Tag: ಹುಡುಗಿ

  • ಧಾರವಾಡದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ – ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ರೇಪ್

    ಧಾರವಾಡದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ – ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ರೇಪ್

    ಧಾರವಾಡ: ಇತ್ತೀಚೆಗಷ್ಟೆ ಹೊಲದಲ್ಲಿ ದೇವರ ಪೂಜೆಗೆ ತೆರಳಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಪ್ರಾಪ್ತೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಮನೆಗೆ ಕೇಂದ್ರ ಸಚಿವ ಜೋಶಿ ಭೇಟಿ

    ಜಿಲ್ಲೆಯ ನವಲಗುಂದ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ 22 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ. ಅಪ್ರಾಪ್ತೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಯುವಕ ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ.

    ಅಷ್ಟೇ ಅಲ್ಲದೇ ಆರೋಪಿ ಅತ್ಯಾಚಾರ ಬಳಿಕ ಯಾರಿಗೂ ಈ ವಿಚಾರವನ್ನು ಹೇಳಬಾರದು ಎಂದು ಜೀವ ಬೆದರಿಕೆ ಹಾಕಿದ್ದನು. ಆದರೆ ಅಪ್ರಾಪ್ತೆ ನಡೆದ ವಿಚಾರವನ್ನು ಮನೆಯಲ್ಲಿ ತಿಳಿಸಿದ್ದಳು. ತಕ್ಷಣ ಕುಟುಂಬದವರು ಧಾರವಾಡ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕೆಲ ದಿನಗಳ ಹಿಂದೆ ಅಪ್ರಾಪ್ತೆ ಹೊಲದಲ್ಲಿನ ದೇವರಿಗೆ ಪೂಜೆ ಮಾಡಲು ತೆರಳಿದ್ದಳು. ಈ ವೇಳೆ ಗ್ರಾಮದ ಯುವಕ ಬೆದರಿಸಿ ಅತ್ಯಾಚಾರ ಮಾಡಿದ್ದನು. ಮರುದಿನ ಬಾಲಕಿ ತಾಯಿ ಬಳಿ ಹೊಲದಲ್ಲಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಹೇಳಿ ವಿಷ ಸೇವಿಸಿದ್ದಳು. ಕೂಡಲೇ ಕುಟುಂಬಸ್ಥರು ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 2ರಂದು ಸಾವನ್ನಪ್ಪಿದ್ದಳು.

  • ಮಂಡ್ಯದಲ್ಲಿ ಮಗನಿಂದ್ಲೇ ತಾಯಿಯ ಕೊಲೆ – ಮೊಬೈಲ್ ಬಳಸಬೇಡ ಅಂದಿದ್ದೇ ತಪ್ಪಾಯ್ತು

    ಮಂಡ್ಯದಲ್ಲಿ ಮಗನಿಂದ್ಲೇ ತಾಯಿಯ ಕೊಲೆ – ಮೊಬೈಲ್ ಬಳಸಬೇಡ ಅಂದಿದ್ದೇ ತಪ್ಪಾಯ್ತು

    – ತಾಯಿ ಮೃತದೇಹ ತಬ್ಬಿಕೊಂಡು ಗೋಳಾಡಿ ನಾಟಕ ಮಾಡಿದ್ದ ಆರೋಪಿ

    ಮಂಡ್ಯ: ಜಿಲ್ಲೆಯ ಮನೆಯೊಂದರಲ್ಲಿ ಹಾಡುಹಗಲೇ ಮಹಿಳೆ ಬರ್ಬರ ಹತ್ಯೆಯಾಗಿತ್ತು. ಇದೀಗ ಪೊಲೀಸರು ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಮಗನೇ ತಾಯಿಯನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

    ಮೂರು ದಿನದ ಹಿಂದಷ್ಟೇ ಮಂಡ್ಯದ ವಿದ್ಯಾನಗರದ ಮನೆಯೊಂದರಲ್ಲಿ ಹಾಡಹಗಲೇ ಮಹಿಳೆಯ ಭೀಕರ ಹತ್ಯೆ ನಡೆದಿತ್ತು. ಈ ಘಟನೆಯಿಂದ ಅಕ್ಕಪಕ್ಕದ ನಿವಾಸಿಗಳನ್ನು ಬೆಚ್ಚಿಬಿದ್ದಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪಶ್ಚಿಮ ಠಾಣೆ ಪೊಲೀಸರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿರೋದು ಬಹಿರಂಗವಾಗಿದೆ.

    ಮಾಜಿ ಸಂಸದೆ, ನಟಿ ರಮ್ಯಾ ಈ ಹಿಂದೆ ಬಾಡಿಗೆ ಪಡೆದಿದ್ದ ಮನೆಯ ಪಕ್ಕದ ಔಟ್‍ಹೌಸ್‍ನಲ್ಲಿ 45 ವರ್ಷದ ಶ್ರೀಲಕ್ಷ್ಮೀ ಅಲಿಯಾಸ್ ಲಲಿತಾಂಬ ತಮ್ಮ ಇಬ್ಬರು ಮಕ್ಕಳು ಹಾಗೂ ಪತಿಯೊಂದಿಗೆ ಎರಡು ವರ್ಷಗಳಿಂದ ವಾಸವಿದ್ದರು. ಜುಲೈ 29 ರಂದು ಚಾಕುವಿನಿಂದ ಹಲವು ಬಾರಿ ಇರಿದು ಆಕೆಯ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಬಂಧಿಸಿದಂತೆ ಆಕೆಯ ಹಿರಿಯ ಮಗ ಮನುಶರ್ಮನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಮನುಶರ್ಮ ಹುಡುಗಿಯೊಬ್ಬಳ ಜೊತೆ ಫೋನಿನಲ್ಲಿ ಹೆಚ್ಚು ಮಾತನಾಡುತ್ತಿದ್ದ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ, ಮಗನ ನಡುವೆ ಜಗಳ ನಡೆಯುತ್ತಿತ್ತು. ಜುಲೈ 29ರಂದು ಕೂಡ ಹುಡುಗಿಯೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಗಮನಿಸಿ ತಾಯಿ ಬೈದಿದ್ದಾರೆ. ಮಾತು ಕೇಳದಿದ್ದಾಗ ಲಲಿತಾಂಬ ಮಗನಿಗೆ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಮನುಶರ್ಮ, ತರಕಾರಿ ಕತ್ತರಿಸುವ ಚಾಕುವಿನಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಹತ್ಯೆ ಮಾಡಿದ್ದಾನೆ.

    ಕೊಲೆ ಮಾಡಿದ ನಂತರ ಬಟ್ಟೆ ಬದಲಿಸಿಕೊಂಡು ರಕ್ತಿಸಿಕ್ತವಾಗಿದ್ದ ತನ್ನ ಬಟ್ಟೆ ಹಾಗೂ ಚಾಕುವನ್ನು ರೈಲ್ವೆ ಹಳಿಗಳ ಮೇಲೆ ಬಿಸಾಡಿದ್ದಾನೆ. ಕೊಲೆಯಾದ ಮಹಿಳೆಯ ಎರಡನೇ ಮಗ ಆದಿತ್ಯ, ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ಕೊಲೆ ನಡೆದಿರುವುದು ತಿಳಿದಿದೆ. ಕೆಲವು ಗಂಟೆ ಬಿಟ್ಟು ಮನೆಗೆ ವಾಪಸ್ ಬಂದಿದ್ದ ಆರೋಪಿ, ತನಗೇನೂ ಗೊತ್ತಿಲ್ಲವೆಂಬಂತೆ ತಾಯಿ ಮೃತದೇಹ ತಬ್ಬಿಕೊಂಡು ಗೋಳಾಡಿ, ಪ್ರಕರಣ ದಾರಿ ತಪ್ಪಿಸುವ ಯತ್ನ ನಡೆಸಿದ್ದನು.

    ಆತನ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿ ಬಿಟ್ಟಿದ್ದಾನೆ. ಅಡುಗೆ ಕೆಲಸ ಮಾಡಿಕೊಂಡು ಮಕ್ಕಳನ್ನು ಓದಿಸುತ್ತಿದ್ದ ತಾಯಿ, ಮಗ ದಾರಿತಪ್ಪ ಬಾರದೆಂದು ಬೈದು, ಒಂದೇಟು ಹೊಡೆದಿದ್ದರು. ಆದರೆ ಹೆತ್ತ ತಾಯಿಯನ್ನೇ ಕೊಂದು ಮಗ ಜೈಲು ಸೇರಿದ್ದಾನೆ.

  • 17 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ- 10 ಮಂದಿ ಅರೆಸ್ಟ್

    17 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ- 10 ಮಂದಿ ಅರೆಸ್ಟ್

    ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.

    ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ.  ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .

    ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.

  • ಒಂದು ಹುಡುಗಿಗಾಗಿ ಇಬ್ಬರು ಕಿತ್ತಾಟ – ಯುವಕನ ಕೊಲೆ, 6 ಮಂದಿ ಬಂಧನ

    ಒಂದು ಹುಡುಗಿಗಾಗಿ ಇಬ್ಬರು ಕಿತ್ತಾಟ – ಯುವಕನ ಕೊಲೆ, 6 ಮಂದಿ ಬಂಧನ

    ಹುಬ್ಬಳ್ಳಿ: ಹುಡುಗಿ ವಿಚಾರವಾಗಿ ಇಬ್ಬರು ಯುವಕರ ನಡುವಿನ ಗಲಾಟೆಯಲ್ಲಿ ಓರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪನಗರ ಪೊಲೀಸರು ಆರು ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ಲೋಕೇಶ್ ಕಡೇಮನಿ ಕೊಲೆಯಾಗಿದ್ದ ಯುವಕ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಇದೀಗ ಪೊಲೀಸರು ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ.

    ಹುಬ್ಬಳ್ಳಿ ವೀರಾಪುರ ಓಣಿಯ ಹುಡುಗಿಯೊಬ್ಬಳ ವಿಚಾರವಾಗಿ ಮೃತ ಲೋಕೇಶ್ ಕಡೇಮನಿ, ಸಾಗರ ದಾಬಡೆ ಹಾಗೂ ಸಹಚರರ ಮಧ್ಯೆ ಗಲಾಟೆ ನಡೆದಿತ್ತು. ಆದರೆ ಮಂಗಳವಾರ ಸಂಜೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದ ಬಳಿ ಸಾಗರ ದಾಬಡೆ ಹಾಗೂ ಸಹಚರರು ಬೈಕಿನಲ್ಲಿ ಆಗಮಿಸಿ ಲೋಕೇಶ್ ಕಡೇಮನಿಗೆ ಚಾಕು ಇರಿದು ಕೊಲೆ ಮಾಡಿದ್ದರು.

    ಚಾಕು ಇರಿದು ಕೊಲೆ ಮಾಡಿದ ನಂತರ ಆರೋಪಿಗಳು ಪರಾರಿಯಾಗಿದ್ದರು. ಕೂಡಲೇ ಕೊಲೆ ಆರೋಪಿಗಳಿಗೆ ಕಾರ್ಯಾಚರಣೆ ನಡೆಸಿದ ಉಪನಗರ ಪೊಲೀಸರು ಆರು ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ಸ್ಯಾನಿಟೈಜರ್ ಮಾರಾಟ ಮಾಡುತ್ತಿದ್ದ ಲೋಕೇಶ್ ಕಡೇಮನಿ ಹಲವು ದಿನಗಳಿಂದ ವೀರಾಪುರ ಓಣಿಯ ಹುಡುಗಿಯನ್ನ ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಕೊಲೆ ಆರೋಪಿ ಹಾಗೂ ಲೋಕೇಶ್ ಮಧ್ಯೆ ಗಲಾಟೆ ನಡೆದಿತ್ತು. ಈ ವಿಚಾರವಾಗಿ ನಿನ್ನೆ ಇಬ್ಬರು ಯುವಕರ ಮಧ್ಯೆ ಗಲಾಟೆ ನಡೆದು, ತ್ರಿಕೋನ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿದೆ.

    ಈ ಘಟನೆಯ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ವಿಚಾರಣೆ ಮುಂದುವರಿದಿದೆ.

  • ಕವರ್ ಡ್ರೈವ್ ಹೊಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕಾರ್ಕಳದ ಕುವರಿ

    ಕವರ್ ಡ್ರೈವ್ ಹೊಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕಾರ್ಕಳದ ಕುವರಿ

    ಉಡುಪಿ: ಮನೆಯ ಅಂಗಳದಲ್ಲಿ ಕ್ರಿಕೆಟ್ ಆಟವಾಡುತ್ತಾ ಕವರ್ ಡ್ರೈವ್ ಹೊಡೆದ ಕಾರ್ಕಳದ ಹುಡುಗಿಯೊಬ್ಬಳು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾಳೆ.

    ಉಡುಪಿ ಜಿಲ್ಲೆಯ ಕಾರ್ಕಳ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಜ್ಯೋತಿ ಕೊರೊನಾ ಲಾಕ್‍ಡೌನ್ ಸಂದರ್ಭ ಮನೆಯ ಅಂಗಳದಲ್ಲಿ ಆಡುತ್ತಾ ಬಾರಿಸಿದ ಕವರ್ ಡ್ರೈವ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲಾಗುತ್ತಿದೆ. ಕೇವಲ ಆರು ಸೆಕೆಂಡ್ ಇರುವ ಈ ವಿಡಿಯೋವನ್ನು ಅಂತಾರಾಷ್ಟ್ರೀಯ ಮಾಧ್ಯಮ ಕ್ರಿಕ್ ಇನ್‍ಫೋ ಪೋಸ್ಟ್ ಮಾಡಿದ್ದು, ಇಂಥದೊಂದು ಹೊಡೆತವನ್ನು ನೀವು ಎಂದಾದ್ರೂ ನೋಡಿದ್ದಿರಾ ಅಂತ ಬಣ್ಣಿಸಿದೆ.

    ಲೆಗ್ ಸೈಡ್ ಬಂದ ಚೆಂಡಿನ ಮೇಲೆ ಹದ್ದಿನ ಕಣ್ಣಿನ ಗುರಿಯಿಟ್ಟ ಹುಡುಗಿ ಆಫ್‍ಸೈಡ್‍ಗೆ ಅಟ್ಟಿದ್ದಾರೆ. ಹುಡುಗಿಯ ಕವರ್ ಡ್ರೈವ್ ಶಾಟ್ ನೋಡಿ ಕ್ರಿಕೆಟ್ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಅಲ್ಲದೆ ಈಕೆ ಹೊಡೆದ ಕವರ್ ಡ್ರೈವ್ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟಿಗರನ್ನೇ ನಾಚಿಸುವಂತಿದೆ ಎಂದು ಜನ ಕಮೆಂಟ್ ಮಾಡುತ್ತಿದ್ದಾರೆ.

    ಚಿಕ್ಕ ವಯಸ್ಸಿನಿಂದಲೇ ಶಾಲಾ ದಿನಗಳಲ್ಲೂ ಕೂಡ ಜ್ಯೋತಿ, ಹುಡುಗರು ಆಡೋ ಮೈದಾನದಲ್ಲಿ ಚೆಂಡನ್ನು ಲೀಲಾಜಾಲವಾಗಿ ಬೌಂಡರಿ ಗೆರೆ ದಾಟಿಸುತ್ತಿದ್ದಳು. ಇದೀಗ ಮನೆಯವರ ಜೊತೆ ಅಂಗಳದಲ್ಲಿ ಕ್ರಿಕೆಟ್ ಆಡುವಾಗ ಚಿತ್ರೀಕರಿಸಿದ ವಿಡಿಯೋ ವೈರಲ್ ಆಗಿದೆ. ಗ್ರಾಮೀಣ ಮಟ್ಟದ ಪ್ರತಿಭೆ ಕೇವಲ ಪ್ರತಿಭೆಯಾಗಿಯೇ ಉಳಿದಿದೆ. ಸೂಕ್ತ ತರಬೇತಿ ಸಿಕ್ಕಿದರೆ ಈಕೆ ಖಂಡಿತವಾಗಿಯೂ ಉತ್ತಮ ಆಟಗಾರ್ತಿ ಆಗುತ್ತಾಳೆ ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಇಷ್ಟೆಲ್ಲ ಆದರೂ ಜ್ಯೋತಿ ಮಾಧ್ಯಮಗಳ ಮುಂದೆ ಬರೋದಕ್ಕೆ ಹಿಂಜರಿದಿದ್ದಾಳೆ.

  • ಶಿಕ್ಷಣಕ್ಕೆ ಕೂಡಿಟ್ಟ 5 ಲಕ್ಷ ಬಡವರಿಗೆ ನೆರವು- ವಿಶ್ವಸಂಸ್ಥೆಯ ಗಮನಸೆಳೆದ ಕ್ಷೌರಿಕನ ಮಗಳು

    ಶಿಕ್ಷಣಕ್ಕೆ ಕೂಡಿಟ್ಟ 5 ಲಕ್ಷ ಬಡವರಿಗೆ ನೆರವು- ವಿಶ್ವಸಂಸ್ಥೆಯ ಗಮನಸೆಳೆದ ಕ್ಷೌರಿಕನ ಮಗಳು

    – ‘ಬಡವರ ಸದ್ಭಾವನಾ ರಾಯಭಾರಿ’ಯಾಗಿ ನೇತ್ರಾ ನೇಮಕ

    ಚೆನ್ನೈ: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರ ನೆರವಿಗೆ ಸಿನಿಮಾ ನಟರು ಸೇರಿದಂತೆ ಅನೇಕ ಮಂದಿ ಧಾವಿಸಿದ್ದಾರೆ. ಈ ಮಧ್ಯೆ ತಮಿಳುನಾಡಿನ ಕ್ಷೌರಿಕನ ಮಗಳು ವಿಭಿನ್ನವಾಗಿ ಸಹಾಯ ಹಸ್ತ ಚಾಚುವ ಮೂಲಕ ವಿಸ್ವಸಂಸ್ಥೆಯ ಗಮನಸೆಳೆದಿದ್ದಾಳೆ.

    ಹೌದು. ತಮಿಳುನಾಡಿನ ಮಧುರೈ ನಿವಾಸಿ ಕ್ಷೌರಿಕ ಸಿ ಮೋಹನ್ ಮಗಳು ಎಂ ನೇತ್ರಾ, ಕೊರೊನಾ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ವಿಶ್ವಸಂಸ್ಥೆಯ ‘ಬಡವರ ಸದ್ಭಾವನಾ ರಾಯಭಾರಿ’ಯಾಗಿ ನೇಮಕಗೊಂಡಿದ್ದಾಳೆ.

    ಅಪ್ರಾಪ್ತಳಾಗಿರುವ ಈಕೆ ತನ್ನ ಶಿಕ್ಷಣಕ್ಕೆ ಕೂಡಿಟ್ಟಿದ್ದ 5 ಲಕ್ಷ ಹಣವನ್ನು ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವು ನೀಡುವಂತೆ ತಂದೆಯ ಬಳಿ ಮನವಿ ಮಾಡಿಕೊಂಡಿದ್ದಾಳೆ. ಈ ವೇಳೆ ಮಗಳಿಗೆ ತಂದೆಯೂ ಸಾಥ್ ನೀಡಿದ್ದಾರೆ.

    ತಮಿಳುನಾಡಿನ ಸಚಿವ ಸೆಲ್ಲುರ್ ರಾಜು, ಹುಡುಗಿಯ ಮಾನವೀಯತೆಗೆ ಮಾರುಹೋಗಿ ಆಕೆಯನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಆಕೆಯನ್ನು ದಿವಂಗತ ಜಯಲಲಿತಾ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸುವಂತೆ ಮುಖ್ಯಮಂತ್ರಿ ಪನೀರ್ ಸೆಲ್ವಂ ಅವರ ಬಳಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

    ಅವಳು ಮಧುರೈನ ಹೆಮ್ಮೆಯ ಪುತ್ರಿ. ಆಕೆಗೆ ಯುನ್ ನಾಯಕರು ಹಾಗೂ ಅಲ್ಲಿನ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಆಕೆಗೆ ಜಯಲಲಿತಾ ಪ್ರಶಸ್ತಿ ನೀಡಿ ಗೌರವಿಸುವಂತೆ ಸಿಎಂ ಬಳಿ ಶಿಫಾಸರು ಮಾಡುವುದಾಗಿ ಭರವಸೆ ನೀಡಿದರು.

    ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಹುಡುಗಿಯ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿದ್ದರು. ಕಳೆದ ಭಾನುವಾರ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಹುಡುಗಿ ಹಾಗೂ ಆಕೆಯ ತಂದೆಯನ್ನು ಪ್ರಶಂಸಿಸಿದ್ದರು. ಕೊರೊನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ಮೋಹನ್ ಅವರು ಜನರಿಗೆ ಸಹಾಯ ಮಾಡುವ ಸಲುವಾಗಿ ತನ್ನ ಉಳಿತಾಯವನ್ನು ಖರ್ಚು ಮಾಡಿ ಮಾನವೀಯತೆ ಮೆರೆದಿದ್ದಾರೆ ಎಂದು ಪ್ರಧಾನಿ ಶ್ಲಾಘಿಸಿದ್ದರು.

    ಮೋಹನ್ ಅವರು ಮಧುರೈನಲ್ಲಿ ಸಲೂನ್ ಅಂಗಡಿ ಇಟ್ಟುಕೊಂಡಿದ್ದಾರೆ. ತನ್ನ ಕಠಿಣ ಪರಿಶ್ರಮದ ಮಧ್ಯೆಯೂ ಮಗಳ ವಿದ್ಯಾಭ್ಯಾಸಕ್ಕಾಗಿ ಒಂದಷ್ಟು ಹಣವನ್ನು ಕೂಡಿಟ್ಟಿದ್ದರು. ಆದರೆ ಆ ಸಂಪೂರ್ಣ ಹಣವನ್ನು ಇಂದು ಕಷ್ಟದಲ್ಲಿರುವವರಿಗೆ ನೀಡಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದರು.

    ಸದ್ಯ ವಿಶ್ವಸಂಸ್ಥೆ ನ್ಯೂಯಾರ್ಕ್ ಹಾಗೂ ಜಿನೇವಾದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿಶ್ವನಾಯಕರ ಮುಂದೆ ಭಾಷಣ ಮಾಡುವ ಅವಕಾಶವನ್ನು ನೇತ್ರಾ ಪಡೆದುಕೊಂಡಿದ್ದಾಳೆ.

  • ವಿಷ ಸರ್ಪಗಳ ರಕ್ಷಣೆ ಮಾಡುತ್ತಿದ್ದಾಳೆ 12 ವರ್ಷದ ಪೋರಿ

    ವಿಷ ಸರ್ಪಗಳ ರಕ್ಷಣೆ ಮಾಡುತ್ತಿದ್ದಾಳೆ 12 ವರ್ಷದ ಪೋರಿ

    – ಈಕೆ ಹಿಡಿಯುವ ಹಾವು ನೋಡಿದ್ರೆ ಮೈ ಝಲ್ ಎನ್ನುತ್ತೆ

    ಕಾರವಾರ: ಹಾವು ಎಂದ್ರೆ ಎಂಥವರಿಗೂ ಭಯ. ಆದರೆ ಇಲ್ಲೊಬ್ಬ ಪುಟ್ಟ ಬಾಲಕಿಗೆ ಹಾವು ಅಂದ್ರೆ ಪಂಚಪ್ರಾಣ. ಕಾರ್ಕೋಟಕ ವಿಷದ ಹಾವನ್ನು ಸಹ ಮುದ್ದಿಸುವ ಈ ಬಾಲಕಿ ಹಾವುಗಳ ರಕ್ಷಣೆಗೆ ನಿಂತಿದ್ದಾಳೆ. ಅಷ್ಟಕ್ಕೂ ಈ ಬಾಲಕಿ ಯಾರು ಅವಳ ಕೆಲಸವೇನು ಎಂದು ಕೇಳಿದ್ರೆ ಎಲ್ಲರೂ ಬೆಚ್ಚಿ ಬೀಳೋದು ಗ್ಯಾರಂಟಿ.

    ಯಾರದ್ದೇ ಮನೆಗೆ ಹಾವು ನುಗ್ಗಲಿ, ಇಲ್ಲವೇ ಹಾವೇ ತೊಂದರೆಯಲ್ಲಿರಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಆವರ್ಸಾ ಗ್ರಾಮದ 12 ವರ್ಷದ ಪುಟ್ಟ ಬಾಲಕಿ ಭೂಮಿಕಾ, ಕೈಯಲ್ಲಿ ಸ್ಟಿಕ್ ಹಿಡಿದು ವಿಷ ಸರ್ಪವನ್ನು ತನ್ನ ಕೈಯಲ್ಲಿ ಹಿಡಿದು ರಕ್ಷಿಸುತ್ತಾಳೆ.

    ಈ ಊರಿನ ಸುತ್ತಮುತ್ತ ಯಾರ ಮನೆಗೆ ಹಾವು ಬರಲಿ ಮೊದಲು ಫೋನು ಹೋಗುವುದು ಇವರ ಮನೆಗೆ. ತಂದೆ ಮಹೇಶ್ ನಾಯ್ಕ ಉರುಗತಜ್ಞರಾಗಿದ್ದು, ಹಾವಿಗಳ ರಕ್ಷಣೆ ಮಾಡುತ್ತಾರೆ. ತಂದೆಯನ್ನು ನೋಡಿ ಹಾವುಗಳನ್ನು ಹಿಡಿಯುವುದನ್ನು ಕಲಿತ ಈ ಪುಟ್ಟ ಬಾಲಕಿ ಈಗ ತಮ್ಮ ಊರಿನ ಸುತ್ತಮುತ್ತ ಯಾವುದೇ ಹಾವು ಬರಲಿ ಅವುಗಳನ್ನು ರಕ್ಷಿಸಿ ಕಾಡಿಗೆ ಬಿಡುವ ಕೆಲಸ ಮಾಡುತ್ತಿದ್ದಾಳೆ. ಹಾವುಗಳ ಜೊತೆ ಪ್ರೀತಿ ಬೆಳಸಿಕೊಂಡಿರುವ ಈ ಪುಟ್ಟ ಬಾಲಕಿ 50 ಕ್ಕೂ ಹೆಚ್ಚು ವಿಷಸರ್ಪ, ಹೆಬ್ಬಾವುಗಳನ್ನು ರಕ್ಷಣೆ ಮಾಡಿ ತಾನೇ ಸ್ವತಃ ಕಾಡಿಗೆ ಬಿಟ್ಟು ಬಂದಿದ್ದಾಳೆ.

    ಮನೆಯಲ್ಲಿ ನೀನು ಹುಡಗಿ ಹಾಗೆಲ್ಲ ಹಾವು ಹಿಡಿಯಬಾರದು ಎಂದು ಈಕೆಗೆ ತಿಳಿಹೇಳಿ ವಿಷ ಸರ್ಪಗಳನ್ನು ಹಿಡಿಯಬೇಡ ಎನ್ನುತ್ತಾರೆ. ಆದರೂ ಈಕೆ ಮನೆಗೆ ನುಗ್ಗಿ ಬರುವ ಹಾವುಗಳನ್ನು ತಾನೇ ಹಿಡಿದು ರಕ್ಷಣೆ ಮಾಡಿ ಕಾಡಿಗೆ ಬಿಟ್ಟುಬರುತ್ತಾಳೆ. ಹಾವು ಅಂದರೆ ನನಗೆ ಇಷ್ಟ. ಅಪ್ಪ ಹಾವನ್ನು ಹಿಡಿದು ರಕ್ಷಣೆ ಮಾಡುವುದನ್ನು ನೋಡಿ ಹಾವು ಹಿಡಿಯುವುದನ್ನು ಕಲಿತಿದ್ದೇನೆ. ಎಲ್ಲಾತರದ ಹಾವು ಹಿಡಿಯುತ್ತೇನೆ ಎಂದು ಭೂಮಿಕ ಹೇಳಿದ್ದಾಳೆ.

    ಆವರ್ಸಾದ ಸುತ್ತಮುತ್ತಲೂ ದಟ್ಟ ಕಾಡುಗಳಿವೆ. ಹೀಗಾಗಿ ಈ ಕಾಡಿನಿಂದ ಆಹಾರ ಅರಸಿ ನಾಡಿಗೆ ವಿಷಸರ್ಪಗಳು ಲಗ್ಗೆ ಇಡುತ್ತವೆ. ಇಂತಹ ಸಂದರ್ಭದಲ್ಲಿ ಜನರು ಭಯ ಪಟ್ಟು ಹಾವನ್ನು ಕೊಲ್ಲುತಿದ್ದರು. ಆದರೆ ಈಗ ಈ ಬಾಲಕಿ ಹಾವನ್ನು ಹಿಡಿಯುವುದನ್ನು ನೋಡಿ ಜನರಲ್ಲೂ ಭಯ ಮಾಯವಾಗಿದೆ. ತಮ್ಮ ಮನೆಗಳಿಗೆ ಹಾವು ಬಂದರೆ ಸುತ್ತಮುತ್ತಲ ಊರಿನ ಜನ ಈ ಬಾಲಕಿಗೆ ಫೋನ್ ಮಾಡುತ್ತಾರೆ. ಕೈಯಲ್ಲಿ ಸ್ಟಿಕ್ ಹಾಗೂ ಚೀಲ ಹಿಡಿದು ಹೊರಡುವ ಈ ಪೋರಿ ಎಂಥ ಗಟ ಸರ್ಪವನ್ನೂ ಅಳಕಿಲ್ಲದೇ ಕ್ಷಣಮಾತ್ರದಲ್ಲಿ ಹಿಡಿದು ಹಾವುಗಳನ್ನು ಕಾಡಿಗೆ ಬಿಟ್ಟು ಬರುತ್ತಾಳೆ. ಜೊತೆಗೆ ಜನರಿಗೂ ಹಾವನ್ನು ಕೊಲ್ಲಬೇಡಿ ಎಂದು ತಿಳಿಹೇಳಿ ಬರುವುದು ಈಕೆಯ ಹಾವಿನ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ. ಹೀಗಾಗಿ ನಮಗೂ ಖುಷಿ ಆಗುತ್ತೆ ನಾವೂ ಏನೇ ಇದ್ರು ಈ ಹುಡುಗಿಯನ್ನು ಕರೆಯುತ್ತೇವೆ ಎಂದು ಸ್ಥಳೀಯರು ಹೇಳುತ್ತಾರೆ.

  • ಚಲಿಸ್ತಿದ್ದ ರೈಲಿನ ಮುಂದೆ ಹಾರಿ ಯುವಕ ಆತ್ಮಹತ್ಯೆ- ಸಾಯೋ ಮುನ್ನ ವಿಡಿಯೋ ರೆಕಾರ್ಡ್

    ಚಲಿಸ್ತಿದ್ದ ರೈಲಿನ ಮುಂದೆ ಹಾರಿ ಯುವಕ ಆತ್ಮಹತ್ಯೆ- ಸಾಯೋ ಮುನ್ನ ವಿಡಿಯೋ ರೆಕಾರ್ಡ್

    – ಯಾರನ್ನೂ ಹೃದಯದಿಂದ ಪ್ರೀತಿಸ್ಬೇಡಿ ಎಂದ

    ಭುವನೇಶ್ವರ: ಲವ್ ಫೇಲ್ಯೂರ್ ಆಗಿದ್ದಕ್ಕೆ ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ಕಟಕ್‍ನಲ್ಲಿ ನಡೆದಿದೆ.

    ಮೃತ ಯುವಕನನ್ನು ರೌಸಾ ಪಾಟ್ನಾ ನಿವಾಸಿ ಮನೋಜ್ ಸ್ವೈನ್ ಎಂದು ಗುರುತಿಸಲಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಮೊಬೈಲ್ ಫೋನಿನಲ್ಲಿ ವಿಡಿಯೋವನ್ನು ರೆಕಾರ್ಡ್ ಮಾಡಿದ್ದು, ವಿಡಿಯೋದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕಾರಣ ಏನೆಂಬುದನ್ನು ತಿಳಿಸಿದ್ದಾನೆ.

    ಮೃತ ಮನೋಜ್ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋದಲ್ಲಿ ತಿಳಿಸಿದ್ದಾನೆ. ಮನೋಜ್ ಸುಮಾರು ಮೂರು ವರ್ಷಗಳಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಇತ್ತೀಚೆಗೆ ಆಕೆ ಬೇರೆ ಯುವಕನನ್ನು ಪ್ರೀತಿಸುತ್ತಿದ್ದು, ಕಳೆದ ವರ್ಷ ಡಿಸೆಂಬರ್ ನಲ್ಲಿ ಆತನೊಂದಿಗೆ ಮದುವೆ ಕೂಡ ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.

    “ನಾನು ಅವಳ ಜೊತೆ ಮಾತನಾಡಲು ಕರೆದೆ. ಆದರೆ ಆಕೆ, ನನಗೆ ನಮ್ಮ ಜಾತಿಯ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿದೆ. ಹೀಗಾಗಿ ನೀನು ನನ್ನನ್ನು ಮರೆಯಬೇಕು ಎಂದು ಕೇಳಿಕೊಂಡಳು. ಅಷ್ಟೇ ಅಲ್ಲದೇ ನೀನು ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಜೀವನದಿಂದ ದೂರ ಹೋಗು ಎಂದು ನನ್ನನ್ನು ಕೇಳಿಕೊಂಡಳು. ಅದಕ್ಕಾಗಿಯೇ ನಾನು ನನ್ನ ಜೀವನವನ್ನು ಮುಗಿಸುತ್ತಿದ್ದೇನೆ” ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.

    ಕೊನೆಗೆ “ಯಾರನ್ನೂ ಹೃದಯದಿಂದ ತುಂಬಾ ಪ್ರೀತಿಸಬೇಡಿ” ಎಂದು ಮನೋಜ್ ಮನವಿ ಮಾಡಿಕೊಂಡಿದ್ದಾನೆ. ನಂತರ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಯ ಬಗ್ಗೆ ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಅಧಿಕಾರಿಗಳು ಆತ್ಮಹತ್ಯೆ ಸ್ಥಳದಲ್ಲಿ ಒಂದು ಪತ್ರವನ್ನು ಸಹ ವಶಪಡಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

  • ಲೈಂಗಿಕ ಕಿರುಕುಳದ ದೂರು ನೀಡಲು ಹೊರಟಿದ್ದ ಹುಡುಗಿಯನ್ನ ಅರೆಬೆತ್ತಲಾಗಿಸಿ, ಥಳಿಸಿದ್ರು

    ಲೈಂಗಿಕ ಕಿರುಕುಳದ ದೂರು ನೀಡಲು ಹೊರಟಿದ್ದ ಹುಡುಗಿಯನ್ನ ಅರೆಬೆತ್ತಲಾಗಿಸಿ, ಥಳಿಸಿದ್ರು

    ಲಕ್ನೋ: ಲೈಂಗಿಕ ಕಿರುಕುಳದ ವಿರುದ್ಧ ದೂರು ನೀಡಲು ಹೊರಟ್ಟಿದ್ದ 17 ವರ್ಷದ ಹುಡುಗಿಯನ್ನು ಆರೋಪಿಗಳು ಅರೆಬೆತ್ತಲಾಗಿಸಿ, ಹಲ್ಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಚೌರಿ ಚೌರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನುಷ ಘಟನೆ ನಡೆದಿದೆ. ಭಾನುವಾರ ಹುಡುಗಿಗೆ ಇಬ್ಬರು ಕಾಮುಕರು ಲೈಂಗಿಕ ಕಿರುಕುಳ ನೀಡಿದ್ದರು. ಇದರಿಂದ ನೊಂದ ಸಂತ್ರಸ್ತೆ ಕಾಮುಕರ ವಿರುದ್ಧ ದೂರು ದಾಖಲಿಸಲು ಚೌರಿ ಚೌರಾ ಪೊಲೀಸ್ ಠಾಣೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಯನ್ನು ಅಡ್ಡಗಟ್ಟಿದ್ದ ಆರೋಪಿಗಳು ತಮ್ಮ ವಿರುದ್ಧ ದೂರು ನೀಡಬಾರದು ಎಂದು ಬೆದರಿಕೆಯೊಡ್ಡಿದ್ದರು. ಇದ್ಯಾವುದಕ್ಕೂ ಜಗ್ಗದೆ ಹುಡುಗಿ ದೂರು ನೀಡಲು ಹೊರಟಾಗ ಆಕೆಯನ್ನು ಅಲೆಬೆತ್ತಲೆಗೊಳಿಸಿ, ಮನಬಂದಂತೆ ಥಳಿಸಿ ವಿಕೃತಿ ಮೆರೆದಿದ್ದಾರೆ.

    ಈ ವೇಳೆ ಆಕೆಯ ರಕ್ಷಣೆಗೆ ಬಂದ ತಂದೆ ಹಾಗೂ ಸಂಬಂಧಿಕರನ್ನೂ ಕೂಡ ಆರೋಪಿಗಳು ಥಳಿಸಿದ್ದಾರೆ. ಸೋಮವಾರ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ರಚನಾ ಮಿಶ್ರಾ ತಿಳಿಸಿದ್ದಾರೆ.

    ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆ ಅಡಿಯಲ್ಲಿ, ಐಪಿಸಿ ಸೆಕ್ಷನ್ 323, 354, 341ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.