Tag: ಹುಷಾರ್

  • ‘ಹುಷಾರ್’ ಚಿತ್ರಕ್ಕಾಗಿ ಹಾಡಿದ ರಿಯಲ್ ಸ್ಟಾರ್ ಉಪೇಂದ್ರ

    ‘ಹುಷಾರ್’ ಚಿತ್ರಕ್ಕಾಗಿ ಹಾಡಿದ ರಿಯಲ್ ಸ್ಟಾರ್ ಉಪೇಂದ್ರ

    ನಿರ್ದೇಶನ, ನಟನೆ, ಸಂಭಾಷಣೆ  ಮೂಲಕ ಜನರಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ, ಗಾಯಕರಾಗೂ ಜನಪ್ರಿಯ. ಪ್ರಸ್ತುತ ಸತೀಶ್ ರಾಜ್  ಮೂವಿ ಮೇಕರ್ಸ್  ಲಾಂಛನದಲ್ಲಿ,  ಸತೀಶ್ ರಾಜ್  ಕಥೆ- ಚಿತ್ರಕಥೆ -ಸಾಹಿತ್ಯ ಸಂಭಾಷಣೆ- ರಚಿಸಿ -ನಿರ್ಮಿಸಿ- ನಿರ್ದೇಶಿಸಿರುವ “ಹುಷಾರ್” ಚಿತ್ರದ “ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ” ಎಂಬ ಹಾಡನ್ನು ಹಾಡಿದ್ದಾರೆ.

    ಉಪೇಂದ್ರ ಹಾಗೂ ಜಾಹ್ನವಿ ಆನಂದ್ ಹಾಡಿರುವ ಈ ಹಾಡಿಗೆ      ಎ.ಟಿ. ರವೀಶ್ ಸಂಗೀತ ನೀಡಿದ್ದಾರೆ. ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಹಾಡು ಕೇಳಿ ಪ್ರಿಯಾಂಕ ಉಪೇಂದ್ರ ಅವರು, H20 ಚಿತ್ರದ “ದಿಲ್ ಇಲ್ದೇ ಲವ್ ಮಾಡೋಕಾಗಲ್ವೆ” ಹಾಡಿನ ತರಹ ಇದೆ. ಈ ಹಾಡು ಅದೇ ರೀತಿ ಹಿಟ್ ಆಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

    ಸತೀಶ್ ರಾಜ್ ಅವರು ಡಾ||ರಾಜ್   ಕುಮಾರ್ ಅವರ ಅಪ್ಪಟ ಅಭಿಮಾನಿ.  1990 ರಲ್ಲಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದು, ಕನ್ನಡ ಚಿತ್ರರಂಗದ ವಿವಿಧ ವಿಭಾಗದಲ್ಲಿ ಕೆಲಸ  ಮಾಡಿದ್ದಾರೆ. ಇವರಿಗೆ ರಂಗಭೂಮಿ ನಂಟು ಇದೆ. ಅಶ್ವಿನಿ ಅರುಣ್ ಕೃಷ್ಣನ್ ಅವರ ಸಹ ನಿರ್ಮಾಣವಿರುವ ಈ ಚಿತ್ರದ   ನಾಯಕನಾಗಿ ಸಿದ್ದೇಶ್ ನಟಿಸಿದ್ದಾರೆ.  ಆದ್ಯಪ್ರಿಯ, ರಚನ ಮಲ್ನಾಡ್, ವಿನೋದ್, ಡಿಂಗ್ರಿ ನಾಗರಾಜ್,  ಗಣೇಶ್ ರಾವ್,  ಸತೀಶ್ ರಾಜ್, ಪುಷ್ವ ಸ್ವಾಮಿ, ಲಯ ಕೋಕಿಲ, ಪವಿತ್ರ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಹುಷಾರ್’ ಹಾಡಿಗೆ ಧ್ವನಿಯಾದ ರಿಯಲ್ ಸ್ಟಾರ್ ಉಪೇಂದ್ರ

    ‘ಹುಷಾರ್’ ಹಾಡಿಗೆ ಧ್ವನಿಯಾದ ರಿಯಲ್ ಸ್ಟಾರ್ ಉಪೇಂದ್ರ

    ತೀಶ್ ರಾಜ್ ನಿರ್ಮಿಸಿ, ನಿರ್ದೇಶಿಸಿರುವ “ಹುಷಾರ್” ಚಿತ್ರದ “ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ” ಎಂಬ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡನ್ನು ಪ್ರಿಯಾಂಕ ಉಪೇಂದ್ರ ಬಿಡುಗಡೆ ಮಾಡಿದರು. ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ.ಸುರೇಶ್ ಅವರಿಂದ ಬಿಡುಗಡೆಯಾಯಿತು. ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ಉಪೇಂದ್ರ ಅವರು ಹಾಡಿರುವುದು. ಈ ಹಾಡು H20 ಚಿತ್ರದ “ದಿಲ್ ಇಲ್ದೇ ಲವ್ ಮಾಡೋಕಾಗಲ್ವೆ” ಹಾಡಿನ ತರಹ ಇದೆ. ಈ ಹಾಡು ಅದೇ ರೀತಿ ಹಿಟ್ ಆಗಲಿ. ಹಾರಾರ್ ಜಾನರ್ ನ ಈ ಸಿನಿಮಾ ಎಲ್ಲರ ಮನ ಗೆಲ್ಲಲಿ ಎಂದು ಪ್ರಿಯಾಂಕ ಉಪೇಂದ್ರ ಶುಭ ಹಾರೈಸಿದರು. ‌

    ನಾನು ಡಾ||ರಾಜ್ ಅವರ ಅಭಿಮಾನಿ. ಕನ್ನಡ ಚಿತ್ರರಂಗದ ವಿವಿಧ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ರಂಗಭೂಮಿ ನಂಟು ಇದೆ. ಲಾಕ್ ಡೌನ್ ಸಮಯದಲ್ಲಿ “ಹುಷಾರ್” ಪೆನ್ ಡ್ರೈವ್ ಎಂಬ ಕಥೆ ಬರೆದೆ. ಈ ಕಥೆ ಪುಸ್ತಕ ರೂಪದಲ್ಲಿ ಎಲ್ಲೆಡೆ ಲಭ್ಯವಿವೆ.  ಆನಂತರ ಇದನ್ನು ಸಿನಿಮಾ‌ ಮಾಡೋಣ ಎಂದು ಚಿತ್ರೀಕರಣ ಆರಂಭಿಸಿದೆ. ಹಲವು ಅಡೆತಡೆಗಳನ್ನು ದಾಟಿ, ಚಿತ್ರ ಬಿಡುಗಡೆ ಹಂತ ತಲುಪಿದೆ. ಉಪೇಂದ್ರ ಅವರು ನಮ್ಮ ಸಿನಿಮಾದ ಹಾಡೊಂದು ಹಾಡಿರುವುದು ನಮ್ಮ ಹೆಮ್ಮೆ. ಆ ಹಾಡನ್ನು ಬಿಡುಗಡೆ ಮಾಡಿದ ಪ್ರಿಯಾಂಕ ಉಪೇಂದ್ರ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ- ನಿರ್ದೇಶಕ ಸತೀಶ್ ರಾಜ್. ‌ ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ನಾಯಕ ಸಿದ್ದೇಶ್, ನಾಯಕಿ ಆದ್ಯಪ್ರಿಯ, ನಟಿ ಪುಷ್ಪಸ್ವಾಮಿ, ನಟರಾದ ಬುಲೆಟ್ ವಿನೋದ್, ಡಿಂಗ್ರಿ ನಾಗರಾಜ್, ನಟಿ ರಚನಾ ಮಲ್ನಾಡ್ ಮುಂತಾದ ಕಲಾವಿದರು  ತಮ್ಮ ಅಭಿನಯದ ಬಗ್ಗೆ ಮಾತನಾಡಿದರು. ಸಹ ನಿರ್ಮಾಪಕಿ ಅಶ್ವಿನಿ ಅರುಣ್ ಕೃಷ್ಣನ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಆರ್ಥಿಕ ಸಲಹೆಗಾರರಾದ ಇಂದು ಶೇಖರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು.

    Live Tv
    [brid partner=56869869 player=32851 video=960834 autoplay=true]

  • ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

    ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

    ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿನಯದಷ್ಟೇ, ಗಾಯನದಿಂದಲೂ ಜನಪ್ರಿಯರಾದವರು. ಪ್ರಸ್ತುತ ಉಪೇಂದ್ರ ಅವರು ʼಹುಷಾರ್ʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ ʼನೀ ನೋಡೋಕೆ ಸಿಕ್ಸಟೀನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿʼ ಎಂಬ ಹಾಡನ್ನು ಇತ್ತೀಚಿಗೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಉಪೇಂದ್ರ ಹಾಡಿದ್ದಾರೆ.

    ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು. ಇದನ್ನೂ ಓದಿ:  ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತೆರಚನೆ ಮಾಡಿರುವ ಸತೀಶ್ ರಾಜ್ ನಿರ್ದೇಶನವನ್ನು ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆಯಲ್ಲಿ ಬಂದಿರುವ ಸತೀಶ್ ರಾಜ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

    ನಮ್ಮ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರುತ್ತದೆ. ಅದಕ್ಕೆ ಯಾರೂ ಹೊಣೆಗಾರರಲ್ಲ. ನಾವು ಎಚ್ಚರಿಕೆಯಿಂದ ಇರಬೇಕು ಎನ್ನುವುದು ಕಥೆಯ ಸಾರಾಂಶ. ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಮೇಲಿನ ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಈ ಹಾಡಿನ ಚಿತ್ರೀಕರಣ ನಡೆಯಲಿದೆ. ಚಿತ್ರ ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿದೆ.

    ಎರಡು ಹಾಡುಗಳಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಹಾಗೂ ನಾಗು ಸಂಗೀತ ನೀಡಿದ್ದಾರೆ. ರೆಮೋ ಹಾಗೂ ಉಪೇಂದ್ರ ಒಂದೊಂದು ಹಾಡನ್ನು ಹಾಡಿದ್ದಾರೆ. ನವೀನ್ ಮತ್ತು ನಾಗರಾಜ್ ಛಾಯಾಗ್ರಹಣ, ಜೆ.ಜೆ.ಶರ್ಮ ಸಂಕಲನ, ಚಂದ್ರು ಬಂಡೆ, ಜಾಗ್ವರ್ ಸಣ್ಣಪ್ಪ ಸಾಹಸ ನಿರ್ದೇಶನ ಹಾಗೂ ಸ್ಟಾರ್ ನಾಗಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಇದನ್ನೂ ಓದಿ: ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್

    ಸಿದ್ದೇಶ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಪ್ರಿಯದರ್ಶಿನಿ. ವಿನೋದ್, ರಚನಾ ಮಲ್ನಾಡ್, ಲಯ ಕೋಕಿಲ, ಡಿಂಗ್ರಿ ನಾಗರಾಜ್, ಪುಷ್ಪಸ್ವಾಮಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಸತೀಶ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.