೆ ಎಂಬ ಸಚಿವರ ಮಾತಿಗೆ ಉಪಸಭಾಪತಿಗಳು ಆಕ್ಷೇಪ ವ್ಯಕ್ತಪಡಿಸಿದರು. ಹಾಗೆ ಮಾಡಲು ಆಗಲ್ಲ ಎಂದು ಸೂಚನೆ ನೀಡಿದರು. ಕೊನೆಗೆ ಉಪಸಭಾಪತಿಗಳು ಮಸೂದೆಯನ್ನು ಮತಕ್ಕೆ ಹಾಕಿದ್ದು, ಸರ್ಕಾರಕ್ಕೆ ಸೋಲಾಯಿತು.

    ಸರ್ಕಾರದ ವಿರುದ್ಧವೇ ಖಂಡನಾ ನಿರ್ಣಯ:
    ಕೇಂದ್ರದ ವಿರುದ್ಧ ಎರಡು ನಿರ್ಣಯಗಳನ್ನು ಮಂಡಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಗುರುವಾರ ವಿಪಕ್ಷಗಳಿಗೆ ಶಾಕ್ ನೀಡಿತ್ತು. ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಮಂಡಿಸುವ ಮೂಲಕ ಬಿಜೆಪಿ ಟಕ್ಕರ್ ನೀಡಿದೆ. ಸರ್ಕಾರದ ಹಣಕಾಸು ನೀತಿ ಸರಿಯಿಲ್ಲ ಮತ್ತು ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡ್ತಿದ್ದಾರೆ ಎಂದು ಆರೋಪಿಸಿ ವಿಪಕ್ಷ ನಾಯಕ ಅಶೋಕ್ ಖಂಡನಾ ನಿರ್ಣಯ ಮಂಡಿಸಿದರು. ಇದನ್ನೂ ಓದಿ: ಡಾ.ಮಂಜುನಾಥ್ ಏನು ತೀರ್ಮಾನ ಮಾಡ್ತಾರೆ ಎಂದು ಸಮಯ ಬಂದಾಗ ನೋಡೋಣ: ಹೆಚ್‍ಡಿಕೆ

  • ಮತ್ತೆ ಮುನ್ನೆಲೆಗೆ ಬಂತು ಮಳಲಿ ಮಸೀದಿ – ಆಸ್ತಿ ತನ್ನದೆಂದು ಸಾಬೀತುಪಡಿಸಲು ವಕ್ಫ್‌ ಬೋರ್ಡ್‌ ತಯಾರಿ

    ಮತ್ತೆ ಮುನ್ನೆಲೆಗೆ ಬಂತು ಮಳಲಿ ಮಸೀದಿ – ಆಸ್ತಿ ತನ್ನದೆಂದು ಸಾಬೀತುಪಡಿಸಲು ವಕ್ಫ್‌ ಬೋರ್ಡ್‌ ತಯಾರಿ

    – ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆಗೆ ಹೈಕೋರ್ಟ್ ಆದೇಶ

    ಮಂಗಳೂರು: ಜ್ಞಾನವಾಪಿ ಮಸೀದಿ (Gyanvapi Mosque) ವಿವಾದದ ಮಧ್ಯೆ ಇದೀಗ ಮಂಗಳೂರಿನ ಮಳಲಿ ಮಸೀದಿಯ (Malali Mosque) ವಿವಾದವು ಮುನ್ನಲೆಗೆ ಬಂದಿದೆ. ಈ ಮಸೀದಿಯ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯವೇ ಮಾಡಲಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಹೀಗಾಗಿ ಇಡೀ ಪ್ರಕರಣದ ಹೊಣೆಯನ್ನು ಇದೀಗ ವಕ್ಫ್‌ ಬೋರ್ಡ್‌ ಕೈಗೆತ್ತಿಕೊಂಡಿದ್ದು, ಮಸೀದಿ ವಕ್ಫ್‌ ಬೋರ್ಡ್‌ (Waqf Board) ಆಸ್ತಿಯೆಂದು ಸಾಬೀತುಪಡಿಸಲು ಮುಂದಾಗಿದೆ.

    ಕಳೆದ ವರ್ಷ ಮಂಗಳೂರಿನ ಹೊರವಲಯದ ಮಳಲಿ ಜುಮ್ಮಾ ಮಸೀದಿಯ ಅಭಿವೃದ್ಧಿ ಕಾಮಗಾರಿ ಮಾಡುತ್ತಿದ್ದ ವೇಳೆ ಮಸೀದಿಯ ಮೇಲ್ಛಾವಣಿ ಹಿಂದೂ ದೇವಸ್ಥಾನದ (Hindu Temple) ಶೈಲಿಯಲ್ಲಿ ಇದೆ. ಅಲ್ಲಿ ಪಾಣಿಪೀಠ ಸೇರಿದಂತೆ ದೇವಸ್ಥಾನ ಹಲವು ಕುರುಹುಗಳಿದೆ ಎಂದು ವಿಶ್ವ ಹಿಂದೂ ಪರಿಷತ್ (VHP) ಮಸೀದಿಯ ಕಾಮಗಾರಿಯನ್ನು ನಿಲ್ಲಿಸಲು ಆಕ್ಷೇಪ ಎತ್ತಿತ್ತು. ಬಳಿಕ ತಾಂಬೂಲ ಪ್ರಶ್ನೆ ಇಡಲಾಗಿತ್ತು. ಅದರಲ್ಲೂ ಮಸೀದಿಯೊಳಗೆ ಶಿವ ಸಾನಿಧ್ಯ ಇದೆ ಎಂದು ಗೊತ್ತಾಗಿತ್ತು. ಹೀಗಾಗಿ ವಿಎಚ್‌ಪಿ ಮಸೀದಿ ಕಾಮಗಾರಿಯನ್ನು ನಿಲ್ಲಿಸಬೇಕು ಜೊತೆಗೆ ಮಸೀದಿಯ ಸರ್ವೇ ಕಾರ್ಯ ನಡೆಸಬೇಕೆಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದಾವೆ ಹೂಡಿತ್ತು.  ಇದನ್ನೂ ಓದಿ: ಪ್ರತಿಷ್ಠಿತ ಆಸ್ಪತ್ರೆಗಳ ಒಕ್ಕೂಟದ ಸಾರಥಿಯಾಗ್ತಾರಾ ಡಾ.ಸಿ.ಎನ್ ಮಂಜುನಾಥ್?

    ಇದನ್ನ ಪ್ರಶ್ನಿಸಿ ಮಳಲಿ ಮಸೀದಿ ಕಮಿಟಿ ಈ ಮಸೀದಿ ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿ ಹೈಕೋರ್ಟ್ (High Court) ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ.31ರಂದು ಆದೇಶಿಸಿದೆ.

    ಮಳಲಿ ಮಸೀದಿ ವಕ್ಫ್ ಬೋರ್ಡ್‌ ಅಧೀನದಲ್ಲಿರುವುದರಿಂದ ವಕ್ಫ್ ಟ್ರಿಬ್ಯುನಲ್‌ಗೆ ಪ್ರಕರಣ ಹಸ್ತಾಂತರ ಆಗಬೇಕೆಂದು ಮಳಲಿ ಮಸೀದಿ ಆಡಳಿತ ಕಮಿಟಿ ಹೈಕೋರ್ಟ್ ಗಮನಕ್ಕೆ ತಂದಿದೆ. ಹೀಗಾಗಿ ಈ ಮಸೀದಿ ವಕ್ಫ್ ಬೋರ್ಡ್‌ ಆಸ್ತಿ ಹೌದೋ ಅಲ್ಲವೇ ಎಂಬುದನ್ನು ಕೆಳ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಹೈಕೋರ್ಟ್ ಆದೇಶಿಸಿದೆ. ಹೀಗಾಗಿ ಮತ್ತೆ ಜಿಲ್ಲಾ ನ್ಯಾಯಾಲಯದಲ್ಲೇ ಮಸೀದಿ ಆಸ್ತಿಯ ಬಗ್ಗೆ ವಿಚಾರಣೆ ನಡೆಯಲಿದೆ.

    ಈ ಮಸೀದಿ ವಕ್ಫ್‌ ಆಸ್ತಿ ಎನ್ನುವುದಕ್ಕೆ ಸುಮಾರು 700 ವರ್ಷಗಳ ದಾಖಲೆಗಳು ಇದೆ. ಅದನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಮಸೀದಿ ಸಮಿತಿಯವರು ತಯಾರು ನಡೆಸಿದ್ದಾರೆ.

     

  • ಬ್ರಿಟನ್‌ನಲ್ಲಿ ಬುಗಿಲೆದ್ದ ಹಿಂದೂ, ಮುಸ್ಲಿಂ ಗಲಾಟೆ – ಹಿಂದೂ ದೇಗುಲಗಳ ಧ್ವಂಸಕ್ಕೆ ಭಾರತ ಖಂಡನೆ

    ಬ್ರಿಟನ್‌ನಲ್ಲಿ ಬುಗಿಲೆದ್ದ ಹಿಂದೂ, ಮುಸ್ಲಿಂ ಗಲಾಟೆ – ಹಿಂದೂ ದೇಗುಲಗಳ ಧ್ವಂಸಕ್ಕೆ ಭಾರತ ಖಂಡನೆ

    ಲಂಡನ್: ಬ್ರಿಟನ್‌ನ (UK) ಲೀಸೆಸ್ಟರ್ (Leicester) ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ (Muslim) ಸಮುದಾಯಗಳ ನಡುವೆ ಗುಂಪು ಘರ್ಷಣೆ ಏರ್ಪಟ್ಟಿದ್ದು, ಹಿಂದೂ ದೇವಾಲಯಗಳನ್ನು (Hindu Temple) ಧ್ವಂಸಗೊಳಿಸಲಾಗಿದೆ.

    ಈ ಘಟನೆಯನ್ನು ಬಲವಾಗಿ ಖಂಡಿಸಿರುವ ಬ್ರಿಟನ್‌ನ ಭಾರತದ ಹೈಕಮಿಷನ್ (India HighCommission) ಕಚೇರಿಯು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಯುಕೆ ಅಧಿಕಾರಿಗಳವರೆಗೆ ಈ ವಿಷಯವನ್ನು ತೆಗೆದುಕೊಂಡು ಹೋಗಿರುವುದಾಗಿ ಹೇಳಿದೆ. ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್ ಶಕೆ ಅಂತ್ಯ – ಲಕ್ಷಾಂತರ ಮಂದಿ ಸಮಕ್ಷಮದಲ್ಲಿ ಅಂತಿಮ ಯಾತ್ರೆ

    ಕಳೆದ ತಿಂಗಳು ಏಷ್ಯಾ ಕಪ್ (AisaCup 2022) ಕ್ರಿಕೆಟ್ ಟೂರ್ನಿಯಲ್ಲಿ (Cricket) ಭಾರತ ಹಾಗೂ ಪಾಕಿಸ್ತಾನದ (Pakistan) ನಡುವೆ ನಡೆದ ಮೊದಲ ಪಂದ್ಯದಲ್ಲಿ ಭಾರತ (Team India) ಜಯ ಸಾಧಿಸಿದ ಬಳಿಕ ಅಭಿಮಾನಿಗಳ ನಡುವೆ ಘರ್ಷಣೆ ನಡೆದಿತ್ತು. ಇದರ ಮುಂದುವರಿದ ಭಾಗವಾಗಿ ಶನಿವಾರ ಹಾಗೂ ಭಾನುವಾರ ಹಿಂಸಾಚಾರ ನಡೆದಿದೆ. ಇದನ್ನೂ ಓದಿ: ನೈತಿಕ ಪೊಲೀಸ್‍ಗಿರಿಗೆ ಯುವತಿ ಬಲಿ: ತಲೆ ಕೂದಲು ಕತ್ತರಿಸಿ, ಹಿಜಬ್ ಸುಟ್ಟು ಇರಾನಿ ಮಹಿಳೆಯರ ಆಕ್ರೋಶ

    https://twitter.com/sammijohnst/status/1567268196545171461?ref_src=twsrc%5Etfw%7Ctwcamp%5Etweetembed%7Ctwterm%5E1567268196545171461%7Ctwgr%5Eae95874ba58c726f417ea93e4be668bbf6211a6e%7Ctwcon%5Es1_&ref_url=https%3A%2F%2Fwww.opindia.com%2F2022%2F09%2Fuk-islamists-attack-hindus-desecrate-saffron-flag-in-leicester-city%2F

