Tag: ಹಿಂದೂ ನಾಯಕ

  • ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು – ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌

    ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು – ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌

    ಗಾಂಧೀನಗರ: ಹಿಂದೂ ಸಂಘಟನೆಯೊಂದರ ನಾಯಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಸೂರತ್ (Surat) ಪೊಲೀಸರು ಮುಸ್ಲಿಂ ಧರ್ಮಗುರುವನ್ನು (Muslim Cleric) (ಮೌಲ್ವಿ) ಬಂಧಿಸಿದ್ದಾರೆ.

    ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153 (A) (ಧರ್ಮ, ಜನಾಂಗದ ಮೇಲೆ ವಿನಾಕಾರಣ ನಿಂದನೆ ಅಥವಾ ದಾಳಿಯಲ್ಲಿ ತೊಡಗುವುದು), 467, 468 ಮತ್ತು 471 (ದಾಖಲೆಗಳು ಅಥವಾ ಎಲೆಕ್ಟ್ರಾನಿಕ್ ದಾಖಲೆಗಳ ನಕಲಿಗೆ ಸಂಬಂಧಿಸಿದೆ) ಹಾಗೂ ಸೆಕ್ಷನ್ 120 ( ಬಿ) ಕ್ರಿಮಿನಲ್ ಪಿತೂರಿ ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: Mumbai Attack | ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

    ಮೌಲ್ವಿಗೆ 27 ವಯಸ್ಸು. ಮದರಸಾದಲ್ಲಿ ಪಾಠ ಮಾಡುತ್ತಿದ್ದಾನೆ ಎಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಪಾಕಿಸ್ತಾನದ ಡೊಂಗರ್ ಎಂಬ ವ್ಯಕ್ತಿ ಮತ್ತು ನೇಪಾಳದ ಸೆಹನಾಜ್ ಎಂಬ ವ್ಯಕ್ತಿಯೊಂದಿಗೆ ಕಳೆದ 2 ವರ್ಷಗಳಿಂದ ಸಂಪರ್ಕ ಹೊಂದಿದ್ದ. ಭಾರತದಲ್ಲಿ ಹಿಂದೂ ಸಂಘಟನೆಗಳು ಪ್ರವಾದಿಯನ್ನು ನಿರಂತರವಾಗಿ ಅವಮಾನಿಸುತ್ತಿವೆ ಎಂದು ಪಾಕಿಸ್ತಾನ ಮತ್ತು ನೇಪಾಳದವರು, ಮೌಲ್ವಿಗೆ ಪ್ರಚೋದನೆ ನೀಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಆರೋಪಿಯು ಪಾಕಿಸ್ತಾನ ಮತ್ತು ನೇಪಾಳದವರೊಂದಿಗೆ 1 ಕೋಟಿ ‘ಸುಪಾರಿ’ (ಕೊಲ್ಲಲು ಒಪ್ಪಂದ) ನೀಡಲು ಮತ್ತು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಸಂಚು ರೂಪಿಸಿದ್ದ ಎಂದು ಸೂರತ್‌ನ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ಹೇಳಿದ್ದಾರೆ. ಇದನ್ನೂ ಓದಿ: General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್‌ ಕಟ್ಟಿದ ವಕೀಲರು!

    ವ್ಯಕ್ತಿಯೊಬ್ಬನ ಚಲನವಲನ ದೇಶ ವಿರೋಧಿಯಾಗಿದೆ. ಹೀಗಾಗಿ ಆತನ ಮೇಲೆ ನಿಗಾ ಇರಿಸಲಾಗಿದೆ ಎಂದು ಸೂರತ್ ಸಿಟಿ ಕ್ರೈಂ ಬ್ರಾಂಚ್‌ಗೆ ಮಾಹಿತಿ ಲಭಿಸಿತ್ತು. ಸೂರತ್‌ನ ಚೌಕ್ ಬಜಾರ್ ಪ್ರದೇಶದಲ್ಲಿ ಆತನನ್ನು ವಶಕ್ಕೆ ಪಡೆದು ಮೊಬೈಲ್ ಪರಿಶೀಲಿಸಲಾಗಿದೆ. ಆರೋಪಿ ಪಾಕಿಸ್ತಾನ ಮತ್ತು ನೇಪಾಳದ ಜನರೊಂದಿಗೆ ಸಂಪರ್ಕದಲ್ಲಿದ್ದ. ಮೊದಲು ಹಿಂದೂ ಸಂಘಟನೆಯೊಂದರ ಮುಖಂಡನ ಕೊಲೆಗೆ ಯೋಜನೆ ರೂಪಿಸಿದ್ದು ತಿಳಿದುಬಂದಿದೆ ಎಂದಿದ್ದಾರೆ.

