Tag: ಹಿರಿಯ ಮುಖಂಡ

  • ನಾನು ಪ್ರಚಾರಕ್ಕಿಳಿದ್ರೆ, ಕಾಂಗ್ರೆಸ್ಸಿಗೆ ಸೋಲಾಗುತ್ತೆ: ದಿಗ್ವಿಜಯ್ ಸಿಂಗ್

    ನಾನು ಪ್ರಚಾರಕ್ಕಿಳಿದ್ರೆ, ಕಾಂಗ್ರೆಸ್ಸಿಗೆ ಸೋಲಾಗುತ್ತೆ: ದಿಗ್ವಿಜಯ್ ಸಿಂಗ್

    ನವದೆಹಲಿ: ಕಾಂಗ್ರೆಸ್ ಪರವಾಗಿ ನಾನು ಪ್ರಚಾರ ನಡೆಸಿದ್ದೆ ಆದರೆ, ಪಕ್ಷಕ್ಕೆ ಸೋಲಾಗುತ್ತದೆ ಎಂದು ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ.

    ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದಿಂದ ಯಾರಿಗೇ ಟಿಕೆಟ್ ನೀಡಿದರೂ, ಅಥವಾ ಶತ್ರುಗಳಿಗೇ ಟಿಕೆಟ್ ನೀಡಿದರೂ ಅವರನ್ನು ನೀವು ಗೆಲ್ಲಿಸಿ. ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ನಾನು ಪ್ರಚಾರವಾಗಲಿ, ಭಾಷಣ ಮಾಡುವುದಿಲ್ಲ. ಒಂದು ವೇಳೆ ನಾನು ಭಾಷಣ ಮಾಡಿದರೇ, ಕಾಂಗ್ರೆಸ್ಸಿಗೆ ಅಲ್ಪ ಮತಗಳು ಬೀಳುತ್ತವೆ. ಹೀಗಾಗಿ ನಾನು ಇದಕ್ಕೆ ಮುಂದಾಗುವಿದಲ್ಲವೆಂದು ಹೇಳಿದ್ದಾರೆ.

    ದಿಗ್ವಿಜಯ್ ಸಿಂಗ್ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಾದೇಶಿಕ ಸಮಿತಿ ಅಧ್ಯಕ್ಷ ಕಮಲ್ ನಾಥ್, ಅವರು ಯಾವ ಸಂದರ್ಭದಲ್ಲಿ ಆ ರೀತಿ ಹೇಳಿಕೆ ನೀಡಿದ್ದಾರೆ ಎನ್ನುವುದು ತಿಳಿದಿಲ್ಲ. ಈ ಬಗ್ಗೆ ಚರ್ಚಿಸಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

    ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ಸಿನ ಹಿರಿಯ ನಾಯಕರೊಬ್ಬರು ಗೊಂದಲದ ಹೇಳಿಕೆ ನೀಡಿರುವುದು ಈಗ ಚರ್ಚೆಗೆ ಕಾರಣವಾಗಿದೆ.

    ಬಿಎಸ್‍ಪಿ ಮಾಯಾವತಿಯವರು ಮಧ್ಯಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ನೇರವಾಗಿ ಹೇಳಿದ್ದರು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದರೂ ಮಧ್ಯಪ್ರದೇಶ ಹಿರಿಯ ಮುಖಂಡರು ಮೈತ್ರಿಗೆ ಅಡ್ಡವಾಗಿದ್ದಾರೆ ಎಂದು ಮಾಯಾವತಿ ತನ್ನ ಆಪ್ತರ ಜೊತೆ ಹೇಳಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ವಿಚಾರ ಮಧ್ಯಪ್ರದೇಶ ಚುನಾವಣೆಯಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ದಿಗ್ವಿಜಯ್ ಸಿಂಗ್ ಅವರು ಪ್ರಚಾರದ ವಿಚಾರವಾಗಿ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಪತ್ತೆಯಾಗಿದ್ದ ಹಾಸನ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ!

    ನಾಪತ್ತೆಯಾಗಿದ್ದ ಹಾಸನ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ!

    ಹಾಸನ: ನಾಪತ್ತೆಯಾಗಿದ್ದ ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರ ಶವ ಬೇಲೂರು ತಾಲೂಕಿನ ಲಕ್ಕುಂದ ಕಾಫಿ ಎಸ್ಟೇಟ್ ನಲ್ಲಿ ಪತ್ತೆಯಾಗಿದೆ.

    ಕಾಂಗ್ರೆಸ್ ಹಿರಿಯ ನಾಯಕ ಸಲ್ಡಾನ (75) ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಕಾಫಿ ತೋಟಕ್ಕೆ ಹೋಗಿದ್ದ ಅವರು, ಮಧ್ಯಾಹ್ನದ ನಂತರ ದಿಢೀರನೆ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಕಾಫಿ ತೋಟದಲ್ಲಿರುವ ಕೃಷಿ ಹೊಂಡದ ಬಳಿ ಅವರ ಟೋಪಿ ಹಾಗೂ ಚಪ್ಪಲಿ ಸಿಕ್ಕಿದ್ದು, ಇದರಿಂದ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಕೃಷಿ ಹೊಂಡದಲ್ಲಿ ಅವರ ಮೃತದೇಹ ಸಿಕ್ಕಿದೆ.

    ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಆದರೆ ಸ್ಥಳೀಯರು ಸಲ್ಡಾನರವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಅವರನ್ನು ಯಾರಾದರೂ ಕೊಲೆ ಮಾಡಿ ಕೃಷಿ ಹೊಂಡಕ್ಕೆ ಹಾಕಿರಬಹುದೆಂದು ಮಾತನಾಡುತ್ತಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv