Tag: ಹೃದಯ ಸ್ತಂಭನ

  • ಹೃದಯ ಶಸ್ತ್ರಚಿಕಿತ್ಸಕನಿಗೇ ಹೃದಯ ಸ್ತಂಭನ; ಆಸ್ಪತ್ರೆಯಲ್ಲಿ ರೌಂಡ್ಸ್‌ನಲ್ಲಿದ್ದಾಗ ಕುಸಿದುಬಿದ್ದು ಸಾವು

    ಹೃದಯ ಶಸ್ತ್ರಚಿಕಿತ್ಸಕನಿಗೇ ಹೃದಯ ಸ್ತಂಭನ; ಆಸ್ಪತ್ರೆಯಲ್ಲಿ ರೌಂಡ್ಸ್‌ನಲ್ಲಿದ್ದಾಗ ಕುಸಿದುಬಿದ್ದು ಸಾವು

    – ಆಸ್ಪತ್ರೆಯಲ್ಲಿದ್ದರೂ ಉಳಿಯದ 39 ವಯಸ್ಸಿನ ಡಾಕ್ಟರ್‌ ಜೀವ

    ಚೆನ್ನೈ: ಹೃದಯ ಶಸ್ತ್ರಚಿಕಿತ್ಸಕ ಆಸ್ಪತ್ರೆಯಲ್ಲಿ ರೌಂಡ್ಸ್‌ ಹಾಕುತ್ತಿದ್ದಾಗಲೇ ಹೃದಯ ಸ್ತಂಭನದಿಂದ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 39 ವಯಸ್ಸಿನ ವೈದ್ಯನ ದುರಂತ ಸಾವು ದೇಶಾದ್ಯಂತ ಅಘಾತವನ್ನು ಸೃಷ್ಟಿಸಿದೆ.

    ಹೃದಯ ಶಸ್ತ್ರಚಿಕಿತ್ಸಕ ಡಾ. ಗ್ರಾಡ್ಲಿನ್ ರಾಯ್ (39) ಅವರು ಹೃದಯ ಶಸ್ತ್ರಚಿಕಿತ್ಸಕರಾಗಿದ್ದರು. ಭಾರಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.

    ಡಾ. ಗ್ರಾಡ್ಲಿನ್‌ ರಾಯ್‌ ಅವರು ವಾರ್ಡ್‌ನಲ್ಲಿ ರೌಂಡ್ಸ್‌ ಹಾಕುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣ ಅವರನ್ನು ಸಹೋದ್ಯೋಗಿಗಳು ಪರೀಕ್ಷೆಗೆ ಒಳಪಡಿಸಿದರು. ಸಿಪಿಆರ್‌ ಮಾಡಿದರು. ಆಂಜಿಯೋಪ್ಲಾಸ್ಟಿ ಕೂಡ ಮಾಡಿದರು. ಇಂಟ್ರಾ-ಆರ್ಟಿಕ್‌ ಬಲೂನ್‌ ಪಂಪ್‌, ಇಸಿಎಂಒ ಕೂಡ ಮಾಡಲಾಯಿತು. ಆದರೆ, 100% ಎಡ ಮೇನ್‌ ಆರ್ಟರಿ ಅಡಚಣೆಯಿಂದಾಗಿ ಹೃದಯ ಸ್ತಂಭನ ಆಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ವೈದ್ಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

    ಸಹೋದ್ಯೋಗಿಯ ನಿಧನಕ್ಕೆ ಡಾ. ಸುಧೀರ್‌ ಕುಮಾರ್‌ ಸಂತಾಪ ಸೂಚಿಸಿದ್ದಾರೆ. ದೀರ್ಘ-ಅನಿಯಮಿತ ಕೆಲಸದ ಸಮಯ, ಅನಾರೋಗ್ಯಕರ ಆಹಾರ ಪದ್ಧತಿ, ಜಡ ಜೀವನಶೈಲಿ, ಮಾನಸಿಕ ಹೊರೆ, ಅಧಿಕ ಒತ್ತಡ, ಧೂಮಪಾನ ಮತ್ತು ಮದ್ಯಪಾನವು ವೈದ್ಯಕೀಯ ವೃತ್ತಿಪರರಿಗೆ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ಕುಮಾರ್‌ ಅವರು ಪೋಸ್ಟ್‌ ಮೂಲಕ ಹಂಚಿಕೊಂಡಿದ್ದಾರೆ.

    ವೈದ್ಯರು ಹೃದಯ ಆರೋಗ್ಯಕ್ಕೆ ಪೂರಕವಾಗಿ ತಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಇತರರ ಹೃದಯಗಳನ್ನು ಉಳಿಸಲು ತಮ್ಮ ಜೀವನವನ್ನು ಮುಡಿಪಾಗಿಡುವವರು ಹೆಚ್ಚಾಗಿ ತಮ್ಮದೇ ಆದ ಹೃದಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಕುಮಾರ್‌ ಅವರು ತಿಳಿಸಿದ್ದಾರೆ.

  • ಮಂತ್ರಾಲಯ | ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಸಾವು

    ಮಂತ್ರಾಲಯ | ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಸಾವು

    ರಾಯಚೂರು: ಜ.21ರಂದು ಸಿಂಧನೂರು (Sindhanur) ಬಳಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯ (Mantralya) ರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಇಂದು ಮುಂಜಾನೆ ಹೃದಯ ಸ್ತಂಭನದಿಂದ (Cardiac Arrest) ಮೃತಪಟ್ಟಿದ್ದಾನೆ.

    ಜಯಸಿಂಹ (23) ಮೃತ ವಿದ್ಯಾರ್ಥಿ. ಈತ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 23 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಸಿಂದನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ ತೀವ್ರ ಗಾಯಗಳಾಗಿದ್ದವು. ಇದನ್ನೂ ಓದಿ: Fashion | ಕಪಲ್ ರಿಂಗ್ ಗಿಫ್ಟ್‌ ಕೊಟ್ಟು ಪ್ರೇಮಿಗಳ ದಿನ ಆಚರಿಸಿ

    ಜನವರಿ 21ರಂದು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಗೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದರು. 10 ಜನರಿಗೆ ಗಾಯಗಳಾಗಿದ್ದವು. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ

  • ಚಾಲಕನಿಗೆ ಹೃದಯ ಸ್ತಂಭನ- ಸಾಯೋ ಮೊದ್ಲು 48 ಪ್ರಯಾಣಿಕರ ರಕ್ಷಿಸಿದ ಬಸ್ ಚಾಲಕ

    ಚಾಲಕನಿಗೆ ಹೃದಯ ಸ್ತಂಭನ- ಸಾಯೋ ಮೊದ್ಲು 48 ಪ್ರಯಾಣಿಕರ ರಕ್ಷಿಸಿದ ಬಸ್ ಚಾಲಕ

    ಭುವನೇಶ್ವರ: ಬಸ್ ಚಲಾಯಿಸುತ್ತಿದ್ದ ಸಂದರ್ಭ ಚಾಲಕ (Driver) ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿದ್ದು, ಕೊನೆಯುಸಿರೆಳೆಯುವ ಮೊದಲು ಬಸ್‌ನಲ್ಲಿದ್ದ 48 ಪ್ರಯಾಣಿಕರ (Passengers) ಪ್ರಾಣ ಉಳಿಸಿದ ಘಟನೆ ಒಡಿಶಾದ (Odisha) ಭುವನೇಶ್ವರದಲ್ಲಿ (Bhubaneswar) ನಡೆದಿದೆ.

    ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಚಾಲಕನನ್ನು ಸನಾ ಪ್ರಧಾನ್ ಎಂದು ಗುರುತಿಸಲಾಗಿದ್ದು, ಬಸ್ ಚಾಲನೆ ಮಾಡುವಾಗ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಸ್ಟೇರಿಂಗ್‌ನ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ. ಈ ವೇಳೆ ಬಸ್ ಅನ್ನು ರಸ್ತೆ ಬದಿಯ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದು ನಿಲ್ಲಿಸುವ ಮೂಲಕ ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟ – ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

    ಖಾಸಗಿ ಬಸ್ ‘ಮಾ ಲಕ್ಷ್ಮಿ’ ಸಾಮಾನ್ಯವಾಗಿ ಪ್ರತಿ ರಾತ್ರಿ ಕಂಧಮಾಲ್‌ನ ಸಾರಂಗರ್‌ನಿಂದ ಜಿ ಉದಯಗಿರಿ ಮೂಲಕ ರಾಜ್ಯದ ರಾಜಧಾನಿ ಭುವನೇಶ್ವರಕ್ಕೆ ಚಲಿಸುತ್ತದೆ. ಘಟನೆಯ ಬಳಿಕ ಚಾಲಕನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿನ ವೈದ್ಯರು ಹೃದಯ ಸ್ತಂಭನದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಇದನ್ನೂ ಓದಿ: ಕಳ್ಳತನಕ್ಕೆ ಯತ್ನ – ಮಹಿಳೆಗೆ ಗುಂಡು ಹಾರಿಸಿ ಹತ್ಯೆ

    ಮರಣೋತ್ತರ ಪರೀಕ್ಷೆಯ ನಂತರ ಪ್ರಧಾನ್ ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆಯನ್ನೂ ಆರಂಭಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದರೋಡೆ, ಅತ್ಯಾಚಾರ, ಜೈಲಿಗೆ ಹೋಗೋದ್ರಲ್ಲಿ ಮುಸ್ಲಿಮರೇ ನಂ.1- ವಿವಾದಕ್ಕೀಡಾದ ಅಜ್ಮಲ್ ಹೇಳಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪುಟಿನ್‌ಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ – ಕ್ರೆಮ್ಲಿನ್‌ ಸ್ಪಷ್ಟನೆ

    ಪುಟಿನ್‌ಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ – ಕ್ರೆಮ್ಲಿನ್‌ ಸ್ಪಷ್ಟನೆ

    ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಪುಟಿನ್‌ ದೇಹವನ್ನು ಡಬಲ್‌ ಮಾಡಲಾಗಿದೆ ಎಂಬ ಆರೋಪಗಳನ್ನು ಕ್ರೆಮ್ಲಿನ್‌ (Kremlin) ತಳ್ಳಿಹಾಕಿದ್ದು, ಪುಟಿನ್‌ ಆರೋಗ್ಯವಾಗಿದ್ದಾರೆ ಎಂದು ಹೇಳಿದೆ.

    ಭಾನುವಾರ ಸಂಜೆ ಪುಟಿನ್‌ ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿರುವುದಾಗಿ SVR ಟೆಲಿಗ್ರಾಮ್ ಚಾನೆಲ್‌ ವರದಿ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕ್ರೆಮ್ಲಿನ್‌ ವಕ್ತಾರ ಪೆಸ್ಕೋವ್‌, ಪುಟಿನ್‌ ಆರೋಗ್ಯವಾಗಿದ್ದಾರೆ, ಬಾಡಿ ಡಬಲ್‌ ಮಾಡಲಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು

    ಪುಟಿನ್‌ ಹೃದಯ ಸ್ತಂಭನಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವುದು ಶುದ್ಧ ಸುಳ್ಳು. ಇದಕ್ಕೆ ನಗಬೇಕೋ ಅಳಬೇಕೋ ಎಂಬುದೇ ತಿಳಿಯುತ್ತಿಲ್ಲ. ಬೇರೆ ಯಾವುದೇ ಪ್ರತಿಕ್ರಿಯೆ ಕೊಡಲು ನನ್ನಿಂದ ಸಾಧ್ಯವಿಲ್ಲ ಎಂದು ಕ್ರೆಮ್ಲಿನ್‌ ವಕ್ತಾರ ಪೆಸ್ಕೋವ್‌ ಹೇಳಿದ್ದಾರೆ. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?

    ಪುಟಿನ್‌ ಅಕ್ಟೋಬರ್‌ 7ರಂದು 71ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ನಿರಂತರವಾಗಿ ಸಾರ್ವಜನಿಕ ಸಭೆಗಳು ಹಾಗೂ ನಿಗದಿತ ವೇಳಾಪಟ್ಟಿಯಂತೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅವುಗಳಲ್ಲಿ ಹಲವು ಕಾರ್ಯಕ್ರಮಗಳು ಟಿವಿಗಳಲ್ಲಿ ಪ್ರಸಾರವಾಗುತ್ತಿವೆ. ಇತ್ತೀಚೆಗೆ ಚೀನಾಗೆ ಭೇಟಿ ನೀಡಿ ಬರುತ್ತಿದ್ದಾಗಲೂ ರಷ್ಯಾದ ಎರಡು ನಗರಗಳಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿಯೂ ನಡೆದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎಂದು ಪುಟಿನ್‌ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಹೃದಯ ಸ್ತಂಭನ – ಭದ್ರತಾ ಸಿಬ್ಬಂದಿ ಹೇಳಿದ್ದೇನು?

    ಎಸ್‌ವಿಆರ್ ವರದಿ ಮಾಡಿದ್ದೇನು?
    ಭಾನುವಾರ ಸಂಜೆ ವ್ಲಾಡಿಮಿರ್‌ ಪುಟಿನ್‌ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ವ್ಲಾಡಿಮಿರ್ ಪುಟಿನ್ ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ತನ್ನ ಮಲಗುವ ಕೋಣೆಯಲ್ಲೇ ನೆಲದ ಮೇಲೆ ಆಹಾರ ಮತ್ತು ಪಾನೀಯಗಳೊಂದಿಗೆ ಮಗುಚಿಕೊಂಡಿದ್ದ ಟೇಬಲ್ ಪಕ್ಕದಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಪುಟಿನ್ ಬಿದ್ದಾಗ, ಟೇಬಲ್ ಮತ್ತು ಅದರ ಮೇಲಿದ್ದ ಆಹಾರ, ಡ್ರಿಂಕ್ಸ್ ಬಾಟಲಿಗಳು ಟೇಬಲ್‌ನಿಂದ ಕೆಳಗೆ ಬಿದ್ದಿದ್ದವು. ಅದರಿಂದ ದೊಡ್ಡ ಶಬ್ಧ ಉಂಟಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಅಲ್ಲಿಗೆ ಧಾವಿಸಿದಾಗ ಪುಟಿನ್ ನೆಲದ ಮೇಲೆ ಬಿದ್ದು, ನೋವಿನಿಂದ ನರಳುತ್ತಿರುವುದು ಕಂಡುಬಂದಿತ್ತು. ಕೂಡಲೇ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಕಾರ್ಯಪ್ರವೃತ್ತರಾಗಿ ತುರ್ತು ಚಿಕಿತ್ಸೆ ನೀಡಿದ್ದರು. ನಂತರ ಪುಟಿನ್‌ರನ್ನ ಅವರ ನಿವಾಸದಲ್ಲೇ ವಿಶೇಷವಾಗಿ ಸುಸಜ್ಜಿತ ಕೋಣೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿರುವ ವಿಶೇಷ ಐಸಿಯು ಘಟಕಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಪ್ರಥಮ ಚಿಕಿತ್ಸೆ ನೀಡಿದ್ದರಿಂದಾಗಿ ಮತ್ತೆ ಅವರ ಹೃದಯ ಆರೋಗ್ಯ ಸ್ಥಿತಿಗೆ ಬಂದಿದೆ ಎಂದು ಟೆಲಿಗ್ರಾಮ್ ಚಾನೆಲ್ ವರದಿ ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಹೃದಯ ಸ್ತಂಭನ – ಭದ್ರತಾ ಸಿಬ್ಬಂದಿ ಹೇಳಿದ್ದೇನು?

    ಮಾಸ್ಕೋ: ಕಳೆದ ವರ್ಷದಿಂದ ಉಕ್ರೇನ್‌ ವಿರುದ್ಧ ಯುದ್ಧ (Ukraine War) ಸಾರಿದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಆರೋಗ್ಯ ವಿಚಾರ ನಿರಂತರ ಚರ್ಚೆಯಲ್ಲಿದೆ. ಈ ನಡುವೆ ಪುಟಿನ್‌ ಭಾನುವಾರ ಸಂಜೆ ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿರುವುದು ಕಂಡುಬಂದಿದೆ ಎಂದು ಟೆಲಿಗ್ರಾಮ್ ಚಾನೆಲ್ ‘ಜನರಲ್ SVR’ ಅನ್ನು ಉಲ್ಲೇಖಿಸಿ ವರದಿಯಾಗಿದೆ. ಜನರಲ್ ಎಸ್‌ವಿಆರ್ ಟೆಲಿಗ್ರಾಮ್‌ ಚಾಲನೆಲ್‌ ಅನ್ನು ಕ್ರೆಮ್ಲಿನ್‌ನ್‌ ನಿವೃತ್ತ ಅಧಿಕಾರಿಗಳು ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಮಾಹಿತಿ ಪ್ರಕಾರ, ವ್ಲಾಡಿಮಿರ್‌ ಪುಟಿನ್ ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ತನ್ನ ಮಲಗುವ ಕೋಣೆಯಲ್ಲೇ ನೆಲದ ಮೇಲೆ ಆಹಾರ ಮತ್ತು ಪಾನೀಯಗಳೊಂದಿಗೆ ಮಗುಚಿಕೊಂಡಿದ್ದ ಟೇಬಲ್‌ ಪಕ್ಕದಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು ಎಂದು ಪುಟಿನ್‌ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ – ಪುಟಿನ್‌ ಆರೋಗ್ಯದಲ್ಲಿ ಬಿಗ್‌ ಅಪ್ಡೇಟ್ಸ್‌

    ಬಿದ್ದು ಹೊರಳಾಡುತ್ತಿದ್ದ ಪುಟಿನ್‌: ಬಹುಶಃ, ಪುಟಿನ್‌ ಬಿದ್ದಾಗ, ಟೇಬಲ್ ಮತ್ತು ಅದರ ಮೇಲಿದ್ದ ಆಹಾರ, ಡ್ರಿಂಕ್ಸ್‌ ಬಾಟಲಿಗಳು ಟೇಬಲ್‌ನಿಂದ ಕೆಳಗೆ ಬಿದ್ದಿದ್ದವು. ಅದರಿಂದ ದೊಡ್ಡ ಶಬ್ಧ ಉಂಟಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಅಲ್ಲಿಗೆ ಧಾವಿಸಿದಾಗ ಪುಟಿನ್ ನೆಲದ ಮೇಲೆ ಬಿದ್ದು, ನೋವಿನಿಂದ ನರಳುತ್ತಿರುವುದು ಕಂಡುಬಂದಿತು. ಕೂಡಲೇ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು (Putin Doctors) ಕಾರ್ಯಪ್ರವೃತ್ತರಾಗಿ ತುರ್ತು ಚಿಕಿತ್ಸೆ ನೀಡಿದರು. ನಂತರ ಪುಟಿನ್‌ರನ್ನ ಅವರ ನಿವಾಸದಲ್ಲೇ ವಿಶೇಷವಾಗಿ ಸುಸಜ್ಜಿತ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿರುವ ವಿಶೇಷ ಐಸಿಯು ಘಟಕಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಪ್ರಥಮ ಚಿಕಿತ್ಸೆ ನೀಡಿದ್ದರಿಂದಾಗಿ ಮತ್ತೆ ಅವರ ಹೃದಯ ಆರೋಗ್ಯ ಸ್ಥಿತಿಗೆ ಬಂದಿದೆ ಎಂದು ಟೆಲಿಗ್ರಾಮ್‌ ಚಾನೆಲ್‌ ವರದಿ ಮಾಡಿದೆ. ಇದನ್ನೂ ಓದಿ: ಪುಟಿನ್‌ಗೆ ಅಡುಗೆ ಭಟ್ಟನಾಗಿದ್ದ ಪ್ರಿಗೋಜಿನ್ – ರಷ್ಯಾ ಅಧ್ಯಕ್ಷನ ವಿರುದ್ಧವೇ ತಿರುಗಿ ಬಿದ್ದದ್ದು ಯಾಕೆ?

    ಸದ್ಯ ಮೂಲಗಳು ವ್ಲಾಡಿಮಿರ್ ಪುಟಿನ್ ಪ್ರತಿರೂಪ ಸಭೆ ಸಮಾರಂಭದಲ್ಲಿ ಸಕ್ರಿಯವಾಗಿದ್ದಾರೆ ಎಂದು ಹೇಳುತ್ತಿವೆ. ಕಳೆದ ವರ್ಷ ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿನಿಂದ, ಪುಟಿನ್ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಕ್ರೆಮ್ಲಿನ್‌ ಮತ್ತೆ ಮತ್ತೆ ಪುಟಿನ್‌ ಆರೋಗ್ಯವಾಗಿದ್ದಾರೆ ಎಂಬುದನ್ನು ಒತ್ತಿ ಹೇಳುತ್ತಿದೆ. ಇದನ್ನೂ ಓದಿ: ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಬ್ಬದ ಸಂಭ್ರಮಕ್ಕೆ ಮಾರ್ಕೆಟ್‍ನಲ್ಲಿದ್ದ 100ಕ್ಕೂ ಅಧಿಕ ಮಂದಿಗೆ ಹೃದಯ ಸ್ತಂಭನ

    ಹಬ್ಬದ ಸಂಭ್ರಮಕ್ಕೆ ಮಾರ್ಕೆಟ್‍ನಲ್ಲಿದ್ದ 100ಕ್ಕೂ ಅಧಿಕ ಮಂದಿಗೆ ಹೃದಯ ಸ್ತಂಭನ

    ಸಿಯೋಲ್: ಹಬ್ಬದ ಸಂಭ್ರಮಕ್ಕೆಂದು ಮಾರ್ಕೆಟ್‍ನಲ್ಲಿ (Market) ಸೇರಿದ್ದ 100ಕ್ಕೂ ಹೆಚ್ಚು ಮಂದಿ ಏಕಾಏಕಿ ಹೃದಯ ಸ್ತಂಭನದಿಂದ (Cardiac Arrest) ಕುಸಿದು ಬಿದ್ದ ಘಟನೆ ದಕ್ಷಿಣ ಕೊರಿಯಾದ (South Korea) ರಾಜಧಾನಿ ಸಿಯೋಲ್‍ನಲ್ಲಿ (Seoul) ಇಂದು ರಾತ್ರಿ ನಡೆದಿದೆ.

    ದಕ್ಷಿಣ ಕೊರಿಯಾದಲ್ಲಿ ಹ್ಯಾಲೋವೀನ್ ಹಬ್ಬದ (Halloween festivities) ಸಂಭ್ರಮದ ಖರೀದಿಗಾಗಿ ಜನ ಸಿಯೋಲ್‍ನ ಮಾರುಕಟ್ಟೆಯೊಂದರಲ್ಲಿ ಸೇರಿದ್ದರು. ಒಂದು ಲಕ್ಷಕ್ಕೂ ಅಧಿಕ ಮಂದಿ ಮಾರುಕಟ್ಟೆಯಲ್ಲಿದ್ದರು. ಈ ವೇಳೆ ನೂರಾರು ಮಂದಿ ಏಕಾಏಕಿ ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಿರುವ ವೀಡಿಯೋ ಸ್ಥಳೀಯ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮೋದಿ ಹೆಬ್ಬುಲಿ, ಅಮಿತ್ ಶಾ ಹುಲಿ, ಇವರೊಂದಿಗೆ ಹೆಜ್ಜೆ ಹಾಕೋ ಮತ್ತೊಂದು ಹುಲಿ ಪ್ರಹ್ಲಾದ್ ಜೋಶಿ: ಜಗ್ಗೇಶ್

    ಕಳೆದರಡು ವರ್ಷಗಳಿಂದ ಕೊರೊನಾದಿಂದಾಗಿ (Corona) ದಕ್ಷಿಣ ಕೊರಿಯಾದಲ್ಲಿ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬವನ್ನು ಈ ವರ್ಷ ಆಚರಿಸಲು ಸರ್ಕಾರ ಅವಕಾಶ ನೀಡಿದೆ. ಹಾಗಾಗಿ ಜನ ಹಬ್ಬದ ಖರೀದಿಗಾಗಿ ಮಾರ್ಕೆಟ್‍ನಲ್ಲಿ ಸೇರಿದ್ದಾರೆ. ಈ ವೇಳೆ ಏಕಾಏಕಿ ಹಲವು ಮಂದಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದವರಿಗೆ ಹೃದಯ ಸ್ತಂಭನವಾಗಿದ್ದು, 81 ಮಂದಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ `ಮೋದಿ-ಮೋದಿ’, `AAP ನಾಯಕರು ಚೋರ್-ಚೋರ್’ ಘೋಷಣೆ

    ಹೃದಯ ಸ್ತಂಭನಕ್ಕೆ ಒಳಗಾದವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮದುವೆಗಾಗಿ ಕೂದಲು ಕಸಿ ಮಾಡಿಸಿಕೊಂಡು ಮಸಣ ಸೇರಿದ

    ಮದುವೆಗಾಗಿ ಕೂದಲು ಕಸಿ ಮಾಡಿಸಿಕೊಂಡು ಮಸಣ ಸೇರಿದ

    ಪಾಟ್ನಾ: ಮದುವೆಗಾಗಿ ಕೂದಲು ಕಸಿ ಮಾಡಿಕೊಂಡವ ಮರುದಿನವೇ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

    ಮನೋರಂಜನ್ ಪಾಸ್ವಾನ್ ಮೃತನಾಗಿದ್ದಾನೆ. ಈತ ಬಿಹಾರ ಮಿಲಿಟರಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದನು. ಕೂದಲು ಕಸಿಗೆ ಒಳಗಾಗಿದ್ದ ಈತ ಔಷಧದ ಪರಿಣಾಮದಿಂದ ಕಸಿ ಮಾಡಿಕೊಂಡ ಒಂದೇ ದಿನದಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ.

    ನಡೆದಿದ್ದೇನು?: ಮನೋರಂಜನ್‍ಗೆ ಮೇ 11 ರಂದು ಈ ವ್ಯಕ್ತಿಯ ಮದುವೆ ನಿಶ್ಚಯವಾಗಿತ್ತು. ಕೂದಲು ಕಸಿ ಮಾಡಿಸಿಕೊಳ್ಳುವ ಸಲುವಾಗಿ ಪಾಟ್ನಾಗೆಹೀಗಿದ್ದನು. ಖಾಸಗಿ ಕ್ಲಿನಿಕ್‍ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಕೂದಲು ಕಸಿಗೆ ಒಳಗಾಗಿದ್ದನು. ಕಸಿ ನಂತರ ಚರ್ಮದ ತುರಿಕೆಯ ಅನುಭವ ಹೇಳಿಕೊಂಡಿದ್ದನು. ಪಾಸ್ವಾನ್ ಸ್ನೇಹಿತ ಕಮಲ್ ಕುಮಾರ್ ಮರುದಿನ ಕ್ಲಿನಿಕ್‍ಗೆ ಕರೆದೊಯ್ದಿದ್ದರು. ಪಾಸ್ವಾನ್ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಬೋಳು ತಲೆ ಇರೋದು ಮುಚ್ಚಿಟ್ಟು ಮದ್ವೆಯಾದ ಪತಿಯ ವಿರುದ್ಧ ದೂರು

    ನಂತರ ಕ್ಲಿನಿಕ್ ಸಿಬ್ಬಂದಿ ಪಾಸ್ವಾನ್‍ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಐಸಿಯುನಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಪ್ಲಾಸ್ಟಿಕ್ ಸರ್ಜನ್, ಕಾರ್ಡಿಯಾಕ್ ಸರ್ಜನ್, ಇಂಟರ್ನಲ್ ಮೆಡಿಸಿನ್ ಮತ್ತು ಐಸಿಯು ತಜ್ಞರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಒಂದು ಗಂಟೆಯ ನಂತರ ಪಾಸ್ವಾನ್ ಸಾವನ್ನಪ್ಪಿದ್ದಾನೆ. ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ವೇಳೆ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

    ಔಷಧಿಯ ಪ್ರತಿಕ್ರಿಯೆಯಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ. ಮೃತರ ಕುಟುಂಬ ಸದಸ್ಯರು ಲಿಖಿತ ದೂರು ನೀಡಿದ್ದಾರೆ ಮತ್ತು ನಾವು ಈ ಪ್ರಕರಣವನ್ನು ತನಿಖೆ ಮಾಡಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

  • ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

    ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

    ಕೋಲ್ಕತ್ತಾ: ಹಿರಿಯ ಗಾಯಕಿ ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ, ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ನಿಧನರಾಗಿದ್ದಾರೆ. ಸಂಧ್ಯಾ ಮುಖರ್ಜಿ ಇಂದು ಸಂಜೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಅವರು ದಾಖಲಾಗಿದ್ದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಕೋವಿಡ್ -19 ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಹೃದಯದ ಕಾಯಿಲೆ, ಬಹು-ಅಂಗಾಂಗಗಳ ವೈಫಲ್ಯ ಮೂಳೆಯಲ್ಲಿ ಮುರಿತವಾಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇದನ್ನೂ ಓದಿ: ಕೈ, ಕಾಲು ಕಟ್ಟಿ ಹಾಕಿ ಸಿನಿಮೀಯ ರೀತಿಯಲ್ಲಿ ಮನೆಗಳ ದರೋಡೆ

    ಮುಖರ್ಜಿ ಅವರಿಗೆ 90 ವರ್ಷ ವಯಸ್ಸಾಗಿದ್ದು, ಅನಾರೋಗ್ಯದ ಕಾರಣ ಮುಖರ್ಜಿ ಜನವರಿ ಕೊನೆಯ ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ರಾತ್ರಿ 7.30ರ ಸುಮಾರಿಗೆ ತೀವ್ರ ಹೃದಯಾಘಾತಕ್ಕೆ ಒಳಗಾದರು, ನಂತರ ಅವರು ನಿಧನರಾದರು ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ವಿವಾದ – ಅಪ್ರಾಪ್ತ ಬಾಲಕಿಯರ ವೈಯಕ್ತಿಕ ವಿವರ ಟ್ವೀಟ್‌ ಮಾಡ್ತಿದೆ ಬಿಜೆಪಿ: ಶಿವಸೇನಾ ಸಂಸದೆ ತರಾಟೆ

    ಸಂಧ್ಯಾ ಮುಖರ್ಜಿಯವರು 2022-23ರ ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಇದು ಕಿರಿಯ ಕಲಾವಿದರಿಗೆ ಹೆಚ್ಚು ಅರ್ಹವಾಗಿದೆ ಮತ್ತು ತಮ್ಮಂತವರಿಗೆ ಅಲ್ಲ ಎಂದು ಹೇಳಿದ್ದರು. ದೇಶದ ನಾಗರಿಕ ನೀಡುವ ಅತ್ಯುನ್ನತ ಗೌರವವನ್ನು ನಿರಾಕರಿಸಿದ ಪಶ್ಚಿಮ ಬಂಗಾಳದ ಎರಡನೇ ವ್ಯಕ್ತಿಯಾಗಿದ್ದಾರೆ. ತನ್ನ ತಾಯಿ ಪದ್ಮಶ್ರೀ ಪುರಸ್ಕøತೆ ಎಂದು ಹೆಸರಿಸಲು ಇಚ್ಛಿಸುವುದಿಲ್ಲ ಮತ್ತು ತನ್ನ ವಯಸ್ಸಿನಲ್ಲಿ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವಮಾನ ಅನುಭವಿಸಿದೆ ಎಂದು ಮುಖರ್ಜಿ ಅವರ ಪುತ್ರಿ ಸೌಮಿ ಸೆನ್‍ಗುಪ್ತಾ ಅಧಿಕಾರಿಯೊಬ್ಬರಿಗೆ ಕರೆ ಮಾಡಿ ಹೇಳಿದ್ದರು.