Tag: ಹೆಸರು

  • ಆರ್‌ಸಿಬಿಯಿಂದ ಬೆಂಗ್ಳೂರು ಮಾನ ಹರಾಜು – ತಂಡದ ಹೆಸರು ಬದಲಾಯಿಸುವಂತೆ ಕ್ರಿಕೆಟ್ ಮಂಡಳಿಗೆ ಪತ್ರ

    ಆರ್‌ಸಿಬಿಯಿಂದ ಬೆಂಗ್ಳೂರು ಮಾನ ಹರಾಜು – ತಂಡದ ಹೆಸರು ಬದಲಾಯಿಸುವಂತೆ ಕ್ರಿಕೆಟ್ ಮಂಡಳಿಗೆ ಪತ್ರ

    ಬೆಂಗಳೂರು: ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರಂತರವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು, ಪರಿಣಾಮ ಬೆಂಗಳೂರಿನ ಮಾನ ಹರಾಜಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಎಂಬವರು ರಾಜ್ಯ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದಾರೆ.

    ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರತಿಬಾರಿಯು ಆರ್‌ಸಿಬಿ ಕಳಪೆ ಪ್ರದರ್ಶನ ನೀಡುತ್ತಿದೆ. ಇಡೀ ತಂಡದಲ್ಲಿ ಯಾವ ಕನ್ನಡಿಗ ಆಟಗಾರ ಕೂಡ ಇಲ್ಲ. ಅಲ್ಲದೇ ರಾಜ್ಯದ ಕುಂಬ್ಳೆ ಅವರನ್ನು ಆ ಹುದ್ದೆಯಿಂದ ತೆಗೆಯಲು ತಂಡದ ನಾಯಕ ವಿರಾಟ್ ಕೊಹ್ಲಿಯೇ ಕಾರಣ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ತಂಡದ ಕೆಟ್ಟ ನಿರ್ಧಾರದಿಂದ ಬೆಂಗಳೂರಿನ ಮಾನ ಹರಾಜಾಗುತ್ತಿದೆ. ಹಾಗಾಗಿ ರಾಯಲ್ ಚಾಲೆಂಜರ್ಸ್ ತಂಡದ ಹೆಸರಿನಿಂದ ಬೆಂಗಳೂರು ಹೆಸರು ತೆಗೆದು ಹಾಕಿ ಬೆಂಗಳೂರು ಮಾನ ಉಳಿಸುವಂತೆ ಮನವಿ ಮಾಡಿದ್ದಾರೆ.

    ರಾಯಲ್ ಚಾಲೆಂಜರ್ಸ್ ತಂಡಕ್ಕೆ ರಾಜ್ಯಾದ್ಯಂತ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಪ್ರತಿ ಪಂದ್ಯದಲ್ಲೂ ಅಭಿಮಾನಿಗಳು ತಂಡವನ್ನು ಬೆಂಬಲಿಸಿ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದಾರೆ. ಆದರೆ ಕರ್ನಾಟಕದಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಇದ್ದರೂ ಕೂಡ ತಂಡದ ಆಡಳಿತ ಮಂಡಳಿ ಆಟಗಾರರನ್ನು ಕಡೆಗಣಿಸಿದೆ. ಅದಾಗ್ಯೂ ತಂಡದಲ್ಲಿ ಉತ್ತಮ ಆಟಗಾರರು ಇದ್ದರು ಕೂಡ ಉತ್ತಮ ಪ್ರದರ್ಶನ ನೀಡಲು ವಿಫಲವಾಗುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಕರ್ನಾಟಕಕ್ಕೆ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಜಿಆರ್ ವಿಶ್ವನಾಥ್, ಬ್ರಿಜೇಶ್ ಪಟೇಲ್, ರೋಜರ್ ಬಿನ್ನಿ, ವೆಂಕಟೇಶ್ ಪ್ರಸಾದ್, ಕಿರ್ಮಾನಿ, ಜಾವಗಲ್ ಶ್ರೀನಾಥ್ ಸೇರಿದಂತೆ ಹಲವು ಹಿರಿಯ ಆಟಗಾರರು ತಂದಿದ್ದ ಕೀರ್ತಿಯನ್ನು ಮಣ್ಣುಪಾಲು ಮಾಡುತ್ತಿರುವ ತಂಡದ ಹೆಸರಿನಿಂದ ಬೆಂಗಳೂರು ಹೆಸರನ್ನು ತೆಗೆದುಹಾಕಿ ಎಂದು ಮನವಿ ಮಾಡಿದ್ದಾರೆ.

    https://twitter.com/WOLFIESTR/status/1112427590986268672

  • ನಿಖಿಲ್‍ಗೆ ಮತ್ತೊಂದು ಸಂಕಷ್ಟ!

    ನಿಖಿಲ್‍ಗೆ ಮತ್ತೊಂದು ಸಂಕಷ್ಟ!

    ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಮತದಾರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಎಂದು ಹೆಸರಿದೆ. ಆದರೆ ನಾಮಪತ್ರ ಪ್ರಮಾಣ ಪತ್ರದಲ್ಲಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿಲ್ಲ. ಬದಲಿಗೆ ನಿಖಿಲ್.ಕೆ ಎಂಬ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಲಾಗಿದೆ. ಇದು ಚುನಾವಣಾ ನೀತಿಯ ಉಲ್ಲಂಘನೆಯಾಗಿದೆ ಎಂದು ಬಿ.ಎಸ್ ಗೌಡ ಹೇಳಿದ್ದಾರೆ.

    ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಹೆಸರು ಮತ್ತು ಮತದಾರರ ಪಟ್ಟಿಯಲ್ಲಿರುವ ಹೆಸರು ಒಂದೇ ಆಗಿರಬೇಕು. ಇದು ಚುನಾವಣೆಯ ನೀತಿಯಾಗಿದೆ. ಆದರೆ ಈಗ ಹೆಸರುಗಳಲ್ಲಿ ವ್ಯತ್ಯಾಸ ಇರುವುದರಿಂದ ನಾಮಪತ್ರ ತಿರಸ್ಕ್ರತವಾಗಬೇಕಿತ್ತು. ಆದರೆ ಚುನಾವಣಾಧಿಕಾರಿ ಇದನ್ನು ಅಂಗೀಕರಿಸುವ ಮೂಲಕ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಬಿ.ಎಸ್ ಗೌಡ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ನಾಮಪತ್ರ ತಿರಸ್ಕರಿಸುವಂತೆ ಹಾಗೂ ಚುನಾವಣಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ಬಿ.ಎಸ್ ಗೌಡ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ದೂರಿನಲ್ಲಿ ಏನಿದೆ?
    ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಮತ್ತು ಅವರು ನೀಡಿರುವ ಪ್ರಮಾಣ ಪತ್ರದಲ್ಲಿನ ಹೆಸರು ಹೊಂದಣಿಕೆ ಇರದ ಕಾರಣ ಅವರ ನಾಮಪತ್ರವನ್ನು ತಿರಸ್ಕರಿಸಬೇಕು. ಮತದಾರರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಎಂಬುದಾಗಿ ಇದೆ. ಆದರೆ ಅವರು ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನಿಖಿಲ್.ಕೆ ಎಂದು ನಮೂದಿಸಲಾಗಿದೆ. ಹೀಗಾಗಿ ಅವರು ನಿಖಿಲ್ ಕುಮಾರಸ್ವಾಮಿ ಎಂದು ಸುಳ್ಳು ಹೇಳಿರುತ್ತಾರೆ. ಮತದಾರರ ಪಟ್ಟಿಯಲ್ಲಿದ್ದ ಹೆಸರನ್ನು ಪ್ರಮಾಣ ಪತ್ರದಲ್ಲಿ ಮರೆಮಾಚಿರುತ್ತಾರೆ. ಹೀಗಾಗಿ ಇವರನ್ನು ಚುನಾವಣೆ ಉಮೇದುವಾರಿಕೆಯಿಂದ ವಜಾ ಮಾಡಬೇಕೆಂದು ಆಗ್ರಹಿಸುತ್ತೇನೆ.

    ಜೊತೆಗೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳ ಮೇಲೆ ಅನೇಕ ದೂರುಗಳು ಬಂದರೂ ಅವರನ್ನು ವರ್ಗಾವಣೆ ಮಾಡದೇ ಉಳಿಸಿಕೊಂಡಿರುವುದು ಬಹಳ ಅನುಮಾನ ಬಂದಿದೆ. ಚುನಾವಣಾ ಸಂದರ್ಭದಲ್ಲಿ ಅಧಿಕಾರಿ ಮೇಲೆ ದೂರು ಬಂದರೆ ಅವರನ್ನು ತಕ್ಷಣವೇ ವರ್ಗಾವಣೆ ಮಾಡುವುದು ವಾಡಿಕೆ. ಆದರೆ ಅವರ ಮೇಲೆ ಸಾಕಷ್ಟು ದೂರುಗಳು ಬಂದರೂ ವರ್ಗಾವಣೆ ಮಾಡದೇ ಇರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ. ಹೀಗಾಗಿ ಅವರನ್ನು ವರ್ಗಾವಣೆ ಮಾಡುವ ಮೂಲಕ ಚುನಾವಣೆ ಸಂಸ್ಥೆಯ ಮೇಲೆ ಸಾರ್ವಜನಿಕರ ಗೌರವವನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • ಮದ್ವೆ ಸೀಕ್ರೆಟ್ ಆಗಿ ಇಡಲು ವಿರಾಟ್ ಹೆಸರನ್ನೇ ಬದಲಿಸಿದ ಅನುಷ್ಕಾ

    ಮದ್ವೆ ಸೀಕ್ರೆಟ್ ಆಗಿ ಇಡಲು ವಿರಾಟ್ ಹೆಸರನ್ನೇ ಬದಲಿಸಿದ ಅನುಷ್ಕಾ

    ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2017ರಲ್ಲಿ ಇಟಲಿಯಲ್ಲಿ ಯಾರಿಗೂ ತಿಳಿಸದೇ ಗುಟ್ಟಾಗಿ ಮದುವೆ ಆಗಿದ್ದರು. ತಮ್ಮ ಮದುವೆಯ ಸೀಕ್ರೆಟ್ ಯಾರಿಗೂ ತಿಳಿಯಬಾರದೆಂದು ಅನುಷ್ಕಾ ಕ್ಯಾಟರಿಂಗ್ ಮಾಡುವವರ ಬಳಿ ವಿರಾಟ್ ಕೊಹ್ಲಿ ಹೆಸರನ್ನೇ ಬದಲಿಸಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಶರ್ಮಾ ವೋಗ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು ತಮ್ಮ ವೃತ್ತಿಜೀವನದ ಬಗ್ಗೆ ಹಾಗೂ ತಮ್ಮ ಮದುವೆಯ ಬಗ್ಗೆ ಇದ್ದ ಸೀಕ್ರೆಟ್ ಅನ್ನು ರಿವೀಲ್ ಮಾಡಿದ್ದರು. ಮದುವೆಯ ಸಂದರ್ಭದಲ್ಲಿ ಕ್ಯಾಟರಿಂಗ್ ಮಾಡುವವರ ಬಳಿ ವಿರಾಟ್ ಹೆಸರು ಬದಲು ಬೇರೆಯವರ ಹೆಸರನ್ನು ಹೇಳಿದೆ ಎಂದು ಅನುಷ್ಕಾ ಹೇಳಿದ್ದಾರೆ.

    ನನ್ನ ಮದುವೆಗೆ ಮಾಧ್ಯಮದವರು ಇರಬಾರದು ಎಂದು ನಾನು ಈ ರೀತಿ ಮಾಡಿದೆ. ಅಲ್ಲದೇ ಕುಟುಂಬಸ್ಥರ ನಡುವೆ ನನ್ನ ಮದುವೆ ನಡೆಯಬೇಕೆಂಬ ಆಸೆ ನನಗಿತ್ತು. ಹಾಗಾಗಿ ನನ್ನ ಮದುವೆಯಲ್ಲಿ ಸ್ನೇಹಿತರು ಹಾಗೂ ಕುಟುಂಬದವರು ಸೇರಿ ಕೇವಲ 42 ಮಂದಿ ಇದ್ದರು ಎಂದರು.

    ನನಗೆ ನನ್ನ ಹಾಗೂ ವಿರಾಟ್ ಮದುವೆ ಬೇಕಿತ್ತೆ ಹೊರತು ದೊಡ್ಡ ಸೆಲೆಬ್ರಿಟಿ ಮದುವೆ ಅಲ್ಲ. ನನ್ನ ಮದುವೆಯಲ್ಲಿ ಬಂದಿದ್ದ ಅತಿಥಿಗಳೆಲ್ಲರೂ ತುಂಬಾನೇ ಉತ್ಸಾಹಿತರಾಗಿದ್ದರು. ಅದನ್ನು ನೋಡಿ ನನಗೆ ಖುಷಿಯಾಯಿತು. ನಾನು ವಿರಾಟ್ ಹೆಸರನ್ನು ರಾಹುಲ್ ಎಂದು ಬದಲಿಸಿದೆ ಎಂದು ಅನುಷ್ಕಾ ಹೇಳಿದ್ದಾರೆ.

    ವಿರಾಟ್ ಕೊಹ್ಲಿ- ಅನುಷ್ಕಾ ಇಟಲಿಯ ಖಾಸಗಿ ರೆಸಾರ್ಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇಟಲಿಯ ಟಸ್ಕನಿ ನಗರದ `ಬೋಗೋ ಫಿನೊಕಿಯೆಟೊ’ ಎಂಬ ದುಬಾರಿ ರೆಸಾರ್ಟ್ ನಲ್ಲಿ ದ್ರಾಕ್ಷಿ ಹಣ್ಣಿನ ತೋಟದ ನಡುವೆ ಇರುವ ಸ್ವರ್ಗದಂಥಹ ತಾಣದಲ್ಲಿ ವಿರುಷ್ಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಸ್ತಾನಿಗೆ ಮೂರು ಗಂಟು ಹಾಕಿ, ಮೂರು ಮಾತು ಕೊಟ್ಟಿದ್ದ ಬಾಜೀರಾವ್

    ಮಸ್ತಾನಿಗೆ ಮೂರು ಗಂಟು ಹಾಕಿ, ಮೂರು ಮಾತು ಕೊಟ್ಟಿದ್ದ ಬಾಜೀರಾವ್

    – ಮದ್ವೆ ಬಳಿಕ ರಣ್‍ವೀರ್ ಹೆಸ್ರು ಬದಲಿಸಿಕೊಂಡಿದ್ದು ಯಾರಿಗೂ ಗೊತ್ತಾಗೇ ಇಲ್ಲ!

    ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಪತ್ನಿ ಕೊರಳಿಗೆ ಮೂರು ಗಂಟು ಹಾಕಿ, ಮೂರು ವಚನ ನೀಡಿದ್ದನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ.

    ಇತ್ತೀಚೆಗೆ ರಣ್‍ವೀರ್ ಸಿಂಗ್ ಫಿಲಂಫೇರ್ ಮ್ಯಾಗಜೀನ್‍ಗೆ ಸಂರ್ದಶನ ನೀಡಿದ್ದರು. ನನ್ನ ಮದುವೆಯಲ್ಲಿ ಮ್ಯೂಸಿಕ್ ವ್ಯವಸ್ಥೆ ಬಿಟ್ಟರೆ ಬೇರೆ ಯಾವ ಕೆಲಸಗಳನ್ನು ಮಾಡಲಿಲ್ಲ. ಮದುವೆ ನಂತರ ನನ್ನ ಜೀವನ ಸಾಕಷ್ಟು ಬದಲಾಗಿದೆ. ಪತ್ನಿಗೆ ಮೂರು ಮಾತುಗಳನ್ನು ನೀಡಿದ್ದು, ಅವುಗಳನ್ನು ಈಗ ಪಾಲಿಸುತ್ತಿದ್ದೇನೆ. ದೀಪಿಕಾಳ ಯಾವುದೇ ಕರೆಗಳನ್ನು ಮಿಸ್ ಮಾಡಿಕೊಳ್ಳಲ್ಲ, ಮನೆಯಿಂದ ಹೊರಗೆ ತುಂಬಾ ಕಾಲಹರಣ ಮಾಡಲ್ಲ ಮತ್ತು ಊಟ ಮಾಡದೇ ಮನೆಯಿಂದ ಹೊರ ಹೋಗಲ್ಲ ಎಂದು ಹೇಳಿ ನಕ್ಕರು.

    ಈ ವೇಳೆ ಸಂರ್ದಶಕ “ನಿಮ್ಮನ್ನು ರಣ್‍ವೀರ್ ಸಿಂಗ್ ಪಡುಕೋಣೆ ಎಂದು ಕರೆಯಬೇಕೆಂದು ದೀಪಿಕಾ ಹೇಳಿದ್ದಾರೆ” ಎಂದು ಹೇಳಿದ್ದರು. ಆಗ ರಣ್‍ವೀರ್, “ಸರಿ ನಾನು ನನ್ನ ಅಡ್ಡ ಹೆಸರನ್ನು(ಸರ್ ನೇಮ್) ತೆಗೆಯುತ್ತೇನೆ. ನನಗೆ ಈಗ ಹೊಸ ಅಡ್ಡ ಹೆಸರು ಬೇಕು. ನಾನು ಇನ್ನುಂದೆ ಈ ಲೆಜೆಂಡರಿ ಅಡ್ಡ ಹೆಸರನ್ನು ಬಳಸುತ್ತೇನೆ” ಎಂದು ಹೇಳಿದ್ದಾರೆ.

    ಸಂರ್ದಶಕ ರಣ್‍ವೀರ್ ಅವರಿಗೆ ಖಾಸಗಿ ಜೀವನಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿದರು. ಆಗ ರಣ್‍ವೀರ್ ನಾನು ಮೊದಲು ದೀಪಿಕಾಳನ್ನು ಅವಾರ್ಡ್ ಕಾರ್ಯಕ್ರಮದಲ್ಲಿ ನೋಡಿದೆ. ಆಕೆ ಯಾವ ಉಡುಪು ಧರಿಸಿದ್ದಳು ಎಂಬುವುದು ನನಗೆ ನೆನಪಿಲ್ಲ. ದೀಪಿಕಾಳನ್ನು ಮೊದಲು ನೋಡಿದ್ದಾಗ ನನಗೆ ಏನು ಅನಿಸಿತು ಎಂದು ಹೇಳಲು ಸಾಧ್ಯವಿಲ್ಲ. ನಾನು ದೀಪಿಕಾಳನ್ನು ಭೇಟಿ ಮಾಡಿದ್ದಾಗ ನಾನು ಆಕೆಯ ಜೊತೆ ಫೋಟೋ ತೆಗೆದುಕೊಂಡು ನನ್ನ ಗೆಳೆಯರಿಗೆ ಕಳುಹಿಸಿದೆ. ನೋಡಿ ನಾನು ಯಾರ ಜೊತೆ ಡೇಟ್‍ಗೆ ಹೋಗಿದ್ದೇನೆ ಎಂದು ತಿಳಿಸಿದ್ದೆ ಎಂದು ಹೇಳಿದರು.

    ಇದೇ ವೇಳೆ ಸಂರ್ದಶಕ ನಿಮ್ಮ ಆರತಕ್ಷತೆಗೆ ಅನುಷ್ಕಾ ಶರ್ಮಾ, ಕತ್ರಿನಾ ಕೈಫ್ ಎಲ್ಲರೂ ಆಗಮಿಸಿ ನಿಮಗೆ ಶುಭಾಶಯ ಕೋರಲು ಬಂದಿದ್ದರು. ಅವರು ನಿಮ್ಮ ಆರತಕ್ಷತೆಗೆ ಬಂದಿದ್ದು ನಿಮಗೆ ಹೇಗೆ ಅನಿಸಿತು ಎಂದು ಪ್ರಶ್ನಿಸಿದ್ದರು. ಆಗ ರಣ್‍ವೀರ್ ಸಿಂಗ್ ಆರತಕ್ಷತೆಗೆ ಎಲ್ಲರು ಆಗಮಿಸಿದ್ದು ಖುಷಿ ಆಯಿತು. ಅದರಲ್ಲೂ ಅನುಷ್ಕಾ ಶರ್ಮಾ ನನ್ನ ಆರತಕ್ಷತೆಗೆ ಬಂದಿದ್ದು ನನಗೆ ತುಂಬಾನೇ ಸ್ಪೆಷಲ್ ಆಗಿತ್ತು ಎಂದು ಸಂತಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೋಟೋ ಶೇರ್ ಮಾಡಿ ರೋಹಿತ್ ಶರ್ಮಾರಿಂದ ಮಗಳ ಹೆಸರು ರಿವೀಲ್

    ಫೋಟೋ ಶೇರ್ ಮಾಡಿ ರೋಹಿತ್ ಶರ್ಮಾರಿಂದ ಮಗಳ ಹೆಸರು ರಿವೀಲ್

    ಮುಂಬೈ: ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಶೇರ್ ಮಾಡಿದ್ದು, ಮಗಳಿಗೆ ಸಮೈರಾ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.

    ಪತ್ನಿ ರಿತಿಕಾ ಹಾಗೂ ಮಗಳೊಂದಿಗೆ ಇರುವ ಸುಂದರ ಫೋಟೋವನ್ನು ಟ್ವೀಟ್ ಮಾಡಿ ರೋಹಿತ್ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ ಮಗಳು ತಮ್ಮ ಕೈ ಬೆರಳು ಹಿಡಿದಿರುವ ಫೊಟೋವನ್ನು ಟ್ವೀಟ್ ಮಾಡಿ 2019ರ ಹೊಸ ವರ್ಷಕ್ಕೆ ಸ್ವಾಗತ ಕೋರಿದ್ದರು. ಡಿಸೆಂಬರ್ 31 ರಂದು ರಿತಿಕಾ ಅವರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದರು. 2015 ಡಿಸೆಂಬರ್ ನಲ್ಲಿ ರೋಹಿತ್, ರಿತಿಕಾ ಮದುವೆ ಕಾರ್ಯಕ್ರಮ ನಡೆದಿತ್ತು.

    ಆಸೀಸ್ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿದ್ದ ರೋಹಿತ್ ಟೂರ್ನಿಯ ನಡುವೆಯೇ ತವರಿಗೆ ಮರಳಿದ್ದರು. ಬಳಿಕ ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಪ್ರಕಟಿಸಿತ್ತು.

    ಜನವರಿ 12 ರಿಂದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಆರಂಭವಾಗಲಿದ್ದು, ರೋಹಿತ್ ಶರ್ಮಾ ಜನವರಿ 8 ರಂದು ಟೀಂ ಇಂಡಿಯಾ ಬಳಗವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಭಿಮಾನಿಗಳಿಂದ ಯಶ್-ರಾಧಿಕಾ ಮಗಳಿಗೆ ಹೆಸರಿನ ಸಲಹೆ

    ಅಭಿಮಾನಿಗಳಿಂದ ಯಶ್-ರಾಧಿಕಾ ಮಗಳಿಗೆ ಹೆಸರಿನ ಸಲಹೆ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್ ರಾಧಿಕಾ ಅವರು ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗು ಜನಿಸಿದ ಗಂಟೆಗಳಲ್ಲೇ ಅಭಿಮಾನಿಗಳು ಅವರ ಮಗುವಿಗೆ ಹೆಸರಿನ ಸಲಹೆಯನ್ನು ನೀಡುತ್ತಿದ್ದಾರೆ.

    ನಟ ಯಶ್ ತಂದೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಹೆಸರಿನ ಸಲಹೆಯನ್ನು ನೀಡಿದ್ದಾರೆ. ಅಭಿಮಾನಿಯೊಬ್ಬರು ‘ಯಶಿಕಾ’ ಎಂದು ನಾಮಕರಣ ಮಾಡಿ ಅಂತ ಕಮೆಂಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ನಟ ಯಶ್ ಅವರ ಮೊದಲ ಪದ ಮತ್ತು ರಾಧಿಕಾ ಅವರ ಕೊನೆಯ ಪದವನ್ನು ತೆಗೆದುಕೊಂಡು ಅವರ ಮಗಳಿಗೆ ಹೆಸರಿಡುವಂತೆ ಸೂಚಿಸಿದ್ದಾರೆ. ಅಪ್ಪನಿಂದ ಯಶ್ ಹಾಗೂ ಅಮ್ಮ ರಾಧಿಕಾರಿಂದ ಕೊನೆಯ ಪದ ‘ಕಾ’ ವನ್ನು ತೆಗೆದುಕೊಂಡು ‘ಯಶಿಕಾ’ ಎಂದು ಹೆಸರನ್ನು ಅಭಿಮಾನಿ ಸೂಚಿಸಿದ್ದಾರೆ.

    ವೈದ್ಯರು ಡಿಸೆಂಬರ್ 10 ರಂದು ಹೆರಿಗೆಯ ದಿನಾಂಕವನ್ನು ಸೂಚಿಸಿದ್ದರು. ಆದರೆ ಇಂದು ಬೆಳಗ್ಗೆ ನಗರದ ಆಸ್ಪತ್ರೆಯಲ್ಲಿ 6.10ಕ್ಕೆ ರಾಧಿಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಭಾನುವಾರ ಮನೆಗೆ ಭಾಗ್ಯಲಕ್ಷ್ಮಿ ಬಂದಿದ್ದಾಳೆ ಎಂದು ಕುಟುಂಬಸ್ಥರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಕೂಡ ಯಶ್ ತಮಗೆ ಹೆಣ್ಣು ಮಗು ಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದರು. ಅದರಂತೆಯೇ ನಟ ಯಶ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊದಲು ಅಮಿತ್ ಶಾ ಹೆಸರನ್ನ ಬದಲಿಸಿ: ಯೋಗಿ ಆದಿತ್ಯನಾಥ್ ಗೆ ಸವಾಲ್

    ಮೊದಲು ಅಮಿತ್ ಶಾ ಹೆಸರನ್ನ ಬದಲಿಸಿ: ಯೋಗಿ ಆದಿತ್ಯನಾಥ್ ಗೆ ಸವಾಲ್

    ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಗರಗಳ ಹೆಸರನ್ನು ಬದಲಾಯಿಸುತ್ತಿರುವುದಕ್ಕೆ ಖ್ಯಾತ ಇತಿಹಾಸಕಾರ ಹಾಗೂ ಆಲೀಗಢ ಮುಸ್ಲಿಂ ವಿವಿಯ ಗೌರವ ಪ್ರೊಫೆಸರ್ ಇರ್ಫಾನ್ ಹಬೀಬ್ ವ್ಯಂಗ್ಯವಾಡಿದ್ದಾರೆ.

    ಆಗ್ರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ ಶಾ ಹೆಸರಿನಲ್ಲಿರುವ ಶಾ ಎನ್ನುವ ಅಕ್ಷರ ಪರ್ಶಿಯನ್ ಮೂಲದ್ದು, ಅದು ಗುಜರಾತಿಗೆ ಸೇರಿದ್ದಲ್ಲ. ಹೀಗಾಗಿ ಅವರ ಹೆಸರನ್ನು ಮೊದಲು ಬದಲಾಯಿಸುವ ಕುರಿತು ಬಿಜೆಪಿ ಚಿಂತಿಸಲಿ. ಅಲ್ಲದೇ ಗುಜರಾತ್ ಹೆಸರು ಕೂಡ ಪರ್ಶಿಯನ್ ಮೂಲದ್ದು, ಇದನ್ನು ಗುಜರಾತ್ರ ಎಂದು ಕರೆಯಲಾಗುತ್ತಿತ್ತು. ಇದನ್ನೂ ಬಿಜೆಪಿಯವರು ಬದಲಿಸಬೇಕೆಂದು ಲೇವಡಿ ಮಾಡಿದ್ರು.

    ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮಹಾನಗರಗಳ ಹೆಸರುಗಳನ್ನು ಬದಲಾವಣೆಯ ಮಾಡುವ ಹುಚ್ಚನ್ನು ಬೆಳೆಸಿಕೊಂಡಿದ್ದಾರೆ. ಇದು ಆರ್‍ಎಸ್‍ಎಸ್‍ನ ಹಿಂದುತ್ವ ನೀತಿಗೆ ಅನುಗುಣವಾಗಿದೆ. ಅಲ್ಲದೇ ನೆರೆಯ ಪಾಕಿಸ್ತಾನದಲ್ಲಿ ಇಸ್ಲಾಮಿಕ್‍ಗೆ ಸೇರಿಲ್ಲದವನ್ನೆಲ್ಲಾ ತೆಗೆದು ಹಾಕಿದ್ದರು. ಇಲ್ಲಿಯೂ ಸಹ ಅದೇರೀತಿ ಬಿಜೆಪಿ ಹಾಗೂ ಬಲಪಂಥೀಯ ಬೆಂಬಲಿಗರು ಹಿಂದೂಯೇತರ ಹೆಸರುಗಳನ್ನು, ಅದರಲ್ಲು ಪ್ರಮುಖವಾಗಿ ಇಸ್ಲಾಮಿಕ್ ಮೂಲದ ಹೆಸರುಗಳನ್ನು ಬದಲಿಸುತ್ತಿದ್ದಾರೆ ಎಂದು ಟೀಕಿಸಿದರು.

    ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಲ್ ಇರುವ ಆಗ್ರಾ ನಗರವನ್ನು ಅಗ್ರವನ ಎಂದು ಮರುನಾಮಕರಣ ಮಾಡುವಂತೆ ಬಿಜೆಪಿ ಶಾಸಕ ಜಗನ್ ಪ್ರಸಾದ್ ಗರ್ಗ್ ಆಗ್ರಹಿಸಿದ್ದರು. ಇದಲ್ಲದೇ ಯೋಗಿ ಆದಿತ್ಯನಾಥ್ ರಾಜ್ಯದ ಮಹಾನಗರಗಳ ಹೆಸರನ್ನು ಬದಲಾವಣೆ ಮಾಡಿದ್ದರು. ಹೀಗಾಗಿ ಹಬೀಬ್ ಮಾತಿನಲ್ಲೇ ತಿರುಗೇಟು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಿಮ್ಮ ಸಂಪುಟದ ಮುಸ್ಲಿಂ ಸಚಿವರ ಹೆಸರನ್ನೂ ಬದಲಾಯಿಸ್ತಿರಾ: ಯೋಗಿ ಆದಿತ್ಯನಾಥ್ ಗೆ ಸಚಿವರಿಂದಲೇ ಪ್ರಶ್ನೆ

    ನಿಮ್ಮ ಸಂಪುಟದ ಮುಸ್ಲಿಂ ಸಚಿವರ ಹೆಸರನ್ನೂ ಬದಲಾಯಿಸ್ತಿರಾ: ಯೋಗಿ ಆದಿತ್ಯನಾಥ್ ಗೆ ಸಚಿವರಿಂದಲೇ ಪ್ರಶ್ನೆ

    ನವದೆಹಲಿ: ದೇಶದ ಪ್ರಮುಖ ನಗರಗಳ ಹೆಸರನ್ನು ಬದಲಾಯಿಸಲು ಬಿಜೆಪಿಯವರು ಮುಂದಾಗುತ್ತಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೈತ್ರಿ ಪಕ್ಷದ ಸಚಿವ ಓಂ ಪ್ರಕಾಶ್ ರಾಜ್‍ಭಾರ್ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊಘಲರು ಅನೇಕ ಪಟ್ಟಣಗಳ ಹೆಸರನ್ನು ಬದಲಾಯಸಿದ್ದಾರೆ ಎನ್ನುವುದು ಬಿಜೆಪಿಯವರ ವಾದವಾಗಿದೆ. ಈಗ ಅವುಗಳಿಗೆ ಪೂರ್ವದ ಹೆಸರನ್ನು ಇಡುತ್ತಿದ್ದೇವೆ ಎನ್ನುತ್ತಿದ್ದಾರೆ. ಹಾಗಾದರೆ ಅವರು ರಾಷ್ಟ್ರೀಯ ಬಿಜೆಪಿ ವಕ್ತಾರ ಶಾನವಾಜ್ ಹುಸೇನ್, ಕೇಂದ್ರ ಸಚಿವ ಮುಕ್ತರ್ ಅಬ್ಬಾಸ್ ನಕ್ವಿ, ಉತ್ತರ ಪ್ರದೇಶದ ಸಚಿವ ಮೋಸಿನ್ ರಾಜ್ ಅವರ ಹೆಸರನ್ನು ಬದಲಾಯಿಸುತ್ತಾರಾ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಹಿಂದುಳಿದ ಹಾಗೂ ತುಳಿತಕ್ಕೆ ಒಳಗಾದ ಜನರಿಂದ ಮತ ಗಿಟ್ಟಿಸಿಕೊಳ್ಳಲು ಹೀಗೆ ಮಾಡಲಾಗುತ್ತಿದೆ. ಮುಸ್ಲಿಂ ರಾಜ ಮನೆತನಗಳು ಕೊಡುಗೆ ನೀಡಿದಷ್ಟು ಉಳಿದವರು ನೀಡಿಲ್ಲ. ನಾವು ಓಡಾಡುವ ಜಿ.ಟಿ.ರಸ್ತೆ, ಕೆಂಪುಕೋಟೆ, ತಾಜ್ ಮಹಲ್ ನಿರ್ಮಿಸಿದ್ದು ಯಾರು ಎಂದು ಪ್ರಶ್ನಿಸಿ ಕುಟುಕಿದ್ದಾರೆ.

    ಅಲಹಾಬಾದ್ ಅನ್ನು ಪ್ರಯಾಗರಾಜ್ ಎಂದು, ಫೈಜಿಯಾಬಾದ್ ಅನ್ನು ಶ್ರೀ ಅಯ್ಯೋಧ್ಯ ಅಂತಾ ಹೆಸರು ಬದಲಾಯಿಸಲಾಗುತ್ತಿದೆ. ಇದೇ ರೀತಿ, ಅಹಮದಾಬಾದ್, ಔರಂಗಾಬಾದ್, ಹೈದರಾಬಾದ್ ಮತ್ತು ಆಗ್ರಾ ನಗರಗಳ ಹೆಸರು ಬದಲಾಯಿಸಲು ಬೇಡಿಕೆಗಳು ಕೇಳಿಬಂದಿದ್ದು, ಇದಕ್ಕೆ ಬಿಜೆಪಿ ನಾಯಕರು ಸಾಥ್ ನೀಡುತ್ತಿದ್ದಾರೆ ಎಂದು ಗುಡುಗಿದರು.

    ಆಗ್ರಾ ನಗರವನ್ನು ಅಗ್ರವನ ಅಂತಾ ಮರು ನಾಮಕರಣ ಮಾಡಬೇಕು ಎಂದು ಬಿಜೆಪಿ ಶಾಸಕ ಜಗನ್ ಪ್ರಸಾದ್ ಗರ್ಗ್ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಅಗ್ರವನ ಮಹಾಭಾರತದ ಹೆಸರು. ಅದನ್ನು ಮೊಗಲ್ ಅರಸ ಅಕ್ಬರ್ ಬಲಾಯಿಸಿ ಆಗ್ರಾ ಎಂದು ಕರೆಯುವಂತೆ ಸೂಚಿಸಿದ. ಹೀಗಾಗಿ ಆಗ್ರಾ ನಗರಕ್ಕೆ ಮೂಲ ಹೆಸರನ್ನು ಇಡಬೇಕು ಅಂತಾ ಪತ್ರದಲ್ಲಿ ಜಗನ್ ಪ್ರಸಾದ್ ಗರ್ಗ್ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದ್ದಕ್ಕೆ ಕಾರ್ಯಕ್ರಮದಿಂದಲೇ ಹೊರ ನಡೆದ ಸಾ.ರಾ.ಮಹೇಶ್

    ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದ್ದಕ್ಕೆ ಕಾರ್ಯಕ್ರಮದಿಂದಲೇ ಹೊರ ನಡೆದ ಸಾ.ರಾ.ಮಹೇಶ್

    ಮೈಸೂರು: ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ನಮೂದಿಸದೇ ಇರುವುದಕ್ಕೆ ಕಾರ್ಯಕ್ರಮದ ಮಧ್ಯೆಯೇ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹೊರನಡೆದಿದ್ದಾರೆ.

    ನಗರದ ಮಾನಸ ಗಂಗೋತ್ರಿ ಕ್ಯಾಂಪಸ್‍ನಲ್ಲಿ ಗಾಂಧಿ ಕುರಿತ ಸಿಮೆಂಟ್ ಕಲಾಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದ ಸಚಿವರು ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ನಮೂದಿಸದೇ ಇರುವುದನ್ನು ಗಮನಿಸಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದರು.

    ಇದಾದ ನಂತರ ಕ್ಯಾಂಪಸ್ ಆವರಣದಲ್ಲಿದ್ದ ಕಲಾಕೃತಿಗಳನ್ನು ಉದ್ಘಾಟನೆ ಮಾಡಿ, ಅಧಿಕಾರಿಗಳನ್ನು ಬೈಯುತ್ತಾ ವೇದಿಕೆ ಕಾರ್ಯಕ್ರಮಕ್ಕೆ ಹಾಜರಾಗದೇ ತೆರಳಿದರು. ಈ ವೇಳೆ ಸ್ಥಳದಲ್ಲೇ ಇದ್ದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಕಾರ್ಯಕ್ರಮಕ್ಕೆ ಬಾರಯ್ಯ ಎಂದು ಕರೆದರು. ಇಲ್ಲ ಇಲ್ಲ ನನಗೆ ಬೇರೆ ಕಾರ್ಯಕ್ರಮವಿದೆ ಎನ್ನುತ್ತಾ ಸಾ.ರಾ.ಮಹೇಶ್ ಹೊರಟು ಹೋದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪ್ಪ-ಅಮ್ಮನ ಹೆಸ್ರನ್ನೇ ರಸ್ತೆಗೆ ನಾಮಕರಣ ಮಾಡಲು ಮುಂದಾದ ಅಜ್ಮದ್ ಬೇಗ್

    ಅಪ್ಪ-ಅಮ್ಮನ ಹೆಸ್ರನ್ನೇ ರಸ್ತೆಗೆ ನಾಮಕರಣ ಮಾಡಲು ಮುಂದಾದ ಅಜ್ಮದ್ ಬೇಗ್

    ಬೆಂಗಳೂರು: ಬಾಪೂಜಿನಗರದ ರಸ್ತೆಗಳಿಗೆ ಮರುನಾಮಕಾರಣ ವಿವಾದ ಮತ್ತೆ ಸುದ್ದಿಯಾಗಿದೆ. ಬಾಪೂಜಿನಗರ ವಾರ್ಡ್ ಕಾರ್ಪೋರೇಟರ್ ಅಜ್ಮದ್ ಬೇಗ್ ಅವರ ತಂದೆ – ತಾಯಿ ಹೆಸರನ್ನೇ ನಾಮಕರಣ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಬಂದಿದೆ.

