Tag: ಹಿಂದೂ ಯುವಕ

  • Video Viral | ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ

    Video Viral | ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ

    ರಾಮನಗರ: ಬೈಕ್‌ನಲ್ಲಿ ಹೋಗ್ತಿದ್ದ ಯುವಕ, ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆದಿರೋ ಘಟನೆ ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ನಡೆದಿದೆ.

    ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ಹೋಗ್ತಿದ್ದ ಹಿನ್ನೆಲೆ ಮತ್ತೊಂದು ಬೈಕ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು ಬೈಕ್ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಉಡುಪಿಯಲ್ಲಿ ಕೊರಗಜ್ಜನ ಪವಾಡ

    ಮುಸ್ಲಿಂ ಯುವತಿಯನ್ನ ಯಾಕೆ ಬೈಕ್ ನಲ್ಲಿ ಕರೆದುಕೊಂಡು ಹೋಗ್ತಿದಿಯಾ ಎಂದು ಯುವಕನಿಗೆ ಅವಾಜ್ ಹಾಕಿ, ಹಿಂದೂ ಯುವಕನ ಜೊತೆ ಸುತ್ತಾಡ್ತಿದ್ದೀಯಾ, ನಿಮ್ಮ ತಂದೆಗೆ ಪೋನ್ ಮಾಡು ಎಂದು ಯುವತಿಗೂ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

    ಮೊಬೈಲ್‌ನಲ್ಲಿ ವೀಡಿಯೋ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದಿರೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಮನಗರ ಗ್ರಾಮಾಂತರ ಪೊಲೀಸರು ವೀಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: 55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

  • ರಾಗಿಗುಡ್ಡ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

    ರಾಗಿಗುಡ್ಡ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

    ಶಿವಮೊಗ್ಗ: ಹಿಂದೂ ಯುವಕನೊಬ್ಬನಿಗೆ ಅನ್ಯ ಕೋಮಿನ ಯುವಕರು ಚಾಕು ಇರಿದಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

    ನಂದಕುಮಾರ (32) ಚಾಕು ಇರಿತಕ್ಕೊಳಗಾದ ಯುವಕ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದೆ. ಚೂರಿಯಿಂದ ಬೆನ್ನಿನ ಮೇಲೆ ಯುವಕರ ಗುಂಪು ಇರಿದಿದ್ದು, ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಅನ್ಯಕೋಮಿನ ಯುವಕರ ಗುಂಪು ನಂದಕುಮಾರ್ ಬಳಿ ಕರೆ ಮಾಡಲು ನಿನ್ನ ಮೊಬೈಲ್ ಕೊಡು ಎಂದು ಕೇಳಿದೆ. ನಂದಕುಮಾರ ಮೊಬೈಲ್ ಕೊಡಲು ನಿರಾಕರಿಸಿದಾಗ ಆತನ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ಇದರ ಬಗ್ಗೆ ದೂರು ನೀಡಲು ನಂದಕುಮಾರ ಪೊಲೀಸ್ ಠಾಣೆಗೆ ತೆರಳಿದ್ದು, ಠಾಣೆಯಿಂದ ವಾಪಸ್ ಬರುತ್ತಿದ್ದಾಗ ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ 2 ದಿನ ವರುಣಾರ್ಭಟ – ಯೆಲ್ಲೋ ಅಲರ್ಟ್ ಘೋಷಣೆ

    ಅನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಸನ್ನಿವೇಶದ ಪರಿಣಾಮವಾಗಿ ಶೀಘ್ರವೇ ಎಚ್ಚೆತ್ತುಕೊಂಡಿರುವ ಪೊಲೀಸರು, ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. ಎಎಸ್ಪಿ ಅನಿಲಕುಮಾರ ಭೂಮರಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಯುವಕನಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ಲಾಂ ವಿರುದ್ಧ ಪೋಸ್ಟ್ – ಬಾಂಗ್ಲಾದಲ್ಲಿ ವ್ಯಕ್ತಿ ಮನೆಗೆ ಬೆಂಕಿ

    ಇಸ್ಲಾಂ ವಿರುದ್ಧ ಪೋಸ್ಟ್ – ಬಾಂಗ್ಲಾದಲ್ಲಿ ವ್ಯಕ್ತಿ ಮನೆಗೆ ಬೆಂಕಿ

    ಢಾಕಾ: ಇಸ್ಲಾಂ ಧರ್ಮದ ವಿರುದ್ಧ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಮನೆಗೆ ಮತ್ತು ದೇವಾಲಯವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

