Tag: ಹೆಚ್ ಡಿ ಕುಮಾರಸ್ವಾಮಿ

  • ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಗೇಮ್ ಪ್ಲಾನ್-`ಕೈ’ಗೆ ಆಪರೇಷನ್!

    ಮೈಸೂರು: ಈ ಬಾರಿ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಸಖತ್ ಗೇಮ್ ಪ್ಲಾನ್ ಮಾಡಿದೆ. ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಟಿ.ದೇವೇಗೌಡ ಆಪರೇಷನ್ ಕಾಂಗ್ರೆಸ್ ಗೆ ಮುಂದಾಗಿದ್ದಾರೆ.

    ಈಗಾಗಲೇ ಸಿಎಂ ಸಿದ್ದರಾಮಯ್ಯರ ಆಪ್ತರಾಗಿದ್ದ ದಿ.ಕಂಪಿರಂಗೇಗೌಡ ಪುತ್ರ ಉಮಾಶಂಕರ್ ಸೇರಿದಂತೆ 25ಕ್ಕೂ ಹೆಚ್ಚು ಸ್ಥಳೀಯ ಪ್ರಬಲ ಕಾಂಗ್ರೆಸ್ ಮುಖಂಡರನ್ನು ಜೆಡಿಎಸ್ ನತ್ತ ಸೆಳೆಯುವಲ್ಲಿ ಜಿ.ಟಿ.ದೇವೇಗೌಡರು ಯಶ್ವಸಿಯಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಜಿ.ಟಿ.ದೇವೇಗೌಡರು ಸಿಎಂರನ್ನು ಸೋಲಿಸಲು ಎಲ್ಲ ರೀತಿಯಲ್ಲಿ ಸನ್ನದ್ಧರಾಗುತ್ತಿದ್ದಾರೆ.

    ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ 35ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರಲಿದ್ದಾರೆ ಎಂಬುದನ್ನು ಖಚಿತ ಪಡಿಸಿದ್ದಾರೆ. ಸಿದ್ದರಾಮಯ್ಯರ ಆಪ್ತರಲ್ಲಿ ಒಬ್ಬರಾಗಿದ್ದ ಕಂಪಿರಂಗೇಗೌಡರ ಪುತ್ರ ಉಮಾಶಂಕರ್ ಜೆಡಿಎಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್‍ಗೆ ಪರೋಕ್ಷವಾಗಿ ಭಾರೀ ಹೊಡೆತ ಬೀಳುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

  • ಡೀಲ್ ಮಾಡೋದ್ರಲ್ಲಿ ಸಿದ್ದರಾಮಯ್ಯ ಪರಿಣತಿ ಹೊಂದಿದ್ದಾರೆ: ಸಿಎಂಗೆ ಹೆಚ್‍ಡಿಕೆ ತಿರುಗೇಟು

    ಡೀಲ್ ಮಾಡೋದ್ರಲ್ಲಿ ಸಿದ್ದರಾಮಯ್ಯ ಪರಿಣತಿ ಹೊಂದಿದ್ದಾರೆ: ಸಿಎಂಗೆ ಹೆಚ್‍ಡಿಕೆ ತಿರುಗೇಟು

    ತುಮಕೂರು: ಸಿಎಂ ಸಿದ್ದರಾಮಯ್ಯರ ಮಾತಿಗೆ ನನ್ನ ಸಹಮತವಿದೆ. ಅಧಿಕಾರಗಳ ಜೊತೆ ಡೀಲ್ ಮಾಡಿಕೊಳ್ಳುವುದು ಸಿದ್ದರಾಮಯ್ಯರಿಗೆ ಮಾತ್ರ ಕರಗತ. ನಾವು ಆ ಜಾಯಮಾನದಿಂದ ಬಂದವರಲ್ಲ. ಸಿಎಂ ಹೇಳಿರೊದ್ರಲ್ಲಿ ಯಾವುದೇ ತಪ್ಪಿಲ್ಲ ಅಂತಾ ಪರೋಕ್ಷವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಅಧಿಕಾರಿಗಳ ಜೊತೆ ಡೀಲ್ ಮಾಡಿಕೊಳ್ಳುವುದು, ಕಿಕ್ ಬ್ಯಾಕ್ ಗಳ ವ್ಯವಹಾರ, ಹೇಗೆ ರುಜು ಹಾಕಿಕೊಳ್ಳಬೇಕು ಎಂಬ ವಿಷಯದಲ್ಲಿ ಸಿದ್ದರಾಮಯ್ಯ ಪರಿಣತಿ ಹೊಂದಿದ್ದಾರೆ. ಪರಿಣತಿ ಹೊಂದಿದವರಿಗೆ ನಾವು ಒಳ್ಳೆಯ ಕೆಲಸ ಮಾಡಿ ಅಂತಾ ಹೇಳಿಕೊಡಲಾಗುವುದಿಲ್ಲ. ಸಿದ್ದರಾಮಯ್ಯ ಇರುವುದೇ ಈ ರಾಜ್ಯ ಲೂಟಿ ಮಾಡೋದಕ್ಕೆ ಅನ್ನೋದು ಅಂಕಿ ಅಂಶಗಳಿಂದ ಸಾಬೀತಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರಯವ ಬಗ್ಗೆ ಪತ್ರಿಕೆಯೊಂದು ಬಹಿರಂಂಗ ಪಡಿಸಿದೆ ಅಂತಾ ಕಳವಳ ವ್ಯಕ್ತಪಡಿಸಿದ್ರು.

    ರಾಜ್ಯದ ಬೊಕ್ಕಸ ದಿವಾಳಿ ಮಾಡಿ ಹೋಗುತ್ತಿದ್ದಾರೆ. ಸಿದ್ದರಾಮಯ್ಯನವರ ದುರಂಹಕಾರ, ಗರ್ವ, ದುಡ್ಡಿನ ಮದ ಅವರನ್ನ ಈ ರೀತಿ ಮಾತನಾಡಿಸ್ತಿದೆ. ಹಾಗಾಗಿ ನಾನು ಸಿದ್ದರಾಮಯ್ಯರಿಗೆ ದುಡ್ಡು ಹೊಡೆಯೋ ಕೆಲಸದಲ್ಲಿ ಪಾಠ ಹೇಳಿಕೊಡುವ ದೊಡ್ಡ ವ್ಯಕ್ತಿಯಲ್ಲ. ಆರೋಗ್ಯ ಸಚಿವರೇ ವಿಧಾನ ಸಭೆಯಲ್ಲಿ ಹೇಳಿದ್ರು ಲಂಚ ತಗೋಳೊದು ತಪ್ಪಿಲ್ಲ ಎಂದು ದುಡ್ಡು ಹೊಡೆಯೋದನ್ನ ನಾವು ಕಲ್ತಿದ್ದೇವೆ ನೀವೂ ಕಲಿತುಕೊಳ್ಳಿ ಎಂದು ವಿಧಾನ ಸಭೆಯಲ್ಲಿ ಪಾಠ ಮಾಡಿದ್ದಾರೆ ಅಂತಾ ಅಂದ್ರು.

    ವೃದ್ದಾಪ್ಯ ಮತ್ತು ವಿಧವಾ ವೇತನವನ್ನು ನೀಡುವುದನ್ನು ನಿಲ್ಲಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಚುನಾವಣೆಗೆ ದುಡ್ಡು ಮಾಡಿಕೊಳ್ಳುತ್ತಿದ್ದಾರೆ ಅಂತಾ ಹೆಚ್‍ಡಿಕೆ ಆರೋಪಿಸಿದ್ರು.