Tag: ಹುಬ್ಬಳ್ಳಿ

  • 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

    79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

    ಹುಬ್ಬಳ್ಳಿ: 79ನೇ ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿಂದು (Idgah Maidan) ಧ್ವಜಾರೋಹಣ ನೆರವೇರಿಸಲಾಯಿತು.

    ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi Dharwad Municipal Corporation) ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರಿಂದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಉಪಸ್ಥಿತರಿದ್ದ ಶಾಸಕ ಮಹೇಶ ಟೆಂಗಿನಕಾಯಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: 79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

    ಇದಾದ ಬಳಿಕ ಸಂಗೊಳ್ಳಿ ರಾಯಣ್ಣ ಜನ್ಮದಿನದ ಹಿನ್ನೆಲೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಹೇಶ್‌ ಟೆಂಗಿನಕಾಯಿ ಗೌರವ ಅರ್ಪಿಪಿಸಿದರು. ಈ ಸಂರ್ಭದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಶಾಸಕರಿಗೆ ಸಾಥ್‌ ನೀಡಿದರು. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    ಮಹಾನಗರ ಪಾಲಿಕೆಯ ಮೇಯರ್ ಸೇರಿದಂತೆ ಸರ್ವ ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

  • ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

    ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

    ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹತ್ಯೆ ಆರೋಪಿ ಫಯಾಜ್ (Accused Fayaz) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ (Hubballi) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

    ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ (Dharwad) ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇದನ್ನೂ ಓದಿ: ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

    ಆರೋಪಿ ಪರವಾಗಿ ಬೆಳಗಾವಿಯ (Belagavi) ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಗೆ ಸಿಐಡಿ ಪರ ವಕೀಲರಾದ ಎಸ್‌ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬದ ಪರ ವಕೀಲ ರಾಘವೇಂದ್ರ ಮುತ್ತಗಿಕರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಗ್ರಾ.ಪಂ ಸದಸ್ಯನ ಕಿಡ್ನ್ಯಾಪ್‌ಗೆ ಯತ್ನಿಸಿ ವಿಫಲ – ಚಾಕು ಇರಿದು ದುಷ್ಕರ್ಮಿಗಳು ಎಸ್ಕೇಪ್

    ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್‌ ಸೂಚನೆ

    ಏನಿದು ಪ್ರಕರಣ?
    ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳಾಗಿದ್ದವು.

  • ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ ಮನವಿ

    ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ ಮನವಿ

    * ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್‌ ಜೋಶಿ ಮನವಿ
    * ಹುಬ್ಬಳ್ಳಿಯಲ್ಲಿ ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಒತ್ತಾಯ

    ನವದೆಹಲಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಅವರಲ್ಲಿ ಪ್ರಹ್ಲಾದ್‌ ಜೋಶಿ (Pralhad Joshi) ಮನವಿ ಮಾಡಿದರು.

    ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು (MEMU) ರೈಲುಗಳ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿ ಆಗಿದ್ದು, ಅಕ್ಕಪಕ್ಕದ ಪಟ್ಟಣ, ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಿರುತ್ತಾರೆ. ಹಾಗಾಗಿ, ಇಲ್ಲಿ ಹೊಸ ಮೆಮು (ಮೇನ್‌ಲೈನ್‌ ಎಲೆಕ್ಟ್ರಿಕ್‌ ಮಲ್ಟಿಪಲ್‌ ಯೂನಿಟ್‌) ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

    ಪ್ಯಾಸೆಂಜರ್‌ ರೈಲು ಸಹ ಓಡಿಸಲು ಮನವಿ: ಹುಬ್ಬಳ್ಳಿ ನಗರಕ್ಕೆ ಶಿಕ್ಷಣ, ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಅಸಂಖ್ಯಾತ ಜನ ಸಂಚರಿಸುತ್ತಾರೆ. ದಿನನಿತ್ಯದ ರೈಲುಗಳು ಭರ್ತಿಯಾಗಿರುತ್ತವೆ. ಹಾಗಾಗಿ, ಜನ ಸಂಚಾರ ಅನುಕೂಲಕ್ಕೆ ಮೆಮು ರೈಲುಗಳು ಅಗತ್ಯತೆಯಿದೆ. ಈ ಭಾಗದಲ್ಲಿ ರಸ್ತೆ ಸಾರಿಗೆಗಿಂತ ರೈಲು ಸಂಚಾರ ಅನುಕೂಲಕರವಾಗಿ ಪರಿಣಮಿಸಿದ್ದು, ಕೋವಿಡ್‌ ವೇಳೆ ಸ್ಥಗಿತಗೊಳಿಸಿದ್ದ ಅನೇಕ ಪ್ಯಾಸೆಂಜರ್‌ ರೈಲು ಸಂಚಾರ ಸಹ ಆರಂಭಿಸುವಂತೆ ಸಚಿವ ಜೋಶಿ ಮನವಿ ಮಾಡಿದರು.

    ಬೆಂಗಳೂರು ರೈಲು ನಿಲ್ದಾಣ ಬಿಟ್ಟರೆ ಹುಬ್ಬಳ್ಳಿಯೇ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿದ್ದು, ನಿತ್ಯ ಕಡಿಮೆ ಎಂದರೂ 50 ಸಾವಿರಕ್ಕೂ ಅಧಿಕ ಪ್ರಯಾಣಿಕರಿಂದ ತುಂಬಿರುತ್ತದೆ. ನೈರುತ್ಯ ರೈಲ್ವೆ ವಲಯದ ಮುಖ್ಯ ಕಚೇರಿ ಹೊಂದಿರುವ ಹುಬ್ಬಳ್ಳಿ ನಿಲ್ದಾಣ ಭಾರತೀಯ ರೈಲ್ವೆಯಲ್ಲಿ ಮಹತ್ತರವಾಗಿದ್ದು, ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿವರ್ತಿಸುವುದು ಅತ್ಯಗತ್ಯವಾಗಿದೆ ಎಂದು ಅಶ್ವಿನಿ ವೈಷ್ಣವ್‌ ಅವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 8,280 ಎಕರೆ ಭೂಸ್ವಾಧೀನ ಬಾಕಿ – ಅಶ್ವಿನಿ ವೈಷ್ಣವ್

    ಮತ್ತೊಂದು ರೈಲ್ವೆ ಬ್ರಿಡ್ಜ್‌ ನಿರ್ಮಾಣಕ್ಕೆ ಬೇಡಿಕೆ: ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣವಾಗಿ ಪರಿವರ್ತಿಸುವ ಬಗ್ಗೆ ಸಹ ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ, ನಗರದ ಗದಗ ರಸ್ತೆ ಮೇಲಿರುವ ಡಬಲ್‌ ಲೈನ್ ರೈಲ್ವೆ ಬ್ರಿಡ್ಜ್‌ನ್ನು 4 ಲೈನ್‌ಗೆ ವಿಸ್ತರಿಸುವ ಸಲುವಾಗಿ ಇನ್ನೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಮುಂದಿಟ್ಟರು ಸಚಿವ ಪ್ರಹ್ಲಾದ್‌ ಜೋಶಿ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಹ ಈ ಬಗ್ಗೆ ಗಮನ ಸೆಳೆದರು.

    ಉತ್ತರ ಕರ್ನಾಟಕದ ರೈಲ್ವೆ ಪ್ರತಿಯೊಂದು ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

    ಹುಬ್ಬಳ್ಳಿ ಆಧಾರ್‌ ಸೇವಾ ಕೇಂದ್ರ ಸ್ಥಾಪನೆಗೆ ಮನವಿ: ಇದೇ ವೇಳೆ ಕೇಂದ್ರ ಸಚಿವ ಜೋಶಿ ಅವರು, ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ʼಆಧಾರ್ ಸೇವಾ ಕೇಂದ್ರʼವಾಗಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆದರು. ವಾಣಿಜ್ಯ ನಗರಿ ಹುಬ್ಬಳ್ಳಿ ಸುಮಾರು 10 ಲಕ್ಷ ಜನಸಂಖ್ಯೆ ಹೊಂದಿದ್ದು, ಇಲ್ಲೀಗ ಆಧಾರ್‌ ಸೇವಾ ಕೇಂದ್ರ ಅತ್ಯಂತ ಅವಶ್ಯಕವಾಗಿದೆ. ದೇಶಾದ್ಯಂತ ಪ್ರತಿ ಜಿಲ್ಲಾವಾರು ಕೇಂದ್ರದ ಜೊತೆಗೆ ಪ್ರಮುಖ ನಗರಗಳಲ್ಲಿ ಸಹ ಈ ಕೇಂದ್ರಗಳನ್ನು ಮುಂದುವರಿಸುವಂತೆ ಕೋರಿದರು. ಜಿಲ್ಲಾ ಕೇಂದ್ರದ ಜತೆ ಹುಬ್ಬಳ್ಳಿ ಮತ್ತಿತರ ಪ್ರಮುಖ ನಗರಗಳಲ್ಲಿ ಆಧಾರ್‌ ಸೇವಾ ಕೇಂದ್ರಗಳನ್ನು ಮುಂದುವರಿಸುವಂತೆ ಟೆಂಡರ್ ಕರೆಯಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  • ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ

    ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ

    ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ.

    ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ಹಣ ಎಣಿಕೆ ಯಂತ್ರ ತಂದಿದ್ದಾರೆ. ಸ್ಥಳೀಯ ಅಧಿಕಾರಿಗಳ ಸಹಾಯದಿಂದ ಹಣ ಎಣಿಕೆ ಯಂತ್ರದ ವ್ಯವಸ್ಥೆ ಮಾಡಿದ್ದು, ಇದರೊಂದಿಗೆ ಮತ್ತೊಂದು ಪ್ರಿಂಟಿಂಗ್ ಯಂತ್ರ ಕೂಡ ತರಲಾಗಿದೆ. ಹಣ ತೆಗೆದುಕೊಂಡು ಹೋಗಲು ಟ್ರಂಕ್ ಸಹ ತರಲಾಗಿದೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ದೋಹಾಗೆ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕ್ಯಾಲಿಕಟ್‌ಗೆ ವಾಪಸ್

    ಇನ್ನು ಲೋಕಾ ಸಿಬ್ಬಂದಿ ಸೈಟ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ವೇಳೆ ಬೆಳ್ಳಿ ದೇವರ ಮಂಟಪ, ಬಂಗಾರದ ಗಣೇಶ ಮೂರ್ತಿ ಸಹ ಪತ್ತೆಯಾಗಿದೆ. ಡಿವೈಎಸ್‌ಪಿ ಆರ್ ವಸಂತ್ ಕುಮಾರ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೂ ಮನೆಯ ಎರಡು ಕೊಠಡಿಗಳನ್ನು ಮಾತ್ರ ತಪಾಸಣೆ ಮಾಡಲಾಗಿದೆ. ಇನ್ನೂ ಒಂದು ಕೊಠಡಿಯ ಪರಿಶೀಲನೆ ಬಾಕಿ ಉಳಿದಿದೆ. ಹಲವಾರು ಪ್ರಮಾಣದ ಆಸ್ತಿ ಪತ್ತೆ ಹಿನ್ನೆಲೆ ಹುಬ್ಬಳ್ಳಿ ನಿವಾಸಕ್ಕೆ ಲೋಕಾಯುಕ್ತ ಎಸ್‌ಪಿ ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ – ರಾಮನಗರದಲ್ಲಿ ವಾಟಾಳ್ ಪ್ರತಿಭಟನೆ

    ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಹಿನ್ನೆಲೆ, ಇಲ್ಲಿಯವರೆಗೆ 52 ಲಕ್ಷ ಹಣವನ್ನು ಅಧಿಕಾರಿಗಳು ಎಣಿಸಿದ್ದಾರೆ. ಎಣಿಕೆ ಕಾರ್ಯ ಇನ್ನೂ ಮುಂದುವರಿದಿದೆ. ಇಲ್ಲಿಯವರೆಗೂ 1 ಕೆಜಿ ಚಿನ್ನ, 3 ಕೆಜಿ ಬೆಳ್ಳಿ, 13 ಸೈಟ್, ಆರೂವರೆ ಎಕರೆ ಜಮೀನು ಹಾಗೂ ಮೂರು ಮನೆಗಳ ದಾಖಲೆಗಳು ಪತ್ತೆಯಾಗಿವೆ. ಇದನ್ನೂ ಓದಿ: ಜಗದೀಪ್‌ ಧನಕರ್‌ ರಾಜೀನಾಮೆ – ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ

  • ಎಲ್ಲಾ ಶಾಸಕರಿಗೆ 7,450 ಕೋಟಿ ಅನುದಾನಕ್ಕೆ ತೀರ್ಮಾನ – ಸಿಎಂ ಭರ್ಜರಿ ಗಿಫ್ಟ್

    ಎಲ್ಲಾ ಶಾಸಕರಿಗೆ 7,450 ಕೋಟಿ ಅನುದಾನಕ್ಕೆ ತೀರ್ಮಾನ – ಸಿಎಂ ಭರ್ಜರಿ ಗಿಫ್ಟ್

    – ವಿಪಕ್ಷ, ಕ.ಕರ್ನಾಟಕ ಶಾಸಕರಿಗೆ ತಲಾ 25 ಕೋಟಿ, `ಕೈ’ ಶಾಸಕರಿಗೆ ತಲಾ 50 ಕೋಟಿ ಅನುದಾನ

    ಹುಬ್ಬಳ್ಳಿ: ಎಲ್ಲಾ ಚುನಾಯಿತ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಲು ನಿರ್ಧರಿಸಲಾಗಿದೆ. ಒಟ್ಟು 7,450 ಕೋಟಿ ರೂ. ಅನುದಾನ (Grant) ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ  (Basavaraj Rayareddy) ಮಾಹಿತಿ ನೀಡಿದರು.

    ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು 224 ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ನೀಡಲು ಸಿಎಂ ತೀರ್ಮಾನ ಮಾಡಿದ್ದರು, ಆದರೆ ಇದಕ್ಕೆ 11.5 ಸಾವಿರ ಕೋಟಿ ರೂ. ಬೇಕಿತ್ತು. ಹೀಗಾಗಿ ಇದರಲ್ಲಿ ಕೆಲವೊಂದು ಬದಲಾವಣೆ ಮಾಡಿ 8 ಸಾವಿರ ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಪಕ್ಷದವರು ಅನುದಾನಕ್ಕಾಗಿ ರಣದೀಪ್ ಸುರ್ಜೆವಾಲಾ ಅವರು ಹಣ ಕೊಡುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ನಾನು ಹಾಗೂ ಮುಖ್ಯಮಂತ್ರಿಗಳು ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಅನುದಾನದ ಕೊರತೆ ಇಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಆದರೆ ವಿಜಯೇಂದ್ರ, ಆರ್.ಅಶೋಕ್, ನಾರಾಯಣಸ್ವಾಮಿ ಚಿಲ್ಲರೆ ಟೀಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಪ್ರತೀಕ್ ಬೇರೆ ಹುಡ್ಗೀರ ಜೊತೆ ವಿಡಿಯೋ ಕಾಲ್, ಚಾಟ್ ಮಾಡಿದ್ದಾನೆ: ಸಂತ್ರಸ್ತೆ ಸಹೋದರ ಆರೋಪ

