Tag: ಹಿಂದೂ ಸಮಾಜ

  • ಹಿಂದೂ ಸಂಕೇತ ಬಳಸಿ, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ – ಪೇಜಾವರ ಶ್ರೀ ಬೇಸರ

    ಹಿಂದೂ ಸಂಕೇತ ಬಳಸಿ, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ – ಪೇಜಾವರ ಶ್ರೀ ಬೇಸರ

    ಉಡುಪಿ: ಹಿಂದೂ ಸಂಕೇತಗಳನ್ನು (Hindu Symbols) ಬಳಸಿ ಹಿಂದೂ ಸಮಾಜದ ಮೇಲೆ ದೃಷ್ಕೃತ್ಯಗಳನ್ನು ನಡೆಸಲಾಗುತ್ತಿದ್ದು, ಪ್ರತಿಯೊಬ್ಬರೂ ಸದಾ ಜಾಗೃತರಾಗಿಬೇಕು ಎಂದು ಉಡುಪಿ ಮಠದ (Udupi Mutt) ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ (Vishwaprasanna Teertha Swamiji) ಎಚ್ಚರಿದ್ದಾರೆ.

    ಉಡುಪಿ ಮಠದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ ಹೇರುತ್ತಿದ್ದಾರೆ. ಮಂಗಳೂರು ಬಾಂಬರ್ (Mangaluru Bomb Blast) ಉಡುಪಿ ಮಠದ ಸುತ್ತಮುತ್ತ ಓಡಾಟ ನಡೆಸಿದ್ದಾನೆ ಅನ್ನೋ ಮಾಹಿತಿ ಇದೆ. ಕರಾವಳಿ ಭಾಗದ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ ಗೊತ್ತಾಗಿದೆ. ಆದ್ದರಿಂದ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು. ಸಂದೇಹಾಸ್ಪದ ಚಟುವಟಿಕೆಗಳು ಕಂಡ ಕೂಡಲೇ ಎಚ್ಚೆತ್ತುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು. ಸರ್ಕಾರ ಸಂಬಂಧಿಸಿದ ಇಲಾಖೆಗೆ ಕೂಡಲೇ ಸೂಚನೆ ನೀಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಂಧ್ರ ಸಿಎಂ ಜಗನ್ ಸಹೋದರಿ ಅರೆಸ್ಟ್

    ಉತ್ಥಾನ ದ್ವಾದಶಿ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದೆ. ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವ, ನಾಗಮಂಡಲದಂತಹ ಹಲವಾರು ಉತ್ಸವಗಳು ನಡೆಯುತ್ತಿವೆ. ಕಾರ್ಯಕ್ರಮಗಳಲ್ಲಿ ಜನಸಂದಣಿ ಹೆಚ್ಚಿರುತ್ತದೆ. ಅನಾಹುತ ನಡೆದಲ್ಲಿ ನಮ್ಮ ಸಮಾಜಕ್ಕೆ ದೊಡ್ಡ ಹಾನಿಯುಂಟಾಗುತ್ತದೆ. ಹಿಂದೂ ಸಮಾಜದ ಮೇಲೆ ದುಷ್ಕೃತ್ಯ ಹೇರುವಂತಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಪ್ರತಿಯೊಬ್ಬರೂ ಸದಾ ಜಾಗೃತರಾಗಿಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಲೇಖಕ ಚೇತನ್ ಭಗತ್, ನಟಿ ಉರ್ಫಿ ಜಾವೇದ್ ಜಟಾಪಟಿ: ಸ್ಕ್ರೀನ್ ಶಾಟ್ ಶೇರ್

    ಹಿಂದೂ ಸಂಕೇತ ಬಳಸಿ ಇಂತಹ ಕೃತ್ಯ ಮಾಡುವುದನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಮೊಬೈಲ್ (Mobile) ಹಾಗೂ ದಾಖಲೆಗಳು ಕಳೆದುಹೋದರೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು. ಇಲ್ಲವಾದರೆ, ಇಂತಹ ಸಂದರ್ಭದಲ್ಲಿ ಸಂದೇಹಕ್ಕೆ ಒಳಗಾಗಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಸಮಾಜದ ಬಹು ಕಾಲದ ನೋವು ಬೇಸರ ಸ್ಫೋಟಗೊಂಡಿದೆ- ಪೇಜಾವರ ಶ್ರೀ

    ಹಿಂದೂ ಸಮಾಜದ ಬಹು ಕಾಲದ ನೋವು ಬೇಸರ ಸ್ಫೋಟಗೊಂಡಿದೆ- ಪೇಜಾವರ ಶ್ರೀ

    ಉಡುಪಿ: ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ. ಹಲವಾರು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಎಂದು ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ನೇರ ಸಂದೇಶ ರವಾನೆ ಮಾಡಿದ್ದಾರೆ.

    ಉಡುಪಿ ಪೇಜಾವರ ಮಠದ ರಾಮ ವಿಠಲ ಸಭಾಭವನದಲ್ಲಿ ಮುಸಲ್ಮಾನ ವರ್ತಕರು, ಮುಸ್ಲಿಂ ಮುಖಂಡರುಗಳು, ಕ್ರೈಸ್ತ ಧರ್ಮಗುರುಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದರು. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ. ಇದನ್ನೂ ಓದಿ: ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಸಮಾಜದಲ್ಲಿ ಶಾಂತಿ-ಸಾಮರಸ್ಯ ಸೌಹಾರ್ದ ನೆಮ್ಮದಿ ಅವಶ್ಯವಾಗಿ ಬೇಕು. ಆದರೆ ಅದು ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು. ಉಡುಪಿಯ ಗ್ರಾಮವೊಂದರ ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳವು ಮಾಡಲಾಗಿದೆ. ಹಸುಗಳನ್ನು ನಂಬಿ ಜೀವನ ಸಾಗಿಸುತ್ತಿದ್ದ ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇನೆ. ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು.

    ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯ ಬೇಡ. ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು. ತಪ್ಪು ಮಾಡಿದವರನ್ನು ಆ ಸಮಾಜದಲ್ಲಿ ಶಿಕ್ಷಿಸಲಿ. ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ. ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

  • ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ಉಡುಪಿ: ಹಿಜಬ್ ಹೋರಾಟ ಆರಂಭವಾದ ನಂತರ ಉಡುಪಿಯಲ್ಲಿ ವ್ಯಾಪಾರ ಬಹಿಷ್ಕಾರ ನಡೆಯುತ್ತಿದೆ. ಮುಸಲ್ಮಾನ ವ್ಯಾಪಾರಿಗಳಿಗೆ ಜಾತ್ರೆ ಉತ್ಸವ ದೇವಸ್ಥಾನಗಳ ವ್ಯಾಪಾರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ. ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಜಾತ್ರೆ, ಬೀದಿ ವರ್ತಕರ ಸಂಘ ವ್ಯಾಪಾರ ಅವಕಾಶ ಮಾಡಿಕೊಡುವಂತೆ ಹಿಂದೂ ಸಮಾಜಕ್ಕೆ ಕರೆ ನೀಡುವಂತೆ ಮನವಿ ಮಾಡಿದರು.

    ಮುಸಲ್ಮಾನ ನಾಯಕರುಗಳು ಕ್ರೈಸ್ತ ಧರ್ಮಗುರುಗಳು ಪೇಜಾವರಶ್ರೀಗಳನ್ನು ಭೇಟಿಯಾಗಿ ಉಡುಪಿಯಲ್ಲಿ ಸೌಹಾರ್ದ ವಾತಾವರಣ ನೆಲೆಸುವಂತೆ, ಹಿಂದೂಗಳು ವ್ಯಾಪಾರಕ್ಕೆ ಅವಕಾಶ ಮಾಡಿ ಕೊಡುವಂತೆ ಪೇಜಾವರ ಶ್ರೀಗಳನ್ನು ಭೇಟಿಯಾಗಿ ಮನವಿ ಸಲ್ಲಿಕೆ ಮಾಡಲಾಯ್ತು. ಉಡುಪಿಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿಯಾಗಿದ್ದು, ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ. ನೂರಾರು ವರ್ಷಗಳಿಂದ ಉಡುಪಿಯಲ್ಲಿ ಹಿಂದೂ ಮತ್ತು ಮುಸಲ್ಮಾನರ ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದೇವೆ. ಕೆಲ ಬೆಳವಣಿಗೆಗಳಿಂದ ಎರಡು ಧರ್ಮಗಳ ನಡುವೆ ಭಿನ್ನಾಭಿಪ್ರಾಯಗಳು ಬಂದಿದೆ. ಸಮಸ್ಯೆಯನ್ನು ಬಗೆಹರಿಸಿ ಕೊಡಲು ತಾವು ನೇತೃತ್ವದ ಬೇಕು ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮುಸಲ್ಮಾನ ವ್ಯಾಪಾರಿಗಳ ಮನವಿ ಮಾಡಿದರು. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಧರ್ಮಗುರುಗಳು ಸಮಾಜದ ಸಾಮರಸ್ಯ ತೆಯ ಬಗ್ಗೆ ಮಾತನಾಡಿದರು. ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೌಲಾ, ಮಹಮ್ಮದ್ ಆರಿಫ್ ಮತ್ತಿತರ ವ್ಯಾಪಾರಿಗಳು ಮನವಿ ಸಂದರ್ಭ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೇಜಾವರ ಸ್ವಾಮೀಜಿಗಳು ಹಣ್ಣುಗಳನ್ನು ನೀಡಿದರು.