Tag: ಹೆಲ್ತ್ ಬುಲೆಟಿನ್

  • ಸನ್ನೆ ಮೂಲಕ ಮಾತನಾಡುತ್ತಿದ್ದಾರೆ ನಡೆದಾಡುವ ದೇವರು

    ಸನ್ನೆ ಮೂಲಕ ಮಾತನಾಡುತ್ತಿದ್ದಾರೆ ನಡೆದಾಡುವ ದೇವರು

    ತುಮಕೂರು: ನಡೆದಾಡುವ ದೇವರು ಎಂದೇ ಹೆಸರುವಾಸಿಯಾಗಿರುವ ಸಿದ್ದಗಂಗಾ ಶ್ರೀಗಳ ಆರೋಗ್ಯದ ಕುರಿತು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಅವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆ ಕಂಡುಬರುತ್ತಿಲ್ಲ. ಮತ್ತೆ ಅವರ ಶ್ವಾಸಕೋಶದ ಎರಡೂ ಭಾಗದಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ದೇಹದಿಂದ ನೀರನ್ನು ಹೊರಕ್ಕೆ ತೆಗೆಯಲಾಗಿದೆ. ಸದ್ಯ ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಮಲಗಿದಲ್ಲಿಯೇ ಶ್ರೀಗಳು ಅವರ ಕೈಕಾಲುಗಳ ಚಲನವಲನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿರುವುದರಿಂದ ಅವರಿಗೆ ದ್ರವರೂಪದ ಆಹಾರವನ್ನು ನೀಡಲಾಗುತ್ತಿದೆ. ಅವರಿಗೆ ಎಂದಿನಂತೆ ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು. ಶ್ರೀಗಳಿಗೆ ಅಳವಡಿಸಿರುವ ಕೃತಕ ಉಸಿರಾಟದ ಸಾಧನ ತೆರವುಗೊಳಿಸಿ ಸಹಜ ಉಸಿರಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಗಂಟೆಗಳ ಕಾಲ ಸಹಜ ಉಸಿರಾಟದ ನಂತರ ಮತ್ತೆ ತೊಂದರೆಯಾದಾಗ ಕೃತಕ ಉಸಿರಾಟ ಸಾಧನ ಅಳವಡಿಸುತ್ತಿದ್ದೇವೆ. ನಿನ್ನೆ ಶ್ರೀಗಳ ದೇಹದಲ್ಲಿ ಪ್ರೋಟೀನ್ ಅಂಶವು 3.1 ಇತ್ತು. ಆದ್ರೆ ಇಂದು ಪ್ರೋಟೀನ್ ಅಂಶ 2.6 ಮಿಲಿಗ್ರಾಮ್‍ಗೆ ಇಳಿಕೆಯಾಗಿದೆ ಎಂದು ಶ್ರೀಗಳ ಆರೋಗ್ಯದ ಕುರಿತು ಡಾ. ಪರಮೇಶ್ ಮಾಹಿತಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಆಸ್ಪತ್ರೆಯಿಂದ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ

    ಸಿದ್ದಗಂಗಾ ಆಸ್ಪತ್ರೆಯಿಂದ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ

    ತುಮಕೂರು: ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಇಂದು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಪರಮೇಶ್, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎಡ ಶ್ವಾಸಕೋಶದಿಂದ 250 ಎಂ.ಎಲ್ ಹಾಗೂ ಬಲ ಶ್ವಾಸಕೋಶದಿಂದ 400 ಎಂ.ಎಲ್ ನೀರನ್ನು ಹೊರಕ್ಕೆ ತೆಗೆಯಲಾಗಿದೆ. ಅಲ್ಲದೆ ಶ್ರೀಗಳ ದೇಹದಲ್ಲಿನ ಪ್ರೋಟೀನ್ ಅಂಶ ಕೂಡಾ 2.6 ಗ್ರಾಂ ನಿಂದ 3 ಗ್ರಾಂ ಗೆ ಏರಿಕೆಯಾಗಿದೆ ಎಂದು ತಿಳಿಸಿದರು.

    ಶನಿವಾರ ರಾತ್ರಿ ಶ್ರೀಗಳಿಗೆ ಲೋ ಬಿಪಿಯಾಗಿದ್ದು, ಡಾ.ರೇಲಾ ಹಾಗೂ ಡಾ.ರವೀಂದ್ರರ ಮಾರ್ಗದರ್ಶನದಂತೆ ಚಿಕಿತ್ಸೆ ನೀಡಲಾಗಿತ್ತು. ಈಗ ರಕ್ತದೊತ್ತಡ ಸ್ಥಿರವಾಗಿದೆ. ಆದರೆ ಶ್ವಾಸಕೋಶದ ಸೋಂಕು ನಿನ್ನೆ ತನಕ ಪ್ರತಿದಿನ ಕಡಿಮೆಯಾಗುತಿತ್ತು. ಆದರೆ ಇಂದು ಕಡಿಮೆಯಾಗಿಲ್ಲ. ನಿನ್ನೆ ಎಷ್ಟಿತ್ತೋ ಅಷ್ಟೆ ಇದೆ. ಹಾಗಾಗಿ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಾ. ಪರಮೇಶ್ ಸ್ಪಷ್ಟಪಡಿಸಿದ್ದಾರೆ.

    ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ರಾ ಅವರ ಸಲಹೆಯಂತೆ ಶ್ರೀಗಳಿಗೆ ಆಂಟಿಬಯೋಟಿಕ್ ಬದಲಾವಣೆ ಮಾಡಲಾಗಿತ್ತು. ಇನ್ನೂ ನಾಲ್ಕು ದಿನಗಳ ಕಾಲ ಆಂಟಿಬಯೋಟಿಕ್ ನೀಡಲಾಗುತ್ತೆ ಆಗ ಸೋಂಕು ಕಡಿಮೆಯಾಗುತ್ತಾ ಅಂತ ಕಾದು ನೋಡಬೇಕಿದೆ. ಸಂಜೆ ವೇಳೆಗೆ ಬಿಜಿಎಸ್ ಗ್ಲೋಬಲ್ ವೈದ್ಯ ಡಾ.ರವೀಂದ್ರ ಸಿದ್ದಗಂಗಾ ಆಸ್ಪತ್ರೆಗೆ ಆಗಮಿಸುತ್ತಾರೆ ಎಂದು ಡಾ.ಪರಮೇಶ್ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv