Tag: ಹೆಚ್.ನಾಗೇಶ್

  • ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

    ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

    ಬೆಂಗಳೂರು: ಜೆಡಿಎಸ್ (JDS) ಮಾಜಿ ಶಾಸಕ ವೈಎಸ್‌ವಿ ದತ್ತಾ (YSV Datta) ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ (H Nagesh) ಶನಿವಾರ ಕಾಂಗ್ರೆಸ್ (Congress) ಪಕ್ಷ ಸೇರ್ಪಡೆಗೊಂಡಿದ್ದಾರೆ.

    ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದತ್ತಾ, ನಾಗೇಶ್ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು, ಪಕ್ಷದ ಬಾವುಟ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar), ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಮೈಸೂರು ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಸಹ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

    ನೂಕು ನುಗ್ಗಲು: ಪ್ರಬಲ ನಾಯಕರು ಪಕ್ಷ ಸೇರ್ಪಡೆಯಾಗುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸತೊಡಗಿದರು. ಆದ್ದರಿಂದ ನೂಕು ನುಗ್ಗಲು ಶುರುವಾಗಿತ್ತು. ಈ ವೇಳೆ ಕಾರ್ಯಕರ್ತರನ್ನ ಗದರಿಸಿದ ಡಿಕೆಶಿ, ಎಲ್ಲರೂ ಶಾಂತಿಯಿಂದ ಇದ್ದರೇ ಸಭೆ ಮಾಡುತ್ತೇನೆ ಇಲ್ಲದಿದ್ದರೆ ಮಾಡಲ್ಲ ಎಂದು ಹೇಳಿದರು. ಬಳಿಕ ಕಾರ್ಯಕರ್ತರು ಶಾಂತಿಯಾದರು. ಇದನ್ನೂ ಓದಿ: ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ

    ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ವೈಎಸ್‌ವಿ ದತ್ತಾ, ಇದು ಮಾತನಾಡುವ ಸಮಯವಲ್ಲ, ಕೆಲಸ ಮಾಡುವ ಸಮಯ. ಕಳೆದ ಹಲವು ದಶಕಗಳಿಂದ ನಾನು ಒಂದೇ ಪಕ್ಷದಲ್ಲಿದ್ದೆ. ಆದ್ರೆ ಈಗ ಈ ತೀರ್ಮಾನ ತೆಗೆದುಕೊಂಡಿದ್ದೇನೆ. ಇದು ನಮ್ಮ ರಾಷ್ಟ್ರದ ತುರ್ತು ಅಗತ್ಯವಾಗಿದೆ ಎಂದರು. ಇದನ್ನೂ ಓದಿ: ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!

    ಸಂವಿಧಾನ ಹಾಗೂ ಸೌಹಾರ್ದತೆಯನ್ನ ಬುಡಮೇಲು ಮಾಡುವ ಪ್ರಯತ್ನಗಳು ನಡೆದಿವೆ. ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ ಅನ್ನೋ ಕಾರಣಕ್ಕೆ ಯಾವುದೇ ಶರತ್ತುಗಳಿಲ್ಲದೆ ಪಕ್ಷ ಸೇರುತ್ತಿದ್ದೇನೆ. ನಾನು ಮೊದಲಿನಿಂದಲೂ ಎಡಪಂಥೀಯ. ಹೀಗಾಗಿ ನನಗೆ ಅತ್ಯಂತ ಹತ್ತಿರ ಎನಿಸಿದ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಕ್ಷೇತ್ರದಲ್ಲೂ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚಿಸಿದ್ದೇನೆ. ನಾನು ಕಾರ್ಯಕರ್ತನಾಗಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ. ನನ್ನನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

    ಮಾಜಿ ಸಚಿವ, ಹಾಲಿ ಶಾಸಕ ಹೆಚ್. ನಾಗೇಶ್ ಮಾತನಾಡಿ, ನನಗೆ ಕಾಂಗ್ರೆಸ್ ಸಿದ್ಧಾಂತಗಳು ಇಷ್ಟ ಆಗಿ ಸೇರುತ್ತಿದ್ದೇನೆ. ನನ್ನ ತಂದೆ-ತಾಯಿ ಕೂಡ `ಕೈ’ಗೆ ಮತ ಕೊಡುತ್ತಿದ್ದರು. ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಜನಾಂಗಕ್ಕೆ ತಿಳಿಹೇಳುತ್ತೇನೆ. ಕಾಂಗ್ರೆಸ್ ದಾರಿಯೇ ನನ್ನ ದಾರಿ. ಇನ್ಮುಂದೆ ನಾನು ಎಲ್ಲೂ ಹೋಗಲ್ಲ. ಸ್ವಂತ ಬಲದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಬಕಾರಿ ಸಚಿವ ನಾಗೇಶ್ ವಿರುದ್ಧ ಮೋದಿಗೆ ದೂರು

    ಅಬಕಾರಿ ಸಚಿವ ನಾಗೇಶ್ ವಿರುದ್ಧ ಮೋದಿಗೆ ದೂರು

    ಕೋಲಾರ: ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವರ್ಗಾವಣೆ ದಂಧೆ ಜೋರಾಗಿದೆಯಾ ಅನ್ನೋ ಅನುಮಾನ ಇದೀಗ ಮೂಡಿದೆ. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್ ನಾಗೇಶ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಸಚಿವರ ವಿರುದ್ದದ ದೂರು ನೇರವಾಗಿ ಪ್ರಧಾನ ಮಂತ್ರಿ ಕಚೇರಿಗೆ ತಲುಪಿದೆ.

    ಹೌದು. ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರುಪಾಯಿ ಲಂಚಕ್ಕೆ ಒತ್ತಾಯಿಸಿರುವ ಸಚಿವ ಹೆಚ್.ನಾಗೇಶ ವಿರುದ್ಧ ದೇಶದ ಪ್ರಧಾನಿ ಕಾರ್ಯಾಲಯಕ್ಕೆ ನೇರವಾಗಿ ದೂರು ದಾಖಲಾಗಿದೆ. ಅಷ್ಟೆ ಅಲ್ಲ ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಅಧಿಕೃತವಾಗಿ ದೂರು ದಾಖಲಾಗಿದೆ.

    ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಉನ್ನತ ಅಧಿಕಾರಿಯೊಬ್ಬರ ಪುತ್ರಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೆಂಗಳೂರಿನ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದಾರೆ. ಜುಲೈ ತಿಂಗಳ ಅವಧಿಯಲ್ಲಿ ಬೆಂಗಳೂರಲ್ಲಿ ಖಾಲಿಯಿದ್ದ ಜಂಟಿ ಆಯುಕ್ತರ ಹುದ್ದೆಗಾಗಿ ಸಚಿವರ ಬಳಿ ತಮ್ಮ ಮನವಿ ಮಾಡಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ ಈ ಅಧಿಕಾರಿ ಆರೋಗ್ಯದ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ಈ ಬಗ್ಗೆ ಮನವಿ ಮಾಡಿದಾಗ ಅಬಕಾರಿ ಸಚಿವ ಹೆಚ್ ನಾಗೇಶ್ ಒಂದು ಕೋಟಿ ರೂಪಾಯಿ ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದರು. ಲಂಚ ಕೊಡುವುದಕ್ಕೆ ಅಧಿಕಾರಿಯು ನಿರಾಕರಿಸಿದ್ದಕ್ಕಾಗಿ ರಜೆ ಮೇಲೆ ತೆರಳಲು ಸಚಿವ ಹೆಚ್.ನಾಗೇಶ್  ಅವರು ಬಲವಂತ ಮಾಡಿದರು ಎಂದು ಅಧಿಕಾರಿಯ ಪುತ್ರಿ ಬೆಂಗಳೂರು ವಾಸಿ ಸ್ನೇಹಾ ಎಂಬವರು ದೂರಲ್ಲಿ ವಿವರಿಸಿದ್ದಾರೆ.

    ಸಚಿವ ಹೆಚ್.ನಾಗೇಶ್ ಅವರ ಲಂಚಗುಳಿತನ ಬಗ್ಗೆ ಡಿಸಿಎಂ ಅಶ್ವತ್ಥನಾರಾಯಣ್ ಅವರಿಗೆ ಮಾಹಿತಿಯನ್ನು ಕೊಟ್ಟರೂ ಪ್ರಯೋಜನವಾಗಲಿಲ್ಲ. ಕಳೆದ ಒಂದು ತಿಂಗಳಿನಿಂದಲೂ ಅಬಕಾರಿ ಇಲಾಖೆಯಲ್ಲಿ ಲಂಚದ ಹಣವನ್ನು ಪಡೆದುಕೊಳ್ಳುವ ಮೂಲಕವೇ ಆರು ನೂರಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆಯು ಆಗಿದೆ. ಕೋಲಾರದ ಮೂಲದ ಎಲ್.ಎ ಮಂಜುನಾಥ್ ಮತ್ತು ಶಿವಮೊಗ್ಗ ಮೂಲದ ಕಚೇರಿಯ ಸಿಬ್ಬಂದಿ ಹರ್ಷ ಎನ್ನುವ ದಲ್ಲಾಳಿಗಳನ್ನು ಇರಿಸಿಕೊಂಡು ಸಚಿವರು ಅಕ್ರಮ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ತಮ್ಮ ಆದರ್ಶಗಳನ್ನು ಪಾಲಿಸುತ್ತಿರುವ ನಾನು ಇದೀಗ ತಮ್ಮ ಮೇಲೆ ಕೊನೆಯ ಭರವಸೆಯನ್ನು ಇರಿಸಿಕೊಂಡು ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದು ಅಧಿಕಾರಿಯ ಪುತ್ರಿ ಸ್ನೇಹ ಎಂಬುವರು ಪತ್ರ ಬರೆದಿದ್ದಾರೆ. ಪ್ರಧಾನಿ ಕಚೇರಿಗೆ ದೂರನ್ನು ಬರೆದಿರುವ ಸ್ನೇಹ ಅವರು ರಾಜ್ಯದ ಸಚಿವರುಗಳಿಗೆ, ವಿರೋಧ ಪಕ್ಷದ ಮುಖಂಡರಿಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಹ ಪತ್ರವನ್ನು ಟ್ಯಾಗ್ ಮಾಡಿದ್ದಾರೆ.

    ಒಟ್ಟಿನಲ್ಲಿ ವರ್ಗಾವಣೆ ದಂಧೆ ಎನ್ನುವುದು ಸರ್ಕಾರಗಳಿಗೆ ಕಾಡುವ ಭೂತ, ಈಗ ರಾಜ್ಯದಲ್ಲಿ ಅಧಿಕಾರಾರೂಢ ಬಿಜೆಪಿ ಸರ್ಕಾರಕ್ಕೂ ಆರೋಪದ ಸರದಿ ಬಂದಿದ್ದು, ಅದರಲ್ಲೂ ದೂರು ನೇರವಾಗಿ ಪ್ರದಾನಿ ಮೋದಿಯವರಿಗೆ ತಲುಪಿದ್ದು, ಅಬಕಾರಿ ಸಚಿವ ಮತ್ತು ಸರ್ಕಾರದ ಮುಖ್ಯಸ್ಥರಾಗಿ ಮುಖ್ಯಮಂತ್ರಿಗಳೆ ಇದಕ್ಕೆ ಉತ್ತರ ನೀಡಬೇಕಿದೆ.

  • ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ

    ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ

    ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ.

    ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ ವೇಳೆ ಕಳ್ಳಬಟ್ಟಿ ಹತೋಟಿಗೆ ತರಲು ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ. ಮೇ-3 ವರೆಗೂ ಪ್ರಧಾನಿಗಳ ಮಾತಿಗೆ ಗೌರವಿಸಿ ಸಹಕರಿಸಿ ಎಂದು ಮದ್ಯಪ್ರಿಯರಿಗೆ ಸಲಹೆ ನೀಡಿದರು.

    ಲಾಕ್‍ಡೌನ್ ಆದಾಗಿನಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಎಣ್ಣೆ ಸಿಗದೇ ಕುಡುಕರು ಮದ್ಯದಂಗಡಿಗಳಿಗೆ ಕನ್ನ ಹಾಕಿ ಹಣ ಮುಟ್ಟದೇ ತಮ್ಮ ಬ್ರ್ಯಾಂಡ್ ಕದ್ದು ತೆಗೆದುಕೊಂಡು ಹೋಗುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಸಿಗದ್ದಕ್ಕೆ ಇಬ್ಬರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ವರದಿ ಆಗಿದೆ. ಬುಧವಾರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಜಿ ಸಚಿವ, ಹೆಚ್.ವಿಶ್ವನಾಥ್, ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು. ಪ್ರತಿನಿತ್ಯ ನೀಡದಿದ್ದರೂ ವಾರದಲ್ಲಿ ಎರಡು ದಿನ ಎಂಎಸ್‍ಐಎಲ್ ಸೇರಿದಂತೆ ಬಾರ್ ಗಳಲ್ಲಿ ಪಾರ್ಸಲ್ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದ್ದರು.

  • ಅದನ್ನೆಲ್ಲ ನೀವು ಕೇಳ್ಬಾರ್ದು, ನಾನು ಹೇಳ್ಬಾರ್ದು ಅದು ಕಾಂಟ್ರವರ್ಸಿ ಆಗುತ್ತೆ – ನಾಗೇಶ್

    ಅದನ್ನೆಲ್ಲ ನೀವು ಕೇಳ್ಬಾರ್ದು, ನಾನು ಹೇಳ್ಬಾರ್ದು ಅದು ಕಾಂಟ್ರವರ್ಸಿ ಆಗುತ್ತೆ – ನಾಗೇಶ್

    ಕೋಲಾರ: ಅದನ್ನೆಲ್ಲ ನೀವು ಕೇಳ್ಬಾರ್ದು, ನಾನು ಹೇಳ್ಬಾರ್ದು, ಅದನ್ನು ಸರ್ಕಾರದ ಬಳಿ ಮಾತನಾಡುತ್ತೇನೆ, ನಾನು ಈಗ ಆ ವಿಚಾರ ಮಾತನಾಡಿದರೆ ಕಾಂಟ್ರವರ್ಸಿ ಆಗುತ್ತೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದರು.

    ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷೇತರ ಶಾಸಕರಾಗಿ, ಬಿಜೆಪಿ ಸರ್ಕಾರ ಬರಲು ಪ್ರಮುಖ ಕಾರಣರಾಗಿ ನಿಮಗೆ ಅಬಕಾರಿ ಖಾತೆ ನೀಡಿ ಪೂರ್ಣ ಸ್ವಾತಂತ್ರ್ಯ ನೀಡಿಲ್ಲ ಎನ್ನುವ ಆರೋಪ ನಿಜನಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

    ರೈತರ ಪೂರ್ಣ ಸಾಲಮನ್ನಾ ಸಾಧ್ಯವಿಲ್ಲ ಎನ್ನುವ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಕುರಿತ ಪ್ರಶ್ನೆಗೆ, ರಾಜ್ಯದ ಅಭಿವೃದ್ಧಿ ಕುರಿತು ನನಗೆ ಗೊತ್ತಿಲ್ಲ, ಯಾಕಂದರೆ ನಾನು ಕಳೆದ ಎರಡು ಮೂರು ದಿನದಿಂದ ಟಿವಿ ನೋಡಿಲ್ಲ. ನಿನ್ನೆ ರಾತ್ರಿ ನಾನು ಫಾರ್ಮ್ ಹೌಸ್ ನಲ್ಲಿದ್ದೆ, ನಮ್ಮ ಟಿವಿ ಔಟ್ ಆಫ್ ಸರ್ವೀಸ್ ನಲ್ಲಿದೆ, ಕತ್ತಲಾಗಿಬಿಟ್ಟಿತ್ತು, ಕರೆನ್ಸಿ ಹಾಕಿಸಿಲ್ಲ. 25 ರಂದು ಕೆಡಿಪಿ ಮೀಟಿಂಗ್ ಕರೆದಿದ್ದೇನೆ ಅದಾದ ನಂತರ ಸಿಎಂ ಏನು ಹೇಳಿದ್ದಾರೆ ಎಲ್ಲಾ ವಿಚಾರಗಳ ಕುರಿತು ತಿಳಿದುಕೊಳ್ಳುತ್ತೇನೆ ಎಂದು ಹಾರಿಕೆಯ ಉತ್ತರ ನೀಡಿದರು.

  • ಪಕ್ಷೇತರ ಶಾಸಕರಿಬ್ಬರಿಗಾಗಿ ಕೈ-ಕಮಲ ಕಾರ್ಯಕರ್ತರ ಫೈಟ್

    ಪಕ್ಷೇತರ ಶಾಸಕರಿಬ್ಬರಿಗಾಗಿ ಕೈ-ಕಮಲ ಕಾರ್ಯಕರ್ತರ ಫೈಟ್

    ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ನಿತೀಶ್ ಅಪಾರ್ಟ್‍ಮೆಂಟ್ ನಲ್ಲಿರುವ ವಿಷಯ ತಿಳಿಯುತ್ತಿದ್ದಂತೆ ಇಬ್ಬರಿಗಾಗಿ ನಡುರಸ್ತೆಯಲ್ಲಿ ಹೈಡ್ರಾಮ ನಡೆದಿದೆ.

    ನಿತೇಶ್ ಅಪಾರ್ಟ್‍ಮೆಂಟ್ ಮುಂದೆ ಆಗಮಿಸಿದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರರು ಒಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಅಪಾರ್ಟ್‍ಮೆಂಟ್ ಪ್ರವೇಶಕ್ಕೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಕುಳಿತ ಕೈ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇತ್ತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

    ಇದಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರನ್ನು ವಿಧಾನಸೌಧ ಒಂದು ಕಿ.ಮೀ. ಆಸುಪಾಸಿನಲ್ಲಿಯೇ ಇರಿಸಲಾಗಿದೆ. ನಾನು ಅವರಿಬ್ಬರು ಬರೋದನ್ನು ಕಾಯುತ್ತಿದ್ದೇನೆ. ವಿಧಾನಸೌಧದಲ್ಲಿ ನಮ್ಮ ವಿರುದ್ಧ ಹೇಗೆ ಮತ ಹಾಕುತ್ತಾರೆ ನೋಡೋಣ ಎಂದು ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದರು.

  • ನಮ್ಮ ವಿರುದ್ಧ ಅದ್ಹೇಗೆ ಕೈ ಎತ್ತುತ್ತಾರೆ ನೋಡ್ತೀನಿ: ಡಿಕೆಶಿ

    ನಮ್ಮ ವಿರುದ್ಧ ಅದ್ಹೇಗೆ ಕೈ ಎತ್ತುತ್ತಾರೆ ನೋಡ್ತೀನಿ: ಡಿಕೆಶಿ

    ಬೆಂಗಳೂರು: ವಿಶ್ವಾಸಮತ ಯಾಚನೆ ಸಂಬಂಧಿಸಿದ ವಿಷಯದ ಮೇಲೆ ಸುದೀರ್ಘವಾಗಿ ಮಾತನಾಡಿ ಹೊರ ಬಂದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷೇತರ ಶಾಸಕರು ನಮ್ಮ ವಿರುದ್ಧ ಹೇಗೆ ಕೈ ಎತ್ತುತ್ತಾರೆ ನೋಡೋಣ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದರು.

    ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರನ್ನು ವಿಧಾನಸೌಧ ಒಂದು ಕಿ.ಮೀ. ಆಸುಪಾಸಿನಲ್ಲಿಯೇ ಇರಿಸಲಾಗಿದೆ. ನಾನು ಅವರಿಬ್ಬರು ಬರೋದನ್ನು ಕಾಯುತ್ತಿದ್ದೇನೆ. ವಿಧಾನಸೌಧದಲ್ಲಿ ನಮ್ಮ ವಿರುದ್ಧ ಹೇಗೆ ಮತ ಹಾಕುತ್ತಾರೆ ನೋಡೋಣ ಎಂದರು.

    ಸಮ್ಮಿಶ್ರ ಸರ್ಕಾರದಲ್ಲಿ ಪಕ್ಷೇತರ ಶಾಸಕರಿಬ್ಬರಿಗೂ ಸಚಿವ ಸ್ಥಾನವನ್ನು ನೀಡಲಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಬೆನ್ನಲ್ಲೆ ತಮ್ಮ ನಿಲುವು ಬದಲಿಸಿಕೊಂಡು ಪಕ್ಷೇತರ ಶಾಸಕರು ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ತಮ್ಮ ಬೆಂಬಲ ಹಿಂಪಡೆದು ದೋಸ್ತಿಗಳಿಗೆ ಶಾಕ್ ನೀಡಿದ್ದರು.

  • ಶುಭ ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ

    ಶುಭ ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ

    – ಶಂಕರ್ ಗೆ ಪೌರಾಡಳಿತ, ನಾಗೇಶ್‍ಗೆ ಶಿಕ್ಷಣ ಸಾಧ್ಯತೆ

    ಬೆಂಗಳೂರು: ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಅವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಎಂ ಕಚೇರಿಯಿಂದ ಲಭ್ಯವಾಗಿದೆ.

    ರಾಜ್ಯಪಾಲ ವಿ.ಆರ್.ವಾಲಾ ಅವರು ಬೆಂಗಳೂರಿನಿಂದ ಹೊರ ಇರುವ ಹಿನ್ನೆಲೆಯಲ್ಲಿ ಸೋಮವಾರ ಖಾತೆ ಹಂಚಿಕೆ ಆಗಲಿದೆ ಎಂಬ ಮಾಹಿತಿ ಲಭಿಸಿದ್ದು, ನಾಳೆ ವಾಲಾ ಅವರಿಂದ ನೂತನ ಸಚಿವರ ಖಾತೆಗಳ ಪಟ್ಟಿಗೆ ಅಂಕಿತ ಬೀಳಲಿದೆ. ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಪೌರಾಡಳಿತ ಇಲಾಖೆಯ ಜವಾಬ್ದಾರಿಯನ್ನು ಆರ್.ಶಂಕರ್ ಅವರಿಗೆ ವಹಿಸುವ ಸಾಧ್ಯತೆಗಳಿವೆ. ಬಹು ದಿನಗಳಿಂದ ಸಚಿವರಿಲ್ಲದೇ ಉಳಿದುಕೊಂಡಿರುವ ಶಿಕ್ಷಣ ಇಲಾಖೆಗೆ ಹೆಚ್.ನಾಗೇಶ್ ಅವರ ಪಾಲಾಗಲಿದೆ ಎಂದು ಹೇಳಲಾಗುತ್ತಿದೆ.

    ಜೂನ್ 14ರಂದು ಹಲವು ಗೊಂದಲಗಳ ನಡುವೆ ಪಕ್ಷೇತರರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪಕ್ಷೇತರರರಿಗೆ ಸಚಿವ ಸ್ಥಾನ ನೀಡಿದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಹಿರಿಯ ನಾಯಕರು ಮತ್ತು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಪಕ್ಷೇತರ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲಾಯ್ತು ಎಂಬ ಮಾತುಗಳು ಕೇಳಿ ಬಂದಿವೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

    ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

    ಬೆಂಗಳೂರು: ಹಲವು ಗೊಂದಲಗಳ ನಡುವೆ ಮೈತ್ರಿ ಸಂಪುಟಕ್ಕೆ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಎಂಟ್ರಿ ಪಡೆದಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಇಬ್ಬರು ಶಾಸಕರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಆರ್.ಶಂಕರ್ ಇಂದು ಮತ್ತೊಮ್ಮೆ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಪದ ಗ್ರಹಣ ಕಾರ್ಯಕ್ರಮದಲ್ಲಿ ಸಿಎಂ, ಮಾಜಿ ಸಿಎಂ ಸಿದ್ದರಾಮಯ್ಯ ಸಚಿವರಾದ ಜಮೀರ್ ಅಹ್ಮದ್, ಡಿ.ಕೆ.ಶಿವಕುಮಾರ್ ಬಂಡೆಪ್ಪ ಕಾಶೆಂಪುರ್ ಮತ್ತು ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಪಕ್ಷೇತರರಿಗೆ ಸಂಪುಟದಲ್ಲಿ ಸ್ಥಾನ ಮಾನ ಕೊಟ್ರೇ ಏನ್ ತಪ್ಪಿದೆ. ಯಾವ ಅಸಮಾಧಾನವೂ ನಮ್ಮೊಳಗಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುತ್ತೇವೆ. ಪಕ್ಷ ಉಳಿಸಲು ಸ್ಥಿರತೆ ಕಾಪಾಡಲು ಎಲ್ಲರ ಒಮ್ಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಏಕಮುಖ ತೀರ್ಮಾನ ಅಲ್ಲ. ಹೊಸಬರಿಗೆ ಖಾತೆ ಹಂಚಿಕೆ ವಿಚಾರ ದ ಬಗ್ಗೆ ಮುಖಂಡರು ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದೇವೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಹೇಳಿದಂತೆ ನಾವು ನಡೆಯುತ್ತೇವೆ ಎಂದು ಹೇಳುವ ಶಾಸಕ ಸುಧಾಕರ್ ಹೇಳಿಕೆಗೆ ಟಾಂಗ್ ನೀಡಿದರು.