Tag: ಹಿಜಬ್ ಪ್ರತಿಭಟನೆ

  • ಇರಾನ್‌ನಲ್ಲಿ ಹೆಣ್ಣುಮಕ್ಕಳ ಶಿಕ್ಷಣ ತಡೆಯಲು ವಿಷಪ್ರಾಶನ – ಸಚಿವರ ಆರೋಪದ ಬಳಿಕ ಭುಗಿಲೆದ್ದ ವಿವಾದ

    ಇರಾನ್‌ನಲ್ಲಿ ಹೆಣ್ಣುಮಕ್ಕಳ ಶಿಕ್ಷಣ ತಡೆಯಲು ವಿಷಪ್ರಾಶನ – ಸಚಿವರ ಆರೋಪದ ಬಳಿಕ ಭುಗಿಲೆದ್ದ ವಿವಾದ

    ಟೆಹ್ರಾನ್: ಹಿಜಬ್ ವಿರೋಧಿಸಿ ವ್ಯಾಪಕ ಪ್ರತಿಭಟನೆಗಳಿಂದ (Hijab Protest) ತತ್ತರಿಸಿಹೋಗಿರುವ ಇರಾನ್ (Iran) ದೇಶದಲ್ಲಿ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ.

    ಹೆಣ್ಣುಮಕ್ಕಳ ಶಿಕ್ಷಣ (Girls Education) ಸ್ಥಗಿತಗೊಳಿಸುವ ಉದ್ದೇಶದಿಂದ ಪವಿತ್ರ ನಗರವಾದ ಕೋಮ್‌ನಲ್ಲಿ (Qom City) ಕೆಲ ಕಿಡಿಗೇಡಿಗಳು ಶಾಲಾ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಈ ವರ್ಷದಲ್ಲೇ ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ – RAW ಮಾಜಿ ನಿರ್ದೇಶಕ

    2022ರ ನವೆಂಬರ್ ಅಂತ್ಯದ ವೇಳೆಗೆ ಟೆಹ್ರಾನ್‌ನ ದಕ್ಷಿಣದ ಕೋಮ್‌ನಲ್ಲಿ ಶಾಲಾ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಮಕ್ಕಳ ಉಸಿರಾಟದಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾಗಿದ್ದು, ಈಗ ಆರೋಗ್ಯ ಸಚಿವ ಯುನೆಸ್ ಪನಾಹಿ, ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

    ಕೋಮ್ ನಗರದ ಶಾಲೆಗಳಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಿಸಿರುವುದು ಕಂಡುಬಂದನಂತರ ಎಲ್ಲಾ ಶಾಲೆಗಳನ್ನು ಮುಚ್ಚಬೇಕೆಂಬ ಒತ್ತಾಯ ಕೇಳಿಬಂದಿದೆ. ಅದರಲ್ಲೂ ಬಾಲಕಿಯರ ಶಾಲೆಗಳನ್ನು ಮುಚ್ಚಲೇಬೇಕೆಂದು ಕೆಲವರು ಪಟ್ಟುಹಿಡಿದಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

    ಈ ಬಗ್ಗೆ ತನಿಖೆ ಆರಂಭಗೊಂಡಿದ್ದರೂ ಇಲ್ಲಿಯವರೆಗೆ ಯಾರೊಬ್ಬರ ಬಂಧನವಾಗಿಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಾವಿರಾರು ಮೈಲಿ ದೂರವಿದ್ದರೂ ಸಿಗುತ್ತೆ ನೈಜ ಮುತ್ತಿನ ಗಮ್ಮತ್ತು – ಏನಿದು ಕಿಸ್ಸಿಂಗ್ ಡಿವೈಸ್ ಕರಾಮತ್ತು?

    ಇದೇ ಫೆಬ್ರವರಿ 14ರಂದು ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಗಳ ಪೋಷಕರು ರಾಜ್ಯಪಾಲರ ಮನೆ ಹೊರಗೆ ಜಮಾಯಿಸಿ ಅಧಿಕಾರಿಗಳಿಂದ ವಿವರಣೆ ಕೊಡುವಂತೆ ಆಗ್ರಹಿಸಿದ್ದರು. ಇದಾದ ಮರುದಿನ ಸರ್ಕಾರದ ವಕ್ತಾರ ಅಲಿ ಬಹದೋರಿ ಜಹ್ರೋಮಿ, ಗುಪ್ತಚರ ಮತ್ತು ಶಿಕ್ಷಣ ಸಚಿವಾಲಯಗಳು ವಿಷ ಪ್ರಾಶನದ ಕಾರಣವನ್ನು ಪತ್ತೆಮಾಡಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದರು.

    ಈ ಸಂಬಂಧ ಕಳೆದ ವಾರ, ಪ್ರಾಸಿಕ್ಯೂಟರ್ ಜನರಲ್ ಮೊಹಮ್ಮದ್ ಜಾಫರ್ ಮೊಂಟಜೆರಿ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.

