Tag: ಹೇಮಂತ್ ಸೋರೆನ್

  • ಪತನದ ಹಾದಿಯಲ್ಲಿ ಜಾರ್ಖಂಡ್ ಸರ್ಕಾರ

    ಪತನದ ಹಾದಿಯಲ್ಲಿ ಜಾರ್ಖಂಡ್ ಸರ್ಕಾರ

    ರಾಂಚಿ: ಜಾರ್ಖಂಡ್ ಸರ್ಕಾರವು ಪತನದ ಹಾದಿಯಲ್ಲಿದ್ದು, ಯುಪಿಎ ಮೈತ್ರಿಕೂಟವು ಸರ್ಕಾರವನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ನಡೆಸುತ್ತಿದೆ.

    ಜಾರ್ಖಂಡ್‍ನಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಯುಪಿಎ ಮೈತ್ರಿಕೂಟ ತನ್ನ ಶಾಸಕರನ್ನು ಆಪರೇಷನ್ ಕಮಲದಿಂದ ತಪ್ಪಿಸಲು ನಾನಾ ಕಸರತ್ತು ನಡೆಸುತ್ತಿದೆ. ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂಬ ಆರೋಪಗಳ ಬೆನ್ನಲ್ಲೇ ಯುಪಿಎ ಮೈತ್ರಿಕೂಟದ ಶಾಸಕರನ್ನು ಕಾಂಗ್ರೆಸ್ ಆಡಳಿತವರುವ ಛತ್ತೀಸ್‍ಘಡಕ್ಕೆ ಕರೆದೊಯ್ಯಲಾಗಿದೆ.

    ಸಿಎಂ ಹೇಮಂತ್ ಸೋರೆನ್ ನಿವಾಸದಿಂದ ಎರಡು ಬಸ್‍ಗಳಲ್ಲಿ ಶಾಸಕರು ರಾಂಚಿ ಏರ್‌ಪೋರ್ಟ್ ತಲುಪಿ, ಅಲ್ಲಿಂದ ರಾಯಪುರಕ್ಕೆ ಪಯಣ ಬೆಳೆಸಿದ್ದಾರೆ. ಅಲ್ಲಿನ ರೆಸಾರ್ಟ್‍ನಲ್ಲಿ ಎಲ್ಲರನ್ನು ಇರಿಸಲಾಗಿದೆ. ಗಣಿ ಲೀಸ್‍ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಾಸಕತ್ವದ ನಿರ್ಧಾರವನ್ನು ಘೋಷಿಸಲು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯಪಾಲರು ಕುದುರೆ ವ್ಯಾಪಾರವನ್ನು ಪ್ರೋತ್ಸಾಹಿಸ್ತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಎಂಎಂ ಮುಖಂಡರು ಆರೋಪಿಸಿದರು. ಇದನ್ನೂ ಓದಿ: ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    81 ಸದಸ್ಯ ಬಲದ ವಿಧಾನಸಭೆಯಲ್ಲಿ ಆಡಳಿತಾರೂಢ ಮೈತ್ರಿಕೂಟವು 49 ಶಾಸಕರನ್ನು ಹೊಂದಿದೆ. ಅತಿದೊಡ್ಡ ಪಕ್ಷವಾದ ಜೆಎಂಎಂಲ್ಲಿ 30 ಶಾಸಕರಿದ್ದು, ಕಾಂಗ್ರೆಸ್ 18 ಶಾಸಕರನ್ನು ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬ ಶಾಸಕ ಮೈತ್ರಿ ಸರ್ಕಾರದಲ್ಲಿದ್ದಾರೆ.