    ಲೀಸೆಸ್ಟರ್‌ನಲ್ಲಿ ಭಾರತೀಯ ಸಮುದಾಯದ ವಿರುದ್ಧ ನಡೆದ ಹಿಂಸಾಚಾರವನ್ನು ಬಲವಾಗಿ ಖಂಡಿಸುತ್ತೇವೆ. ಈ ವಿಚಾರವನ್ನು ಬ್ರಿಟನ್ ಅಧಿಕಾರಿಗಳ ಗಮನಕ್ಕೆ ತಂದಿದ್ದು, ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಅಲ್ಲದೆ ಭಾರತೀಯ ಸಮುದಾಯವರಿಗೆ ರಕ್ಷಣೆ ಒದಗಿಸಲು ಮನವಿ ಮಾಡಲಾಗಿದೆ ಎಂದು ಬ್ರಿಟನ್‌ನಲ್ಲಿರುವ ಭಾರತದ ಹೈಕಮಿಷನ್ ಪ್ರಕಟಣೆಯಲ್ಲಿ ತಿಳಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ ಎಂದು ಲೀಸೆಸ್ಟರ್‌ಶೈರ್ ಪೆuಟಿಜeಜಿiಟಿeಜಲೀಸರು ತಿಳಿಸಿದ್ದಾರೆ.

    ಲೀಸೆಸ್ಟರ್‌ಶೈರ್‌ನಲ್ಲಿ ಯುವಕರ ಘರ್ಷಣೆ:
    ಲೀಸೆಸ್ಟರ್ ಪೊಲೀಸರು ಹೇಳುವಂತೆ, ನಿನ್ನೆ ಲೀಸೆಸ್ಟರ್‌ಶೈರ್‌ನಲ್ಲಿ ಯುವಕರ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ಪ್ರಕರಣದಲ್ಲಿ ಇದುವರೆಗೆ ಕನಿಷ್ಠ 15 ಮಂದಿಯನ್ನು ಬಂಧಿಸಲಾಗಿದೆ. ಯುಕೆ ನಗರದ ಲೀಸೆಸ್ಟರ್‌ನಲ್ಲಿ ಪಾಕಿಸ್ತಾನಿ ಸಂಘಟಿತ ಗ್ಯಾಂಗ್‌ಗಳು ಹಿಂದೂಗಳನ್ನು ಹಿಂಸಿಸಿ ಅವರನ್ನು ಭಯಭೀತಗೊಳಿಸುತ್ತಿರುವುದನ್ನು ತೋರಿಸುವ ವಿವಿಧ ವೀಡಿಯೊಗಳು ಮತ್ತು ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ಸಂಭವಿಸಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುರುರಾಯರ 351ನೇ ಆರಾಧನೆ – ಅದ್ಧೂರಿಯಾಗಿ ನೆರವೇರಿದ ಮಂತ್ರಾಲಯದ ಮಹಾರಥೋತ್ಸವ

    ಗುರುರಾಯರ 351ನೇ ಆರಾಧನೆ – ಅದ್ಧೂರಿಯಾಗಿ ನೆರವೇರಿದ ಮಂತ್ರಾಲಯದ ಮಹಾರಥೋತ್ಸವ

    ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವದ ಕೊನೆಯ ಘಟ್ಟವಾದ ಉತ್ತರಾರಾಧನೆ ಅಂಗವಾಗಿ ಮಂತ್ರಾಲಯ ಮಠದ ರಾಜಬೀದಿಯಲ್ಲಿ ವಿಜೃಂಭಣೆಯ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ರಾಯರ ಆರಾಧನಾ ಮಹೋತ್ಸವದ ವೈಭವಕ್ಕೆ ಸಾಕ್ಷಿಯಾದರು.

    ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಮಂತ್ರಾಲಯದಲ್ಲಿ ಉತ್ತರಾರಾಧನೆಯಾಗಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಉತ್ತರಾರಾಧನೆ ಹಿನ್ನೆಲೆಯಲ್ಲಿ ನಡೆದ ಮಹಾರಥೋತ್ಸವ ರಾಯರ ಆರಾಧನೆಗೆ ಮೆರಗು ತಂದಿದೆ. ಈ ದಿನ ರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜಬಿದಿಯಲ್ಲಿ ದರ್ಶನ ಕೊಡುತ್ತಾರೆ ಅನ್ನೋ ಪ್ರತೀತಿ ಈಗಲೂ ಇದೆ. ರಥೋತ್ಸವಕ್ಕೂ ಮುನ್ನ ರಾಮದೇವರು ಹಾಗೂ ಬೃಂದಾವನಗಳಿಗೂ ಗುಲಾಲ್ ಸಮರ್ಪಣೆ ಮಾಡುವ ಮೂಲಕ ಶ್ರೀಗಳು ವಸಂತೋತ್ಸವ ಆಚರಿಸಿದರು. ಇದನ್ನೂ ಓದಿ: ಮನೆ ಬಾಡಿಗೆ ವೇಳೆ `ಸೆಕ್ಸ್ ಒಪ್ಪಂದ’ಕ್ಕೆ ಸಹಿ ಹಾಕಿದ ಮಹಿಳೆ- ಮುಂದೇನಾಯ್ತು..?

    ಬಳಿಕ ಗುರುರಾಯರನ್ನ ಪ್ರಹ್ಲಾದ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ನಂತರ ಮಠದ ಮದ್ವದ್ವಾರ ಮೂಲಕ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಿತು. ಮಹಾ ರಥೋತ್ಸವದ ಹಿನ್ನೆಲೆಯಲ್ಲಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಥದಲ್ಲಿ ಕುಳಿತು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು. ಧರ್ಮಪಾಲನೆ ಮಾಡಿ ಉನ್ನತಿ ಪಡೆಯಿರಿ, ದೇಶ ಸಕಲ ಸಂಪದ್ಭರಿತವಾಗಲಿ, ದೇಶ ವಿಶ್ವಗುರುವಾಗಲಿ ಎಂದು ಹಾರೈಸಿದರು.

    ರಾಯರು ಪ್ರತಿನಿತ್ಯದಲ್ಲಿ ಅಂತರ್ಮುಖವಾಗಿ ಜಪತಪ ಮಾಡುತ್ತಿದ್ದರೆ ಉತ್ತರರಾಧನೆ ದಿನ, ಬಹಿರ್ಮುಖವಾಗಿ ತಮ್ಮ ದೃಷ್ಟಿಯನ್ನ ಭಕ್ತರ ಕಡೆಗೆ ಹರಿಸುತ್ತಾರೆ. ಭಕ್ತರ ಬೇಡಿಕೆ ಈಡೇರಿಸುತ್ತಾರೆ ಅನ್ನೋ ಪ್ರತೀತಿ ಇದೆ. ಹೀಗಾಗಿ ಉತ್ತರಾರಾಧನೆ ದಿನ ರಾಯರ ಅನುಗ್ರಹಕ್ಕೆ ಪಾತ್ರರಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಾಯರ ಮಠಕ್ಕೆ ಆಗಮಿಸಿ ಮಹಾರಥೋತ್ಸವದಲ್ಲಿ ಭಾಗಿಯಾಗಿದ್ದರು. ಸಾಲುಮರದ ತಿಮ್ಮಕ್ಕ ಆರಾಧನೆಯಲ್ಲಿ ಭಾಗವಹಿಸಿ ರಾಯರ ದರ್ಶನ ಪಡೆದರು. ಇದನ್ನೂ ಓದಿ: ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