  • ಹಿಜಬ್ ವಿರೋಧಿ ಹೋರಾಟಕ್ಕೆ ಬೆಂಬಲ – ಆಸ್ಕರ್ ವಿಜೇತ ಸಿನಿಮಾದ ಖ್ಯಾತ ನಟಿ ಅರೆಸ್ಟ್

    ಹಿಜಬ್ ವಿರೋಧಿ ಹೋರಾಟಕ್ಕೆ ಬೆಂಬಲ – ಆಸ್ಕರ್ ವಿಜೇತ ಸಿನಿಮಾದ ಖ್ಯಾತ ನಟಿ ಅರೆಸ್ಟ್

    ಟೆಹ್ರಾನ್: ಕಳೆದ ಮೂರು ತಿಂಗಳಿನಿಂದ ಹಿಜಬ್ ವಿರೋಧಿಸಿ (Anti Hijab Protest) ಇರಾನ್‌ನಲ್ಲಿ (Iran) ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಖ್ಯಾತ ಇರಾನಿ ನಟಿಯನ್ನ ಪೊಲೀಸರು (Police) ಬಂಧಿಸಿದ್ದಾರೆ.

    ಸುಳ್ಳು ವಿಷಯಗಳನ್ನು ಬಿತ್ತಿದ್ದಾರೆ ಹಾಗೂ ಅವ್ಯವಸ್ಥೆಯನ್ನು ಪ್ರಚೋದಿಸಿದ್ದಾರೆ ಎನ್ನುವ ಆರೋಪದ ಮೇಲೆ ಇರಾನಿ ನಟಿ ತರನೆಹ್ ಅಲಿದೋಸ್ತಿ (38) (Taraneh Alidoosti) ಅವರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

    ಇದೇ ತಿಂಗಳ ಡಿಸೆಂಬರ್ 8 ರಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. `ನೀವು ಮೌನವಾಗಿದ್ದೀರಿ ಅಂದರೆ, ಎದುರಾಳಿಯ ದಬ್ಬಾಳಿಕೆಯನ್ನು ಬೆಂಬಲಿಸಿದಂತೆ. ಈ ರಕ್ತಪಾತವನ್ನು ನೋಡುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರೋದು ಮಾನವೀಯತೆಗೆ ಮಾಡಿದ ಅಪಮಾನ’ ಎಂದು ಪೋಸ್ಟ್ ಹಾಕಿದ್ದರು. ಅವರು ಪೋಸ್ಟ್ ಹಾಕಿದ್ದ ದಿನವೇ ಇರಾನ್‌ನಲ್ಲಿ 23 ವರ್ಷದ ಯುವಕನೊಬ್ಬನನ್ನ ಗಲ್ಲಿಗೇರಿಸಲಾಗಿತ್ತು. ಇದನ್ನೂ ಓದಿ: ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ತರನೆಹ್ ಅಲಿದೋಸ್ತಿ ಚಿಕ್ಕ ವಯಸ್ಸಿನಿಂದಲೂ ಇರಾನಿನ ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು. 2016ರಲ್ಲಿ ಆಸ್ಕರ್ ಪ್ರಶಸ್ತಿ ಪಡೆದ `ದಿ ಸೇಲ್ಸ್‌ಮ್ಯಾನ್‌’ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವರ್ಷದ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾದ `ಲೀಲಾ ಬ್ರದರ್ಸ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆ ಸೂಚಿಸಿರುವ ಡ್ರೆಸ್ ಕೋಡ್ ಅನುಸರಿಸಬೇಕು: ಪ್ರಹ್ಲಾದ್ ಜೋಶಿ

    ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆ ಸೂಚಿಸಿರುವ ಡ್ರೆಸ್ ಕೋಡ್ ಅನುಸರಿಸಬೇಕು: ಪ್ರಹ್ಲಾದ್ ಜೋಶಿ

    ನವದೆಹಲಿ: ಕೆಲವು ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಬ್’ ವಿವಾದ ನಡುವೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಅಥವಾ ಆಡಳಿತ ಮಂಡಳಿಯು ಸೂಚಿಸುವ ಡ್ರೆಸ್ ಕೋಡ್ ಮಾತ್ರ ಅನುಸರಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

    ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಅಥವಾ ಆಡಳಿತ ಮಂಡಳಿ ಸೂಚಿಸಿದ ಡ್ರೆಸ್ ಕೋಡ್ ಅನುಸರಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಇನ್ನೂ ಈ ವಿಚಾರವಾಗಿ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿರುವವರು ಯಾರು ಎಂಬುದನ್ನು ಕಂಡು ಹಿಡಿಯಬೇಕು ಎಂದಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!

    ಫೆಬ್ರವರಿ 4 ರಂದು ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಬ್ ಪ್ರತಿಭಟನೆ ಪ್ರಾರಂಭವಾಯಿತು. ಕೆಲವು ವಿದ್ಯಾರ್ಥಿಗಳು ಹಿಜಾಬ್ (ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್) ಧರಿಸಿ ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದ್ದರು. ನಂತರ ಸೋಮವಾರ ವಿಜಯಪುರದ ಶಾಂತೇಶ್ವರ ಶಿಕ್ಷಣ ಟ್ರಸ್ಟ್‌ಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

    ಹೀಗಾಗಿ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಅನುಮೋದಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬಹುದಾಗಿದ್ದು, ಕಾಲೇಜುಗಳಲ್ಲಿ ಇತರೆ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿತು. ಇದರಿಂದ ಪ್ರತಿಭಟನೆಯ ಕಾವು ಹೆಚ್ಚಾದ್ದರಿಂದ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಅಡಿಯಲ್ಲಿರುವ ಕಾಲೇಜುಗಳಿಗೆ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ.