Tag: ಹೆಚ್ ಡಿ ರೇವಣ್ಣ

  • ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವ ಗೊತ್ತಿಲ್ಲ: ಎಸ್‍ಟಿಎಸ್ ಹೇಳಿಕೆಗೆ ಪ್ರಜ್ವಲ್ ತಿರುಗೇಟು

    ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವ ಗೊತ್ತಿಲ್ಲ: ಎಸ್‍ಟಿಎಸ್ ಹೇಳಿಕೆಗೆ ಪ್ರಜ್ವಲ್ ತಿರುಗೇಟು

    – ವಿಜಯೇಂದ್ರ ತಂದೆ ಸ್ಥಾನ ಉಳಿಸಿಕೊಳ್ಳಲಿ

    ಹಾಸನ: ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವದ ಕುರಿತು ಗೊತ್ತಿಲ್ಲ ಎಂದು ಹೇಳುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ತಿರಗೇಟು ನೀಡಿದ್ದಾರೆ. ತಂದೆ, ಮಾಜಿ ಸಚಿವರಾಗಿರುವ ಹೆಚ್.ಡಿ.ರೇವಣ್ಣ ಅವರ ಬಗ್ಗೆ ಮಾತನಾಡೋರಿಗೆ ನಿಂಬೆಹಣ್ಣಿನ ಮಹತ್ವ ಹೇಳಿ ಕಿಡಿಕಾರಿದ್ದಾರೆ.

    ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಜ್ವಲ್ ರೇವಣ್ಣ, ಕೇಂದ್ರ ಸಚಿವ ರಾಜನಾಥ್ ಸಿಂಗ್ ರಫೆಲ್ ಖರೀದಿಸುವ ವೇಳೆ ವಿಮಾನದ ಚಕ್ರಕ್ಕೆ ನಿಂಬೆಹಣ್ಣು ಇರಿಸಿದ್ದರು. ಅವರು ಮಾಟ-ಮಂತ್ರ ಮಾಡಿ ನಿಂಬೆಹಣ್ಣು ಇಟ್ಟಿದ್ದರಾ ಎಂದು ಪ್ರಶ್ನಿಸಿದರು.

    ಪ್ರತಿ ಗ್ರಾಮಕ್ಕೆ ಹೋದರು ಕೂಡ ಅಲ್ಲಿ ನಿಂಬೆಹಣ್ಣನ್ನ ಕೊಡುವ ಸಂಪ್ರದಾಯವಿದೆ. ಹಾಗಂತ ನಿಂಬೆಹಣ್ಣನ್ನು ಕೊಟ್ಟವರೆಲ್ಲ ಮಾಟ-ಮಂತ್ರ ಮಾಡಿಸುತ್ತಾರೆ ಅಂತ ಅಲ್ಲ. ಯಾವುದೇ ದೇವಸ್ಥಾನಗಳಿಗೆ ಹೋದರೂ ಅಲ್ಲಿ ಮೊದಲಿಗೆ ನಿಂಬೆಹಣ್ಣನ್ನು ಕೊಡುವುದು ಸಂಪ್ರದಾಯ. ಶೃಂಗೇರಿ ದೇವಾಲಯವನ್ನು ರೇವಣ್ಣನವರು ಬಹಳವಾಗಿ ನಂಬಿದ್ದಾರೆ. ಅಲ್ಲಿಯೂ ನಿಂಬೆಹಣ್ಣನ್ನು ಕೊಡುತ್ತಾರೆ. ಹಾಗಂತ ರೇವಣ್ಣನವರು ಮಾಟ-ಮಂತ್ರ ಮಾಡಿಸುತ್ತಿದ್ದಾರೆ ಅಂತ ಹೇಳುವುದಕ್ಕೆ ಆಗುತ್ತಾ? ಅವರಿಗೆ ಹಿಂದುತ್ವದ ಬಗ್ಗೆ ಗೊತ್ತಿಲ್ಲ ಅಂತ ಕಾಣಿಸುತ್ತದೆ ಎಂದು ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

    ಹಾಸನದ ಬೇಲೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡುತ್ತ ವಿಜಯೇಂದ್ರ ಜೆಡಿಎಸ್ ಪಕ್ಷಕ್ಕೆ ಟಾಂಗ್ ನೀಡಿದ್ರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಪ್ರಜ್ವಲ್ ರೇವಣ್ಣ, 50 ವರ್ಷದಿಂದ ನಮ್ಮ ಕುಟುಂಬ ರಾಜಕೀಯ ನೋಡಿಕೊಂಡು ಬಂದಿದೆ. ಇಲ್ಲಿ ಗೆಲುವು ಸೋಲು ಶಾಶ್ವತವಲ್ಲ. ನಮ್ಮ ಬಗ್ಗೆ ಮಾತನಾಡುವ ಬದಲು ಅವರ ತಂದೆ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡಲಿ ಎಂದರು.

    ಎಸ್.ಟಿ.ಸೋಮಶೇಖರ್ ಹೇಳಿದ್ದೇನು?: ಹಾಸನದಲ್ಲಿ ಪ್ರೀತಂಗೌಡ್ರೇ ಇರಬೇಕು. ನಿಂಬೆಹಣ್ಣಿಗೆ ಪ್ರತಿ ವಿರುದ್ಧ ನಿಂಬೆಹಣ್ಣು ತೋರಿಸುವಂತವರು ಪ್ರೀತಂಗೌಡ. ಹೀಗಾಗಿ ಹಾಸನ ಜಿಲ್ಲೆಗೆ ಅವರೇ ಸರಿ ಎಂದು ಪ್ರೀತಂಗೌಡರನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ: ಎಲೆಕ್ಷನ್ ಅಂದ್ರೆ ಏನೂಂತ ಗ್ರಾ.ಪಂ ಚುನಾವಣೆಯಲ್ಲಿ ತೋರಿಸ್ತೇವೆ: ಪ್ರಜ್ವಲ್

    ಆ ನಿಂಬೆಹಣ್ಣು ತೋರಿಸಿದರೆ ರಾಜ್ಯದ ಎಂತೆಂತಹ ನಾಯಕರೇ ತತ್ತರಿಸಿ ಹೋಗುತ್ತಾರೆ. ಆದರೆ ಆ ನಿಂಬೆಹಣ್ಣಿಗೆ ಪ್ರತಿ ನಿಂಬೆಹಣ್ಣು ತೋರಿಸಿ ಕಂಟ್ರೋಲ್ ಮಾಡುವ ಶಕ್ತಿ ಇದ್ದರೆ ಅದು ಪ್ರೀತಂಗೌಡರಿಗೆ ಮಾತ್ರ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ನಾವು ನೀಡುತ್ತೇವೆ ಎಂದು ಮಾಜಿ ಸಚಿವ ಹೆಚ್‍ಡಿ.ರೇವಣ್ಣ ನಿಂಬೆಹಣ್ಣಿನ ಶಕ್ತಿ ವಿರುದ್ಧ ಪರೋಕ್ಷವಾಗಿ ಮಾತನಾಡಿದ್ದರು.

  • ನನ್ನನ್ನ ಜೈಲಿಗೆ ಹಾಕಲಿ, ಅಲ್ಲಿ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ: ರೇವಣ್ಣ

    ನನ್ನನ್ನ ಜೈಲಿಗೆ ಹಾಕಲಿ, ಅಲ್ಲಿ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ: ರೇವಣ್ಣ

    ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ ಎಂದು ರೇವಣ್ಣ ಅವರು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

    ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ. ಪ್ರತೀ ಯೂನಿಟ್‍ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ. ರಾಜ್ಯದಲ್ಲಿ ರಾಜಕೀಯ ದ್ವೇಷ ಹೆಚ್ಚಾಗಿದೆ ರಾಜಕೀಯ ದುರುದ್ದೇಶ ಹೆಚ್ಚಾಗಿದೆ. ಇದು ಬಿಜೆಪಿಗೇ ತಿರುಗುಬಾಣವಾಗಲಿದೆ. ವಿಪಕ್ಷಗಳನ್ನ ಹತ್ತಿಕ್ಕಲು ದುರುದ್ದೇಶದಿಂದ ನಾಲ್ಕು ವರ್ಷದ ಹಿಂದಿನ ಕೇಸ್ ನ್ನು ಮತ್ತೆ ರೀಓಪನ್ ಮಾಡಿದ್ದಾರೆ. ತನಿಖಾ ಸಂಸ್ಥೆಗಳನ್ನ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನೀರಾವರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ಬೇಕಾಗುತ್ತದೆ. ನನ್ನನ್ನ ಜೈಲಿಗೆ ಹಾಕಲಿ ನಾನು ಹೋರಾಟ ಮಾಡುತ್ತೇನೆ ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದರು.

    ರಾಜ್ಯದ ಐದು ಕೆಇಬಿ ಕಂಪನಿಗಳಿಂದ 7996 ಕೋಟಿ ನಷ್ಟವಿದೆ ಎಂದು ಕೆಆರ್ ಸಿ ಕಂಪನಿಗಳು ಅರ್ಜಿ ಹಾಕಿದ್ದಾರೆ. ಈ ಕಂಪನಿಗಳು ಈ ಹಣ ಭರಿಸುವಂತೆ ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ. ಈ ನಷ್ಟ ಸರಿದೂಗಿಸಲು ನಮ್ಮ ರೈತರನ್ನ ಸಂಕಷ್ಟಕ್ಕೆ ತಂದೊಡ್ಡಿದೆ. ಪ್ರತೀ ಯೂನಿಟ್ ಗೆ 40 ಪೈಸೆ ಹೆಚ್ಚು ಮಾಡಿದ್ದಾರೆ. ರಾಜ್ಯದ ಇಂಧನ ಇಲಾಖೆಯಲ್ಲಿ ಇದೊಂದು ದುರದೃಷ್ಟಕರ. ಜನ ಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ ಎಂದು ಕಿಡಿಕಾರಿದರು.

    ನಾನು ಇಂಧನ ಸಚಿವನಾಗಿದ್ದಾಗ ಬೆಸ್ಕಾಂನಲ್ಲಿ 600 ಕೋಟಿ ಹಣ ಎಫ್ ಡಿ ಇಟ್ಟಿದ್ದೆ. ರೈತರಿಗೆ ಒಂದೊಂದು ವಿದ್ಯುತ್ ಟಿಸಿ ಹಾಕಲು 18 ಸಾವಿರ ಜೊತೆಗೆ ಲಂಚ ಸೇರಿ 40 ಸಾವಿರ ಹಣ ತಗೊಳ್ತಿದ್ದಾರೆ. ಕೆಇಬಿ ಕಂಟ್ರಾಕ್ಟರ್ ಗಳ ಬಾಕಿ ಬಿಲ್ ಎರಡರಿಂದ ಮೂರು ಸಾವಿರ ಬಾಕಿ ಇದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

    48 ಸಾವಿರ ಕುಟುಂಬಕ್ಕೆ ವೃದ್ಧಾಪ್ಯ ವೇತನ ಬಂದಿಲ್ಲ. ಈ ಸರ್ಕಾರ ಲೂಟಿಕೋರರ ಸರ್ಕಾರ. ಕೆಲ ಗುತ್ತಿಗೆದಾರರು ಅವರ ಹೆಂಡತಿಯ ತಾಳಿ ಮಾರಾಟ ಮಾಡ್ತಿದ್ದಾರೆ. ಪ್ರಧಾನಿ ಮೋದಿಯವರೇ ನಮ್ಮದು 10 ಪರ್ಸೆಂಟ್ ಸರ್ಕಾರ ಅಂತ ಹೇಳ್ತಿದ್ರೀ. ಈಗ ರಾಜ್ಯದಲ್ಲಿರುವ ನಿಮ್ಮದು ಯಾವ ಸರ್ಕಾರ ಹೇಳಿ ಎಂದು ಪ್ರಧಾನಿ ವಿರುದ್ಧ ಟೀಕೆ ಮಾಡಿದರು. ಇದೇ ವೇಳೆ ಹಾಸನಾಂಬ ದೇವಿ ರಾಜ್ಯದಲ್ಲಿನ ಭ್ರಷ್ಟಾಚಾರ ತೊಲಗಿಸಲಿ, ರಾಜ್ಯದ ಜನ್ರಿಗೆ ಒಳ್ಳೆಯದು ಮಾಡಲಿ ಎಂದು ಮಾಜಿ ಸಚಿವರು ಆಶಿಸಿದರು.

  • ಹಾಸನ ಜಿಲ್ಲೆ ಕರ್ನಾಟಕದಲ್ಲಿ ಇಲ್ಲವೇ?- ಸರ್ಕಾರಕ್ಕೆ ಹೆಚ್.ಡಿ.ರೇವಣ್ಣ ಪ್ರಶ್ನೆ

    ಹಾಸನ ಜಿಲ್ಲೆ ಕರ್ನಾಟಕದಲ್ಲಿ ಇಲ್ಲವೇ?- ಸರ್ಕಾರಕ್ಕೆ ಹೆಚ್.ಡಿ.ರೇವಣ್ಣ ಪ್ರಶ್ನೆ

    – ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆ

    ಹಾಸನ: ಜಿಲ್ಲೆಯ ಐದು ತಾಲೂಕುಗಳನ್ನು ಸರ್ಕಾರ ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಆದ್ರೆ ಇದುವರೆಗೂ ಒಂದು ರೂಪಾಯಿ ಪರಿಹಾರದ ಹಣ ನೀಡಿಲ್ಲ. ಹಾಸನ ಜಿಲ್ಲೆ ಕರ್ನಾಟಕದ ಭೂಪಟದಲ್ಲಿ ಇಲ್ಲವೇ ಎಂದು ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

    ಹಾಸನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ರೇವಣ್ಣ, ರಾಜ್ಯದಲ್ಲಿ ಒಂದೆಡೆ ಕೊರೊನದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಮಳೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆ ರಾಜ್ಯದ ಭೂಪಟದಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ. ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆಯಾಗಿದ್ದು, ಕಪ್ಪುಪಟ್ಟಿಗೆ ಸೇರಿಸಿ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

    150 ವರ್ಷಗಳ ಇತಿಹಾಸವಿರುವ ನೆಹರು, ಮಹಾತ್ಮಗಾಂಧಿ ಕಟ್ಟಿದ ಕಾಂಗ್ರೆಸ್ ಮತ್ತು ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಬಿಜೆಪಿ ಟಿಕೆಟ್ ನೀಡಿದೆ. ನಮ್ಮದು ರಾಷ್ಟ್ರೀಯ ಪಕ್ಷ ಅಲ್ಲ, ಪ್ರಾದೇಶಿಕ ಪಕ್ಷ. ರಾಷ್ಟ್ರೀಯ ಪಕ್ಷಗಳಲ್ಲಿ ಅಭ್ಯರ್ಥಿಗಳೇ ಇಲ್ಲ. ಕಾಂಗ್ರೆಸ್ ನಲ್ಲಿದ್ದ ಡಾಕ್ಟರ್ ಅನ್ನು ಬಿಜೆಪಿಯವರು ಕರೆದುಕೊಂಡು ಹೋಗಿ ಟಿಕೆಟ್ ನೀಡಿದ್ದಾರೆ. ಎಲ್ಲವನ್ನೂ ಜನತೆಗೆ ಬಿಡುತ್ತೇವೆ. ಕುಮಾರಸ್ವಾಮಿ ಸಾಲಮನ್ನಾ ಮಾಡಿ, ಒಳ್ಳೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಮತ ಕೇಳುತ್ತೇವೆ. ಅಕ್ಟೋಬರ್ 23 ರ ನಂತರ ಉಪ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೆಚ್.ಡಿ.ರೇವಣ್ಣ ಹೇಳಿದರು.

  • ಅಧಿಕಾರಿಗಳ ಬಗ್ಗೆ ರೇವಣ್ಣ ಹೇಳಿಕೆಗೆ ಪ್ರೀತಂ ಗೌಡ ತಿರುಗೇಟು

    ಅಧಿಕಾರಿಗಳ ಬಗ್ಗೆ ರೇವಣ್ಣ ಹೇಳಿಕೆಗೆ ಪ್ರೀತಂ ಗೌಡ ತಿರುಗೇಟು

    – ಪಾಳೇಗಾರಿಕೆ ಸಂಸ್ಕೃತಿ ನಡೆಯಲ್ಲ

    ಹಾಸನ: ಮಾಜಿ ಸಚಿವ ರೇವಣ್ಣ ಅವರು ಮಾಡಿದ್ರೆ ರಾಜಕಾರಣ, ಬೇರೆಯವರು ಮಾಡಿದ್ರೆ ಕಾನೂನು ಬಾಹಿರ ಅನ್ನೋದಾದ್ರೆ ನಾವು ಕೂಡ ರಾಜಕಾರಣಾನೆ ಮಾಡುತ್ತೀವಿ. ಹಾಸನದಲ್ಲಿ ಪಾಳೇಗಾರಿಕೆ ಸಂಸ್ಕೃತಿ ನಡೆಯಲ್ಲ ಎಂದು ಮಾಜಿ ಸಚಿವ ರೇವಣ್ಣಗೆ ಶಾಸಕ ಪ್ರೀತಂಗೌಡ ತಿರುಗೇಟು ನೀಡಿದ್ದಾರೆ.

    ಅಧಿಕಾರಿಗಳು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರೇವಣ್ಣ ಆರೋಪ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಮುಂಚೆ ಇವರು ಹೇಳಿದ್ದೇ ಶಾಸನ ಎಂಬಂತೆ ಇತ್ತು. ಆ ಶಾಸನ, ಪಾಳೇಗಾರಿಕೆ ಸಂಸ್ಕೃತಿ ಈಗ ನಡೆಯಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಜನ ಏನು ಅಪೇಕ್ಷೆ ಪಡುತ್ತಾರೋ ಆ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ರೇವಣ್ಣ ಅವರು ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯ, ತುಮಕೂರಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆಯೇ ಕಾರಣ: ರೇವಣ್ಣ

    ಹಾಸನ ನಗರಸಭೆ ಅಧ್ಯಕ್ಷಗಾದಿ ಎಸ್‍ಟಿ ಪಂಗಡಕ್ಕೆ ಮೀಸಲಾಗಿರುವುದರ ಬಗ್ಗೆ ಅಸಮಾಧಾನ ಹೊರಹಾಕಿದ್ದ ರೇವಣ್ಣ ಇದು ಕಾನೂನು ಬಾಹಿರ ಎಂದು ಹೇಳಿದ್ರು. ಮಾಜಿ ಸಚಿವ ರೇವಣ್ಣ ಆರೋಪಕ್ಕೆ ಶಾಸಕ ಪ್ರೀತಂಗೌಡ ಖಡಕ್ಕಾಗೇ ಪ್ರತಿಕ್ರಿಯಿಸಿದ್ದು, ಸರ್ಕಾರ ಕಾನೂನಿನಂತೆ ಮೀಸಲಾತಿ ನಿಗದಿ ಮಾಡಿದೆ. ಈ ಹಿಂದೆ ಹಾಸನ ನಗರಸಭೆಯ 35 ವಾರ್ಡಿನ ಮೀಸಲಾತಿಯನ್ನ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರಕಟಿಸಿತ್ತು. ಇವರು ಅಧಿಕಾರಕ್ಕೆ ಬಂದ ನಂತರ ಮೀಸಲಾತಿ ಯಾಕೆ ಬದಲಾಯಿಸಿದ್ರು ನೆನಪಿಸಿಕೊಳ್ಳಬೇಕು. ಆಗ ಕಾನೂನು ಎಲ್ಲಿ ಹೋಗಿತ್ತು. ಅವರು ಮಾಡಿದ್ರೆ ರಾಜಕಾರಣ, ಬೇರೆಯವರು ಮಾಡಿದ್ರೆ ಕಾನೂನು ಬಾಹಿರ ಅನ್ನೋದಾದ್ರೆ ನಾವು ರಾಜಕಾರಣಾನೇ ಮಾಡ್ತೀವಿ ಎಂದರು.

    4 ನೇ ವಾರ್ಡಿನಲ್ಲಿ ಅತೀ ಹೆಚ್ಚು ಪರಿಶಿಷ್ಟಜಾತಿ ಜನಾಂಗದವರಿದ್ರು. ಆದರೆ ಅದನ್ನು ಜನರಲ್ ಮಾಡಿ ಯಾವ ಕಾನೂನು ಪಾಲನೆ ಮಾಡಿದ್ರು. ರಾಜಕಾರಣದಲ್ಲಿ ಹಾಕುವ ಪಟ್ಟನ್ನ ರೇವಣ್ಣನವರೂ ಮಾಡಿದ್ರು. ನಾನು ಮಾಡ್ತೀನಿ. ಅದಕ್ಕೆ ಹತಾಶರಾಗದೆ ರೇವಣ್ಣ, ರಾಜಕಾರಣವನ್ನು ಒಪ್ಪಿಕೊಳ್ಳಬೇಕು. ಹಾಸನ ನಗರಸಭೆಯಲ್ಲಿ ಯಾರಿಗೂ ಬಹುಮತವಿಲ್ಲ. ಹಾಸನ ವಿಧಾನಸಭೆ ಜನ ಅವರ ಪರವಾಗಿಲ್ಲ ಎಂಬುದನ್ನು ರೇವಣ್ಣ ಅರ್ಥ ಮಾಡಿಕೊಳ್ಳಬೇಕು. ಹಾಸನ ಜನ ಅಭಿವೃದ್ಧಿ ಪರ, ಬಿಜೆಪಿ ಪರ ಇದ್ದಾರೆ. ಹೀಗಾಗಿ ರೇವಣ್ಣ ಅವರು ನಮಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

  • 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಕೋಮುವಾದಿ ಬಿಜೆಪಿ ಜೊತೆ ಸೇರಿದೆ: ರೇವಣ್ಣ

    150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಕೋಮುವಾದಿ ಬಿಜೆಪಿ ಜೊತೆ ಸೇರಿದೆ: ರೇವಣ್ಣ

    – ಜಿಲ್ಲೆಯಲ್ಲಿ ಬಾಲಮುರುಕ ಅಧಿಕಾರಿಗಳಿದ್ದಾರೆ

    ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು.

    ರಾಜ್ಯದ ಎಲ್ಲೆಡೆ ಬೆಳಗ್ಗೆಯಿಂದ ಸಂಜೆವರೆಗೆ ಮಾತ್ರ ಸರ್ಕಾರಿ ಕಚೇರಿ ತೆರೆದಿರುತ್ತದೆ. ಹಾಸನದ ಜಿಲ್ಲಾಧಿಕಾರಿ ಕಚೇರಿ ಮಧ್ಯರಾತ್ರಿವರೆಗೂ ತೆರೆದಿರುತ್ತದೆ. 24*7 ಮಾದರಿಯಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ತೆರೆದಿರುತ್ತದೆ. ಬಿಜೆಪಿ ಪಕ್ಷದ ಮುಖಂಡರ ಅಧೀನದಲ್ಲಿ ಜಿಲ್ಲೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆಂದು ಆರೋಪ ಮಾಡಿದರು.

    ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ತರಾತುರಿಯಲ್ಲಿ ಮಾಡಲಾಗುತ್ತಿದೆ. ಹಾಸನದಲ್ಲಿ ಕಾನೂನು ನಿಯಮ ಗಾಳಿಗೆ ತೂರಿ ಕೆಲಸ ನಡೆಯುತ್ತಿದೆ. ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ 18ನೇ ಸ್ಥಾನದಲ್ಲಿತ್ತು. 52ನೇ ಸ್ಥಾನದಲ್ಲಿದ್ದ ಹಾಸನ ಜಿಲ್ಲೆಗೆ ಕಾನೂನು ಬಾಹಿರವಾಗಿ ನಿಗದಿ ಮಾಡಿದ್ದಾರೆ ಎಂದು ಆರೋಪಿಸಿದರು.

    ಹಾಸನ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಒಂದು ಪಕ್ಷದ ಏಜೆಂಟ್ ನಂತೆ ಕೆಲಸ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ಅಧಿಕಾರಿಗಳು ಬಿಜೆಪಿ ಮುಖಂಡರ ಅಧೀನದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಿಎಂ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಡ್ವೋಕೇಟ್ ಜನರಲ್ ರವರು ಹಾಸನ ನಗರಸಭೆ ಸಾಮಾನ್ಯ ವರ್ಗಕ್ಕೆ ನಿಗದಿಯಾಗುತ್ತೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆ ಅಡ್ವೋಕೋಟ್ ಜನರಲ್ ಕೊರೊನಾ ಬಂತು ಅಂತ ಮನೆಗೆ ಹೋದ್ರು. ಈಗ ಹಾಸನ ಮತ್ತು ಅರಸೀಕೆರೆ ನಗರಸಭೆಗೆ ಎಸ್ ಟಿ ಮೀಸಲಾತಿ ನಿಗದಿ ಮಾಡಿದ್ದಾರೆಂದು ಆರೋಪ ಮಾಡಿದರು.

    ಈ ಮೀಸಲಾತಿ ನಿಗದಿ ಮಾಡಿರುವುದು ಕಾನೂನು ಬಾಹಿರ. ನಾವು ಮೀಸಲಾತಿ ವಿರೋಧಿಸಿ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸರ್ಕಾರಿ ಅಧಿಕಾರಿಗಳು ಬಿಜೆಪಿ ಕೈಗೊಂಬೆಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬಾಲಮುರುಕ ಅಧಿಕಾರಿಗಳಿದ್ದಾರೆ ಎಂದು ರೇವಣ್ಣ ಕಿಡಿಕಾರಿದರು.

  • ಮಾಜಿ ಸಚಿವ ರೇವಣ್ಣಗೆ ಕೊರೊನಾ- ಬೇಸರ ವ್ಯಕ್ತಪಡಿಸಿದ ಸಿಟಿ ರವಿ, ಸುಧಾಕರ್

    ಮಾಜಿ ಸಚಿವ ರೇವಣ್ಣಗೆ ಕೊರೊನಾ- ಬೇಸರ ವ್ಯಕ್ತಪಡಿಸಿದ ಸಿಟಿ ರವಿ, ಸುಧಾಕರ್

    ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗಹೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸಿ.ಟಿ ರವಿ, ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಸುಧಾಕರ್ ಟ್ವೀಟ್ ಮಾಡಿ, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

    ಸೋಂಕು ಬಂದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೇವಣ್ಣ ದಾಖಲಾಗಿದ್ದಾರೆ. ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು.

    ಆಗಸ್ಟ್ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಕಚೇರಿಯಲ್ಲಿ ಏಜೆಂಟ್‍ಗಳಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ: ಹೆಚ್.ಡಿ.ರೇವಣ್ಣ

    ಕಚೇರಿಯಲ್ಲಿ ಏಜೆಂಟ್‍ಗಳಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ: ಹೆಚ್.ಡಿ.ರೇವಣ್ಣ

    -ಶಾಸಕರ ಹೆಸ್ರು ಹೇಳಿ ಹಣ ವಸೂಲಿ ಮಾಡ್ತೀರಾ?

    ಹಾಸನ: ನಗರದ ಸಬ್ ರಿಜಿಸ್ಟರ್ ಕಚೇರಿಗೆ ದಿಢೀರ್ ಭೇಟಿ ನೀಡಿ ಶಾಕ್ ಕೊಟ್ಟ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಣದ ದಂಧೆ ನಡೆಸುತ್ತಿದ್ದೀರಾ ಎಂದು ಪ್ರಶ್ನಿಸಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

    ಹಾಸನದ ಸಬ್ ರಿಜಿಸ್ಟರ್ ಕಚೇರಿಗೆ ಯಾರಾದರೂ ಜಮೀನು ವಿಚಾರದಲ್ಲಿ ಹೋದರೇ ಹತ್ತು ಲಕ್ಷ ರಿಜಿಸ್ಟರ್ ಗೆ 10 ಸಾವಿರ, 20 ಲಕ್ಷಕ್ಕೆ 20 ಸಾವಿರ ಹಾಗೂ 30 ಲಕ್ಷಕ್ಕೆ 30 ಸಾವಿರ ರೂ ಫಿಕ್ಸ್ ಮಾಡಲಾಗಿದೆ ಎಂದು ರೇವಣ್ಣ ಪ್ರಶ್ನಿಸಿದರು. ಸಾರ್ವಜನಿಕರ ಸಮ್ಮುಖದಲ್ಲಿ ಕೇಳಲಾದ ಪ್ರಶ್ನೆಗೆ ಅಧಿಕಾರಿಗಳು ಉತ್ತರ ನೀಡದೇ ಮೌನವಾಗಿದ್ದರು. ನಾನು ಇಲ್ಲಿಗೆ ಬಂದಾಗ ಏಜೆಂಟ್ ಗಳು ನನ್ನ ಕಣ್ಣಿಗೆ ಏನಾದರೂ ಕಾಣಿಸಿದರೇ ಇಲ್ಲಿರುವ ಜನರಿಂದಲೇ ಓಡಾಡಿಸಿ ಹೊಡೆಯಲು ಹೇಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

    ಒಂದೊಂದು ನಿವೇಶನಕ್ಕೂ ಬಡ ಜನರಿಂದ ಹಣ ಪಡೆಯುವ ನೀವು ಈ ಹಣವನ್ನು ಶಾಸಕರಿಗೆ ಕೊಡೊದಕ್ಕಾ? ನನ್ನ ವಿಧಾನಸಭಾ ಕ್ಷೇತ್ರದ ಎರಡು ಹೋಬಳಿ ಬರುತ್ತವೆ. ಅವರಿಗೆ ಯಾಕೆ ನೀವು ಕೆಲಸ ಮಾಡಿ ಕೊಡುತ್ತಿಲ್ಲ. ಯಾವ ಶಾಸಕರಿಗೆ ಹಣ ಕೊಡುತ್ತಿದ್ದೀರಾ? ಪ್ರತಿ ತಿಂಗಳು ನಾಲ್ಕು ಲಕ್ಷ ಕೊಡಬೇಕು ಅಂತಾ ಜನರಿಂದ ಹಣ ವಸೂಲಿ ಮಾಡುತ್ತಿದ್ದೀರ. ಸರ್ಕಾರಕ್ಕೆ ಕೊಡಲು ವಸೂಲಿ ಮಾಡುತ್ತಿದ್ದೀರಾ ಅಥವಾ ಬೇರೆ ಯಾರಿಗೆ ಕೊಡಲು ವಸೂಲಿ ಮಾಡುತ್ತಿದ್ದೀರಾ ಹೇಳಿ ಎಂದು ತರಾಟೆಗೆ ತೆಗೆದುಕೊಂಡರು.

    ನಿಮ್ಮ ಡ್ರಾಯರ್ ಎಲ್ಲ ತೆಗೆಯಿರಿ ಎಷ್ಟೆಷ್ಟು ಹಣ ಇರಬಹುದು ನೋಡೋಣ ಎಂದು ಅಧಿಕಾರಿಗಳಿಗೆ ಕೇಳಿದಾಗ ಅವರಿಂದ ಸಮರ್ಪಕ ಉತ್ತರ ಬರಲಿಲ್ಲ. ಇನ್ನು ರಿಜಿಸ್ಟರ್ ಆಗಿರುವ ಪಟ್ಟಿ ತೋರಿಸಿ, ದಿನಕ್ಕೆ ಎಷ್ಟು ರಿಜಿಸ್ಟರ್ ಮಾಡಲಾಗುತ್ತಿದೆ? ಸಿನಿಯಾರಿಟಿ ಮೇಲೆ ಮಾಡಲಾಗುತ್ತಿದಿಯಾ? ಇಲ್ಲ ಹಣ ಹೆಚ್ಚು ಕೊಟ್ಟವರಿಗೆ ಮೊದಲು ಆಗುತ್ತಿದಿಯಾ ಎಂದು ಆಕ್ರೋಶ ಹೊರಹಾಕಿದರು.

  • ಬೆಂಗಳೂರು ಗಲಾಟೆಯ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ

    ಬೆಂಗಳೂರು ಗಲಾಟೆಯ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ

    ಹಾಸನ: ಬೆಂಗಳೂರಿನ ಕೆ ಜಿ ಹಳ್ಳಿಯಲ್ಲಿ ನಡೆದ ಗಲಾಟೆಯ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

    ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಸಮಸ್ಯೆ ಇದ್ದಾಗ ಪೊಲೀಸರು, ಶಾಸಕರ ಜೊತೆ ಕುಳಿತು ಮಾತನಾಡಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಗೊಳ್ಳಬಾರದು. ವಿವಾದಿತ ಪೋಸ್ಟ್ ಹಾಕಲು ಫೇಸ್ ಬುಕ್ ಹ್ಯಾಕ್ ಆಗಿದೆ ಅಂತಿದ್ದಾರೆ. ಅದನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ಯಾರೇ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಕೋವಿಡ್ ಸಂದರ್ಭದಲ್ಲಿ ಕೆಲವೊಬ್ಬರು ಭಯದಿಂದ ಗಲಾಟೆ ಮಾಡಿದ್ರು. ಅದನ್ನು ಸರ್ಕಾರ ನಿಯಂತ್ರಿಸಿತು. ಅದೇ ರೀತಿ ಈಗ ಸರ್ಕಾರ ಪರಿಸ್ಥಿತಿ ನಿಯಂತ್ರಿಸಲಿದೆ ಎಂದಿದ್ದಾರೆ.

    ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸಾರ್ವಜನಿಕರ ಆಸ್ತಿಗೆ ಹಾನಿಯಾಗುವ ಕೆಲಸ ಯಾರೂ ಮಾಡಬಾರದು. ರಾಜ್ಯದಲ್ಲಿ ಶಾಂತಿ ಕಾಪಾಡೋದು ಮುಖ್ಯ. ಜನರ ಸಾವುನೋವಿಗೆ ಯಾರೂ ಕಾರಣ ಆಗಬಾರದು. ಪೊಲೀಸರ ಜೊತೆ ಕುಳಿತು ಮಾತನಾಡಿ ಸಮಸ್ಯೆ ಹೇಳಿಕೊಳ್ಳಬೇಕು. ಈ ರೀತಿ ದಾಂಧಲೆ ಮಾಡಬಾರದು. ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದು ಕೆಟ್ಟ ಸನ್ನಿವೇಶ. ನಮ್ಮ ರಾಜ್ಯ ಶಾಂತಿಪ್ರಿಯ ರಾಜ್ಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತೆ ಎಂಬ ಬಗ್ಗೆ ನಾನು ಮಾತನಾಡಲ್ಲ. ಆದರೆ ಸಾರ್ವಜನಿಕರ ಆಸ್ತಿಗೆ ಹಾನಿಯಾಗುವ ಕೆಲಸ ಯಾರೂ ಮಾಡಬಾರದು ಎಂದು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

  • ಯಾರು ನಿರ್ನಾಮ ಆಗುತ್ತಾರೆಂದು ಮುಂದಿನ ಚುನಾವಣೆಯಲ್ಲಿ ನೋಡೋಣ: ರೇವಣ್ಣ

    ಯಾರು ನಿರ್ನಾಮ ಆಗುತ್ತಾರೆಂದು ಮುಂದಿನ ಚುನಾವಣೆಯಲ್ಲಿ ನೋಡೋಣ: ರೇವಣ್ಣ

    ಹಾಸನ: ನಾವು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ವಿರೋಧವಾಗಿದ್ದೇವೆ. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಸಿಪಿ.ಯೋಗೇಶ್ವರ್ ಹೇಳಿಕೆ ವಿರುದ್ಧ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.

    ಹಾಸನದಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರ್ನಾಮ ಮಾಡೋದು ದೇವರು ಅಥವಾ ಪ್ರಜೆಗಳು. ಯೋಗೇಶ್ವರ್ ಅವರಿಂದಲೋ ಬೇರೆ ಯಾರಿಂದಲೋ ಪಕ್ಷ ನಿರ್ನಾಮ ಮಾಡಲು ಸಾಧ್ಯವಿಲ್ಲ. ಯಾರು ನಿರ್ನಾಮ ಆಗುತ್ತಾರೆ ಎಂಬುದನ್ನು ಮುಂದಿನ ಚುನಾವಣೆಯಲ್ಲಿ ನೋಡೋಣ ಎಂದು ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಗ್ಗೆ ಎಚ್‍ಡಿಕೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ: ಬಸವರಾಜ್ ಹೊರಟ್ಟಿ

    ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಪಕ್ಷದ ಆರೋಪ ಬಗ್ಗೆ ಮಾತನಾಡಿದ ಅವರು, ಅವರಿಬ್ಬರು ರಾಷ್ಟ್ರೀಯ ಪಕ್ಷದವರು. ನಾವು ಹಗರಣದ ಬಗ್ಗೆ ಮಾತನಾಡಲು ಹೋದರೆ ವಿಧಾನಸಭೆಯಲ್ಲಿ ಚರ್ಚೆ ಮಾಡಿ ಅಂತಾರೆ. ಒಳ್ಳೆಯ ಕೆಲಸ ಮಾಡುತ್ತಿರುವಾಗ ಹೊಟ್ಟೆಯುರಿ ಬಂದು ಇವರು ಅಳುತ್ತಾರೆ ಅಂತಾರೆ ಎಂದು ಹೇಳಿದರು. ಇದನ್ನೂ ಓದಿ: 15 ದಿನ ಹಿಂದೆ ಕಾಂಗ್ರೆಸ್‌ಗೆ ಬರ್ತಿನಿ ಅಂತ ಯೋಗೇಶ್ವರ್‌ ನನ್ನ ಬಳಿ ಚರ್ಚಿಸಿದ್ದ – ಡಿಕೆಶಿ

    ಇದೇ ವೇಳೆ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನೇನಾದರೂ ಸಚಿವನಾಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ರೆ, ಭ್ರಷ್ಟಾಚಾರ ಮಾಡಿದ್ರೆ ಇಂದೇ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ. ಈ ಬಗ್ಗೆ ಯಾರಾದರೂ ಅಧಿಕಾರಿಗಳು ಹೇಳಲಿ. ಕೋವಿಡ್ ನಿರ್ವಹಣೆ ಸರಿಯಾಗಿ ಮಾಡದ ಸರ್ಕಾರ, ಎಷ್ಟು ದಿನ ಇರುತ್ತೋ ಅಷ್ಟು ದಿನ ಮಜಾ ಮಾಡಬೇಕು ಎಂದು ಹೊರಟಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಹಿಂದೆ ಹಾಸನ ಜಿಲ್ಲೆಗೆ ಅನುಮೋದನೆ ಕೊಟ್ಟಿರುವ ಕಾಮಗಾರಿಗಳು ಆಗದಿದ್ರೆ ಶಾಂತ ರೀತಿಯಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಜೆಡಿಎಸ್ ಮುಗಿಸಲು ನೋಡುತ್ತಿದ್ದಾರೆ: ಎಚ್‍ಡಿಕೆ

  • ಕೊರೊನಾ ಮಧ್ಯೆ ಗರಿಗೆದರಿದ ರಾಜಕೀಯ- ಬಿಜೆಪಿಯಲ್ಲಿನ ಒಳಜಗಳದಿಂದ ಲಾಭ ಪಡೆದುಕೊಳ್ಳುತ್ತಾ ಕಾಂಗ್ರೆಸ್?

    ಕೊರೊನಾ ಮಧ್ಯೆ ಗರಿಗೆದರಿದ ರಾಜಕೀಯ- ಬಿಜೆಪಿಯಲ್ಲಿನ ಒಳಜಗಳದಿಂದ ಲಾಭ ಪಡೆದುಕೊಳ್ಳುತ್ತಾ ಕಾಂಗ್ರೆಸ್?

    – ಸಿದ್ದರಾಮಯ್ಯ ಭೇಟಿಯಾಗಿದ್ದ ಉಮೇಶ್ ಕತ್ತಿ?

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎಂಬ ಹೆಮ್ಮಾರಿ ತಾಂಡವವಾಡುತ್ತಿದ್ದು, ಈ ಮಧ್ಯೆ ರಾಜ್ಯ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಕೆಲ ಶಾಸಕರು ಬಂಡಾಯವೆದ್ದಿದ್ದು, ಪಕ್ಷದ ಈ ಒಳಜಗಳಗಳನ್ನು ಕಾಂಗ್ರೆಸ್ ಎನ್ ಕ್ಯಾಶ್ ಮಾಡಿಕೊಳ್ಳುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

    ಬಿಜೆಪಿಯಲ್ಲಿ ಶಾಸಕರು ಬಂಡಾಯವೇಳುತ್ತಿದ್ದಂತೆಯೇ ವಿರೋಧ ಪಕ್ಷದಲ್ಲಿ ಕೂಡ ರಾಜಕೀಯ ಮೇಲಾಟ ಶುರುವಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕಳೆದ 15 ದಿನಗಳಿಂದ ಆಪರೇಷನ್ ಯಡಿಯೂರಪ್ಪ ಪ್ಲಾನ್ ನಡೆಯುತ್ತಿದೆ. ಈ ಪ್ಲಾನ್ ತಿಳಿದು ವಿರೋಧ ಪಕ್ಷಗಳು ಕಾದುನೋಡುವ ತಂತ್ರ ಅನುಸರಿಸುತ್ತಿವೆಯಂತೆ. ನಾಲ್ಕೈದು ದಿನದ ಹಿಂದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಳಿಗೆ ಹೆಚ್.ಡಿ ರೇವಣ್ಣ ತೆರಳಿ ಮಾತುಕತೆ ನಡೆಸಿದ್ದಾರೆ. ಬಿಜೆಪಿಯ ಕೆಲ ಬಂಡಾಯ ಶಾಸಕರ ಜೊತೆಯೂ ಸಂಪರ್ಕ ಇದೆ ಅನ್ನೋ ಮಾಹಿತಿ ಇದೆ. ಆದರೆ ಸಿದ್ದರಾಮಯ್ಯ ಈಗ ಸಕಾಲ ಅಲ್ಲ, ಕಾಯೋಣ ಎಂದಿದ್ದಾರೆ ಎನ್ನಲಾಗಿದೆ.

    ರೇವಣ್ಣ ಕೂಡ ಸದ್ಯ ನಡೆಯುತ್ತಿರುವ ಬೆಳವಣಿಗೆಯನ್ನ ನಿರ್ಲಕ್ಷ್ಯ ಮಾಡೋದು ಬೇಡ ಎಂದು ಕಿವಿಮಾತು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಯಿಂದ ಯಾರಿಗೆ ಲಾಭ?, ಯಾರಿಗೆ ನಷ್ಟವಾಗಲಿದೆ ಎಂಬುದು ಕುತೂಹಲವಾಗಿದೆ. ಇತ್ತ ರೇವಣ್ಣ ಭೇಟಿ ಬಳಿಕ ಸಿದ್ದರಾಮಯ್ಯ ಉಮೇಶ್ ಕತ್ತಿಯವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿಯೂ ಲಭಿಸಿದೆ. ನಾಲ್ಕು ದಿನಗಳ ಹಿಂದೆಯೇ ಸಿದ್ದರಾಮಯ್ಯ ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.