Tag: ಹಿಜಾಬ್ ವಿವಾದ

  • ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ: ಮುತಾಲಿಕ್ ಸವಾಲು

    ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ: ಮುತಾಲಿಕ್ ಸವಾಲು

    ಮೈಸೂರು: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ. ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

    ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್‍ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದ 30 ಸಾವಿರ ಮಸೀದಿಗಳ ಮೂಲದಲ್ಲಿ ದೇವಸ್ಥಾನಗಳಿವೆ. ಅವುಗಳನ್ನು ವಾಪಸ್ ಪಡೆದೇ ತೀರುತ್ತೇವೆ. ಎಸ್‍ಡಿಪಿಐಗೆ ತಾಕತ್ ಇದ್ದರೆ ಅದನ್ನು ತಡೆಯಲಿ. ಇದು ನನ್ನ ಸವಾಲು ಎಂದರು. ಇದನ್ನೂ ಓದಿ: ಮಕ್ಕಳು ಓಡಿ ಹೋಗದಂತೆ ತಡೆಯಲು ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ

    ಮಳಲಿಯ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹು ಪತ್ತೆಯಾಗಿದೆ. ಅದನ್ನು ವಾಪಸ್ ಪಡೆದೇ ಪಡೆಯುತ್ತೇವೆ. ಎಲ್ಲಾ ಮಸೀದಿಗಳನ್ನು ದೇವಾಲಯ ಒಡೆದು ಕಟ್ಟಲಾಗಿದೆ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ ರೀತಿ ಮಳಲಿ ಮಸೀದಿಯನ್ನು ಪಡೆಯುತ್ತೇವೆ ಎಂದರು.

    ಅನುಭವ ಮಂಟಪದ ಪವಿತ್ರ ಸ್ಥಾನ ಈಗ ಅಪವಿತ್ರವಾಗಿದೆ. ಪೀರ್ ಪಾಷಾ ಬಂಗ್ಲೆಯನ್ನು ಅನುಭವ ಮಂಟಪವಾಗಿ ಮತ್ತೆ ಬದಲಾಯಿಸಬೇಕು. ಈ ನಿಟ್ಟಿನಲ್ಲಿನ ಜೂನ್ 12 ರ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲವಿದೆ ಎಂದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಮಗು ಸೇರಿದಂತೆ 4 ಮಂದಿ ಸಾವು

    HIJAB 2

    ರಾಜ್ಯದಲ್ಲಿ ಮತ್ತೆ ಆರಂಭವಾದ ಹಿಜಾಬ್ ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿ, ಕುರಾನ್ ಶರಿಯಾ ಪ್ರಕಾರ ನಡೆಯಲು ಇದು ಪಾಕಿಸ್ತಾನ ಅಲ್ಲ. ಇದು ಭಾರತ. ಕಾನೂನು ವಿರುದ್ಧ ಹೋದವರನ್ನು ಒದ್ದು ಒಳಗೆ ಹಾಕಿ. ಈ ಮಕ್ಕಳ ಹಿಂದೆ ಮುಲ್ಲಾ ಮೌಲಿಗಳ ಷಡ್ಯಂತ್ರ ಅಡಗಿದೆ ಎಂದು ಕಿಡಿಕಾರಿದರು.

  • ದೇಗುಲದಲ್ಲಿ ನಡೆದ ಪೂಜೆಗೆ ಬಂದು ಎಲ್ಲರನ್ನೂ ಭೇಟಿಯಾಗಿದ್ದು ಸಂತಸ ತಂದಿದೆ: ನಲಪಾಡ್

    ದೇಗುಲದಲ್ಲಿ ನಡೆದ ಪೂಜೆಗೆ ಬಂದು ಎಲ್ಲರನ್ನೂ ಭೇಟಿಯಾಗಿದ್ದು ಸಂತಸ ತಂದಿದೆ: ನಲಪಾಡ್

    – ಹಿಜಬ್ ವಿವಾದ ಬಗ್ಗೆ ನಲಪಾಡ್ ಹೇಳಿದ್ದೇನು..?

