Tag: ಹುಡುಗಿ

  • ಬಿಜೆಪಿ ಮಾಜಿ ಸಚಿವರ ಹನಿಟ್ರ್ಯಾಪ್ – 10 ಕೋಟಿ ನಿರೀಕ್ಷೆಯಲ್ಲಿದ್ದವನಿಗೆ ಕೋಳ

    ಬಿಜೆಪಿ ಮಾಜಿ ಸಚಿವರ ಹನಿಟ್ರ್ಯಾಪ್ – 10 ಕೋಟಿ ನಿರೀಕ್ಷೆಯಲ್ಲಿದ್ದವನಿಗೆ ಕೋಳ

    – ಡೀಲ್ ಮಾಡಲು ಬಂದು ಖೆಡ್ಡಾಕೆ ಕೆಡವಿದ್ರು
    – 1 ವರ್ಷದಿಂದ ಬ್ಲ್ಯಾಕ್‍ಮೇಲ್

    ಬೆಂಗಳೂರು: ಬಿಜೆಪಿಯ ಮಾಜಿ ಸಚಿವರನ್ನು ಹನಿಟ್ರ್ಯಾಪ್ ಮಾಡಿ ಖಾಸಗಿ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ರಾಘವೇಂದ್ರ ಬಂಧಿತ ಆರೋಪಿ. ರಾಘವೇಂದ್ರ ಬಿಜೆಪಿಯ ಮಾಜಿ ಸಚಿವರ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದನು. ಕಳೆದ ಒಂದು ವರ್ಷದಿಂದ ಮಾಜಿ ಸಚಿವರ ವಿಡಿಯೋ ಸೆರೆ ಹಿಡಿಯಲು ರಾಘವೇಂದ್ರ ಕಾಯುತ್ತಿದ್ದನು. ಕೊನೆಗೆ ತನ್ನ ಗೆಳತಿ ಮೂಲಕ ಸಚಿವರ ವಿಡಿಯೋ ಸೆರೆ ಹಿಡಿದಿದ್ದನು. ವಿಡಿಯೋ ತೋರಿಸಿ ರಾಘವೇಂದ್ರ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದನು. ಈ ಸಂಬಂಧ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಲು ಪ್ಲಾನ್ ಮಾಡಿಕೊಂಡಿದ್ದರು.

    ಮೊದಲಿಗೆ ಆರೋಪಿ ಹಿನ್ನೆಲೆಯನ್ನು ಪರಿಶೀಲಿಸಿದಾಗ ರಾಘವೇಂದ್ರ ಮೊದಲಿನಿಂದಲೂ ಈ ರೀತಿಯ ಸೈಬರ್ ಕ್ರೈಂನಲ್ಲಿ ಭಾಗಿಯಾಗಿದ್ದನು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಹಾಗಾಗಿ ಶಾಸಕರ ಪರವಾಗಿ ಡೀಲ್ ಮಾಡುವ ರೀತಿ ಪೊಲೀಸರು ರಾಘವೇಂದ್ರನನ್ನು ಸಂಪರ್ಕಿಸಿದ್ದಾರೆ. ರಾಘವೇಂದ್ರ ಒಂದೇ ಕಂತಿನಲ್ಲಿ 10 ಕೋಟಿ ರೂ. ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದನು. ರಾಘವೇಂದ್ರ ಜೊತೆ ಮಾತನಾಡಿದ ಪೊಲೀಸರು ಆತನಿಗೆ ಹಣ ನೀಡುತ್ತೇವೆ ಎಂದು ನಂಬಿಸಿದ್ದರು. ಪೊಲೀಸರ ಮಾತನ್ನು ನಂಬಿದ್ದ ರಾಘವೇಂದ್ರ ಭೇಟಿಯಾದಾಗ ತೆರಳಿದಾಗ ಆತನನ್ನು ಬಂಧಿಸಿದ್ದಾರೆ.

    ಯಾರು ಈ ರಾಘವೇಂದ್ರ?: ಆರೋಪಿ ರಾಘವೇಂದ್ರ ಶಿವಮೊಗ್ಗ ಮೂಲದ ನಿವಾಸಿಯಾಗಿದ್ದು, ತಾಯಿಯೊಂದಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದನು. ಸೈಬರ್ ಕ್ರೈಂಗಳನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಪರಿಣಿತಿ ಹೊಂದಿದ್ದನು ಎಂಬುವುದು ಪೊಲೀಸ್ ತನಿಖೆಯ ವೇಳೆ ತಿಳಿದು ಬಂದಿದೆ. ಸಣ್ಣ ಪುಟ್ಟ ಕ್ರೈಂ ಮಾಡಿದ್ರೆ ಸ್ವಲ್ಪ ಹಣ ಸಿಗುತ್ತದೆ. ಹೆಚ್ಚು ಹಣಕ್ಕಾಗಿ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದನು. ತನ್ನ ಗೆಳತಿ ಮೂಲಕ ಶಾಸಕರ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡತೊಡಗಿದ್ದನು ಎಂಬ ಆರೋಪ ಕೇಳಿ ಬಂದಿದೆ.

    ನನ್ನ ಮಗ ಅಂತವನಲ್ಲ: ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿರುವ ರಾಘವೇಂದ್ರ ತಾಯಿ, ನನ್ನ ಮಗ ಅಂತಹವನಲ್ಲ. ಮೊದಲಿಗೆ ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಅಲ್ಲಿ ಕೆಲಸದಿಂದ ಹೊರಬಂದು ಬೇರೆ ಕಡೆ ಉದ್ಯೋಗ ಹುಡುಕುತ್ತಿದ್ದಾನೆ. ರಾತ್ರಿ ಮನೆಗೆ ಬಂದ ಪೊಲೀಸರು, ಮನೆ ಪರಿಶೀಲನೆ ನಡೆಸಿದರು. ರಾತ್ರಿಯೆಲ್ಲ ಮನೆಯಲ್ಲಿಯೇ ಕುಳಿತಿದ್ದರೂ, ನಮಗೆ ಏನೂ ಹೇಳಲಿಲ್ಲ. ಮೊಬೈಲ್ ಕಿತ್ತುಕೊಂಡು ಮಗನಿಗೆ ಬರುವಂತೆ ಹೇಳುವಂತೆ ಹೇಳಿದರು.

