Tag: ಹಿರಿಯ ಅಭಿಮಾನಿ

  • 75 ವರ್ಷದ ಹಿರಿಯ ಅಭಿಮಾನಿಯನ್ನು ಭೇಟಿಯಾಗಿ ಭಾವುಕರಾದ ಅಪ್ಪು

    75 ವರ್ಷದ ಹಿರಿಯ ಅಭಿಮಾನಿಯನ್ನು ಭೇಟಿಯಾಗಿ ಭಾವುಕರಾದ ಅಪ್ಪು

    ಕಾರವಾರ: ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆಯನ್ನು ಪವರ್ ಸ್ಟಾರ್ ಭೇಟಿ ಮಾಡಿದ್ದಾರೆ.

    ಜೋಯಿಡಾದ 75 ವರ್ಷದ ವೃದ್ಧೆ ಕರಿಯವ್ವ ಬಾಳೆಗೌಡ ನಾಯ್ಕ ಹಾಗೂ ಆಕೆಯ ಪತಿ ಬಾಳೆಗೌಡ ನಾಯ್ಕ ಕಟ್ಟಾ ಡಾ. ರಾಜ್ ಕುಮಾರ್ ಅವರ ಅಭಿಮಾನಿಗಳಾಗಿದ್ದಾರೆ. ಪತಿ ಬಾಳೆಗೌಡ ನಾಯ್ಕ ಗೋಕಾಕ್ ಚಳುವಳಿಯಲ್ಲಿ ರಾಜ್ ಕುಮಾರ್ ಅವರ ಜೊತೆಗೆ ಹೋರಾಟ ಮಾಡಿದ್ದರು. ಬಾಳೆಗೌಡರು ಮನೆಯಲ್ಲಿ ಕವಿರತ್ನ ಕಾಳಿದಾಸ ಸಿನಿಮಾ ನೋಡುವಾಗ ಹೃದಯಾಘಾತವಾಗಿ ಮೃತಪಟ್ಟಿದ್ದರು.

    ಹೀಗಾಗಿ ಈ ವಿಷಯವನ್ನು ರಾಜ್ ಕುಟುಂಬದವರಿಗೆ ತಿಳಿಸಬೇಕು ತಮ್ಮ ಅಭಿಮಾನ ವ್ಯಕ್ತಪಡಿಸಬೇಕು ಎಂಬ ಹಂಬಲ ಕರಿಯವ್ವ ಅವರಿಗೆ ಇತ್ತು. ಆದರೆ ಆ ಕಾಲ ಕೂಡಿಬಂದಿರಲಿಲ್ಲ. 12 ವರ್ಷದ ನಂತರ ಇಂದು ಜೋಯಿಡಾದಲ್ಲಿ ಸಿನಿಮಾ ಶೂಟಿಂಗ್ ನಿಮಿತ್ತ ಆಗಮಿಸಿದ್ದ ಪುನೀತ್ ರಾಜ್‍ಕುಮಾರ್ ಅವರನ್ನು ನೋಡುವ ತವಕದಲ್ಲಿ ಕರಿಯವ್ವ ಶೂಟಿಂಗ್ ಸೆಟ್‍ಗೆ ಕೂಡ ಹೋಗಿದ್ದರು. ಆದರೆ ಪೊಲೀಸರು ಭೇಟಿಗೆ ಅವಕಾಶ ನೀಡರಲಿಲ್ಲ.

    ಇದರಿಂದ ಬೇಸತ್ತ ಕರಿಯವ್ವ ಪುನೀತ್ ಅವರನ್ನು ನೋಡಲು ಅವಕಾಶ ನೀಡದೇ ಇದ್ದರೆ, ನಾನು ಸಾಯುತ್ತೇನೆ ಎಂದು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ. ಈ ವಿಚಾರ ಪುನೀತ್ ರಾಜ್‍ಕುಮಾರ್ ಅವರ ಕಿವಿಗೆ ಬಿದ್ದಿದೆ. ಆಗ ತಕ್ಷಣ ಕರಿಯವ್ವ ಮತ್ತು ಅವರನ್ನು ಕುಟುಂಬವನ್ನು ಪುನೀತ್ ಅವರು ತಮ್ಮ ಬಳಿ ಕರೆಸಿಕೊಂಡು ಮಾತನಾಡಿದ್ದಾರೆ. ಜೊತೆಗೆ ಕರಿಯವ್ವ ಅವರ ಅಭಿಮಾನ ಕಂಡು ಭಾವುಕರಾಗಿದ್ದಾರೆ.

  • ನಿಧನರಾದ ಅಭಿಮಾನಿ ಕುಟುಂಬಕ್ಕೆ ಅಲ್ಲು ಅರ್ಜುನ್ ಆರ್ಥಿಕ ನೆರವು

    ನಿಧನರಾದ ಅಭಿಮಾನಿ ಕುಟುಂಬಕ್ಕೆ ಅಲ್ಲು ಅರ್ಜುನ್ ಆರ್ಥಿಕ ನೆರವು

    ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಹಿರಿಯ ಅಭಿಮಾನಿ ನಿಧನರಾಗಿದ್ದು, ಇಬ್ಬರು ನಟರು ಸಂತಾಪ ಸೂಚಿಸಿದ್ದಾರೆ. ಈ ವೇಳೆ ಅಲ್ಲು ಅರ್ಜುನ್ ತಮ್ಮ ಅಭಿಮಾನಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.

    ನೂರ್ ಅಹಮ್ಮದ್ ಚಿರಂಜೀವಿ ಹಾಗೂ ಅಲ್ಲು ಅರ್ಜುನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಹಲವು ವರ್ಷಗಳಿಂದ ಮೆಗಾ ಸ್ಟಾರ್ ಕುಟುಂಬಕ್ಕೆ ಬೆಂಬಲಿಸಿದ್ದಾರೆ. ಅಲ್ಲದೆ ಅವರು ‘ಗ್ರೇಟರ್ ಹೈದರಾಬಾದ್ ಮೆಗಾ ಫ್ಯಾನ್ಸ್ ಅಸೋಸಿಯೆಶನ್’ ಅಧ್ಯಕ್ಷರಾಗಿದ್ದರು.

    ಅಭಿಮಾನಿ ನಿಧನರಾದ ವಿಷಯ ತಿಳಿದು ಚಿರಂಜೀವಿ ಹಾಗೂ ಅಲ್ಲು ಅರ್ಜುನ್ ಅವರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು. ಈ ವೇಳೆ ಅಲ್ಲು ಅರ್ಜುನ್ ಕಣ್ಣೀರಿಟ್ಟಿದ್ದರು. ಬಳಿಕ ಅಲ್ಲು ಅರ್ಜುನ್, ನೂರ್ ಅಹಮ್ಮದ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ನಿರ್ಧರಿಸಿದ್ದಾರೆ.

    ಅಲ್ಲು ಅರ್ಜುನ್ ಅಲ್ಲದೆ ಚಿರಂಜೀವಿ ಅವರು ಕೂಡ ತಮ್ಮ ಹಿರಿಯ ಅಭಿಮಾನಿ ಮನೆಗೆ ಭೇಟಿ ನೀಡಿದ್ದರು. ಚಿರಂಜೀವಿ ನೂರ್ ಅಹಮ್ಮದ್ ಮನೆಗೆ ಹೋಗಿ ಅವರ ಪತ್ನಿ ಹಾಗೂ ಮಕ್ಕಳಿಗೆ ಸಮಾಧಾನ ಮಾಡಿ ಧೈರ್ಯ ತುಂಬಿದರು.

    ನಟ ಸಾಯಿ ಧರಂ ತೇಜ್ ಅವರು ತಮ್ಮ ಟ್ವಿಟ್ಟರಿನಲ್ಲಿ, ಮೆಗಾ ಫ್ಯಾನ್ಸ್ ಕುಟುಂಬದ ಸ್ತಂಭಗಳಲ್ಲಿ ಒಂದಾಗಿದ ಅಭಿಮಾನಿ ಇನ್ನಿಲ್ಲ. ನಾನು ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದರು.

  • ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತೆ: ಹಿರಿಯ ಅಭಿಮಾನಿ

    ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತೆ: ಹಿರಿಯ ಅಭಿಮಾನಿ

    – ಆಶೀರ್ವಾದ ಪಡೆದ ವಿರಾಟ್, ರೋಹಿತ್

    ಬರ್ಮಿಂಗ್‍ಹ್ಯಾಮ್: ಭಾರತ- ಬಾಂಗ್ಲಾದೇಶ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದ 87 ವರ್ಷದ ಹಿರಿಯ ಅಭಿಮಾನಿ ನನ್ನ ಪ್ರಾರ್ಥನೆ ನಿಜವಾಗುತ್ತದೆ, ಇಂಡಿಯಾ ವಿಶ್ವಕಪ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಂಗಳವಾರ ಚಾರುಲತಾ ಪಟೇಲ್ ಅವರು ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾಗೆ ಚಿಯರ್ ಮಾಡುತ್ತಿದ್ದರು. ಅಲ್ಲದೆ ಕೈಯಲ್ಲಿ ಪೀಪಿ ಹಿಡಿದು ಇನ್ನಿತರ ಅಭಿಮಾನಿಗಳ ಜೊತೆ ಕುಣಿದು ಕುಪ್ಪಳಿಸುತ್ತಿದ್ದರು. ಕ್ಯಾಮೆರಾಮೆನ್ ಕೂಡ ಹಿರಿಯ ಅಭಿಮಾನಿಯ ಕಂಡು ಬಿಗ್ ಸ್ಕ್ರೀನ್ ನಲ್ಲಿ ಅವರನ್ನು ತೋರಿಸಿದ್ದರು.

    ಚಾರುಲತಾ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ, “ನಾನು ತುಂಬಾ ಧಾರ್ಮಿಕ ವ್ಯಕ್ತಿ ಹಾಗೂ ನಾನು ದೇವರನ್ನು ತುಂಬಾ ನಂಬುತ್ತೇನೆ. ಗಣೇಶನನ್ನು ನಾನು ಪ್ರಾರ್ಥನೆ ಮಾಡಿದರೆ ಅದು ನಿಜವಾಗುತ್ತದೆ. ಭಾರತ ತಂಡ ಈ ಬಾರಿ ಪಕ್ಕಾ ವಿಶ್ವಕಪ್ ಗೆಲ್ಲುತ್ತದೆ. ಮಾಜಿ ಕ್ರಿಕೆಟಿಗ ಕಪಿಲ್ ದೇವ್ ನಾಯಕತ್ವದಲ್ಲಿ 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ನಾನು ಮೈದಾನದಲ್ಲೇ ಇದ್ದೆ. ಅವರು ವಿಶ್ವಕಪ್ ಗೆದ್ದಾಗ ನನಗೆ ತುಂಬಾ ಹೆಮ್ಮೆ ಆಯಿತು. ಅಲ್ಲದೆ ನಾನು ಖುಷಿಯಿಂದ ಡ್ಯಾನ್ಸ್ ಮಾಡಿದ್ದೆ. ಇಂದು ಭಾರತ ತಂಡ ಬಾಂಗ್ಲಾದೇಶವನ್ನು ಸೋಲಿಸಿದರೆ, ಡ್ಯಾನ್ಸ್ ಮಾಡುವುದಾಗಿ ನಾನು ನನ್ನ ಮೊಮ್ಮಗಳ ಬಳಿ ಹೇಳಿದೆ ಎಂದು ಹೇಳಿದರು.

    ನಾನು ಭಾರತದಲ್ಲಿ ಹುಟ್ಟಿಲ್ಲ. ತಾಂಜಾನೀಯಾದಲ್ಲಿ ಜನಿಸಿದರೂ ನನ್ನ ಪೋಷಕರು ಭಾರತದಲ್ಲಿದ್ದರು. ಹೀಗಾಗಿ ನಾನು ನನ್ನ ದೇಶದ ಬಗ್ಗೆ ಹೆಮ್ಮೆಯಿದೆ. ಅಲ್ಲದೆ ನಾನು ದಶಕಗಳಿಂದ ಕ್ರಿಕೆಟ್ ವೀಕ್ಷಿಸುತ್ತಿದ್ದೇನೆ. ನಾನು ಆಫ್ರಿಕಾದಲ್ಲಿ ಇದ್ದಾಗ ನಾನು ಪಂದ್ಯ ವೀಕ್ಷಿಸುತ್ತಿದೆ. ಬಳಿಕ 1975ರಲ್ಲಿ ನಾನು ಇಲ್ಲಿಗೆ ಬಂದೆ. ನನಗೆ ಕೆಲಸಗಳಿದ್ದ ಕಾರಣ ಪಂದ್ಯ ವೀಕ್ಷಿಸಲು ಸಮಯ ಇರುತ್ತಿರಲಿಲ್ಲ. ನಾನು ಟಿವಿಯಲ್ಲೇ ಪಂದ್ಯ ವೀಕ್ಷಿಸುತ್ತಿದೆ. ಕಳೆದ 20 ವರ್ಷದ ಹಿಂದೆ ನಾನು ವೃತ್ತಿಯಿಂದ ನಿವೃತ್ತಿ ಪಡೆದೆ. ಈ ನಡುವೆ ನನಗೆ ಕೆಲಸ ಇಲ್ಲ. ಹಾಗಾಗಿ ನನಗೆ ಕ್ರಿಕೆಟ್‍ನಲ್ಲಿ ಆಸಕ್ತಿ ಇದೆ. ಕ್ರಿಕೆಟ್ ವೀಕ್ಷಿಸಲು ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಲಕ್ಕಿ ಎಂದು ಚಾರುಲತಾ ಅವರು ತಿಳಿಸಿದರು.

    ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಹಿರಿಯ ಅಭಿಮಾನಿ ಅವರ ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನಮಗೆ ಪ್ರೀತಿ ಹಾಗೂ ಬೆಂಬಲ ನೀಡಿದ್ದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ಮುಖ್ಯವಾಗಿ ಚಾರುಲತಾ ಅವರಿಗೆ ಧನ್ಯವಾದಗಳು. ಚಾರುಲತಾ ಅವರಿಗೆ 87 ವರ್ಷವಾಗಿದ್ದು, ನಾನು ನೋಡಿದ ಅತ್ಯಂತ ಡೆಡಿಕೇಟ್ ಫ್ಯಾನ್ಸ್ ಗಳಲ್ಲಿ ಇವರು ಒಬ್ಬರು. ವಯಸ್ಸು ಕೇವಲ ಒಂದು ಸಂಖ್ಯೆ. ಇವರ ಆಶೀರ್ವಾದ ಪಡೆದು ಮುಂದಿನ ಪಂದ್ಯದ ಕಡೆ ಹೋಗುತ್ತಿದ್ದೇವೆ” ಎಂದು ಪೋಸ್ಟ್ ಮಾಡಿದ್ದಾರೆ.

    ಕ್ರಿಕೆಟ್ ವರ್ಲ್ಡ್ ಕಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರು ಹಿರಿಯ ಅಭಿಮಾನಿ ಚಾರುಲತಾ ಅವರನ್ನು ತಬ್ಬಿಕೊಳ್ಳುತ್ತಿರುವ ಫೋಟೋವನ್ನು ಹಾಕಿ, ಪ್ಲೇಯರ್ ಆಫ್ ದಿ ಮ್ಯಾಚ್ ರೋಹಿತ್ ಶರ್ಮಾ ತಮ್ಮ ಗೆಲುವನ್ನು ವಿಶೇಷ ಅಭಿಮಾನಿ ಜೊತೆ ಆಚರಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ. ಅಲ್ಲದೆ ಚಾರುಲತಾ ಅವರು ಅಭಿಮಾನಿಗಳ ಜೊತೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಕೂಡ ಟ್ವೀಟ್ ಮಾಡಿದೆ.

  • ಟೀಂ ಇಂಡಿಯಾಗೆ ಚಿಯರ್ ಮಾಡಲು ಬಂದ ಹಿರಿಯ ಅಭಿಮಾನಿ ಕಂಡು ನೆಟ್ಟಿಗರು ಫಿದಾ

    ಟೀಂ ಇಂಡಿಯಾಗೆ ಚಿಯರ್ ಮಾಡಲು ಬಂದ ಹಿರಿಯ ಅಭಿಮಾನಿ ಕಂಡು ನೆಟ್ಟಿಗರು ಫಿದಾ

    ಬರ್ಮಿಂಗ್‍ಹ್ಯಾಮ್: ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶದ ವಿರುದ್ಧ ಪಂದ್ಯದಲ್ಲಿ ತಂಡಕ್ಕೆ ಚಿಯರ್ ಮಾಡಲು ಆಗಮಿಸಿದ್ದ ಹಿರಿಯ ಅಭಿಮಾನಿಯೊಬ್ಬರು ನೆಟ್ಟಿಗರ ಮನಗೆದ್ದಿದ್ದಾರೆ.

    ಇಳಿ ವಯಸ್ಸಿನಲ್ಲಿಯೂ ಟೀಂ ಇಂಡಿಯಾಗೆ ಬೆಂಬಲ ನೀಡಲು ಕ್ರೀಡಾಂಗಣಕ್ಕೆ ಆಗಮಿಸಿದ್ದ ಅಭಿಮಾನಿ ಮಕ್ಕಳಂತೆಯೇ ಕುಣಿದು ಕುಪ್ಪಳಿಸಿದ್ದರು. ಕ್ಯಾಮೆರಾಮೆನ್ ಕೂಡ ಹಿರಿಯ ಅಭಿಮಾನಿಯ ಕಂಡು ಬಿಗ್ ಸ್ಕ್ರೀನ್ ನಲ್ಲಿ ಅವರನ್ನು ತೋರಿಸಿದ್ದರು. ಈ ಹಿಂದೆ ಆರ್‍ಸಿಬಿ ಗರ್ಲ್‍ಗೆ ಫಿದಾ ಆಗಿದ್ದ ಮಂದಿ ಇಂದು ಹಿರಿಯ ಅಭಿಮಾನಿಯ ಉತ್ಸಾಹ ಕಂಡು ಮೆಚ್ಚಿಕೊಂಡಿದ್ದಾರೆ.

    ಟೀಂ ಇಂಡಿಯಾ ಕ್ರಿಕೆಟ್ ಆಟಗಾರರು ತಮಗೆ ಮಕ್ಕಳಂತೆ ಎಂದಿರುವ 87 ವರ್ಷದ ಅಜ್ಜಿ, ತಂಡಕ್ಕೆ ಬೆಂಬಲ ನೀಡಲು ಇಲ್ಲಿಗೆ ಬಂದಿದ್ದೇನೆ. ಗಣೇಶನಲ್ಲಿ ಪ್ರಾರ್ಥನೆ ಮಾಡಿದ್ದು, ಖಂಡಿತವಾಗಿಯೂ ಭಾರತ ಗೆಲ್ಲಲಿದೆ ಎಂದಿದ್ದಾರೆ. ಕೈಯಲ್ಲೊಂದು ಪೀಪಿ ಊದುತ್ತಾ ಕ್ರಿಕೆಟ್ ಮೇಲಿನ ಪ್ರೀತಿಯನ್ನು ಪ್ರತಿಬಿಂಬಿಸುವಂತಿರುವ ಇವರಿಗೆ ಅಭಿಮಾನಿಗಳು ಹ್ಯಾಟ್ಸಫ್ ಹೇಳುತ್ತಿದ್ದಾರೆ.

    ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದು, ವಿಶ್ವಕಪ್ ಟೂರ್ನಿಯೊಂದರಲ್ಲೇ 4 ಶತಕ ಸಿಡಿಸಿದ ಮೊದಲ ಟೀಂ ಇಂಡಿಯಾ ಆಗಿದ್ದಾರೆ. ಈ ಹಿಂದೆ ಶ್ರೀಲಂಕಾದ ಕುಮಾರ್ ಸಂಗಾಕರ ಅವರು ಒಂದೇ ಟೂರ್ನಿಯಲ್ಲಿ 4 ಶತಕ ಸಿಡಿಸಿದ್ದರು. ಅಲ್ಲದೇ ಪಂದ್ಯದಲ್ಲಿ ಮೊದಲ ವಿಕೆಟ್‍ಗೆ 180 ರನ್ ಸಿಡಿಸಿದ್ದ ರೋಹಿತ್, ಕೆಎಲ್ ರಾಹುಲ್ ಟೀಂ ಇಂಡಿಯಾ ಪರ ವಿಶ್ವಕಪ್ ಕ್ರಿಕೆಟ್‍ನಲ್ಲಿ ಮೊದಲ ವಿಕೆಟ್ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆದರು. ನಾಲ್ಕು ವರ್ಷಗಳ ಹಿಂದೆ ರೋಹಿತ್, ಧವನ್ ಜೋಡಿ ದಾಖಲೆ ಸೇರಿದಂತೆ ಈ ಬಾರಿಯ ವಿಶ್ವಕಪ್‍ನಲ್ಲಿ 160 ರನ್ ಜೊತೆಯಾಟ ನೀಡಿದ್ದ ಜಾಸನ್ ರಾಯ್-ಜಾನಿ ಬ್ರಿಸ್ಟೋರನ್ನು ಹಿಂದಿಕ್ಕಿದ್ದಾರೆ.