    ಸದ್ಯ 224 ಶಾಸಕರುಗಳ ಪೈಕಿ ವಿಪಕ್ಷ ಹಾಗೂ ಕಲ್ಯಾಣ ಕರ್ನಾಟಕ ಶಾಸಕರುಗಳಿಗೆ ತಲಾ 25 ಕೋಟಿ ರೂ., ಇನ್ನುಳಿದ ಕಾಂಗ್ರೆಸ್ ಶಾಸಕರುಗಳಿಗೆ ತಲಾ 50 ಕೋಟಿ ರೂ. ಅನುದಾನ ಸಿಗಲಿದೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯ ಶಾಸಕರುಗಳಿಗೆ ಬಿಬಿಎಂಪಿಯಿಂದ ಸಿಗುವ ವಿಶೇಷ ಅನುದಾನದಲ್ಲಿಯೇ ಮತ್ತೊಂದು ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ ಎಂದರು.

    ವಿರೋಧ ಪಕ್ಷಕ್ಕೆ ಕೇಂದ್ರದಿಂದ ಆಗಬೇಕಾದ ಸಾಕಷ್ಟು ವಿಚಾರಗಳಿವೆ. 15ನೇ ಹಣಕಾಸು ಆಯೋಗದ ಪ್ರಕಾರ 5,443 ಕೋಟಿ ರೂ. ಕೇಂದ್ರದಿಂದ ಬರಬೇಕಿತ್ತು. ನಾನು ಭಿಕ್ಷೆ ಬೇಡುತ್ತಿಲ್ಲ. ಈ ಬಗ್ಗೆ ಒಂದೇ ಒಂದು ಮಾತು ಆಡಲ್ಲ. ಒಂದು ರಾಜ್ಯದ ಕೆಲಸವನ್ನ ಕೇವಲ ಸರ್ಕಾರ ಮಾಡೋದಿಲ್ಲ. ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ, ನಮ್ಮ ಮುಖ್ಯಮಂತ್ರಿಗಳಿಂದ ಸನ್ಮಾನ ಮಾಡಿಸುತ್ತೇನೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್

  • ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ (Jayamruthyunjaya Swamiji) ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ‘ಪಬ್ಲಿಕ್ ಟಿವಿ’ಗೆ ಹೇಳಿಕೆ ನೀಡುವಾಗ ಗಂಭೀರ ಆರೋಪ ಮಾಡಿರುವ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಇದಕ್ಕೆ ಕಾರಣ ಬೇರೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

    ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗತ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ‌. ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ. ನನಗೆ ಮನಸ್ಸಿ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ.

    ಊಟದಲ್ಲಿ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ. ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ. ಸಮಾಜ ನೋಡುತ್ತಿದೆ. ಅವರು ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

  • ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ರಾಯಚೂರು: ಸಿಂಧನೂರಿನಿಂದ ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭಿಸಲಾಗಿದ್ದು, ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೆ ಖಾತೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.

    ಸಿಂಧನೂರು ನಗರದಲ್ಲಿನ ರೈಲು ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ‌ ಪ್ರಧಾನಿಯಾದ ನಂತರ ರೈಲ್ವೆ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಕೆಲಸಗಳಾಗಿವೆ ಎಂದು ಬಣ್ಣಿಸಿದರು.

    ಹಲವು ವರ್ಷಗಳ ಕನಸಿನ ರೈಲು ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ಮಧ್ಯಾಹ್ನ 1:30ಕ್ಕೆ ಸಿಂಧನೂರಿನಿಂದ ಹೊರಟು, ಹುಬ್ಬಳ್ಳಿ ಮೂಲಕ ಮುಂಜಾನೆ 3:55ಕ್ಕೆ ರೈಲು ಬೆಂಗಳೂರು ತಲುಪಲಿದೆ.

  • ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

    ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

    – ಇದೀಗ ಮಹಿಳೆಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

    ಹುಬ್ಬಳ್ಳಿ: ಗಂಡ-ಹೆಂಡತಿ ಜಗಳ ಬಗೆಹರಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನ ಬಲೆ ಹಾಕಿಕೊಂಡ ಪೊಲೀಸ್ ಕಾನ್ಸಟೇಬಲ್ (Police Constable), ಬಳಿಕ ಆಕೆ ಜೊತೆಗೆ ಅಕ್ರಮ ಸಂಬಂಧವಿಟ್ಟುಕೊಂಡಿರುವ ಜೊತೆಗೆ ಮಹಿಳೆಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

    ಹುಬ್ಬಳ್ಳಿಯ (Hubballi) ಪೋಲಿ ಪೋಲಿಸಪ್ಪ ಮಾಡಿರುವ ಕೆಲಸಕ್ಕೆ ಪೊಲೀಸ್ ಇಲಾಖೆಗೆ ತಲೆನೋವಾಗಿದೆ. ಪೊಲೀಸ್ ಕಾನ್ಸ್‌ಟೇಬಲ್‌ ಕಾಮದಾಸೆಗೆ ಸುಂದರ ಕುಟುಂಬ (Beautiful Family) ಹೊಡೆದು ಬೀದಿಗೆ ಬಂದಿದೆ. ಇದನ್ನೂ ಓದಿ: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ

    ಹುಬ್ಬಳ್ಳಿಯ ಘಂಟಿಕೇರಿ ಠಾಣೆಯ ಕಾನ್ಸ್‌ಟೇಬಲ್‌ ಹಜರತ್ ಮಿಟ್ಟೆಖಾನ್ ವಿರುದ್ಧ ಹುಬ್ಬಳ್ಳಿ ನಗರದ ಬೆಂಡಿಗೇರಿ ಠಾಣೆಯಲ್ಲಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪೊಲೀಸ್‌ ಸಹಾಯವಾಣಿ 112 ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್‌ ಹಜರತ್, ಗಂಡ-ಹೆಂಡತಿ ಜಗಳದ ಕರೆ ಆಧರಿಸಿ, ವಿವಾಹಿತಳ ಮನೆಗೆ ಹೋಗಿದ್ದ. ಜಗಳ ಬಗೆಹರಿಸುವ ನೆಪದಲ್ಲಿ ಮಹಿಳೆ ಜೊತೆಗೆ ಸ್ನೇಹ ಮಾಡಿ, ಆಕೆಯ ಜೊತೆಗೆ ಅಕ್ರಮ ಸಂಬಂಧ ಕೂಡ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ಭಾಷೆ ಹೆಸರಲ್ಲಿ ಜನರನ್ನು ವಿಭಜಿಸಬಾರದು: ಮರಾಠಿ-ಹಿಂದಿ ಸಂಘರ್ಷ ಬಗ್ಗೆ ಕಂಗನಾ ಪ್ರತಿಕ್ರಿಯೆ

    ಇದರ ಜೊತೆಗೆ ಮಹಿಳೆಯ 6 ವರ್ಷದ ಬಾಲಕಿಗೆ ಸಹ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಮಹಿಳೆ ಗಂಡ ಹಾಗೂ ಸಂತ್ರಸ್ತೆ ಬಾಲಕಿ ತಂದೆ, ಕಾನ್ಸ್‌ಟೇಬಲ್‌ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟಕ್ಕಿಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಆರಂಭಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ, ಗೇಟ್‌ ಪಾಸ್‌ ನೀಡೋದು ಪಕ್ಕಾ: ಆರ್‌. ಅಶೋಕ್‌ ಭವಿಷ್ಯ

  • 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    ವಿಜಯಪುರ/ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಕೇಸ್‌ಗೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದ್ದು, ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇಲ್ಲದೇ ಇರೋದು ಗೊತ್ತಾಗಿದೆ.

    ಮೇ 25 ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ದರೋಡೆ ನಡೆದಿತ್ತು. ತನಿಖೆ ವೇಳೆ ಈ ಕೇಸ್‌ಗೆ ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇರುವುದು ಗೊತ್ತಾಗಿದ್ದು, ಶಾಲೆಯ ಚೇರಮನ್ ಆಗಿರುವ ಆರೋಪಿ ಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೇಶ್ವಾಪುರದಲ್ಲಿರುವ ಮನೆ ಹಾಗೂ ಗದಗ ರಸ್ತೆಯಲ್ಲಿನ ತನ್ನ ಶಾಲೆಯೊಂದರಲ್ಲಿ ಚಿನ್ನ ಕರಗಿಸಿರುವುದು ತಿಳಿದುಬಂದಿದೆ.ಇದನ್ನೂ ಓದಿ: ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ

    ಸದ್ಯ ಪೊಲೀಸರು ಶಾಲೆ ಸೇರಿದಂತೆ ಕೆಲವು ಸ್ಥಳಗಳಲ್ಲಿ ಮಹಜರು ಮಾಡಿದ್ದು, ಚಿನ್ನ ಕರಗಿಸಲು ಬಳಸಿದ ಕೆಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.

    ಘಟನೆ ಏನು?
    ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿ, ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು. ಪರಾರಿಯಾಗಿದ್ದ ಮೂವರನ್ನು ಬಂಧಿಸಿದ್ದರು.ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ

  • ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

    ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

    ಹುಬ್ಬಳ್ಳಿ: ಅಪಘಾತ ಮಾಡಿದ ಬಸ್ ಚಾಲಕರಿಗೆ ಡಿಪೋ ಮ್ಯಾನೇಜರ್ ಮತ್ತು ಅಧಿಕಾರಿಗಳು, ಸನ್ಮಾನ ಮಾಡಿ ಅಪಹಾಸ್ಯ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಚಿಗರಿ ಬಸ್‌ಗಳ ನಡುವೆ ಬುಧವಾರ ಧಾರವಾಡದಲ್ಲಿ (Dharwad) ಅಪಘಾತ ನಡೆದಿತ್ತು. ಮುಂದೆ ಹೋಗುತ್ತಿದ್ದ ಬಸ್ ಬ್ರೇಕ್ ಹಾಕಿದಾಗ ಹಿಂಬದಿಯ ಬಸ್ ಚಾಲಕ ಬ್ರೇಕ್ ಹಾಕಿದರೂ, ಬ್ರೇಕ್ ಹತ್ತದೇ ಮುಂದಿನ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಅಪಘಾತದಲ್ಲಿ ಎರಡು ಬಸ್‌ಗಳ ಗಾಜುಗಳು ಪುಡಿಪುಡಿಯಾಗಿದ್ದವು. ಚಾಲಕರಿಗೆ ಬುದ್ಧಿವಾದ ಹೇಳುವ ನೆಪದಲ್ಲಿ ಎರಡು ಬಸ್‌ಗಳ ಚಾಲಕರನ್ನು ಡಿಪೋಗೆ ಕರೆಸಿದ ಅಧಿಕಾರಿಗಳು ಸನ್ಮಾನ ಮಾಡಿ ಅಪಮಾನ ಮಾಡಿದ್ದಾರೆ. ಬಸ್‌ಗಳ ಮುಂದೆ ಚಾಲಕರನ್ನು ನಿಲ್ಲಿಸಿ, ಮಾಲೆ ಹಾಕಿ ಸನ್ಮಾನ ಮಾಡಿದ ಫೋಟೋವನ್ನು ಶೇರ್ ಮಾಡಿ, ಅಪಹಾಸ್ಯ ಮಾಡಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಅಧಿಕಾರಿಗಳ ನಡೆಗೆ ಇತರೇ ಚಾಲಕರು ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ಎನ್‌ಡಬ್ಲ್ಯೂಕೆಆರ್‌ಟಿಸಿ ಎಂಡಿ ದೂರು ನೀಡಿದ್ದಾರೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಎಂಡಿ ಪ್ರಿಯಾಂಗ್ ಅವರು ಡಿಪೋ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.