    ಮತ್ತೆ ಬಂದು ಮನೆಯಲ್ಲಿದ್ದ ಮೆಮೊರಿ ಕಾರ್ಡ್, ಪೆನ್‍ಡ್ರೈವ್ ರೀತಿಯಲ್ಲಿರುವ ಒಂದು ವಸ್ತು, ಚಿಕಿತ್ಸೆಗಾಗಿ ತೆಗೆದಿಟ್ಟಿದ್ದ 50 ಸಾವಿರ ರೂ. ಮತ್ತು ದೇವರ ಮನೆಯಲ್ಲಿಟ್ಟಿದ್ದ ಒಲೆಯನ್ನು ಮಹಿಳಾ ಪೇದೆ ತೆಗೆದುಕೊಂಡು ಹೋಗಿದ್ದಾರೆ. ಪಬ್ಲಿಕ್ ಟಿವಿ ಮೂಲಕ ಮಗನ ಬಂಧನ ಸುದ್ದಿ ತಿಳಿಯಿತು. ಮನೆಯಲ್ಲಿ ವಯಸ್ಸಾದ ತಾಯಿಯೊಂದಿಗೆ ಇದ್ದೇನೆ. ನಾವಿಬ್ಬರು ಹೆಣ್ಣು ಮಕ್ಕಳೇ ಮನೆಯಲ್ಲಿದ್ದೇವೆ. ನಾನು ಮುಗ್ಧ ಮತ್ತು ಅಮಾಯಕ. ಬೇರೆಯವರ ಸಂಚಿಗೆ ಮಗ ಬಲಿಯಾಗಿರಬೇಕು ಎಂದು ರಾಘವೇಂದ್ರ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ.

    ಆತ ಯಾರೊಂದಿಗೆ ಹೆಚ್ಚು ಸೇರಲ್ಲ. ನಮಗೆ ಇಲ್ಲಿ ಯಾರು ಸಂಬಂಧಿಕರಿಲ್ಲ. ಎಲ್ಲಿ ಹೋಗಬೇಕು ಮತ್ತು ಯಾರನ್ನ ಸಂಪರ್ಕಿಸಬೇಕು ಎಂಬುವುದು ನಮಗೆ ಗೊತ್ತಿಲ್ಲ. ಇರೋ ಒಬ್ಬ ಮಗ ಯಾರ ತಂಟೆಗೂ ಹೋಗದವನು. ಆತ ತಪ್ಪು ಮಾಡಿಲ್ಲ ಎಂಬುವುದು ನನ್ನ ನಂಬಿಕೆ. ಒಂದು ವೇಳೆ ಪೊಲೀಸ್ ತನಿಖೆ ವೇಳೆ ತಪ್ಪಿತಸ್ಥ ಎಂದು ಸಾಬೀತಾದ್ರೆ ಮಗನೊಂದಿಗಿನ ಸಂಬಂಧವನ್ನು ಕಳೆದುಕೊಂಡು, ಅನಾಥಳಂತೆ ಮುಂದಿನ ಜೀವನ ನಡೆಸುತ್ತೇನೆ ಎಂದು ರಾಘವೇಂದ್ರ ತಾಯಿ ಸ್ಪಷ್ಟಪಡಿಸಿದ್ದಾರೆ.

  • ಹುಡುಗಿಗಾಗಿ ಕಿತ್ತಾಡಿ ಸ್ನೇಹಿತನನ್ನೇ ಕೊಂದ ಯುವಕ

    ಹುಡುಗಿಗಾಗಿ ಕಿತ್ತಾಡಿ ಸ್ನೇಹಿತನನ್ನೇ ಕೊಂದ ಯುವಕ

    ಬೆಂಗಳೂರು: ಹುಡುಗಿ ವಿಚಾರಕ್ಕೆ ಇಬ್ಬರು ಸ್ನೇಹಿತರ ಮಧ್ಯೆ ಜಗಳವಾಗಿ, ಯುವಕನೋರ್ವ ಆತನ ಸ್ನೇಹಿತನನ್ನೇ ಅಮಾನುಷವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸಣ್ಣಕ್ಕಿ ಬಯಲಿನಲ್ಲಿ ಈ ಘಟನೆ ನಡೆದಿದೆ. ಪ್ರದೀಪ್(26) ಕೊಲೆಯಾದ ಯುವಕ. ಆತನ ಸ್ನೇಹಿತ ವಿಜಯ್ ಆಲಿಯಾಸ್ ವಿನೋದ್ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.

    ಭಾನುವಾರ ರಾತ್ರಿ ಶ್ರೀನಗರದಿಂದ ವಿಜಯ್‍ನನ್ನು ನೋಡಲು ಪ್ರದೀಪ್ ಬಂದಿದ್ದನು. ಈ ವೇಳೆ ಇಬ್ಬರ ನಡುವೆ ಹುಡುಗಿ ವಿಚಾರಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪದಲ್ಲಿ ವಿಜಯ್ ಚಾಕುವಿನಿಂದ ಪ್ರದೀಪ್‍ಗೆ ಇರಿದು ಕೊಲೆ ಮಾಡಿದ್ದಾನೆ.

    ಈ ವಿಚಾರ ತಿಳಿದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ಯುಪಿಯಲ್ಲಿ ಹೆಚ್ಚುತ್ತಿವೆ ಲವ್ ಜಿಹಾದ್ ಪ್ರಕರಣ- ಹುಡುಗಿ ತಂದೆಯ ಟ್ವೀಟ್ ವೈರಲ್

    ಯುಪಿಯಲ್ಲಿ ಹೆಚ್ಚುತ್ತಿವೆ ಲವ್ ಜಿಹಾದ್ ಪ್ರಕರಣ- ಹುಡುಗಿ ತಂದೆಯ ಟ್ವೀಟ್ ವೈರಲ್

    ಲಕ್ನೋ: ಉತ್ತರ ಪ್ರದೇಶದ ಮೀರತ್‍ನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ಬಿಜೆಪಿ ಸಂಸದರು ಸಹ ಸದನದಲ್ಲಿ ಧ್ವನಿ ಎತ್ತಿದ್ದಾರೆ.

    ಬಿಜೆಪಿ ಸಂಸದ ರಾಜೇಂದ್ರ ಅಗರ್ವಾಲ್ ಗುರುವಾರ ಸಂಸತ್‍ನಲ್ಲಿ ಶೂನ್ಯ ವೇಳೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ದುಬೈನಲ್ಲಿ ನೆಲೆಸಿರುವ ಪಾಕಿಸ್ತಾನ ಮೂಲದ ನದೀಮ್ ಎಂಬಾತನ ಮೋಸದಾಟಕ್ಕೆ ಬಲಿಯಾದ ಹುಡುಗಿ ದುಬೈಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

    ಇದಕ್ಕೆ ಪುಷ್ಟಿ ನೀಡುವಂತೆ ಬಾಲಕಿಯ ತಂದೆ ಪೋಸ್ಟ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಂತ್ರಸ್ತೆಯ ತಂದೆ ಕಂಕರ್ ಖೇರಾ ನಿವಾಸಿ ಕಪಿಲ್ ಗುಪ್ತಾ ನವೆಂಬರ್ 17ರಂದು ಭಾವನಾತ್ಮಕ ಟ್ವೀಟ್ ಮಾಡಿದ್ದು, ನಾನು 18 ವರ್ಷದ ಮಗಳ ಅಸಾಹಯಕ ತಂದೆ. ನನ್ನ ಮುಗ್ಧ ಮಗಳು ಲವ್ ಜಿಹಾದ್‍ನಲ್ಲಿ ಸಿಲುಕಿಕೊಂಡಿದ್ದಾಳೆ. ಸ್ವಲ್ಪ ದಿನಗಳಿಂದ ರೋಮಿಯೋ ಎಂದು ಮಾತನಾಡುತ್ತಿದ್ದ ಪಾಕಿಸ್ತಾನ ಮೂಲದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಇವನೇ ನನ್ನ ಮಗಳನ್ನು ದುಬೈ ಕರೆಸಿಕೊಂಡಿದ್ದಾನೆ. ನನ್ನ ಮಗಳು ಈ ರೀತಿ ಮಾಡುತ್ತಾಳೆಂದು ನಾನು ತಿಳಿದಿರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    https://twitter.com/Kapil_Gupta_90/status/1196087244316037123?

    ಗುಪ್ತಾ ಅವರ ಟ್ವೀಟ್ ನೋಡಿದ ದುಬೈ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ(ಸಿಜಿಐ), ಈ ವಿಷಯದಲ್ಲಿ ತಮಗೆ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

    ನಾವು ನಿಮ್ಮ ಕುಟುಂಬದೊಂದಿಗೆ ಮಾತನಾಡಿದ್ದೇವೆ ನಿಮ್ಮ ಮಗಳನ್ನು ಹುಡುಕುವ ಬಗ್ಗೆ ದುಬೈ ಏಜೆನ್ಸಿಗಳೊಂದಿಗೆ ಮಾತನಾಡಿದ್ದೇವೆ. ಯಾವುದೇ ಸಂಪರ್ಕ ಸಂಖ್ಯೆ ಹಾಗೂ ವಿಳಾಸ ಇಲ್ಲದ ಕಾರಣ ಮಾಹಿತಿ ಕಲೆ ಹಾಕುವುದು ತುಂಬಾ ಕಷ್ಟಕರ ಕೆಲಸವಾಗಿದೆ. ಆದರೂ ನಾವು ಪ್ರಯತ್ನ ಬಿಡುವುದಿಲ್ಲ ಎಂದು ದುಬೈನಲ್ಲಿರುವ ಸಿಜಿಐ ಪ್ರತಿಕ್ರಿಯಿಸಿದ್ದಾರೆ.

    ಇದಕ್ಕೆ ಪ್ರತಿಯಾಗಿ ಗುಪ್ತಾ ಸಹ ಪ್ರತಿಕ್ರಿಯಿಸಿದ್ದು, ತಕ್ಷಣ ಪ್ರತಿಕ್ರಿಯಿಸಿದ್ದಕ್ಕೆ ಧನ್ಯವಾದ. ಹುಡುಗಿ ದುಬೈಗೆ ಹೋಗಿದ್ದರಿಂದ ಅವರ ಸಂಪರ್ಕ ಸಂಖ್ಯೆ ಇಲ್ಲ ಎಂದಿದ್ದಾರೆ. ಆದರೆ ಯುವಕನ ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್ ಐಡಿಯನ್ನು ನೀಡಿದ್ದಾರೆ.

    https://twitter.com/Kapil_Gupta_90/status/1196087361550970880?

    ಫೇಸ್‍ಬುಕ್ ಲವ್: ಸಂತ್ರಸ್ತೆಯ ಕುಟುಂಬಸ್ಥರು ಹೇಳುವಂತೆ, ಹುಡುಗಿಯು ನದೀಮ್‍ನೊಂದಿಗೆ ಇನ್‍ಸ್ಟಾಗ್ರಾಮ್ ಹಾಗೂ ಫೇಸ್ಬುಕ್‍ನಲ್ಲಿ ಪರಿಚಯವಾಗಿದ್ದಾಳೆ. ನವೆಂಬರ್ 4ರಂದು ಅವಳ ಪಾಸ್‍ಪೋರ್ಟ್ ತಯಾರಾಗಿದೆ. ಇದಾದ ನಾಲ್ಕು ದಿನಗಳ ಬಳಿಕ ಹುಡುಗಿ ಕಾಣೆಯಾಗಿದ್ದಾಳೆ. ಮನೆಯಲ್ಲಿದ್ದ 7 ಸಾವಿರ ರೂ. ಹಾಗೂ ಅವಳ ಶಾಲಾಕಾಲೇಜು ದಾಖಲಾತಿಗಳನ್ನು ತೆಗೆದುಕೊಂಡು ಹೋಗಿದ್ದಾಳೆ. ನವೆಂಬರ್ 8ರ ರಾತ್ರಿ ದೆಹಲಿ ವಿಮಾನ ನಿಲ್ದಾಣದಿಂದ ದುಬೈಗೆ ಹೋಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

    ಪಾಕಿಸ್ತಾನ ಮೂಲದ ನದೀಮ್ ದುಬೈನ ಪಂಚತಾರಾ ಹೋಟೆಲ್‍ನಲ್ಲಿ ಮ್ಯಾನೇಜರ್ ಆಗಿದ್ದಾನೆ ಎಂದು ವರದಿಯಾಗಿದೆ. ನದೀಮ್ ತನ್ನ ಫೇಸ್‍ಬುಕ್ ಖಾತೆಯಲ್ಲಿ ‘ಐ ಲವ್ ಪಾಕಿಸ್ತಾನ’ ಎಂದು ಪೋಸ್ಟ್ ಮಾಡಿದ್ದನು.

  • ಮನೆಯವರ ಮುಂದೆಯೇ ಅವಮಾನ – ಪ್ರೀತಿಸಿದ ಯುವಕ ಆತ್ಮಹತ್ಯೆ, ಯುವತಿ ಗಂಭೀರ

    ಮನೆಯವರ ಮುಂದೆಯೇ ಅವಮಾನ – ಪ್ರೀತಿಸಿದ ಯುವಕ ಆತ್ಮಹತ್ಯೆ, ಯುವತಿ ಗಂಭೀರ

    ತಿರುವನಂತಪುರಂ: ಪ್ರೀತಿ ವಿಚಾರವಾಗಿ ಕುಟುಂಬದ ಮುಂದೆಯೇ ಅವಮಾನ ಮಾಡಿದ್ದಕ್ಕೆ ಕೇರಳದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಸಂತ್ರಸ್ತನನ್ನು ಮಲಪ್ಪುರಂ ಜಿಲ್ಲೆಯ ಕೊಟ್ಟಕ್ಕಲ್ ಮೂಲದ ಶಾಹೀರ್ ಎಂದು ಗುರುತಿಸಲಾಗಿದೆ. ಸ್ಥಳೀಯರ ಮುಂದೆ ತನ್ನನ್ನು ಹಾಗೂ ತನ್ನ ಕುಟುಂಬವನ್ನು ಅವಮಾನ ಮಾಡಿದ್ದಾರೆ ಎಂದು ನೊಂದುಕೊಂಡು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಶಾಹೀರ್ ಸ್ಥಳೀಯ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇದು ಹುಡುಗಿಯರ ಸಂಬಂಧಿಕರಿಗೆ ತಿಳಿದಿದೆ. ಆಗ ಹುಡುಗಿಯ ಕಡೆಯವರು ಆತನನ್ನು ಸುತ್ತುವರಿದು ಯುವಕನ ಕುಟುಂಬದವರ ಮುಂದೆಯೇ ಆತನನ್ನು ಥಳಿಸಿದ್ದಾರೆ. ಅಲ್ಲದೆ ನಮ್ಮ ಕುಟುಂಬದ ಹುಡುಗಿಯನ್ನೇ ಪ್ರೀತಿಸಲು ಧೈರ್ಯ ಮಾಡಿದ್ದೀಯಾ ಎಂದು ಆತನ ಹೆತ್ತವರ ಮುಂದೆಯೇ ಹೊಡೆದಿದ್ದಾರೆ.

    ಈ ವೇಳೆ ಶಾಹೀರ್ ಸಹೋದರ ಮಧ್ಯ ಪ್ರವೇಶಿಸಲು ಪ್ರಯತ್ನಿಸಿದಾಗ, ಹುಡುಗಿಯ ಸಂಬಂಧಿಕರು ಅವನನ್ನೂ ಹೊಡೆದಿದ್ದಾರೆ. ಶಾಹೀರ್ ಸಹೋದರನಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅವರ ಸಂಬಂಧದ ಕುರಿತು ಬಹಿರಂಗವಾಗಿದ್ದಕ್ಕೆ ಹಾಗೂ ಹಿಂಸಾಚಾರ ನಡೆದಿದ್ದನ್ನು ಸಹಿಸಲಾಗದೆ ಹುಡುಗಿ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದಾಳೆ. ಅವಳ ಸ್ಥಿತಿ ಸಹ ಗಂಭೀರವಾಗಿದೆ. ಅತ್ತ ಶಾಹೀರ್ ಸಹ ತನ್ನ ಕುಟುಂಬವನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಕ್ಕಾಗಿ ನೋಂದುಕೊಂಡು ಪ್ರಾಣ ಬಿಡುವುದನ್ನು ಹೊರತುಪಡಿಸಿ ಬೇರೆ ದಾರಿ ಇಲ್ಲ ಎಂದು ನಿರ್ಧರಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಅವನ ಸಾವಿನ ನಂತರ ಮಲಪ್ಪುರಂ ಪೊಲೀಸರು 15 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಎಲ್ಲದರ ಮಧ್ಯೆ 22 ವರ್ಷದ ಯುವಕ ಮಾತ್ರ ಮಾಣ ಕಳೆದುಕೊಂಡಿದ್ದಾನೆ. ಐಪಿಸಿ ಸೆಕ್ಷನ್‍ನ ವಿವಿಧ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಪ್ರಸ್ತುತ ಮಾಹಿತಿ ಪ್ರಕಾರ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಇವರೇನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

  • ಹುಡುಗಿ ಜೊತೆ ಓಡಿ ಹೋದನೆಂದು ಯುವಕನಿಗೆ  ಬೆಲ್ಟ್‌ನಿಂದ ಥಳಿಸಿದ ಪೊಲೀಸ್!

    ಹುಡುಗಿ ಜೊತೆ ಓಡಿ ಹೋದನೆಂದು ಯುವಕನಿಗೆ ಬೆಲ್ಟ್‌ನಿಂದ ಥಳಿಸಿದ ಪೊಲೀಸ್!

    ಲಕ್ನೋ: ಪೊಲೀಸರ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ವರದಿಗಳ ಪ್ರಕಾರ ಈ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ. ವಿಡಿಯೋದಲ್ಲಿ ಪೊಲೀಸಪ್ಪನೊಬ್ಬ ಯುವಕನಿಗೆ ಬೆಲ್ಟ್ ನಿಂದ ಚೆನ್ನಾಗಿ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೆ ವಿಡಿಯೋ ಮಾಡುತ್ತಿರುವ ಇತರ ಪೊಲೀಸರು ನಗುವುದನ್ನು ಕೂಡ ಕೇಳಬಹುದು.

    ಹುಡುಗಿ ಜೊತೆ ಓಡಿ ಹೋದ ಆರೋಪದ ನಂತರ ಯುವಕನನ್ನು ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಯುವಕನನ್ನು ಠಾಣೆಯೊಳಗೆ ಕರೆದುಕೊಂಡು ಹೋಗಿ ತನಿಖೆ ಮಾಡುವ ಬದಲು ಪೊಲೀಸಪ್ಪ, ಹೊರಗಡೆಯೇ ಲೆದರ್ ಬೆಲ್ಟ್ ನಿಂದ ಮನಬಂದಂತೆ ಥಳಿಸಿದ್ದಾನೆ. ಪರಿಣಾಮ ನೋವಿನಿಂದ ಯುವಕ ಬಿಟ್ಟುಬಿಡಿ ಅಂದರೂ ಪೊಲೀಸರು ಮಾತ್ರ ಆತನ ಮನವಿಗೆ ಕ್ಯಾರೇ ಎಂದಿಲ್ಲ.

    ಈ ಸಂಬಂಧ ಕಾನ್ಪುರದ ಉಪ ಪೊಲೀಸ್ ಆಯುಕ್ತ ಪ್ರದುಮಾನ್ ಸಿಂಗ್ ಪ್ರತಿಕ್ರಿಯಿಸಿ, ಪ್ರಕರಣ ಕುರಿತು ತನಿಖೆಗೆ ಆದೇಶಸಿದ್ದು, ಶೀಘ್ರವೇ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳೀಸಿದ್ದಾರೆ.

  • ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 17ರ ಹುಡುಗಿ ಆದ್ಳು ಪೊಲೀಸ್ ಕಮೀಷನರ್

    ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 17ರ ಹುಡುಗಿ ಆದ್ಳು ಪೊಲೀಸ್ ಕಮೀಷನರ್

    ಹೈದರಾಬಾದ್: ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 17 ವರ್ಷದ ಹುಡುಗಿಗೆ ಒಂದು ದಿನದ ಪೊಲೀಸ್ ಆಯುಕ್ತೆ ಆಗಲು ಅವಕಾಶ ಕೊಟ್ಟು ತೆಲಂಗಾಣ ಪೊಲೀಸ್ ಇಲಾಖೆ ಆಕೆಯ ಆಸೆಯನ್ನು ಈಡೇರಿಸಿದೆ.

    ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ರಮ್ಯಾ(17) ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಆಲ್ವಾಲ್ ನಿವಾಸಿ ಆಗಿರುವ ರಮ್ಯಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ. ಆದರೆ ಆಕೆ ಪೊಲೀಸ್ ಅಧಿಕಾರಿಯಾಗಬೇಕು ಎಂದು ಆಸೆಯಿಟ್ಟುಕೊಂಡಿದ್ದಳು. ಹೀಗಾಗಿ ರಮ್ಯಾಳ ಕೊನೆಯ ಆಸೆ ಈಡೇರಿಸಲು ಮುಂದಾದ ತೆಲಂಗಾಣ ಪೊಲೀಸ್ ಇಲಾಖೆ ಆಕೆಗೆ ಒಂದು ದಿನ ಪೊಲೀಸ್ ಆಯುಕ್ತೆ ಆಗಲು ಅವಕಾಶ ಕೊಟ್ಟಿದೆ. ಈ ಹಿನ್ನೆಲೆ ಅಕ್ಟೋಬರ್ 29ರಂದು ರಮ್ಯಾ ಖಾಕಿ ತೊಟ್ಟು ತೆಲಂಗಾಣದ ರಚ್ಚಕೊಂಡ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಒಂದು ದಿನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ತನ್ನ ಬಯಕೆ ತೀರಿಸಿಕೊಂಡಿದ್ದಾಳೆ.

    ‘ಮೇಕ್ ಎ ವಿಷ್’ ಫೌಂಡೇಷನ್ ರಮ್ಯಾಳ ಆಸೆ ಬಗ್ಗೆ ರಚ್ಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಗ್ವತ್ ಐಪಿಎಸ್ ಅವರಿಗೆ ತಿಳಿಸಿತ್ತು. ಹಾಗೆಯೇ ರಮ್ಯಾಳಿಗೆ ಒಂದು ದಿನದ ಪೊಲೀಸ್ ಆಯುಕ್ತೆ ಆಗಲು ಅವಕಾಶ ಕಲ್ಪಿಸಿಕೊಟ್ಟು, ಕೊನೆ ದಿನಗಳನ್ನು ಎಣಿಸುತ್ತಿರುವ ಜೀವಕ್ಕೆ ಖುಷಿ ಕೊಡಲು ಸಹಾಯ ಮಾಡಿ ಎಂದು ಮನವಿ ಮಾಡಿತ್ತು.

    ಈ ಮನವಿಯನ್ನು ಒಪ್ಪಿದ ಪೊಲೀಸ್ ಇಲಾಖೆ ರಮ್ಯಾಗೆ ಪೊಲೀಸ್ ಆಯುಕ್ತೆ ಆಗಲು ಅವಕಾಶ ಕೊಟ್ಟಿದೆ. ಈ ಬಗ್ಗೆ ರಮ್ಯಾ ಮಾತನಾಡಿ, ನನಗೆ ತುಂಬಾ ಖುಷಿಯಾಗುತ್ತಿದೆ. ಪೊಲೀಸ್ ಅಧಿಕಾರಿಯಾಗಬೇಕು ಎಂದು ನನಗೆ ಆಸೆ ಇತ್ತು. ಮಹಿಳೆಯರಿಗೆ ಸುರಕ್ಷತೆ ಹಾಗೂ ರಚ್ಚಕೊಂಡ ಪ್ರದೇಶದಲ್ಲಿ ಕ್ರೈಂ ನಿಯಂತ್ರಣ ಮಾಡಿ, ಕಾನೂನು ಕಾಪಾಡಬೇಕು ಎಂದು ಬಯಕೆ ಇತ್ತು. ಈ ಆಸೆಯನ್ನು ಮೇಕ್ ಎ ವಿಷ್ ಫೌಂಡೇಷನ್ ಹಾಗೂ ಪೊಲೀಸ್ ಇಲಾಖೆ ಪೂರೈಸಿದೆ. ಎಲ್ಲರಿಗೂ ಅಭಿನಂದನೆಗಳು ಎಂದು ಸಂತೋಷವನ್ನು ಹಂಚಿಕೊಂಡಳು.

    ಕೇವಲ ರಮ್ಯಾಳ ಆಸೆಯನ್ನು ಪೂರೈಸುವುದು ಮಾತ್ರವಲ್ಲದೆ, ಪೊಲೀಸ್ ಆಯುಕ್ತ ಮಹೇಶ್ ಭಗ್ವತ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಸುದೀರ್ ಬಾಬು ಅವರು ಆಕೆಯ ಚಿಕಿತ್ಸೆಗೆ ಹಣ ಸಹಾಯ ಕೂಡ ಮಾಡಿದ್ದಾರೆ. ಹಾಗೆಯೇ ಕ್ಯಾನ್ಸರ್‌ನಿಂದ ಬಳಲುತ್ತಿರುವ ರಮ್ಯಾ ಆದಷ್ಟು ಬೇಗ ಗುಣಮುಖಳಾಗಲಿ ಎಂದು ಹಾರೈಸಿದ್ದಾರೆ.

  • ಲವ್ ಜಿಹಾದ್ ಪ್ರಕರಣ ಸಾಬೀತು – ಪ್ರೀತಿಗಾಗಿ ಅಬುಧಾಬಿಗೆ ಹಾರಿದ ಕ್ರಿಶ್ಚಿಯನ್ ಯುವತಿ

    ಲವ್ ಜಿಹಾದ್ ಪ್ರಕರಣ ಸಾಬೀತು – ಪ್ರೀತಿಗಾಗಿ ಅಬುಧಾಬಿಗೆ ಹಾರಿದ ಕ್ರಿಶ್ಚಿಯನ್ ಯುವತಿ

    – ಎನ್‍ಸಿಎಂ ಉಪಾಧ್ಯಕ್ಷರಿಂದ ಅಮಿತ್ ಶಾಗೆ ಪತ್ರ
    – ಎರಡು ಲವ್ ಜಿಹಾದ್ ಕೇಸ್ ಉಲ್ಲೇಖಿಸಿದ ಜಾರ್ಜ್ ಕುರಿಯನ್

    ತಿರುವನಂತಪುರಂ: ಕೇರಳದಲ್ಲಿ ಬೆಳಕಿಗೆ ಬರುತ್ತಿರುವ ‘ಲವ್ ಜಿಹಾದ್’ ಪ್ರಕರಣಗಳ ಕುರಿತು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ(ಎನ್‍ಸಿಎಂ) ಉಪಾಧ್ಯಕ್ಷ ಜಾರ್ಜ್ ಕುರಿಯನ್ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ಈ ಪತ್ರದಲ್ಲಿ ಜಾರ್ಜ್ ಕುರಿಯನ್ ಅವರು ಎರಡು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಮೊದಲ ಪ್ರಕರಣ ಕೋಯಿಕ್ಕೋಡ್ ಕ್ರಿಶ್ಚಿಯನ್ ಯುವತಿಯದ್ದಾಗಿದ್ದು, ಆರೋಪಿಗಳು ಅತ್ಯಾಚಾರಗೈದು ಆಕೆಯ ಬೆತ್ತಲೆ ಚಿತ್ರಗಳನ್ನು ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡಿದ್ದಾರೆ. ಅಲ್ಲದೆ, ಯುವತಿಯನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಆಕೆ ಓದುತ್ತಿದ್ದ ಕ್ರಿಶ್ಚಿಯನ್ ಕಾಲೇಜಿನ ಹಾಸ್ಟೆಲ್ ಹೊರಗಿನಿಂದ ಕಿಡ್ನ್ಯಾಪ್ ಮಾಡಲು ಸಹ ಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಎರಡನೇ ಪ್ರಕರಣ ದೆಹಲಿಯ ಹುಡುಗಿಯೊಬ್ಬಳ ಕುರಿತಾಗಿದ್ದು, ಆಕೆಯನ್ನು ಅಪಹರಿಸಿ ಪಶ್ಚಿಮ ಏಷ್ಯಾದ ದೇಶಕ್ಕೆ ಕರೆದೊಯ್ಯಲಾಗಿದೆ ಎಂದು ಅವರ ಪೋಷಕರು ಆರೋಪಿಸಿದ್ದಾರೆ. ನಮ್ಮ ಮಗಳಿಗೆ ದಾರಿ ತಪ್ಪಿಸಿ, ಮೋಸ ಮಾಡಿ, ಬ್ರೇನ್ ವಾಶ್ ಮಾಡಿ ಅಪಹರಿಸುವ ಮೂಲಕ ದಾರಿ ತಪ್ಪಿಸಿರಬಹುದು. ಇಸ್ಲಾಮಿಕ್ ಸ್ಟೇಟ್ಸ್‍ನಂತಹ ಗುಂಪುಗಳ ಮೂಲಕ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    19 ವರ್ಷದ ಕ್ರಿಶ್ಚಿಯನ್ ಯುವತಿ ನಾನು ಪ್ರೀತಿಸಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಗೆ ಬಂದಿದ್ದೇನೆ ಎಂದು ಬಹಿರಂಗವಾಗಿ ತಿಳಿಸಿದ್ದಾಳೆ. ಅಲ್ಲದೆ, ಈ ತಿಂಗಳ ಆರಂಭದಲ್ಲಿ ಅಬುಧಾಬಿಗೆ ಹಾರಿದ ಯುವತಿ, ನನ್ನನ್ನು ಯಾರೂ ಅಪಹರಿಸಿಲ್ಲ ಅಥವಾ ಯಾವುದೇ ಭಯೋತ್ಪಾದಕ ಗುಂಪಿನಲ್ಲಿ ನಾನು ಸೇರಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ.

    ಈ ಆರೋಪ ಸತ್ಯವಲ್ಲ, ನಾನು ಸ್ವಇಚ್ಛೆಯಿಂದ ಅಬುಧಾಬಿಗೆ ಬಂದಿದ್ದೇನೆ. ಯಾರೂ ನನ್ನನ್ನು ಒತ್ತಾಯಿಸಿಲ್ಲ. ನಾನು ಭಾರತದ ವಯಸ್ಕ ಪ್ರಜೆ ಹಾಗೂ ನಾನು ನನ್ನ ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಹೇಳಿದ್ದಾಳೆ. ಹುಡುಗಿಯನ್ನು ಸಿಯಾನಿ ಎಂದು ಗುರುತಿಸಲಾಗಿದೆ. ಈಗ ಅವಳ ಹೆಸರನ್ನು ಆಯಿಷಾ ಎಂದು ಬದಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

    ಸಿಯಾನಿ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಸೆಪ್ಟೆಂಬರ್ 18ರ ವರೆಗೆ ತರಗತಿಗೆ ಹಾಜರಾಗಿದ್ದಳು ಎಂದು ವರದಿಯಾಗಿದೆ. ಭಾರತೀಯನನ್ನು ಅದೇ ದಿನ ಮದುವೆಯಾಗಲು ಯುವತಿ ಅಬುಧಾಬಿಗೆ ಹಾರಿದ್ದಾಳೆ, ಇವರಿಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದರು ಎಂದು ಹೇಳಲಾಗಿದೆ.

    ಈ ಕುರಿತು ಶನಿವಾರ ಹೇಳಿಕೆ ಬಿಡುಗಡೆ ಮಾಡಿರುವ ಸಿಯಾನಿ ನನ್ನ ಇಚ್ಚೆಯಂತೆ ಇಸ್ಲಾಂಗೆ ಮತಾಂತರಗೊಂಡಿದ್ದೇನೆ. ಸೆಪ್ಟೆಂಬರ್ 24ರಂದು ಅಬುಧಾಬಿ ನ್ಯಾಯಾಲಯದಲ್ಲಿ ಧರ್ಮವನ್ನು ಸ್ವೀಕರಿಸಿದ್ದೇನೆ. ನನ್ನನ್ನು ಅಪಹರಿಸಿದ್ದಾರೆ ಅಥವಾ ಭಯೋತ್ಪಾದಕರ ಗುಂಪಿನ ಒಂದು ಭಾಗ ಎಂದು ಹೇಳುತ್ತಿರುವುದು ನಕಲಿ ಸುದ್ದಿ ಎಂದು ತಿಳಿಸಿದ್ದಾಳೆ.

    ಸುದ್ದಿ ತಿಳಿದ ನಂತರ ಅವಳ ಸಹೋದರ ಸೇರಿದಂತೆ ತಂದೆ, ತಾಯಿ ಅಬುಧಾಬಿಗೆ ತೆರಳಿದ್ದು, ಮರಳಿ ಬರುವಂತೆ ಸಿಯಾನಿಯನ್ನು ಕೇಳಿಕೊಂಡಿದ್ದಾರೆ. ಈ ವೇಳೆ ಆಕೆ ನಾನು ಬರುವುದಿಲ್ಲ, ನಾನು ಮದುವೆಯಾಗಿರುವುದು ಯುಎಇನಲ್ಲಿ ವಾಸಿಸಲು ಎಂದು ತಿಳಿಸಿದ್ದಾಳೆ ಎಂದು ವರದಿಯಾಗಿದೆ.

  • ಕ್ಯಾಂಪಸ್‍ನಲ್ಲಿ ಹುಡುಗ-ಹುಡುಗಿ ಒಟ್ಟಿಗೆ ಓಡಾಡುವಂತಿಲ್ಲ – ಚರ್ಚೆಗೆ ಗ್ರಾಸವಾಯ್ತು ವಿವಿ ಸುತ್ತೋಲೆ

    ಕ್ಯಾಂಪಸ್‍ನಲ್ಲಿ ಹುಡುಗ-ಹುಡುಗಿ ಒಟ್ಟಿಗೆ ಓಡಾಡುವಂತಿಲ್ಲ – ಚರ್ಚೆಗೆ ಗ್ರಾಸವಾಯ್ತು ವಿವಿ ಸುತ್ತೋಲೆ

    ಇಸ್ಲಾಮಾಬಾದ್: ವಿಶ್ವವಿದ್ಯಾಲಯ, ಕಾಲೇಜುಗಳು ಶಿಸ್ತು ಕಾಪಾಡಲು ವಿವಿಧ ರೀತಿಯ ಸುತ್ತೋಲೆಗಳನ್ನು ಹೊರಡಿಸುತ್ತವೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ಬಚಾ ಖಾನ್ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ಚೀಫ್ ಪ್ರೊಕ್ಟರ್ ಫರ್ಮಾನುಲ್ಲಾಹೋನ್ ಸೆ.23ರಂದು ಈ ವಿಚಿತ್ರ ಸುತ್ತೋಲೆ ಹೊರಡಿಸಿದ್ದಾರೆ. ಇದರಲ್ಲಿ ಕಾಲೇಜ್ ಕ್ಯಾಂಪಸ್‍ನಲ್ಲಿ ಹುಡುಗ-ಹುಡುಗಿಯರು ಒಟ್ಟಿಗೆ ಸಂಚರಿಸುವುದನ್ನು ನಿಷೇಧಿಸಲಾಗಿದೆ. ವಿಶೇಷವಾಗಿ ಜೋಡಿಯಾಗಿ ಸಂಚರಿಸಕೂಡದು ಎಂದು ನೋಟಿಸ್‍ನಲ್ಲಿ ಪ್ರತ್ಯೇಕವಾಗಿ ಉಲ್ಲೇಖಿಸಲಾಗಿದೆ.

    ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ‘ಇಸ್ಲಾಮಿಕ್ ಸಂಸ್ಕøತಿ’ಯಲ್ಲ ಹೀಗಾಗಿ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ ಕ್ಯಾಂಪಸ್‍ನಲ್ಲಿ ‘ಜೋಡಿ’ಯಾಗಿ ಓಡಾಡಿದರೆ ಭಾರೀ ಮೊತ್ತದ ದಂಡ ಹಾಗೂ ಪೋಷಕರಿಗೆ ದೂರು ನೀಡಲಾಗುವುದು ಎಂದು ವಿಶ್ವವಿದ್ಯಾಲಯ ಎಚ್ಚರಿಕೆ ನೀಡಿದೆ.

    ವಿಶ್ವವಿದ್ಯಾಲಯದ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಅನಗತ್ಯ ಹಾಗೂ ಇಸ್ಲಾಮಿಕ್ ಸಂಸ್ಕøತಿಗೆ ವಿರುದ್ಧವಾಗಿರುವ ಇಂತಹ ಸಂಬಂಧಗಳಿಗೆ ಕಡಿವಾಣ ಹಾಕಬೇಕಿದೆ. ಹುಡುಗ ಮತ್ತು ಹುಡುಗಿ ಒಟ್ಟಾಗಿ ಓಡಾಡುವುದನ್ನು ವಿಶ್ವವಿದ್ಯಾಲಯ ಅನುಮತಿಸುವುದಿಲ್ಲ. ಕ್ಯಾಂಪಸ್‍ನಲ್ಲಿ ಹುಡುಗ ಹಾಗೂ ಹುಡುಗಿ ಜೋಡಿಯಾಗಿ ಕಂಡು ಬಂದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    https://twitter.com/Suliemankheil/status/1177182653038157824

    ವಿದ್ಯಾರ್ಥಿಗಳು ಇದನ್ನು ಮುಂದುವರಿಸಿದಲ್ಲಿ ಪೋಷಕರನ್ನು ವಿಶ್ವವಿದ್ಯಾಲಯಕ್ಕೆ ಕರೆಸಲಾಗುವುದು ಹಾಗೂ ದಂಡ ವಿಧಿಸಲಾಗುವುದು. ಆದ್ದರಿಂದ ಅಹಿತಕರ ಘಟನೆಗಳು ನಡೆಯದಂತೆ ವಿದ್ಯಾರ್ಥಿಗಳು ವರ್ತಿಸಬೇಕು. ಹುಡುಗ ಹಾಗೂ ಹುಡುಗಿ ಇಬ್ಬರೂ ಒಟ್ಟಿಗೆ ಓಡಾಡಬಾರದು ಹಾಗೂ ಪತ್ರ ವ್ಯವಹಾರ ನಡೆಸಬಾರದು ಎಂದು ತಿಳಿಸಿದೆ.

    ಟ್ವಟ್ಟರ್‍ನಲ್ಲಿ ಈ ಸುತ್ತೋಲೆ ವೈರಲ್ ಆಗಿದ್ದು, ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ. ಕೆಲವರು ಟೀಕಿಸಿದರೆ, ಇನ್ನೂ ಕೆಲವರು ಸುತ್ತೋಲೆ ಪರ ವಾದ ಮಾಡಿದ್ದಾರೆ.

  • ಮಂಗಳೂರಿಗೆ ಬಂದ ಚಂದ್ರಯಾನಿ- ವಿಡಿಯೋ ವೈರಲ್

    ಮಂಗಳೂರಿಗೆ ಬಂದ ಚಂದ್ರಯಾನಿ- ವಿಡಿಯೋ ವೈರಲ್

    ಮಂಗಳೂರು: ಗುಂಡಿ ಬಿದ್ದ ರಸ್ತೆಗಳನ್ನು ನೋಡಿ ರೋಸಿ ಹೋದ ತಂಡವೊಂದು ಮಂಗಳೂರಿನಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದೆ.

    ಚಂದ್ರನಲ್ಲಿ ಮಾನವ ಹೆಜ್ಜೆ ಇಟ್ಟ ರೀತಿಯಲ್ಲಿ ಬಾಲಕಿಯೊಬ್ಬಳು ರಾತ್ರಿ ಹೊತ್ತಿನಲ್ಲಿ ಮಾಡಿರುವ ಈ ಪ್ರತಿಭಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ಪಡೆದಿದೆ. ಆರನೇ ತರಗತಿ ವಿದ್ಯಾರ್ಥಿನಿ ಆಡ್ಲಿನ್ ಡಿಸಿಲ್ವಳನ್ನು ಚಂದ್ರಯಾನಿಗಳ ರೀತಿಯಲ್ಲಿ ಬಟ್ಟೆ ತೊಟ್ಟು ಗುಂಡಿ ಬಿದ್ದ ರಸ್ತೆಗಳಲ್ಲಿ ಪುಟ್ಟ-ಪುಟ್ಟ ಹೆಜ್ಜೆ ಇಡುವಂತೆ ಮಾಡಲಾಗಿದೆ.

    ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಹಾಳಾಗಿವೆ. ಆದರೂ ಮಹಾನಗರ ಪಾಲಿಕೆ ರಸ್ತೆ ದುರಸ್ತಿಗೆ ಮುಂದಾಗಿಲ್ಲ. ಇದನ್ನು ಪ್ರತಿಭಟಿಸಿ ಮತ್ತು ಸಾರ್ವಜನಿಕ ಜಾಗೃತಿಗಾಗಿ ಮಂಗಳೂರಿನ ಸಿವಿಕ್ ಗ್ರೂಪಿನ ಅರ್ಜುನ್ ಮಸ್ಕರೇನಸ್ ಮತ್ತು ಅಜಯ್ ಡಿಸಿಲ್ವ ಸೇರಿ ಈ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

    ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಬಳಿಯ ಗುಂಡಿ ಬಿದ್ದ ರಸ್ತೆಗಳಲ್ಲಿ ರಾತ್ರಿ 10ರ ಸುಮಾರಿಗೆ ಚಂದ್ರಯಾನದ ಹೆಜ್ಜೆಗಳನ್ನು ಮೂಡಿಸಿ ಚಿತ್ರೀಕರಣ ಮಾಡಲಾಗಿದೆ. ಮಂಗಳೂರಿಗೆ ಬಂದ ಚಂದ್ರಯಾನಿ ಎಂಬ ತಲೆಬರಹದಡಿ ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

  • ಮನೆಯಲ್ಲಿದ್ದ 10 ಲಕ್ಷ ರೂ. ಕದ್ದ ಯುವತಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ಲು

    ಮನೆಯಲ್ಲಿದ್ದ 10 ಲಕ್ಷ ರೂ. ಕದ್ದ ಯುವತಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ಲು

    ಮುಂಬೈ: ಯುವತಿ ತನ್ನ ಗೆಳೆಯನಿಗಾಗಿ ಸ್ವಂತ ಮನೆಯಲ್ಲಿದ್ದ 10 ಲಕ್ಷ ರೂ. ಕದ್ದು ಪರಾರಿಯಾಗಿ, ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ.

    ಮುಂಬೈನ ಕಂಡಿವಲಿ ನಿವಾಸಿ ರಾಧಾ ಗುಪ್ತಾ (19) ಬಂಧಿತ ಯುವತಿ. ರಾಧಾಳ ಗೆಳೆಯ ಅಮೀರ್ ನೌಷಾದ್ ಖಾನ್ ಗೋವಂಡಿಯ ನಿವಾಸಿ. ಈ ಇಬ್ಬರನ್ನು ಪೊಲೀಸರು ಭಾನುವಾರ ಕಲಿನಾ ಪ್ರದೇಶದಲ್ಲಿ ಬಂಧಿಸಿದ್ದಾರೆ.

    ರಾಧಾ ಗುಪ್ತಾ ಮನೆಯಿಂದ 10 ಲಕ್ಷ ರೂ.ವನ್ನು ಆಗಸ್ಟ್ 30ರಂದು ಕದ್ದು, ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ಈ ಸಂಬಂಧ ರಾಧಾಳ ಪೋಷಕರು ಕಂಡಿವಾಲಿ ಠಾಣೆಗೆ ದೂರು ನೀಡಿದ್ದರು. ಕಳ್ಳತನದ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದರು.

    ಪೊಲೀಸರು ರಾಧಾಳ ಪತ್ತೆಗಾಗಿ ಪೋಷಕರಿಂದ ಆಕೆಯ ಮೊಬೈಲ್ ನಂಬರ್ ಪಡೆದಿದ್ದರು. ಬಳಿಕ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ ರಾಧಾ ಮುಂಬೈನ ಕಲಿನಾ ಪ್ರದೇಶದ ಮನೆಯೊಂದರಲ್ಲಿ ಇರುವುದನ್ನು ತಿಳಿದು ಬಂದಿತ್ತು. ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಜೊತೆಗೆ ರಾಧಾಳ ಬಳಿ ಇದ್ದ 7 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

    ಪೊಲೀಸ್ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡ ರಾಧಾ, ಉತ್ತರ ಪ್ರದೇಶದ ಅಜಂಘಡದಲ್ಲಿ ನಡೆದ ಮದುವೆಯಲ್ಲಿ ನೌಷಾದ್ ಪರಿಚಯವಾಗಿದ್ದ. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ನೌಷಾದ್ ವ್ಯಾಪಾರ ಆರಂಭಿಸುವುದಕ್ಕೆ ಸಹಾಯ ಮಾಡಲು ಹಣ ಕದ್ದಿದ್ದೇನೆ ಎಂದು ತಿಳಿಸಿದ್ದಾಳೆ.

    ಪೊಲೀಸರು ಆರೋಪಿಗಳನ್ನು ಸೋಮವಾರ ಸ್ಥಳೀಯ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರನ್ನು ಒಂದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.