ಬೆಂಗಳೂರು: ಮಹಾರಾಷ್ಟ್ರದಲ್ಲಿ (Maharashtra Rain) ಬಾರಿ ಮಳೆಯಾಗುತ್ತಿದ್ದು ಕೃಷ್ಣಾ ನದಿ (Krishna River) ತುಂಬಿ ಹರಿಯುತ್ತಿದೆ. ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಬ್ಯಾರೇಜ್ಗೆ (Hippargi Barrage) ಒಳಹರಿವು 79,800 ಕ್ಯುಸೆಕ್ ಇದ್ದು 79,050 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಯಾದಗಿರಿಯ ನಾರಾಯಣಪುರ ಡ್ಯಾಂಗೆ ಒಳಹರಿವು ಹೆಚ್ಚಾಗಿರುವುದರಿಂದ ಕೃಷ್ಣನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ರಾಯಚೂರಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ
ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಘಟಪ್ರಭಾ ನದಿ ಅಬ್ಬರಕ್ಕೆ ಬೆಳಗಾವಿಯ ಗೋಕಾಕ್ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಮಹಾರಾಷ್ಟ್ರದ ಅಂಬೋಲಿ ಫಾಲ್ಸ್ ಕೂಡ ಜೀವಕಳೆ ಪಡೆದಿದೆ. ಪ್ರವಾಸಿಗರು ಜಲವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಬಾಗಲಕೋಟೆ: ಲಾಕ್ ಮಾಡಲಾಗಿರುವ ಹಿಪ್ಪರಗಿ ಬ್ಯಾರೇಜ್ (Hipparagi Barrage) ಗೇಟ್ನಿಂದ ನೀರು ಹರಿದು ಹೋಗುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಕೃಷ್ಣ ನದಿಗೆ (Krishna River) ಅಡ್ಡಲಾಗಿ ಹಿಪ್ಪರಗಿ ಬ್ಯಾರೇಜ್ ನಿರ್ಮಾಣವಾಗಿದ್ದು ಒಟ್ಟು 22 ಗೇಟ್ಗಳ ಪೈಕಿ 21 ಗೇಟ್ಗಳು ಪೂರ್ಣವಾಗಿ ಬಂದ್ ಆಗಿದೆ. ಆದರೆ ಏಳನೇ ಗೇಟ್ ಪೂರ್ಣವಾಗಿ ಲಾಕ್ ಆಗದ ಕಾರಣ ಮೂರು ಅಡಿ ಕೆಳಮಟ್ಟದಿಂದ ನೀರು ಹರಿಯುತ್ತಿದೆ. ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ಗೆ ಮತ್ತೆ ಶಾಕ್ – ವಿಚಾರಣೆ ನಾಳೆಗೆ ಮುಂದೂಡಿಕೆ
7ನೇ ಗೇಟ್ ಪೂರ್ಣ ಕೆಳಗಿಳಿಯದೇ ಮೂರಡಿ ಅಂತರದಲ್ಲೇ ನಿಂತಿದೆ. ಗೇಟ್ ಕೆಳಗಡೆ ಯಾವುದೋ ವಸ್ತು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈಗ ದುರಸ್ತಿ ಕಾರ್ಯದಲ್ಲಿ ಬ್ಯಾರೇಜ್ ಸಿಬ್ಬಂದಿ ತೊಡಗಿದ್ದಾರೆ.
