Tag: ಹೆಸರು

  • ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಸಾಧಕನ ಹೆಸರನ್ನು ಮಗನಿಗಿಟ್ಟ ಮಸ್ಕ್

    ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಸಾಧಕನ ಹೆಸರನ್ನು ಮಗನಿಗಿಟ್ಟ ಮಸ್ಕ್

    ಲಂಡನ್: ವಿಶ್ವದ ಶ್ರೀಮಂತ ಎಲೋನ್ ಮಸ್ಕ್ (Elon Musk) ಅವರು ತಮ್ಮ ಮಗನಿಗೆ (Son) ಹೆಸರಾಂತ ಭಾರತೀಯ ನೊಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರಜ್ಞ ಪ್ರೊಫೆಸರ್ ಎಸ್ ಚಂದ್ರಶೇಖರ್ (S Chandrasekhar) ಅವರ ಹೆಸರನ್ನು ಇಡಲಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

    ಬ್ರಿಟನ್‌ನಲ್ಲಿ ನಡೆದ ಗ್ಲೋಬಲ್ ಎಐ ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ವಿಷಯ ಬಹಿರಂಗವಾಗಿದೆ. ಮಸ್ಕ್ ಚಂದ್ರಶೇಖರ್ ಅವರ ಹೆಸರು ಕೇಳಿದಾಗ ತಮ್ಮ ಪುತ್ರನ ಹೆಸರಲ್ಲೂ ಚಂದ್ರಶೇಖರ್ ಇರುವುದಾಗಿ ತಿಳಿಸಿದ್ದಾರೆ. ಮಸ್ಕ್‌ನೊಂದಿಗಿನ ಭೇಟಿಯ ಫೋಟೋವನ್ನು ಎಕ್ಸ್‌ನಲ್ಲಿ ಚಂದ್ರಶೇಖರ್ ಹಂಚಿಕೊಂಡಿದ್ದು, ತಮ್ಮ ಮಗನಿಗೆ ಭಾರತೀಯ ಟ್ವಿಸ್ಟ್‌ನ ಹೆಸರನ್ನು ಇಟ್ಟಿರುವುದನ್ನು ಬಹಿರಂಗಪಡಿಸಿದ್ದಾಗಿ ಹೇಳಿದ್ದಾರೆ.

    ಈ ಬಗ್ಗೆ ಬರೆದಿರುವ ಅವರು, ಎಲೋನ್ ಮಸ್ಕ್ ಮತ್ತು ಶಿವೋನ್ ಜಿಲಿಸ್ ಅವರ ಪುತ್ರನಿಗೆ ‘ಚಂದ್ರಶೇಖರ್’ ಎಂಬ ಮಧ್ಯದ ಹೆಸರನ್ನು ಇಟ್ಟಿರುವುದನ್ನು ಹಂಚಿಕೊಂಡಿದ್ದಾರೆ. ಈ ವಿಶಿಷ್ಟ ಹೆಸರು 1983 ರಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಹೆಸರಾಂತ ನೊಬೆಲ್ ಭೌತಶಾಸ್ತ್ರಜ್ಞ ಪ್ರೊಫೆಸರ್ ಎಸ್ ಚಂದ್ರಶೇಖರ್ ಅವರಿಗೆ ಗೌರವವಾಗಿದೆ. ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ ಪರಿಣತಿ ಹೊಂದಿರುವ ಕೆನಡಾದ ಶಿವನ್ ಆಲಿಸ್ ಜಿಲಿಸ್ ಈ ಮಗುವಿನ ತಾಯಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಚಂದ್ರಶೇಖರ್ ಅವರು ಬಹಿರಂಗಪಡಿಸಿದ ಈ ವಿಚಾರವನ್ನು ದೃಢಪಡಿಸಿದ ಜಿಲಿಸ್, ಹೌದು, ಇದು ನಿಜ. ನಾವು ಮಗನನ್ನು ಚಿಕ್ಕದಾಗಿ ಶೇಖರ್ ಎಂದು ಕರೆಯುತ್ತೇವೆ. ಆದರೆ ನಮ್ಮ ಮಗನಿಗೆ ಈ ಹೆಸರನ್ನು ಸುಬ್ರಹ್ಮಣ್ಯನ್ ಚಂದ್ರಶೇಖರ್ ಅವರಿಗೆ ಗೌರವಾರ್ಥವಾಗಿ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಗಡಿ ದಾಟಿ ಅಕ್ರಮವಾಗಿ ಅಮೆರಿಕ ಪ್ರವೇಶ – ಒಂದು ವರ್ಷದಲ್ಲಿ 96,917 ಮಂದಿ ಭಾರತೀಯರ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ

    ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ

    ನಸಿನ ರಾಣಿ ಮಾಲಾಶ್ರೀ (Malashree), ನಿರ್ಮಾಪಕ ರಾಮು (Ramu)ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ (Aradhanaa)  ಎಂದು ಬದಲಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಮಾಲಾಶ್ರೀ ‘ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು (Name) ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ ‘ಕಾಟೇರ’ ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ.  ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು’ ಮಾಲಾಶ್ರೀ ವಿನಂತಿಸಿದ್ದಾರೆ.

    ಈಗಾಗಲೇ ಆರಾಧನಾ ರಾಮ್ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬಹುಭಾಷಾ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದ ಲೇಡಿ ಸೂಪರ್ ಸ್ಟಾರ್ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇದನ್ನೂ ಓದಿ:ಚಿಕಿತ್ಸೆಗಾಗಿ ಮತ್ತೆ ಅಮೆರಿಕಾಗೆ ಹಾರಿದ್ರಾ ನಟಿ- ಏನಾಯ್ತು ಸಮಂತಾಗೆ?

    ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕ ರಾಮು ಅವರ ಸಾಧನೆ ಕೊಡುಗೆ ಅಪಾರ. ಮಾಲಾಶ್ರೀ ಮತ್ತು ರಾಮು ದಂಪತಿ ಸಾಕಷ್ಟು ವರ್ಷಗಳಿಂದ ಕಲಾಸೇವೆ ಮಾಡುತ್ತಲ್ಲೇ ಬಂದವರು. ಇದೀಗ ಈ ಕುಟುಂಬದಿಂದ ಜ್ಯೂ.ಮಾಲಾಶ್ರೀ ಆರಾಧನಾ ರಾಮ್ ಕೂಡ ಚಿತ್ರರಂಗದಲ್ಲಿ ಮಿಂಚಲು ಸಕಲ ತಯಾರಿ ಮಾಡಿಕೊಂಡು ಬಂದಿದ್ದಾರೆ.