    ಶುಕ್ರವಾರ ಸಂಜೆ ದಿಘೋಲಿಯಾ ಗ್ರಾಮದಲ್ಲಿರುವ ಹಲವಾರು ಮನೆಗಳನ್ನು ಧ್ವಂಸಗೊಳಿಸಿದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಎಚ್ಚರಿಕೆ ನೀಡಿದರು. ಆದರೆ ಈ ವೇಳೆ ಒಂದು ಮನೆಯನ್ನು ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಅಲ್ಲದೇ ಪೊಲೀಸರ ಮೇಲೆ ದಾಳಿಕೋರರು ಕಲ್ಲು ತೂರಾಟವನ್ನು ನಡೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಹರನ್ ಚಂದ್ರ ಪಾಲ್ ಹೇಳಿದ್ದಾರೆ. ಇದನ್ನೂ ಓದಿ: ಹಳೆಯ ವೈಷಮ್ಯ – ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಹತ್ಯೆ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವಕ ಹರನ್, ಫೇಸ್‍ಬುಕ್‍ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್‌ವೊಂದನ್ನು ಮಾಡಿದ್ದು, ಇದರಿಂದ ಮುಸ್ಲಿಮರು ರೊಚ್ಚಿಗೆದ್ದು, ನಂತರ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾನೆ ಇದೀಗ ಆಕಾಶ್ ಹಾಗೂ ಆತನ ತಂದೆ ಅಶೋಕ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಡ್ರೋನ್‌ಗೆ ಗುಂಡು -ಸೇನೆಯ ದಾಳಿಗೆ ಮರಳಿ ಪಾಕಿಗೆ ಓಡಿ ಹೋಯ್ತು

    Live Tv
    [brid partner=56869869 player=32851 video=960834 autoplay=true]

  • ಯುವಕನನ್ನು ಪ್ರೀತಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಮುಸ್ಲಿಂ ಯುವತಿ

    ಯುವಕನನ್ನು ಪ್ರೀತಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಮುಸ್ಲಿಂ ಯುವತಿ

    ಲಕ್ನೋ: ಹಿಂದೂ ಯುವತಿಯರನ್ನು ಪ್ರೀತಿಸಿ ಇತರೆ ಧರ್ಮೀಯರು ಮತಾಂತರ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು ಎನ್ನುವ ಉದ್ದೇಶದಿಂದ ಅನೇಕ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಆದರೆ ಉತ್ತರ ಪ್ರದೇಶದಲ್ಲಿ ಇದಕ್ಕೆ ತದ್ವಿರುದ್ಧವಾದ ಪ್ರಕರಣವೊಂದು ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

    ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆ ಆಗಿರುವ ಬಗ್ಗೆ ಉತ್ತರ ಪ್ರದೇಶದ ಅಜಂಗಢ ನಗರದಲ್ಲಿ ವರದಿಯಾಗಿದೆ. ಇದೀಗ ಈ ಜೋಡಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ರೇವಡಿ ಹಂಚಿ ಮತ ಗಳಿಸುವ ಸಂಸ್ಕೃತಿಯನ್ನು ತೊಡೆದುಹಾಕಬೇಕು: ಮೋದಿ

    ಉತ್ತರ ಪ್ರದೇಶದ ಅಜಂಗಢದ ಅಟ್ರೌಲಿಯಾ ಪ್ರದೇಶದ ಖಾನ್‍ಪುರ್ ಫತೇಹ್ ಗ್ರಾಮದ ಹಿಂದೂ ಯುವಕ ಸೂರಜ್, ಹೈದರ್‍ಪುರ ಖಾಸ್ ಗ್ರಾಮದ ಮುಸ್ಲಿಂ ಯುವತಿ ಮೋಮಿನ್ ಖಾತೂನ್ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ಪ್ರೀತಿಗೆ ಧರ್ಮ ಅಡ್ಡಿಯಾಗಿತ್ತು. ಇವರಿಬ್ಬರ ಪ್ರೀತಿಯನ್ನು ಮೊದಲು ಎರಡು ಕುಟುಂಬಸ್ಥರು ಒಪ್ಪಿರಲಿಲ್ಲ. ಆದರೂ ಇವರಿಬ್ಬರೂ ಮಾತ್ರ ತಮ್ಮ ಪ್ರೀತಿಯನ್ನು ಮುಂದುವರಿಸಿದ್ದರು.

    ಆರಂಭದಲ್ಲಿ ಮನೆಯವರ ವಿರೋಧದ ನಡುವೆಯೂ ಈ ಜೋಡಿ ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳಲು ಮತ್ತು ಮನೆಯವರನ್ನು ಒಪ್ಪಿಸಲು ಪ್ರಯತ್ನಿಸಿ ಕೊನೆಗೆ ಮೋಮಿನ್ ಖಾತೂನ್ ಹಿಂದೂ ಧರ್ಮವನ್ನು ಸ್ವೀಕರಿಸಿ ಸೂರಜ್‍ನನ್ನು ವರಿಸಿದ್ದಾಳೆ. ಜುಲೈ 13 ರಂದು ಅಟ್ರೌಲಿಯಾ ಸಮ್ಮೋ ಮಾತಾ ದೇವಾಲಯದ ಸಂಕೀರ್ಣದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿದೆ. ಹಿಂದೂ ಧರ್ಮವನ್ನು ಸ್ವೀಕರಿಸಿದ ಮೋಮಿನ್ ಖಾತೂನ್ ಹಿಂದೂ ಸಂಪ್ರದಾಯದಂತೆ ಸೂರಜ್ ಕೊರಳಿಗೆ ಹಾರ ಹಾಕಿ ಮದುವೆ ಆಗಿದ್ದಾಳೆ. ಸೂರಜ್ ಮನೆಯಲ್ಲಿ ಮದುವೆಗೆ ಒಪ್ಪಿಗೆ ಸಿಕ್ಕರೂ ಮೋಯಿನ್ ಖಾತೂನ್ ಮನೆಯವರು ಧರ್ಮದ ಕಾರಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅವರ ಮಾತು ಕೇಳದ ಮೋಯಿನ್ ಖಾತೂನ್ ಇದೀಗ ಸೂರಜ್‍ನನ್ನು ಮದುವೆ ಆಗಿದ್ದಾಳೆ. ಸಂಭ್ರಮದಿಂದ ನಡೆದ ಮದುವೆ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಗಣ್ಯರು ಈ ಯುವ ಜೋಡಿಗೆ ಆಶೀರ್ವದಿಸಿದ್ದರು. ಇದನ್ನೂ ಓದಿ: ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    ಮದುವೆಯ ಬಳಿಕ ಇದೀಗ ಈ ಜೋಡಿಗೆ ಸಮುದಾಯದ ಸಂಘಟನೆಗಳಿಂದ ಬೆದರಿಕೆ ಕರೆ ಬರಲಾರಂಭಿಸಿದೆ. ಇದೀಗ ಈ ಜೋಡಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ವಿಶ್ವ ಹಿಂದೂ ಪರಿಷತ್‌ ವಹಿಸಿಕೊಂಡಿದೆ. ಧರ್ಮದ ಎಲ್ಲೆ ಮೀರಿ ಮದುವೆಯಾದ ಈ ಜೋಡಿಗೆ ಆಘಾತ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಯುವಕ ಮುಸ್ಲಿಂ ಯುವತಿಯರ ಜೊತೆ ಇದ್ದಿದ್ದಕ್ಕೆ ಥಳಿತ!

    ಹಿಂದೂ ಯುವಕ ಮುಸ್ಲಿಂ ಯುವತಿಯರ ಜೊತೆ ಇದ್ದಿದ್ದಕ್ಕೆ ಥಳಿತ!

    – ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗೂಂಡಾಗಿರಿ
    – 20 ಮುಸ್ಲಿಂ ಯುವಕರ ವಿರುದ್ಧ ಎಫ್‍ಐಆರ್ ದಾಖಲು

    ಮಂಡ್ಯ: ಹಿಂದೂ ಯುವಕ ತನ್ನ ಕಾಲೇಜಿನ ಮುಸ್ಲಿಂ ಸ್ನೇಹಿತೆಯರ ಜೊತೆ ಇದ್ದ ಎಂಬ ಕಾರಣಕ್ಕೆ ಮುಸ್ಲಿಂ ಯುವಕರು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದಾರೆ. ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

    ಮಂಡ್ಯದ ನಾಗಮಂಗಲ ತಾಲೂಕಿನ ನೆಲ್ಲಿಗೆರೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅ. 9ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಾಗಮಂಗಲದ ಪದವಿ ಕಾಲೇಜುವೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರಶಾಂತ್ ಮೇಲೆ 20 ಮಂದಿ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದಾರೆ. ತನ್ನ ಕಾಲೇಜಿನ ಮುಸ್ಲಿಂ ಯುವಕ-ಯುವತಿಯರ ಜೊತೆ ಪ್ರಶಾಂತ್ ಸ್ನೇಹ ಬೆಳೆಸಿದ್ದನು. ಹೀಗೆ ಅ. 9ರಂದು ಪ್ರಶಾಂತ್ ಓರ್ವ ಹಿಂದೂ ಯುವತಿ ಸೇರಿ ಮೂವರು ಗೆಳತಿಯರ ಜೊತೆ ಒಂದೇ ಕಾರಿನಲ್ಲಿ ತೆರಳುತ್ತಿದ್ದನು. ಅವರಲ್ಲಿ ಇಬ್ಬರು ಮುಸ್ಲಿಂ ಯುವತಿಯರೂ ಇದ್ದರು. ಇದನ್ನು ಕಂಡ ಆರೋಪಿ ಇದ್ರಿಷ್ ಮತ್ತು 20 ಮಂದಿ ಮುಸ್ಲಿಂ ಯುವಕರು ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.

    ಮುಸ್ಲಿಂ ಯುವತಿಯೊಂದಿಗೆ ಯಾಕೆ ಇದ್ದೀಯಾ ಎಂದು ಪ್ರಶಾಂತ್‍ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಂತರ ಎಲ್ಲರೂ ಸೇರಿಕೊಂಡು ಪ್ರಶಾಂತ್ ಮತ್ತು ಮುಸ್ಲಿಂ ಯವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೋ ಕೂಡ ಮಾಡಿಕೊಂಡಿದ್ದಾರೆ. ಬಳಿಕ ಹಿಂದೂ ಯುವಕನಿಗೆ ಹೊಡೆದಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದಾರೆ.

    ವಿಡಿಯೋದಲ್ಲಿ ನಾವೆಲ್ಲ ಸ್ನೇಹಿತರು ನಮ್ಮನ್ನ ಬಿಟ್ಟುಬಿಡಿ ಎಂದು ಪ್ರಶಾಂತ್ ಹಾಗೂ ಯುವತಿ ಬೇಡಿಕೊಳ್ಳುತ್ತಿರುವ ದೃಶ್ಯ ಸೆರೆಯಾಗಿದೆ. ವಿದ್ಯಾರ್ಥಿಗಳು ಎಷ್ಟೇ ಬೇಡಿಕೊಂಡರೂ ಬಿಡದೇ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಹೀಗೆ ನೈತಿಕ ಪೋಲಿಸ್ ಗೂಂಡಾಗಿರಿ ನಡೆಸಿರುವ ವಿಡಿಯೋ ವೈರಲ್ ಆದ ಬಳಿಕ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ವೇಳೆ ತಮ್ಮ ಕಾಲೇಜಿನ ಮುಸ್ಲಿಂ ಪ್ರೇಮಿಗಳಿಗೆ ಸಹಾಯ ಮಾಡಲು ಕಾರಿನಲ್ಲಿ ಸ್ನೇಹಿತರೆಲ್ಲ ತೆರಳುತ್ತಿದ್ದೆವು ಈ ವೇಳೆ ಘಟನೆ ನಡೆದಿದೆ ಎಂದು ಪ್ರಶಾಂತ್ ಹಾಗೂ ಮುಸ್ಲಿಂ ಯುವತಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ಎಸ್‍ಎಸ್‍ಪಿ ಶೋಭರಾಣಿ ತನಿಖೆ ಕೈಗೊಂಡಿದ್ದು, ಆರೋಪಿ ಇದ್ರಿಷ್ ಸೇರಿ 20 ಜನರ ವಿರುದ್ಧ ಎಫ್‍ಐಆರ್ ದಾಖಲು ಮಾಡಿ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    https://www.youtube.com/watch?v=awDAVE6wU1Y