Tag: ಹುಬ್ಬಳ್ಳಿ

  • ಪತ್ರಕರ್ತ ರವಿಬೆಳಗೆರೆ ಬಂಧನ- ಸಂಸದ ಪ್ರಹ್ಲಾದ್ ಜೋಷಿ ಹೀಗಂದ್ರು

    ಪತ್ರಕರ್ತ ರವಿಬೆಳಗೆರೆ ಬಂಧನ- ಸಂಸದ ಪ್ರಹ್ಲಾದ್ ಜೋಷಿ ಹೀಗಂದ್ರು

    ಹುಬ್ಬಳ್ಳಿ: ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತೆ. ಯಾರು ಎಂಥವರು ಎಂಬುದನ್ನು ಕಾಲ ನಿರ್ಧಾರ ಮಾಡುತ್ತೆ ಅಂತ ಸಂಸದ ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ.

    ಪತ್ರಕರ್ತ ರವಿ ಬೆಳಗೆರೆ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ತಾನೊಬ್ಬನೇ ಸತ್ಯವಂತ ಎನ್ನುವ ಹಾಗೆ ರವಿ ಬೆಳಗೆರೆ ಇದ್ದರು. ತಾನೊಬ್ಬನೇ ಸಾಚಾ.. ಉಳಿದವರೆಲ್ಲಾ ಚಾರಿತ್ರ್ಯಹೀನರು ಅನ್ನೋ ರೀತಿಯಲ್ಲಿ ಜೀವನ ಮಾಡುತ್ತಿದ್ದರು ಅಂದರು.  ಇದನ್ನೂ ಓದಿ: ಸಿಸಿಬಿ ಕಸ್ಟಡಿಯಲ್ಲಿ ಮೊದಲ ರಾತ್ರಿ ಕಳೆದ ರವಿ ಬೆಳಗೆರೆ- ನಿದ್ದೆ ಬಾರದೇ ಪೇಪರ್ ನಲ್ಲಿ ಗೀಚಿದ್ರು

    ಪ್ರಕರಣದಲ್ಲಿ ಬೆಳಗೆರೆ ಸಿಲುಕಿದ್ದಾರೆ ಎಂದು ಈ ಮಾತು ಹೇಳುತ್ತಿಲ್ಲ. ಯಾರನ್ನಾದರೂ ದೈಹಿಕವಾಗಿ ಮುಗಿಸುತ್ತೇನೆ ಎಂಬುದು ಸರಿಯಲ್ಲ ಅಂತ ಜೋಷಿ ಹೇಳಿದ್ರು.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು.  ಇದನ್ನೂ ಓದಿ: ರವಿ ಬೆಳಗೆರೆ ಸುಪಾರಿ ಪ್ರಕರಣ: ಮಗಳು ಭಾವನಾ, ಮಗ ಕರ್ಣ ಹೀಗಂದ್ರು

    https://www.youtube.com/watch?v=86k-IW3-boE

    https://www.youtube.com/watch?v=kJ5uYUEgVeM

    https://www.youtube.com/watch?v=tvAkOpM6ZZo

    https://www.youtube.com/watch?v=lgEoaxQ1l44

    https://www.youtube.com/watch?v=bwXnj2XMWag

  • ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತದೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅರೆಸ್ಟ್

    ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತದೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅರೆಸ್ಟ್

    ಹುಬ್ಬಳ್ಳಿ: ನಗರದ ಗಣೇಶ್ ಪೇಟೆ ಪಾಕಿಸ್ತಾನದ ಹಾಗೆ ಕಾಣುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಖೈರಾತಿಯನ್ನು ನಾಲ್ಕನೇ ಜೆಎಂಎಫ್‍ಸಿ ನ್ಯಾಯಾಧೀಶೆ ದೀಪ್ತಿ ನಾಡಗೌಡ ಅವರೆದುರು ಹಾಜರುಪಡಿಸಲಾಗಿದ್ದು, 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಮೌಲ್ವಿ ವಿರುದ್ಧ ಶಾಂತಿ ಭಂಗ ಮತ್ತು ಪ್ರಚೋದನಾತ್ಮಕ ಹೇಳಿಕೆ ಪ್ರಕರಣ ದಾಖಲಾಗಿತ್ತು.

    ಏನಿದು ಪ್ರಕರಣ?: ನಗರದ ಗಣೇಶ್ ಪೇಟೆಯಲ್ಲಿ ಶನಿವಾರ ನಡೆದ ಈದ್ ಮಿಲಾದ್ ಹಬ್ಬದ ವೇಳೆ ಗಣೇಶ ಪೇಟೆಯ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಎನ್ನುವ ಮೌಲ್ವಿ, ಗಣೇಶ ಪೇಟೆ ನನಗೆ ಪಾಕಿಸ್ತಾನದಂತೆ ಕಾಣುತ್ತದೆ. ಪಾಕಿಸ್ತಾನಕ್ಕೆ ಹೋಗುವ ಅವಶ್ಯಕತೆ ಇಲ್ಲ. ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ. ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಮೌಲ್ವಿಯ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಮೌಲ್ವಿ ಈ ರೀತಿ ಹೇಳಿಕೆ ನೀಡುವಾಗ ಅವರ ಪಕ್ಕದಲ್ಲೇ ಉತ್ತರ ವಲಯ ಎಸಿಪಿ ದಾವೂದ್ ಖಾನ್ ಹಾಗೂ ಪೊಲೀಸರು ಇದ್ದರು. ಪೊಲೀಸರ ಎದುರು ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಪೊಲೀಸರು ಸುಮ್ಮನೆ ಕುಳಿತುಕೊಂಡಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

  • ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತೆ- ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

    ಹುಬ್ಬಳ್ಳಿಯ ಗಣೇಶ್ ಪೇಟೆ ಪಾಕಿಸ್ತಾನದಂತೆ ಕಾಣುತ್ತೆ- ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

    ಹುಬ್ಬಳ್ಳಿ: ನಗರದ ಗಣೇಶ ಪೇಟೆ ನನಗೆ ಪಾಕಿಸ್ತಾನದಂತೆ ಕಾಣುತ್ತದೆ. ಪಾಕಿಸ್ತಾನಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂದು ಮೌಲ್ವಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಹುಬ್ಬಳ್ಳಿಯ ಗಣೇಶ್ ಪೇಟೆಯಲ್ಲಿ ಶನಿವಾರ ನಡೆದ ಈದ್ ಮಿಲಾದ್ ಹಬ್ಬದ ವೇಳೆ ಗಣೇಶ ಪೇಟೆಯ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಎನ್ನುವ ಮೌಲ್ವಿಯೇ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

    ಗಣೇಶ್ ಪೇಟೆ ನನಗೆ ಪಾಕಿಸ್ತಾನ ಹಾಗೇ ಕಾಣುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ನೋಡುವ ಅವಶ್ಯಕತೆ ಇಲ್ಲ. ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ. ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ಹೇಳಿದ್ದಾರೆ.

    ಮೌಲ್ವಿಯ ಈ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಮೌಲ್ವಿ ಈ ರೀತಿ ಹೇಳಿಕೆ ನೀಡುವಾಗ ಅವರ ಪಕ್ಕದಲ್ಲೇ ಉತ್ತರ ವಲಯ ಎಸಿಪಿ ದಾವೂದ್ ಖಾನ್ ಹಾಗೂ ಪೊಲೀಸರು ಇದ್ದರು. ಪೊಲೀಸರ ಎದುರು ವಿವಾದಾತ್ಮಕ ಹೇಳಿಕೆ ನೀಡಿದ್ದರು ಪೊಲೀಸರು ಸುಮ್ಮನೆ ಕುಳಿತುಕೊಂಡಿದ್ದಕ್ಕೆ ವ್ಯಾಪಕ ಟೀಕೆ ಬಂದಿದೆ.

    ವಿವಾದಾತ್ಮಕ ಹೇಳಿಕೆ ನೀಡಿದ್ರು ಸುಮ್ಮನೇ ಕುಳಿತ ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂತ ದೇಶದ್ರೋಹ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಮೌಲ್ವಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


  • ಹುಡುಗಿಯರನ್ನ ಚುಡಾಯಿಸ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಸಖತ್ ಗೂಸಾ!

    ಹುಡುಗಿಯರನ್ನ ಚುಡಾಯಿಸ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಸಖತ್ ಗೂಸಾ!

    ಹುಬ್ಬಳ್ಳಿ: ಯುವತಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮಾಧವಪುರ ಬಡಾವಣೆಯಲ್ಲಿ ನಡೆದಿದೆ.

    ದಿನ ಸಂಜೆ ಸಮಯದಲ್ಲಿ ಮಾಧವಪುರ ಓಣಿಯಲ್ಲಿ ಓಡಾಡುವ ಮಹಿಳೆಯರು ಹಾಗೂ ಯುವತಿಯರಿಗೆ ಈತ ಚುಡಾಯಿಸುತ್ತಿದ್ದ. ಈತನ ಬಗ್ಗೆ ಕೆಲ ಯುವತಿಯರು ತಮ್ಮ ಪೋಷಕರಿಗೆ ತಿಳಿಸಿದ್ದರು. ಶುಕ್ರವಾರ ಸಂಜೆ ಮತ್ತೆ ಯುವತಿಯರನ್ನು ಚುಡಾಯಿಸುವಾಗ ರೆಡ್ ಹ್ಯಾಂಡ್ ಆಗಿ ಸಾರ್ವಜನಿಕರು ಹಿಡಿದಿದ್ದಾರೆ.

    ಕಾಮುಕನನ್ನು ಹಿಡಿದ ಮಾಧವಪುರ ಬಡವಾಣೆಯ ನಿವಾಸಿಗಳು ಹಾಗೂ ಯುವತಿಯರ ಪೋಷಕರು, ರಸ್ತೆಯಲ್ಲಿಯೇ ಧರ್ಮದೇಟು ನೀಡಿದ್ದಾರೆ. ಆದರೆ ಹಲ್ಲೆಗೊಳಗಾದ ಯುವಕನ ಹೆಸರು ತಿಳಿದುಬಂದಿಲ್ಲ. ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಮುಂದೆ ಈ ಕಡೆ ಸುಳಿಯದಂಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

    ಈ ಘಟನೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುವಕನ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.

     

  • 7 ವರ್ಷ ಪ್ರೀತಿಸಿ ಬೇರೆ ಮದ್ವೆಯಾದ ಪ್ರಿಯಕರ-ಕಲ್ಯಾಣ ಮಂಟಪದ ಮುಂದೆ ವರನ ಲವರ್ ಗಲಾಟೆ

    7 ವರ್ಷ ಪ್ರೀತಿಸಿ ಬೇರೆ ಮದ್ವೆಯಾದ ಪ್ರಿಯಕರ-ಕಲ್ಯಾಣ ಮಂಟಪದ ಮುಂದೆ ವರನ ಲವರ್ ಗಲಾಟೆ

    ಹುಬ್ಬಳ್ಳಿ: ಕುಟುಂಬ ಸದಸ್ಯರು ಸಂಭ್ರಮದಿಂದ ಮದುವೆ ಮಾಡಿ ಸೊಸೆಯನ್ನ ಮನೆ ತುಂಬಿಸಿಕೊಳ್ಳಬೇಕು ಎನ್ನುವ ಹೊತ್ತಿಗೆ ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಸುನೀಲ ಬಡಿಗೇರ ಎಂಬ ಯುವಕ ತುಮಕೂರು ಮೂಲದ ಲಕ್ಷ್ಮೀ ಎಂಬ ಯುವತಿಯನ್ನ ಏಳು ವರ್ಷದಿಂದ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದ. ಆದರೆ ಕಳೆದ ಆರು ತಿಂಗಳಿಂದ ಆಕೆಗೆ ಕೈಕೊಟ್ಟಿದ್ದ ಈತ ಶುಕ್ರವಾರ ಮತ್ತೊಬ್ಬ ಯುವತಿಯೊಂದಿಗೆ ಮದುವೆಯಾಗಿದ್ದಾನೆ.

    ಸುನೀಲ ಮದುವೆಯಾಗುತ್ತಿರುವ ಮಾಹಿತಿ ತಿಳಿದ ಲಕ್ಷ್ಮೀ ನೇರವಾಗಿ ಮದುವೆ ಮಂಟಪಕ್ಕೆ ಆಗಮಿಸಿ ತನಗೆ ನ್ಯಾಯ ಕೊಡಿಸುವಂತೆ ಗೋಳಾಡಿದ್ದಾರೆ. ಇನ್ನು ಲಕ್ಷ್ಮೀ ಆರೋಪವನ್ನು ಕೇಳಿ ಕೋಪಗೊಂಡ ಪೋಷಕರು ಸುನೀಲನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

    ನಡೆದಿದ್ದು ಏನು?: ಲಕ್ಷ್ಮೀ ಕೆಲಸ ಮಾಡುವ ಶಾಲೆಯಲ್ಲಿ ಸುನೀಲನ ಅಕ್ಕ ಕೆಲಸ ಮಾಡುತ್ತಿದ್ದು, ಇಬ್ಬರು ಸ್ನೇಹಿತರಾಗಿದ್ದರು. ಇದರಿಂದ ಲಕ್ಷ್ಮೀಗೆ ಸುನೀಲನ ಪರಿಚಯವಾಗಿದ್ದು, ಆಗಾಗ ಅಕ್ಕನ ಮನೆಗೆ ಬಂದು ಹೋಗುತ್ತಿದ್ದರಿಂದ ಇವರಿಬ್ಬರ ನಡುವೆ ಸಲಿಗೆ ಬೆಳೆದು ಪ್ರೇಮಕ್ಕೆ ತಿರುಗಿದೆ. ಏಳು ವರ್ಷಗಳ ಕಾಲ ಇಬ್ಬರು ಪರಸ್ಪರ ಪ್ರೀತಿ ಮಾಡಿದ್ದು, ಈ ನಡುವೆ ಲಕ್ಷ್ಮೀ ಯನ್ನು ದೈಹಿಕವಾಗಿ ಬಳಸಿಕೊಂಡು ನಂತರ ತನಗೂ ಆಕೆಗೂ ಸಂಬಂಧವೇ ಇಲ್ಲ ಅಂತ ಜಾರಿಕೊಂಡು ಬೇರೆ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ.

    ಸುನೀಲ ವಿವಾಹವಾಗುವ ಸುದ್ದಿ ತಿಳಿದ ಲಕ್ಷ್ಮೀ ತನಗೆ ನ್ಯಾಯ ಕೊಡಿಸಿ ಎಂದು ಮದುವೆ ಮಂಟಪದ ಬಳಿ ಗಲಾಟೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಲಿಸರು ಸುನೀಲನನ್ನ ಠಾಣೆ ಗೆ ಕರೆಸಿ ವಿಚಾರಣೆಗೆ ಒಳಪಡಿಸಿದಾಗ ಆತ, ನನಗೂ ಲಕ್ಷ್ಮೀಗೂ ಸಂಬಂಧವೇ ಇಲ್ಲ ಅಂತ ಹೇಳಿದ್ದಾನೆ.

    ಇನ್ನು ಮದುವೆ ಸಂಭ್ರಮದಲ್ಲಿದ್ದ ಸುನೀಲನ ಕಡೆಯವರು ಲಕ್ಷ್ಮೀ ಆರೋಪವನ್ನು ಕೇಳಿ ಕೋಪಗೊಂಡು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಸದ್ಯ ಲಕ್ಷ್ಮೀಯನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರ ಪ್ರೇಮ ಕಹಾನಿಯ ನಡುವೆ ಮತ್ತೊಬ್ಬ ಯುವತಿ ಜೀವನ ಹಾಳಾದಂತಾಗಿದ್ದು, ಮದುವೆಯಾದ ಸಂಭ್ರಮದಲ್ಲಿ ರಾತ್ರಿ ಕಳೆಯಬೇಕಿದ್ದ ಆಕೆ ತನ್ನ ಮುಂದಿನ ಜೀವನದ ಬಗ್ಗೆ ಚಿಂತಿಸುವಂತಾಗಿದೆ.

  • ವಾನರ ಸೈನ್ಯದೊಂದಿಗೆ 3 ವರ್ಷದ ಬಾಲಕನ ಒಡನಾಟ- ಬೆಳಗ್ಗೆ ಬಂದು ಮಗುವನ್ನ ಎಬ್ಬಿಸ್ತವಂತೆ ಈ ಮಂಗಗಳು

    ವಾನರ ಸೈನ್ಯದೊಂದಿಗೆ 3 ವರ್ಷದ ಬಾಲಕನ ಒಡನಾಟ- ಬೆಳಗ್ಗೆ ಬಂದು ಮಗುವನ್ನ ಎಬ್ಬಿಸ್ತವಂತೆ ಈ ಮಂಗಗಳು

    ಹುಬ್ಬಳ್ಳಿ: ಸಾಮಾನ್ಯವಾಗಿ ಮಂಗಗಳನ್ನು ಕಂಡರೆ, ಅವು ಮೈ ಮೇಲೆ ಎರಗುತ್ತವೆಂಬ ಭಯದಿಂದ ಹೆದರಿ ಓಡವವರೇ ಹೆಚ್ಚು. ಆದರೆ ಇಲ್ಲೊಬ್ಬ ಬಾಲಕ ಪ್ರತಿನಿತ್ಯ ಮಂಗಗಳ ಜೊತೆಗೆ ಆಟ ಊಟ ಎಲ್ಲವನ್ನು ಮಾಡುತ್ತಾನೆ. ಇಂತಂಹ ಅಚ್ಚರಿಯ ಲವ್ ಕಹಾನಿಯೊಂದು ಜಿಲ್ಲೆಯಲ್ಲಿ ನಡೆದಿದೆ.

    ಮಂಗಗಳ ಜೊತೆ ಒಡನಾಟ ಬೆಳೆಸಿಕೊಂಡಿರೋ ಬಾಲಕನ ಹೆಸರು ಸಮರ್ಥ ಬಂಗಾರಿ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದ ನಂದಾ ಮತ್ತು ಸುನೀಲ್ ಅವರ ಪುತ್ರ. ಈತನಿಗೆ ಸುಮಾರು ಮೂರು ವರ್ಷ ವಯಸ್ಸು. ಆದರೆ ಮಂಗಗಳನ್ನು ಕಂಡರೆ ಭಯ ಪಡದೆ ದಿನಾಲೂ ಅವುಗಳ ಜೊತೆ ಆಟವಾಡುತ್ತಾನೆ. ಅವುಗಳು ಕೂಡ ಈ ಸಮರ್ಥ ಜೊತೆ ಸಲಿಗೆಯಿಂದ ಇರುತ್ತವೆ.

    ಕೆಲ ದಿನಗಳ ಹಿಂದೆ ಸಮರ್ಥ ಮನೆ ಮುಂದೆ ರೊಟ್ಟಿ ತಿನ್ನುತ್ತಾ ಕುಳಿತ್ತಿದ್ದಾಗ ಮಂಗಗಳು ಬಂದಿದ್ದವು. ಮೊದಲ ದಿನ ಮಂಗಗಳನ್ನು ನೋಡಿ ಹೆದರಿದ್ದ. ಆದರೆ ಮರುದಿನವೇ ಮತ್ತೆ ಮಂಗಗಳು ಬಂದಿದ್ದು, ಆಗ ಅವುಗಳಿಗೆ ರೊಟ್ಟಿಯನ್ನು ಕೊಟ್ಟಿದ್ದ. ಅಂದು ಆರಂಭವಾದ ಮಂಗಗಳ ಸ್ನೇಹ ಇನ್ನೂ ಹಾಗೇ ಮುಂದುವರೆದಿದೆ.

    ಮುಂಜಾನೆ ಅವುಗಳೇ ಬಂದು ಸಮರ್ಥ ಇನ್ನೂ ಮಲಗಿಕೊಂಡಿದ್ದರೆ ನಿದ್ದೆಯಿಂದ ಎಬ್ಬಿಸುತ್ತವೆ. ಮನೆ ಒಳಗೆ ಬಂದು ಹಾಸಿಗೆಯಿಂದ ಎಬ್ಬಿಸಿ ಆಟ ಆಡಲು ಕರೆದುಕೊಂಡು ಹೋಗುತ್ತವೆ. ಸಮರ್ಥ ಅವುಗಳಿಗೆ ಆಹಾರ ನೀಡಿ ಅವುಗಳೊಂದಿಗೆ ಆಟ ಆಡುತ್ತಾನೆ. ನಂತರ ಮಂಗಳಗಳು ಮುಂಜಾನೆ ಕೆಲವು ಸಮಯ ಸಮರ್ಥನೊಂದಿಗೆ ಕಾಲವನ್ನು ಕಳೆದು ಆಹಾರ ಅರಸಿಕೊಂಡು ಹೋಗುತ್ತವೆ.

    ಹೀಗೆ ದಿನ ನಿತ್ಯ ಸಮರ್ಥ ಸುಮಾರು ಒಂದು ಗಂಟೆಗಳ ಕಾಲ ಈ ವಾನರ ಸೈನ್ಯದೊಂದಿಗೆ ಕಳೆಯುತ್ತಾನೆ.

    https://www.youtube.com/watch?v=IA77D_kFC68

     

     

  • ರಾಜ್ಯದಲ್ಲಿ ಹೆಚ್ಚಾಗುತ್ತಿದೆ ನಕಲಿ ವೈದ್ಯರ ಹಾವಳಿ- ನಕಲಿ ವೈದ್ಯರನ್ನು ಮಟ್ಟ ಹಾಕೋದು ಯಾವಾಗ?

    ರಾಜ್ಯದಲ್ಲಿ ಹೆಚ್ಚಾಗುತ್ತಿದೆ ನಕಲಿ ವೈದ್ಯರ ಹಾವಳಿ- ನಕಲಿ ವೈದ್ಯರನ್ನು ಮಟ್ಟ ಹಾಕೋದು ಯಾವಾಗ?

    ಚಿಕ್ಕಬಳ್ಳಾಪುರ/ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕಲು ಆರೋಗ್ಯ ಸಚಿವ ರಮೇಶ್ ಕುಮಾರ್ ನಡೆಸಿದ್ದ ಕಸರತ್ತು ಅಷ್ಟಿಷ್ಟಲ್ಲ. ಆದ್ರೆ ಆರೋಗ್ಯ ಸಚಿವರಿಗೆ ರಾಜ್ಯದಲ್ಲಿ ಅಮಾಯಕರನ್ನು ಬಲಿ ಪಡೀತಿರುವ ನಕಲಿ ವೈದ್ಯರ ಬಗ್ಗೆ ಮಾಹಿತಿನೇ ಇಲ್ಲ ಅನ್ನಿಸುತ್ತದೆ.

    ಯಾಕಂದ್ರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಪುರಸಭೆ ಮುಂಭಾಗವೇ ಆಂಧ್ರ ಮೂಲದ ಇ.ಎನ್.ರೆಡ್ಡಿ ಎಂಬಾತ ಕ್ಲಿನಿಕ್ ನಡೆಸುತ್ತಿದ್ದ. ಮೈಕೈ ನೋವು ಅಂತಾ ಆಸ್ಪತ್ರೆಗೆ ಬರೋರಿಗೆಲ್ಲಾ ಗ್ಲುಕೋಸ್ ಹಾಕುತ್ತಿದ್ದ. ಈತನಿಂದ ಗ್ಲುಕೋಸ್ ಹಾಕಿಸಿಕೊಂಡಿದ್ದ ರೋಗಿ ವಾಂತಿ ಮಾಡ್ಕೊಂಡಿದ್ರಿಂದ ಕ್ಲಿನಿಕ್ ನಿಂದಲೇ ಹೊರಹಾಕಿದ್ದನು.

    ಇನ್ನು 10 ದಿನಗಳ ಹಿಂದೆಯಷ್ಟೇ ಇನಾಯತ್ ಉಲ್ಲಾ ಅನ್ನೋ ನಕಲಿ ವೈದ್ಯನ ಬಳಿ ಹೋಗಿದ್ದ ನರಸಪ್ಪ ಅನ್ನೋರು ಮೃತಪಟ್ಟಿದ್ರು. ಖಾಸಗಿ ವೈದ್ಯರ ಮುಷ್ಕರದ ವೇಳೆ ಮೈಸೂರಲ್ಲಿ ಡಿಗ್ರಿ ವಿದ್ಯಾರ್ಥಿನಿಯೊಬ್ಬಳು ನಕಲಿ ವೈದ್ಯ ಕೊಟ್ಟಿದ್ದ ಇಂಜೆಕ್ಷನ್ ಗೆ ಬಲಿಯಾಗಿದ್ದಳು. ಒಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕುತ್ತಿರೋ ಆರೋಗ್ಯ ಸಚಿವರು ನಕಲಿ ವೈದ್ಯರನ್ನು ಮಟ್ಟ ಹಾಕೋದು ಯಾವಾಗ ಅಂತ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ನಕಲಿ ವೈದ್ಯ ಬಂಧನ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಕಲಿ ವೈದ್ಯನೊಬ್ಬನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. 31 ವರ್ಷದ ಬಸವರಾಜ್ ಬಂಧಿತ ನಕಲಿ ವೈದ್ಯ. ರಾತ್ರಿ ಅನುಮಾನಸ್ಪದವಾಗಿ ಕಿಮ್ಸ್ ಆಸ್ಪತ್ರೆಯಲ್ಲಿ ಬಸವರಾಜ್ ತಿರುಗಾಡುತ್ತಿದ್ದನು. ಕಿಮ್ಸ್ ಭದ್ರತಾ ಸಿಬ್ಬಂದಿ ವಿಚಾರಿಸಿದಾಗ ನಕಲಿ ವೈದ್ಯ ಅನ್ನೋದು ಗೊತ್ತಾಗಿದೆ. ಬಸವರಾಜನ ಅಜ್ಜ ನರಗುಂದ ತಾಲೂಕಿನ ಕೊಣ್ಣೂರ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ರು. ಅವರ ಸಮವಸ್ತ್ರವನ್ನು ಧರಿಸಿ ಕಿಮ್ಸ್ ಗೆ ಬಂದ್ದಿದ್ದ ಎಂದು ತಿಳಿದುಬಂದಿದೆ.

  • ಕೇಂದ್ರ ಸರ್ಕಾರ 2 ರೂ. 50 ಪೈಸೆಗೆ ವಿದ್ಯುತ್ ನೀಡಿದ್ರೆ ಬಿಎಸ್‍ವೈ ಹಿಂದೆ ಅಲೆಯುವೆ: ಡಿಕೆಶಿ

    ಕೇಂದ್ರ ಸರ್ಕಾರ 2 ರೂ. 50 ಪೈಸೆಗೆ ವಿದ್ಯುತ್ ನೀಡಿದ್ರೆ ಬಿಎಸ್‍ವೈ ಹಿಂದೆ ಅಲೆಯುವೆ: ಡಿಕೆಶಿ

    ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಯೂನಿಟ್ ವಿದ್ಯುತ್‍ಗೆ 2 ರೂಪಾಯಿ 50 ಪೈಸೆಯಲ್ಲಿ ನೀಡಿದ್ದೇ ಆದಲ್ಲಿ ನನ್ನ ವೈಯಕ್ತಿಕ ಕೆಲಸ ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಿಂದೆ ಅಲೆಯುವೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ರಾಜ್ಯದ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಪ್ರತಿ ಯೂನಿಟ್‍ಗೆ 2 ರೂಪಾಯಿ 50 ಪೈಸೆಗೆ ವಿದ್ಯುತ್ ನೀಡಲು ಕೇಂದ್ರ ಸಿದ್ಧವಿದೆ ಎಂದಿದ್ದಾರೆ. ಕೇಂದ್ರ ಸರ್ಕಾರ 2.50 ರೂಪಾಯಿ ಗೆ ವಿದ್ಯುತ್ ನೀಡಿದ್ರೆ, ಎಲ್ಲ ಖರೀದಿ ಪ್ರಕ್ರಿಯೆ ರದ್ದು ಮಾಡುವೆ ಅಂದ್ರು.

    ನನ್ನ ಮೇಲೆ ಐಟಿ ದಾಳಿ ನಡೆದಾಗ ಅದೊಂದು ದೇಶದ ದೊಡ್ಡ ಹಗರಣ ಎನ್ನುವಂತೆ ಬಿಜೆಪಿಯವರು ಬಿಂಬಿಸಿದ್ರು. ಆದ್ರೆ ವಿಧಾನ ಸಭೆಯಲ್ಲಿ ಯಾಕೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಬಿಜೆಪಿ ನಾಯಕರು ಹಿಟ್ ಎಂಡ್ ರನ್ ಇದ್ದ ಹಾಗೆ ಅಂದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶಡ್ಡಿಂಗ್ ಮಾಡೋದಿಲ್ಲ. ರಾಜ್ಯದ ರೈತರಿಗೆ ಬೇಸಿಗೆಯಲ್ಲಿ ಸಂಪೂರ್ಣ ವಿದ್ಯುತ್ ನೀಡಲಾಗುವುದು ಅಂತ ಅವರು ಹೇಳಿದ್ರು.

    ಇನ್ನು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಬಿಜೆಪಿಯವರು ಮಾಡುತ್ತಿರೋ ಸುಳ್ಳು ಆರೋಪವಾಗಿದೆ. ನಮ್ಮ ಯಾವೊಬ್ಬ ಸಚಿವರು ಕೂಡ ಅಕ್ರಮವನ್ನು ಎಸಗಿಲ್ಲ. ಅವರು ನಮ್ಮ ಬೆಳವಣಿಗೆಯನ್ನು ಕಂಡು ಹತಾಶರಾಗಿದ್ದಾರೆ. ಹೀಗಾಗಿ ಸಚಿವ ಕೆ.ಜೆ ಜಾರ್ಜ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ ಮೇಲೆ ಸುಳ್ಳು ಆರೋಪ ಮಾಡ್ತಾ ಇದ್ದಾರೆ ಅಂತ ಕಿಡಿಕಾರಿದ್ರು.

    ಬಿಎಸ್‍ವೈ ಹೇಳಿದ್ದು ಏನು?: ಪ್ರತಿ ಯೂನಿಟ್‍ಗೆ 2.50ರಂತೆ ವಿದ್ಯುತ್ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿರುವಾಗ ರಾಜ್ಯ ಸರ್ಕಾರ ಹೆಚ್ಚಿನ ದರ ನೀಡಿ ವಿದ್ಯುತ್ ಖರೀದಿಸುತ್ತಿರುವುದರ ಬಗ್ಗೆ ತನಿಖೆ ನಡೆಸಬೇಕು ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದರು.

    ರಾಜ್ಯದಲ್ಲಿನ ವಿದ್ಯುತ್ ಕೊರತೆ ನೀಗಿಸುವುದಕ್ಕಾಗಿ ಪ್ರತಿ ಯೂನಿಟ್‍ಗೆ ಯುಪಿಸಿಎಲ್‍ನಿಂದ 4.71ರಂತೆ ಮತ್ತು ಜಿಂದಾಲ್‍ನಿಂದ ಪ್ರತಿ ಯೂನಿಟ್‍ಗೆ 4.17 ರಂತೆ ಖರೀದಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಅರ್ಧ ದರಕ್ಕೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿದರೂ ದುಬಾರಿ ಬೆಲೆಯನ್ನು ನೀಡಿ ಖಾಸಗಿಯರಿಂದ ಖರೀದಿಸುತ್ತಿರುವುದು ಯಾಕೆ? ನನ್ನ ಪ್ರಶ್ನೆಗೆ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕೆಂದು ಆಗ್ರಹಿಸಿದ್ದರು.

  • ಕೂಲ್ ಡ್ರಿಂಕ್ಸ್ ಪ್ರಿಯರೇ ಎಚ್ಚರ- ನಿಮ್ಮ ಫೇವರೇಟ್ ಮ್ಯಾಂಗೋ ಡ್ರಿಂಕ್ ಕುಡಿಯೋ ಮುನ್ನ ಬಾಟಲ್ ಚೆಕ್ ಮಾಡಿ

    ಕೂಲ್ ಡ್ರಿಂಕ್ಸ್ ಪ್ರಿಯರೇ ಎಚ್ಚರ- ನಿಮ್ಮ ಫೇವರೇಟ್ ಮ್ಯಾಂಗೋ ಡ್ರಿಂಕ್ ಕುಡಿಯೋ ಮುನ್ನ ಬಾಟಲ್ ಚೆಕ್ ಮಾಡಿ

    ಹುಬ್ಬಳ್ಳಿ: ನಿವೇನಾದ್ರೂ ಸ್ಲೈಸ್ ಪ್ರಿಯರಾ? ಅದನ್ನು ಕುಡಿಯೋಕೆ ಇಷ್ಟಪಡ್ತೀರಾ. ಹಾಗಾದ್ರೆ ಕುಡಿಯುವ ಮುನ್ನ ಒಮ್ಮೆ ಬಾಟಲಿಯೊಳಗೆ ನೋಡಿ.

    ಕುಡಿಯಲೆಂದು ಸ್ಲೈಸ್ ತೊಗೊಂಡ್ರೆ ಅದ್ರಲ್ಲಿ ಪಾಚಿಯಂಥ ಕಸ ಸಿಕ್ಕದೆ. ಇಂಥದ್ದೊಂದು ಘಟನೆಗೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಾಕ್ಷಿಯಾಗಿದೆ. ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಸುಭಾಶ್ ಎಂಬವರು ಅಂಗಡಿಯೊಂದರಲ್ಲಿ ಎರಡು ಬಾಟಲ್ ಸ್ಲೈಸ್ ತೆಗೆದುಕೊಂಡಿದ್ದರು.

    ಬಾಟಲಿನಲ್ಲಿ ಪಾಚಿಯಂಥ ಕಸ ಇರೋದನ್ನ ಗಮನಿಸಿ ನೇರವಾಗಿ ಅಂಗಡಿಗೆ ಹೋಗಿ ಅಲ್ಲಿ ಪರಿಶೀಲಿಸಿದ್ದಾರೆ. ಅಲ್ಲೂ ಕೂಡ ಬಾಟಲಿಗಳಲ್ಲಿ ಕಸ ಇರೋದನ್ನ ಗಮನಿಸಿದ್ದಾರೆ. ಬಳಿಕ ಆರೋಗ್ಯ ಇಲಾಖೆ ಅಧಿಕಾರಿಗಳನ್ನ ಸಂಪರ್ಕಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.

  • ಖಾಸಗಿ ವೈದ್ಯರ ಮುಷ್ಕರಕ್ಕೆ ಬಿಜೆಪಿ ಮುಖಂಡ ಬಲಿ

    ಖಾಸಗಿ ವೈದ್ಯರ ಮುಷ್ಕರಕ್ಕೆ ಬಿಜೆಪಿ ಮುಖಂಡ ಬಲಿ

    ಹುಬ್ಬಳ್ಳಿ: ಖಾಸಗಿ ವೈದ್ಯರ ಮುಷ್ಕರಕ್ಕೆ ಜನರ ಜೀವ ಬಲಿಯಾಗುವ ಘಟನೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಮುಖಂಡ ಚನ್ನು ಹಳಿಯಾಳ ಎಂಬವರು ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.

    ಹೃದಯಾಘಾತಕ್ಕೆ ಒಳಗಾದ ಚನ್ನು ಹಳಿಯಾಳ ಅವರನ್ನು ಗೋಕುಲ್ ರಸ್ತೆಯಲ್ಲಿರುವ ಸುಚಿರಾಯು ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಆದ್ರೆ ಮುಷ್ಕರದ ಹಿನ್ನೆಲೆ ಸುಚಿರಾಯು ಆಸ್ಪತ್ರೆಯ ಸಿಬ್ಬಂದಿ ಚನ್ನು ಅವರನ್ನು ದಾಖಲಿಸಿಕೊಳ್ಳಲಿಲ್ಲ. ಹೀಗಾಗಿ ಕಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಚನ್ನು ಹಳಿಯಾಳ ಮೃತಪಟ್ಟಿದ್ದಾರೆ.

    ಮೃತ ಚನ್ನು ಹಳಿಯಾಳ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಪ್ತರಾಗಿದ್ದರು. ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಬಿಜೆಪಿ ಪಕ್ಷ ಬಲವರ್ಧನೆ ಶ್ರಮಿಸುತ್ತಿದ್ದರು.