Tag: ಹಿಮಂತ ಬಿಸ್ವಾ ಶರ್ಮ

  • ನನಗೆ ಸದ್ಯ ಮುಸ್ಲಿಂ ಮತಗಳು ಬೇಡ: 15 ವರ್ಷದ ನಂತ್ರ ಬೇಕು ಎಂದು ಅಸ್ಸಾಂ ಸಿಎಂ ಹೇಳಿದ್ಯಾಕೆ?

    ನನಗೆ ಸದ್ಯ ಮುಸ್ಲಿಂ ಮತಗಳು ಬೇಡ: 15 ವರ್ಷದ ನಂತ್ರ ಬೇಕು ಎಂದು ಅಸ್ಸಾಂ ಸಿಎಂ ಹೇಳಿದ್ಯಾಕೆ?

    ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ನನಗೆ ಸದ್ಯ ಮುಸ್ಲಿಂ ಮತಗಳು (Muslim Vote) ಬೇಡ, ವೋಟ್ ಬ್ಯಾಂಕ್ (Vote Bank) ರಾಜಕಾರಣದಿಂದ (Politics) ಸಮಸ್ಯೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ.

    ಮಾಧ್ಯಮ ಸಂದರ್ಶನವೊಂದರಲ್ಲಿ ಈ ರೀತಿಯಾದ ಹೇಳಿಕೆಯನ್ನು ನೀಡಿದ ಅವರು, ನಾನು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗುವುದಿಲ್ಲ. ಅಲ್ಲದೇ ಕಾಂಗ್ರೆಸ್ (Congress) ಪಕ್ಷದಂತೆ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಿಷಯಗಳೊಂದಿಗೆ ರಾಜಕೀಯವನ್ನು ಜೋಡಿಸುವುದಿಲ್ಲ. ನಾನು ತಿಂಗಳಿಗೊಮ್ಮೆ ಮುಸ್ಲಿಂ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಅವರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಜನರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಸೇರಿಸುವುದಿಲ್ಲ. ಕಾಂಗ್ರೆಸ್ ಕೇವಲ ಮತಗಳಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದೆ ಹೊರತು ಅವರ ಶ್ರೇಯೋಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. ಆದ್ದರಿಂದ ಮುಸ್ಲಿಮರು ಕಾಂಗ್ರೆಸ್‌ನೊಂದಿಗಿನ ತಮ್ಮ ಸಂಬಂಧದ ಬಗ್ಗೆ ಅರಿತುಕೊಳ್ಳಬೇಕು ಎಂದರು. ಇದನ್ನೂ ಓದಿ: ಪಾಕ್, ಚೀನಾಕ್ಕೆ ಠಕ್ಕರ್ – ಶ್ರೀನಗರದಲ್ಲಿ ಮೇಲ್ದರ್ಜೆಗೆರಿಸಿದ MiG- 29 ಯುದ್ಧ ವಿಮಾನ ನಿಯೋಜನೆ

    ನನಗೆ ಮತ ನೀಡಬೇಡಿ. ನಿಮ್ಮ ಪ್ರದೇಶಗಳನ್ನು ಮುಂದಿನ 10 ವರ್ಷಗಳಲ್ಲಿ ಅಭಿವೃದ್ಧಿಪಡಿಸುತ್ತೇನೆ. ಬಾಲ್ಯವಿವಾಹ ಪದ್ಧತಿ ಕೊನೆಗೊಳ್ಳಬೇಕು. ಮದರಸಾಗಳಿಗೆ ಹೋಗುವುದನ್ನು ನಿಲ್ಲಿಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಬೇಕು. ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ನಾನು 7 ಕಾಲೇಜುಗಳನ್ನು ಉದ್ಘಾಟಿಸಲಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

    ಕಾಂಗ್ರೆಸ್ ಮುಸ್ಲಿಂ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಶಾಲೆಗಳನ್ನು ನಿರ್ಮಿಸಲಿಲ್ಲ. ಆದರೆ ನಾನು ಅದನ್ನು ಅಭಿವೃದ್ಧಿಪಡಿಸಲು ಬಯಸುತ್ತೇನೆ. ಮುಂದಿನ 10ರಿಂದ 15 ವರ್ಷಗಳವರೆಗೆ ಇದನ್ನು ಅಭಿವೃದ್ಧಿಪಡಿಸಿದ ಬಳಿಕ ಮುಸ್ಲಿಮರ ಹತ್ತಿರ ಮತ ಕೇಳುತ್ತೇನೆ. ಈಗ ಅವರ ಬಳಿ ಮತ ಕೇಳಿದರೆ ಅದು ಕೊಡುವ ಮತ್ತು ಕೊಂಡುಕೊಳ್ಳುವ ಸಂಬಂಧವಾಗಲಿದೆ. ಅದು ವಹಿವಾಟಿನ ಸಂಬಂಧವಾಗುವುದು ನನಗೆ ಇಷ್ಟವಿಲ್ಲ ಎಂದರು. ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಪ್ರಧಾನಿ ನಗುತ್ತ ಜೋಕ್ ಮಾಡಿಕೊಂಡಿದ್ದಾರೆ – ರಾಹುಲ್ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ದಿಸ್ಪುರ್: ಅಸ್ಸಾಂ ರಾಜ್ಯ ಸರ್ಕಾರ (Assam Government) ಬಾಲ್ಯ ವಿವಾಹ (Child Marriage) ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ? ಜೈಲಿಗೆ ಹೋದವರ ಹೆಂಡತಿಯರು ಹಾಗೂ ಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ಅವರನ್ನ ಪ್ರಶ್ನಿಸಿದ್ದಾರೆ.

