Tag: ಹುಲಿ ಸಂರಕ್ಷಿತಾರಣ್ಯ

  • ಬಂಡೀಪುರದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಕೆ!

    ಬಂಡೀಪುರದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಕೆ!

    – 7 ಹೆಲಿಕಾಪ್ಟರ್ ಗಳನ್ನು ಕಳುಹಿಸಿದ ವಾಯುಸೇನೆ
    – ಅಗ್ನಿಶಾಮಕ ದಳ, ಸಾರ್ವಜನಿಕರಿಂದ ಹರಸಾಹಸ

    ಚಾಮರಾಜನಗರ: ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಬೆಂಕಿ ನಂದಿಸಲು ಏರ್ ಫೋರ್ಸ್ ನೆರವು ಪಡೆದಿದ್ದು, ಹೀಗಾಗಿ ಸೇನಾ ಹೆಲಿಕಾಪ್ಟರ್ ಮೊದಲು ಹಾನಿಗೊಳಗಾದ ಅರಣ್ಯ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದೆ.


    ಬಂಡೀಪುರಕ್ಕೆ ಹೊಂದಿಕೊಂಡಂತಿರುವ ತಮಿಳುನಾಡಿನ ಮಧುಮಲೈ ಕಡೆಯಿಂದ ಮತ್ತೆ ಬೆಂಕಿ ಹಬ್ಬುವ ಸಾಧ್ಯತೆಗಳಿವೆ. ಹೀಗಾಗಿ ಬೆಂಕಿ ಕರ್ನಾಟಕದ ಭಾಗಕ್ಕೆ ಹಬ್ಬದಂತೆ ಕಾರ್ಯಾಚರಣೆ ನಡೆಯುತ್ತಿದೆ. ಸಿಎಂ ಕೋರಿಕೆಯ ಮೇರೆಗೆ ಇದೀಗ ವಾಯುಪಡೆಯ ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ. ಈ ಮೂಲಕ ಹೆಲಿಕಾಪ್ಟರ್ ನಲ್ಲಿ ನೀರು ತಂದು ಹೊತ್ತಿ ಉರಿಯುತ್ತಿರುವ ಬಂಡೀಪುರವನ್ನು ನಿಯಂತ್ರಣಕ್ಕೆ ತರಲು ಪ್ಲಾನ್ ಮಾಡಲಾಗಿದೆ.

    ಇಂದು ಮುಂಜಾನೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯವರು ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾದ ಸಮಾಲೋಚನೆ ನಡೆಸಿದ್ದಾರೆ. ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹಾಗೂ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತಿತರ ಅಧಿಕಾರಿಗಳು ಇದ್ದರು. ಚರ್ಚೆಯ ವೇಳೆ ಏರ್ ಪೋರ್ಸ್ ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸುವ ಕೆಲಸ ಮಾಡಬಹುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೆ ಈ ಬಗ್ಗೆ ಏರ್ ಫೋರ್ಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಇದನ್ನೂ ಓದಿ: ಸುದ್ದಿ ಹರಡಿ ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್

    ರೆಕ್ಕಿ ತಂತ್ರಜ್ಞಾನವನ್ನು ಬಳಸಿ ಹೆಲಿಕಾಪ್ಟರ್ ಗಳನ್ನು ಕಳುಹಿಸಿ ಎಚ್ ಡಿ ಕೋಟೆ ಸಮೀಪವಿರುವ ನುಗು ಜಲಾಶಯದಿಂದ ನೀರನ್ನು ಲಿಫ್ಟ್ ಮಾಡಿ ಬೆಂಕಿ ಹೊತ್ತಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ನೀರನ್ನು ಸಿಂಪಡಿಸುವ ಕೆಲಸವನ್ನು ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಸದ್ಯ ಹೆಲಿಕಾಪ್ಟರ್ ಗಳು ಪ್ರಾಯೋಗಿಕವಾಗಿ ಹಾರಾಟ ನಡೆಸಿವೆ. ಸ್ಥಳಕ್ಕೆ 7 ಹೆಲಿಕಾಪ್ಟರ್ ಗಳು ಆಗಮಿಸಿವೆ. ಆದರೆ ನೀರನ್ನು ಲಿಫ್ಟ್ ಮಾಡುವ ಕಾರ್ಯ ಇನ್ನಷ್ಟೇ ಆರಂಭವಾಗಬೇಕಿದೆ. ಬೆಂಕಿ ನಂದಿಸುವವರೆಗೆ ಅರಣ್ಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

    ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಸ್ವಯಂ ಸೇವಕರು ಈಗಾಗಲೇ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸತತ ಪ್ರಯತ್ನ ನಡುವೆಯೂ ಬೆಂಕಿ ನರ್ತನ ಮುಂದುವರಿದಿದ್ದು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೊಲ, ಕೋತಿ, ಜಿಂಕೆ, ಹಾವು ಸೇರಿದಂತೆ ಇತರೆ ಪ್ರಾಣಿಗಳು ಸಜೀವ ದಹನವಾಗಿವೆ. ಬೆಳಗ್ಗಿನ ಜಾವ ಬೆಂಕಿ ನಿಯಂತ್ರಣಕ್ಕೆ ಬರುತ್ತಿದ್ದು, ಮಧ್ಯಾಹ್ನದ ವೇಳೆ ಭೀಕರತೆಗೆ ತಿರುಗುತ್ತದೆ. ಬೆಳಗ್ಗಿನ ಜಾವ ಮಂಜು ಬೀಳುತ್ತಿರುವ ಕಾರಣ ಬೆಂಕಿ ಹತೋಟಿಗೆ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಬಿಸಿ ಮೇಲೆ 5 ವರ್ಷ ನಿಷೇಧ ಹೇರಿದ ಭಾರತ ಸರ್ಕಾರ

    ಬಿಬಿಸಿ ಮೇಲೆ 5 ವರ್ಷ ನಿಷೇಧ ಹೇರಿದ ಭಾರತ ಸರ್ಕಾರ

    – 5 ವರ್ಷಗಳವರೆಗೆ ದೇಶದ ಯಾವುದೇ ಹುಲಿ ಸಂರಕ್ಷಿತ ಅರಣ್ಯದಲ್ಲಿ ಶೂಟಿಂಗ್ ನಡೆಸುವಂತಿಲ್ಲ

    ನವದೆಹಲಿ: ಮುಂದಿನ 5 ವರ್ಷಗಳವರೆಗೆ ದೇಶದ ಯಾವುದೇ ಹುಲಿ ಸಂರಕ್ಷಿತ ಅರಣ್ಯದಲ್ಲಿ ಚಿತ್ರೀಕರಣ ಮಾಡದಂತೆ ಜಾಗತಿಕ ಸುದ್ದಿ ಸಂಸ್ಥೆ ಬಿಬಿಸಿ ಹಾಗೂ ಪತ್ರಕರ್ತ ಜಸ್ಟಿನ್ ರೋಲಟ್ ಮೇಲೆ ಭಾರತ ಸರ್ಕಾರ ನಿಷೇಧ ಹೇರಿದೆ.

    ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್‍ಟಿಸಿಎ) ಸೋಮವಾರದಂದು ಈ ಆದೇಶ ನೀಡಿದ್ದು, ದೇಶದಲ್ಲಿರುವ 50 ಹುಲಿ ಸಂರಕ್ಷಿತಾರಣ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಬಿಬಿಸಿ ಚಿತ್ರೀಕರಣ ಮಾಡುವಂತಿಲ್ಲ ಎಂದು ಹೇಳಿದೆ. ಪರಿಸರ ಮತ್ತು ಅರಣ್ಯ ಸಚಿವಾಲಯವೂ ಕೂಡ ರಾಷ್ಟ್ರೀಯ ಉದ್ಯಾನವನ ಹಾಗೂ ಅಭಯಾರಣ್ಯಗಳಿಂದ ಬಿಬಿಸಿಗೆ ನಿಷೇಧ ಹೇರಲು ಚಿಂತಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕಾರಿಗಳು ಈ ಬಗ್ಗೆ ಇನ್ನೂ ಸ್ಪಷ್ಟಪಡಿಸಿಲ್ಲ ಎಂದು ವರದಿಯಾಗಿದೆ.

    ನಿಷೇಧಕ್ಕೆ ಕಾರಣವೇನು: ಬಿಬಿಸಿ ತಯಾರಿಸಿದ್ದ ಒಂದು ಸಾಕ್ಷ್ಯಚಿತ್ರದಲ್ಲಿ ಕಾಝೀರಂಗಾ ಹುಲಿ ಸಂರಕ್ಷಿತ ಅರಣ್ಯವನ್ನು ಆಕ್ಷೇಪಾರ್ಹ ರೀತಿಯಲ್ಲಿ ತೋರಿಸಲಾಗಿತ್ತು. ಕಾಝೀರಂಗಾ: ದಿ ಪಾರ್ಕ್ ದಟ್ ಶೂಟ್ಸ್ ಪೀಪಲ್ ಟು ಪ್ರೊಟೆಕ್ಟ್ ರಿನೋಸ್ (ಘೇಂಡಾಮೃಗಗಳನ್ನು ಉಳಿಸಲು ಮನುಷ್ಯರನ್ನು ಶೂಟ್ ಮಾಡೋ ಕಾಝೀರಂಗಾ ಸಂರಕ್ಷಿತಾರಣ್ಯ) ಎಂದು ಬಿಬಿಸಿ ಹೇಳಿತ್ತು. ಸಂರಕ್ಷಿತಾರಣ್ಯದ ಈ ನೀತಿಯಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.

    ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್‍ನ 197ನೇ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಹೊಂದಿದ ಬೇಟೆಗಾರರನ್ನು ಹತ್ತಿಕ್ಕಲು ಕಾಝೀರಂಗಾ ಅರಣ್ಯದ ಗಾರ್ಡ್‍ಗಳಿಗೆ ಅಸ್ಸಾಂ ಸರ್ಕಾರ ನೀಡಿರುವ ವಿನಾಯಿತಿಯನ್ನು ಸಾಕ್ಷ್ಯ ಚಿತ್ರದಲ್ಲಿ ಕೊಲೆ ಮಾಡಲು ಗುಂಡು ಹಾರಿಸುತ್ತಾರೆ ಎಂಬಂತೆ ತೋರಿಸಲಾಗಿದೆ ಎಂದು ಆರೋಪಿಸಿ ಎನ್‍ಟಿಸಿಎ ಬಿಬಿಸಿಗೆ ನೋಟಿಸ್ ನೀಡಿತ್ತು. ಇದಕ್ಕೆ ಉತ್ತರಿಸಿದ್ದ ಪತ್ರಕರ್ತ ರೋಲಟ್, ನಾವು ಚಿತ್ರೀಕರಣ ಮಾಡುವ ವೇಳೆ ಯಾರಿಗೂ ಮೋಸ ಮಾಡುವ ಪ್ರಯತ್ನ ಮಾಡಿಲ್ಲ. ಸಂರಕ್ಷಿತಾರಣ್ಯದ ಪ್ರಾಣಿ ರಕ್ಷಣಾ ತಂತ್ರವನ್ನು ಕೊಲ್ಲವುದಕ್ಕೆ ಶೂಟ್ ಮಾಡುವುದು ಎಂಬ ಅರ್ಥದಲ್ಲಿ ತೋರಿಸಿಲ್ಲ. ಆದರೆ ನಾವು ಚಿತ್ರೀಕರಣ ಮಾಡುವ ವೇಳೆ ಅನುಮಾನಾಸ್ಪದ ಬೇಟೆಗಾರರನ್ನು ಕೊಲ್ಲುವಂತಹ ಸಂಗತಿ ತಿಳಿಯಿತು ಎಂದು ಹೇಳಿದ್ದಾರೆ. ನೋಟಿಸ್‍ಗೆ ಬಿಬಿಸಿ ಸಮಾಧಾನಕರವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಎನ್‍ಟಿಸಿಎ ನಿಷೇಧ ಹೇರಿದೆ.

    ಬಿಬಿಸಿಯ ಸಾಕ್ಷ್ಯಚಿತ್ರವನ್ನು ನೋಡಿದ ನಂತರ ಅಸ್ಸಾಂ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೆವು. ಮುಂದೆ ದೇಶದ ಹುಲಿ ಸಂರಕ್ಷಿತಾರಣ್ಯದಲ್ಲಿ ಬಿಬಿಸಿ ಚಿತ್ರೀಕರಣ ಮಾಡದಂತೆ ನಿಷೇಧ ಹೇರಬೇಕೆಂದು ಶಿಫಾರಸ್ಸು ಮಾಡಿದ್ದೆವು. ಚಿತ್ರೀಕರಣ ಮಾಡಲು ಅನುಮತಿ ಪಡೆಯುವ ವೇಳೆ ಅವರು ಯಾವ ವಿಷಯದ ಮೇಲೆ ಚಿತ್ರೀಕರಣ ಮಾಡುತ್ತೇವೆ ಎಂದು ಹೇಳಿದ್ದರೋ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಬಿಬಿಸಿಯ ಅಂತಿಮ ಸಾಕ್ಷ್ಯ ಚಿತ್ರ ಸಂಪೂರ್ಣ ಭಿನ್ನವಾಗಿತ್ತು ಎಂದು ಕಾಝೀರಂಗಾ ಸಂರಕ್ಷಿತಾರಣ್ಯದ ಅಧಿಕಾರಿ ಸಂತ್ಯೇಂದ್ರ ಸಿಂಗ್ ಹೇಳಿದ್ದಾರೆ. ಬಿಬಿಸಿ ಯವರು ಅನುಮತಿ ಪಡೆಯುವ ವೇಳೆ ಪ್ರಾಣಿ ಸಂರಕ್ಷಣೆಯಲ್ಲಿ ಭಾರತದ ಪರಿಣಿತಿ ಮತ್ತು ಎದುರಿಸುತ್ತಿರುವ ಸವಾಲಗಳು ಎಂಬ ವಿಷಯದ ಬಗ್ಗೆ ಸಾಕ್ಷ್ಯಚಿತ್ರ ಮಾಡಲಿರುವುದಾಗಿ ಹೇಳಲಾಗಿತ್ತು ಎಂದು ವರದಿಯಾಗಿದೆ.

    ಅಸ್ಸಾಂನ ಕಾಝೀರಂಗಾ ಹುಲಿ ಸಂರಕ್ಷಿತಾರಣ್ಯ 800 ಚದರ ಅಡಿಗಳಷ್ಟು ವಿಸ್ತೀರ್ಣವಿದ್ದು. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಒಂದು ಕೊಂಬಿನ ಘೇಂಡಾ ಮೃಗಗಳಿರುವ ಪ್ರದೇಶವಾಗಿದೆ. ಎನ್‍ಟಿಸಿಎ ನ ಇತ್ತೀಚಿನ ಸಮೀಕ್ಷೆಯ ಪ್ರಕಾರ ಇಲ್ಲಿ 103 ಹುಲಿಗಳಿವೆ.