    Congress

    ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಂಭವಿಸಿದಂತೆ, ಬಿಕ್ಕಟ್ಟಿನ ಲಾಭವನ್ನು ಬಿಜೆಪಿ ಪಡೆದುಕೊಳ್ಳಬಹುದು.  ಚುನಾಯಿತ ಸರ್ಕಾರವನ್ನು ಉರುಳಿದಿ ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಬಹುದು ಎಂಬ ಭಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ಭವಿಷ್ಯವನ್ನು ಉಜ್ವಲಗೊಳಿಸಲಿದೆ: ರಾಜ್ಯಪಾಲರು

    Live Tv

    [brid partner=56869869 player=32851 video=960834 autoplay=true]

  • ಜಾರ್ಖಂಡ್ ದೋಣಿ ದುರಂತದಲ್ಲಿ 14 ಮಂದಿ ಸಾವು – ಸಿಎಂನಿಂದ 4 ಲಕ್ಷ ಪರಿಹಾರ ಘೋಷಣೆ

    ಜಾರ್ಖಂಡ್ ದೋಣಿ ದುರಂತದಲ್ಲಿ 14 ಮಂದಿ ಸಾವು – ಸಿಎಂನಿಂದ 4 ಲಕ್ಷ ಪರಿಹಾರ ಘೋಷಣೆ

    ರಾಂಚಿ: ಜಾರ್ಖಂಡ್‍ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಇತ್ತೀಚೆಗಷ್ಟೇ ಪ್ರಯಾಣಿಕ ದೋಣಿ ಮುಳುಗಡೆಗೊಂಡಿದ್ದು, ಸೋಮವಾರ ಎನ್‌ಡಿಆರ್‌ಎಫ್ ತಂಡ ಆರು ಶವಗಳನ್ನು ಹೊರತೆಗೆದಿದ್ದಾರೆ ಮತ್ತು ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಾರ್ಖಂಡ್‍ನ ಜಮ್ತಾರಾದ ದಾಮೋದರ್ ನದಿಯ ಬಾರ್ಬೆಂಡಿಯಾ ಸೇತುವೆಯ ಬಳಿ ಶುಕ್ರವಾರ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ. ಇದನ್ನೂ ಓದಿ:  ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

    ಸೋಮವಾರ ಆರು ಮೃತದೇಹಗಳು ಪತ್ತೆಯಾಗಿದ್ದು, ಭಾನುವಾರ ಎಂಟು ಮಂದಿ ಶವ ಪತ್ತೆಯಾಗಿತ್ತು. ಇನ್ನೂ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಒಟ್ಟು ಈವರೆಗೂ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಜಮ್ತಾರಾ ಉಪ ಆಯುಕ್ತ ಫೈಜ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಡೈವರ್‌ಗಳ ಹುಡುಕಾಟ ಬಹುತೇಕ ಮುಗಿದಿದೆ ಎಂದು ಅವರು ಹೇಳಿದರು. ಈ ಘಟನೆ ಕುರಿತಂತೆ ವಿಧಾನಸಭೆಯಲ್ಲಿ ನಿರ್ಸಾದ ಬಿಜೆಪಿ ಶಾಸಕಿ ಅಪರ್ಣಾ ಸೇನ್‍ಗುಪ್ತಾ ಅವರು ಕೇಳಿದ ಪ್ರಶ್ನೆಗೆ ಹೇಮಂತ್ ಸೋರೆನ್ ಅವರು, ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ ವಿಪತ್ತು ನಿರ್ವಹಣಾ ಇಲಾಖೆಯಿಂದ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ

    ನದಿಗೆ ಅಡ್ಡಲಾಗಿರುವ ಬಾರ್ಬೆಂಡಿಯಾ ಸೇತುವೆ ಕಾರ್ಯರೂಪಕ್ಕೆ ತಂದಿದ್ದರೆ ಘಟನೆಯನ್ನು ತಪ್ಪಿಸಬಹುದಿತ್ತು ಎಂದು ವಿರೋಧ ಪಕ್ಷಗಳ ಹಲವಾರು ನಾಯಕರು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಸೇತುವೆಯ ದುರಸ್ತಿ ಕಾರ್ಯಗಳು ಪೂರ್ಣಗೊಳ್ಳದ ಕಾರಣ ಜನರು ನದಿ ದಾಟಲು ನದಿ ಮಾರ್ಗದ ಮೂಲಕ ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.