Tag: ಹೇಮಲತಾ

  • ಕನ್ನಡದಲ್ಲಿ ಮತ್ತೊಂದು ‘ಮುಂಗಾರು ಮಳೆ’ ಆಗಮನ: ನಾಳೆ ಟ್ರೈಲರ್ ರಿಲೀಸ್

    ಕನ್ನಡದಲ್ಲಿ ಮತ್ತೊಂದು ‘ಮುಂಗಾರು ಮಳೆ’ ಆಗಮನ: ನಾಳೆ ಟ್ರೈಲರ್ ರಿಲೀಸ್

    ಗಾಗಲೇ ಕನ್ನಡ ಚಿತ್ರೋದ್ಯಮದ ಹಲವು ಮುಂಗಾರುಗಳನ್ನು ಕಂಡಿದೆ. ಮುಂಗಾರು ಮಳೆಯಂತೂ ನೆನಪಿಡುವಂತೆ ಸುರಿದಿದೆ. ಇದೀಗ ಮತ್ತೊಂದು ಮುಂಗಾರು ಮಳೆಯ (Munagaru Male) ಕಥೆಯನ್ನು ಹೇಳಲು ಹೊರಟಿದ್ದಾರೆ ಹಿರಿಯ ಪತ್ರಕರ್ತ ಮಾ.ಸೋಮಶೇಖರ್ (Somashekhar). ಹಲವು ಕಥೆಗಳ ಗುಚ್ಛವನ್ನು ಹುಡುಕಿ ತೆಗೆದಿದ್ದು, ಒಂದೊಂದೇ ಕಥೆಗಳನ್ನು ಶಾರ್ಟ್ ಸಿನಿಮಾಗಳ ಮೂಲಕ ಹೇಳುತ್ತಾ ಹೋಗುತ್ತಿದ್ದಾರೆ.

    ಪ್ರೀತಿ, ಪ್ರೇಮ, ವಿರಹ ಹೀಗೆ ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಂಡು ಹಲವು ಕಂತುಗಳಲ್ಲಿ ಈ ಕಥೆಗಳನ್ನು ಹೇಳುತ್ತಾ ಹೋಗುತ್ತಾರಂತೆ. ಅದರ ಮೊದಲ ಭಾಗವಾಗಿ ಮುಂಗಾರು ಮಳೆ ಕಥೆಯನ್ನು ಹೇಳುತ್ತಿದ್ದಾರೆ. ಈ ಎಲ್ಲ ಗುಚ್ಛಕ್ಕೆ ಅವರು ‘ಖಾಸಗಿ ಕಥೆಗಳು’ (Khasagi Kathegalu) ಎಂದು ಹೆಸರನ್ನು ಇಟ್ಟಿದ್ದಾರೆ. ಭಾಗ 2ರಲ್ಲಿ ಮತ್ತೊಂದು ಕಥೆಯನ್ನು ಹೇಳುತ್ತಾರಂತೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಖಾಸಗಿ ಕಥೆಗಳು ಶಾರ್ಟ್ ಮೂವೀಯಲ್ಲಿ ಹಲವು ಬಗೆಯ ಕಥೆಗಳನ್ನು ಹೇಳುತ್ತಿದ್ದೇನೆ. ಪ್ರತಿ ಕಥೆಗೂ ಕಲಾವಿದರು ಬದಲಾಗುತ್ತಾರೆ. ಪ್ರೀತಿ, ಪ್ರೇಮ, ವಿರಹವೇ ಇಲ್ಲಿ ಪ್ರಧಾನವಾಗಿರಲಿದೆ. ಯಾರೂ ಹೇಳಿಕೊಳ್ಳಲಾಗದ ಕಥೆಗಳನ್ನು ಹುಡುಕಿದ್ದೇನೆ. ಕಥೆಯ ಮಧ್ಯ ಮಧ್ಯೆ ಕವಿತೆಗಳು ಬಂದು ಹೋಗುತ್ತವೆ. ಇದೇ ಈ ಸೀರಿಸ್‍್ ನ ಬ್ಯೂಟಿ ಎನ್ನುತ್ತಾರೆ ನಿರ್ದೇಶಕ ಸೋಮಶೇಖರ್.

    ಮುಂಗಾರು ಮಳೆ ಕಥೆಯಲ್ಲಿ ಹೇಮಲತಾ (Hemalatha) ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ಅವರ ಫಸ್ಟ್ ಲುಕ್ ಅನ್ನು ನಿರ್ದೇಶಕರು ಬಿಡುಗಡೆ ಮಾಡಿದ್ದರು. ನಾಳೆ ಸಂಜೆ 5 ಗಂಟೆಗೆ ಮುಂಗಾರು ಮಳೆಯ ಟ್ರೈಲರ್ (Trailer) ರಿಲೀಸ್ ಆಗುತ್ತಿದೆ. ಎಸ್.ಜೆ ದೊಡ್ಮನೆ ಈ ಶಾರ್ಟ್ ಮೂವೀಗೆ ಹಣ ಹೂಡಿದ್ದು, ಚೇತನ್ ಚಾರ್ಲಿ ಕ್ರಿಯೇಟಿವ್ ಹೆಡ್ ಆಗಲಿ ಕೆಲಸ ಮಾಡಿದ್ದಾರೆ. ಪ್ರಸನ್ನ ಕುಮಾರ್ ಅವರ ಸಂಗೀತ, ಲೋಕೇಶ್ ನಾಯ್ಡು ಅವರ ಕ್ಯಾಮೆರಾ, ನಿತಿನ್ ರಾಜ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಂಗಭೂಮಿ ಕಲಾವಿದ ಗುಬ್ಬಿವೀರಣ್ಣ ಪುತ್ರಿ ಹೇಮಲತಾ ನಿಧನ : ದೇಹದಾನ ಮಾಡಿದ ಕುಟುಂಬ

    ರಂಗಭೂಮಿ ಕಲಾವಿದ ಗುಬ್ಬಿವೀರಣ್ಣ ಪುತ್ರಿ ಹೇಮಲತಾ ನಿಧನ : ದೇಹದಾನ ಮಾಡಿದ ಕುಟುಂಬ

    ರಂಗಭೂಮಿ ಕಲಾವಿದ ದಿವಂಗತ ಗುಬ್ಬಿವೀರಣ್ಣ ಪುತ್ರಿ ಹೇಮಲತಾ(೭೦) ವರ್ಷ ನಿಧನರಾಗಿದ್ದಾರೆ.  ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಇನ್ನೂ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.

    ಹೇಮಲತಾ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ, ಗುಬ್ಬೀ ವೀರಣ್ಣನವರ ಪುತ್ರ ಗುರುಸ್ವಾಮಿ ಅವರ ಪುತ್ರಿ ಜಯಭಾರತಿ ಅವರ ಮನೆಯಲ್ಲಿ ವಾಸವಾಗಿದ್ದರು. ಹೇಮಲತಾ ಅವರು ಹೆಸರಾಂತ ನೃತ್ಯಗಾರ್ತಿ ಕೂಡ ಆಗಿದ್ದರು. ನಾಲ್ಕು ದಿನಗಳ ಹಿಂದೆಯಷ್ಟೇ ಲಘು ಹೃದಯಾಘಾತಕ್ಕೆ ಒಳಗಾಗಿ ಬಾಶೆಟ್ಟಿಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

    ಹೇಮಲತಾ ಅವರು  ರಾಜ್ ಕುಮಾರ್ ಜೊತೆ ಎಮ್ಮೆ ತಮ್ಮಣ್ಣ,  ಕಲ್ಯಾಣ್ ಕುಮಾರ್ ಅವರೊಂದಿಗೆ ಕಲಾವತಿ ಸಿನಿಮಾ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದು ಹಲವು ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಇವರಿಗೆ ಮೂವರು ಮಕ್ಕಳಿದ್ದು ಅಮೆರಿಕಾದಲ್ಲಿ ನೆಲಸಿದ್ದಾರೆ. ಸದ್ಯ ಮೃತದೇಹವನ್ನ ಬೆಂಗಳೂರಿನ ಹೆಸರಘಟ್ಟದ ರಸ್ತೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿಗೆ ಮೃತದೇಹ ಹಸ್ತಾಂತರ ಮಾಡಲು ತೀರ್ಮಾನಿಸಿದ್ದು, ಸಿನಿರಂಗದ ಹಲವರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.

    Live Tv

  • ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹೇಮಲತಾಗೆ ಪೊಲೀಸ್ ಎಸ್ಕಾರ್ಟ್

    ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹೇಮಲತಾಗೆ ಪೊಲೀಸ್ ಎಸ್ಕಾರ್ಟ್

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಬಿಜೆಪಿ ಅಭ್ಯರ್ಥಿ ಹೇಮಲತಾಗೆ ವಿಧಾನಸೌಧದವರೆಗೂ ಇನ್ನೋವಾ ಕಾರಿನಲ್ಲಿ ಬರಲು ಎಸ್ಕಾರ್ಟ್ ವಾಹನ ಸವಲತ್ತು ಕಲ್ಪಿಸಿದ್ದು, ಇದೀಗ ಭಾರೀ ಟೀಕೆಗೆ ಕಾರಣವಾಗಿದೆ.

    ಬಿಜೆಪಿ ನಾಯಕರೇ ಜಕ್ಕೂರು ಏರ್‌ಫೋರ್ಸ್‌ನಿಂದ ಎಸ್ಕಾರ್ಟ್ ಕೊಟ್ಟು ಇನ್ನೋವಾ ಕಾರಿನಲ್ಲಿ ವಿಧಾನಸೌಧಕ್ಕೆ ಕರೆಸಿದ್ದಾರೆ. ಸೈರನ್ ಹೊಡೆದುಕೊಂಡು ವೇಗವಾಗಿ ವಿಧಾನಸೌಧಕ್ಕೆ ಬಂದು ಹೇಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಎಸ್ಕಾರ್ಟ್ ಸೌಲಭ್ಯ ಕಲ್ಪಿಸಿದ ಬಿಜೆಪಿ ನಾಯಕರು ನಾಮಪತ್ರ ಸಲ್ಲಿಕೆಗೆ ವಿಳಂಬವಾಗುತ್ತಿತ್ತು. ಹಾಗಾಗಿ ಎಸ್ಕಾರ್ಟ್ ನೀಡಲಾಯಿತು ಎಂದು ಕಾರಣ ನೀಡಿದ್ದಾರೆ. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆ- ಕೊಪ್ಪಳದ ಬಿಜೆಪಿ ನಾಯಕಿಗೆ ಬಂಪರ್‌

    ಈ ಹಿಂದೆ ಹಾಲಿ ಸಚಿವೆ ಶಶಿಕಲಾ ಜೊಲ್ಲೆ ಅವರ ಪ್ರಮಾಣ ವಚನಕ್ಕೆ ಸಿಗ್ನಲ್ ಫ್ರೀ ಸೌಕರ್ಯ ಕಲ್ಪಿಸಿಕೊಟ್ಟಿದ್ದ ಬಿಜೆಪಿ, ಇದೀಗ ಎಂಎಲ್‌ಸಿ ಚುನಾವಣೆ ನಾಮಪತ್ರ ಸಲ್ಲಿಸೋದಕ್ಕೇ ಹೇಮಲತಾಗೆ ಎಸ್ಕಾರ್ಟ್ ವ್ಯವಸ್ಥೆ ಮಾಡಿಕೊಟ್ಟಿದೆ ಎಷ್ಟು ಸರಿ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಪರಿಷತ್‌ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್

    ಎಸ್ಕಾರ್ಟ್ ಒದಗಿಸಲು ಗೃಹ ಸಚಿವರೇ ಪೊಲೀಸರಿಗೆ ಸೂಚಿಸಿದ್ರಾ? ಯಾರ ಆದೇಶ ಪಾಲನೆ ಮಾಡಿದ್ರು ಪೊಲೀಸರು? ಶಿಸ್ತಿನ ಪಕ್ಷ ಬಿಜೆಪಿಯದ್ದು ಅಧಿಕಾರ ದುರ್ಬಳಕೆ ಅಲ್ಲವಾ ಎಂಬ ಪ್ರಶ್ನೆಗಳನ್ನು ಜನರು ಪ್ರಶ್ನಿಸುತ್ತಿದ್ದಾರೆ.