ಬೇಸಿಗೆ ಕಾಲದಲ್ಲಿ ಜಮಖಂಡಿ ನಗರ ಹಾಗೂ ಹಳ್ಳಿಗೆ ಇಲ್ಲಿಂದಲೇ ನೀರು ಸರಬರಾಜು ಮಾಡಲಾಗುತ್ತಿದೆ. ಆದಷ್ಟು ಬೇಗ ದುರಸ್ತಿ ಮಾಡಿ ನೀರು ಉಳಿಸಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
6 ಟಿಎಂಸಿ ಸಾಮರ್ಥ್ಯದ ಈ ಬ್ಯಾರೇಜ್ ನಲ್ಲಿ, ನೀರು ಪೋಲಾಗುತ್ತಿರುವುದನ್ನು ಕಂಡ ರೈತ ಸಮೂಹ ಆತಂಕಕ್ಕೆ ಮುಳುಗಿದೆ. ಈ ಬ್ಯಾರೇಜ್ ಜಮಖಂಡಿ, ರಬಕವಿ ಬನಹಟ್ಟಿ ತಾಲೂಕಿನ 50 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಸಾಮರ್ಥ್ಯ ಹೊಂದಿದೆ. ಆದರೆ ಬ್ಯಾರೇಜ್ ಒಂದು ಗೇಟ್ನಿಂದ ನೀರು ನಿರಂತರವಾಗಿ ಪೋಲಾಗ್ತಿರೋದು ರೈತರ ಆತಂಕ್ಕೆ ಕಾರಣವಾಗಿದೆ. ಈಗಾಗಲೇ ಗೇಟ್ ಕ್ಲೋಸ್ ಮಾಡಲು ಅಧಿಕಾರಿಗಳು ಸಿಬ್ಬಂದಿ ವರ್ಗ ಬ್ಯಾರೇಜ್ ಬಳಿ ಬೀಡುಬಿಟ್ಟಿದ್ದು ಗೇಟ್ ದುರಸ್ತಿ ಕಾರ್ಯ ಶುರುಮಾಡಿದ್ದಾರೆ. ಹೆಚ್ಚುವರಿಯಾಗಿ ಹುಬ್ಬಳ್ಳಿಯಿಂದ ತಜ್ಞರನ್ನು ಕರೆಯಿಸಿ ಗೇಟ್ ಬಂದ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ.
ಇತ್ತ ಸ್ಥಳಕ್ಕೆ ಭೇಟಿ ನೀಡಿರುವ ಜಮಖಂಡಿ ಎಸಿ ಶ್ವೇತಾ ಬಿಡಿಕರ್, ಸದ್ಯ ಏಳನೇ ಗೇಟ್ ನಿಂದ 15 ಸಾವಿರ ಕ್ಯೂಸೆಕ್ ನೀರು ಹರಿದು ನದಿ ಸೇರುತ್ತಿದೆ. ಆದರೆ 12 ಸಾವಿರ ಕ್ಯೂಸೆಕ್ ಒಳ ಹರಿವು ಇದೆ. ಹೀಗಾಗಿ ಬೇಸಿಗೆ ಕಾಲದಲ್ಲಿ ರೈತರಿಗೆ ಸಮಸ್ಯೆ ಆಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಸಿಬ್ಬಂದಿ ದುರಸ್ತಿ ಕಾರ್ಯ ಶುರುಮಾಡಿದ್ದಾರೆ. ಗುರುವಾರ ಬೆಳಗ್ಗೆ ಒಳಗಡೆ ಈ ಸಮಸ್ಯೆ ಬಗೆ ಹರಿಯುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ: ಮಹಾರಾಷ್ಟ್ರದ ಸಾಹ್ಯಾದ್ರಿ ಪರ್ವತಶ್ರೇಣಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಯಲ್ಲಿ ಬಾಗಲಕೋಟೆಯ ಹಿಪ್ಪರಗಿ ಬ್ಯಾರೇಜ್ ತುಂಬಿ ಹರಿಯುತ್ತಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಇರುವ ಹಿಪ್ಪರಗಿ ಬ್ಯಾರೇಜ್ ಈಗಿನ ನೀರಿನ ಮಟ್ಟ 519.35 ಮೀಟರ್ ತಲುಪಿದೆ. ಬ್ಯಾರೇಜ್ ನಲ್ಲಿ 1.908 ಟಿಎಂಸಿ ನೀರು ಸಂಗ್ರಹವಾಗಿದೆ.
ನಿರಂತರ ಮಳೆಯಿಂದ ಕೃಷ್ಣಾ ನದಿಯ ಒಳಹರಿವು ಕೂಡ ಹೆಚ್ಚಾಗಿದೆ. ಒಳಹರಿವು 1 ಲಕ್ಷ ಕ್ಯೂಸೆಕ್ ಹರಿತ್ತಾ ಇದೆ. ಹೊರಹರಿವು 1 ಲಕ್ಷದ ಏಳು ಸಾವಿರ ಕ್ಯೂಸೆಕ್ ಹೋಗತ್ತಾ ಇದೆ. ಜಿಲ್ಲೆಯಲ್ಲಿ ಸದ್ಯ ಪ್ರವಾಹ ಭೀತಿ ಇಲ್ಲ. ಹೀಗಾಗಿ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.