    ಮಹಾರಥೋತ್ಸವದ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಹೆಲಿಕ್ಯಾಪ್ಟರ್ ಮೂಲಕ ಪ್ರತಿವರ್ಷದಂತೆ ರಥಕ್ಕೆ ಪುಷ್ಪವೃಷ್ಠಿಯನ್ನ ಮಾಡಲಾಯಿತು. ಈ ಮೂಲಕ ರಾಯರ ಆರಾಧನೆಯ ಮುಖ್ಯ ಮೂರುದಿನಗಳು ಇಂದಿಗೆ ಮುಕ್ತಾಯವಾದವು. ಸಪ್ತರಾತ್ರೋತ್ಸವ ಹಿನ್ನೆಲೆ ಆಗಸ್ಟ್‌ 16ರ ವರೆಗೆ ಮಠದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯುತ್ತವೆ.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

    ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

    ರಾಯಚೂರು: ಸರ್ಕಾರಿ ನಿಯಂತ್ರಣದಿಂದ ಹಿಂದೂ ಧಾರ್ಮಿಕ ದೇವಾಲಯಗಳಿಗೆ ಸ್ವಾತಂತ್ರ್ಯ ನೀಡಲಾಗುವುದು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿಲುವನ್ನು ರಾಯಚೂರಿನಲ್ಲಿ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಸ್ವಾಗತಿಸಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಸರ್ಕಾರದ ಅಧೀನದಲ್ಲಿನ ದೇವಸ್ಥಾನ ಬೇರ್ಪಡಿಸುವ ವಿಚಾರ ಸೂಕ್ತ ನಿರ್ಧಾರವಾಗಿದೆ. ಆಸಕ್ತಿ ಇರುವವರು ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ದೇವಾಲಯಗಳ ನಿರ್ವಹಣೆ ಮಾಡುವುದು ಒಳ್ಳೆಯದು. ಅಲ್ಲದೇ ದೇಗುಲಗಳ ಅಭಿವೃದ್ಧಿ, ಉತ್ಸವ ಉಸ್ತುವಾರಿ ನೀಡುವುದು ಸೂಕ್ತ. ಸಿಎಂ ಅವರ ಈ ನಿರ್ಧಾರ ಕೂಡಲೇ ಕಾರ್ಯರೂಪಕ್ಕೆ ಬರಲಿ ಎಂದು ಆಶಿಸಿದರು. ಇದನ್ನೂ ಓದಿ: ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ

    ಹಿಂದೂ ದೇವಸ್ಥಾನಗಳಿಗೆ ವಿಶೇಷ ಕಾನೂನು ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಅಧಿವೇಶನದಲ್ಲಿ, ಹಿಂದೂ ದೇವಸ್ಥಾನಗಳಿಗೆ ಒಂದು ಕಾನೂನು ತರುತ್ತೇವೆ ಎಂಬ ಭರವಸೆಯನ್ನು ನೀಡಿದ್ದರು. ಈ ಹಿನ್ನೆಲೆ ಸುಬುಧೇಂದ್ರ ತೀರ್ಥರು ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಬೇರೆ ಸಮುದಾಯಗಳ ಪ್ರಾರ್ಥನಾ ಸ್ಥಳಗಳು ಸ್ವಾತಂತ್ರ್ಯವಾಗಿವೆ. ಹಿಂದೂಗಳ ದೇವಾಲಯಗಳು ಹಲವು ನಿಯಮಗಳ ನಿಯಂತ್ರಣದಲ್ಲಿ ಇವೆ. ದೇವಸ್ಥಾನಗಳನ್ನು ಸರ್ಕಾರದ ಕಟ್ಟುಪಾಡುಗಳಿಗೆ ಒಳಪಡಿಸಲಾಗಿದ್ದು, ಬಜೆಟ್ ಅಧಿವೇಶನದಲ್ಲಿ ಹಿಂದೂ ದೇವಸ್ಥಾನಗಳಿಗೆ ಒಂದು ಕಾನೂನು ತರುತ್ತೇವೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