Tag: ಹೆಚ್.ಡಿ.ದೇವೇಗೌಡರು

  • ಮೋದಿ ಅವಧಿಯಲ್ಲಿ ರೈಲ್ವೆ ವಲಯ ಭಾರೀ ಅಭಿವೃದ್ಧಿ ಹೊಂದಿದೆ: ಹೆಚ್‍ಡಿಡಿ

    ಮೋದಿ ಅವಧಿಯಲ್ಲಿ ರೈಲ್ವೆ ವಲಯ ಭಾರೀ ಅಭಿವೃದ್ಧಿ ಹೊಂದಿದೆ: ಹೆಚ್‍ಡಿಡಿ

    – ರೈಲ್ವೆಗೆ ಮೈಸೂರು ಮಹಾರಾಜರ ಕೊಡುಗೆ ಸ್ಮರಣೆ

    ನವದೆಹಲಿ: ಭಾರತೀಯ ರೈಲ್ವೆ (Indian Railways) ಕ್ಷೇತ್ರದ ಅಭಿವೃದ್ಧಿಗಾಗಿ ರೈಲ್ವೆ ತಿದ್ದುಪಡಿ ಮಸೂದೆ 2024ನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D Deve Gowda) ಬೆಂಬಲಿಸಿದ್ದಾರೆ.

    ರಾಜ್ಯಸಭೆಯಲ್ಲಿ ಈ ಬಗ್ಗೆ ಅವರು ಮಾತನಾಡಿದರು. ಈ ವೇಳೆ, ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿಯವರ (Narendra Modi) ಸರ್ಕಾರದಲ್ಲಿ ರೈಲ್ವೇ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿ ಮಾಡಲಾಗಿದೆ ಎಂದು ಶ್ಲಾಘಿಸಿದರು.

    ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆಳ್ವಿಕೆ ವೇಳೆ ಮೈಸೂರು – ಹರಿಹರದವರೆಗೂ ಮೀಟರ್ ಗೇಜ್ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರು. ಆಗಿನ ತಮ್ಮ ರೈಲು ಪ್ರಯಾಣದ ಅನುಭವವನ್ನು ನೆನಪಿಸಿಕೊಂಡರು.

    ಈಗ ಬಾಂಬೆ – ಚೆನ್ನೈ ರೈಲು ಮಾರ್ಗವೂ ಹರಿಹರ – ದಾವಣಗೆರೆ – ಶೃಂಗೇರಿ – ಬೇಲೂರು ಮೂಲಕ ಚನ್ನೈಗೆ ಹಾದು ಹೋಗುತ್ತಿದ್ದು ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.

    ಅಶ್ವಿನಿ ವೈಷ್ಣವ್ (Ashwini Vaishnaw) ಅತ್ಯಂತ ಪ್ರಾಮಾಣಿಕ ರೈಲ್ವೇ ಸಚಿವರು, ಅವರನ್ನು ಅಭಿನಂದಿಸಿದರೆ ಕೆಲವರು ತಪ್ಪು ತಿಳಿದುಕೊಳ್ಳಬಾರದು. ನಾನು ಪ್ರಧಾನಿ ಆಗಿದ್ದಾಗ ಈ ಕ್ಷೇತ್ರದಲ್ಲಿ ಏನು ಮಾಡಿದ್ದೇನೆ, ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

    ರೇಲ್ವೆ ತಿದ್ದುಪಡಿ ಮಸೂದೆಯು ಅತ್ಯಂತ ಮಹತ್ವದ ಮಸೂದೆ. ಇದಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದಿದ್ದಾರೆ.

  • ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ಜೆಡಿಎಸ್ ಕಾರ್ಯಕರ್ತರಿಗೆ ವೀರ ಸಂದೇಶ ಕೊಟ್ಟ ಹೆಚ್‍ಡಿಕೆ

    ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ಜೆಡಿಎಸ್ ಕಾರ್ಯಕರ್ತರಿಗೆ ವೀರ ಸಂದೇಶ ಕೊಟ್ಟ ಹೆಚ್‍ಡಿಕೆ

    ಬೆಂಗಳೂರು: ನನ್ನನ್ನೂ ಸೇರಿ ಪಕ್ಷದಲ್ಲಿರುವ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ. ಈ ವಿವೇಕವಾಣಿಯೇ ನಮ್ಮ ಪಾಲಿನ ಮೂಲಮಂತ್ರ ಎಂದು ಕಾರ್ಯಕರ್ತರನ್ನು ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಹುರಿದುಂಬಿಸಿದ್ದಾರೆ.

    ಮುಂಬರುವ ಲೋಕಸಭಾ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸೆ.10 ರಂದು ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ (JDS) ಸಮಾವೇಶ ನಡೆಯಲಿದೆ. ಕಾರ್ಯಕರ್ತರು ತಪ್ಪದೇ ಸಭೆಗೆ ಬರಬೇಕು. ಪಕ್ಷ ಸಂಘಟನೆ ವಿಚಾರವಾಗಿ ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ ಎಂದು ಅವರು ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ತಾರಾ?: ಬಿ.ಸಿ ಪಾಟೀಲ್

    ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‍ನಲ್ಲಿ ಭಾನುವಾರ ಬೆಳಗ್ಗೆ 10:30ಕ್ಕೆ ಸಭೆ ಆರಂಭವಾಗಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

    ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ. ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ತಿಳಿಸಿದ್ದಾರೆ.

    ಕರ್ನಾಟಕ ಈಗ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ಕಟ್ಟುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ದುರಿತ ದಿನಗಳಲ್ಲಿ ನಾವು ಜನರ ಜೊತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆಯಾಗಿದೆ. ಇದು ಈ ಹೊತ್ತಿನ ನೈತಿಕ ಜವಾಬ್ದಾರಿ ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.

    ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ ಹಾಗೂ ಅರ್ಪಣಾ ಭಾವದಿಂದ ಹೆಜ್ಜೆ ಹಾಕುವ ಅಗತ್ಯವಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದ ವಕೀಲನ ಮೇಲೆ ಮಾಜಿ ಪತ್ನಿಯಿಂದ ಗಂಭೀರ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇದಾರನಾಥದ ಶಂಕರಾಚಾರ್ಯರ ಪ್ರತಿಮೆ ಕುರಿತು ಮೋದಿಗೆ ಪತ್ರ ಬರೆದ ದೇವೇಗೌಡರು

    ಕೇದಾರನಾಥದ ಶಂಕರಾಚಾರ್ಯರ ಪ್ರತಿಮೆ ಕುರಿತು ಮೋದಿಗೆ ಪತ್ರ ಬರೆದ ದೇವೇಗೌಡರು

    ಬೆಂಗಳೂರು: ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿರುವುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದು ಸಂತಸ ಹಂಚಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    ಕೇದಾರನಾಥದಲ್ಲಿ ನವೆಂಬರ್ 5 ರಂದು ನೀವು ಅನಾವರಣಗೊಳಿಸಿದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕಂಡು ತುಂಬಾ ಸಂತೋಷವಾಗಿದೆ. ನಿಮಗೆ ಇದಕ್ಕಾಗಿ ಧನ್ಯವಾದ ತಿಳಿಸುತ್ತೇನೆ. ಕರ್ನಾಟಕದ ಚಿಕ್ಕಮಗಳೂರಿನ ಸೃಂಗೇರಿಯ ಶಾರದಾ ಪೀಠದ ಅನುಯಾಯಿ ನಾನು. ನಿಮಗೆ ತಿಳಿದಿರುವಂತೆ ಮಹಾನ್ ಸಂತ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ನಾಲ್ಕು ಶಕ್ತಿಕೇಂದ್ರಗಳಲ್ಲಿ ಇದೂ ಕೂಡ ಒಂದು. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತವಾಗಿದೆ. ಇದನ್ನೂ ಓದಿ: ನಾಲ್ವರು ಮಹಿಳಾ ಹೋರಾಟಗಾರ್ತಿಯರ ಹತ್ಯೆಯಾಗಿದೆ ಎಂದ ತಾಲಿಬಾನ್

    ಶೃಂಗೇರಿ ಮಠ ನನ್ನನ್ನು ಆಕರ್ಷಿಸಿದ್ದು, ಅವರ ಸಾಮರಸ್ಯದಿಂದ. ಇಲ್ಲಿ ಅನೇಕ ಶತಮಾನಗಳಿಂದ ರಾಜರು, ಆಡಳಿತಗಾರರಿಗೆ ಆಧ್ಯಾತ್ಮಿಕದ ಅರಿವನ್ನು ಮೂಡಿಸಿದ್ದಾರೆ. ಒಡೆಯರು, ಪೇಶ್ವೆಗಳು, ಕೆಳದಿ ಹಾಗೂ ತಿರೂವಾಂಕೂರು ದೊರೆಗಳು ಮಠದಿಂದ ಪ್ರಯೋಜನ ಪಡೆದಿದ್ದಾರೆ. ಮೈಸೂರಿನಲ್ಲಿ ಆಡಳಿತ ನಡೆಸಿದ ರಾಜರುಗಳಾದ ಹೈದರಿ ಅಲಿ, ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್‍ನ ನಿಜಾಮರು ಮಠಕ್ಕೆ ಆಗಮಿಸಿ ಭಕ್ತಿಯನ್ನು ಸಲ್ಲಿಸುತ್ತಿದ್ದರು ಜೊತೆಗೆ ಇಲ್ಲಿಂದ ಮಾರ್ಗದರ್ಶನವನ್ನು ಪಡೆದಿದ್ದಾರೆ. ಇದನ್ನೂ ಓದಿ: ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ ಅನಾವರಣಗೊಳಿಸಿದ ಮೋದಿ

    ಇಲ್ಲಿರುವ ಮಠದ ಮಾರ್ಗದರ್ಶನ ಶ್ರೀಮಂತ ಪರಂಪರೆ ಇಂದಿಗೂ ನಡೆದುಕೊಂಡು ಬರುತ್ತಿದೆ. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತವಾಗಿರುವುದರಿಂದ ನನಗೆ ವೈಯಕ್ತಿಕವಾಗಿ ಹೆಚ್ಚು ಭಕ್ತಿ ಇದೆ. ನಾನು ಪವಿತ್ರವಾದ ಪೀಠದಿಂದ ಪಡೆದಂತಹ ಆಶೀರ್ವಾದಗಳಿಗೆ ಸದಾ ಚಿರಋಣಿಯಾಗಿದ್ದೇನೆ.

    ಶಂಕರಾಚಾರ್ಯರ ಪ್ರತಿಮೆಯನ್ನು ನೋಡಲು ನಾನು ಶೀಘ್ರದಲ್ಲಿ ಕೇದಾರನಾಥಕ್ಕೆ ತೆರಲುತ್ತೇನೆ. ಈ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರೂಪಿಸಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಇದರೊಂದಿಗೆ ಕರ್ನಾಟಕದ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಿಂದ ಕಪ್ಪುಶಿಲೆಯನ್ನು ಪ್ರತಿಮೆಗಾಗಿ ಬಳಸಲಾಗಿದೆ ಎಂಬುದು ಗೊತ್ತಾಗಿದೆ. ಶಂಕರಾಚಾರ್ಯರ ಪ್ರತಿಮೆ ರೂಪುಗೊಳ್ಳಲು ಕರ್ನಾಟಕದ ಪಾತ್ರ ದೊಡ್ಡದಿದೆ. ಎಲ್ಲವೂ ದೇವರ ಕೃಪೆ. ಪರಮಾತ್ಮನ ಕೃಪೆ ನಿಮ್ಮ ಮೇಲಿರಲಿ. ಇದನ್ನೂ ಓದಿ: ರಾಹುಲ್ ಗಾಂಧಿ ಎಲ್ಲಿ ಹೋಗಿದ್ದಾರೆ ಕಾಣಿಸ್ತಿಲ್ಲ: ಸುಧಾಕರ್ ಪ್ರಶ್ನೆ

  • ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿಗೆ ನನ್ನ ಬೆಂಬಲವಿದೆ: ಹೆಚ್‍ಡಿಡಿ

    ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿಗೆ ನನ್ನ ಬೆಂಬಲವಿದೆ: ಹೆಚ್‍ಡಿಡಿ

    – ಮಾಜಿ ಪ್ರಧಾನಿ ಕರೆ ಮಾಡಿ ಬೆಂಬಲ ಕೋರಿದ ಮೋದಿ

    ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

    ಕೊರೊನಾ ವೈರಸ್ ನಿಂದ ದೇಶ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದ್ದಾರೆ. ಜೊತೆಗೆ ಇಂದು ದೇಶದ ಹಲವಾರು ನಾಯಕರಿಗೆ ಕರೆ ಮಾಡಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಬೆಂಬಲ ಸೂಚಿಸುವಂತೆ ಕೋರುತ್ತಿದ್ದಾರೆ. ಅಂತಯೇ ದೇವೇಗೌಡರಿಗೂ ಕರೆ ಮಾಡಿದ್ದು, ನಾನು ಬೆಂಬಲ ಸೂಚಿಸುವುದಾಗಿ ಹೆಚ್‍ಡಿಡಿ ಹೇಳಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ದೇವೇಗೌಡರು, ಕೊರೊನಾ ವೈರಸ್ ಪರಿಣಾಮದಿಂದ ದೇಶದ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಇಂದು ನನಗೆ ಪ್ರಧಾನಿ ಮೋದಿ ಅವರು ಕರೆ ಮಾಡಿದ್ದರು. ಮಾನ್ಯ ಪ್ರಧಾನಿ ನನ್ನ ಆಡಳಿತಾತ್ಮಕ ಅನುಭವವನ್ನು ಶ್ಲಾಘಿಸಿದರು ಮತ್ತು ನನ್ನ ಬೆಂಬಲವನ್ನು ಕೋರಿದರು. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ನಮ್ಮ ರಾಷ್ಟ್ರದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಹೆಚ್‍ಡಿಡಿ, ಕೊರೊನಾದಿಂದಾಗಿ ವಿಶ್ವಾದ್ಯಂತ ಸಾವಿರಾರು ಜನರು ಸಾಯುತ್ತಿದ್ದಾರೆ. ಕೊರೊನಾ ವೈರಸ್ ವಿರುದ್ಧದ ನಮ್ಮ ಹೋರಾಟದಲ್ಲಿ ಭಾರತಕ್ಕೆ ಮುಂಬರುವ ವಾರಗಳು ನಿರ್ಣಾಯಕ. ಮಾಜಿ ಪ್ರಧಾನಮಂತ್ರಿಯಾಗಿ ನಾನು ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಹಕರಿಸಲು ಒಪ್ಪಿದ್ದೇನೆ. ಅದು ನಮ್ಮ ದೇಶವನ್ನು ಮಾತ್ರವಲ್ಲದೆ ಇಡೀ ಜಗತ್ತನ್ನು ಧ್ವಂಸ ಮಾಡಿದೆ ಎಂದು ದೇವೇಗೌಡರು ಹೇಳಿದ್ದಾರೆ.

    ಕೊರೊನಾ ವೈರಸ್ ತಡೆಗಟ್ಟಲು ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಆದರೂ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಹಾಗಾಗಿ ಮೋದಿ ಅವರು ಇಂದು ದೇಶದ ಪರಿಸ್ಥಿತಿಯ ಕುರಿತು ಚರ್ಚೆ ಮಾಡಲು ದೇಶದ ಹಲವು ರಾಜಕೀಯ ನಾಯಕರಿಗೆ ಕರೆ ಮಾಡಿದ್ದಾರೆ. ಇಂದು ಇಬ್ಬರು ಮಾಜಿ ರಾಷ್ಟ್ರಪತಿಗಳಾದ, ಪ್ರಣಬ್ ಮುಖರ್ಜಿ ಮತ್ತು ಪ್ರತಿಭಾ ಪಾಟೀಲ್ ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ.ದೇವೇಗೌಡ ಸೇರಿದಂತೆ ದೇಶದ ಎಲ್ಲ ಹಿರಿಯ ನಾಯಕರಿಗೂ ಕರೆ ಮಾಡಿ ಮಾತನಾಡಿದ್ದಾರೆ.

    ಇವರ ಜೊತೆಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್ ಪಟ್ನಾಯಕ್, ದಕ್ಷಿಣ ಭಾರತದ ನಾಯಕರಾದ ಕೆಸಿಆರ್, ಎಂ.ಕೆ.ಸ್ಟಾಲಿನ್, ಮತ್ತು ಮಿತ್ರ ಪ್ರಕಾಶ್ ಸಿಂಗ್ ಬಾದಲ್ ಅವರಿಗೂ ಕರೆ ಮಾಡಿ ಬಗ್ಗೆ ಚರ್ಚೆ ಮಾಡಿದ್ದಾರೆ.

  • ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ಮೈಸೂರು: ಹೆಚ್. ಡಿ ದೇವೇಗೌಡರ ಕುಟುಂಬದ ಕಣ್ಣೀರಿಗೆ ಮಾಜಿ ಸಚಿವ ಸಾರಾ ಮಹೇಶ್ ಕಾರಣ ಎಂದು ಅನರ್ಹ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

    ಇಂದು ಕೆ.ಆರ್. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ದೇವೇಗೌಡರ ಮನೆಯವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದರೆ ಎಂದರೆ ಅದಕ್ಕೆ ಸಾರಾ ಮಹೇಶ್ ಮತ್ತು ಆತನ ಕೆಲ ಸ್ನೇಹಿತರು ಕಾರಣ. ದೇವೇಗೌಡರ ಮನೆಗೆ ಇವತ್ತು ಅನ್ಯಾಯವಾಗಿದ್ದರೆ ಅದಕ್ಕೂ ಸಾರಾ ಮಹೇಶ್ ಕಾರಣ. ದೇವೇಗೌಡರ ಕಣ್ಣೀರಿಗೂ ಅವರೇ ಕಾರಣ ಎಂದು ಕಿಡಿಕಾರಿದರು.

    ಸಾರಾ ಮಹೇಶ್ ದುರಹಂಕಾರದಿಂದ ಒಕ್ಕಲಿಗ ಶಾಸಕರೇ ಜೆಡಿಎಸ್‍ನಿಂದ ದೂರವಾದರು. ಇವತ್ತಿನ ದೇವೇಗೌಡರ ಈ ಸ್ಥಿತಿಗೆ ನಾವಲ್ಲ ಕಾರಣ ನೀವು. ಮಹೇಶ್ ಕ್ಷೇತ್ರದಲ್ಲಿ ಕೆಲವರಿಗೆ 500 ರೂಪಾಯಿ, 1 ಸಾವಿರ ರೂಪಾಯಿ ಕೊಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಆದರೆ ನನ್ನದ್ದು ಅಭಿವೃದ್ಧಿ ರಾಜಕಾರಣ. ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಿ. ಕೆ.ಆರ್. ನಗರದ ಅಭಿವೃದ್ಧಿಗೆ ನಾನು ಮಾಡಿದಷ್ಟು ಕೆಲಸ ನೀವು ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.

    ಈ ವೇಳೆ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ ವಿಶ್ವನಾಥ್, ಕಾನೂನುಗಿಂತ ಯಾರು ದೊಡ್ಡವರಲ್ಲ. ಡಿಕೆಶಿ ಇದೆಲ್ಲದರಿಂದ ಬಹು ಬೇಗ ಮುಕ್ತವಾಗಿ ಹೊರ ಬರಲಿ. ಹೊರ ಬಂದು ರಾಜಕಾರಣ ಮಾಡಬೇಕು ಎಂದು ಹಾರೈಸಿದರು.

  • ಇನ್ನು ಸ್ವಲ್ಪ ಹೊತ್ತು ಕಾಯಿರಿ, ಎಲ್ಲವೂ ಗೊತ್ತಾಗುತ್ತೆ: ಸಿಎಂ

    ಇನ್ನು ಸ್ವಲ್ಪ ಹೊತ್ತು ಕಾಯಿರಿ, ಎಲ್ಲವೂ ಗೊತ್ತಾಗುತ್ತೆ: ಸಿಎಂ

    ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿ ಎರಡು ವಾರ ಕಳೆದಿದೆ. ಆದ್ರೆ ಸಂಪುಟ ರಚನೆಯ ಬಿಕ್ಕಟ್ಟು ಮಾತ್ರ ಕಗ್ಗಂಟಾಗಿದೆ. ಇಂದು ಮಧ್ಯಾಹ್ನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮಂಗಳವಾರ ರಾತ್ರಿ ಸುಮಾರು 2 ಗಂಟೆಗಳ ಕಾಲ ದೇವೇಗೌಡರು ಪುತ್ರ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡಿದ್ದಾರೆ.

    ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಸಿಎಂ, ಇನ್ನು ಸ್ವಲ್ಪ ಹೊತ್ತು ಕಾಯಿರಿ, ಎಲ್ಲವೂ ಗೊತ್ತಾಗುತ್ತೆ, ಯಾವುದೇ ಸಮಸ್ಯೆ ಇಲ್ಲ. ಕಾಂಗ್ರೆಸ್ ಪಟ್ಟಿ ಇನ್ನು ದೆಹಲಿಯಿಂದ ಬರಬೇಕಿದೆ. ಬಂದ ತಕ್ಷಣ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸುತ್ತೇವೆ ಅಂದ್ರು.

    ಜೆಡಿಎಸ್ ಪಟ್ಟಿ ಕೂಡ ಬಹುತೇಕ ಅಂತಿಮವಾಗಿದೆ. ಇಂದು ಯಾರಿಗೆ ಸಚಿವ ಸ್ಥಾನ ಸಿಗಬಹುದು ಎಂಬುದರ ಸಂಭಾವ್ಯ ಪಟ್ಟಿ ಹೀಗಿದೆ.
    ಒಕ್ಕಲಿಗ ಕೋಟಾ – 4 ಸಚಿವ ಸ್ಥಾನ
    * ಎಚ್.ಡಿ. ರೇವಣ್ಣ, ಹೊಳೆನರಸೀಪುರ
    * ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ
    * ಸಿ.ಎಸ್. ಪುಟ್ಟರಾಜು, ಮೇಲುಕೋಟೆ
    * ಸತ್ಯನಾರಾಯಣ, ಶಿರಾ

    ಕುರುಬ ಕೋಟಾ – 1 ಸ್ಥಾನ
    ಬಂಡೆಪ್ಪ ಕಾಶೆಂಪುರ್, ಬೀದರ್ ದಕ್ಷಿಣ

    ಲಿಂಗಾಯತರ ಕೋಟಾ – 1 ಸ್ಥಾನ
    * ವೆಂಕಟರಾವ್ ನಾಡಗೌಡ- ಸಿಂಧನೂರು

    ಎಸ್‍ಸಿ ಕೋಟಾ – 1 ಸ್ಥಾನ
    ಎನ್. ಮಹೇಶ್- ಕೊಳ್ಳೇಗಾಲ

    ಇಂದು ಮಧ್ಯಾಹ್ನ 02-12ಕ್ಕೆ ರಾಜಭವನದ ಗ್ಲಾಸ್‍ಹೌಸ್‍ನಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಜುಬಾಯ್ ವಾಲಾ ಪ್ರಮಾಣವಚನ ಬೋದಿಸಲಿದ್ದಾರೆ. ಜೆಡಿಎಸ್‍ನಿಂದ 8 ಜನ, ಕಾಂಗ್ರೆಸ್‍ನಿಂದ 14-17 ಜನ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.