Tag: ಹಿಮಾಚಲ ಪ್ರದೇಶ ಚುನಾವಣೆ

  • Himachal Pradesh Election Result: ಕಾಂಗ್ರೆಸ್‌ 40, ಬಿಜೆಪಿ 25 ಸ್ಥಾನ ಗೆಲುವು

    Himachal Pradesh Election Result: ಕಾಂಗ್ರೆಸ್‌ 40, ಬಿಜೆಪಿ 25 ಸ್ಥಾನ ಗೆಲುವು

    ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Himachal Pradesh Elections) ಆಡಳಿತಾರೂಢ ಬಿಜೆಪಿ (BJP) ವಿರುದ್ಧ ಕಾಂಗ್ರೆಸ್‌ (Congress) ಜಯಭೇರಿ ಸಾಧಿಸಿದೆ. ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

    ಬಿಜೆಪಿ ಹಿನ್ನಡೆ ಅನುಭವಿಸಿದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ (Jairam Thakur) ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿ ಸರ್ಕಾರ ಬದಲಾಗುತ್ತಿರುತ್ತದೆ. 2017ರಲ್ಲಿ ಬಿಜೆಪಿ 44 ಸ್ಥಾನ ಹಾಗೂ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಆಡಳಿತ ವೈಫಲ್ಯ, ಪಕ್ಷದೊಳಗೆ ಎದ್ದ ಬಂಡಾಯ ಬಿಜೆಪಿ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ನೀಡಿದ ಹೊಸ ಭರವಸೆಗಳಿಗೆ ಜನ ಮನಸೋತು ‘ಕೈ’ ಹಿಡಿದಿದ್ದಾರೆ.

    ಒಟ್ಟು 68 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ 35 ಸ್ಥಾನಗಳ ಗೆಲುವು ಅಗತ್ಯ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಆದರೆ ಯಾರ ನಾಯಕತ್ವದಲ್ಲಿ ಸರ್ಕಾರ ರಚಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ನಾಯಕರನ್ನು ಆಯ್ಕೆ ಮಾಡುವುದು ಕಾಂಗ್ರೆಸ್‌ಗೆ ಈಗ ಸವಾಲಿನ ಕೆಲಸವಾಗಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್‌

    Live Tv
    [brid partner=56869869 player=32851 video=960834 autoplay=true]

  • ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಗೆಲುವು ಯಾರಿಗೆ?

    ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಗೆಲುವು ಯಾರಿಗೆ?

    ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ (Himachal Pradesh Assembly Election) ನಡೆಯುತ್ತಿದೆ. 68 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ (Election) ಈಗಾಗಲೇ ಆರಂಭಗೊಂಡಿದೆ. ಮತದಾನ ಸುಗಮವಾಗಿ ನಡೆಯಲು ಒಟ್ಟು 7,881 ಮತಗಟ್ಟೆಗಳನ್ನು ಸ್ಥಾಪಿಸಿದ್ದು ರಾಜ್ಯದಲ್ಲಿ ಪೊಲೀಸರು ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. 981 ಮತಗಟ್ಟೆಗಳು ನಿರ್ಣಾಯಕವಾಗಿದ್ದರೆ 901 ಮತಗಟ್ಟೆಗಳು ದುರ್ಬಲವಾಗಿವೆ.

    ಬೆಳಗ್ಗೆ 11 ಗಂಟೆ ವೇಳೆಗೆ 17.98% ರಷ್ಟು ಮತದಾನವಾಗಿದ್ದು, ಗುಡ್ಡಗಾಡು ಪ್ರದೇಶಗಳಲ್ಲೂ ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ 232 ಫ್ಲೈಯಿಂಗ್ ಸ್ಕ್ವಾಡ್ ಮತ್ತು 232 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಮತದಾರರ ಕೈಯಲ್ಲಿ 412 ಅಭ್ಯರ್ಥಿಗಳ ಭವಿಷ್ಯ

    ಆಡಳಿತರೂಢ ಬಿಜೆಪಿ (BJP) ಮತ್ತೊಮ್ಮೆ ಅಧಿಕಾರಕ್ಕೆ ಬರುವ ಮೂಲಕ ರಾಜ್ಯದಲ್ಲಿರುವ ರಾಜಕೀಯ ಟ್ರೆಂಡ್ ಬದಲಿಸುವ ಲೆಕ್ಕಾಚಾರದಲ್ಲಿದೆ. ಇತ್ತ ಉಪ ಚುನಾವಣೆಗಳ ಗೆಲುವಿನ ಮೂಲಕ ವಿಶ್ವಾಸ ಹೆಚ್ಚಿಸಿರುವ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುವ ಪ್ರಯತ್ನದಲ್ಲಿದೆ. ಇದನ್ನೂ ಓದಿ: ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ಪಲ್ಟಿ – ಜನರಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಕಂಬ ಏರಿದ

    ನವೆಂಬರ್ 2021 ರಲ್ಲಿ ರಾಜ್ಯದಲ್ಲಿ ನಾಲ್ಕು ಉಪಚುನಾವಣೆಗಳನ್ನು ಗೆದ್ದ ನಂತರ, ಕಾಂಗ್ರೆಸ್ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲೂ ಅದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಆದರೆ ಪಕ್ಷದಲ್ಲಿನ ಆಂತರಿಕ ಕಲಹ ಮತ್ತು ರಾಷ್ಟ್ರೀಯ ನಾಯಕರ ಪ್ರಚಾರದ ಕೊರತೆಯಿಂದ ಕಾಂಗ್ರೆಸ್ ಚುನಾವಣೆಯಲ್ಲಿ ಹಿಂದೆ ಬಿದ್ದಂತೆ ಕಂಡು ಬರುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡರಲ್ಲೂ ಬಂಡಾಯದ ಬಿಸಿ ಕಂಡು ಬಂದಿದೆ. ಆಡಳಿತ ವಿರೋಧಿ ಅಲೆ ಮತ್ತು ಶಾಸಕರ ಮೇಲಿನ ಅತೃಪ್ತಿ ಕಾರಣದಿಂದ ಬಿಜೆಪಿ ಕೆಲವು ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಕಾಂಗ್ರೆಸ್ ಕೂಡಾ ಗೆಲವಿನ ದಡ ಸೇರಲು ಅಭ್ಯರ್ಥಿಗಳ ಆಯ್ಕೆಯಲ್ಲಿ ಮುತುವರ್ಜಿ ವಹಿಸಿದ್ದು ಕೆಲವು ಕ್ಷೇತ್ರಗಳಲ್ಲಿ ಬಂಡಾಯಕ್ಕೆ ಕಾರಣವಾಗಿದೆ.

    ಆಮ್ ಅದ್ಮಿ (AAP) ಮೊದಲ ಬಾರಿ ಚುನಾವಣಾ ಕಣದಲ್ಲಿದ್ದು ಅಬ್ಬರದ ಪ್ರಚಾರ ನಡೆಸಿದೆ. ಆದರೆ ಅದು ಎರಡಂಕಿಯ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿಲ್ಲ ಎಂದು ತಜ್ಞರು ಹೇಳಿದ್ದಾರೆ. ಅದಾಗ್ಯೂ ಈ ಬಾರಿಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – 26 ನಾಯಕರು BJP ಸೇರ್ಪಡೆ

    ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – 26 ನಾಯಕರು BJP ಸೇರ್ಪಡೆ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಮೊದಲ ಹಂತ ಚುನಾವಣೆಗೆ 4 ದಿನ ಬಾಕಿ ಇರುವಾಗಲೇ ಕಾಂಗ್ರೆಸ್‌ಗೆ (Congrees) ಭಾರಿ ಹಿನ್ನಡೆಯಾಗಿದ್ದು ದೊಡ್ಡ ನಾಯಕರ ಗುಂಪು ಭಾರತೀಯ ಜನತಾ ಪಕ್ಷವನ್ನು (BJP) ಸೇರ್ಪಡೆಗೊಂಡಿದೆ. 26 ನಾಯಕರನ್ನು ಸಿಎಂ ಜೈರಾಮ್ ಠಾಕೂರ್ (Jairam Thakur) ಪಕ್ಷಕ್ಕೆ ಬರ ಮಾಡಿಕೊಂಡರು.

    ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್ (Dharampal Thakur), ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹರ್ ಸಿಂಗ್ ಕನ್ವರ್, ಯುವ ಕಾಂಗ್ರೆಸ್ (Youth Congress) ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸಮಾಜ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಸೇರಿದ್ದಾರೆ.

    ಠಾಕೂರ್, ನರೇಶ್ ವರ್ಮಾ, ಚಮ್ಯಾನ ವಾರ್ಡ್ ಸದಸ್ಯ ಯೋಗೇಂದ್ರ ಸಿಂಗ್, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಶಿಮ್ಲಾ ಅಧ್ಯಕ್ಷ ಧರ್ಮೇಂದ್ರ ಕುಮಾರ್, ವೀರೇಂದ್ರ ಶರ್ಮಾ, ರಾಹುಲ್ ರಾವತ್, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ್ ಠಾಕೂರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಬಿಜೆಪಿಯ ಎಲ್ಲಾ ಕಾರ್ಯಕರ್ತರಿಗೆ ಆತ್ಮೀಯ ಸ್ವಾಗತ ಕೋರಿದರು. ಬಿಜೆಪಿಯ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದರು. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • BJP ಉದ್ಯೋಗದ ಬದಲಿಗೆ ಯುವ ಸಮೂಹಕ್ಕೆ ಡ್ರಗ್ಸ್ ಕೊಡ್ತಿದೆ: ಪ್ರಿಯಾಂಕಾ ಕಿಡಿ

    BJP ಉದ್ಯೋಗದ ಬದಲಿಗೆ ಯುವ ಸಮೂಹಕ್ಕೆ ಡ್ರಗ್ಸ್ ಕೊಡ್ತಿದೆ: ಪ್ರಿಯಾಂಕಾ ಕಿಡಿ

    ಶಿಮ್ಲಾ: ಯುವ ಸಮೂಹಕ್ಕೆ ಉದ್ಯೋಗದ (Employment) ಬದಲಾಗಿ ಡ್ರಗ್ಸ್ (Drugs) ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಹಿಮಾಚಲ ಪ್ರದೇಶದಲ್ಲಿ ಚುನಾವಣಾ (Himachal Pradesh Elections) ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ನಿಲುವುಗಳ ಬಗ್ಗೆ ಟೀಕಿಸಿದ್ದಾರೆ. ಬಿಜೆಪಿ (BJP) ಪರಿಕಲ್ಪನೆಯನ್ನು ಯಾರೂ ಒಪ್ಪುವುದಿಲ್ಲ. ಹಿಮಾಚಲ ಪ್ರದೇಶದ ಜನರು ತಮ್ಮ ಒಳಿತಿಗಾಗಿ ಸರ್ಕಾರವನ್ನು ಬದಲಾಯಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ನೆರೆಮನೆಯವನಿಂದಲೇ 14ರ ಬಾಲಕಿಯ ಕತ್ತು ಹಿಸುಕಿ ಕೊಲೆ

    ಇದೇ ವೇಳೆ ಬಿಜೆಪಿ (BJP) ಉದ್ಯೋಗ ಸೃಷ್ಟಿಸುವ ಭರವಸೆಗಳ ಕುರಿತು ವಾಗ್ದಾಳಿ ನಡೆಸಿದ ಪ್ರಿಯಾಂಕಾ, ಉದ್ಯೋಗ ಹಕ್ಕನ್ನು ಬೆಂಬಲಿಸುವ ಕಾಂಗ್ರೆಸ್ ಆಡಳಿತ ರಾಜ್ಯಗಳಾದ ಛತ್ತಿಸ್‌ಗಢ (Chhattisgarh) ಹಾಗೂ ರಾಜಸ್ಥಾನವನ್ನು (Rajasthan) ಉದಾಹರಣೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಉದ್ಯೋಗಿಗಳ ವಜಾ – ಟ್ವಿಟ್ಟರ್‌ ನಡೆಯನ್ನು ಖಂಡಿಸಿದ ಕೇಂದ್ರ

    ಛತ್ತಿಸ್‌ಗಢದಲ್ಲಿ ಅತ್ಯಂತ ಕಡಿಮೆ ನಿರುದ್ಯೋಗ ಇದೆ. ಕಳೆದ 3 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಅಲ್ಲಿ 5 ಲಕ್ಷ ಉದ್ಯೋಗಗಳನ್ನು ನೀಡಿದೆ. ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ 1.3 ಲಕ್ಷ ಉದ್ಯೋಗ (Employment) ಕಲ್ಪಿಸಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ 63 ಸಾವಿರ ಹುದ್ದೆಗಳು ಖಾಲಿಯಿದ್ದರೂ, ಬಿಜೆಪಿ ಅವುಗಳನ್ನು ಭರ್ತಿ ಮಾಡಿಲ್ಲ. ವಿದ್ಯಾವಂತ ಯುವಕರು, ಶ್ರಮಜೀವಿಗಳು ಉದ್ಯೋಗಕ್ಕಾಗಿ ಹಾತೊರೆಯುತ್ತಿದ್ದಾರೆ. ಆದರೆ ಬಿಜೆಪಿ ಉದ್ಯೋಗದ ಬದಲಿಗೆ ಡ್ರಗ್ಸ್ ನೀಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

    ಯುವ ಸಮೂಹ ಏನಾದರೂ ಕೆಲಸ ಮಾಡಿ ತಮ್ಮ-ತಮ್ಮ ಕುಟುಂಬವನ್ನು ನೋಡಿಕೊಳ್ಳಬೇಕು ಎಂದು ಬಯಸುತ್ತಿದ್ದಾರೆ. ಅವರ ಕನಸುಗಳು ಈಡೇರುತ್ತಿಲ್ಲ. ಡ್ರಗ್ಸ್ ಹಾವಳಿ ಹೆಚ್ಚಾಗಿ ದಾರಿ ತಪ್ಪುತ್ತಿದ್ದಾರೆ. ಹಾಗಾಗಿ ಹಿಮಾಚಲ ಪ್ರದೇಶದಲ್ಲಿ ಸುಮಾರು 30 ಲಕ್ಷ ಮಂದಿ ಯುವಸಮೂಹದವರು ಇದ್ದರೂ, 15 ಲಕ್ಷ ಮಂದಿ ನಿರುದ್ಯೋಗಿಗಳಾಗಿದ್ದಾರೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ: ಆಜಾದ್

    ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ: ಆಜಾದ್

    ಶ್ರೀನಗರ: ಕಾಂಗ್ರೆಸ್‌ನಿಂದ (Congress) ಬೇರ್ಪಟ್ಟ ನಂತರ ಸತತವಾಗಿ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad), ಗುಜರಾತ್ (Gujarat) ಮತ್ತು ಹಿಮಾಚಲ ಪ್ರದೇಶದ (Himachal Pradesh) ವಿಧಾನಸಭೆ ಚುನಾವಣೆಯಲ್ಲಿ (Assembly Polls) ಕಾಂಗ್ರೆಸ್ ಗೆಲ್ಲಲೆಂದು ನಾನು ಈಗಲೂ ಬಯಸುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಶ್ರೀನಗರದಲ್ಲಿ ಮಾತನಾಡಿರುವ ಅವರು, ನಾನು ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದರೂ ಎಂದೂ ಅದರ ಜಾತ್ಯತೀತ ಸಿದ್ಧಾಂತದ (Secularism) ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ ಅಷ್ಟೇ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್ ಆದ್ಮಿ ಪಕ್ಷ (AAP) ಗೆಲ್ಲಲು ಸಾಧ್ಯವಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್‌ನ್ಯೂಸ್‌ – ವಿಜಯಪುರದಿಂದ ಕೊಟ್ಟಾಯಂಗೆ ಹೊಸ ರೈಲು

    AAP 02

    ಎಎಪಿಯು ಕೇಂದ್ರಾಡಳಿತ ಪ್ರದೇಶ ದೆಹಲಿಯ (NewDelhi) ಪಕ್ಷ ಮಾತ್ರ. ಅವರು ಪಂಜಾಬ್ ಅನ್ನು ಸಮರ್ಥವಾಗಿ ನಡೆಸಲು ಸಾಧ್ಯವಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್ ಮಾತ್ರ ಸಾಧ್ಯ, ಏಕೆಂದರೆ ಎಲ್ಲರನ್ನೂ ಒಳಗೊಳ್ಳುವ ನೀತಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರೋಹಿತ್‍ರನ್ನು ನೋಡಲೆಂದು ಮೈದಾನಕ್ಕಿಳಿದ ಅಭಿಮಾನಿಗೆ 6.5 ಲಕ್ಷ ರೂ. ಫೈನ್

    ಗುಲಾಂ ನಬಿ ಆಜಾದ್ ಅವರು ಇತ್ತೀಚೆಗೆ ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದರು. ಕಾಂಗ್ರೆಸ್‌ನ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದ ಅವರು ಇದೀಗ ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಮಾತೃ ಪಕ್ಷದ ಪರ ಬ್ಯಾಟಿಂಗ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]