    ಬೆಂಗಳೂರು: ನಮ್ಮ ದೇಶದಲ್ಲಿ ಅವರವರ ಇಷ್ಟದ ಪ್ರಕಾರ ಧರ್ಮ ಅನುಸರಿಸಬಹುದು ನಾವೆಲ್ಲ ಭಾರತೀಯರು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಹ್ಯಾರಿಸ್ ಅಭಿಪ್ರಾಯ ವಕ್ತಪಡಿಸಿದರು.

    ನೆಲಮಂಗಲ ತಾಲೂಕಿನ ವಾದಕುಂಟೆ ಗ್ರಾಮದ ದೇವಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ನಾನು ಅಧ್ಯಕ್ಷ ಆಗಬೇಕೆಂದು ಹರಕೆ ಹೊತ್ತು ಪೂಜೆ ಮಾಡಿಸಿದ್ದಾರೆ. ನಾನೊಬ್ಬ ಮುಸ್ಲಿಂ ಆದರು ಕೂಡಾ ಕಾರ್ಯಕರ್ತರ ಪ್ರೀತಿ ನಂಬಿಕೆಗೆ ಧಕ್ಕೆ ತರಬಾರದೆಂದು, ಪೂಜೆಗೆ ಬಂದು ಎಲ್ಲರನ್ನೂ ಭೇಟಿಯಾಗಿದ್ದು ನನಗೆ ಸಂತೋಷವಾಗಿದೆ. ಇದು ನನ್ನ ದೇಶ ಇದು ಭಾರತ ಅವರವರ ಇಚ್ಛೆಯಂತೆ ದೇವಾಲಯ, ಮಸೀದಿ, ಚರ್ಚ್‍ಗೆ ನನ್ನನು ಕರೆಯುತ್ತಿರುತ್ತಾರೆ. ಇವತ್ತು ಕೋಮುವಾದಿವಾದಿ ಪಕ್ಷ ಬಿಜೆಪಿ ಸಮಾಜವನ್ನು ಒಡೆಯುತಿದ್ದಾರೆ. ಜನರ ಮನಸ್ಸಿನ ಜೊತೆಗೆ ಆಟವಾಡುತಿದ್ದಾರೆ. ನಾವೆಲ್ಲರೂ ಭಾರತೀಯರು ನಾವೆಲ್ಲ ಒಂದು ಎಂದರು. ಇದನ್ನೂ ಓದಿ: ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    ರಾಜ್ಯದಲ್ಲಿ ಹಿಜಬ್ ಗೊಂದಲ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನನಗೆ 32 ವರ್ಷ ನಾನು ಎಂದಿಗೂ ಇಷ್ಟು ವರ್ಷದಲ್ಲಿ ಇಂತಹ ಪರಿಸ್ಥಿತಿ ನೋಡಿರಲಿಲ್ಲ. ಅವರ ಅವರ ಇಷ್ಟದ ಪ್ರಕಾರ ಧರ್ಮ ಅನುಸರಿಸಬಹುದು ನಾವೆಲ್ಲ ಭಾರತೀಯರು. ಅಂಬೇಡ್ಕರ್ ಕೊಟ್ಟ ಸಂವಿಧಾನದಲ್ಲಿ ಎಲ್ಲರಿಗೂ ದೇಶದಲ್ಲಿ ಸಮಾನರಾಗಿ ಬದುಕುವ ಹಕ್ಕಿದೆ. ಬಿಜೆಪಿಯವರು ಸಮಾಜವನ್ನು ಒಡೆಯುತ್ತಿದ್ದು, ಯಾರು ಧರ್ಮದ ಜೊತೆಗೆ ಇರಬಾರದು ಯಾವ ಧರ್ಮವು ಚೆನ್ನಾಗಿರಬಾರದು ಎಂಬುವುದೇ ಇವರ ಉದ್ದೇಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    70 ವರ್ಷ ಕಾಂಗ್ರೆಸ್ ಕಟ್ಟಿದ ಭಾರತವನ್ನ ಬಿಜೆಪಿಯವರು ಹಾಳುಮಾಡುತ್ತಿದ್ದಾರೆ. ಸರ್ಕಾರ ನಡೆಸಲು ಬರದಿದ್ದರೆ ರಾಜೀನಾಮೆ ನೀಡಿ ಹೋಗಲಿ. 70 ವರ್ಷದಲ್ಲಿ ಇಂತಹ ಆಡಳಿತವನ್ನು ನಾನು ಎಂದಿಗೂ ನೋಡಿರಲಿಲ್ಲ. ಇಂತಹ ಪರಿಸ್ಥಿತಿಯನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರ ಫೇಲ್ ಆಗಿದೆ. ಶಾಲೆಯ ಮಕ್ಕಳಲ್ಲಿ ರಾಜಕೀಯ ತಂದಿದ್ದಾರೆ. ಸರ್ಕಾರ ನಡೆಸಲು ಆಗಲಿಲ್ಲ ಅಂದರೆ ರಾಜಿನಾಮೆ ನೀಡಿ ಮನೆಗೆ ಹೋಗಲಿ. ನಮ್ಮ ಕೈ ಪಕ್ಷದ ಬಳಿ ಒಳ್ಳೆಯ ನಾಯಕರು ಲೀಡರ್ ಇದ್ದು, ಶಾಂತಿಯುತ ಅಧಿಕಾರವನ್ನು ಹೇಗೆ ನಡೆಸಬೇಕೆಂಬುದನ್ನು ತೋರಿಸಿಕೊಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಶಾಂತಿಯುತ ಆಡಳಿತವನ್ನು ಮಾಡಿದೇ. ಆದರೆ ಬಿಜೆಪಿಯವರ ಆಡಳಿತವು ಜನರಲ್ಲಿರುವ ಶಾಂತಿ, ಪ್ರೀತಿಯನ್ನು ಒಡೆಯುತ್ತಿದೆ ಎಂದರು. ಇದನ್ನೂ ಓದಿ: ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಅಂದ ಅಯೂಬ್ ಖಾನ್ – ಸಿಡಿದೆದ್ದ ಜೈನ ಸಮುದಾಯ

    ಈ ಸಂದರ್ಭದಲ್ಲಿ ಕರಗದ ಶ್ರೀ ಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾರಿಸ್‍ರವರಿಗೆ ಇಂದು ಬೈಕ್ ರ್ಯಾಲಿ, ಮತ್ತೊಂದೆಡೆ ಟ್ರಾಕ್ಟರ್ ಮೂಲಕ ಮೆರವಣಿಗೆ ಮಾಡಿದ್ದಾರೆ. ನಲಪಾಡ್‍ರವರು ಒಂದೆಡೆ ಹಿಜಾಬ್ ವಿವಾದ ನಡೆಯುತ್ತಿದ್ದು, ಮತ್ತೊಂದೆಡೆ ದೇವಾಲಯಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಪೂಜೆ ನಡೆಸಲಾಗಿದೆ. ಶ್ರೀಲಕ್ಷ್ಮೀ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ನಂತರ ಅಭಿಮಾನಿಗಳು ಅವರನ್ನು ಬೃಹತ್ ಹಾರ, ಹೂಮಳೆ ಮೂಲಕ ಬರಮಾಡಿಕೊಂಡಿದ್ದಾರೆ. ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಮೆರಗು ತಂದಿದ್ದಾರೆ.

  • ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ : ಹೆಚ್‍ಡಿಕೆ

    ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ : ಹೆಚ್‍ಡಿಕೆ

    ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಷ್ಟೇ ಹಿಜಬ್ ವಿವಾದ ನಡೆಯುತ್ತಿದ್ದು, ಇದು ಬಡ ಮಕ್ಕಳ ಭವಿಷ್ಯವನ್ನು ಬಲಿ ಪಡೆಯುವ ರಾಜಕೀಯ ದುರುದ್ದೇಶವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹಿಜಬ್ ವಿವಾದದ ಕುರಿತು ಜಿಲ್ಲೆಯ ಚಿಂತಾಮಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಬಡ ಮಕ್ಕಳ ಭವಿಷ್ಯವನ್ನು ಬಲಿ ಪಡೆಯುವ ರಾಜಕೀಯ ದುರುದ್ದೇಶವಾಗಿದೆ. ಶ್ರೀಮಂತರ ಮಕ್ಕಳು ಓದುತ್ತಿರುವ ಖಾಸಗಿ ಶಾಲೆಗಳಲ್ಲಿ ಈ ವಿವಾದ ನಡೆಯುತ್ತಿಲ್ಲ. ಹಾಲಿ ಮಾಜಿ ಮಂತ್ರಿಗಳು ಶಾಸಕರ ಮಕ್ಕಳು ಓದುತ್ತಿರುವ ಶಾಲೆಗಳಲ್ಲಿ ವಿವಾದ ಇಲ್ಲ. ಅಮಾಯಕ ಮಕ್ಕಳಲ್ಲಿ ದ್ವೇಷದ ಭಾವನೆ ಹುಟ್ಟುಹಾಕುವುದು ಕೆಲವು ರಾಜಕೀಯ ಪಕ್ಷಗಳು ಬಲವರ್ಧನೆಗೆ ಷಡ್ಯಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

    ಇವರು ಸಮಾಜದಲ್ಲಿ ಕೋಮುಗಲಭೆ ಉಂಟುಮಾಡಿ ಅಶಾಂತಿ ಉಂಟುಮಾಡಲು ಹೊರಟಿದ್ದಾರೆ. ಹಿಜಬ್ ವಿವಾದ ಉದ್ಬವವಾದ ದಿನವೇ ಸರ್ಕಾರ ಸರಿಯಾದ ಕ್ರಮ ತೆಗದುಕೊಂಡಿಲ್ಲ. ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಂಡಿದ್ದರೆ ರಾಷ್ಟ್ರೀಯ ಮಟ್ಟದ ಚರ್ಚೆಗೆ ಅವಕಾಶ ಇರುತ್ತಿರಲಿಲ್ಲ. ರಾಜಕೀಯ ತೆವಲಿಗೆ ರಾಷ್ಟ್ರೀಯ ಪಕ್ಷಗಳು ಬಡ ಮಕ್ಕಳನ್ನು ಬೀದಿಗೆ ತಂದಿದ್ದಾರೆ. ಹಿಜಾಬ್, ಕೇಸರಿ ಉಡುಪು ಧರಿಸುವ ವಿಚಾರದಲ್ಲಿ ಬಡಮಕ್ಕಳನ್ನ ಬಲಿ ಕೊಡುವ ಕೆಲಸ ನಡೆಯುತ್ತಿದೆ. ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ ಎಂದು ಸಿಡಿದರು. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು

    ಖಾಸಗಿ ಶಾಲಾ ಕಾಲೇಜುಗಳಲ್ಲಿ ಈ ವಿಚಾರವಾಗಿ ಯಾವುದೇ ಸಮಸ್ಯೆ ಇಲ್ಲ. ಶಾಸಕರು, ಮಂತ್ರಿಗಳು, ಮಾಜಿ ಶಾಸಕರು, ಮಂತ್ರಿಗಳ ಮಕ್ಕಳು ಖಾಸಗಿ ಶಾಲಾ ಕಾಲೇಜುಗಳಲ್ಲಿ ಓದುತ್ತಿದ್ದಾರೆ. ಬಡಪಾಯಿಗಳ ಮಕ್ಕಳು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಸೇರುತ್ತಾರೆ. ಬಡಪಾಯಿಗಳ ಮಕ್ಕಳನ್ನು ಬೀದಿಗೆ ಬಿಟ್ಟು ರಾಜಕೀಯ ಪಕ್ಷಗಳು ಲೆಕ್ಕಾಚಾರ ಹಾಕುತ್ತಿವೆ ಎಂದರು.

  • ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿಲ್ಲ: ಬಿ.ಸಿ ಪಾಟೀಲ್

    ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿಲ್ಲ: ಬಿ.ಸಿ ಪಾಟೀಲ್

    ಚಿತ್ರದುರ್ಗ: ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರವು ವಿಫಲವಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.

    ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂಬ ಆರೋಪದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿಲ್ಲ. ಈಗಾಗಲೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ಧರಿಸಿ ಬರಲು ಸರ್ಕಾರ ಸೂಚಿಸಿದೆ. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕೋರ್ಟ್ ಸೂಚನೆಯನ್ನು ನಾವು ಪಾಲಿಸುತ್ತೇವೆ ಎಂದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಬುರ್ಕಾ ಧರಿಸದೇ ಧೈರ್ಯ ಪ್ರದರ್ಶಿಸಿ: ಕಂಗನಾ ರಣಾವತ್

    ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ವಿವಾದವನ್ನು ಎತ್ತಿಕಟ್ಟಿ ಪ್ರಚೋದನೆ ಮಾಡುವ ಕೆಲಸ ಕೈ ಪಕ್ಷವು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ, ಮೂಗುತಿ ಸುಂದರಿ ಸುಷ್ಮಿತಾ ಗೌಡ

    ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರತಿದಿನ ಒಬ್ಬರು ನಾಯಕರು ದೆಹಲಿಗೆ ಹೋಗುತ್ತಾರೆ. ಸಿಎಂ ಬದಲಾವಣೆ ಎಂಬುದು ಸರಿಯಲ್ಲ. ಹೆಚ್.ಡಿ ರೇವಣ್ಣ ಹಾಗೂ ಕಾಂಗ್ರೆಸ್ಸಿಗರು ನಮ್ಮನ್ನು ಯಾವತ್ತು ಹೊಗಳಲ್ಲ. ಬಸವರಾಜ ಬೊಮ್ಮಾಯಿ ಅವರು ಸಿಎಂ ಸ್ಥಾನಕ್ಕೆ ಸಮರ್ಥವಾದ ನಾಯಕರಾಗಿದ್ದು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ.

  • ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

    ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

    ದಾವಣಗೆರೆ: ಬೆಣ್ಣೆ ನಗರಿಗೂ ಹಿಜಾಬ್ ವಿವಾದವು ಕಾಲಿಟ್ಟಿದ್ದು, ವಿದ್ಯಾರ್ಥಿಗಳು ಹೊನ್ನಾಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ.

    ಮುಸ್ಲಿಂ ವಿದ್ಯಾರ್ಥಿಗಳು ಸರ್ಕಾರದ ಆದೇಶವಿದ್ದರೂ ಕೂಡ ಹಿಜಾಬ್ ಧರಿಸಿ ಬಂದಿದ್ದಾರೆ. ತರಗತಿಯಲ್ಲಿ ಬುರ್ಖಾ ಧರಿಸಿ ಬಂದ ಹಿನ್ನಲೆ ನಾವು ಕೂಡ ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಿದ್ದೇವೆ ಎಂದು ಹಿಂದೂ ವಿದ್ಯಾರ್ಥಿಗಳು ಹೇಳಿದ್ದಾರೆ.

    ಎಲ್ಲಿವರೆಗೆ ತರಗತಿಯಲ್ಲಿ ಹಿಜಾಬ್ ಇರುತ್ತದೆಯೋ ಅಲ್ಲಿಯವರೆಗೆ ಕೇಸರಿ ಶಾಲು ಧರಿಸಿಯೇ ಹಾಜರಾಗುತ್ತೇವೆ ಎಂದು ಹಿಂದೂ ವಿದ್ಯಾರ್ಥಿಗಳು ಹೇಳಿದರೆ ಹಿಜಬ್ ಧರಿಸಿದ ವಿದ್ಯಾರ್ಥಿನಿಯರು ನಾವು ಹಿಜಬ್ ಬುರ್ಕಾ ಧರಿಸಿಯೇ ಕಾಲೇಜಿಗೆ ಬರುತ್ತೇವೆ. ನಾವು ಸರ್ಕಾರ ಎನೇ ಆದೇಶ ಹೊರಡಿಸಿದರು ಹಿಜಾಬ್ ತೆಗೆಯುವುದಿಲ್ಲ ಪಟ್ಟು ಹಿಡಿದಿದ್ದಾರೆ.

