Tag: ಹಿಮಾಂತ ಬಿಸ್ವಾ ಶರ್ಮಾ

  • ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

    ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

    ಗುವಾಹಟಿ: ರಾಹುಲ್ ಗಾಂಧಿ ಮತ್ತು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Sarma) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಭ್ರಷ್ಟಾಚಾರ ಮಾಡಿರುವ ನಿಮ್ಮನ್ನ ಜೈಲಿಗೆ ಹಾಕಬೇಕು ಎಂದಿದ್ದ ರಾಹುಲ್ ಹೇಳಿಕೆಗೆ ಶರ್ಮಾ ಕೆಂಡಾಮಂಡಲರಾಗಿದ್ದಾರೆ.

    ನಿಮ್ಮ ಹಾಗೆ ಬಾಟೆಲ್ ಹಾಲು ಕುಡಿದು ಬೆಳೆದವನಲ್ಲ. ತಾಯಿ ಎದೆಹಾಲು ಕುಡಿದ ಮಗ ನಾನು. ಪೈಕಾನ್ ಮೀಸಲು ಅರಣ್ಯದಲ್ಲಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾತ್ಮಕ ಘರ್ಷಣೆಗೆ ರಾಹುಲ್ ಗಾಂಧಿ ದ್ವೇಷಭಾಷಣ ಕಾರಣ. ರಾಹುಲ್ (Rahul Gandhi), ಖರ್ಗೆ ಅಸ್ಸಾಂಗೆ ಭೇಟಿ ನೀಡಿದ ವೇಳೆ ಮಾಡಿರುವ ಭಾಷಣಗಳನ್ನು ಅಧಿಕಾರಿಗಳು ಪರಿಶೀಲಿಸ್ತಿದ್ದಾರೆ. ಸಾಕ್ಷ್ಯಾಧಾರ ಸಿಕ್ಕರೆ ನಿಮ್ಮನ್ನ ಜೈಲಿಗಟ್ಟುತ್ತೇನೆ ಅಂತ ಗುಡುಗಿದ್ದಾರೆ. ಅಲ್ಲದೇ ದೇಶದಲ್ಲಿ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕಾಗಿ ಕಾಯುತ್ತಿವೆ ಅಂದಿದ್ದಾರೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

    ಇನ್ನೂ, ರಾಬರ್ಟ್ ವಾದ್ರಾ (Robert Vadra) ಭೂ ಅವ್ಯವಹಾರ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ಗೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ನನ್ನ ಬಾವನಿಗೆ ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಹಿಂಸಿಸುತ್ತಿದೆ. ಇದೀಗ ದಾಖಲಾಗಿರುವ ಚಾರ್ಜ್ಶೀಟ್ ಕೂಡ ಅದರ ಮುಂದುವರಿದ ಭಾಗವಾಗಿದೆ ಅಂದಿದ್ದಾರೆ. ರಾಬರ್ಟ್, ಪ್ರಿಯಾಂಕಾ ಮತ್ತು ಅವರ ಮಕ್ಕಳು ಮತ್ತೊಂದು ದುರುದ್ದೇಶಪೂರಿತ, ರಾಜಕೀಯ ಪ್ರೇರಿತ ಅಪಪ್ರಚಾರ, ಕಿರುಕುಳವನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲುತ್ತೇನೆ. ಸತ್ಯ ಎಂದಿಗೂ ಮೇಲುಗೈ ಸಾಧಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

  • ಅಸ್ಸಾಂನಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!

    ಅಸ್ಸಾಂನಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!

    ಗುವಾಹಟಿ: ಅಸ್ಸಾಂನಲ್ಲಿ ಹೋಟೆಲ್‌ (Hotels), ರೆಸ್ಟೋರೆಂಟ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಘೋಷಿಸಿದ್ದಾರೆ.

    ಗೋಮಾಂಸ (Beef )ಸೇವನೆಯ ಬಗ್ಗೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಸೂದೆಯ ನಿಬಂಧನೆಗಳನ್ನು ಉಲ್ಲಂಘಿಸಿದರೆ 3 ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. ಸರ್ಕಾರದ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳು ವಿಸ್ತೃತ ಚರ್ಚೆಗಾಗಿ ಕಾನೂನನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ಆಗ್ರಹಿಸಿ ಕಲಾಪ ಬಹಿಷ್ಕರಿಸಿದವು. ಇದನ್ನೂ ಓದಿ: ವಿಜಯೇಂದ್ರ ಗುಂಪುಗಾರಿಕೆ ಮಾಡುತ್ತಿದ್ದಾರೆ, ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿದ್ದೇನೆ: ಯತ್ನಾಳ್‌ ಚಾರ್ಜ್‌

    ಸಂಪುಟದ ನಿರ್ಣಯ ಸಮರ್ಥಿಸಿಕೊಂಡ ಸಿಎಂ ಶರ್ಮಾ, ಅಸ್ಸಾಂನಲ್ಲಿ ಗೋಮಾಂಸ ಸೇವನೆಯು ಕಾನೂನುಬಾಹಿರವಲ್ಲ. ಆದ್ರೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯು ರಾಜ್ಯದಲ್ಲಿ ಎಲ್ಲಾ ಜಾನುವಾರುಗಳ ಸಾಗಣೆ, ಹತ್ಯೆ, ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುತ್ತದೆ. ನಾವು ಈ ಹಿಂದೆ ಅಸ್ಸಾಂನಲ್ಲಿ ಗೋವುಗಳನ್ನು ರಕ್ಷಿಸುವ ಮಸೂದೆ ಪರಿಚಯಿಸಿದ್ದೇವೆ, ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಮುಂದೆ ರಾಜ್ಯದ ಯಾವುದೇ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಗೋಮಾಂಸ ನೀಡದಂತೆ ನೋಡಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಅಲ್ಲದೇ ಸಾರ್ವಜನಿಕ ಸಮಾರಂಭಗಳಲ್ಲೂ ದನದ ಮಾಂಸ ಕೊಡಬಾರದು. ಜೊತೆಗೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯ ಅನ್ವಯ ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಸ್ಥಾನ ಅಥವಾ ಸತ್ರ (ವೈಷ್ಣವ ಮಠ)ದ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

    ಸರ್ಕಾರದ ಈ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಪ್ರತಿಪಕ್ಷ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದು ಪ್ರಮುಖ ವಿಷಯಗಳಿಂದ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಿಡಿ ಕಾರಿತು. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್‌. ಅಶೋಕ್‌ ಬಾಂಬ್‌

    ರಾಜ್ಯ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ, ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಆದ್ರೆ ಈ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಹೇಳಿದ್ದಾರೆ.

  • ಬಿಜೆಪಿಗೆ ಸೇರೋದಾದ್ರೆ ಮನೆಗೆ ಹೋಗಿ ಕರ್ಕೊಂಡು ಬರ್ತೀನಿ: ಖರ್ಗೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು

    ಬಿಜೆಪಿಗೆ ಸೇರೋದಾದ್ರೆ ಮನೆಗೆ ಹೋಗಿ ಕರ್ಕೊಂಡು ಬರ್ತೀನಿ: ಖರ್ಗೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು

    ಗುವಾಹಟಿ: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿ ಸೇರಲು ಬಯಸುವುದಾದರೆ ನಾನು ಅವರ ಮನೆಗೆ ಹೋಗಿ ಅವರನ್ನು ಕರೆದೊಯ್ಯುತ್ತೇನೆ. ಇಲ್ಲದಿದ್ದರೆ ಅವರು ಪ್ರಧಾನಿಯನ್ನು ಭೇಟಿ ಮಾಡುವ ಅವಶ್ಯಕತೆ ಏನು ಎಂದು ಪ್ರಶ್ನಿಸುವ ಮೂಲಕ ಅಸ್ಸಾಂ (Assam) ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    ಕಾಂಗ್ರೆಸ್‌ ಪ್ರಣಾಳಿಕೆ ವಿವರಿಸಲು ಮೋದಿ (PM Narendra Modi) ಬಳಿ ಮಲ್ಲಿಕಾರ್ಜುನ ಖರ್ಗೆ ಸಮಯ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರಿಗೆ ಇಂಗ್ಲಿಷ್ ಚೆನ್ನಾಗಿ ಓದಲು ಮತ್ತು ಬರೆಯಲು ಬರುತ್ತದೆ. ಪ್ರಣಾಳಿಕೆಯನ್ನು ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆದಿದ್ದೀರಿ. ಪ್ರಣಾಳಿಕೆಯನ್ನು ಜನರ ಮುಂದೆ ಇಡಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ 9.21% ಮತದಾನ – ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌

    ಕಾಂಗ್ರೆಸ್‌ (Congress) ಅಧಿಕಾರಕ್ಕೆ ಬಂದರೆ ದೇಶದ ವ್ಯಕ್ತಿಯ ಪಿತ್ರಾರ್ಜಿತ ಆಸ್ತಿಯನ್ನು ತೆಗೆದುಕೊಳ್ಳುತ್ತದೆ. ಜನರು ಬದುಕಿದ್ದಾಗ ಲೂಟಿ ಮಾಡಿದ್ದು ಅಲ್ಲದೇ ಈಗ ವ್ಯಕ್ತಿ ಮೃತಪಟ್ಟ ಬಳಿಕವೂ ಲೂಟಿಗೆ ಇಳಿದಿದೆ ಎಂದು ಮೋದಿ ತಮ್ಮ ಪ್ರಚಾರ ಭಾಷಣದಲ್ಲಿ ವಾಗ್ದಾಳಿ ನಡೆಸಿದ್ದರು.

    ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಮೋದಿಯವರು ನಮ್ಮ ಪ್ರಣಾಳಿಕೆಯನ್ನು ಓದಿಲ್ಲ. ಹೀಗಾಗಿ ಅವರ ಜೊತೆ ಪ್ರಣಾಳಿಕೆಯನ್ನು ಚರ್ಚೆ ಮಾಡಲು ಸಮಯ ನೀಡಬೇಕು ಎಂದು ತಿಳಿಸಿದ್ದರು.

     

  • ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಗಾಂಧಿನಗರ: ದೇಶದಲ್ಲಿ ಪ್ರಬಲ ನಾಯಕ ಇಲ್ಲದಿದ್ದರೇ ಅಫ್ತಾಬ್ ಅಮೀನ್ ಪೂನಾವಾಲನಂತಹ (Aftab Ameen Poonawala) ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಎಚ್ಚರಿಸಿದ್ದಾರೆ.

    ಗುಜರಾತ್ ಚುನಾವಣಾ (Gujarat Election) ಪ್ರಚಾರ ಸಭೆಯ ಭಾಗವಾಗಿ ಕಚ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಅವರು, ದೆಹಲಿಯ ಶ್ರದ್ಧಾ ಹತ್ಯೆ (Shraddha Murder Case) ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದರು. ದೇಶದಲ್ಲಿ ಪ್ರಬಲ ನಾಯಕನಿಲ್ಲದಿದ್ದರೆ, ಅಫ್ತಾಬ್‌ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ. ಆಗ ನಮ್ಮ ಸಮಾಜ ರಕ್ಷಿಸಲು ಸಾಧ್ಯವಾಗುವುದಿಲ್ಲ ಹೇಳಿದ್ದಾರೆ. ಇದನ್ನೂ ಓದಿ: ವಿಮೆ ಹಣಕ್ಕಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಗ

    ಕೊಲೆ ಪ್ರಕರಣದ ಭೀಕರತೆಗಳನ್ನು ವಿಚಾರಸಿದಾಗ ಇದನ್ನು ಲವ್ ಜಿಹಾದ್ (Love Jihad) ಪ್ರಕರಣ ಎನ್ನಲಾಗಿದೆ. ಅಲ್ಲದೆ ಹಿಂದೂ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.  

    ಮೋದಿ ಪರ ಬ್ಯಾಟಿಂಗ್:
    ಮುಂಬೈನಿಂದ ಶ್ರದ್ಧಾಳನ್ನು ಕರೆದುಕೊಂಡು ಬಂದಿದ್ದ ಅಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ. ಇದೇ ಸಮಯದಲ್ಲಿ ಮತ್ತೊಬ್ಬ ಮಹಿಳೆಯನ್ನು ಕರೆತಂದು ಲೈಂಗಿಕ ಸಂಪರ್ಕ ಮಾಡಿದ್ದಾನೆ. ಇಂತಹ ಕೃತ್ಯಗಳಿಂದ ದೇಶವನ್ನು ರಕ್ಷಿಸಬೇಕಾದರೆ ನಮ್ಮ ದೇಶಕ್ಕೆ ಶಕ್ತಿಯುತ ನಾಯಕನನ್ನು ಹೊಂದಿರಬೇಕು, ರಾಷ್ಟ್ರವನ್ನು ತಮ್ಮ ತಾಯಿ ಎಂದು ಪರಿಗಣಿಸುವವರಾಗಿರಬೇಕು. ಹಾಗಾಗಿ 2024ರಲ್ಲಿ 3ನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಬಹಳ ಮುಖ್ಯ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

    ಏನಿದು ಘಟನೆ?
    ರಾಷ್ಟ್ರ ರಾಜಧಾನಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್ನಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅನೇಕ ಭಯಾನಕ ಸಂಗತಿಗಳು ಹೊರಬಿದ್ದಿವೆ. ಆರೋಪಿ ಅಫ್ತಾಬ್ ಹಾಗೂ ಶ್ರದ್ಧಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಮೇ 18ರಂದು ಜಗಳವಾದಾಗ ಶ್ರದ್ಧಾಳ ಎದೆಯ ಮೇಲೆ ಕುಳಿತು ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ.

    ಬಳಿಕ ದೇಹವನ್ನು ಕತ್ತರಿಸೋದು ಹೇಗೆ? ಅದನ್ನು ಡಿಎನ್‌ಎಗಳ ಸಾಕ್ಷ್ಯಾಧಾರವೂ ಸಿಗದಂತೆ ದೇಹವನ್ನ ವಿಲೇವಾರಿ ಮಾಡೋದು ಹೇಗೆ ಎಂಬ ಮಾಹಿತಿಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಡಿದ್ದಾನೆ. ನಂತರ ದೇಹವನ್ನು 35 ಪೀಸ್‌ಗಳಾಗಿ ತಂಡು ಮಾಡಿದ್ದು, ಅದನ್ನು ಸಂಗ್ರಹಿಸಲು 300 ಲೀಟರ್ ಸಾಮರ್ಥ್ಯದ ಹೊಸ ಫ್ರಿಡ್ಜ್ ಸಹ ಖರೀದಿಸಿದ್ದಾನೆ. ದೇಹದ ಮಾಂಸದ ವಾಸನೆ ಹರಡಬಾರದೆಂದು ದಿನವೂ ಅಗರಬತ್ತಿ ಹಚ್ಚಿಡುತ್ತಿದ್ದ. ಈ ನಡುವೆ ಶ್ರದ್ಧಾಳನ್ನು ಕೊಲೆ ಮಾಡಿ ಕೆಲ ದಿನಗಳ ನಂತರ ಮತ್ತೊಬ್ಬ ಮಹಿಳೆಯನ್ನು ತನ್ನ ಅಪಾರ್ಟ್ಮೆಂಟ್‌ಗೆ ಕರೆದು ಸೆಕ್ಸ್ ಮಾಡ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಹೈದರಾಬಾದ್: ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಅವರ ರ‍್ಯಾಲಿ ವೇಳೆ ವ್ಯಕ್ತಿಯೊಬ್ಬ, ಏಕಾಏಕಿ ವೇದಿಕೆ ಮೇಲೇರಿ ಮೈಕ್‍ನ್ನು ಸ್ಟ್ಯಾಂಡ್ ನಿಂದ ಎಳೆದಾಡಿದ ಘಟನೆ ನಗರದಲ್ಲಿ ನಡೆದಿದೆ.

    ಹಿಮಾಂತ ಬಿಸ್ವಾ ಶರ್ಮಾ ಗಣೇಶ ಹಬ್ಬ ಮತ್ತು ಇತರ ಕಾರ್ಯಕ್ರಮಗಳಿಗೆ ಭಾಗ್ಯನಗರ ಗಣೇಶ ಉತ್ಸವ ಸಮಿತಿಯ ಅತಿಥಿಯಾಗಿ ಹೈದರಾಬಾದ್‍ನಲ್ಲಿದ್ದಾರೆ (Hyderabad). ಮುಂಜಾನೆ ನಗರದ ಪ್ರಮುಖ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ಹಿಮಾಂತ ಬಿಸ್ವಾ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ (KCR) ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ರ‍್ಯಾಲಿ ವೇಳೆ ವೇದಿಕೆ ಮೇಲೆ ಬಂದ ಕೆಸಿಆರ್ ಪಕ್ಷದ ಬಣ್ಣ ಹೊಂದಿರುವ ಶಾಲು ಧರಿಸಿದ್ದ ವ್ಯಕ್ತಿ ಏಕಾಏಕಿ ಮೈಕ್ ಎಳೆದಾಡಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಹಿಮಾಂತ ಬಿಸ್ವಾ ಶರ್ಮಾ ಗಾಬರಿಗೊಂಡಂತೆ ಕಂಡು ಬಂತು. ಬಳಿಕ ಕೂಡಲೇ ವೇದಿಕೆ ಮೇಲಿದ್ದವರು ಅಪರಿಚಿತ ವ್ಯಕ್ತಿಯನ್ನು ವೇದಿಕೆಯಿಂದ ಕೆಳಗಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯ ಬಳಿಕ ರ‍್ಯಾಲಿಯಲ್ಲಿ ಮಾತನಾಡಿದ ಹಿಮಾಂತ ಬಿಸ್ವಾ, ಮುಖ್ಯಮಂತ್ರಿ ಕೆಸಿಆರ್ ಅವರು ಬಿಜೆಪಿ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತಾರೆ. ಆದರೆ ನಾವು ರಾಜವಂಶ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತೇವೆ. ಹೈದರಾಬಾದ್‍ನಲ್ಲಿ ಅವರ ಮಗ ಮತ್ತು ಮಗಳ ಚಿತ್ರಗಳನ್ನು ನೋಡುತ್ತೇವೆ. ದೇಶದ ರಾಜಕೀಯವು ರಾಜವಂಶದ ರಾಜಕೀಯದಿಂದ ಮುಕ್ತವಾಗಿರಬೇಕು. ಸರ್ಕಾರವು ದೇಶಕ್ಕಾಗಿ, ಜನರಿಗಾಗಿ ಇರಬೇಕು. ಇದನ್ನು ಹೊರತು ಪಡಿಸಿ ಒಂದು ಕುಟುಂಬಕ್ಕಾಗಿ ಇರಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ರಿಟನ್ ರಾಣಿ ನಿಧನ – ಸೆ.11ಕ್ಕೆ ಭಾರತದಾದ್ಯಂತ ಶೋಕಾಚರಣೆ

    Live Tv
    [brid partner=56869869 player=32851 video=960834 autoplay=true]

  • ಭಾರತ್‌ ಜೋಡೋ ಯಾತ್ರೆಯನ್ನು ಪಾಕಿಸ್ತಾನದಿಂದ ಆರಂಭಿಸಬೇಕಿತ್ತು: ಹಿಮಾಂತ ಬಿಸ್ವಾ ಶರ್ಮಾ

    ಭಾರತ್‌ ಜೋಡೋ ಯಾತ್ರೆಯನ್ನು ಪಾಕಿಸ್ತಾನದಿಂದ ಆರಂಭಿಸಬೇಕಿತ್ತು: ಹಿಮಾಂತ ಬಿಸ್ವಾ ಶರ್ಮಾ

    ದಿಸ್ಪುರ್‌: ಭಾರತ್‌ ಜೋಡೋ ಯಾತ್ರೆಯನ್ನು(Bharat Jodo Yatra )ಕಾಂಗ್ರೆಸ್‌ ಪಾಕಿಸ್ತಾನದಿಂದ ಆರಂಭಿಸಬೇಕಿತ್ತು ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ(Himanta Biswa Sarma) ಹೇಳಿದ್ದಾರೆ.

    ಕಾಂಗ್ರೆಸ್‌(Congress) ಭಾರತ್‌ ಜೋಡೋ ಯಾತ್ರೆಯನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 1947ರಲ್ಲಿ ಕಾಂಗ್ರೆಸ್‌ ಅವಧಿಯಲ್ಲಿ ಭಾರತ ವಿಭಜನೆಯಾಯಿತು. ಹೀಗಾಗಿ ಭಾರತದಲ್ಲಿ ಈ ಅಭಿಯಾನವನ್ನು ಆರಂಭಿಸುವ ಬದಲು ರಾಹುಲ್‌ ಗಾಂಧಿ ಪಾಕಿಸ್ತಾನದಲ್ಲಿ ಆರಂಭಿಸಿದರೆ ಉತ್ತಮವಾಗಿರುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ಭಾರತ ಈಗ ಒಗ್ಗಟ್ಟಾಗಿದೆ. ಭಾರತದಲ್ಲಿ ಈ ಯಾತ್ರೆಯನ್ನು ಕೈಗೊಂಡರೆ ಏನು ಪ್ರಯೋಜನವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    150 ದಿನಗಳ ಕಾಲ ನಡೆಯಲಿರುವ ಭಾರತ್‌ ಜೋಡೋ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ 3,570 ಕಿ.ಮೀ ಪಾದಯಾತ್ರೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೆ ಪತ್ರ ಬರೆದ ಪುಟಾಣಿಗಳು

    ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೆ ಪತ್ರ ಬರೆದ ಪುಟಾಣಿಗಳು

    ನವದೆಹಲಿ: ಹಾಲು ಹಲ್ಲು ಬಿದ್ದು ಹೊಸ ಹಲ್ಲು ಇನ್ನೂ ಹುಟ್ಟಿಲ್ಲ ಅಂತ ಪ್ರಧಾನಿಗೆ ಪುಟಾಣಿಗಳು ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿರುವುದು ಎಲ್ಲಡೆ ಸುದ್ದಿಯಾಗುತ್ತಿದೆ.

    adult teeth

    ಪ್ರತದಲ್ಲಿ ಏನಿದೆ?
    ಪ್ರೀತಿಯ ಹಿಮಾಂತ ಮಾಮ ನನ್ನ ಹಲ್ಲುಗಳು ಬಿದ್ದು ಹೋಗಿವೆ. ಇದುವರೆಗೂ ಬಂದಿಲ್ಲ. ಆದ ಕಾರಣ ನಾನು ನನ್ನ ಇಷ್ಟದ ಆಹಾರವನ್ನು ಸೇವಿಸಲು ಆಗುತ್ತಿಲ್ಲ. ದಯವಿಟ್ಟು ಏನಾದರೂ ಕ್ರಮ ಕೈಗೊಳ್ಳಿ. ಪ್ರೀತಿಯ ಮೋದಿಜೀ, ನನ್ನ ಮೂರು ಹಲ್ಲುಗಳು ಉದುರಿ ಹೋಗಿವೆ. ದಯವಿಟ್ಟು ನನ್ನ ಹಲ್ಲು ಇದುವರೆಗೂ ಬಾರದೇ ಇರುವುದಕ್ಕೆ ಏನಾದರೂ ಒಂದು ಕ್ರಮ ತೆಗೆದುಕೊಳ್ಳಿ. ನನ್ನ ಇಷ್ಟದ ಆಹಾರವನ್ನು ಜಗಿಯಲು, ತಿನ್ನಲು ಬಹಳ ಕಷ್ಟಪಡುತ್ತಿದ್ದೇನೆ.

    ಈ ರೀತಿಯ ಪತ್ರ ಬರೆದ ಇಬ್ಬರು ಮಕ್ಕಳು, ಸ್ವಂತ ಅಕ್ಕ-ತಮ್ಮನಾಗಿದ್ದಾರೆ. ಆರು ವರ್ಷದ ರಾವ್ಜ ಮತ್ತು ಐದು ವರ್ಷದ ಆರ್ಯನ್ ಮೂಲತಃ ಅಸ್ಸಾಮಿನವರು. ಇವರಿಬ್ಬರು ಸೇರಿಕೊಂಡು ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇವರು ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುದ್ದಾದ ಬರವಣಿಗೆ ಮತ್ತು ವಿಚಾರಕ್ಕೆ ನೆಟ್ಟಿಗರ ಮನಸ್ಸನ್ನು ಗೆದ್ದಿದ್ದಾರೆ ಈ ಪುಟಾಣಿಗಳು.

    adult teeth

    ಈ ಪತ್ರಗಳನ್ನು ಅವರ ತಾಯಿಯ ಚಿಕ್ಕಪ್ಪ ಮುಖ್ತರ್ ಅಹಮದ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗ ಅವು ವೈರಲ್ ಆಗಿದ್ದು, ನೆಟ್ಟಿಗರ ಹೃದಯ ಗೆದ್ದಿವೆ. ಅವರ ಚಿಕ್ಕಪ್ಪ ಪತ್ರಗಳ ಫೋಟೋ ತೆಗೆದು, ಹಿಮಂತ ಬಿಸ್ವ ಶರ್ಮ, ನರೇಂದ್ರ ಮೋದಿಯವರಿಗೆ ನನ್ನ ಸೊಸೆ ರಾವ್ಜಾ (6 ವರ್ಷ) ಮತ್ತು ಸೋದರಳಿಯ ಆರ್ಯನ್ (5 ವರ್ಷ) ನನ್ನ ಸೊಸೆ ಮತ್ತು ಸೋದರಳಿಯರು ತಮ್ಮದೇ ಆದ ರೀತಿಯಲ್ಲಿ ಬರೆದಿದ್ದಾರೆ. ದಯವಿಟ್ಟು ಅವರ ಹಲ್ಲುಗಳಿಗೆ ಏನಾದರೂ ಸಲಹೆ ಸೂಚನೆ ನೀಡಿ, ಏಕೆಂದರೆ ಅವರು ತಮ್ಮ ನೆಚ್ಚಿನ ಆಹಾರವನ್ನು ಜಗಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದು ಶೇರ್ ಮಾಡಿಕೊಂಡಿದ್ದಾರೆ.

  • ವಲಸಿಗ ಮುಸ್ಲಿಮರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕು – ಅಸ್ಸಾಂ ಸಿಎಂ

    ವಲಸಿಗ ಮುಸ್ಲಿಮರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕು – ಅಸ್ಸಾಂ ಸಿಎಂ

    ದಿಸ್ಪುರ: ವಲಸಿಗ ಅಲ್ಪಸಂಖ್ಯಾತರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸಲಹೆ ನೀಡಿದ್ದಾರೆ.

    ಅಸ್ಸಾಂ ಸರ್ಕಾರಕ್ಕೆ 1 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳದಿಂದಾಗಿ ಅಲ್ಪಸಂಖ್ಯಾತರಲ್ಲಿ ಬಡತನ ಹೆಚ್ಚಾಗುತ್ತಿದೆ. ಹೀಗಾಗಿ ಬಡತನವನ್ನು ಕಡಿಮೆ ಮಾಡಲು ಸಮುದಾಯದ ಜನ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ನಾವು ಈಗಾಗಲೇ ಕಳೆದ ವಿಧಾನಸಭೆ ಅಧಿವೇಶನದಲ್ಲಿ ಜನಸಂಖ್ಯಾ ನೀತಿಯನ್ನು ಜಾರಿಗೆ ತಂದಿದ್ದೇವೆ. ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು ನಾವು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದೊಂದಿಗೆ ಕೆಲಸ ಮಾಡಲು ಬಯಸುತ್ತೇವೆ ಎಂದು ಅವರು ಹೇಳಿದರು.

    ನಮ್ಮ ಸರ್ಕಾರ ಸಮುದಾಯದ ಮಹಿಳೆಯರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಇದರಿಂದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು ಎಂದು ಶರ್ಮಾ ಹೇಳಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಮದರಸಾ, ಸಂಸ್ಕೃತ ಶಾಲೆಗಳು ಬಂದ್

    ನಾವು ಜನಸಂಖ್ಯೆಯನ್ನು ನಿಯಂತ್ರಿಸಿದರೆ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

  • ಅಸ್ಸಾಂನಲ್ಲಿ ಮದರಸಾ, ಸಂಸ್ಕೃತ ಶಾಲೆಗಳು ಬಂದ್

    ಅಸ್ಸಾಂನಲ್ಲಿ ಮದರಸಾ, ಸಂಸ್ಕೃತ ಶಾಲೆಗಳು ಬಂದ್

    – ಸರ್ಕಾರದಿಂದ ಮಹತ್ವದ ಆದೇಶ
    – ಧಾರ್ಮಿಕ ಶಿಕ್ಷಣಕ್ಕೆ ಹಣ ನೀಡಲ್ಲವೆಂದ ಸರ್ಕಾರ

    ದಿಸ್ಪುರ: ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲ ಮದರಸಾ ಹಾಗೂ ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಧಾರ್ಮಿಕ ಶಿಕ್ಷಣಕ್ಕೆ ಅಸ್ಸಾಂ ಸರ್ಕಾರ ಹಣ ನೀಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಹಾಗೂ ಹಣಕಾಸು ಸಚಿವ ಹಿಮಾಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.

    ನಮ್ಮ ಸರ್ಕಾರದ ನೀತಿಯಂತೆ ಈ ಹಿಂದೆ ವಿಧಾನಸಭೆಯಲ್ಲಿ ಘೋಷಿಸಿದ್ದು, ಸರ್ಕಾರದ ನಿಧಿಯಿಂದ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡುವುದಿಲ್ಲ. ಆದರೆ ಖಾಸಗಿ ಸಂಸ್ಕೃತ ಶಾಲೆಗಳು ಹಾಗೂ ಮದರಸಾಗಳ ಬಗ್ಗೆ ನಾವು ಏನನ್ನೂ ಹೆಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

    ಈ ಕುರಿತು ನವೆಂಬರ್ ನಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ಮದರಸಾಗಳನ್ನು ಮುಚ್ಚಿದ ಬಳಿಕ 48 ಶಿಕ್ಷಕರನ್ನು ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಶಾಲೆಗಳಿಗೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.

    ಸರ್ಕಾರದ ಈ ನಿರ್ಧಾರಕ್ಕೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದಿನ್ ಅಜ್ಮಲ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಮದರಸಾಗಳನ್ನು ಬಂದ್ ಮಾಡಿದರೆ 2021ರ ಚುನಾವಣೆ ಬಳಿಕ ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಮತ್ತೆ ತೆರೆಯುತ್ತೇವೆ. ಮದರಸಾಗಳನ್ನು ಮುಚ್ಚಲು ಬಿಡುವುದಿಲ್ಲ. 50-60 ವರ್ಷಗಳ ಹಳೆಯ ಮದರಸಾಗಳನ್ನು ಬಿಜೆಪಿ ಸರ್ಕಾರ ಒತ್ತಾಯಪೂರ್ವಕವಾಗಿ ಮುಚ್ಚುತ್ತಿದ್ದು, ನಾವು ಮತ್ತೆ ತೆರೆಯುತ್ತೇವೆ ಎಂದು ಹೇಳಿದ್ದಾರೆ.

    ಅಸ್ಸಾಂನಲ್ಲಿ ಒಟ್ಟು 614 ಸರ್ಕಾರಿ ಹಾಗೂ ಅನುದಾನಿತ ಮದರಸಾಗಳಿದ್ದು, ಇದರಲ್ಲಿ 57 ಬಾಲಕಿಯರಿಗೆ, 3 ಬಾಲಕರಿಗೆ ಹಾಗೂ ಉಳಿದ 554 ಕೋ ಎಜುಕೇಶನ್ ಮದರಸಾಗಳಿವೆ. ಇದರಲ್ಲಿ 17 ಮದರಸಾಗಳು ಉರ್ದು ಭಾಷೆಯದ್ದಾಗಿವೆ. ಅಲ್ಲದೆ ರಾಜ್ಯದಲ್ಲಿ ಸುಮಾರು 1 ಸಾವಿರ ಸಂಸ್ಕೃತ ಶಾಲೆಗಳಿದ್ದು, ಇದರಲ್ಲಿ ಕೇವಲ 100 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಾಗಿವೆ. ಅಸ್ಸಾಂ ಸರ್ಕಾರ 3-4 ಕೋಟಿ ರೂ.ಗಳನ್ನು ಮದರಸಾಗಳಿಗೆ ಖರ್ಚು ಮಾಡುತ್ತಿದೆ. 1 ಕೋಟಿ ರೂ.ಗಳನ್ನು ಸಂಸ್ಕೃತ ಶಾಲೆಗಳಿಗೆ ಪ್ರತಿ ವರ್ಷ ವ್ಯಯಿಸುತ್ತಿದೆ.