Tag: ಹುತಾತ್ಮರು

  • ರಾಮ ಮಂದಿರ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ವಿಶೇಷ ಗೌರವ – ಟ್ರಸ್ಟ್ ಚಿಂತನೆ ಏನು?

    ರಾಮ ಮಂದಿರ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ವಿಶೇಷ ಗೌರವ – ಟ್ರಸ್ಟ್ ಚಿಂತನೆ ಏನು?

    ಲಕ್ನೋ: ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram Mandir) ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಜನವರಿಯಲ್ಲಿ ದೇವಸ್ಥಾನದ ಉದ್ಘಾಟನೆಯಾಗಲಿದೆ. ರಾಮ ಮಂದಿರದ ಉದ್ಘಾಟನೆ ಜೊತೆಗೆ ರಾಮ ಮಂದಿರ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಚಿಂತಿಸಿದೆ.

    ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಸಭೆಯಲ್ಲಿ ಹುತಾತ್ಮ ಹೋರಾಟಗಾರರ ಪ್ರತಿಮೆಗಳು, ಸ್ಮಾರಕಗಳ ಸ್ಥಾಪನೆ, ರಸ್ತೆ, ಬೀದಿಗಳು ಮತ್ತು ಕಟ್ಟಡಗಳಿಗೆ ಅವರ ಹೆಸರಿಸಿಡುವುದು ಅಂತಿಮವಾಗಿ, ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಉದ್ದೇಶಿತ ರಾಮ್ ಮ್ಯೂಸಿಯಂನಲ್ಲಿ (Museum) ಸ್ಥಾನ ನೀಡುವ ಮೂಲಕ ಅಂತಹ ಎಲ್ಲ ಹುತಾತ್ಮರನ್ನು ಗೌರವಿಸುವ ಬಗ್ಗೆ ಸಮಾಲೋಚನೆ ನಡೆದಿದೆ. ರಾಮಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮನ ಭಕ್ತರಿಗೆ ಗೌರವಧನ ನೀಡಬೇಕು ಎನ್ನುವ ಮನವಿಯನ್ನು ಟ್ರಸ್ಟ್ ಸಭೆಯಲ್ಲಿ ಗಂಭೀರವಾಗಿ ಪರಿಗಣಿಸಿದೆ.

    ಹುತಾತ್ಮ ರಾಮಭಕ್ತರ ಪ್ರತಿಮೆ ಸ್ಥಾಪನೆ ಒಮ್ಮತ ಮೂಡಿ ಬಂದಿಲ್ಲ ಎಂದು ಮೂಲಗಳು ಹೇಳಿವೆ. ದೇವಾಲಯದ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ರಾಮಭಕ್ತರ ನಿಖರ ಸಂಖ್ಯೆ ತಿಳಿದಿಲ್ಲ. ಸುಮಾರು 500 ವರ್ಷಗಳ ಕಾಲ ನಡೆದ ರಾಮಮಂದಿರ ಆಂದೋಲನದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತದೆ. 1990ರ ದಶಕದ ಚಳುವಳಿಗೂ ಮುಂಚಿನ ಚಳುವಳಿಗಳಲ್ಲಿ ಪ್ರಾಣ ಕಳೆದುಕೊಂಡ ರಾಮಭಕ್ತರ ಬಗ್ಗೆ ನಿಖರವಾದ ಮಾಹಿತಿಯನ್ನು ಕಂಡುಹಿಡಿಯುವುದು ಕಷ್ಟಕರವಾಗಿರುತ್ತದೆ. ಹುತಾತ್ಮರ ಸಂಖ್ಯೆಯು ತುಂಬಾ ಹೆಚ್ಚಿರುವ ಕಾರಣ ಎಲ್ಲರ ವಿಗ್ರಹಗಳನ್ನು ಮಾಡಲು ಸಾಧ್ಯವಾಗದಿರಬಹುದು. ಈ ಕಾರಣದಿಂದಲೇ ಪ್ರಾಣ ಕಳೆದುಕೊಂಡ ರಾಮಭಕ್ತರಿಗೆ ಪ್ರತ್ಯೇಕ ಮೂರ್ತಿಗಳನ್ನು ನಿರ್ಮಿಸುವ ಆಲೋಚನೆ ಸೂಕ್ತವಾಗಿಲ್ಲ ಎಂದು ನಿರ್ಧರಿಸಲಾಗಿದೆ. ಇದನ್ನೂ ಓದಿ: Himachal Pradesh Rain: ರಣಭೀಕರ ಮಳೆಗೆ 74 ಮಂದಿ ಸಾವು – 10 ಸಾವಿರ ಕೋಟಿ ನಷ್ಟ!

    ಚಳವಳಿಯಲ್ಲಿ ಕೊಲ್ಲಲ್ಪಟ್ಟವರ ಬಗ್ಗೆ ಸಂಪೂರ್ಣವಾಗಿ ನಿಖರವಾದ ಮಾಹಿತಿ ಇರುವ ಕಾರಣ ಅವರಿಗೆ ರಾಮ ಮಂದಿರ ವಸ್ತು ಸಂಗ್ರಹಾಲಯದಲ್ಲಿ ಸ್ಥಾನ ನೀಡಬಹುದು. ಬೆಳಕು ಮತ್ತು ಧ್ವನಿ ಪ್ರದರ್ಶನ ಮತ್ತು ಚಲನಚಿತ್ರ ಪ್ರದರ್ಶನದ ಮೂಲಕ ಹುತಾತ್ಮ ರಾಮಭಕ್ತರ ಪಾತ್ರವನ್ನು ನೆನಪಿಸಿಕೊಳ್ಳಬಹುದು ಮತ್ತು ಗೌರವಿಸಬಹುದು ಎನ್ನುವ ಅಭಿಪ್ರಾಯಕ್ಕೆ ಸಹಮತ ವ್ಯಕ್ತವಾಗಿದೆ. ಇದನ್ನೂ ಓದಿ: `ಕೈ’ ಹಿಡಿಯಲು ಮುಂದಾದ್ರಾ BJP ಶಾಸಕ – ರಾತ್ರಿ ರಹಸ್ಯ ಸಭೆ ಬಳಿಕ ಶಿವರಾಮ್‌ ಹೆಬ್ಬಾರ್ ಹೇಳಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: ಇಬ್ಬರು ಭಾರತೀಯ ಶಾಂತಿಪಾಲನ ಸೈನಿಕರು ಹುತಾತ್ಮ

    ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: ಇಬ್ಬರು ಭಾರತೀಯ ಶಾಂತಿಪಾಲನ ಸೈನಿಕರು ಹುತಾತ್ಮ

    ಕಿನ್ಶಾಸ: ಪೂರ್ವ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ನಡೆಯುತ್ತಿರುವ ಯುಎನ್ ವಿರೋಧಿ ಪ್ರತಿಭಟನೆಯಲ್ಲಿ ಇಬ್ಬರು ಭಾರತೀಯ ಶಾಂತಿಪಾಲನ ಸೈನಿಕರು ಹುತಾತ್ಮರಾಗಿದ್ದಾರೆ.

    ಈ ಕುರಿತು ಬಾರ್ಡರ್ ಸೆಕ್ಯುರಿಟಿ ಫೋರ್ಸ್(ಬಿಎಸ್‍ಎಫ್) ಟ್ವೀಟ್ ಮಾಡಿದ್ದು, 26 ಜುಲೈ ರಂದು ಎಚ್‍ಸಿ ಶಿಶುಪಾಲ್ ಸಿಂಗ್ ಮತ್ತು ಎಚ್‍ಸಿ ಸನ್ವಾಲಾ ರಾಮ್ ವಿಷ್ಣೋಯ್ ಅವರು ನಿಧನರಾಗಿದ್ದಾರೆ. ಅವರಿಗೆ ಸಂತಾಪ ವ್ಯಕ್ತಪಡಿಸುತ್ತೇವೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಡೆಯಲು ಯುಎನ್ ಶಾಂತಿಪಾಲನಾ ತಂಡದೊಂದಿಗೆ ಇವರನ್ನು ನಿಯೋಜಿಸಲಾಗಿತ್ತು. ಈ ಸಂಕಷ್ಟದ ಸಮಯದಲ್ಲಿ ನಾವು ಮೃತರ ಕುಟುಂಬದೊಂದಿಗೆ ಇದ್ದೇವೆ. ಜೈಹಿಂದ್ ಎಂದು ಬರೆದು ಮಾಹಿತಿ ತಿಳಿಸಿದೆ.  ಇದನ್ನೂ ಓದಿ: ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲಕರು, 12 ನಾಗರಿಕರು ಮೃತ 

    ಏನಿದು ಘಟನೆ?
    MONUSCO ಎಂದು ಕರೆಯಲ್ಪಡುವ ಯುಎನ್ ಮಿಷನ್, ಮಿಲಿಟರಿಯ ಹಿಂಸಾಚಾರದ ವಿರುದ್ಧ ನಾಗರಿಕರನ್ನು ರಕ್ಷಿಸಲು ವಿಫಲವಾಗಿದೆ ಎಂದು ಪ್ರತಿಭಟನೆಗಳು ನಡೆಯುತ್ತಿದೆ. ಯುಎನ್ ಉಪ ವಕ್ತಾರ ಫರ್ಹಾನ್ ಹಕ್ ಈ ಕುರಿತು ಮಾತನಾಡಿದ್ದು, ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]