    ಶಾಮಣ್ಣ ಗಾರ್ಡನ್ ಅಂಡರ್ ಪಾಸ್ ರಸ್ತೆಗೆ “ಗಪೂರ್ ರಸ್ತೆ ಮತ್ತು ಪೈಪ್‍ಲೈನ್ ರೈಲ್ವೆ ಗೇಟ್ ಅಂಡರ್‍ಪಾಸ್ ನಿಂದ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಮಿಷಿನ್ ಎಚ್ ಸ್ವೀಟ್ ರಸ್ತೆಗೆ ಫಾತಿಮಾ ಬೀ ಬಡಾವಣೆ ಎಂದು ಹೆಸರಿಡಲು ಪಾಲಿಕೆಯಲ್ಲಿ ಅನುಮೋದನೆ ಸಿಕ್ಕಿದೆ. ಇದು ಗಪೂರ್ ಮತ್ತು ಫಾತಿಮಾ ಎಂಬ ಹೆಸರುಗಳು ಕಾರ್ಪೋರೆಟರ್ ತಂದೆ – ತಾಯಿಯದು ಎಂಬ ಮಾಹಿತಿ ಹರಿದಾಡುತ್ತಿದೆ.

    ಈ ಬೆಳವಣಿಗೆ ಕಾರ್ಪೋರೇಟರ್ ವಿರುದ್ಧ ಮತ್ತಷ್ಟು ವಿವಾದವನ್ನ ಸೃಷ್ಟಿಸಿದೆ. ಇಷ್ಟಾದ್ರೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ ಜಿ .ಪರಮೇಶ್ವರ್ ಮಾತ್ರ ಪ್ರಸ್ತಾವನೆ ಸರ್ಕಾರದ ಅಂಗಳ ತಲುಪಿದಾಗ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.

    ಹಾಗಾದ್ರೆ ಯಾವ ರೋಡ್ ಗೆ ಯಾವ ಹೆಸ್ರಿಟ್ಟಿದ್ದಾರೆ ಅಂತ ನೋಡೋದಾದ್ರೆ..
    * ಶಾಮಣ್ಣ ಗಾರ್ಡನ್ ಅಂಡರ್‍ಪಾಸ್‍ನ ಅಂಡರ್ ಪಾಸ್ ರಸ್ತೆಗೆ ಗಪೂರ್ ರೋಡ್
    * ಸುನ್ನಿ ಚೌಕ್‍ನಿಂದ ಮೈಸೂರು ರಸ್ತೆವರೆಗಿನ ಪೈಪ್ ಲೈನ್ ರೋಡ್‍ಗೆ ಸುಬಾನಿಯಾ ಮಸೀದಿ ರೋಡ್
    * ಸಂತೋಷ್ ಟೆಂಟ್‍ನಿಂದ ಶೋಭಾ ಟೆಂಟ್‍ವರೆಗಿನ ರೋಡ್‍ಗೆ ಜಾಮಿಯಾ ಮಸೀದಿ ರೋಡ್
    * ಶಾಮಣ್ಣ ಗಾರ್ಡನ್ 6ನೇ ಕ್ರಾಸ್ ರಸ್ತೆಗೆ ಖುದಾದತ್ ಮಸೀದಿ ರೋಡ್


    * ಬಾಪೂಜಿನಗರ 1ನೇ ಮೇನ್ ರೋಡ್‍ಗೆ ಹೀರಾ ಮಸೀದಿ ರೋಡ್
    * ಪೈಪ್‍ಲೈನ್ ರೈಲ್ವೇ ಗೇಟ್ ಅಂಡರ್‍ಪಾಸ್‍ನಿಂದ ರಾಗಿ ಮಿಷನ್ ಹೆಚ್ ಸ್ಟ್ರೀಟ್‍ವರೆಗಿನ ಪ್ರದೇಶಕ್ಕೆ ಫಾತೀಮಾ ಬೀ ಬಡಾವಣೆ
    * ಪೈಪ್‍ಲೈನ್ ರಸ್ತೆ, 6ನೇ ಮುಖ್ಯರಸ್ತೆಯಿಂದ ಸ್ಟಾರ್ಮ್‍ವಾಟರ್ ಡ್ರೈನ್‍ವರೆಗಿನ ಪ್ರದೇಶಕ್ಕೆ ಅಮಿರ್ ಕಲಿಮಿ ನಗರ

    ಸದ್ಯ ಅಪ್ಪ- ಅಮ್ಮನ ಹೆಸರನ್ನು ರಸ್ತೆಗೆ ನಾಮಕರಣ ಮಾಡಲು ಪಾಲಿಕೆಯಲ್ಲಿ ಒಪ್ಪಿಗೆ ಪಡೆದಿದ್ದ ಅಜ್ಮದ್ ಬೇಗ್ ನಡೆಗೆ ಬಿಜೆಪಿ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv