Tag: ಹಿಮಂತ್ ಬಿಸ್ವಾ ಶರ್ಮಾ

  • ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    – ಮುಸ್ಲಿಂ ಶಾಸಕರಿಗೆ ನಮಾಜ್‌ ವಿರಾಮಕ್ಕಿಲ್ಲ ಅವಕಾಶ

    ಗುವಾಹಟಿ: ಶುಕ್ರವಾರದಂದು ಮುಸ್ಲಿಂ ಶಾಸಕರಿಗೆ (Muslim MLAs) ಎರಡು ಗಂಟೆಗಳ ನಮಾಜ್ ವಿರಾಮ ನೀಡುವ ದಶಕಗಳ ಹಿಂದಿನ ನಿಯಮವನ್ನು ರದ್ದುಗೊಳಿಸಲು ಅಸ್ಸಾಂ ವಿಧಾನಸಭೆ (Assam) ನಿರ್ಧರಿಸಿದೆ.

    ಸದನದ ಕಲಾಪವನ್ನು ಇತರ ದಿನಗಳಂತೆ ಶುಕ್ರವಾರವೂ ಮುಂದುವರಿಸಲು ವಿಧಾನಸಭೆ ನಿಯಮಗಳ ಸಮಿತಿ ಇಂದು ನಿರ್ಣಯವನ್ನು ಅಂಗೀಕರಿಸಿದೆ. ಇಂದಿನವರೆಗೂ, ಮುಸ್ಲಿಂ ಶಾಸಕರು ನಮಾಜ್ ಪ್ರಾರ್ಥನೆಗೆ ಹಾಜರಾಗುವುದಕ್ಕಾಗಿ ಅಸ್ಸಾಂ ವಿಧಾನಸಭೆಯನ್ನು ಶುಕ್ರವಾರದಂದು ಎರಡು ಗಂಟೆಗಳ ಕಾಲ ಮುಂದೂಡಲಾಗುತ್ತಿತ್ತು. ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ – ಕ್ಷಮೆಯಾಚಿಸಿದ ಪ್ರಧಾನಿ ಮೋದಿ

    ಅಸ್ಸಾಂ ಶಾಸಕಾಂಗ ಸಭೆ ರಚನೆಯಾದಾಗಿನಿಂದ, ಮುಸ್ಲಿಂ ಸದಸ್ಯರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಶುಕ್ರವಾರದ ವಿಧಾನಸಭೆಯ ಅಧಿವೇಶನವನ್ನು ಬೆಳಗ್ಗೆ 11 ಗಂಟೆಗೆ ಮುಂದೂಡಲಾಗುತ್ತಿತ್ತು. ಮುಸ್ಲಿಂ ಸದಸ್ಯರು ಬಂದ ನಂತರ ಮಧ್ಯಾಹ್ನದ ಭೋಜನದ ಬಳಿಕ ಕಲಾಪವನ್ನು ಪುನರಾರಂಭಿಸುತ್ತಿತ್ತು.

    ಸ್ಪೀಕರ್ ಬಿಸ್ವಜಿತ್ ಡೈಮರಿ‌, ಸಂವಿಧಾನದ ಜಾತ್ಯತೀತ ಸ್ವರೂಪದ ದೃಷ್ಟಿಯಿಂದ ಅಸ್ಸಾಂ ವಿಧಾನಸಭೆಯು ಯಾವುದೇ ದಿನದಂತೆ ಶುಕ್ರವಾರದಂದು ಯಾವುದೇ ಮುಂದೂಡಿಕೆ ಇಲ್ಲದೆ ತನ್ನ ಕಲಾಪಗಳನ್ನು ನಡೆಸಬೇಕು ಎಂದು ಪ್ರಸ್ತಾಪಿಸಿದರು. ಇದನ್ನೂ ಓದಿ: ಚುನಾವಣೆಗೆ ರಾಹುಲ್ ಗಾಂಧಿಗೆ ಎಷ್ಟು ಹಣ ನೀಡಲಾಗಿದೆ? – ಲೆಕ್ಕ ನೀಡಿದ ಕಾಂಗ್ರೆಸ್‌

    ಈ ನಿಯಮವನ್ನು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ (Himanta Biswa Sarma) ಸ್ವಾಗತಿಸಿದ್ದಾರೆ. ಆದರೆ ಪ್ರತಿಪಕ್ಷಗಳು ಈ ಕ್ರಮವನ್ನು ಟೀಕಿಸಿವೆ. ಇದು ‘ಮುಸ್ಲಿಂ ಭಾವನೆಗಳನ್ನು ನೋಯಿಸುತ್ತದೆ’ ಎಂದು ಪ್ರತಿಪಾದಿಸಿವೆ.

  • 400 ಕ್ಕೂ ಅಧಿಕ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಅಸ್ಸಾಂ ಸಿಎಂ

    400 ಕ್ಕೂ ಅಧಿಕ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಅಸ್ಸಾಂ ಸಿಎಂ

    ನವದೆಹಲಿ: ಬಿಜೆಪಿಗೆ 300 ಸ್ಥಾನಗಳು ಬಂದಾಗ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ. 400 ಅಧಿಕ ಸ್ಥಾನಗಳು ಬಂದರೆ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ದೇವಸ್ಥಾನ, ಜ್ಞಾನವಾಪಿ ಮಸೀದಿಯ ಜಾಗದಲ್ಲಿ ಭವ್ಯ ಬಾಬಾ ವಿಶ್ವನಾಥ ಮಂದಿರ ನಿರ್ಮಾಣವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ (Himant Boswa Sarma) ಹೇಳಿರುವ ವೀಡಿಯೋ ವೈರಲ್ ಆಗಿದೆ.

    ಚುನಾವಣಾ ಭಾಷಣವೊಂದರಲ್ಲಿ ಮಾತನಾಡಿದ ಅವರು, 400 ಕ್ಕೂ ಅಧಿಕ ಸ್ಥಾನಗಳು ಯಾಕೆ ಬೇಕು ಎಂದು ಕಾಂಗ್ರೆಸ್ (Congress) ನಾಯಕರು ಪ್ರಶ್ನೆ ಎತ್ತಿದ್ದಾರೆ. ಇದಕ್ಕೆ ಉತ್ತರ ನೀಡುವುದು ಸರಿ ಎಂದು ನನಗೂ ಅನಿಸಿತು. ಅದಕ್ಕಾಗಿ ಹೇಳುತ್ತಿದ್ದೇನೆ ಈ ಹಿಂದೆ ದೇಶದಲ್ಲಿ ಮೊಘಲರು ಮಾಡಿರುವುದನ್ನು ಸರಿಪಡಿಸಬೇಕಿದೆ, ಸಾಕಷ್ಟು ಕೆಲಸ ಬಾಕಿ ಇದೆ ಎಂದರು.

    ಕಳೆದ ಹತ್ತು ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರ (Ayodhya Rammandir) ನಿರ್ಮಾಣವಾಗುತ್ತದೆ ಎಂದರೆ ಯಾರು ನಂಬುತ್ತಿರಲಿಲ್ಲ. ಈಗ ಮೋದಿ ಸರ್ಕಾರದ ಅವಧಿಯಲ್ಲಿ ಅದಾಗಿದೆ. ಈಗ ಮಥುರಾ (Mathura) ಮತ್ತು ಕಾಶಿಯಲ್ಲಿ (Kashi) ಭವ್ಯ ನಿರ್ಮಾಣದ ಬಗ್ಗೆ ಜನರಲ್ಲಿ ನಂಬಿಕೆ ಇದೆ. 400 ಸ್ಥಾನಗಳು ಬಂದಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದರು. ಇದನ್ನೂ ಓದಿ: 380ರ ಪೈಕಿ ಈಗಾಗಲೇ ಮೋದಿ 270 ಗೆದ್ದಿದ್ದಾರೆ : ಅಮಿತ್‌ ಶಾ ವಿಶ್ವಾಸ

    ಕಾಂಗ್ರೆಸ್ ಆಡಳಿತದಲ್ಲಿ ಸಂಸತ್ತಿನಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ (POK) ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಕಳೆದೊಂದು ವಾರದಿಂದ ಗಮನಿಸಬಹುದು ಅಲ್ಲಿನ ಜನರು ಭಾರತ ತ್ರಿವರ್ಣ ಧ್ವಜ ಹಿಡಿದು ಭಾರತ ಸೇರಲು ಉತ್ಸುಕರಾಗಿದ್ದಾರೆ. ಈಗ ಶೀಘ್ರದಲ್ಲೇ ಪಿಒಕೆ ನಮ್ಮ ದೇಶದ ಭಾಗವಾಗಲಿದೆ 400 ಅಧಿಕ ಸೀಟುಗಳು ಬಂದಲ್ಲಿ ಪಿಓಕೆ ಕೂಡಾ ಭಾರತದ ಭಾಗವಾಗಲಿದೆ ಎಂದು ಹೇಳಿದರು‌.

  • ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ

    ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ

    ಅಸ್ಸಾಂ: ‌ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯು ಪಾಕಿಸ್ತಾನದ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ವಾಗ್ದಾಳಿ ನಡೆಸಿದ್ದಾರೆ.

    ಜೋರ್ಹತ್ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ಬಗ್ಗೆ ಪ್ರತಿಕ್ರಿಯಿಸಿದರು. ಭಾರತಕ್ಕಿಂತ ಪಾಕಿಸ್ತಾನದಲ್ಲಿ (Pakistan) ನಡೆಯುವ ಚುನಾವಣೆಗಳಿಗೆ ಹೆಚ್ಚು ಸೂಕ್ತವೆಂದು ಆರೋಪಿಸಿದ್ದಾರೆ. ಪ್ರಣಾಳಿಕೆಯು ಅಧಿಕಾರಕ್ಕೆ ಬರಲು ಸಮಾಜವನ್ನು ಒಡೆಯುವ ಗುರಿಯನ್ನು ಹೊಂದಿದೆ ಎಂದು ಅವರು ಕಿಡಿಕಾರಿದರು.

    ಇದು ತುಷ್ಟೀಕರಣದ ರಾಜಕೀಯ ಮತ್ತು ನಾವು ಇದನ್ನು ಖಂಡಿಸುತ್ತೇವೆ. ಪ್ರಣಾಳಿಕೆಯು ಭಾರತದಲ್ಲಿ ಚುನಾವಣೆಗಾಗಿ ಅಲ್ಲ ಪಾಕಿಸ್ತಾನಕ್ಕೆ ಎಂದು ಭಾಸವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್‌ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್‌ ಪ್ರಣಾಳಿಕೆ

    ಹಿಂದೂ ಅಥವಾ ಮುಸ್ಲಿಂ ಯಾವುದೇ ವ್ಯಕ್ತಿ ತ್ರಿವಳಿ ತಲಾಖ್, ಬಹುಪತ್ನಿತ್ವ ಹಾಗೂ ಬಾಲ್ಯ ವಿವಾಹವನ್ನು ಬೆಂಬಲಿಸುವುದಿಲ್ಲ. ಸಮಾಜವನ್ನು ಒಡೆದು ಅಧಿಕಾರಕ್ಕೆ ಬರುವುದು ಕಾಂಗ್ರೆಸ್‌ನ ಮನಸ್ಥಿತಿಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ – ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಇದೇ ವೇಳೆ ಬಿಜೆಪಿಯು ರಾಜ್ಯದ ಎಲ್ಲಾ 14 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶರ್ಮಾ, ಬಿಜೆಪಿಯು ದೇಶವನ್ನು ‘ವಿಶ್ವ ಗುರು ‘ (ವಿಶ್ವ ನಾಯಕ) ಮಾಡುವ ‘ಆಂದೋಲನ ‘ (ಆಂದೋಲನ) ರೂಪವನ್ನು ತೆಗೆದುಕೊಂಡಿದೆ ಎಂದು ಹೇಳಿದರು .

    ಅಸ್ಸಾಂನಲ್ಲಿ ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.

  • ಇಂದು ರಾವಣನ ಬಗ್ಗೆ ಮಾತನಾಡಬಾರದು- ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂ ಸಿಎಂ ವಾಗ್ದಾಳಿ

    ಇಂದು ರಾವಣನ ಬಗ್ಗೆ ಮಾತನಾಡಬಾರದು- ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂ ಸಿಎಂ ವಾಗ್ದಾಳಿ

    ಗುವಾಹಟಿ: ಇಂದು ರಾವಣನ (Ravana) ಬಗ್ಗೆ ಯಾಕೆ ಪ್ರಶ್ನೆಗಳನ್ನು ಕೇಳುತ್ತೀರಿ..?. ಇಂದು ನಾವು ರಾವಣನ ಬಗ್ಗೆ ಮಾತನಾಡಬಾರದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ವಾಗ್ದಾಳಿ ನಡೆಸಿದರು.

    ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ರಾಹುಲ್ ಗಾಂಧಿಯನ್ನು (Rahul Gandhi) ಏಕೆ ಆಹ್ವಾನಿಸಲಿಲ್ಲ ಎಂದು ಮಾಧ್ಯಮದವರು ಪ್ರಶ್ನೆ ಮಾಡಿದರು. ಈ ವೇಳೆ ರಾಮಾಯಣ ಉಲ್ಲೇಖದೊಂದಿಗೆ ಪ್ರತಿಕ್ರಿಯಿಸಿದ ಅವರು, ನೀವು ರಾವಣನ ಬಗ್ಗೆ ಏಕೆ ಮಾತನಾಡುತ್ತಿದ್ದೀರಿ?. ಕನಿಷ್ಠ ರಾಮನ ಬಗ್ಗೆ ಇವತ್ತಾದರೂ ಮಾತನಾಡುತ್ತೀರಾ? 500 ವರ್ಷಗಳ ನಂತರ ರಾಮನ ಬಗ್ಗೆ ಮಾತನಾಡಲು ಇಂದು ಒಳ್ಳೆಯ ದಿನ. ಇಂದು ನಾವು ರಾವಣನ ಬಗ್ಗೆ ಮಾತನಾಡಬಾರದು ಎಂದರು.

    ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾಹುಲ್‌ ಗಾಂಧಿಯವರನ್ನು ಆಹ್ವಾನಿಸಿರಲಿಲ್ಲ. ಆದರೆ ಪಕ್ಷದ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ (Congress) ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಹೋಗಿದೆ. ಆದರೆ ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕ್ರಮ ಎಂದು ಕಾಂಗ್ರೆಸ್‌ ಹೇಳಿದ್ದು, ಅಯೋಧ್ಯೆಗೆ ತೆರಳಲು ನಿರಾಕರಿಸಿದೆ.

    ಇತ್ತ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್‌ ನಾಯಕರ ನಡೆಯನ್ನು ಬಿಜೆಪಿ ಖಂಡಿಸಿದೆ. ನಾಯಕರನ್ನು ಹಿಂದೂ ವಿರೋಧಿಗಳು ಎಂದು ಕರೆದಿರುವ ಬಿಜೆಪಿ, ಅವರಿಗೆ ಜನತೆಯಿಂದಲೇ ಶಿಕ್ಷೆಯಾಗಲಿದೆ ಎಂದುಕಿಡಿಕಾರಿದೆ. ಇದನ್ನೂ ಓದಿ: ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾಗಿದೆ: ಜೋಶಿ

  • ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ

    ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ

    ಹೈದರಾಬಾದ್: ತೆಲಂಗಾಣದಲ್ಲಿ (Telangana) ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 30 ನಿಮಿಷದಲ್ಲಿ ಹೈದರಾಬಾದ್ ಅನ್ನು ‘ಭಾಗ್ಯನಗರ್’ (Bhagya Nagar) ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿಕೆಯೊಂದನ್ನು ನೀಡಿದ್ದಾರೆ.

    ಹೈದರಾಬಾದ್‍ನಲ್ಲಿ ಚುನಾವಣಾ ಪ್ರಚಾರದಲ್ಲಿನ (Election Rally) ತಮ್ಮ ಭಾಷಣದ ವೇಳೆ ಈ ಮಾತನ್ನು ಹೇಳಿದ್ದಾರೆ. ಹೈದರಾಬಾದ್ ಹೆಸರನ್ನು ಭಾಗ್ಯನಗರ್ ಎಂಬುದಾಗಿ ಮರುನಾಮಕರಣ ಮಾಡಬೇಕು ಎಂಬುದಾಗಿ ನಾನು ಅಂದುಕೊಂಡಿದ್ದೇನೆ. ಅದರಂತೆ ಬಿಜೆಪಿ (BJP) ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಮರುನಾಮಕರಣ ಮಾಡುತ್ತೇನೆ. ಇದನ್ನು ಯಾರೂ ಕೂಡ ವಿರೋಧಿಸುವ ಧೈರ್ಯ ಮಾಡಲ್ಲ ಎಂದರು.

    ಕೆಲವು ವಿಷಯಗಳು ಅಸಾಧ್ಯವೆಂದು ತೋರುತ್ತದೆ. ಓಲ್ಡ್ ಸಿಟಿಗೆ ಮೆಟ್ರೋ ರೈಲು ವ್ಯವಸ್ಥೆ ಕಲ್ಪಿಸಬಹುದೇ? ಕೆಲವು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆಯೇ?, ಇನ್ನೂ ಕೆಲವರು ಬಹಿರಂಗವಾಗಿ ಪೊಲೀಸರಿಗೆ ಬೆದರಿಕೆ ಹಾಕಿದಾಗ ನಾವು ಅದನ್ನು ತಡೆಯಬಹುದೇ? ಎಂದು ಇತ್ತೀಚೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ಅವರನ್ನು ಒಳಗೊಂಡ ಘಟನೆಯನ್ನು ಉಲ್ಲೇಖಿಸಿ ಹಳಿದರು. ಇದನ್ನೂ ಓದಿ: 4 ತಿಂಗಳ ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

    ಬಿಜೆಪಿ ಸರ್ಕಾರ ರಚನೆಯಾದ ನಂತರ 30 ನಿಮಿಷಗಳಲ್ಲಿ ಈ ಕೆಲಸಗಳನ್ನು ಮಾಡಲಾಗುವುದು ಎಂದರು. ಶರ್ಮಾ ಅವರು ಕೋಮುವಾದದ ಧ್ವನಿಯೊಂದಿಗೆ ಹಲವಾರು ಕಾಮೆಂಟ್‍ಗಳನ್ನು ಮಾಡಿದ್ದಾರೆ. ಈ ದೇಶದಲ್ಲಿ ಬಹುಪತ್ನಿತ್ವದ ಜೊತೆಗೆ ತುಷ್ಟೀಕರಣ ರಾಜಕಾರಣವೂ ಕೊನೆಗೊಳ್ಳಬೇಕು ಎಂದರು. ತ್ರಿವಳಿ ತಲಾಖ್ ನಿಷೇಧ, ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆಯೂ ಅವರು ಮನವಿ ಮಾಡಿದರು. ಇದನ್ನೂ ಓದಿ: ಭಾರತ ವಿಶ್ವಕಪ್ ಸೋಲಲು ಇಂದಿರಾ ಗಾಂಧಿ ಕಾರಣವೆಂದ ಅಸ್ಸಾಂ ಸಿಎಂ!

  • ಭಾರತ ವಿಶ್ವಕಪ್ ಸೋಲಲು ಇಂದಿರಾ ಗಾಂಧಿ ಕಾರಣವೆಂದ ಅಸ್ಸಾಂ ಸಿಎಂ!

    ಭಾರತ ವಿಶ್ವಕಪ್ ಸೋಲಲು ಇಂದಿರಾ ಗಾಂಧಿ ಕಾರಣವೆಂದ ಅಸ್ಸಾಂ ಸಿಎಂ!

    ಡಿಸ್ಪುರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು (Mamta Banerjee) ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಇದೀಗ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಅವರು ಭಾರತ ಸೋಲಿಗೆ ಇಂದಿರಾ ಗಾಂಧಿಯೇ ಕಾರಣ ಎಂದು ತಿಳಿಸಿದ್ದಾರೆ.

    ನವೆಂಬರ್ 19ರಂದು ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ (IND Vs AUS) ನಡುವೆ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಈ ಸೋಲಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರೇ ಕಾರಣ ಎಂದು ಶರ್ಮಾ ಹೇಳಿದ್ದಾರೆ. ಯಾಕೆಂದರೆ ಅಂದು ಇಂದಿರಾ ಗಾಂಧಿಯವರ (Indira Gandhi) ಜನ್ಮ ದಿನವಾಗಿದೆ. ಹೀಗಾಗಿ ಅಂದೇ ಪಂದ್ಯ ನಡೆದಿದ್ದರಿಂದ ಭಾರತ ಸೋಲನುಭವಿಸಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಪಾಪಿಗಳು ಹಾಜರಾದ ಫೈನಲ್ ಹೊರತುಪಡಿಸಿ ಎಲ್ಲಾ ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ: ಮಮತಾ ಕಿಡಿ

    ಪ್ರತಿ ಪಂದ್ಯವನ್ನೂ ಗೆಲ್ಲುತ್ತಿದ್ದೆವು. ಆದರೆ ಫೈನಲ್‍ನಲ್ಲಿ ಮಾತ್ರ ಸೋತೆವು. ಆ ದಿನ ಏನಾಗಿತ್ತು? ನಾವೇಕೆ ಸೋತಿದ್ದೇವೆ? ಎಂದು ಪಂದ್ಯ ಮುಗಿದ ಮೇಲೆ ಬಂದು ನೋಡಿದೆ. ಈ ವೇಳೆ ಅಂದೇ ಇಂದಿರಾ ಗಾಂಧಿಯವರ ಜನ್ಮ ದಿನ ಇರುವುದು ಗೊತ್ತಾಯಿತು. ಆಗ ಸೋಲಿಗೆ ಕಾರಣ ಬಯಲಾಯಿತು ಎಂದು ತಮ್ಮದೇ ಶೈಲಿಯಲ್ಲಿ ನುಡಿದರು. ಇದನ್ನೂ ಓದಿ: ಆಸ್ಟ್ರೇಲಿಯಾಗೆ ಬಂದಿಳಿದ ಚಾಂಪಿಯನ್ ಪ್ಯಾಟ್ ಕಮ್ಮಿನ್ಸ್- ಸ್ವಾಗತಿಸಲು ಜನವೇ ಇಲ್ಲ

    ಇದೇ ವೇಳೆ ಮೋದಿಯವರನ್ನು ವಿರೋಧಿಸುವ ಪಕ್ಷಗಳೊಂದಿಗೆ ವಿರೋಧ ಪಕ್ಷಗಳು ಕೈಜೋಡಿಸಿವೆ ಎಂದು ಆರೋಪಿಸಿದ ಶರ್ಮಾ, ಮುಂದಿನ ದಿನಗಳಲ್ಲಿ ನೆಹರೂ-ಗಾಂಧಿ ಕುಟುಂಬದ ಸದಸ್ಯರ ಜನ್ಮದಿನದಂದು ಫೈನಲ್ ಪಂದ್ಯವನ್ನು ಆಯೋಜನೆ ಮಾಡದಂತೆ ನೋಡಿಕೊಳ್ಳಬೇಕು ಎಂದು ಬಿಸಿಸಿಐಗೆ ಹೇಳಲು ಬಯಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಲಕ್ನೋದಲ್ಲಿ ಫೈನಲ್‌ ನಡೆಯುತ್ತಿದ್ದರೆ ಭಾರತ ಗೆಲ್ಲುತ್ತಿತ್ತು: ಮೋದಿ ಪಿಚ್‌ ಬಗ್ಗೆ ಅಖಿಲೇಶ್‌ ಟೀಕೆ

  • ಪಿಎಫ್‌ಐ ಪ್ರಚೋದಿತ, ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ: ಭಜರಂಗ ದಳ ನಿಷೇಧಕ್ಕೆ ಬಿಸ್ವಾ ಕಿಡಿ

    ಪಿಎಫ್‌ಐ ಪ್ರಚೋದಿತ, ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ: ಭಜರಂಗ ದಳ ನಿಷೇಧಕ್ಕೆ ಬಿಸ್ವಾ ಕಿಡಿ

    ಬೆಂಗಳೂರು: ಕಾಂಗ್ರೆಸ್ (Congress) ಮುಸ್ಲಿಮರ ಓಲೈಕೆಗಾಗಿ ಬಜರಂಗದಳ (Bajrang Dal) ನಿಷೇಧದ ಬಗ್ಗೆ ಹೇಳಿದೆ. ಇದು ಪಿಎಫ್‌ಐ (PFI) ಪ್ರಚೋದಿತ ಪ್ರಣಾಳಿಕೆ. ಪಿಎಫ್‌ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ರಚಿಸಿರುವ ಪ್ರಣಾಳಿಕೆ ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಟೀಕಿಸಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನೀಡಿರುವಂತಹ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿರುವ ಶರ್ಮಾ, ಈಗಾಗಲೇ ಪಿಎಫ್‌ಐ ಬ್ಯಾನ್ ಆಗಿದೆ. ಈಗ ಪಿಎಫ್‌ಐ ಬ್ಯಾನ್ ಮಾಡುತ್ತೇವೆ ಎನ್ನುವುದರಲ್ಲಿ ಏನು ಅರ್ಥ ಇದೆ? ಇದರ ಅರ್ಥ ಇಷ್ಟೇ. ಅವರು ಪಿಎಫ್‌ಐ ಬ್ಯಾನ್ ಮಾಡಿದ್ದಾರೆ, ನಾವು ಅದಕ್ಕೆ ಪರ್ಯಾಯವಾಗಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಲು ಹೊರಟಿದ್ದಾರೆ. ಈ ಮೂಲಕ ಮುಸ್ಲಿಮರ ಓಲೈಕೆ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ – ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು

    ಪರಮೇಶ್ವರ್ ಸಮರ್ಥನೆ:
    ಕಾಂಗ್ರೆಸ್ ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿರುವ ವಿಚಾರವನ್ನು ಸಮರ್ಥಿಸಿಕೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್, ಶಾಂತಿ ಕದಡುವ ಯಾವುದೇ ಸಂಸ್ಥೆಯನ್ನು ನಾವು ನಿಯಂತ್ರಣ ಮಾಡುತ್ತೇವೆ. ಪ್ರಣಾಳಿಕೆಯಲ್ಲಿ ನಾವು ಹೇಳಿದ್ದೇವೆ. ಕರ್ನಾಟಕ ಶಾಂತಿಯ ತೋಟ ಆಗಬೇಕು. ಇದಕ್ಕಾಗಿ ನಾವು ಎಲ್ಲ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ- ಕಾಂಗ್ರೆಸ್‍ನಿಂದ ಪ್ರಣಾಳಿಕೆ ರಿಲೀಸ್

  • ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ದಿಸ್ಪುರ್: ಕಾಂಗ್ರೆಸ್ ಮುಖಂಡ ಪವನ್ ಖೇರಾ (Pawan Khera) ಅವರ ಬಂಧನ ಹಾಗೂ ಬಿಡುಗಡೆಯ ಬಳಿಕ ಅವರು ನೀಡಿದ್ದ ಹೇಳಿಕೆಗೆ ಬೆಷರತ್ ಕ್ಷಮೆ ಯಾಚಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಯಾರು ಗೌರವಕ್ಕೆ ಧಕ್ಕೆ ಬರುವಂತಹ ಯಾವ ಪದಗಳನ್ನು ಬಳಸುವದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಅಸ್ಸಾಂ (Assam) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಶುಕ್ರವಾರ ಟ್ವೀಟ್ ಮಾಡಿದ್ದಾರೆ.

    ರಾಯ್‍ಪುರದ (Raipur) ಕಾಂಗ್ರೆಸ್ ಮಾಹಾಧಿವೇಶನಕ್ಕೆ (Congress plenary session) ತೆರಳಲು ವಿಮಾನವೇರಿದ್ದ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ ಬಂಧಿಸಿದ್ದರು. ಖೇರಾ ಅವರ ವಿರುದ್ಧ ಕ್ರಿಮಿನಲ್ ಸಂಚು, ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಕೋಮು ಸೌಹಾರ್ದತೆಗೆ ಪ್ರಚೋದಿಸಿದ ಆರೋಪ ದಾಖಲಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಐಜಿಪಿ ಮತ್ತು ವಕ್ತಾರ ಪ್ರಶಾಂತ ಕುಮಾರ್ ಭುಯಾನ್ ತಿಳಿಸಿದ್ದರು. ಇದನ್ನೂ ಓದಿ: ಸಿಟಿ ರವಿಗೆ ಮೂಳೆ ಬಿರಿಯಾನಿ, ಚಿಕನ್ ಪಾರ್ಸೆಲ್ ಮಾಡಿದ ಕೈ ಪಡೆ

     ಮುಂಬೈನ ಪತ್ರಿಕಾಗೋಷ್ಠಿಯೊಂದರಲ್ಲಿ ಫೆ.17ರಂದು ಖೇರಾ, ನರೇಂದ್ರ ಗೌತಮ್‍ದಾಸ್ ಮೋದಿ ಎಂದು ಉಚ್ಛರಿಸಿ ಬಳಿಕ ನರೇಂದ್ರ ದಾಮೋದರ ದಾಸ್ ಮೋದಿ (Narendra Modi) ಎಂದಿದ್ದರು. ಅಸ್ಸಾಂ ಪೊಲೀಸರು ಬಂಧಿಸಿದ ಕೂಡಲೇ ವಕೀಲರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತುರ್ತು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR

    ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR

    ಗುವಹಾಟಿ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ (Kaziranga National Park) ಜೀಪ್ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಶಾ ಫೌಂಡೇಶನ್‍ನ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.

    ಸದ್ಗುರು ಜಗ್ಗಿ ವಾಸುದೇವ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ವಾಹನ ಚಲಾಯಿಸಿದರು ಎಂಬ ಕಾರಣಕ್ಕೆ ಅವರಿಬ್ಬರ ವಿರುದ್ಧ ಉದ್ಯಾನವನದ ಹತ್ತಿರದ ಎರಡು ಗ್ರಾಮಗಳ ಇಬ್ಬರು ನಿವಾಸಿಗಳು ದೂರು ದಾಖಲಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ್ನು ಪ್ರವಾಸಿಗರಿಗಾಗಿ ಶನಿವಾರ ತೆರೆಯಲಾಗಿತ್ತು. ಅಂದು ರಾತ್ರಿ ಸದ್ಗುರು ಜಗ್ಗಿ ವಾಸುದೇವ್ ಉದ್ಯಾನದ ಒಳಗೆ ಜೀಪ್ ಚಾಲನೆ ಮಾಡಿದ್ದಾರೆ. ಅವರ ಪಕ್ಕ ಸಿಎಂ ಹಿಮಂತ ಬಿಸ್ವಾ ಶರ್ಮಾ ಕುಳಿತಿದ್ದರು. ಅಸ್ಸಾಂ ಸಂಪುಟ ಸಚಿವ ಜಯಂತ ಮಲ್ಲ ಮತ್ತಿತರರು ಕೂಡಾ ಜೀಪ್‍ನಲ್ಲಿ ರಾತ್ರಿ ಉದ್ಯಾನದಲ್ಲಿ ಸಂಚರಿಸಿದ್ದರು. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ನಷ್ಟ

    ಇದೀಗ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ (Wildlife Protection Act) ಸ್ಥಳೀಯರಾದ ಸೋನೇಶ್ವರ್ ನಾರಾ ಮತ್ತು ಪ್ರವೀಣ್ ಪೆಗು ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬೊಕಾಕಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಫಾರಿ ವನ್ಯಜೀವಿ ಸಂರಕ್ಷಣೆ ಕಾಯ್ದೆ, 1972ರ ಉಲ್ಲಂಘನೆಯಾಗಿದೆ ಎಂದು ಎಫ್‍ಐಆರ್‌ನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ಕೇರಳದ ಬೀದಿಗಳಲ್ಲಿ ಫುಟ್‍ಬಾಲ್ ಆಡಿದ ರಾಹುಲ್

    ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಉದ್ಯಾನದೊಳಗೆ ಜೀಪ್ ಸಂಚಾರವನ್ನು ನಿಷೇಧಿಸಲಾಗಿದೆ. ಆದರೂ ಸದ್ಗುರು ಮತ್ತು ಹಿಮಂತ ಬಿಸ್ವಾ ಶರ್ಮಾ ಜೀಪ್ ಚಾಲನೆ ಮಾಡಿದ್ದಾರೆ. ಇಂತಹ ಘಟನೆಗಳಿಂದ ಕಾಜಿರಂಗ ಮತ್ತು ಅಲ್ಲಿಯ ಪ್ರಾಣಿಗಳ ಸಂರಕ್ಷಣೆಗೆ ಅಪಾಯ. ಕಾನೂನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಅವರಿಬ್ಬರನ್ನು ಬಂಧಿಸಿ ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಅವರಿಬ್ಬರೂ ಸಾರ್ವಜನಿಕರರೊಂದಿಗೆ ಕ್ಷಮೆ ಕೇಳಬೇಕು. ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಆರೋಪದ ಬೆನ್ನಲ್ಲೇ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ಜೀಪ್ ಚಾಲನೆ ಮಾಡಿಲ್ಲ. ರಾತ್ರಿ ವೇಳೆ ಉದ್ಯಾನವನಕ್ಕೆ ಭೇಟಿ ಕೊಡಬಾರದೆಂದು ಕಾನೂನಿಲ್ಲ ಎಂದು ಹಿಮಂತ ಬಿಸ್ವಾ ಶರ್ಮಾ ಆರೋಪವನ್ನು ಅಲ್ಲಗಳೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಸ್ಸಾಂ ಪ್ರವಾಹ – ಕತ್ತಿನವರೆಗೆ ನೀರಿದ್ದರೂ ಸಿಎಂ ಸ್ವಾಗತಕ್ಕೆ ಧಾವಿಸಿದ ವ್ಯಕ್ತಿ

    ಅಸ್ಸಾಂ ಪ್ರವಾಹ – ಕತ್ತಿನವರೆಗೆ ನೀರಿದ್ದರೂ ಸಿಎಂ ಸ್ವಾಗತಕ್ಕೆ ಧಾವಿಸಿದ ವ್ಯಕ್ತಿ

    ದಿಸ್ಪುರ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಬರಾಕ್ ಕಣಿವೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ, ಒಬ್ಬ ವ್ಯಕ್ತಿ ಕತ್ತಿನವರೆಗೆ ನೀರಿದ್ದರೂ ಸಿಎಂ ಅನ್ನು ಸ್ವಾಗತಿಸಲು ಧಾವಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಅಸ್ಸಾಂನ ಭೀಕರ ಪ್ರವಾಹದಿಂದ ನಲುಗಿರುವ ಪ್ರದೇಶಗಳಿಗೆ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಭೇಟಿ ನೀಡುತ್ತಿದ್ದು, ಜನರ ನೋವುಗಳನ್ನು ಆಲಿಸುತ್ತಿದ್ದಾರೆ. ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಪ್ರವಾಹದ ಸ್ಥಿತಿ ಕ್ರಮೇಣ ಸುಧಾರಣೆ ಕಾಣಿಸುತ್ತಿದೆ ಹಾಗೂ ಪ್ರವಾಹದ ನೀರು ತಗ್ಗುತ್ತಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ನಿಮಗೆ ತಾಕತ್ ಇದ್ರೆ ಚುನಾವಣೆಗೆ ಬನ್ನಿ: ರೆಬೆಲ್ ಶಾಸಕರಿಗೆ ಸವಾಲೆಸೆದ ಆದಿತ್ಯ ಠಾಕ್ರೆ

    ಕಳೆದ 24 ಗಂಟೆಗಳಲ್ಲಿ ಅಸ್ಸಾಂನ ಪ್ರವಾಹದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಬಾರ್ಪೇಟಾ, ಕ್ಯಾಚಾರ್, ದರ್ರಾಂಗ್ ಹಾಗೂ ಗೋಲಾಘಾಟ್ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು ವರದಿಯಾಗಿದೆ. ಅಸ್ಸಾಂನ ಈ ಬಾರಿಯ ಪ್ರವಾಹದಲ್ಲಿ ಶನಿವಾರದವರೆಗೆ 121 ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ

    ಅಸ್ಸಾಂನ ಒಟ್ಟಾರೆ ಪ್ರವಾಹ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆಯಾದರೂ, ರಾಜ್ಯದ 27 ಜಿಲ್ಲೆಗಳಲ್ಲಿ, 2,894 ಹಳ್ಳಿಗಳಲ್ಲಿ 25.10 ಲಕ್ಷಕ್ಕೂ ಹೆಚ್ಚು ಜನರು ಪರಿಣಾಮವನ್ನು ಎದುರಿಸುತ್ತಿದ್ದಾರೆ. ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಢ್, ದಿಮಾ ಹಸಾವೊ, ಗೋಲ್ಪಾರಾ, ಗೋಲಾಘಾಟ್, ಹೈಲಕಂಡಿ, ಹೊಜೈ, ಕಮ್ರೂಪ್, ಕಮ್ರೂಪ್ ಮೆಟ್ರೋಪಾಲಿಟನ್, ಕರ್ಬಿ ಆಂಗ್ಲಾಂಗ್ ವೆಸ್ಟ್, ಕರೀಮ್‌ಗಂಜ್, ಲಖಿಂಪುರ, ಮೋರಿಗಾಂವ್, ನಾಗಾಂವ್, ನಲ್ಬರಿ, ಸೋನಿತ್‌ಪುರ್, ಸೌತ್ ಸಲ್ಮಾರಾ, ತಮುಲ್‌ಪುರ್ ಹಾಗೂ ಉದಲ್‌ಗುರಿ ಇನ್ನೂ ಕೂಡಾ ಪ್ರವಾಹದಿಂದ ಚೇತರಿಕೆ ಕಂಡಿಲ್ಲ.

    Live Tv