Tag: ಹೆಚ್‌ಎಎಲ್ ವಿಮಾನ ನಿಲ್ದಾಣ

  • ಪಾದಚಾರಿಗಳ ಮೇಲೆ ಬಿದ್ದ ಶ್ರೀರಾಮನ ಕಟೌಟ್ – ಮೂವರು ಗಂಭೀರ

    ಪಾದಚಾರಿಗಳ ಮೇಲೆ ಬಿದ್ದ ಶ್ರೀರಾಮನ ಕಟೌಟ್ – ಮೂವರು ಗಂಭೀರ

    ಬೆಂಗಳೂರು: ಶ್ರೀರಾಮನ ಕಟೌಟ್ (CutOut) ಪಾದಚಾರಿಗಳ ಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಚ್‌ಎಎಲ್ (HAL) ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ.

    ಅಯೋಧ್ಯೆಯ ರಾಮಮಂದಿರ (RamMandir) ಉದ್ಘಾಟನೆ ಹಿನ್ನೆಲೆ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಭು ಶ್ರೀರಾಮನ ಬೃಹತ್ ಕಟೌಟ್‌ನ್ನು ಖಾಸಗಿ ಶಾಲೆಗೆ ಸೇರಿದ ಗೋಡೆಗೆ ಕಟೌಟ್ ಕಟ್ಟಲಾಗಿತ್ತು. ಕಾರ್ಯಕ್ರಮ ಮುಗಿದು 10 ದಿನಗಳಾದ್ರು ಕಟೌಟ್ ತೆರವುಗೊಳಿಸಿರಲಿಲ್ಲ. ಇದನ್ನೂ ಓದಿ: ಕೆಐಆರ್‌ಡಿಎಲ್ ಇಇ ಮನೆ ಮೇಲೆ ಲೋಕಾ ದಾಳಿ – ಆದಾಯಕ್ಕಿಂತಲೂ 165 ಪಟ್ಟು ಅಧಿಕ ಆಸ್ತಿ ಪತ್ತೆ

    ಮಧ್ಯಾಹ್ನ ಭೋಜನ ವಿರಾಮ ಆರಂಭವಾಗುವ ಕೆಲವು ನಿಮಿಷಗಳ ಹಿಂದಷ್ಟೇ ಶ್ರಿರಾಮನ ಬೃಹತ್ ಕಟೌಟ್ ಧಿಡೀರ್ ಅಂತ ನೆಲಕ್ಕುರುಳಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಆದರೆ ಅದೇ ಸಮಯದಲ್ಲಿ ಪುಟ್‌ಪಾತ್ ಮೇಲೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಕಟೌಟ್ ಬಿದಿದ್ದೆ. ಕಟೌಟ್ ಅಡಿ ಸಿಲುಕಿದ ಪಾದಚಾರಿಗಳನ್ನು ಕೂಡಲೇ ಸ್ಥಳೀಯರು ಹೊರ ಎಳೆದಿದ್ದಾರೆ. ಘಟನೆಯಲ್ಲಿ ಮೂರು ಮಂದಿಗೆ ಗಂಭೀರ ಗಾಯಗಳಾಗಿವೆ ಬಳಿಕೆ ಬಳಿಕ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಕಾರವಾರದಲ್ಲಿ ಒಂದೇ ದಿನ 8 ಮಂದಿಯಲ್ಲಿ ಮಂಗನಕಾಯಿಲೆ ಪತ್ತೆ

    ಕಟೌಟ್ ಅಳವಡಿಕೆ ವೇಳೆ ಸರಿಯಾದ ಸುರಕ್ಷತಾ ಕ್ರಮಕೈಗೊಳ್ಳದ ಹಿನ್ನೆಲೆ ಕಟೌಟ್ ನೆಲಕ್ಕುರುಳಿದೆ. ಸದ್ಯ ಕಟೌಟ್‌ಗೆ ಹಾಕಿದ್ದ ಮರವನ್ನೆಲ್ಲ ಒಂದೆಡೆ ತೆಗೆದು ಹಾಕಲಾಗಿದೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆ 5 ವರ್ಷಗಳ ಕಾಲ ಮುಂದುವರಿಯಲಿದೆ: ಡಿಕೆಶಿ

  • ಸಿಎಂ ಸಿದ್ದರಾಮಯ್ಯ ಇಂದು ಹಾವೇರಿ ಪ್ರವಾಸ

    ಸಿಎಂ ಸಿದ್ದರಾಮಯ್ಯ ಇಂದು ಹಾವೇರಿ ಪ್ರವಾಸ

    ಹಾವೇರಿ: ಕನಕ ಜಯಂತ್ಯೋತ್ಸವ (Kanaka Jayanthi) ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹಾವೇರಿ (Haveri) ಜಿಲ್ಲೆಗೆ ಭೇಟಿ ನೀಡಲಿದ್ದು, ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ.

    ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಯತ್ತ (Hubballi) ಸಿಎಂ ತೆರಳಲಿದ್ದು, ಹುಬ್ಬಳ್ಳಿಯಿಂದ 12:10ಕ್ಕೆ ಕಾಗಿನೆಲೆ (Kaginele) ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ನಂತರ 1:45ಕ್ಕೆ 536ನೇ ಕನಕ ಜಯಂತ್ಯೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 2 ಗಂಟೆಗೆ ಕದರಮಂಡಲಗಿ ಗ್ರಾಮದ ನೂತನ ಶಾಲಾ ಕಟ್ಟಡ ಉದ್ಘಾಟನೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಸುಮಾರು 3:30ಕ್ಕೆ ರಸ್ತೆ ಮಾರ್ಗವಾಗಿ ಕದರಮಂಡಲಗಿಯಿಂದ ಕಾಗಿನೆಲೆ ಹೆಲಿಪ್ಯಾಡ್ ಮೂಲಕ ಹುಬ್ಬಳ್ಳಿಯತ್ತ ತೆರಳಲಿದ್ದು, ಸಂಜೆ 4:45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಸಿಎಂ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರ ದುರ್ಮರಣ

    ಕಾಗಿನೆಲೆಗೆ ಸಿಎಂ ಭೇಟಿ ಹಿನ್ನೆಲೆ ಕಾಗಿನಲೆ ಗ್ರಾಮದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ನಿಯೋಜಿಸಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕನಕ ಜಯಂತ್ಯೋತ್ಸವ ಉದ್ಘಾಟನೆ ಮಾಡಲಿದ್ದು, ಕನಕದಾಸರ ನೆಲದಲ್ಲಿ ಬೃಹತ್ ಕನಕ ವೇದಿಕೆ ಸಜ್ಜಾಗಿದೆ. ವೇದಿಕೆ ಮುಂಭಾಗದಲ್ಲಿ ಸಾವಿರಾರು ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಅದ್ಧೂರಿ ಕನಕ ಜಯಂತ್ಯೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಅಹಿತಕರ ನಡೆಯದಂತೆ ಖಾಕಿ ಸರ್ಪಗಾವಲನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತದಿಂದ 700ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಭ್ರೂಣ ಪತ್ತೆ, ಹತ್ಯೆ ಪ್ರಕರಣ- ಆಲೆಮನೆ ಮಾಲೀಕನಿಂದ ಆಶಾ ಕಾರ್ಯಕರ್ತೆಗೆ ಬೆದರಿಕೆ