    ಎರಡು ಬಣದ ವಿದ್ಯಾರ್ಥಿಗಳು ಸಮವಸ್ತ್ರ ನೀತಿ ಸಂಹಿತೆಗೆ ಕ್ಯಾರೆ ಎನ್ನುತ್ತಿಲ್ಲ. ವಿದ್ಯಾರ್ಥಿಗಳು ಶಾಲಾ ತರಗತಿಯಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಹಾಕಿಕೊಂಡೇ ಕುಳಿತು ಪಾಠ ಕೇಳುತ್ತಿದ್ದು, ಪದವಿ ಕಾಲೇಜಿನಲ್ಲಿ ಯಾವುದೇ ಪ್ರತಿಭಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಕೊರೊನಾಗೆ ಗೆಳೆಯ ಮೃತ – ಸ್ನೇಹಿತನ ಮಡದಿಯನ್ನ ಮದುವೆಯಾದ ಯುವಕ 

    ಹಿಜಾಬ್- ಕೇಸರಿ ಶಾಲು ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕಾಲೇಜ್‍ಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹಿಜಬ್ ತೆಗೆಯಲ್ಲ ಎಂದು ಶಾಸಕರಿಗೆ ಏರುಧ್ವನಿಯಲ್ಲೇ ವಿದ್ಯಾರ್ಥಿನಿಯರ ಉತ್ತರ ನೀಡಿದ್ದಾರೆ.

    ನೀವು ಈ ರೀತಿ ಹಿಜಬ್ ಧರಿಸಿ ಬಂದರೆ ಅವರು ಕೇಸರಿ ಶಾಲು ಧರಿಸುತ್ತಾರೆ. ಇದು ಮತ್ತೆ ಸಂಘರ್ಷಕ್ಕೆ ಕಾರಣವಾಗುತ್ತೆ ಎಂದು ಸಮಾಧಾನ ಮಾಡಲು ಮುಂದಾದಾಗ ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆಗಲಿ ನಾವು ಯಾವುದೇ ಕಾರಣಕ್ಕೂ ಹಿಜಬ್ ತೆಗೆಯಲ್ಲ. ಹಿಜಬ್ ಹಾಕಿಕೊಂಡೇ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದು ಕುಳಿತ್ತಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

    ದಾವಣಗೆರೆಯಲ್ಲಿ ತೀವ್ರ ಸ್ವರೂಪದ ಹೋರಾಟಕ್ಕೆ ಕಾರಣವಾದ ಹಿಜಬ್ ವಿವಾದವು ನಗರದ ಜಯದೇವ ಸರ್ಕಲ್‍ನಲ್ಲಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಂದ ಈ ಪ್ರತಿಭಟನೆ ನಡೆದಿದ್ದು, ನಾವು ಹಿಜಬ್ ನಿಯಮವನ್ನು ಪಾಲಿಸಿಯೇ ಪಾಲಿಸುತ್ತೇವೆ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

    ಹಿಂದೂ ಜಾಗರಣಾ ವೇದಿಕೆಯು ತರಗತಿಗಳಲ್ಲಿ ಹಿಜಬ್ ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ಸಂಘಟನೆಗಳ ಪ್ರತಿಭಟನೆ ನಡೆಸಿದ್ದಾರೆ. ಹಿಜಬ್ ವಿರೋಧಿಸಿ ಸಮವಸ್ತ್ರ ಧರಿಸಿ, ಹಿಂದೂಸ್ತಾನದಲ್ಲಿ ಇರುವುದಾದರೆ ಹಿಂದೂ ಧರ್ಮದವರು ಹೇಳಿದ ಹಾಗೇ ಕೇಳಬೇಕು ಅಂತ ಘೋಷಣೆ ಕೂಗಿದ್ದಾರೆ. ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನಲೆ ಜಯದೇವ ವೃತ್ತದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಿವೈಎಸ್ಪಿ ನರಸಿಂಹ ತಾಮ್ರಧ್ಬಜ, ಸಿಪಿಐ ಗುರುಬಸವರಾಜ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಎರ್ಪಡಿಸಿದ್ದಾರೆ.