    ಬಂಧಿತ ಆರೋಪಿಯು ಪಾಕಿಸ್ತಾನ, ವಿಯೆಟ್ನಾಂ, ಇಂಡೋನೇಷ್ಯಾ, ಕಜಕಿಸ್ತಾನ್, ಲಾವೋಸ್‌ನಂತಹ ವಿವಿಧ ದೇಶಗಳ ಕೋಡ್‌ಗಳೊಂದಿಗೆ ವಾಟ್ಸಾಪ್ ಸಂಖ್ಯೆಗಳನ್ನು ಹೊಂದಿರುವವರ ಜೊತೆ ಸಂಪರ್ಕದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.

  • ಹಿಂದೂ ನಾಯಕನ ತಲೆಗೆ ಗುಂಡಿಕ್ಕಿ ಬರ್ಬರ ಹತ್ಯೆ

    ಹಿಂದೂ ನಾಯಕನ ತಲೆಗೆ ಗುಂಡಿಕ್ಕಿ ಬರ್ಬರ ಹತ್ಯೆ

    ಲಕ್ನೋ: ಶನಿವಾರ ತಾನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ವಿಶ್ವ ಹಿಂದೂ ಮಹಾಸಭಾ ನಾಯಕನನ್ನು ತಲೆಗೆ ಗುಂಡಿಕ್ಕಿ ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಕೊಲೆಯಾದ ಹಿಂದೂ ನಾಯಕನನ್ನು ರಂಜಿತ್ ಬಚ್ಚನ್ ಎಂದು ಗುರುತಿಸಲಾಗಿದೆ. ಇಂದು ತನ್ನ ಸಂಬಂಧಿ ಅದಿತ್ಯ ಜೊತೆಗೆ ಹೊರಗೆ ಬಂದ ರಂಜಿತ್ ಬಚ್ಚನ್ ಅವರನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಗುಂಡಿಕ್ಕಿ ಕೊಂದು ಹಾಕಿದ್ದಾರೆ. ಈ ಘಟನೆಯಲ್ಲಿ ಅದಿತ್ಯ ಅವರೂ ಕೂಡ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಚಿಕತ್ಸೆ ಕೊಡಿಸಲಾಗುತ್ತಿದೆ.

    ವಾಕಿಂಗ್ ಮಾಡುತ್ತಿದ್ದ ರಂಜೀತ್ ಬಚ್ಚನ್ ಅವರ ಬಳಿ ಬಂದ ಹಲ್ಲೆ ಮಾಡಿದ ಆರೋಪಿ, ಮೊದಲು ಕರೆ ಮಾಡಲು ಫೋನ್ ಕೇಳಿದ್ದಾನೆ. ಅವರು ಕೊಟ್ಟಿಲ್ಲ. ಇದಾದ ನಂತರ ತನ್ನ ಬಳಿ ಇದ್ದ ಪಿಸ್ತೂಲ್‍ನಿಂದ ರಂಜಿತ್ ಬಚ್ಚನ್ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಎಸಿಪಿ ಅಭಯ್ ಮಿಶ್ರಾ ಮಾಹಿತಿ ನೀಡಿದ್ದಾರೆ.

    ಈ ವೇಳೆ ಮಾತನಾಡಿದ ರಂಜಿತ್ ಬಚ್ಚನ್ ಅವರ ಸಹೋದರ ಸಂಬಂಧಿ ಮನೋಜ್ ಕುಮಾರ್ ಶರ್ಮಾ, ರಂಜಿತ್ ಅವರು ಶನಿವಾರ ತನ್ನ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಇದರ ಜೊತೆಗೆ ಸಿಎಎ ಮತ್ತು ಎನ್.ಆರ್.ಸಿಗೆ ಬೆಂಬಲಿಸುವ ಪಾರ್ಟಿಯನ್ನು ಆಯೋಜಿಸಿದ್ದರು ಎಂದು ತಿಳಿಸಿದ್ದಾರೆ. ರಂಜಿತ್ ಬಚ್ಚನ್ ಅವರ ಸಾವಿನ ಸುದ್ದಿ ತಿಳಿದ ಅವರ ಬೆಂಬಲಿಗರು ಪೊಲೀಸ್ ಠಾಣೆಯ ಮುಂದೆ ಪೊಲೀಸರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಮಾಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಹಿಂದೂ ನಾಯಕರ ಸರಣಿ ಹತ್ಯೆ ನಡೆಯುತ್ತಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಇಬ್ಬರು ಹಿಂದೂ ನಾಯಕರನ್ನು ಕೊಲೆ ಮಾಡಲಾಗಿದೆ. ಹೀಗೆ ಕಳೆದ ಆಕ್ಟೋಬರ್ ನಲ್ಲಿ ಹಿಂದೂ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಕಮಲೇಶ್ ತಿವಾರಿ ಅವರನ್ನು ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು.