Tag: ಹೆಜ್ಜೇನು

  • ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ – 7 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ – 7 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಶಿವಮೊಗ್ಗ: ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, 7 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

    ಜಿಲ್ಲೆಯ ಹೊಸನಗರ (Hosanagar) ತಾಲೂಕಿನ ಚಿಕ್ಕಪೇಟೆ (Chikkapete) ನಗರದಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಪೇಟೆನಗರದ ಭಾಷಾ ಎಂಬುವವರ ಮನೆ ಸಮೀಪ ಸಂಜೆ 5 ಗಂಟೆ ಸುಮಾರಿಗೆ ಹೆಜ್ಜೇನು ದಾಳಿ ನಡೆಸಿದೆ.ಇದನ್ನೂ ಓದಿ:ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ವಿವಿಐಪಿ ಪ್ರದೇಶದಲ್ಲಿ ಶವವಾಗಿ ಪತ್ತೆ

    ಭಾಷಾ, ಪತ್ನಿ ಅಸ್ಮಾ, ಮಕ್ಕಳಾದ ಆರೀಫ್, ಅನೀಫ್, ಭಾಷಾ ಪಕ್ಕದ ಮನೆ ನಿವಾಸಿ ಯಾಸೀನ್, ಹಾಸಿಗೆ ರಿಪೇರಿಗಾಗಿ ತೆರಳಿದ್ದ ಹುಸೇನ್ ಸಾಬ್, ಬಾಬಾ ಸಾಬ್ ಮೇಲೆ ದಾಳಿ ನಡೆಸಿದೆ. ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ಸಾಬ್ (68) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೊಸನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

    ಅದೇ ದಿನ ಮತ್ತೇ ಹೆಜ್ಜೇನು ದಾಳಿ ನಡೆಸಿದ್ದು, ಭಾಷಾ ಪುತ್ರ ಆರೀಫ್ ಮೇಲೆ ಮತ್ತೆ ದಾಳಿಸಿದೆ. ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.ಇದನ್ನೂ ಓದಿ: ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – 9 ಮಂದಿಗೆ ಗಾಯ

  • ಹೆಜ್ಜೇನು ದಾಳಿಗೆ ಕೊಡಗಿನಲ್ಲಿ ವ್ಯಕ್ತಿ ಬಲಿ

    ಹೆಜ್ಜೇನು ದಾಳಿಗೆ ಕೊಡಗಿನಲ್ಲಿ ವ್ಯಕ್ತಿ ಬಲಿ

    ಮಡಿಕೇರಿ: ಹೆಜ್ಜೇನು (Honeybee) ದಾಳಿಗೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ನಡೆದಿದೆ.

    ಕೊಟ್ಟಂಗಡ ಪೂಣಚ್ಚಅವರು ಬಲಿಯಾದ ವ್ಯಕ್ತಿ. ಇಂದು ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿವೆ.

    ಜೇನು ನೊಣಗಳ ದಾಳಿಯಿಂದ ಕಿರುಚಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದು ಪೂಣಚ್ಚ ನರಳಾಡಿದ್ದಾರೆ. ಸ್ಥಳೀಯರು ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

    ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

  • ಹೆಜ್ಜೇನು ದಾಳಿಗೆ ಜ್ಯೂನಿಯರ್ ಎನ್.ಟಿ.ಆರ್ ಟೀಮ್ ತತ್ತರ: ಆಸ್ಪತ್ರೆಗೆ ದಾಖಲು

    ಹೆಜ್ಜೇನು ದಾಳಿಗೆ ಜ್ಯೂನಿಯರ್ ಎನ್.ಟಿ.ಆರ್ ಟೀಮ್ ತತ್ತರ: ಆಸ್ಪತ್ರೆಗೆ ದಾಖಲು

    ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾದ ಶೂಟಿಂಗ್ ವೈಜಾಗ್ ನ ಕಾಡೊಂದರಲ್ಲಿ ನಡೆಯುತ್ತಿತ್ತು. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, 20ಕ್ಕೂ ಹೆಚ್ಚು ಚಿತ್ರತಂಡದ ಸದಸ್ಯರು ಹೆಜ್ಜೇನು ದಾಳಿಗೆ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಅಕ್ಟೋಬರ್ 10 ರಂದು ದೇವರ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗುವ ಕಾರಣದಿಂದಾಗಿ ಬಿಡುವಿಲ್ಲದೇ ಚಿತ್ರತಂಡ ಶೂಟಿಂಗ್ ನಲ್ಲಿ ತೊಡಗಿದೆ. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದೆ. ಈ ನಡುವೆ ದೇವರ (Devara) ಸಿನಿಮಾ ಟೀಮ್ ನಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದ್ದು, ಈ ಸಿನಿಮಾವನ್ನು ಕನ್ನಡಕ್ಕೂ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ತಮ್ಮ ಪಾತ್ರಕ್ಕೆ ಕನ್ನಡದಲ್ಲಿ ಜ್ಯೂನಿಯರ್ ಅವರೇ ಡಬ್ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

    ಆರ್ ಆರ್ ಆರ್ ಚಿತ್ರದ ನಂತರ ಎನ್ಟಿಆರ್ (Jr NTR) ಅವರು ಕೊರಟಾಲ ಶಿವ (Koratala Shiva) ನಿರ್ದೇಶನದ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜ್ಯೂನಿಯರ್‌ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಆ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು. ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು.

     

    ‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

  • ಹೆಜ್ಜೇನು ದಾಳಿ- 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

    ಹೆಜ್ಜೇನು ದಾಳಿ- 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

    ಹಾವೇರಿ: ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಹೆಜ್ಜೇನು ದಾಳಿ ನಡೆಸಿ, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಹೆಜ್ಜೇನು ಕಚ್ಚಿವೆ. ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ, ಸಂಜೆ ನೇಣಿಗೆ ಹಾಕ್ತಾರೆ: ಬಸವರಾಜ್ ಹೊರಟ್ಟಿ

    ಘಟನೆ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಕಂಗಾಲಾಗಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    Live Tv
    [brid partner=56869869 player=32851 video=960834 autoplay=true]

  • ಶವಸಂಸ್ಕಾರಕ್ಕೆ ತೆರಳಿದ್ದ ಜನರ ಮೇಲೆ ಹೆಜ್ಜೇನು ದಾಳಿ – ಓರ್ವ ಸಾವು!

    ಶವಸಂಸ್ಕಾರಕ್ಕೆ ತೆರಳಿದ್ದ ಜನರ ಮೇಲೆ ಹೆಜ್ಜೇನು ದಾಳಿ – ಓರ್ವ ಸಾವು!

    – ಗುಂಡಿಯಲ್ಲಿಯೇ ಮೃತದೇಹ ಬಿಟ್ಟು ಪರಾರಿಯಾದ ಜನ!

    ಬೆಂಗಳೂರು: ಶವ ಸಂಸ್ಕಾರಕ್ಕೆಂದು ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕರ್ನಾಟಕ ತಮಿಳುನಾಡು ಗಡಿ ಕೆಂಪಟ್ಟಿಯಲ್ಲಿ ನಡೆದಿದೆ.

    ಕೆಂಪಟ್ಟಿ ಗ್ರಾಮದ ನಿವಾಸಿ ರಾಜಪ್ಪ (55) ಮೃತ ದುರ್ದೈವಿ. ಈ ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.

    ಘಟನೆಯ ವಿವರ:
    ಕೆಂಪಟ್ಟಿ ಗ್ರಾಮದ ನಿವಾಸಿ ರಾಮಕ್ಕ (102) ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಹೀಗಾಗಿ ಅವರ ಅಂತ್ಯಸಂಸ್ಕಾರವನ್ನು ಇಂದು ನೆರವೇರಿಸಲು ನಿರ್ಧರಿಸಲಾಗಿತ್ತು. ಆದರೆ ಶವ ಸಂಸ್ಕಾರಕ್ಕೆ ತೋಡಿದ್ದ ಗುಂಡಿಯ ಸಮೀಪದ ಮರದಲ್ಲಿ ಹೆಜ್ಜೇನು ಇತ್ತು. ಶವವನ್ನು ಹೊತ್ತು ಸ್ಮಶಾನಕ್ಕೆ ತರುವಾಗ ಪಟಾಕಿ ಹಾಗೂ ಹೂವಿನ ವಾಸನೆಗೆ ಜೇನು ಹುಳು ಎದ್ದ ಜನರ ಮೇಲೆ ದಾಳಿ ಮಾಡಿವೆ.

    ಜೇನು ಹುಳು ಇಪ್ಪತ್ತಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಿಂದಾಗಿ ಶವವನ್ನು ಗುಂಡಿಯಲ್ಲಿಯೇ ಬಿಟ್ಟು ಜನರು ಅಲ್ಲಿಂದಲೇ ಕಾಲ್ಕಿತ್ತಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆನೇಕಲ್‍ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಮಾಹಿತಿ ಪಡೆದು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚೆಲುವನಾರಾಯಣಸ್ವಾಮಿ ಜಾತ್ರೆ ವೇಳೆ ಹೆಜ್ಜೇನು ದಾಳಿ: ಹರಕೆ ಹೊತ್ತವರಿಗೆ ಬಿಟ್ಟು, ಉಳಿದವರಿಗೆ ಕಡಿದ ಜೇನುಹುಳಗಳು!

    ಚೆಲುವನಾರಾಯಣಸ್ವಾಮಿ ಜಾತ್ರೆ ವೇಳೆ ಹೆಜ್ಜೇನು ದಾಳಿ: ಹರಕೆ ಹೊತ್ತವರಿಗೆ ಬಿಟ್ಟು, ಉಳಿದವರಿಗೆ ಕಡಿದ ಜೇನುಹುಳಗಳು!

    ಮಂಡ್ಯ: ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ‘ತೊಟ್ಟಿಲ ಮಡು’ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ರಕ್ಷಣೆಗಾಗಿ ಭಕ್ತರು ಕಾಡಿನಲ್ಲಿ ಚೆಲ್ಲಾಪಿಲ್ಲಿಯಾಗಿ ಓಡಿರುವ ಘಟನೆ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಮೇಲುಕೋಟೆಯಲ್ಲಿ ನಡೆದಿದೆ.

    ತೊಟ್ಟಿಲ ಮಡು ಜಾತ್ರೆಯಲ್ಲಿ ಪಾಲ್ಗೊಂಡು ಹರಕೆ ಹೊತ್ತರೆ ಮಕ್ಕಳಿಲ್ಲದವರಿಗೆ ಚೆಲುವನಾರಾಯಣಸ್ವಾಮಿ ಅಂತಹ ಮುದ್ದಾದ ಮಗು ಜನಿಸುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಪ್ರತಿ ವರ್ಷ ಜಾತ್ರೆಯಲ್ಲಿ ಮಕ್ಕಳಿಲ್ಲದ ಸಾವಿರಾರು ದಂಪತಿ ಭಾಗವಹಿಸುತ್ತಾರೆ. ಈ ವೇಳೆ ಚೆಲುವನಾರಾಯಣಸ್ವಾಮಿಯ ಪಾದುಕೆಯನ್ನು ಕಾಡಿನಲ್ಲಿ ಸುಮಾರು ಐದು ಕಿಲೋಮೀಟರ್ ನಷ್ಟು ದೂರದವರೆಗೆ ಮೆರವಣಿಗೆ ಮಾಡಲಾಗುತ್ತದೆ.

    ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೆ ಈ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಉತ್ಸವದ ವೇಳೆ ತೀರ್ಥಸ್ನಾನಕ್ಕಾಗಿ ಹೋಗುತ್ತಿರುವಾಗ ಕಾಡಿನ ದರ್ಭ ತೀರ್ಥದ ಬಳಿ ಭಕ್ತರು ಹಾಗೂ ದೇವಾಲಯದ ಸಿಬ್ಬಂದಿಯ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿವೆ. ಹೆಜ್ಜೇನುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಡಿನಲ್ಲಿ ಜನ ಚೆಲ್ಲಾಪಿಲ್ಲಾಯಾಗಿ ಓಡಿದ್ದಾರೆ. ಇದಾದ ಬಳಿಕ ಎರಡು ಗಂಟೆಗಳ ನಂತರ ಉತ್ಸವ ಪ್ರಾರಂಭವಾಗಿದೆ.

    ಇದರಲ್ಲಿ ವಿಶೇಷವೆಂದರೆ ಹೆಜ್ಜೇನುಗಳು ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತು ಬಂದ ಯಾವುದೇ ದಂಪತಿಗೆ ಕಚ್ಚದೇ ಬೇರೆಯವರಿಗೆ ಮಾತ್ರ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಭರಾಟೆ ಶೂಟಿಂಗ್ ವೇಳೆ ಮೇಲುಕೋಟೆ ಕಲ್ಯಾಣಿ ಅಶುಚಿತ್ವ – ಶ್ರೀ ಮುರುಳಿ ಸ್ಪಷ್ಟನೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹೆಜ್ಜೇನು ದಾಳಿಗೆ ಮೃತದೇಹವನ್ನು ಸ್ಮಶಾನದಲ್ಲಿ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

    ಹೆಜ್ಜೇನು ದಾಳಿಗೆ ಮೃತದೇಹವನ್ನು ಸ್ಮಶಾನದಲ್ಲಿ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

    ಚಿಕ್ಕಬಳ್ಳಾಪುರ: ಸ್ಮಶಾನದಲ್ಲಿ ಶವ ಸಂಸ್ಕಾರ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

    ಮೃತದೇಹವನ್ನ ಕುಟುಂಬಸ್ಥರು ಮೆರವಣಿಗೆ ಮೂಲಕ ಸ್ಮಶಾನದಲ್ಲಿ ತೆಗೆದುಕೊಂಡು ಹೋಗಿ ಶವ ಸಂಸ್ಕಾರದ ಸಿದ್ಧತೆಯನ್ನ ಮಾಡಿಕೊಳ್ತಿದ್ರು. ಈ ವೇಳೆ ಸ್ಮಶಾನದ ಮರದಲ್ಲಿದ್ದ ಹೆಜ್ಜೆನು ದಿಢೀರ್ ದಾಳಿ ನಡೆಸಿದೆ. ಪರಿಣಾಮ ಮೃತದೇಹವನ್ನ ಸ್ಮಶಾನದಲ್ಲೇ ಬಿಟ್ಟು ದಿಕ್ಕಾಪಾಲಾಗಿ ಜನ ಓಡಿ ಹೋಗಿದ್ದಾರೆ. ಜೇನು ನೋಣಗಳಿಂದ ಕಚ್ಚಿಸಿಕೊಂಡಿದ್ದ ಸುಮಾರು 15 ಜನ ತಕ್ಷಣ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆಯನ್ನ ಪಡೆದಿದ್ದಾರೆ.

    ಇದೇ ವೇಳೆ ಸ್ಮಶಾನದಲ್ಲಿರುವ ಮರಗಳಲ್ಲಿ ಹೆಜ್ಜೆನುಗಳನ್ನ ತೆರವು ಮಾಡಿಲ್ಲ ಅಂತಾ ಪುರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧಿಕಾರಿಗಳು ಸ್ಮಶಾನದಲ್ಲಿರುವ ಹೆಜ್ಜೇನು ತೆರವು ಮಾಡಲು ಮುಂದಾಗಿದ್ದು, ಮೃತನ ಸಂಬಂಧಿಕರು ಅಂತ್ಯ ಸಂಸ್ಕಾರ ಮಾಡಲು ಬಿಟ್ಟು ಹೋಗಿದ್ದ ಮೃತದೇಹವನ್ನ ನಾಲ್ಕು ಜನ ಆಗಮಿಸಿ ಕೊನೆಗೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

  • ಹೆಜ್ಜೇನು ಕಡಿದು ವ್ಯಕ್ತಿ ದುರ್ಮರಣ

    ಹೆಜ್ಜೇನು ಕಡಿದು ವ್ಯಕ್ತಿ ದುರ್ಮರಣ

    ಕಾರವಾರ: ಹೆಜ್ಜೇನು ಕಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ನಡೆದಿದೆ.

    ಕಿನ್ನರ ಗ್ರಾಮದ ನಿವಾಸಿ 59 ವರ್ಷದ ವಿಠೋಬ ಶಂಭಾ ನಾಯ್ಕ ಮೃತ ದುರ್ದೈವಿ. ಭಾನುವಾರ ಸಂಜೆ ಗದ್ದೆಗೆ ಕೆಲಸಕ್ಕೆ ಹೋದಾಗ ಹೆಜ್ಜೇನು ಕಚ್ಚಿದೆ. ನಂತರ ತೀವ್ರ ಅಸ್ವಸ್ಥರಾಗಿ ಮನೆಯಲ್ಲಿ ಬಿದ್ದಿದ್ದರು. ಕುಟುಂಬದವರು ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

    ಬೆನ್ನು, ಹೊಟ್ಟೆ ಭಾಗದ ಸುತ್ತಲೂ ಕಚ್ಚಿದೆ. ಆದ್ದರಿಂದ ಎಲ್ಲಾ ರಿಪೋರ್ಟ್‍ಗಳನ್ನು ಕಳುಹಿಸಿದ್ದೇವೆ. ವರದಿ ಬಂದ ಮೇಲೆ ಖಚಿತ ಪಡಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

    ಈ ಹಿಂದೆ ಇರುವೆ ಕಚ್ಚಿ ಅಂಗವಿಕಲ ಬಾಲಕನೊಬ್ಬ ಮೃತಪಟ್ಟಿದ್ದ. ಆದರೆ ಇದೇ ಮೊದಲ ಬಾರಿಗೆ ಹೆಜ್ಜೇನು ಕಡಿತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜರುಗಿದೆ. ಸ್ಥಳಕ್ಕೆ ಕಿನ್ನರ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

    ಇದನ್ನು ಓದಿ: ಕಪ್ಪು ಇರುವೆ ಕಚ್ಚಿ ಯುವಕ ದುರ್ಮರಣ!

  • ಹೆಜ್ಜೇನು ದಾಳಿ, ಹೆದರಿ ಶವ ಬಿಟ್ಟು ಓಡಿ ಹೋದ ಜನ

    ಹೆಜ್ಜೇನು ದಾಳಿ, ಹೆದರಿ ಶವ ಬಿಟ್ಟು ಓಡಿ ಹೋದ ಜನ

    ರಾಮನಗರ: ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ ನಡೆಸಿ 30 ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಭಾನುವಾರ ನಡೆದಿದೆ.

    ಮಾಗಡಿ ಪಟ್ಟಣದ ಹೊಸಹಳ್ಳಿ ಗ್ರಾಮದ ಸಿದ್ದಲಿಂಗಪ್ಪ ಎಂಬವರು ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ರು. ಭಾನುವಾರ ಮಧ್ಯಾಹ್ನದ ಬಳಿಕ ಅವರ ಅಂತ್ಯಕ್ರಿಯೆಯನ್ನು ಹೊಸಹಳ್ಳಿ ಗ್ರಾಮದ ಹೊರಭಾಗದಲ್ಲಿ ನಡೆಸಲಾಗುತ್ತಿತ್ತು.

    ಅಂತ್ಯಕ್ರಿಯೆ ವೇಳೆ ಗಂಧದಕಡ್ಡಿ ಹಾಗೂ ಹೊಗೆಯಿಂದ ರೊಚ್ಚಿಗೆದ್ದ ಹೆಜ್ಜೇನುಗಳು ಅಲ್ಲಿ ನರೆದ ಜನರ ಮೇಲೆ ದಾಳಿ ನಡೆಸಿವೆ. ಹೆಜ್ಜೇನುಗಳ ದಾಳಿಯಿಂದ ಪಾರಾಗಲು ಸಂಬಂಧಿಕರು ಹಾಗೂ ಗ್ರಾಮಸ್ಥರು ಕೂಡಲೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

    ಹೆಜ್ಜೇನು ದಾಳಿಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗಿದೆ. ಬಳಿಕ ಗ್ರಾಮಸ್ಥರು ಗೋಣಿಚೀಲ ಹಾಗೂ ಟಾರ್ಪಲ್ ಗಳ ಸಹಾಯ ಪಡೆದು ಸಿದ್ದಲಿಂಗಪ್ಪನವರ ಅಂತ್ಯಸಂಸ್ಕಾರ ನಡೆಸಿ ನಿಟ್ಟುಸಿರುಬಿಟ್ಟಿದ್ದಾರೆ.