Tag: ಹೂಳು

  • ಪಾಳುಬಿದ್ದ ಕೆರೆಗೆ ಯುವಕರಿಂದ ಮರು ಜೀವ- ರೈತರ ಮೊಗದಲ್ಲಿ ಸಂತಸ

    ಪಾಳುಬಿದ್ದ ಕೆರೆಗೆ ಯುವಕರಿಂದ ಮರು ಜೀವ- ರೈತರ ಮೊಗದಲ್ಲಿ ಸಂತಸ

    – ಕೆರೆಗೆ ಬೇಕಿದೆ ತಡೆಗೋಡೆ

    ಮಡಿಕೇರಿ: ಹಲವು ವರ್ಷಗಳಿಂದ ಹೂಳುತುಂಬಿ ಪಾಳು ಬಿದ್ದಿದ್ದ ಅಭ್ಯತ್ ಮಂಗಲ ಸಾರ್ವಜನಿಕರ ಕೆರೆಯನ್ನು ನರೇಗಾ ಯೋಜನೆಯಡಿ ಯುವಕರ ತಂಡ ಪುನಶ್ಚೇತನಗೊಳಿಸಿದ್ದು, ಮರುಜೀವ ನೀಡಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‍ಮಂಗಲ ಗ್ರಾಮದ ಅತ್ತಿಮಂಗಲ ಕೆರೆ ಹಲವು ವರ್ಷಗಳಿಂದ ಹೂಳು ತುಂಬಿತ್ತು. ಕಸದ ಗಿಡಗಳು ಬೆಳೆದು ಪಾಳು ಬಿದ್ದಿತ್ತು. ಮಾತ್ರವಲ್ಲದೇ ಕೆಲವರು ರಾತ್ರಿ ವೇಳೆ ಕೋಳಿ ಮಾಂಸದ ತ್ಯಾಜ್ಯವನ್ನು ಕೆರೆಯ ಬದಿಯಲ್ಲಿ ಎಸೆಯುತ್ತಿದ್ದು, ದುರ್ವಾಸನೆಯಿಂದ ಕೂಡಿತ್ತು.

    ಇದನ್ನು ಅರಿತ ನೆಲ್ಯಹುದಿಕೇರಿಯ ಮುತ್ತಪ್ಪ ಯುವಕಲಾ ಸಂಘದ ಯುವಕರ ತಂಡ ಕೆರೆಯ ಪುನಶ್ಚೇತನಕ್ಕೆ ಮುಂದಾಗಿತ್ತು. ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ಕೆರೆಯ ಅಭಿವೃದ್ಧಿಗೆ ಅನುವು ಮಾಡಿಕೊಡಲಾಗಿದೆ. ಅತ್ತಿಮಂಗಲ ಸಮೀಪದ ಮುಖ್ಯ ರಸ್ತೆಯ ಬದಿಯಲ್ಲೇ ಇರುವ ಕೆರೆಯನ್ನು ಕಳೆದ ಒಂದು ತಿಂಗಳಿನಿಂದ ಸ್ವಚ್ಛಗೊಳಿಸಲಾಗಿದೆ. ಕೆರೆಯ ಸುತ್ತಲೂ ಇದ್ದ ಕುರಚಲು ಗಿಡ ಹಾಗೂ ಹುಲ್ಲನ್ನು ತೆರವುಗೊಳಿಸಿ, ಕೆರೆಯ ಹೂಳನ್ನು ತೆಗೆಯಲಾಗಿದೆ.

    ರಸ್ತೆಯ ಬದಿಯಲ್ಲಿನ ಕಸದ ತ್ಯಾಜ್ಯವನ್ನು ಸ್ವಚ್ಛಗೊಳಿಸಲಾಗಿದೆ. ಒಂದು ತಿಂಗಳಿನಿಂದ ಯುವಕರ ತಂಡ ಕೆರೆಯ ಅಭಿವೃದ್ಧಿಯಲ್ಲಿ ತೊಡಗಿದ್ದು, ಇದೀಗ ಕೆರೆಗೆ ಜೀವಕಳೆ ಬಂದಿದೆ. ಬೇಸಿಗೆಯಲ್ಲಿ ಗ್ರಾಮದ ಕೃಷಿಕರಿಗೆ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಕೆರೆ ಅಭಿವೃದ್ಧಿಯಿಂದಾಗಿ ಸ್ಥಳೀಯ ಕೃಷಿಕರಿಗೆ ಉಪಯೋಗವಾಗಲಿದೆ. ಸುಮಾರು ಒಂದು ಏಕರೆ ವಿಸ್ತೀರ್ಣದಲ್ಲಿರುವ ಕೆರೆ ಈ ಹಿಂದೆ ಸ್ಥಳೀಯ ಕೃಷಿಕರಿಗೆ ನೀರಿನ ಮುಖ್ಯ ಮೂಲವಾಗಿತ್ತು. ಬಳಿಕ ನೀರಿಲ್ಲದೇ ಪಾಳು ಬಿದ್ದಿದ್ದು, ಗದ್ದೆಗಳಿಗೆ ನೀರಿನ ಕೊರತೆ ಉಂಟಾಗುತ್ತಿದೆ. ಪಂಚಾಯಿತಿಯ 5 ಲಕ್ಷ ರೂ. ವೆಚ್ಚದಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಿದ್ದು, ಸುತ್ತಲಿನ ಜಾಗದಲ್ಲಿ ಹೂ ಗಿಡಗಳನ್ನು ನೆಟ್ಟು ಕೆರೆಯ ಅಂದ ಹೆಚ್ಚಿಸಲು ಸಹ ಯುವಕರು ಮುಂದಾಗಿದ್ದಾರೆ.

    ಮುಖ್ಯ ರಸ್ತೆಯ ತಿರುವಿನಲ್ಲಿ ಸಾರ್ವಜನಿಕ ಕೆರೆ ಇದ್ದು, ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಕೆರೆಯ ಸುತ್ತಲೂ ಕಬ್ಬಿಣದ ಬೇಲಿ ಹಾಗೂ ಬಕೆರೆಯ ಎರಡೂ ಬದಿ ತಿರುವು ಹಾಗೂ ಇಳಿಜಾರು ಇರುವುದರಿಂದ ಕೆರೆಗೆ ಅಡ್ಡಲಾಗಿ ಕಬ್ಬಿಣದ ತಡೆಗೋಡೆ ಅಳವಡಿಸಬೇಕು ಎಂದು ಸ್ಥಳೀಯರು ಸಲಹೆ ನೀಡಿದ್ದಾರೆ.

  • ಕಾವೇರಿ ನದಿ ಹೂಳು ಎತ್ತಿ ಬರೋ ವರ್ಷವಾದ್ರೂ ಪ್ರವಾಹದ ಅನಾಹುತ ತಪ್ಪಿಸಿ!

    ಕಾವೇರಿ ನದಿ ಹೂಳು ಎತ್ತಿ ಬರೋ ವರ್ಷವಾದ್ರೂ ಪ್ರವಾಹದ ಅನಾಹುತ ತಪ್ಪಿಸಿ!

    ಮಡಿಕೇರಿ: ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿತ್ತು. ಒಂದೆಡೆ ಕಾವೇರಿ ನದಿ ಉಕ್ಕಿ ಹರಿದರೆ ಮತ್ತೊಂದೆಡೆ ಹಾರಂಗಿ ಜಲಾಶಯದಿಂದ ಒಂದೇ ಬಾರಿ 1 ಲಕ್ಷ ಕ್ಯೂಸೆಕ್‍ಗೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಹರಿಸಲಾಗಿತ್ತು. ಎರಡು ನೀರು ಒಂದೆಡೆ ಸೇರಿದ್ದರಿಂದ ಪ್ರವಾಹದ ತೀವ್ರತೆ ಮತ್ತಷ್ಟು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಪ್ರವಾಹ ಉಂಟಾಗಿತ್ತು. ಇದಕ್ಕೆಲ್ಲಾ ಕಾರಣ ಹಾರಂಗಿ ಜಲಾಶಯ ಮತ್ತು ಕಾವೇರಿ ನದಿಯಲ್ಲಿ ಇನ್ನಿಲ್ಲದಂತೆ ತುಂಬಿರುವ ಹೂಳು.

    2018 ರಲ್ಲಿ ಹಾರಂಗಿ ನದಿಪಾತ್ರವಾದ ಮುಕ್ಕೋಡ್ಲು, ಮೇಘತಾಳು, ಎಮ್ಮೆತಾಳು ಮತ್ತು ಹಟ್ಟಿಹೊಳೆ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಬಾರೀ ಕುಸಿತವಾಗಿತ್ತು. ಈ ವೇಳೆ ಸಾವಿರಾರು ಕ್ಯುಬಿಕ್ ಮೀಟರನಷ್ಟು ಮಣ್ಣು ಪ್ರವಾಹದ ನೀರಿನಲ್ಲಿ ಕೊಚ್ಚಿ ಬಂದು ಹಾರಂಗಿಯಲ್ಲಿ ಕನಿಷ್ಠ 7 ರಿಂದ 8 ಅಡಿಯಷ್ಟು ಹೂಳು ತುಂಬಿಕೊಂಡಿತ್ತು. 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸಂಗ್ರಹಣ ಸಾಮರ್ಥ್ಯ ಕಡಿಮೆಯಾಗಿ ಹರಿದು ಬಂದ 76.93 ಟಿಎಂಸಿ ನೀರಿನಲ್ಲಿ 60 ಟಿಎಂಸಿ ನೀರನ್ನು ನದಿಗೆ ಹರಿಸಲಾಗಿತ್ತು. ಇದರಿಂದ ಹಾರಂಗಿ ಕೆಳಭಾಗದಲ್ಲಿರುವ ಕೂಡಿಗೆ, ಹೆಬ್ಬಾಲೆ, ಕುಶಾಲನಗರ, ಮುಳ್ಳುಸೋಗೆ ಗ್ರಾಮಗಳು ಪ್ರವಾಹದಲ್ಲಿ ಮುಳುಗಡೆಯಾಗಿದ್ದವು.

    ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು 2019ರ ಸಮ್ಮಿಶ್ರ ಸರ್ಕಾರದಲ್ಲಿ 100 ಕೋಟಿ ರೂ. ಘೋಷಣೆಯಾಗಿದ್ದರೂ ಹೂಳು ತೆಗೆಯಲು ಇದುವರೆಗೆ ಯಾವುದೇ ಯೋಜನೆ ರೂಪುಗೊಂಡಿಲ್ಲ. ಇದು ಜಿಲ್ಲೆಯ ಜನರು ಸಿಟ್ಟಿಗೇಳುವಂತೆ ಮಾಡಿದೆ. ಇನ್ನೂ ಹಾರಂಗಿ ಜಲಾಶಯದಲ್ಲಿ ಅಷ್ಟೇ ಅಲ್ಲ, ಕಾವೇರಿ ನದಿಯಲ್ಲೂ ಅಪಾರ ಪ್ರಮಾಣದ ಮರಳು ದಿನ್ನೆಗಳು ನಿರ್ಮಾಣವಾಗಿವೆ. ಅಲ್ಲದೆ ಕಾವೇರಿ ನದಿ ಪಾತ್ರದ ಬಹುತೇಕ ಜಾಗಗಳು ಸಂಪೂರ್ಣ ಒತ್ತುವರಿಯಾಗಿವೆ. ಹೀಗಾಗಿ ಬ್ರಹ್ಮಗಿರಿ ಬೆಟ್ಟ, ತಲಕಾವೇರಿ, ಬಾಗಮಂಡಲ ಸೇರಿದಂತೆ ನದಿ ಪಾತ್ರದಲ್ಲಿ ಒಂದು ದಿನ ಎಡಬಿಡದೆ ಮಳೆ ಸುರಿದರೂ ಸಾಕು ಪ್ರವಾಹದ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ನದಿಯಲ್ಲಿ ತುಂಬಿರುವ ಮರಳು ಮತ್ತು ಹಾರಂಗಿ ನದಿಯಲ್ಲಿ ತುಂಬಿರುವ ಹೂಳು ತೆಗೆಯದಿದ್ದರೆ ಈ ಬಾರಿಯೂ ಪ್ರವಾಹ ತಪ್ಪಿದ್ದಲ್ಲ.

    ಹೂಳು ತೆಗೆಯಲು ಬಜೆಟ್‍ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷವೇ ಕಳೆದಿದ್ದರೂ ಇದುವರೆಗೆ ಯೋಜನೆ ರೂಪಿಸಿಲ್ಲ. 2019ರ ಮಾರ್ಚ್ ತಿಂಗಳಲ್ಲಿ ಹೂಳು ತುಂಬಿರುವ ಪ್ರದೇಶದ ಸರ್ವೇ ಮಾಡಿದ್ದು ಬಿಟ್ಟರೆ, ಬೇರೆನೂ ಆಗಿಲ್ಲ. ಇನ್ನು ಮೂರು ತಿಂಗಳು ಕಳೆದರೆ ಕೊಡಗಿನಲ್ಲಿ ಮಳೆಗಾಲ ಆರಂಭವಾಗಿ ಬಿಡುತ್ತದೆ. ಮಳೆ ಆರಂಭವಾಯಿತೆಂದರೇ ಹೂಳು ತೆಗೆಯಲು ಸಾಧ್ಯವೇ ಇಲ್ಲ. ಶಾಸಕರು ಮಾತ್ರ ಕೂಡಲೇ ಹೂಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಿದ್ದಾರೆ.

  • ಹೆಣ್ಣು ಮಗುವನ್ನು ಜೀವಂತವಾಗಿ ಹೂಳಲು ಬಂದವರು ಅರೆಸ್ಟ್

    ಹೆಣ್ಣು ಮಗುವನ್ನು ಜೀವಂತವಾಗಿ ಹೂಳಲು ಬಂದವರು ಅರೆಸ್ಟ್

    ಹೈದರಾಬಾದ್: ನವಜಾತ ಹೆಣ್ಣು ಶಿಶುವನ್ನು ಜೀವಂತವಾಗಿ ಹೂಳಲು ಬಂದ ಇಬ್ಬರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

    ಈ ಘಟನೆ ಇಂದು ಬೆಳಗ್ಗೆ ಹೈದರಾಬಾದ್‍ನ ಜುಬಲಿ ಬಸ್ ನಿಲ್ದಾಣದ ಬಳಿ ನಡೆದಿದ್ದು, ಆಗ ತಾನೇ ಜನಿಸಿರುವ ಹೆಣ್ಣು ಮಗುವನ್ನು ಗುಂಡಿ ತೆಗೆದು ಹೂಳುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಇಬ್ಬರು ವ್ಯಕ್ತಿಗಳು ಬ್ಯಾಗ್ ಅನ್ನು ಹಿಡಿದುಕೊಂಡು ಬಸ್ ನಿಲ್ದಾಣದ ಬಳಿಯ ಹಳ್ಳದಲ್ಲಿ ಗುಂಡಿಯನ್ನು ತೆಗೆಯುತ್ತಿರುವುದನ್ನು ಸ್ಥಳೀಯ ಆಟೋರಿಕ್ಷಾ ಚಾಲಕರೊಬ್ಬರು ನೋಡಿದ್ದಾರೆ. ನಂತರ ಅವರು ಆ ಚೀಲದಲ್ಲಿ ಮಗು ಇರಬಹುದು ಎಂದು ಅನುಮಾನ ಪಟ್ಟು ಪೊಲೀಸರಿಗೆ ಕರೆ ಮಾಡಿ ವಿಚಾರದ ಬಗ್ಗೆ ತಿಳಿಸಿದ್ದಾರೆ.

    ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಪೇದೆ ವೆಂಕಟ ರಾಮಕೃಷ್ಣ ಇಬ್ಬರು ಆರೋಪಿಗಳನ್ನು ಹಿಡಿದು ವಿಚಾರಿಸಿದ್ದಾರೆ. ಆದರೆ ತಪ್ಪಿಸಿಕೊಳ್ಳಲು ಅವರು ಇದು ನನ್ನ ಮೊಮ್ಮಗು ಸತ್ತು ಹೋಗಿದೆ. ನಮಗೆ ಹೂಳಲು ಎಲ್ಲೂ ಜಾಗವಿಲ್ಲದ ಕಾರಣ ಇಲ್ಲಿ ಹೂಳಲು ಬಂದಿದ್ದೇವೆ ಎಂದು ಹೇಳಿ ಪೊಲೀಸರು ದಾರಿ ತಪ್ಪಿಸಲು ಪ್ರಯತ್ನ ಮಾಡಿದ್ದಾರೆ.

    ಇವರ ಹೇಳಿಕೆ ಮೇಲೆ ಅನುಮಾನ ಪಟ್ಟ ವೆಂಕಟ ರಾಮಕೃಷ್ಣ ಚೀಲ ತೆಗೆದು ಮಗುವನ್ನು ತೋರಿಸಿ ಎಂದು ಹೇಳಿದ್ದಾರೆ. ಈ ವೇಳೆ ಚೀಲ ತೆಗೆದು ನೋಡಿದಾಗ ಆ ಹೆಣ್ಣುಮಗು ಇನ್ನೂ ಬದುಕಿರುವುದು ಗೊತ್ತಾಗಿದೆ. ಆಗ ಕೂಡಲೇ ಆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಮಗುವನ್ನು ಹತ್ತಿರದ ಗಾಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಜೀವಜಲಕ್ಕಾಗಿ ಗ್ರಾಮಸ್ಥರಲ್ಲಿ ಒಗ್ಗಟ್ಟು – ಸ್ವಂತ ಖರ್ಚಿನಲ್ಲಿ ಕೆರೆಗೆ ಕಾಯಕಲ್ಪ ನೀಡಿದ ಹಾವೇರಿಯ ರುದ್ರೇಶ್

    ಜೀವಜಲಕ್ಕಾಗಿ ಗ್ರಾಮಸ್ಥರಲ್ಲಿ ಒಗ್ಗಟ್ಟು – ಸ್ವಂತ ಖರ್ಚಿನಲ್ಲಿ ಕೆರೆಗೆ ಕಾಯಕಲ್ಪ ನೀಡಿದ ಹಾವೇರಿಯ ರುದ್ರೇಶ್

    ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆ ಮತ್ತು ಬರಗಾಲಕ್ಕೆ ಕಾರಣ ಏನು ಅನ್ನೋದು ಎಲ್ಲರ ಅರಿವಿಗೆ ಬಂದಿದೆ. ಅದ್ರಲ್ಲೂ ರೈತಾಪಿ ವರ್ಗ ಭಾರೀ ಕಾಳಜಿ ವಹಿಸಿದೆ. ಹೀಗಾಗಿ, ರೈತರು, ಸ್ಥಳೀಯರು, ಸಂಘ ಸಂಸ್ಥೆಗಳು ಮೊದಲಿಗೆ ಹೂಳೆತ್ತುವ ಮೂಲಕ ಕೆರೆಗಳಿಗೆ ಕಾಯಕಲ್ಪ ನೀಡ್ತಿವೆ. ಹೀಗೆ ಹೂಳೆತ್ತಿರುವವರ ಪೈಕಿ ಇವತ್ತಿನ ಹಾವೇರಿಯ ರುದ್ರೇಶ್ ಸಹ ಒಬ್ರು.

    ವಿಶಾಲವಾದ ಕೆರೆಯಲ್ಲಿ ಬೆಳೆದಿರೋ ಮುಳ್ಳು-ಕಂಟಿಗಳು. ಹೂಳು ತೆಗೆಯುತ್ತಿರೋ ಜೆಸಿಬಿಗಳು. ಜೊತೆಗೆ ಕೆರೆಯನ್ನ ತೋರಿಸ್ತಿರೋ ಇವರೇ ಇವತ್ತಿನ ಪಬ್ಲಿಕ್ ಹೀರೋ. ಹೆಸರು ರುದ್ರೇಶ್ ಚಿನ್ನಣ್ಣವರ್. ಹಾವೇರಿ ತಾಲೂಕಿನ ಚಿಕ್ಕಲಿಂಗದಹಳ್ಳಿ ಗ್ರಾಮದ ರುದ್ರೇಶ್ ಎಂಎಸ್‍ಡಬ್ಯೂ ಓದಿದ್ದು, ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಸ್ವಂತ ಹಣ ಹಾಗೂ ಗ್ರಾಮಸ್ಥರ ಸಹಾಯ ಪಡೆದು ಹೂಳು ಹಾಗೂ ಮುಳ್ಳು-ಕಂಟಿಗಳನ್ನ ತೆಗೆಸಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ 32 ಎಕರೆ ಕೆರೆಯಲ್ಲಿ ಹೂಳು ಹಾಗೂ ಹೆಚ್ಚು ಮುಳ್ಳು ಕಂಟಿ ಬೆಳೆದು ಕೆರೆಯಲ್ಲಿ ನೀರು ನಿಲ್ಲುತ್ತಿರಲಿಲ್ಲ. ಗ್ರಾಮದ ಜನರ ಹಾಗೂ ರೈತರ ಜೊತೆಗೆ ಸಭೆ ಮಾಡಿ ರುದ್ರೇಶ್ ಅವರು 20 ದಿನಗಳಿಂದ ಕೆರೆಗೆ ಕಾಯಕಲ್ಪ ನೀಡಿದ್ದಾರೆ. ಇದಕ್ಕಾಗಿ 2 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ತುಂಗಾ ಮೇಲ್ದಂಡೆ ಕಾಲುವೆ ಮುಖಾಂತರ ಕೆರೆಗೆ ನೀರು ತರುವ ಭರವಸೆ ನೀಡಿದ್ದಾರೆ ರುದ್ರೇಶ್.

    https://www.youtube.com/watch?v=-rUSJLtifXk