     

    ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಬಿಗ್ ಬಜೆಜ್ ಸಿನಿಮಾದಲ್ಲಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದ ರಾಧನಾ ಲುಕ್ ಕೂಡ ರಿವೀಲ್ ಆಗಿದ್ದು, ನಟಿಯ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ತಮ್ಮ ಮೊದಲ ಚಿತ್ರದಲ್ಲಿಯೇ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ತಾಯಿ ಮಾಲಾಶ್ರೀ ಅಂತೆಯೇ ನಾಯಕಿಯಾಗಿ ಮಿಂಚಲಿ ಎಂಬುದೇ ಅಭಿಮಾನಿಗಳ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗು ನನ್ನನ್ನೇ ಹೋಲುತ್ತಿದೆ: ಸಂಭ್ರಮ ಹಂಚಿಕೊಂಡ ನಟ ರಾಮ್ ಚರಣ್

    ಮಗು ನನ್ನನ್ನೇ ಹೋಲುತ್ತಿದೆ: ಸಂಭ್ರಮ ಹಂಚಿಕೊಂಡ ನಟ ರಾಮ್ ಚರಣ್

    ರೋಬ್ಬರಿ ಹನ್ನೊಂದು ವರ್ಷಗಳ ನಂತರ ತಂದೆಯಾಗಿದ್ದಾರೆ ತೆಲುಗು ನಟ ರಾಮ್ ಚರಣ್ (Ram Charan). ಉದ್ದೇಶ ಪೂರ್ವಕವಾಗಿಯೇ ಮಗು ಹೊಂದದಿರಲು ರಾಮ್ ಚರಣ್ ಮತ್ತು ಉಪಾಸನಾ ಸಂಕಲ್ಪ ಮಾಡಿದ್ದರು. ಕುಟುಂಬದವರ ಒತ್ತಡವಿದ್ದರೂ, ತಾವು ಹೊಂದಿದ್ದ ಸಂಕಲ್ಪವನ್ನು ಅವರು ಮುರಿದಿರಲಿಲ್ಲ. ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡುವ ಮೂಲಕ ಕುಟುಂಬದಲ್ಲಿ ಸಂಭ್ರಮ ಹೆಚ್ಚಿಸಿದ್ದಾರೆ ಉಪಾಸನಾ.

    ಇಂದು ಮಗುವನ್ನು ಕರೆದುಕೊಂಡು ಮನೆಗೆ ಹೋಗಿದ್ದಾರೆ ರಾಮ್ ಚರಣ್. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಮ್ ಚರಣ್, ‘ಮಗುವನ್ನು ಮೊದಲ ಬಾರಿಗೆ ನೋಡಿದಾಗ ಆದ ಆನಂದವನ್ನು ಹೇಳಲು ಕಷ್ಟ. ಹೇಳಿದರೆ, ಅದು ಕೃತಕ ಅನಿಸಬಹುದು. ಅಷ್ಟೊಂದು ಸಂಭ್ರಮವನ್ನು ಮಗು ಕೊಟ್ಟಿದೆ’ ಎಂದು ಹೇಳಿದರು. ಇದನ್ನೂ ಓದಿ:‘ಭರ್ಜರಿ ಬ್ಯಾಚುಲರ್ಸ್’ ಜೊತೆ ಬರುತ್ತಿದ್ದಾರೆ ರವಿಚಂದ್ರನ್, ರಚಿತಾ‌ ರಾಮ್

    ಮಗು ತಾಯಿಯನ್ನು ಹೋಲುತ್ತಾ? ಅಥವಾ ನಿಮ್ಮನ್ನು ಹೋಲುತ್ತಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ‘ ಅದು ನನ್ನನ್ನೇ ಹೋಲುತ್ತದೆ’ ಎಂದು ಹೇಳಿ ಸಂಭ್ರಮಿಸಿದರು. ಮಗುವಿಗೆ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದರು. ಉಪಾಸನಾ ಮತ್ತು ರಾಮ್ ಚರಣ್ ತಮ್ಮ ಮಗುವಿಗೆ ಯಾವ ಹೆಸರನ್ನು (Name) ಇಡಬೇಕು ಎನ್ನುವ ಕುರಿತು ಚರ್ಚೆ ಮಾಡಿದ್ದಾರಂತೆ. ಅದನ್ನು ನಂತರ ಹೇಳುವೆ ಎನ್ನುವುದು ರಾಮ್ ಚರಣ್ ಮಾತು.

    ಜೂನ್ 20ರಂದು ಹೈದರಾಬಾದ್ ನ ಜುಬ್ಲಿ ಹಿಲ್ಸ್ ಅಪೋಲೊ ಆಸ್ಪತ್ರೆಯಲ್ಲಿ ಉಪಾಸನಾ (Upasana) ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದರು. ಈ ದಂಪತಿಯ ಪುಟಾಣಿ ಮಗುವಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Photo, Viral) ಆಗಿತ್ತು. ಮಗುವಿಗೆ ಹಾರೈಕೆಯ ಮಹಾಪುರವೇ ಹರಿದು ಬಂದಿತ್ತು.

    ಎರಡು ವಾರಗಳ ಹಿಂದೆಯಷ್ಟೇ ತಮ್ಮ ಕುಟುಂಬದ ಕುಡಿಗಾಗಿ ಶಾಪಿಂಗ್ ಮಾಡುತ್ತಿರುವ ವಿಷಯವನ್ನು ಹಾಗೂ ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ ಸ್ಪೆಷಲ್ ತೊಟ್ಟಿಲನ್ನು ಗಿಫ್ಟ್ ನೀಡಿರುವುದಾಗಿ ಉಪಾಸನಾ ತಿಳಿಸಿದ್ದರು. ಪ್ರಜ್ವಲ್ ಫೌಂಡೇಶನ್ ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ತಿಳಿಸಲಾಗಿತ್ತು. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ.

  • ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರಿಡಲು ಬಿಬಿಎಂಪಿಗೆ ಮನವಿ

    ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರಿಡಲು ಬಿಬಿಎಂಪಿಗೆ ಮನವಿ

    ನ್ನಡದ ಹೆಸರಾಂತ ನಟ ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ. ಹರೀಶ್, ಮನವಿ ಪತ್ರವನ್ನು ನೀಡಿದರು. ಕನ್ನಡ ಸಿನಿಮಾ ರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿರುವ ಅಂಬರೀಶ್ ಅವರಿಗೆ ರಸ್ತೆಗೆ ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸುವಂತೆ ಮನವಿ ಮಾಡಿದೆ.

    ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಕೊಟ್ಟಿರುವ ಮನವಿ ಪತ್ರದಲ್ಲಿ, ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಸಾಧಕರಾದ ಪದ್ಮಭೂಷಣ ಡಾ.ರಾಜ್ ಕುಮಾರ್, ಶ್ರೀಮತಿ ಪಾರ್ವತಮ್ಮ ರಾಜಕುಮಾರ್, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇವರುಗಳ ಜ್ಞಾಪಕಾರ್ಥವಾಗಿ ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ಘನ ಸರ್ಕಾರವು ಈಗಾಗಲೇ ನಾಮಕರಣ ಮಾಡಿರುವುದು ಇಡೀ, ಚಿತ್ರೋದ್ಯಮಕ್ಕೆ ಸಂದ ಗೌರವವಾಗಿದೆ. ಅದಕ್ಕಾಗಿ ಚಿತ್ರೋದ್ಯಮ ಆಭಾರಿಯಾಗಿದೆ’ ಎಂದು ಬರೆದಿದ್ದಾರೆ. ಇದನ್ನೂ ಓದಿ: ಹಿಂದಿ ಸೇರಿ ಏಳು ಸಿನಿಮಾಗಳಲ್ಲಿ ರಾಗಿಣಿ ದ್ವಿವೇದಿ ಬ್ಯುಸಿ

    ಮುಂದುವರೆದ ಪತ್ರದಲ್ಲಿ ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಖ್ಯಾತ ಕಲಾವಿದ ರೆಬೆಲ್ ಸ್ಟಾರ್ ಡಾ.ಅಂಬರೀಶ್ ಅವರಿಗೆ 70 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಾನ್ ಸಾಧಕರಾದ ಅಂಬರೀಶ್ ಹೆಸರನ್ನು ಪರಿಗಣಿಸಿ, ರಾಂ ನಾರಾಯಣ ಚಲರಾಮ್ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕೆಂದು ಚಿತ್ರೋದ್ಯಮದ ಮಹಾಸಾದೆಯಾಗಿದೆ. ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ಮನವಿ ಪತ್ರ ಸಲ್ಲಿಸಲಾಗಿದೆ’ ಎಂದು ಬರೆಯಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೆಸರು ಬದಲಾಯಿಸಲು ತಲೆ ಕೆಟ್ಟಿದ್ಯಾ?: ಶೋಭಾ ಕರಂದ್ಲಾಜೆ ಗರಂ

    ಹೆಸರು ಬದಲಾಯಿಸಲು ತಲೆ ಕೆಟ್ಟಿದ್ಯಾ?: ಶೋಭಾ ಕರಂದ್ಲಾಜೆ ಗರಂ

    ಉಡುಪಿ: ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ದಿಢೀರ್ ಆಗಿ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಚರ್ಚೆಯೊಂದು ಜೋರಾಗಿತ್ತು. ಇದೀಗ ಈ ಸುದ್ದಿಗೆ ಸಚಿವೆ ಸ್ಪಷ್ಟನೆ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.

    ಶೋಭಾ ಕರಂದ್ಲಾಜೆ ಹೆಸರು ಬದಲಿಸುವ ಚರ್ಚೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜಕಾರಣಿಗಳನ್ನ ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ ಎಂದು ಗರಂ ಆದರು.

    ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಬೇಕು. ಈ ರೀತಿ ಮಾಡುವವರಿಗೆ ಇದು ನನ್ನ ವಿನಮ್ರ ವಿನಂತಿ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು (Name Change) ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೆಸರು ಬದಲಾವಣೆಗೆ ಮುಂದಾದ ಶೋಭಾ ಕರಂದ್ಲಾಜೆ – ಏನಿದು ಹೊಸ ವರಸೆ?

    ಹೆಸರು ಬದಲಾವಣೆ: ಬಿಜೆಪಿ (BJP) ಯಲ್ಲಿ ಒಂದು ವರ್ಗದ ಪ್ರಕಾರ 2023ರ ಚುನಾವಣೆ (Election)ಗೆ ತಯಾರಿ ನಡೆಸಲಾಗುತ್ತಿದ್ದು, ಶೋಭಾ ಕರಂದ್ಲಾಜೆ ಅವರು ಶೋಭಾ ಗೌಡ (Shobha Gowda) ಎಂದು ಹೆಸರು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೆಸರು ಬದಲಾಯಿಸಿಕೊಂಡು ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಬರಲಿದ್ದಾರೆ. ರಾಜ್ಯದಲ್ಲಿ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.

    Live Tv
    [brid partner=56869869 player=32851 video=960834 autoplay=true]

  • ನಾನಿನ್ನೂ ಆಲಿಯಾ ಭಟ್ ಆಗಿದ್ದೇನೆ, ಮುಂದಿನ ದಿನಗಳಲ್ಲಿ ಕಪೂರ್ ಆಗುತ್ತೇನೆ ಎಂದು ಪ್ರಾಮೀಸ್ ಮಾಡಿದ ನಟಿ

    ನಾನಿನ್ನೂ ಆಲಿಯಾ ಭಟ್ ಆಗಿದ್ದೇನೆ, ಮುಂದಿನ ದಿನಗಳಲ್ಲಿ ಕಪೂರ್ ಆಗುತ್ತೇನೆ ಎಂದು ಪ್ರಾಮೀಸ್ ಮಾಡಿದ ನಟಿ

    ಬಾಲಿವುಡ್ ಖ್ಯಾತ ನಟಿ ಆಲಿಯಾ ಭಟ್ ಮದುವೆಯ ನಂತರ ತಮ್ಮ ಹೆಸರಿನ ಮುಂದೆ ಕಪೂರ್ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಪತಿ ರಣಬೀರ್ ಕಪೂರ್ ಜೊತೆಯೇ ನನ್ನ ಹೆಸರು ಇರಬೇಕು ಎಂದು ಇಷ್ಟ ಪಡುತ್ತೇನೆ. ಸಿನಿಮಾ ಶೂಟಿಂಗ್ ಮಧ್ಯ ಈ ಕೆಲಸವನ್ನು ಮಾಡಲು ಆಗಿರಲಿಲ್ಲ. ಹಾಗಾಗಿ ಇನ್ನೂ ದಾಖಲೆಗಳಲ್ಲಿ ಆಲಿಯಾ ಭಟ್ ಅಂತಷ್ಟೇ ಇದೆ. ಮುಂದಿನ ದಿನಗಳಲ್ಲಿ ಅದು ಆಲಿಯಾ ಕಪೂರ್ ಆಗಿ ಬದಲಾಗಲಿದೆ ಎಂದು ಅವರು ತಿಳಿಸಿದ್ದಾರೆ.

    ಸಾಮಾನ್ಯವಾಗಿ ಬಾಲಿವುಡ್ ನಟಿಯರು ಮದುವೆ ನಂತರ ಪತಿಯ ಹೆಸರನ್ನು ಸೇರಿಸಿಕೊಳ್ಳುವುದು ವಾಡಿಕೆ. ಆದರೆ, ಈವರೆಗೂ ಆ ಕೆಲಸವನ್ನು ಆಲಿಯಾ ಭಟ್ ಮಾಡಿರಲಿಲ್ಲ. ಹಾಗಾಗಿ ಹಲವರು ನಾನಾ ರೀತಿಯ ಅನುಮಾನಗಳನ್ನು ವ್ಯಕ್ತ ಪಡಿಸಿದ್ದರು. ಅದಕ್ಕೆ ಸ್ಪಷ್ಟನೆ ನೀಡಿರುವ ಆಲಿಯಾ ಮುಂದಿನ ದಿನಗಳಲ್ಲಿ ಕಪೂರ್ ಎನ್ನುವ ಹೆಸರನ್ನು ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಎರಡನೇ ಮದುವೆ ವದಂತಿಯ ಬಗ್ಗೆ ಮೇಘನಾ ರಾಜ್ ಸ್ಪಷ್ಟನೆ

    ಮದುವೆಯಾಗಿ ಎರಡೂವರೆ ತಿಂಗಳಿಗೆ ತಾನು ಗರ್ಭಿಣಿ ಎಂದು ಬಹಿರಂಗ ಪಡಿಸಿ, ಅಚ್ಚರಿ ಮೂಡಿಸಿದ್ದ ಆಲಿಯಾ ಭಟ್, ಇನ್ನೂ ಏಕೆ ಕಪೂರ್ ಹೆಸರನ್ನು ತಮ್ಮ ಹೆಸರಿನ ಹಿಂದೆ ಸೇರಿಸಿಕೊಂಡಿಲ್ಲ ಎಂದು ಹಲವರು ಪ್ರಶ್ನಿಸಿದ್ದರು. ಅವರಿಗೆ ಇದೀಗ ಉತ್ತರ ಸಿಕ್ಕಿದೆ. ಸಿನಿಮಾ ರಂಗದಲ್ಲಿ ಅವರ ಹೆಸರು ಆಲಿಯಾ ಭಟ್ ಎಂದೇ ಇರುತ್ತಂತೆ. ದಾಖಲೆಗಳಲ್ಲಿ ಮಾತ್ರ ಕಪೂರ್ ಎಂದಾಗಿರುತ್ತದೆ ಎಂದು ತಿಳಿದು ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಶಿವರಾಜ್ ಕುಮಾರ್ ನಿಜವಾದ ಹೆಸರು ಏನು? ಶಿವಣ್ಣ ಬಿಚ್ಚಿಟ್ಟ ರಹಸ್ಯ

    ಶಿವರಾಜ್ ಕುಮಾರ್ ನಿಜವಾದ ಹೆಸರು ಏನು? ಶಿವಣ್ಣ ಬಿಚ್ಚಿಟ್ಟ ರಹಸ್ಯ

    ನ್ನಡದ ಅಭಿಮಾನಿಗಳು ಶಿವರಾಜ್ ಕುಮಾರ್ ಅವರನ್ನು ಸೆಂಚ್ಯುರಿ ಸ್ಟಾರ್, ಶಿವಣ್ಣ ಅಂತ ಅಭಿಮಾನದಿಂದ ಕರೆಯುತ್ತಾರೆ. ಸಿನಿಮಾ ರಂಗದಲ್ಲಿ ಶಿವರಾಜ್ ಕುಮಾರ್ ಎಂದೇ ಫೇಮಸ್. ಆದರೆ, ಶಿವರಾಜ್ ಕುಮಾರ್ ನಿಜವಾದ ಹೆಸರು ಬೇರೆಯದ್ದೇ ಇದೆ ಅಂತೆ. ಪಾಸ್ ಪೋರ್ಟ್, ಬ್ಯಾಂಕ್ ಅಕೌಂಟ್, ಸರಕಾರಿ ದಾಖಲಾತಿಗಳಲ್ಲಿ ಅವರು ಹೆಸರು ಬೇರೆಯಾಗಿದ್ದು, ಸಿನಿಮಾ ರಂಗದಲ್ಲಿ ಮಾತ್ರ ಶಿವರಾಜ್ ಕುಮಾರ್ ಎಂದಿದೆಯಂತೆ.

    ಈ ವಿಷಯವನ್ನು ಅವರೇ ಬಹಿರಂಗ ಪಡಿಸಿದ್ದಾರೆ. ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನನ್ನ ನಿಜವಾದ ಹೆಸರು ಶಿವರಾಜ್ ಕುಮಾರ್ ಅಲ್ಲ, ಬೇರೆಯದ್ದೇ ಇದೆ’ ಎಂದು ಹೇಳುವ ಮೂಲಕ ಅನೇಕರನ್ನು ಅಚ್ಚರಿಗೆ ದೂಡಿದ್ದಾರೆ. ಹಾಗಂತ ಅವರು ಹೆಸರು ಬದಲಾಯಿಸಿಕೊಂಡಿದ್ದು, ಸಿನಿಮಾ ರಂಗದ ಕೆಲವರಿಗೆ ಗೊತ್ತಿರುವ ವಿಚಾರ. ಆದರೆ, ಸಾರ್ವಜನಿಕರಿಗೆ ಈ ವಿಷಯವೇ ಗೊತ್ತಿರಲಿಲ್ಲ. ಇದನ್ನೂ ಓದಿ: ಎನ್.ಎಫ್.ಟಿ (NFT) ಮಾರುಕಟ್ಟೆಗೆ ಕನ್ನಡದ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಣ್ಣ, ‘ನನ್ನ ಹೆಸರು ನಾಗರಾಜು ಶಿವಪುಟ್ಟಸ್ವಾಮಿ’ ಎಂದು ಹೇಳಿದ್ದಾರೆ. ಈ ಹಿಂದೆ ಡಾ.ರಾಜ್ ಕುಮಾರ್ ಅವರು ಅದೆಷ್ಟು ಬಾರಿ ಶಿವರಾಜ್ ಕುಮಾರ್ ಕುರಿತು ಮಾತನಾಡುವಾಗ ತಮ್ಮ ತಂದೆಯ ಹೆಸರನ್ನೇ ಶಿವಣ್ಣನಿಗೆ ಇಟ್ಟಿದ್ದು ಎಂದು ಹೇಳಿದ್ದಾರೆ. ಶಿವಪುಟ್ಟಸ್ವಾಮಿ ನಿಜವಾದ ಹೆಸರು ಎಂದೂ ಹೇಳಿದ್ದಾರೆ. ಇಂದು ಬಹಿರಂಗವಾಗಿಯೇ ಶಿವರಾಜ್ ಕುಮಾರ್ ತಮ್ಮ ನಿಜವಾದ ಹೆಸರನ್ನು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಡುಪಿಯಲ್ಲಿ ಮುಸ್ಲಿಂ ಅಂಗಡಿ ಹೆಸರು ಬದಲಿಸುವಂತೆ ಪಟ್ಟು

    ಉಡುಪಿಯಲ್ಲಿ ಮುಸ್ಲಿಂ ಅಂಗಡಿ ಹೆಸರು ಬದಲಿಸುವಂತೆ ಪಟ್ಟು

    ಉಡುಪಿ: ಹಿಜಬ್ ಹೋರಾಟ ಒಂದೊಂದು ಕಡೆ ಒಂದೊಂದು ಲೆವೆಲ್ಲಿಗೆ ಹೋಗುತ್ತಿದೆ. ಶಿರವಸ್ತ್ರದಿಂದ ಆರಂಭವಾಗಿ ಧಾರ್ಮಿಕ ಕೇಂದ್ರದ ವ್ಯಾಪಾರ, ಅಲ್ಲಿಂದ ಹಲಾಲ್ ಗೆ ಸುತ್ತುವರಿದು ಇದೀಗ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ.

    ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಹಿಜಬ್ ಹೋರಾಟ ಒಂದೊಂದೇ ಘರ್ಷಣೆಗಳಿಗೆ ಕಾರಣವಾಗುತ್ತಿದೆ. ಹಿಂದೂ ಸಂಘಟನೆಗಳು ಜಿದ್ದಿಗೆ ಬಿದ್ದಂತೆ ಮುಸ್ಲಿಮರನ್ನು ಕಾಡಲು ಶುರು ಮಾಡಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಫೂಟ್ ವೇರ್ ಅಂಗಡಿಯ ಹೆಸರು ಬದಲಿಸುವಂತೆ ಹಿಂದೂ ಜಾಗರಣಾ ವೇದಿಕೆ ಆಗ್ರಹಿಸಿದೆ. ಸಾಲಿಗ್ರಾಮ ಪಟ್ಟಣದ ಮುಖ್ಯರಸ್ತೆಯಲ್ಲಿ ಹಿಂದೂ ದೇವರ ಹಾಗೂ ಪ್ರಸಿದ್ಧ ಕ್ಷೇತ್ರದ ಹೆಸರನಿಟ್ಟುಕೊಂಡು ವ್ಯವಹರಿಸುತ್ತಿರುವ “ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್” ಹೆಸರು ಬದಲಾಯಿಸುವಂತೆ ಒತ್ತಾಯಿಸಲಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಹಿಂದೂ ಜಾಗರಣಾ ವೇದಿಕೆ ಮನವಿ ನೀಡಿದೆ. ಇದನ್ನೂ ಓದಿ: ಬುಲ್ಡೋಜರ್ ಜನರನ್ನು ಹತ್ತಿಕ್ಕಲು ಪ್ರಾರಂಭಿಸಿದೆ: ಅಖಿಲೇಶ್ ಯಾದವ್

    ಅಂಗಡಿ ಮಾಲೀಕ ಹಿಜಬ್ ಸಂಬಂಧಿಸಿದ ಕೋರ್ಟ್ ತೀರ್ಪು ವಿಚಾರದಲ್ಲಿ ಬಂದ್ ಮಾಡಿದ್ದರು. ಮುಸ್ಲಿಂ ಸಮುದಾಯ ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿದ್ದಾರೆ. ವ್ಯಾವಹಾರಿಕಾ ಅಂಗಡಿಯ ಹೆಸರು ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಈ ನಡುವೆ ವ್ಯವಹಾರ ಅಸಹಕಾರ ಮುಂದುವರೆದಿದೆ. ಗ್ರಾಮಿಣ ಪ್ರದೇಶಗಳಿಗೂ ವ್ಯಾಪಾರ ಬಹಿಷ್ಕಾರ ಆವರಿಸಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸದಸ್ಯರು ಜಾತ್ರೆ ನಡೆಯುವಲ್ಲೆಲ್ಲಾ ಕರಪತ್ರ, ಬ್ಯಾನರ್ ಹಾಕಿ ವಹಿವಾಟಿಗೆ ತಡೆಯೊಡ್ಡುತ್ತಿದ್ದಾರೆ. ನಾಯಕರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಹೋರಾಟ ಆರಂಭವಾಗಿತ್ತು. ಧಾರ್ಮಿಕ ಕೇಂದ್ರದ ವ್ಯಾಪಾರ ವಹಿವಾಟಿಗೆ ತಡೆ ಬಿದ್ದದ್ದು ಉಡುಪಿಯಲ್ಲೇ. ಆದರೆ ಹಲಾಲ್ ಮತ್ತು ಜಟ್ಕಾ ಕಟ್ ತಿಕ್ಕಾಟ ಈವರೆಗೆ ಉಡುಪಿಯಲ್ಲಿ ಕಾಣಿಕೊಳ್ಳದಿರುವುದು ಕೊಂಚ ನೆಮ್ಮದಿಯ ಸಂಗತಿ. ಇದನ್ನೂ ಓದಿ: ಯುಗಾದಿ ಬಳಿಕ ಜಟ್ಕಾ ಕಟ್‍ಗೆ ಸ್ಪೆಷಲ್ ಕ್ಲಾಸ್..!

  • ಎರಡನೇ ಮಗುವನ್ನು ಸ್ವಾಗತಿಸಿದ ಎಲೋನ್ ಮಸ್ಕ್

    ಎರಡನೇ ಮಗುವನ್ನು ಸ್ವಾಗತಿಸಿದ ಎಲೋನ್ ಮಸ್ಕ್

    ನ್ಯೂಯಾರ್ಕ್: ಖ್ಯಾತ ಉದ್ಯಮಿ ಬಿಲಿಯನೇರ್ ಎಲೋನ್ ಮಸ್ಕ್ ಮತ್ತು ಗಾಯಕಿ ಹಾಗೂ ಗೀತರಚನೆಗಾರ್ತಿ ಗ್ರಿಮ್ಸ್ ಅವರು ಡಿಸೆಂಬರ್ 2021ರಲ್ಲಿ ಬಾಡಿಗೆ ಮೂಲಕ ತಮ್ಮ ಎರಡನೇ ಮಗುವನ್ನು ರಹಸ್ಯವಾಗಿ ಸ್ವಾಗತಿಸಿದ್ದಾರೆ.

    ಮಗುವಿನ ಪೂರ್ಣ ಹೆಸರು ಎಕ್ಸಾ ಡಾರ್ಕ್ ಸೈಡೆರೆಲ್, ಅಂತ ಗ್ರಿಮ್ಸ್ ಅವರು ಬಹಿರಂಗಪಡಿಸಿದ್ದಾರೆ. ಆದಾಗ್ಯೂ, ಮಾಜಿ ದಂಪತಿ ತಮ್ಮ ಮಗುವಿಗೆ ‘ವೈ’ ಎಂದು ಅಡ್ಡಹೆಸರು ಇಟ್ಟಿದ್ದಾರೆ.

    ಗ್ರೀಮ್ಸ್ ಅವರು ಪೀಪಲ್ ಮ್ಯಾಗಜೀನ್‍ನ ವಿಶೇಷ ಸಂಚಿಕೆಯಲ್ಲಿ ಮಾತನಾಡುತ್ತಾ ತಮ್ಮ ಮಗಳ ವಿಶಿಷ್ಟ ಹೆಸರಿನ ಒಳ ಅರ್ಥವನ್ನು ವಿವರಿಸಿದರು. ಎಕ್ಸಾ ಡಾರ್ಕ್ ಸೈಡೆರೆಲ್ ಎಂದರೆ ಎಕ್ಸಾ ಸೂಪರ್ ಕಂಪ್ಯೂಟಿಂಗ್ ಪದವಾದ ಎಕ್ಸಾಫೆÇ್ಲೀಪ್ಸ್ ಅನ್ನು ಸೂಚಿಸುತ್ತದೆ. ಆದರೆ ಡಾರ್ಕ್ ಎಂಬ ಪದ ‘ಅಜ್ಞಾತ’ ವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.

    ಜನರು ಈ ಹೆಸರಿಗೆ ಭಯಪಡುತ್ತಾರೆ. ಆದರೆ ನಿಜವಾಗಿಯೂ ಇದು ಫೋಟಾನ್‍ಗಳ ಅನುಪಸ್ಥಿತಿಯಾಗಿದೆ. ಡಾರ್ಕ್‍ನ ಒಳ ಅರ್ಥವೆನೆಂದರೆ ನಮ್ಮ ಬ್ರಹ್ಮಾಂಡದ ಸುಂದರವಾದ ರಹಸ್ಯವಾಗಿದೆ. ಈ ಸಂದರ್ಭದಲ್ಲಿ ತಮ್ಮ ಮಗಳ ಎರಡನೇ ಅಡ್ಡ ಹೆಸರಿನ ವಿಶೇಷತೆ ಬಗ್ಗೆ ತಿಳಿಸಿದ ಅವರು, ‘ವೈ’ ನ ಪೂರ್ಣ ಹೆಸರಿನ ಮೂರನೇ ಭಾಗವಾದ ‘ಸೈಡೆರೆಲ್’ ಅನ್ನು ಡೀಯರ್-ಈ-ಎಲ್ ಎಂದು ಉಚ್ಚರಿಸಲಾಗುತ್ತದೆ ಎಂದರು. ಇದನ್ನೂ ಓದಿ: Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌, ಬುಲ್ಡೋಜರ್‌ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ

    ಸೈಡೆರೆಲ್ ಎಂಬ ಪದವು ಬ್ರಹ್ಮಾಂಡದ ನಿಜವಾದ ಸಮಯ, ನಕ್ಷತ್ರದ ಸಮಯ, ಆಳವಾದ ಬಾಹ್ಯಾಕಾಶ ಸಮಯ, ಆದರೆ ನಮ್ಮ ಸಂಬಂಧಿತ ಭೂಮಿಯ ಸಮಯವಲ್ಲ ಎಂದು ವ್ಯಾಖ್ಯಾನಿಸಿದ್ದಾರೆ.

    ತಮ್ಮ ಮಗಳಿಗೆ ಒಡಿಸ್ಸಿಯಸ್ ಮಸ್ಕ್ ಎಂದು ಹೆಸರಿಸಲು ಪ್ರಯತ್ನಿಸಿದ್ದರಂತೆ. ಏಕೆಂದರೆ ಒಡಿಸ್ಸಿಯಸ್ ಎಂಬ ಹೆಸರಿಡುವುದು ನನ್ನ ಕನಸಾಗಿತ್ತು. ಆದಾಗ್ಯೂ ನಾನು ಮಗಳಿಗೆ ಎಕ್ಸಾ ಡಾರ್ಕ್ ಸೈಡೆರೇಲ್ ಎಂಬ ಹೆಸರನ್ನು ಇಟ್ಟಿದ್ದೇನೆ ಎಂದು ಗ್ರೀಮ್ಸ್ ತಿಳಿಸಿದ್ದಾರೆ.

    ಗ್ರಿಮ್ಸ್‍ಗೆ ಈಗಾಗಲೇ 22 ತಿಂಗಳ ಮಗು ಇದ್ದು, ಟೆಸ್ಲಾ ಕಂಪನಿಯ ಮಾಲಿಕರಾದ ಎಲೋನ್ ಮಸ್ಕ್ ಜೊತೆ ಮೂರು ವರ್ಷಗಳ ನಂತರ ಇಬ್ಬರೂ ಸೆಪ್ಟೆಂಬರ್ 2021ರಲ್ಲಿ ತಮ್ಮ ಪ್ರತ್ಯೇಕತೆಯನ್ನು ಘೋಷಿಸಿದ್ದರು. ಆದರೆ ಇವರಿಬ್ಬರು ಮತ್ತೆ ಒಂದಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದನ್ನೂ ಓದಿ: ಪಂಚರಾಜ್ಯಗಳ ಫಲಿತಾಂಶದ ಬೆನ್ನಲ್ಲೇ ರಾಜ್ಯಕ್ಕೆ ಬರಲಿದ್ದಾರೆ ಮೋದಿ – ಕಲಬುರಗಿಗೆ ಯಾಕೆ?

    ಪ್ರತ್ಯೇಕತೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಬಹುಶಃ ಅವನನ್ನು ನನ್ನ ಗೆಳೆಯ ಎಂದು ಹೇಳಿಕೊಳ್ಳತ್ತೆನೆ. ಆದರೆ ನಾವು ತುಂಬಾ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡಿದ್ದೇವೆ. ನಾವು ಪ್ರತ್ಯೇಕ ಮನೆಗಳಲ್ಲಿ ವಾಸಿಸುತ್ತೇವೆ. ಅದಲ್ಲದೆ ನಾವು ಉತ್ತಮ ಸ್ನೇಹಿತರು. ನಾವು ಯಾವಾಗಲೂ ಒಬ್ಬರನ್ನೊಬ್ಬರು ನೋಡುತ್ತಲೇ ಇರುತ್ತೇವೆ. ನಾವು ನಮ್ಮದೇ ಆದ ವಿಷಯವನ್ನು ಹೊಂದಿದ್ದೇವೆ. ಇತರ ಜನರು ಅದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುವುದಿಲ್ಲ ಎಂದರು.

    ಮುಂಬರುವ ದಿನಗಳಲ್ಲಿ ಇವರಿಬ್ಬರು ಹೆಚ್ಚಿನ ಮಕ್ಕಳನ್ನು ಬೆಳೆಸಲು ಯೋಜಿಸಿದ್ದೇವೆ ಎಂದು ಪ್ರಕಟಣೆಗೆ ತಿಳಿಸಿದ್ದು, ನಾವು ಯಾವಾಗಲೂ ಕನಿಷ್ಠ ಮೂರು ಅಥವಾ ನಾಲ್ಕು ಮಕ್ಕಳನ್ನು ಬಯಸುತ್ತಿದ್ದೇವು ಎಂದು ತಿಳಿಸಿದರು.

  • ಗಿನ್ನಿಸ್ ರೆಕಾರ್ಡ್ ಸೇರಿತು ಮಹಿಳೆ ಹೆಸರು – ಈಕೆ ಹೆಸರಲ್ಲಿದೆ ಬರೋಬ್ಬರಿ 1,019 ಅಕ್ಷರ

    ಗಿನ್ನಿಸ್ ರೆಕಾರ್ಡ್ ಸೇರಿತು ಮಹಿಳೆ ಹೆಸರು – ಈಕೆ ಹೆಸರಲ್ಲಿದೆ ಬರೋಬ್ಬರಿ 1,019 ಅಕ್ಷರ

    – ಮಹಿಳೆಯ ಜನನ ಪ್ರಮಾಣ ಪತ್ರವೇ ಇದೆ 2 ಅಡಿ ಉದ್ದ
    – ಸುಮಾರು 1,019 ಅಕ್ಷರಗಳಿರುವ ಹೆಸರು

    ಹೂಸ್ಟನ್: ಹೆತ್ತವರು ತಮ್ಮ ಮಕ್ಕಳಿಗೆ ಹೆಸರಿಡುವಾಗ ನಾನಾ ರೀತಿಯಲ್ಲಿ ಯೋಚಿಸುತ್ತಾರೆ. ಮಗುವಿನ ರೂಪ ಲಾವಣ್ಯ, ಹುಟ್ಟಿದ ಸಂದರ್ಭಕ್ಕೆ ತಕ್ಕಂತೆ ಹೆಸರಿಡುವವರಿದ್ದಾರೆ. ಎಷ್ಟೋ ಮಂದಿ ತಮ್ಮ ಇಷ್ಟದ ವ್ಯಕ್ತಿ, ನಟ, ನಟಿ ಹೆಸರೋ ಅಥವಾ ಕುಟುಂಬದ ಸದಸ್ಯರ ನೆನಪಿನಾರ್ಥ ಅವರ ಹೆಸರನ್ನೇ ಇಡುವವರಿದ್ದಾರೆ. ಇನ್ನೂ ಕೆಲವರು ಶಾಸ್ತ್ರ, ಸಂಪ್ರದಾಯಕ್ಕೆ ತಕ್ಕಂತೆ ಮಕ್ಕಳಿಗೆ ಹೆಸರಿಡುತ್ತಾರೆ.

    ಆದರೆ ಇಲ್ಲೊಬ್ಬರು ತಮ್ಮ ಮಗಳಿಗೆ ಕೇಳುಗರು ಅಚ್ಚರಿ ಪಡುವಂತ ಹೆಸರಿಟ್ಟಿದ್ದಾರೆ. ಆ ಹೆಸರು ಈಗ ಇಡೀ ವಿಶ್ವದಾದ್ಯಂತ ಸುದ್ದಿಯಾಗುತ್ತಿದ್ದು, ರೆಕಾರ್ಡ್ ಕೂಡ ಮಾಡಿದೆ. ಜಗತ್ತಿನ ಅತೀ ಉದ್ದದ ಹೆಸರು ಎಂಬ ಖ್ಯಾತಿಯನ್ನೂ ಪಡೆದುಕೊಂಡಿದೆ. ಆ ಹೆಸರು ಕೇಳಿದರೆ ಖಂಡಿತ ನಿಮಗೂ ಅಚ್ಚರಿಯಾಗಬಹುದು. ಇದನ್ನೂ ಓದಿ: ಪಾಕ್ ಪ್ರಧಾನಿ, ಮಾಜಿ ಪತ್ನಿಯ ಕಾರಿನ ಮೇಲೆ ಗುಂಡಿನ ದಾಳಿ

    ಹೌದು, ಉತ್ತರ ಅಮೆರಿಕದ ಟೆಕ್ಸಾಸ್ ರಾಜ್ಯದ ಹೂಸ್ಟನ್‍ನ ಜೇಮ್ಸ್ ವಿಲಿಯಮ್ಸ್ ಮತ್ತು ಸಾಂಡ್ರಾ ವಿಲಿಯಮ್ಸ್ ದಂಪತಿ ತಮ್ಮ ಮಗಳಿಗೆ ವಿಶಿಷ್ಟವಾದ ಹೆಸರನ್ನು ಇಟ್ಟಿದ್ದಾರೆ. ಆ ಹೆಸರಿನ ಜನನ ಪ್ರಮಾಣ ಪತ್ರವೇ 2 ಅಡಿ ಉದ್ದ ಇದೆ. ಸುಮಾರು 1,019 ಅಕ್ಷರಗಳಿರುವ ಹೆಸರನ್ನು ಆ ಮಹಿಳೆ ತನ್ನ ಮಗಳಿಗೆ ನಾಮಕರಣ ಮಾಡಿದ್ದಾರೆ.

    ಹೆಸರೇನು ಗೊತ್ತೆ?
    Rhoshandiatellyneshiaunneveshenkescianneshaimondrischlyndasaccarnaerenquellenendrasamecashaunettethalemeicoleshiwhalhinive’onchellecaundenesheaalausondrilynnejeanetrimyranaekuesaundrilynnezekeriakenvaunetradevonneyavondalatarneskcaevontaepreonkeinesceellaviavelzadawnefriendsettajessicannelesciajoyvaelloydietteyvettesparklenesceaundrieaquenttaekatilyaevea’shauwneoraliaevaekizzieshiyjuanewandalecciannereneitheliapreciousnesceverroneccaloveliatyronevekacarrionnehenriettaescecleonpatrarutheliacharsalynnmeokcamonaeloiesalynnecsiannemerciadellesciaustillaparissalondonveshadenequamonecaalexetiozetiaquaniaenglaundneshiafrancethosharomeshaunnehawaineakowethauandavernellchishankcarlinaaddoneillesciachristondrafawndrealaotrelleoctavionnemiariasarahtashabnequckagailenaxeteshiataharadaponsadeloriakoentescacraigneckadellanierstellavonnemyiatangoneshiadianacorvettinagodtawndrashirlenescekilokoneyasharrontannamyantoniaaquinettesequioadaurilessiaquatandamerceddiamaebellecescajamesauwnneltomecapolotyoajohnyaetheodoradilcyana

    ವರ್ಲ್ಡ್‌ ರೆಕಾರ್ಡ್
    ತನ್ನ ಮಗಳಿಗೆ ಈ ಹೆಸರಿಡಲು ಸಾಂಡ್ರಾ ವಿಲಿಯಮ್ಸ್ ಅವರು ಸತತ ಒಂದು ವರ್ಷ ಯೋಚನೆ ಮಾಡಿದ್ದರು. ಉದ್ದದ ಹೆಸರು ಪಡೆದಿರುವ ಮಹಿಳೆ 1984ರಲ್ಲಿ ಜನಿಸಿದರು. ಈಗ ಆಕೆಯ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್‌ ಮಾಡಿದೆ. ಇದನ್ನೂ ಓದಿ: ಬಸ್ ಅಪಘಾತದಲ್ಲಿ 22 ಮಂದಿ ಸಾವಿಗೆ ಕಾರಣನಾದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ

    1 ವರ್ಷ ಯೋಚಿಸಿದ್ದ ತಾಯಿ
    ಈಕೆ ಹೆಸರು ಉದ್ದ ಎಂಬ ಕಾರಣಕ್ಕೆ Jameshauwnnel ಅಥವಾ Jamie’ ಅಂತ ಎರಡು ಅಡ್ಡ ಹೆಸರುಗಳಿಂದ ಸ್ನೇಹಿತರು ಕರೆಯುತ್ತಾರೆ. ಸಂಬಂಧಿಕರು, ಹಲವು ದೇಶಗಳು ಮತ್ತು ನಗರಗಳು, ಸ್ನೇಹಿತರು, ಪ್ರೀತಿ ಪಾತ್ರರ ಹೆಸರುಗಳನ್ನು ಸೇರಿಸಿ ವಿಲಿಯಮ್ಸ್ ದಂಪತಿ ತಮ್ಮ ಮಗಳಿಗೆ ಹೆಸರಿಟ್ಟಿದ್ದಾರೆ.

    ರಿಜಿಸ್ಟ್ರಾರ್‌ಗೆ ಕಿರಿಕಿರಿ
    ಈ ಹೆಸರನ್ನು ನೋಂದಣಿ ಮಾಡುವಾಗ ಅಧಿಕಾರಿಗಳಿಗೆ ಕಿರಿಕಿರಿ ಎನಿಸಿತ್ತು. ಇಷ್ಟು ದೊಡ್ಡದಾದ ಹೆಸರನ್ನು ಹೇಗೆ ನೋಂದಣಿ ಮಾಡುವುದು ಎಂಬುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು. ಈಕೆ ಹೆಸರಿನ ನಂತರ ರಾಜ್ಯ ರಿಜಿಸ್ಟ್ರಾರ್ ಡಬ್ಲ್ಯೂ.ಡಿ.ಕ್ಯಾರೊಲ್ ಅವರು, 51/8 ಇಂಚಿನ ಜಾಗದಲ್ಲಿ ಎರಡು ಟೈಪ್‍ರೈಟ್ ಲೈನ್‍ಗಳಿಗೆ ಹೊಂದಿಕೆಯಾಗದ ಯಾವುದೇ ಹೆಸರನ್ನು ಕಚೇರಿ ಸ್ವೀಕರಿಸುವುದಿಲ್ಲ ಕಟ್ಟುನಿಟ್ಟಾಗಿ ಆದೇಶ ಹೊರಡಿಸಿದ್ದರು.

    ಇಷ್ಟದ ಹೆಸರಿಡಲು ಕೋರ್ಟ್ ಅನುಮತಿ
    ಪಾಲಕರು ತಮ್ಮ ಮಕ್ಕಳಿಗೆ ಏನು ಬೇಕಾದರೂ ಹೆಸರಿಡಬಹುದು ಎಂದು ರಾಜ್ಯದಲ್ಲಿ ಮೂರು ನ್ಯಾಯಾಲಯಗಳು ತೀರ್ಪು ನೀಡಿವೆ. ಆದರೆ ಕ್ಯಾರೊಲ್ ಅವರ ಆದೇಶ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದೆ. ಈ ಬಗ್ಗೆ ರಾಜ್ಯ ರಿಜಿಸ್ಟ್ರಾರ್ ಕಚೇರಿಯ ಸಹಾಯಕ ಅಧಿಕಾರಿಯನ್ನು ಕೇಳಿದರೆ, ಕ್ಯಾರೊಲ್ ಅವರ ಆದೇಶವನ್ನು ಟೆಕ್ಸಾಸ್‍ನಲ್ಲಿ ಇನ್ನೂ ಯಾರೂ ಪ್ರಶ್ನಿಸಿಲ್ಲ ಎಂದು ಹೇಳಿದ್ದಾರೆ.