    ಅವರಿಂದು ಸುದ್ದಿಗಾರರೊಂದಿಗೆ ಮಾತಮಾಡಿ, ಅಸ್ಸಾಂ ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ. ಕಳೆದ 6 ವರ್ಷಗಳಿಂದಲೂ ಮೌನ ವಹಿಸಿದ್ದದ್ದು ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ಬಾಲ್ಯ ವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕೈಗೊಂಡಿರುವ ಕಠಿಣ ಕಾರ್ಯಾಚರಣೆ ವಿರುದ್ಧ ಅವರು ಕಿಡಿಕಾರಿದ್ದಾರೆ. ಕಳೆದ 6 ವರ್ಷಗಳಿಂದ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಅಷ್ಟು ವರ್ಷಗಳಿಂದ ನೀವು ಏನು ಮಾಡುತ್ತಿದ್ರಿ? ಅದು ನಿಮ್ಮ ಸರ್ಕಾರದ ವೈಫಲ್ಯ. ನೀವು ಪುರುಷರನ್ನ ಜೈಲಿಗೆ ಕಳುಹಿಸುತ್ತಿದ್ದೀರಿ. ಈಗ ಅವರ ಪತ್ನಿಯರು, ಹೆಣ್ಣುಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

    ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2,250 ಮಂದಿಯನ್ನ ಬಂಧಿಸಿದ್ದಾರೆ. ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ ನಂತರ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ 4,074 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2,250 ಮಂದಿಯನ್ನ ಜೈಲಿಗಟ್ಟಿದ್ದಾರೆ.

    14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ ಅಸ್ಸಾಂ ಸಿಎಂ ಈ ಕ್ರಮ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಪ್ರತಿಪಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಹುಲ್‌ ಗಾಂಧಿ, ರಾಜೀವ್‌ ಗಾಂಧಿ ಮಗನೇ ಅಂತ ನಾವು ಕೇಳಿದ್ದೇವೆಯೇ? ಅಸ್ಸಾಂ ಸಿಎಂ

    ರಾಹುಲ್‌ ಗಾಂಧಿ, ರಾಜೀವ್‌ ಗಾಂಧಿ ಮಗನೇ ಅಂತ ನಾವು ಕೇಳಿದ್ದೇವೆಯೇ? ಅಸ್ಸಾಂ ಸಿಎಂ

    ಡೆಹ್ರಾಡೂನ್: ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಟೀಕಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ರಾಹುಲ್‌ ಗಾಂಧಿ ಅವರು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಮಗ ಎಂಬುದಕ್ಕೆ ಅವರ ಪಕ್ಷದವರಿಂದ ನಾವು ಪುರಾವೆ ಕೇಳುವುದಿಲ್ಲ ಎಂದು ಟೀಕಿಸಿದ್ದಾರೆ.

    ಉತ್ತರಾಖಂಡ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಶರ್ಮಾ, ಸರ್ಜಿಕಲ್‌ ಸ್ಟ್ರೈಕ್‌ ಮತ್ತು ಕೋವಿಡ್‌ ಲಸಿಕೆ ಕುರಿತು ಅನುಮಾನ ವ್ಯಕ್ತಪಡಿಸಿ, ವಿವರಗಳನ್ನು ರಾಹುಲ್‌ ಗಾಂಧಿ ಅವರು ಕೇಳಿದ್ದರು. ಅದಕ್ಕೆ ಪ್ರತಿಯಾಗಿ ಬಿಸ್ವಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿತ – 2 ಸಾವು, 12 ಮಂದಿ ಸಿಲುಕಿರುವ ಭೀತಿ

    ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ್ದು ಹಾಗೂ ಕೋವಿಡ್‌ ಲಸಿಕೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪುರಾವೆಯನ್ನು ಕೇಳುತ್ತಿದೆ. ನಾವು ಎಂದಾದರು ರಾಹುಲ್‌ ಗಾಂಧಿ ಅವರ ಬಳಿ ರಾಜೀವ್‌ ಗಾಂಧಿ ಮಗ ಎಂಬುದಕ್ಕೆ ಪುರಾವೆ ಕೇಳಿದ್ದೇವೆಯೇ ಎಂದು ಪ್ರಶ್ನಿಸಿದ್ದಾರೆ.

    ಕೆಲವೊಮ್ಮೆ ಅವರು ಭಾರತ ಒಂದು ರಾಷ್ಟ್ರವಲ್ಲ, ರಾಜ್ಯಗಳ ಒಕ್ಕೂಟ ಎಂದು ಹೇಳುತ್ತಾರೆ. ಇದನ್ನೆಲ್ಲಾ ಕೇಳಿದಾಗ ಜಿನ್ನಾ ಆತ್ಮ ಕಾಂಗ್ರೆಸ್‌ ಮೇಲೆ ಸೇರಿಕೊಂಡಿದೆ ಎನಿಸುತ್ತದೆ. ಮದರಸಾಗಳು, ಮುಸ್ಲಿಂ ವಿಶ್ವವಿದ್ಯಾಲಯಗಳನ್ನು ತೆರೆಯುವುದು ಸರಿ ಎನ್ನುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